May 25, 2017

ಭಗ್ನಗೊಂಡ ಕೋಟ್ಯಾಂತರ ಜನರ ಪರ್ಯಾಯ ರಾಜಕಾರಣದ ಕನಸು!

ಕು.ಸ,ಮಧುಸೂದನನಾಯರ್ ರಂಗೇನಹಳ್ಳಿ
ಇಂಡಿಯಾದ ಕೋಟ್ಯಾಂತರ ಜನರ ಕನಸುಗಳು ಒಂದೇ ದಿನದಲ್ಲಿ ಛಿದ್ರಗೊಂಡಿವೆ!

ಹೌದು,ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲರ ಮೇಲೆ ಎರಡು ಕೋಟಿ ರೂಪಾಯಿ ಲಂಚ ಪಡೆದ ಆರೋಪ ಮತ್ತು ಸುಳ್ಳು ಕಂಪನಿಗಳ ಮೂಲಕ ಹವಾಲ ಹಣಕಾಸು ವ್ಯವಹಾರ ನಡೆಸಿದ ಆರೋಪ ಹೊರಬೀಳುತ್ತಲೇ ಜನತೆಯಲ್ಲಿ ಭ್ರಮನಿರಸನದ ನಿಟ್ಟುಸಿರು ಕೇಳಿ ಬರುತ್ತಿದೆ. ಯಾಕೆಂದರೆ ಭಾರತೀಯರ ಮಟ್ಟಿಗೆ, ಅದರಲ್ಲೂ ಇಂದಿನ ಅಕ್ಷರಸ್ಥ ಯುವಪೀಳಿಗೆಯ ಪಾಲಿಗೆ ಆಮ್ ಆದ್ಮಿ ಪಕ್ಷ ಕೇವಲ ಒಂದು ರಾಜಕೀಯ ಪಕ್ಷ ಮಾತ್ರವಾಗಿರಲಿಲ್ಲ. ಈ ನಾಡಿನಲ್ಲಿ ಕಳೆದ ಎಪ್ಪತ್ತು ವರ್ಷಗಳಿಂದ ರಾಜಕಾರಣ ಮಾಡುತ್ತ ಬರುತ್ತಿದ್ದ ಸಾಂಪ್ರದಾಯಿಕ ರಾಜಕೀಯ ಪಕ್ಷಗಳಿಗೆ ಸೆಡ್ಡು ಹೊಡೆದು ನಿಂತ ಪರ್ಯಾಯ ರಾಜಕಾರಣದ ಒಂದು ಆಯುಧವಾಗಿತ್ತು.

May 13, 2017

ಓ ಮನ ..!

ನಾಗಪ್ಪ.ಕೆ.ಮಾದರ
ಸವಿ ಮಾತಿನ 
ಲಹರಿಗೆ 
ಕುಳಿತಿದೆ 
ಮನ

ಸವಿ ನುಡಿಯ
ಕೇಳಲು
ಕಾದಿದೆ
ಮನ

May 9, 2017

ಮುದ್ದು ಮನವೇ ಬುದ್ದಿ ಮಾತು ಕೇಳು.....

ಸವಿತ ಎಸ್ ಪಿ
ಹೇಳು ಮನವೇ....‌?ಯಾಕೀ ಪರಿ ಪರಿತಾಪ....! ಭಾವತಂತುವಿನೊಂದು ಕೊಂಡಿ ಕಳಚಿದಂತೆ.....ಏನೀ ಕಸಿವಿಸಿ...? ಬೊಗಸೆಯಷ್ಟು ಪ್ರೀತಿ ಬಯಸುವೆಯಾದರೂ ಯಾಕೆ....? ಅಣುವಿನಷ್ಟು ದೊರಕಲಿಲ್ಲವೆಂಬ ಕೊರಗೇಕೇ‌..? ನೋವ ಅಲೆ ಅಲೆ ನಿನ್ನೊಡಲಿಗೆ ಅಪ್ಪಳಿಸಿತೆಂದು ಭೋರಿಡುವೆಯೇಕೆ.....?

ಯಾಕೀ ನಿರೀಕ್ಷೆ.....? ಇದು ಸಾಧುವೇ....ಯಂತ್ರ ತಾಂತ್ರಿಕತೆಯ ಹುಚ್ಚು ಹಚ್ಚಿಸಿಕೊಂಡಿರುವ ಜಗದ ಜನರ ನಾಗಾಲೋಟದ ವೇಗಕೆ ನೀನೇಕೆ ಓಡದೆಯೇ ಸೋತೆ....? ಗೆಲ್ಲುವ ಹಂಬಲದ ಕುದುರೆಯನೇಕೇ ಹತ್ತದೇ ಹೋದೇ....?

May 5, 2017

ಕಾವೇರಿ

ಸವಿತ ಎಸ್ ಪಿ
ಭೂಮಾಲೀಕರ ನಿರ್ಲಕ್ಷ್ಯ 
ಬೇಜವಾಬ್ದಾರಿ.., ಮಿತಿ ಮೀರಿ....
ಆಡಾಡಿ ನಲಿಯುತ್ತಿದ್ದ
ಮುದ್ದು ಕಾವೇರೀ.....
ಬಿದ್ದೆಯೆಲ್ಲ ಬಾಯ್ತೆರೆದ
ಕೊಳವೆ ಬಾವಿಗೆ ಜಾರಿ....!!

May 2, 2017

ಮೃತ್ಯು ಕೂಪಗಳಾಗುತ್ತಿರುವ ತೆರೆದ ಕೊಳವೆಬಾವಿಗಳಿಗೊಂದು ಕಠಿಣ ಕಾಯ್ದೆಯ ಅಗತ್ಯ

ಸಾಂದರ್ಭಕ ಚಿತ್ರ 
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಆಗಾಗ ತೆರದ ಕೊಳವೆಬಾವಿಗಳಲ್ಲಿ ಪುಟ್ಟ ಮಕ್ಕಳು ಬೀಳುವುದು, ಅವರನ್ನು ಹೊರತೆಗೆಯಲು ಸರಕಾರಗಳು ಸತತ ಕಾರ್ಯಾಚರಣೆ ನಡೆಸುವುದು, ಅವು ವಿಫಲವಾಗಿ ಮಕ್ಕಳು ಅಸುನೀಗುವುದು ನಡೆಯುತ್ತಲೇ ಇವೆ. ಇಂತಹ ಪ್ರತಿ ಘಟನೆ ನಡೆದಾಗಲೂ ಜನ ಸರಕಾರಗಳ ವಿರುದ್ದ ಪ್ರತಿಭಟಿಸುವುದು, ಸರಕಾರಗಳು ಕೊಳವೆಬಾವಿಗಳಿಗೆ ಸಂಬಂದಿಸಿದಂತೆ ಒಂದಷ್ಟು ನೀತಿಗಳನ್ನು ರೂಪಿಸುವುದಾಗಿ ಹೇಳುವುದು ನಡೆದೆ ಇದೆ. 

ಆದರೆ ಸರಕಾರ ರೂಪಿಸಿರುವ ಯಾವ ನೀತಿಗಳೂ ಕಾರ್ಯರೂಪಕ್ಕೆ ಬಂದಂತೆ ಕಾಣುತ್ತಿಲ್ಲ ಹೀಗಾಗಿಯೇ ಪದೇಪದೇ ಇಂತಹ ಅವಘಡಗಳು ನಡೆಯುತ್ತಲೇ ಇವೆ. ಯಾವುದೇ ಇಚ್ಚಾಶಕ್ತಿ ಇರದೆ ರೂಪಿಸಿದ ನೀತಿನಿಯಮಗಳಿಂದ, ಕಾನೂನುಗಳಿಂದ ಇಂತಹ ಅಪಘಾತಗಳನ್ನು ತಡೆಯಲು ಸಾದ್ಯವಿಲ್ಲ. ಹಾಗಾಗಿ ಕೆಲವಾದರು ಕಠಿಣ ಕಾನೂನುಗಳನ್ನು ಜಾರಿಗೊಳಿಸುವುದರಿಂದ ಭವಿಷ್ಯದಲ್ಲಿಯಾದರು ಇಂತಹ ಅನಾಹುತಗಳನ್ನು ನಿಯಂತ್ರಿಸ ಬಹುದಾಗಿದೆ.