Sep 27, 2011

ಪೀಠದ ಬಾಗಿಲಲ್ಲಿ ಅಜ್ಞಾನದ ಪ್ರಭೆ!

-      ಡಾ ಅಶೋಕ್. ಕೆ. ಆರ್.

ಚಂದ್ರಶೇಖರ ಕಂಬಾರರಿಗೆ ಸಮಗ್ರ ಸಾಹಿತ್ಯಕ್ಕಾಗಿ ಜ್ಞಾನಪೀಠ ಸಿಕ್ಕಿದೆ. ಕನ್ನಡಕ್ಕೆ ದಕ್ಕಿದ ಎಂಟನೇ ಜ್ಞಾನಪೀಠ. ಈ ಬಗ್ಗೆ ಸಮಸ್ತರೂ ಸಂತಸ ಪಡಬೇಕಾದ ಸಮಯದಲ್ಲಿ ‘ಅಯ್ಯೋ ನಮ್ಮ ಭೈರಪ್ಪನವರಿಗೆ ಸಿಗಲಿಲ್ಲವಲ್ಲ. ಬರೀ ರಾಜಕೀಯ’ ಎಂದು ಕೆಲವರು ಹಲುಬುತ್ತಿದ್ದಾರೆ. ನನ್ನ ಗೆಳೆಯನೊಬ್ಬ ‘ಭೈರಪ್ಪನವರಿಗೆ ಸಿಕ್ಕದ ಜ್ಞಾನಪೀಠ ಅದು ಅಜ್ಞಾನಪೀಠ’ ಎಂದು ಭೈರಪ್ಪನವರ ಕೆಲವು ಕಾದಂಬರಿಗಳಲ್ಲಿ ಬರುವ ‘ಹಿಂದೂ’ ಧರ್ಮದ ರಕ್ಷಕನಂತೆಯೇ ಉಗ್ರವಾಗಿ ಮೆಸೇಜು ಕಳುಹಿಸಿದ್ದ. ಮೂರು ವರ್ಷದ ನಂತರ ಭೈರಪ್ಪನವರಿಗೆ ಜ್ಞಾನಪೀಠ ದೊರಕಿದಾಗಲೂ ಆಗಲೂ ಈ ಭಕ್ತಿವೃಂದ ‘ರಾಜಕೀಯವಿದು’ ಎಂದು ಹಲುಬುತ್ತಾರಾ?!

Sep 22, 2011

ಕರ್ನಾಟಕದ ಸೊಮಾಲಿಯ ಮತ್ತು ಬಡತನ ರೇಖೆ.

ದೃಶ್ಯ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಬಂದ ಕೆಳಗಿನ ಎರಡು ವರದಿಗಳು ಮೇಲ್ನೋಟಕ್ಕೆ ಸಂಬಂಧಪಟ್ಟಿಲ್ಲದವು ಎಂದು ತೋರಿದರೂ ಎರಡಕ್ಕೂ ನೇರಾ ನೇರ ಸಂಬಂಧವಿದೆ. ಒಂದು ಕಡೆ ಬಡವರನ್ನು ‘ಬಡವನಲ್ಲ ಶ್ರೀಮಂತ’ನೆಂದು ಗುರುತಿಸಲು ಸಾಧ್ಯವಾಗುವಂಥ ಸರಕಾರದ ವರದಿ. ಮತ್ತೊಂದೆಡೆ ಆಹಾರದ ಕೊರತೆಯಿಂದ ನರಳುತ್ತಿರುವ ಮಕ್ಕಳ ಕರುಣಾಜನಕ ಕಥನ. “Shining India”ದ ಮತ್ತೊಂದು ರೂಪ.

TV 9 report about malnutrition in raichur


Sep 15, 2011

ಚಿಂತನೆಗೆ ತಡೆಯೊಡ್ಡುವ ಆಧುನಿಕತೆ?

ಡಾ ಅಶೋಕ್. ಕೆ. ಆರ್.
          ಡಿಗ್ರಿ ಸರ್ಟಿಫಿಕೇಟ್ ಪಡೆದುಕೊಳ್ಳುವ ಸಲುವಾಗಿ ಗೆಳೆಯ ಮಂಜನ ಜೊತೆ ಯುನಿವರ್ಸಿಟಿಗೆ ಹೋಗಿ ಅರ್ಜಿ ಕೊಟ್ಟೆ. ಮಧ್ಯಾಹ್ನದ ನಂತರ ಬರಲು ತಿಳಿಸಿದರು. ಅಲ್ಲಿಯವರೆಗೆ ಏನು ಮಾಡುವುದೆಂದು ಯೋಚಿಸುತ್ತಿದ್ದಾಗ ಮಂಜು ‘ಫೋರಮ್’ ಮಾಲಿಗೆ ಹೋಗೋಣವಾ? ಎಂದ. ಬೆಂಗಳೂರಿಗರ ಬಾಯಲ್ಲಿ ಪದೇ ಪದೇ ಕೇಳಿಬರುತ್ತಿದ್ದ ಫೋರಮ್ ನಲ್ಲಿ ಏನಿದೆ ಎಂಬ ಕುತೂಹಲ ನನ್ನಲ್ಲೂ ಇತ್ತು. ನಡಿಯಪ್ಪ ಹೋಗೋಣ ಎಂದೆ. ‘ಓಹೋ! ಇದೇನಾ ನಮ್ಮ ದೇಶದ ಯುವಜನತೆ ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥಗೊಳಿಸುತ್ತಿರುವ ಜಾಗ’ - ಫೋರಮ್ಮಿಗೆ ಕಾಲಿಡುತ್ತಿದ್ದಂತೆಯೇ ಬಂದ ಯೋಚನೆಯಿದು. ‘ಲೇ ಇಲ್ಲಿ ನಾವೇನು ಮಾಡೋದೋ ಮಾರಾಯಾ? ಏನನ್ನೂ ತೆಗೆದುಕೊಳ್ಳೋ ಅವಶ್ಯಕತೆಯೂ ಇಲ್ಲ; ಜೇಬಿನಲ್ಲಿ ಹೆಚ್ಚು ದುಡ್ಡೂ ಇಲ್ಲ. ನಡಿ ವಾಪಸ್ಸಾಗೋಣ’ ಎಂದೆ. ‘ಲ್ಯಾಂಡ್ ಸ್ಟೋನ್ ಪುಸ್ತಕದಂಗಡಿ ಇದೆ’ ಎಂದ. ‘ನಮಗೆ ಇಷ್ಟವಾಗೋ ಜಾಗ ಇದೊಂದೇ ಇರಬೇಕು ಇಲ್ಲಿ’ ಎಂದುಕೊಳ್ಳುತ್ತಾ ಆ ಅಂಗಡಿಗೆ ಹೊಕ್ಕು ಘಂಟೆಯ ಮೇಲೆ ಪುಸ್ತಕಗಳನ್ನು ಜಾಲಾಡಿದೆವು. ಹಣದ ಅಭಾವವಿದ್ದ ಕಾರಣ ಇಬ್ಬರಿಗೂ ಒಂದೊಂದು ಪುಸ್ತಕ ಖರೀದಿಸಲಷ್ಟೇ ಶಕ್ಯವಾಯಿತು. ನಂತರ ಏನನ್ನೋ ವಿಚಾರಿಸಲು ಮೊಬೈಲ್ ಅಂಗಡಿಗೆ ಹೋದೆವು. ಆ ಅಂಗಡಿಯಲ್ಲಿ ಹಿನ್ನೆಲೆಯಲ್ಲಿ ಸಂಗೀತವಿತ್ತು. ಅಂದು ಆರಂಭವಾದ ಈ ಕೆಳಗಿನ ಯೋಚನೆ ಇತ್ತೀಚೆಗೆ ಪತ್ರಿಕೆಯಲ್ಲಿ ಓದಿದ ಒಂದು ವರದಿಯಿಂದಾಗಿ ಮೂರ್ತ ರೂಪ ಪಡೆದುಕೊಳ್ಳಲಾರಂಭಿಸಿದೆ.

Sep 10, 2011

ಅಮ್ಮಂದಿರ ಮರೆತ ‘ರಾಮ’ಭಕ್ತರ ನಾಡಿನಲ್ಲಿ. . .


           ಸೆಪ್ಟೆಂಬರ್ 3, 2006: - ಕರ್ನಾಟಕ – ಆಂಧ್ರಪ್ರದೇಶ ಗಡಿಯಲ್ಲಿನ ಬಳ್ಳಾರಿಯ ಹಳ್ಳಿಯೊಂದರಲ್ಲಿದ್ದ 200 ವರ್ಷಗಳಷ್ಟು ಹಳೆಯದಾದ ಸುಗ್ಗಾಲಮ್ಮ ದೇವಾಲಯವನ್ನು ರೆಡ್ಡಿ ಬೆಂಬಲಿತ ವ್ಯಕ್ತಿಗಳು ದ್ವಂಸ ಮಾಡಿದರು, ಹಳ್ಳಿಯವರ ವಿರೋಧದ ನಡುವೆ. ಕಾರಣ? ಅಮ್ಮನ ಪಾದದಡಿಯಲ್ಲಿ ಕಬ್ಬಿಣದ ಅದಿರಿತ್ತು! ಪೂಜಾರಿಗಳನ್ನು ಕರೆಯಿಸಿ ಹೋಮ – ಹವನ – ಶಾಂತಿ ವಗೈರೆ ವಗೈರೆ ಮಾಡಿಸಿ ದೇವಾಲಯವನ್ನು ಕೆಡವಿದ್ದರಾದರೂ ಊರ ಜನರ ಕೋಪ ಶಮನವಾಗಿರಲಿಲ್ಲ. ಪೋಲೀಸ್ ಕೇಸ್ ಮಾಡಿದರು. ಅದೂ ಕೂಡ ಈಗ ರೆಡ್ಡಿಯ ವಿರುದ್ಧವಿದೆ.

Sep 8, 2011

ಪ್ರಜಾಪ್ರಭುತ್ವದ ನಾಲ್ಕನೇ ಸ್ಥಂಭವನ್ನು ಪ್ರಶ್ನಿಸುವರಾರು?


ಪ್ರಜಾವಾಣಿ
ಭ್ರಷ್ಟಾಚಾರ ಕೇವಲ ಸರಕಾರಿ ನೌಕರರ ಮತ್ತು ಸರಕಾರಕಷ್ಟೇ ಸೀಮಿತವಾಗಿಸಬಹುದಾದ ಸಂಗತಿಯಾ? ಅನಧಿಕೃತವಾಗಿ ಸಾವಿರ – ಲಕ್ಷ ರುಪಾಯಿಗಳನ್ನು ಪಡೆಯುವ ಶಾಲಾ ಕಾಲೇಜುಗಳು ಇದರ ವ್ಯಾಪ್ತಿಗೆ ಬರುವುದಿಲ್ಲವಾ? ಎಂ. ಆರ್. ಪಿ ದರಕ್ಕಿಂತ ಹೆಚ್ಚು ಹಣ ಪಡೆಯುವ ಅಂಗಡಿಗಳು? ನಾರ್ಮಾಲ್ಲಾಗೇ ಆಗುವ ನಾರ್ಮಲ್ ಡೆಲಿವರಿಗೆ 50,000 – ಒಂದು ಲಕ್ಷದವರೆಗೆ ಪಡೆಯುವ ಪಂಚತಾರಾ ಆಸ್ಪತ್ರೆಗಳು?

Sep 5, 2011

ಕಿಚ್ಚು ಹಚ್ಚಿದ ರಹಮತ್ ರಿಗೊಂದು ಥ್ಯಾಂಕ್ಸ್ ಹೇಳುತ್ತಾ. . .


ನಾನು ಅಧಿಕೃತವಾಗಿ ಸಾಹಿತ್ಯದ ವಿದ್ಯಾರ್ಥಿಯಲ್ಲ. ವೈದ್ಯಕೀಯ, ಇಂಜಿನಿಯರಿಂಗ್ ವಿಭಾಗಗಳಲ್ಲಿ ಓದಿ ಕೆಲಸಕ್ಕೆ ಸೇರಿರುವ ನನ್ನ ಬಹಳಷ್ಟು ಗೆಳೆಯರೂ ಸಾಹಿತ್ಯದ ವಿದ್ಯಾರ್ಥಿಗಳಲ್ಲ. ಮೊದಮೊದಲು ಸಮಯ ಕಳೆಯಲು, ನಂತರ ಸ್ವಲ್ಪ ಮನೋರಂಜನೆಗೆ ಸ್ವಲ್ಪ ಙ್ಞಾನಕ್ಕೆ ಪಠ್ಯೇತರ ಪುಸ್ತಕಗಳನ್ನು ಓದಲಾರಂಭಿಸಿದವರು ನಾವು. ಗೃಂಥಾಲಯಗಳಲ್ಲಿ ಸಿಕ್ಕುವ ಪುಸ್ತಕಗಳನ್ನೆಲ್ಲ ಓದುತ್ತಿದ್ದೆವು. ಹೆಚ್ಚು ಹಣವಿದ್ದರೆ ಒಂದಷ್ಟು ಖರೀದಿ ಮಾಡುತ್ತಿದ್ದೆವು. ನಮ್ಮ ಅರಿವಿಗೆ ಬಂದಷ್ಟನ್ನು ಹಂಚಿಕೊಳ್ಳುತ್ತಿದ್ದೆವು. ಕಥೆ ಕಾದಂಬರಿ ಪ್ರಕಾರಗಳಿಂದ ನಾಟಕ, ಆತ್ಮಕಥೆ, ರಾಜಕೀಯ, ಆರ್ಥಿಕ ವಿಷಯಗಳ ಕಡೆ ಹೊರಳಲಾರಂಭಿಸಿದೆವು.