May 29, 2012

ಸಾಮಾಜಿಕ ಕಳಕಳಿಯೆಂದರೆ.....

ಡಾ ಅಶೋಕ್ ಕೆ ಆರ್
ತೀರ ಗಂಗಾಧರ್ ಮೊದಲಿಯಾರ್ ಕೂಡ ಈ ರೀತಿಯಾಗಿ ಬರೆಯಬಲ್ಲರು ಎಂದು ನಿರೀಕ್ಷಿಸಿರಲಿಲ್ಲ! ಪ್ರಜಾವಾಣಿಯ ಸಿನಿಮಾರಂಜನೆಯ ಫಿಲಂ ಡೈರಿ ಅಂಕಣದಲ್ಲಿ ಅಮೀರ್ ಖಾನನ ಸತ್ಯಮೇವ ಜಯತೆಯ ಬಗ್ಗೆ ಬರೆದಿದ್ದಾರೆ. ‘ಬುರುಡೆ ಪುರಾಣ’ ಎಂಬ ಶೀರ್ಷಿಕೆಯೇ ಅಸಂಬದ್ಧವಾಗಿದೆ. ಅಮೀರ್ ಖಾನನ ಕೆಲಸವನ್ನು ಮೆಚ್ಚುತ್ತಲೇ ಅವನನ್ನು ತೆಗಳುತ್ತಾ ಹೋಗುತ್ತಾರೆ. ಭಾವನೆಗಳನ್ನು ಉದ್ರಿಕ್ತಗೊಳಿಸಿ ಹಣ ಮಾಡುವ ‘ದಂಧೆ’ ಎಂದುಬಿಡುತ್ತಾರೆ. ಅಮೀರ್ ಖಾನ್ ಹೋರಾಟಗಾರನಲ್ಲ, ಸಾಮಾಜಿಕ ಕಾರ್ಯಕರ್ತನೂ ಅಲ್ಲ; ಆತ ಒಬ್ಬ ನಟ, ನಿರ್ಮಾಪಕ, ನಿರ್ದೇಶಕ. ಹಣವಿಲ್ಲದೆ ಏನೂ ಮಾಡಲಾಗದ ಚಿತ್ರರಂಗದವನು. ಯಾವ ಕಾರ್ಯಕ್ರಮ ಮಾಡಿದರೂ ಅದರಿಂದ ಲಾಭ ಬರುವುದನ್ನು ಅವನು ಗಮನಿಸಲೇಬೇಕು. ‘ಏರ್ ಟೆಲ್ನಿಂದ ಮೇಸೇಜ್ ಮಾಡಿ, ಕೇವಲ ಒಂದು ರುಪಾಯಿ’ ಎಂದವನು ಕಾರ್ಯಕ್ರಮದ ಕೊನೆಯಲ್ಲಿ ಹೇಳುವುದು ಕೂಡ ಲಾಭದ ಒಂದು ಮುಖ. ಇವೆಲ್ಲವೂ ಸತ್ಯವೇ, ಆದರೆ....

May 8, 2012

ಡಬ್ಬಿಂಗ್ ಅವಶ್ಯಕವೇ?

ಡಾ ಅಶೋಕ್. ಕೆ. ಆರ್.
ಡಬ್ಬಿಂಗ್ ವಿವಾದ ಮತ್ತೆ ಗರಿಗೆದರಿದೆ. ಕಳೆದ ಹಲವಾರು ತಿಂಗಳುಗಳಿಂದ ‘ಏನ್ ಗುರು’ವಿನಂಥ ಬ್ಲಾಗುಗಳಲ್ಲಿ, ಫೇಸ್ ಬುಕ್ ನಂಥ ಸಾಮಾಜಿಕ ತಾಣಗಳಿಗೆ ಸೀಮಿತವಾಗಿದ್ದ ಈ ಚರ್ಚೆ ಅಮೀರ್ ಖಾನನ ‘ಸತ್ಯಮೇವ ಜಯತೆ’ಯ ಕನ್ನಡದವತರಣಿಕೆಯ ತಯಾರಿಕೆಯ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗಳಲ್ಲೂ ಚರ್ಚೆಗೊಳಪಡುತ್ತಿದೆ. ‘ಸತ್ಯಮೇವ ಜಯತೆ’ಯನ್ನು ಕನ್ನಡದಲ್ಲಿ ಪ್ರಸರಿಸಲು ಮುಂದಾಗಿದ್ದ ಸುವರ್ಣ ವಾಹಿನಿಯು ಚಿತ್ರೋದ್ಯಮದ ‘ಬೆದರಿಕೆ’ ಭರಿತ ವಿರೋಧದ ಹಿನ್ನೆಲೆಯಲ್ಲಿ ಪ್ರಸಾರದಿಂದ ಹಿಂದೆ ಸರಿದಿದೆ. ‘ಪ್ರಾಣ ಹೋದರೂ ಸರಿಯೇ ಡಬ್ಬಿಂಗಿಗೆ ಅವಕಾಶ ಕೊಡುವುದಿಲ್ಲ. ಅಪ್ಪಾಜಿಯ ಮೇಲಾಣೆ’ ಎಂದು ಶಿವರಾಜ್ ಕುಮಾರ್ ಆರ್ಭಟಿಸಿದ್ದಾರೆ. ಪ್ರಜಾವಾಣಿ ಶನಿವಾರದ ಪುಟವೊಂದನ್ನು ಡಬ್ಬಿಂಗಿನ ಚರ್ಚೆಗೆ ಮೀಸಲಿರಿಸಿದರೆ ಸುವರ್ಣ ವಾರ್ತಾ ವಾಹಿನಿಯು ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮದನ್ ಪಟೇಲ್ ಮತ್ತು ಬನವಾಸಿ ಬಳಗದ ಆನಂದ್ ರನ್ನು ಕರೆಸಿ ಜುಗಲ್ ಬಂದಿ ನಡೆಸಿದ್ದಾರೆ.