Mar 19, 2013

ನವಸಮಾಜವಾದದ ಹರಿಕಾರ ಹ್ಯುಗೋ ಷಾವೇಜ್!



ಡಾ ಅಶೋಕ್ ಕೆ ಆರ್

ಹ್ಯುಗೋ ಷಾವೆಜ್! ಇಪ್ಪತ್ತೊಂದನೇ ಶತಮಾನದ ಸಮಾಜವಾದಿ ನಾಯಕ, ಲ್ಯಾಟಿನ್ ಅಮೆರಿಕಾದಲ್ಲಿ ಸಮಾಜವಾದದ ಉದಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದವ, ಸಮಾಜವಾದದ ಹೆಸರಿನಲ್ಲಿ ಡಿಕ್ಟೇಟರ್ ಆಗಲು ಹೊರಟವ, ಪ್ರತಿಯೊಂದೂ ತನ್ನ ಆಣತಿಯಂತೆಯೇ ನಡೆಯಬೇಕು ಎಂಬ ಹಟದವ...... ಹ್ಯುಗೋ ಷಾವೆಜ್ ಬಗೆಗೆ ತಿಳಿಯಲು ಪುಸ್ತಕಗಳನ್ನೋ ಅಂತರ್ಜಾಲವನ್ನೋ ತೆರೆದು ಕುಳಿತರೆ ವಿವಿಧ ರೀತಿಯ ವ್ಯಕ್ತಿಕ್ವ ವರ್ಣನೆ ನಮ್ಮನ್ನು ತಬ್ಬಿಬ್ಬುಗೊಳಿಸುವುದು ಸಹಜ! ಉಳಿದ ದೇಶದವರ ಮಾತು ಬಿಡಿ ವೆನೆಜುವೆಲಾದ ನಾಗರೀಕರೇ ಅಂತರ್ಜಾಲದಲ್ಲಿ ಅಗಲಿದ ತಮ್ಮ ನಾಯಕನ ಬಗ್ಗೆ ವಿಷ ಕಾರಿದ್ದಾರೆ! ಹಾಗಿದ್ದರೆ ಹ್ಯುಗೋ ಷಾವೆಜ್ ಕೇವಲ ಸರ್ವಾಧಿಕಾರಿಯಾ? ವೆನೆಜುವೆಲಾಗೆ ಏನು ಕೊಡುಗೆಯನ್ನೇ ನೀಡಲಿಲ್ಲವಾ? ತನ್ನ ಅಹಂ ತೃಪ್ತಿಪಡಿಸಿಕೊಳ್ಳಲಷ್ಟೇ ಸಮಾಜವಾದದ ಹೆಸರು ಉಪಯೋಗಿಸಿಕೊಂಡ ನಾಯಕನಾ?!

Mar 13, 2013

ಭಾರತದ ಮಾಣಿಕ್ಯ – ಮಾಣಿಕ್ ಸರ್ಕಾರ್.



ಡಾ ಅಶೋಕ್ ಕೆ ಆರ್

ಭಾರತ ಬಡದೇಶವೇ? ನಮ್ಮ ರಾಜಕಾರಣಿಗಳು ಅಧಿಕೃತವಾಗಿಯೇ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ನೋಡಿದರೆ ಭಾರತದಲ್ಲಿ ಬಡವರ ಅಸ್ತಿತ್ವವೇ ಇಲ್ಲವೇನೋ ಎಂಬ ಭಾವನೆ ಮೂಡಿದರೆ ತಪ್ಪಲ್ಲ. ಎಲ್ಲೋ ಕೆಲವರನ್ನು ಹೊರತುಪಡಿಸಿ ನಮ್ಮ ಸಂಸದರು ಸಚಿವರು ಶಾಸಕರು ಮುಖ್ಯಮಂತ್ರಿಗಳೆಲ್ಲ ಕೋಟಿಗೂ ಅಧಿಕ ಬೆಲೆಬಾಳುವವರೇ! ಶಾಸನಸಭೆಯಲ್ಲಿ ಯಾರದೂ ವಿರೋಧವಿಲ್ಲದೆ ಅಂಗೀಕೃತವಾಗುವ ಮಸೂದೆ “ಶಾಸಕ – ಸಚಿವರ” ವೇತನ ಹೆಚ್ಚಳ ಮಾತ್ರ! ರಾಜಕಾರಣಿಗಳ ಬಗ್ಗೆ ರಾಜಕೀಯದ ಬಗ್ಗೆ ಅಪಾಯಕಾರಿ ಮಟ್ಟದಲ್ಲಿ ಬೆಳೆಯುತ್ತಿರುವ ಸಿನಿಕತೆಯ ನಡುವೆ ರಾಜಕಾರಣವೆಂದರೆ ಕೇವಲ ಹಣ ಮಾಡುವ, ಅನೈತಿಕ ರೀತಿಯಲ್ಲಿ ಜನರ ಮಧ್ಯೆಯೇ ವಿರೋಧ ಬೆಳೆಸುವ ದಂಧೆಯಲ್ಲ ಎಂಬುದನ್ನು ನಿರೂಪಿಸುವ ರಾಜಕಾರಣಿಗಳೂ ಇದ್ದಾರೆ ಎಂದರೆ ನಂಬುವುದು ಕೊಂಚ ಕಷ್ಟದ ಕೆಲಸವೇ ಸರಿ! ಅದರಲ್ಲೂ ಕರ್ನಾಟಕದ ರಾಜಕಾರಣ ಹಿಂದೆಂದೂ ಕಾಣದ ರೀತಿಯಲ್ಲಿ ಅಧಃಪತನಕ್ಕೊಳಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರನ್ನು ಅಪಹಾಸ್ಯದ ಸರಕನ್ನಾಗಿಸಿರುವುದು ಸುಳ್ಳಲ್ಲ.  ಈ ವಿಷಮ ಪರಿಸ್ಥಿತಿಯಲ್ಲಿ ರಾಜಕಾರಣವೆಂದರೆ ಪ್ರಚಾರಕ್ಕಾಗಿ ಹಪಹಪಿಸುವುದಲ್ಲ, ವೋಟಿಗಾಗಿ ನೈತಿಕತೆ ತೊರೆಯುವುದಲ್ಲ, ಇವೆಲ್ಲಕ್ಕಿಂತ ಹೆಚ್ಚಾಗಿ ತನ್ನತನ ಕಳೆದುಕೊಳ್ಳುವುದಲ್ಲ ಎಂಬುದನ್ನು ನಿರೂಪಿಸುತ್ತ ತನ್ನ ಸಾಮರ್ಥ್ಯದ ಮಟ್ಟಿಗೆ ಜನರಿಗೆ ಅನುಕೂಲವನ್ನು ಮಾಡಿಕೊಡುತ್ತಿರುವ ಮಾಣಿಕ್ ಸರ್ಕಾರ್ ಬಗ್ಗೆ ತಿಳಿದುಕೊಳ್ಳುವುದು ರಾಜಕಾರಣಿಗಳಿಗೆ ಮತ್ತವರಿಗೆ ಮತ ನೀಡುವ ಜನರಿಗೂ ಅವಶ್ಯಕ.