Aug 27, 2017

ಕೃಷಿ-ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಶಿಕ್ಷಣಸಂಸ್ಥೆಗಳ ಪ್ರವೇಶ ಬೇಡ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಕೃಷಿಕ್ಷೇತ್ರ ತೀವ್ರವಾದ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಸದರಿ ಬಿಕ್ಕಟ್ಟುಗಳಿಗೆ ಕಾರಣವಾದ ಅಂಶಗಳನ್ನು ವೈಜ್ಞಾನಿಕವಾಗಿ ಅದ್ಯಯನ ಮಾಡಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾದ ಸರಕಾರಗಳು ತಮ್ಮ ಖಾಸಗೀಕರಣದ ನೀತಿಯನ್ನುಕೃಷಿಕ್ಷೇತ್ರಕ್ಕೂ ಅನ್ವಯಿಸುವ ಭರದಲ್ಲಿ, ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಲು ಹೊರಟಿರುವಂತೆ ಕಾಣುತ್ತಿದೆ. ಇದುವರೆಗೂ ಸರಕಾರದ ಉನ್ನತ ಶಿಕ್ಷಣ ಸಂಸ್ಥೆಗಳು ನೀಡುತ್ತಿದ್ದ ಕೃಷಿ ಶಿಕ್ಷಣವನ್ನು ನೀಡುವ ಕಾಲೇಜುಗಳನ್ನು ಪ್ರಾರಂಭಿಸಲು ಖಾಸಗಿ ಕ್ಯಾಪಿಟೇಶನ್ ಕುಳಗಳಿಗೆ ಅನುಮತಿ ನೀಡುವಬಗ್ಗೆ ಚಿಂತನೆ ನಡೆಸುತ್ತಿದೆ. ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ಈಗಾಗಲೆ ಬಡವರ ಕೈಗೆಟುಕದಷ್ಟು ದುಬಾರಿಯಾಗಿರುವಾಗ ಬಹುತೇಕ ಗ್ರಾಮೀಣ ಭಾಗದ ರೈತರ ಮಕ್ಕಳು ಕಡಿಮೆವೆಚ್ಚದಲ್ಲಿ ಪಡೆಯುತ್ತಿದ್ದ ಕೃಷಿಸಂಬಂದಿತ ಶಿಕ್ಷಣವೂ ಈಗ ಅದೇ ಸಾಲಿಗೆ ಸೇರುವತ್ತ ಸಾಗಿದೆ.

Aug 16, 2017

ಸ್ಪಷ್ಟ ನಿಲುವೊಂದನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಜಾತ್ಯಾತೀತ ಜನತಾದಳ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಬಿಹಾರದಲ್ಲಿನ ಮಹಾಮೈತ್ರಿಕೂಟದಿಂದ ಹೊರಬಂದ ನಿತೀಶ್ ಕುಮಾರ್ ಬಾಜಪ ನೇತೃತ್ವದ ಎನ್.ಡಿ.ಎ.ಜೊತೆ ಸೇರಿ ಸರಕಾರ ರಚಿಸಿದ ಮೇಲೆ ರಾಷ್ಟ್ರಮಟ್ಟದಲ್ಲಿ ವಿರೋಧಪಕ್ಷಗಳ ಮಹಾಮೈತ್ರಿಕೂಟವೊಂದರ ರಚನೆಯ ಕನಸು ಮೇಲ್ನೋಟಕ್ಕಂತು ಕರಗಿಹೋಗಿದೆ. ಇಂತಹ ಗಾಡಾಂಧಕಾರದಲ್ಲಿ ಮುಳುಗಿರುವ ಕಾಂಗ್ರೇಸ್ಸೇತರ ವಿರೋಧಪಕ್ಷಗಳ ಸ್ಥಿತಿ ಕರುಣಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ನೋಡಿದರೆ ಕನರ್ಾಟಕದಲ್ಲಿನ ಶ್ರೀ ದೇವೇಗೌಡರ ನೇತೃತ್ವದ 'ಜಾತ್ಯಾತೀತಜನತಾದಳ' ಒಂದೇ ಕನಿಷ್ಠ ನಮ್ಮ ರಾಜ್ಯದ ಮಟ್ಟಗಾದರೂ ಬಾಜಪವನ್ನು ದೃಢವಾಗಿ ನಿಂತು ಎದುರಿಸಬಲ್ಲಂತಹ ಶಕ್ತಿಯನ್ನು ಹೊಂದಿರುವಂತೆ ಕಾಣುತ್ತಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡೇ ನಾವು ಉಳಿದ ವಿರೋಧಪಕ್ಷಗಳ ಪರಿಸ್ಥಿತಿಯನ್ನು ವಿಶ್ಲೇಷಿಸಿನೋಡಬೇಕಾಗಿದೆ: