Mar 29, 2017

ಮಾಧ್ಯಮಗಳನ್ನು ನಿಯಂತ್ರಿಸುವುದು ಸರಿಯೇ?

ಡಾ. ಅಶೋಕ್. ಕೆ. ಆರ್.
ಇತ್ತೀಚೆಗೆ ಕರ್ನಾಟಕದ ಉಭಯ ಸದನಗಳಲ್ಲಿ ಮಾಧ್ಯಮದ, ಅದರಲ್ಲೂ ದೃಶ್ಯ ಮಾಧ್ಯಮದವರ ಅತಿಗಳ ಬಗ್ಗೆ ನಾಲ್ಕು ಘಂಟೆಗಳಷ್ಟು ಸುದೀರ್ಘ ಅವಧಿಯವರೆಗೆ ಚರ್ಚೆಗಳಾಗಿತ್ತು. ವೈಯಕ್ತಿಕ ಅವಹೇಳನ, ವ್ಯಕ್ತಿಗತ ಟೀಕೆಗಳ ಬಗ್ಗೆ ಬಹಳಷ್ಟು ಸದಸ್ಯರು ಬೇಸರ, ಕೋಪ ವ್ಯಕ್ತಪಡಿಸಿದ್ದರು. ಮಾಧ್ಯಮಗಳನ್ನು ನಿಯಂತ್ರಿಸಬೇಕು, ವೈಯಕ್ತಿಕ ತೇಜೋವಧೆಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದರು. ವರದಿ ಮಾಡಲು ಸದನ ಸಮಿತಿ ರಚಿಸಲಾಗುತ್ತದೆ ಎಂದು ಸ್ಪೀಕರ್ ಕೋಳಿವಾಡರು ತಿಳಿಸಿದ್ದರು. ಅಂದು ಮಾಧ್ಯಮದ ವಿರುದ್ಧ ನಡೆದ ಚರ್ಚೆಯಲ್ಲಿ ಭಾಗವಹಿಸದವರೂ ಸಹಿತ ಮೌನದಿಂದಿದ್ದು ಒಪ್ಪಿಗೆ ಸೂಚಿಸಿದ್ದರು. ಸರಕಾರದ ಮಟ್ಟದಲ್ಲಿ ಕೆಲಸ ನಡೆಯುವ ವೇಗ ನಮಗೆ ಗೊತ್ತೇ ಇದೆ. ಈ ವಿಷಯದಲ್ಲಿ ಆ ರೀತಿಯಾಗದೆ ಅತಿ ಶೀಘ್ರವಾಗಿ ಸದನ ಸಮಿತಿಯನ್ನು ರಚಿಸಲಾಗಿದೆ. ಆರೋಗ್ಯ ಸಚಿವರಾದ ಕೆ.ಆರ್. ರಮೇಶ್ ಕುಮಾರ್ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಪಿಯ ಕೆ.ಎಸ್. ಈಶ್ವರಪ್ಪನವರು ಸಮಿತಿ ರಚನೆಯನ್ನು ವಿರೋಧಿಸಿದ್ದಾರೆ, ಸಮಿತಿ ರಚನೆ ಯಾಕೆ ತಪ್ಪು – ಮಾಧ್ಯಮಗಳನ್ನು ನಿಯಂತ್ರಿಸುವುದು ಯಾಕೆ ಸರಿಯಲ್ಲ ಎಂದು ಕಾಂಗ್ರೆಸ್ಸಿನ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಿಸಬೇಕೆ?

ಉಪಚುನಾವಣೆಗಳೆಂಬ ಅನಿವಾರ್ಯ ಅನಿಷ್ಠಗಳು

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಇದೇ ಏಪ್ರಿಲ್ ಒಂಭತ್ತನೇ ತಾರೀಖಿನಂದು ಕರ್ನಾಟಕದ ಎರಡು ವಿದಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ನಡೆಯಲಿವೆ. ಇವುಗಳಲ್ಲಿ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯ ಶಾಸಕರಾಗಿದ್ದ ಶ್ರೀ ಮಹದೇವ ಪ್ರಸಾದ್ ನಿಧನರಾಗಿದ್ದರೆ, ಇದೇ ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ಶಾಸಕರಾಗಿದ್ದ ಶ್ರೀ ಶ್ರೀನಿವಾಸ್ಪ್ರಸಾದ್ ತಾವು ಆಯ್ಕೆಯಾಗಿ ಬಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದರ ಮುಂದುವರೆದ ಭಾಗವಾಗಿ ತಮ್ಮ ಶಾಸಕನ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ತೆರವಾದ ಈ ಎರಡೂ ಕ್ಷೇತ್ರಗಳಿಗೆ ಇದೀಗ ಉಪಚುನಾವಣೆಗಳು ನಡೆಯುತ್ತಿವೆ.

ಇರಲಿ, ನಮ್ಮ ರಾಜ್ಯದ ವಿದಾನಸಭೆಯ ಐದು ವರ್ಷಗಳ ಅವಧಿ ಮುಗಿಯುವುದು ಮುಂದಿನ ವರ್ಷದ ಅಂದರೆ 2018ರ ಮೇ ತಿಂಗಳಿಗೆ. ಅಂದರೆ ಈ ಸದನದ ಅವಧಿ ಬಾಕಿ ಇರುವುದು ಇನ್ನು ಕೇವಲ ಹದಿನಾಲ್ಕು ತಿಂಗಳುಗಳು ಮಾತ್ರವಾದರು, ಮೂರು ತಿಂಗಳ ಮುಂಚೆಯೇ ಚುನಾವಣೆಯ ಅಧಿಕೃತ ಅದಿಸೂಚನೆ ಹೊರಬೀಳುವುದರಿಂದ ಶಾಸಕರು ಸಕ್ರಿಯವಾಗಿ ಕೆಲಸ ಮಾಡಲು ಉಳಿದಿರುವುದು ಕೇವಲ 11 ತಿಂಗಳುಗಳು ಮಾತ್ರ. ಇಷ್ಟು ಕಡಿಮೆ ಅವಧಿಗಾಗಿ ಒಂದು ಚುನಾವಣೆ ನಡೆಸಬೇಕೇ ಮತ್ತು ಸರಕಾರವೊಂದು ಅದಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಬೇಕೇ ಎಂಬ ಸರಳ ಪ್ರಶ್ನೆ ಜನತೆಯಲ್ಲಿ ಉದ್ಭವವಾದರೆ ಅಚ್ಚರಿಯೇನಿಲ್ಲ. ಆದರೆ ಪ್ರಜಾಪ್ರಭುತ್ವದಲ್ಲಿ, ಸರಕಾರದಲ್ಲಿ ಜನರ ಬಾಗವಹಿಸುವಿಕೆ ಬಹಳ ಮುಖ್ಯವಾಗಿರುವುದರಿಂದ ಇಂತಹ ಚುನಾವಣೆಗಳಿಗೆ ಸರಕಾರ ವೆಚ್ಚ ಮಾಡಲೇ ಬೇಕಾದುದು ಅನಿವಾರ್ಯವಾಗಿದೆ ಎಂಬುದು ಸಹ ಅಷ್ಟೇ ಸತ್ಯ. ನನ್ನ ತಕರಾರು ಇರುವುದು ಈ ವೆಚ್ಚದ ಬಗೆಗಲ್ಲ. ಬದಲಿಗೆ ಉಪಚುನಾವಣೆಗಳಿಗೆ ಕಾರಣವಾಗುವ ವಿಷಯಗಳ ಬಗ್ಗೆ. ಅದರ ಬಗ್ಗೆ ಒಂದಿಷ್ಟು ನೋಡೋಣ:

Mar 22, 2017

ಪದ್ಯವಾಗ ಹೊರಟ ಗದ್ಯದಂತ ಸಾಲುಗಳು….

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ರಾಜದ್ರೋಹ!
ಒಮ್ಮೊಮ್ಮೆ ಹೀಗಾಗಿ ಬಿಡುತ್ತೆ:
ಸತ್ಯ ಹೇಳೋದು
ಸುಳ್ಳನ್ನ ಧಿಕ್ಕರಿಸೋದು
ರಾಜದ್ರೋಹ ಆಗುತ್ತೆ!

Mar 15, 2017

ಗೋವಾ: ಕಾಂಗ್ರೆಸ್ಸಿನ ದಿವ್ಯ ನಿರ್ಲಕ್ಷ್ಯದಿಂದ ಅಧಿಕಾರ ಪಡೆದ ಬಾಜಪ

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಬಹುಶ: ಇತಿಹಾಸ ಮರುಕಳಿಸುತ್ತದೆ ಎನ್ನುವ ನಾಣ್ಣುಡಿ ಹುಟ್ಟಿಕೊಂಡಿದ್ದೇ ಇಂಡಿಯಾದ ರಾಜಕಾರಣವನ್ನು ಗಮನದಲ್ಲಿಟ್ಟುಕೊಂಡೆನಿಸುತ್ತಿದೆ. ಕಳೆದ ಆರು ದಶಕಗಳ ಕಾಲ ರಾಜ್ಯಗಳ ರಾಜ್ಯಪಾಲರುಗಳನ್ನು ತನ್ನ ಪಕ್ಷದ ಕಾರ್ಯಕರ್ತರುಗಳಂತೆ ಬಳಸಿಕೊಂಡ ಕಾಂಗ್ರೆಸ್ ಇವತ್ತು ಗೋವಾದಲ್ಲಿ ರಾಜ್ಯಪಾಲರಿಂದ ತನ್ನ ಪಕ್ಷಕ್ಕೆ ಅನ್ಯಾಯವಾಗಿದೆಯೆಂದು ಬೊಬ್ಬೆ ಹೊಡೆಯುತ್ತಿದೆ. ಬಹುಶ: ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತಾಡುವ ಬಾಜಪ ಕಾಂಗ್ರೆಸ್ಸಿನ ಇಂತಹ ನೀತಿಗಳನ್ನು ಅಳವಡಿಸಿಕೊಳ್ಳುವುದರಲ್ಲಿ ಯಾವ ತಪ್ಪೂ ಇಲ್ಲವೆಂದು ಬಾವಿಸಿದಂತಿದೆ.

ಆಧುನಿಕ ಯಾತನಾ ಶಿಬಿರಗಳು!

ಸಾಂದರ್ಭಿಕ ಚಿತ್ರ.
ಕು.ಸ.ಮಧುಸೂದನ ರಂಗೇನಹಳ್ಳಿ
ಮುಂಚೆಲ್ಲಾ ಯಾತನಾ ಶಿಬಿರಗಳು
ದೇಶದ ಗಡಿಗಳಂಚಿನಲ್ಲಿದ್ದು
ದೇಶದೊಳಗಿನ ಶತ್ರುಗಳ ಗುರುತಿಸುವ ಗೂಡಚಾರ ಪಡೆ
ಅಂತಹವರನ್ನು ಒಬ್ಬೊಬ್ಬರನ್ನಾಗಿ ಹೆಕ್ಕಿ ತೆಗೆದು
ನಡುರಾತ್ರಿಯ ನೀರವ ಮೌನಗಳಲ್ಲಿ
ಸದ್ದೇ ಇರದಂತೆ ಬಂದಿಸಿ
ಯಾತನಾ ಶಿಬಿರಕ್ಕೆ ಬಿಟ್ಟು ಬರುತ್ತಿದ್ದರು
ಅಲ್ಲಿಗವರ ಕೆಲಸ ಮುಗಿಯುತ್ತಿತ್ತು.

Mar 13, 2017

ಪ್ರಾದೇಶಿಕ ಪಕ್ಷಗಳ ತಲೆದಂಡ ಪಡೆಯುತ್ತಿರುವ ಬಾಜಪ

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಐದು ರಾಜ್ಯಗಳ ಚುನಾವಣಾ ಪಲಿತಾಂಶಗಳು ಹೊರಬಿದ್ದಿದ್ದು, ಎರಡು ರಾಜ್ಯಗಳಲ್ಲಿ ಬಾಜಪ ಸ್ಪಷ್ಟ ಬಹುಮತವನ್ನು, ಕಾಂಗ್ರೆಸ್ ಒಂದು ರಾಜ್ಯದಲ್ಲಿಯೂ ಬಹುಮತವನ್ನು ಪಡೆದಿವೆ. ಇನ್ನೆರಡು ರಾಜ್ಯಗಳಲ್ಲಿ ಇವೆರಡೂ ಪಕ್ಷಗಳೂ ಇತರೆ ಪುಡಿ ಪಕ್ಷಗಳ ಮತ್ತು ಪಕ್ಷೇತರರ ಸಹಕಾರದೊಂದಿಗೆ ಸರಕಾರ ರಚಿಸುವಷ್ಟು ಸ್ಥಾನಗಳನ್ನು ಪಡೆದಿದ್ದು, ಅವುಗಳನ್ನು ಸೇರಿಸಿಕೊಂಡು ಸರಕಾರ ರಚಿಸುವ ಪ್ರಯತ್ನಕ್ಕೆ ಚಾಲನೆ ಕೊಟ್ಟಿದ್ದು. ಈಗಾಗಲೇ ಈ ಸಂಬಂದ ಮಾತುಕತೆಗಳು ಶುರುವಾಗಿವೆ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಾಜಪಕ್ಕೆ ಈ ಕುದುರೆ ವ್ಯಾಪಾರದಲ್ಲಿ ಒಂದಷ್ಟು ಅನಕೂಲವಿದೆ. ಇರಲಿ, ನಾನಿಲ್ಲಿ ಈ ಪಕ್ಷಗಳ ಸೋಲು ಗೆಲುವಿನ ಬಗ್ಗೆ ವಿಶ್ಲೇಷಣೆ ಮಾಡಲು ಇಚ್ಚಿಸುವುದಿಲ್ಲ. ಆದರೆ ಈ ಚುನಾವಣೆಗಳ ಒಂದು ಪರಿಣಾಮದ ಬಗ್ಗೆ ನಾನಿಲ್ಲಿ ಮಾತನಾಡಲು ಬಯಸುತ್ತೇನೆ. ಅದು ಪ್ರಾದೇಶಿಕ ಪಕ್ಷಗಳಿಗೆ ಒದಗಿದ ದುರ್ಗತಿಯ ಬಗ್ಗೆ! 

ಮುಂಬೈ ಮಹಾನಗರ ಪಾಲಿಕೆ ಪಲಿತಾಂಶ: ಕಾಂಗ್ರೆಸ್ಸಿನ ಒಳಜಗಳಗಳ ನಡುವೆ ಗೆಲುವು ಕಂಡ ಬಿಜೆಪಿ ಶಿವಸೇನೆ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪಲಿತಾಂಶಗಳು ರಾಜಕೀಯ ವಲಯದಲ್ಲಿ ನಿರೀಕ್ಷಿಸಿದವೇ ಆಗಿದ್ದರೂ, ಕಾಂಗ್ರೆಸ್ ಈ ಮಟ್ಟದಲ್ಲಿ ಸೋಲುತ್ತದೆಯೆಂದು ಸ್ವತ: ಅದರ ವಿರೋಧಿಗಳೂ ಊಹಿಸಿರಲಿಲ್ಲವೆಂಬುದು ಮಾತ್ರ ಸತ್ಯ! ಮಹಾರಾಷ್ಟ್ರದ ಬಹುತೇಕ ನಗರ ಪಾಲಿಕೆಗಳನ್ನು ಮತ್ತು ಜಿಲ್ಲಾ ಪರಿಷದ್ ಗಳನ್ನು ಬಿಜೆಪಿ ಮತ್ತು ಶಿವಸೇನೆ ವಶ ಪಡಿಸಿಕೊಂಡಿದ್ದು ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಭಾಗದಲ್ಲಿಯೂ ತಾನು ಬಲಿಷ್ಠವಾಗುತ್ತಿದ್ದೇನೆಂಬ ಸೂಚನೆಯನ್ನೂ ಬಿಜೆಪಿ ನೀಡಿದೆ. ಅದರಲ್ಲೂ ಎಲ್ಲ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದ್ದ ಮುಂಬೈ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಸೋಲನ್ನಪ್ಪಿದ್ದು, ಕಳೆದ ಬಾರಿಗಿಂತ ಹೀನಾಯಪ್ರದರ್ಶನ ನೀಡಿದೆ. ರಾಷ್ಟ್ರದ ವಾಣಿಜ್ಯ ರಾಜದಾನಿಯೆಂದೇ ಪ್ರಸಿದ್ದವಾಗಿರುವ ಮುಂಬೈ ಅನ್ನು ಗೆಲ್ಲುವುದು ಎಲ್ಲಪಕ್ಷಕ್ಕೂ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಚುನಾವಣೆಗು ಮೊದಲು ನಾನು ಮುಂಬೈ ಚುನಾವಣೆಯನ್ನು ವಿಶ್ಲೇಷಣೆ ಮಾಡುವಾಗಲೇ ಬಿಜೆಪಿ ಶಿವಸೇನೆಯ ಪ್ರಾಬಲ್ಯದ ಬಗ್ಗೆ ಬರೆದಿದ್ದೆ. ಈಗ ಸ್ವಲ್ಪ ಪಲಿತಾಂಶಗಳ ಬಗ್ಗೆ ಅದರ ಹಿಂದಿರುವ ಕಾರಣಗಳ ಬಗ್ಗೆ ನೋಡೋಣ:

Mar 8, 2017

ವೃದ್ದಾಪ್ಯ ವೇತನವೂ ಹನುಮಕ್ಕನ ಅಲೆದಾಟವೂ!

ಚಿತ್ರಮೂಲ: youthkiawaaz
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಹುಲಿಹಳ್ಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಹನುಮಕ್ಕ ಕಾಲಿಟ್ಟಾಗ ನಿಂಗಣ್ಣ ಅನ್ನೊ ಆರಡಿಯ ಅಟೆಂಡರ್ ಕಷ್ಟಪಟ್ಟು ಸೊಂಟ ಬಗ್ಗಿಸಿ ಕಸ ಹೊಡೆಯುತ್ತಿದ್ದ.

ಅಪ್ಪಾ ಸಾಮಿ, ಡಾಕುಟರು ಎಷ್ಟೊತ್ತಿಗೆ ಬರ್ತಾರೆ? ಅನ್ನೊ ದ್ವನಿ ಕೇಳಿಸಿದಾಕ್ಷಣ ಕೈಲಿದ್ದ ಪೊರಕೆಯನ್ನು ಮೂಲೆಗೆ ಬಿಸಾಕಿ ಯಾಕವ್ವಾ? ಅವರು ಬರೋದು ಹನ್ನೊಂದು ಗಂಟೆ ಮೇಲೇನೆ ಅನ್ನುತ್ತ ಖಾಲಿ ಹೊಡೆಯುತ್ತ ಬಿದ್ದಿದ್ದ ಆಸ್ಪತ್ರೆಯೊಳಗೆ ಯಾರೊ ಒಬ್ಬರು ಮಾತಿಗೆ ಸಿಕ್ಕಿದ ಖುಶಿಯಲ್ಲಿ ಮುಖವರಳಿಸಿ ಅಲ್ಲೆ ಇದ್ದ ಬೆಂಚಿನಲ್ಲಿ ಅವಳ ಜೊತೆ ಅವನೂ ಆಸೀನನಾದ. ಏನಿಲ್ಲ ಸಾಮಿ, ವಯಸಾದೋರಿಗೆ ಸರಕಾರದೋರು ಐನೂರು ರೂಪಾಯಿ ಕೊಡ್ತಾರಲ್ಲ ಅದಕ್ಕೆ ಡಾಕುಟರ ಸಯಿನ್ ಬೇಕಾಗಿತ್ತು ಅಂತ ಹನುಮಕ್ಕ ಹೇಳಲು ಎಲ್ಲ ಹೊಳೆದವನಂತೆ ಅಯ್ಯೋ ಅವ್ವ ಅದು ವೃದ್ದಾಪ್ಯವೇತನ ಅದನ್ನ ಮಾಡಿಕೊಡೋನು ವಿಲೇಜ್ ಅಕೌಂಟೆಂಟ್ ಅಂದ್ರೆ ಸೆಕ್ರೇಟರಿ. ಅವರು ಪಂಚಾಯಿತಿ ಆಪೀಸಲ್ಲಿ ಇರ್ತಾರೆ. ಅಲ್ಲಿಗೋಗೋದು ಬಿಟ್ಟು ಇಲ್ಲಿಗ್ಯಾಕೆ ಬಂದೆ ಅಂದ. ಅವನ ಮಾತಿಗೆ ತಬ್ಬಿಬ್ಬಾದ ಹನುಮಕ್ಕ ನಿಜಾನ? ಮತ್ತೆ ನಮ್ಮ ಪಕ್ಕದ ಮನೆ ಹುಡುಗ ಡಾಕುಟರ ಹತ್ರ ವಯಸಿನ ಬಗ್ಗೆ ಬರೆಸಿಕೊಂಡು ಬಾ ಅಂದನಲ್ಲ. ಹೂನವ್ವಾ, ನಿಂಗೆ ಅರವತ್ತು ವರ್ಷ ಆಗಿದೆ ಅಂತಷ್ಟೆ ಡಾಕ್ರ್ಟು ಬರಕೊಡೋದು ಮಿಕ್ಕಿದ್ದೆಲ್ಲ ಸೆಕ್ರೇಟರೀನೆ ಮಾಡಿಕೊಡೋದು. ಹೋಗಲಿ, ವಯಸ್ಸಿನ ಫಾರಂ ತಂದಿದಿಯಾ ಅಂತ ಕೇಳಿದ. ಪಾರಮ್ಮು ಕೋಳಿ ಎಲ್ಲ ನಂಗೆ ಗೊತ್ತಿಲ್ಲ ಅಂದ ಹನುಮಕ್ಕನ ನೋಡಿ ನಿಂಗಣ್ಣಂಗೆ ಅಯ್ಯೋ ಅನಿಸಿ, ಅವ್ವಾ ಇಲ್ಲಿಂದ ಬಸ್ಸ್ಟಾಂಡ್ ಹೋಗೋ ದಾರೀಲಿ ಒಂದು ಪೆಟ್ಟಿಗೆ ಅಂಗಡಿ ಐತಲ್ಲ ಅದೇ ಐಯ್ನೋರ್ದು ಅವರ ಹತ್ರ ವಯಸಿನ ಫಾರಂ ತಗೊಂಬಾ. ಬರೇ ಎಂಟಾಣೆಯಷ್ಟೆ! ಅಂದ.

Mar 1, 2017

ಬೇಡಿಕೆ ಈಡೇರುವವರೆಗೆ ಧರಣಿ: ಚಲೋ ಗುಡಿಬಂಡೆ.

ಚಿಕ್ಕಬಳ್ಳಾಪುರದ ಗುಡಿಬಂಡೆ ಸರ್ಕಾರಿ ಪ್ರೌಡಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ದಲಿತ ಯುವಕ ಮುರಳಿ ಜನವರಿ 20 ರಂದು ಗುಡಿಬಂಡೆ ಕೆರೆಯ ಬಳಿ ಹೆಬ್ಬೆಟ್ಟಿನ ಗಾತ್ರದ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪಕ್ಕದ ಕೊಂಬೆ ಮುರಿದಿದೆ.

ಈ ಘಟನೆಯ ಹಿನ್ನೆಲೆ ಎಂತಹವರನ್ನೂ ನಡುಗಿಸುತ್ತದೆ. ನಮ್ಮ ದೇಶದ ಜಾತಿ ಪದ್ದತಿ, ಶೈಕ್ಷಣಿಕ ಪದ್ಧತಿಯ ಕರಾಳ ಮುಖವನ್ನು ಮತ್ತೆ ನಮ್ಮ ಮುಂದಿಟ್ಟಿದೆ. ಮುರಳಿ ಅದೇ ಶಾಲಾವರಣದಲ್ಲಿರುವ 8 ನೇ ತರಗತಿಯ ಮೇಲ್ಜಾತಿ ಹೆಣ್ಣು ಮಗಳೊಂದಿಗೆ ಸ್ನೇಹದಿಂದಿದ್ದಾನೆ. ಇದನ್ನು ಅದೇ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ಆ ಹುಡುಗಿಯ ಅಣ್ಣ ಸಾಯಿ ಗಗನ್ ಗೆ ಸಹಿಸಲಾಗಿಲ್ಲ. ತನ್ನ ತಂಗಿಯನ್ನು ಚುಡಾಯಿಸಿದ ಎಂಬ ನೆಪ ಒಡ್ಡಿ ದಿನಾಂಕ 18 ರಂದು ಶಾಲಾವರಣದಲ್ಲಿಯೇ ತನ್ನ ಸ್ನೇಹಿತರೊಂದಿಗೆ ಕೂಡಿ ಮುರಳಿಯನ್ನು ಥಳಿಸಿದ್ದಾನೆ. ಶಿಕ್ಷಕರು ಜಗಳ ಬಿಡಿಸಿ ಬುದ್ಧಿ ಹೇಳಿ ಕಳಿಸಿದ್ದಾರೆ. ಮುರಳಿ ಸಹಜವಾಗಿ ಮನೆಗೆ ಮರಳಿದ್ದಾನೆ. ಮಾರನೇ ದಿನ ಶಾಲೆಗೆ ಹೋದಾಗ ಮತ್ತೆ ಮುರಳಿಯನ್ನು ಸಾಯಿ ಗಗನ್ ಮತ್ತು ಸ್ನೇಹಿತರ ತಂಡ ಹಿಗ್ಗಾ ಮುಗ್ಗ ಥಳಿಸಿದೆ. ಅಂದೂ ಸಹ ಮುರಳಿ ಶಾಲೆ ಮುಗಿಸಿ ಮನೆಗೆ ಮರಳಿದ್ದಾನೆ. ದಿನಾಂಕ 20 ರಂದೂ ಸಹ ಎಂದಿನಂತೆ ಶಾಲೆಗೆ ಹೋಗಿರುವ ಮುರಳಿಯನ್ನು ಮತ್ತೆ ಸಾಯಿಗಗನ್ ತಂಡ ಶಾಲಾ ಆವರಣದೊಳಗೆ ಹಾಗೂ ಹೊರಗೆ ಥಳಿಸಿದ್ದಾರೆ. ಅಷ್ಟೆ ಅಲ್ಲ ಒಂದಷ್ಟು ಬೈಕುಗಳಲ್ಲಿ ಮುರಳಿಯನ್ನು ಹೊತ್ತೊಯ್ದಿದ್ದಾರೆ. ಇದನ್ನು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ದಸಂಸದ ಸಿ.ಜಿ.ಗಂಗಪ್ಪ ಹೇಳುತ್ತಾರೆ‌. ಹೀಗೆ ಮುರಳಿಯನ್ನು ಬೈಕಿನಲ್ಲಿ ಹೊತ್ತೊಯ್ದ ನಂತರ ಸಂಜೆ 3:00 ಗಂಟೆಗೆ ಸಮೀಪ ಮುರಳಿ ಶವವಾಗಿ ಪತ್ತೆಯಾಗಿದ್ದಾನೆ.