Aug 20, 2015

ಲಜ್ಜೆಗೆಡುವುದರಲ್ಲಿ ಎಲ್ಲರೂ ಮುಂದು....

ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಕನ್ನಡ, ಇಂಗ್ಲೀಷಿನ ಜೊತೆಗೆ ತೆಲುಗು, ತಮಿಳು, ಉರ್ದು ಭಾಷೆಯಲ್ಲಿಯೂ ಪ್ರಕಟಿಸಿ ಮತಗಳಿಕೆಗಾಗಿ ಕನ್ನಡತನವನ್ನು ಕೊಲ್ಲುವುದಕ್ಕೆ ತಾನು ಹಿಂಜರಿಯುವುದಿಲ್ಲ ಎಂದು ತೋರಿಸಿತ್ತು. 

ಲಜ್ಜೆಗೆಟ್ಟ ಕಾಂಗ್ರೆಸ್ಸಿನಿಂದ ಪಂಚ ಭಾಷಾ ಪ್ರಣಾಳಿಕೆ.


ಉಳಿದೆರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಂಚ ಭಾಷಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಸಮಾಧಾನ ಪಟ್ಟುಕೊಳ್ಳುವ ವೇಳೆಗೆ ನಾ ಮುಂದು ತಾ ಮುಂದು ಎಂಬಂತೆ So Called ರಾಷ್ಟ್ರೀಯ ಪಕ್ಷಗಳು ತಮಿಳು ಭಾಷೆಯ ಕರಪತ್ರವನ್ನು ಹಂಚುತ್ತಿವೆ. ಕರ್ನಾಟಕದ ನಾಯಕ ಶಿರೋಮಣಿಗಳಾದ ದೇವೇಗೌಡ, ಕುಮಾರಸ್ವಾಮಿ, ಸಿದ್ಧರಾಮಯ್ಯ, ಪರಮೇಶ್ವರ್, ಅನಂತಕುಮಾರ್, ಯಡಿಯೂರಪ್ಪ, ಸದಾನಂದಗೌಡ ಮುಂತಾದವರು ತಮಿಳು ಭಾಷಾ ಕರಪತ್ರದಲ್ಲಿ ಮಿಂಚುತ್ತಿರುವ ಪರಿಯನ್ನು ಆನಂದಿಸಿ ತಣ್ಣಗೆ ಒಂದು ಲೋಟ ನೀರು ಕುಡ್ಕೊಳ್ಳಿ....
BJP tamil bbmp

Congress Tamil BBMP

JDS Tamil BBMP

No comments:

Post a Comment