Nov 17, 2017

ಇಂಡಿಯಾದಲ್ಲಿ ಮತೀಯವಾದದ ರಾಜಕಾರಣದ ಬೆಳವಣಿಗೆಗೆ ಕಾರಣವಾದ ಅಂಶಗಳು!

ಕು.ಸ.ಮಧುಸೂದನರಂಗೇನಹಳ್ಳಿ
(ಇಂಡಿಯಾದ ರಾಜಕಾರಣದಲ್ಲಿ ಮತೀಯವಾದವೇನು ಇದ್ದಕ್ಕಿದ್ದಂತೆ ಸೃಷ್ಠಿಯಾಗಿದ್ದಲ್ಲ. ಬದಲಿಗೆ ಎಪ್ಪತ್ತರ ದಶಕದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರುಗಳು ತೆಗೆದುಕೊಂಡ ತಪ್ಪು ನಿರ್ದಾರಗಳಿಂದಾಗಿ ಮತ್ತು ತದನಂತರದಲ್ಲೂ ಸಿದ್ದಾಂತಕ್ಕಿಂತ ಅಧಿಕಾರವೇ ಮುಖ್ಯ ಎನ್ನುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಮತೀಯವಾದ ಎನ್ನುವುದು ನಿದಾನವಾಗಿ ಇಂಡಿಯಾದ ರಾಜಕಾರಣದಲ್ಲಿ ವಿಷದಂತೆ ತುಂಬಿಕೊಳ್ಳತೊಡಗಿತು. ಇಂದಿನ ಯುವಜನತೆಗೆ ಇದರ ಸಂಕ್ಷಿಪ್ತ ಪರಿಚಯ ಮಾಡಿಕೊಡುವುದಷ್ಟೆ ಈ ಲೇಖನದ ಉದ್ದೇಶ)

ಅದು ಶಕ್ತಿ ರಾಜಕಾರಣದ ಪಡಸಾಲೆಯೇ ಇರಲಿ, ವಿಚಾರವಂತರು ಮತ್ತು ಪ್ರಗತಿಪರರ ವೈಚಾರಿಕಗೋಷ್ಠಿಗಳಿರಲಿ, ಇಲ್ಲ ಅತಿ ಸಾಮಾನ್ಯಜನರ ಸರಳ ಮಾತುಕತೆಗಳ ಪಟ್ಟಾಂಗದಲ್ಲಿರಲಿ ಒಂದುಮಾತು ಮಾತ್ರ ಪದೆಪದೇ ಪುನರುಚ್ಚರಿಸಲ್ಪಡುತ್ತಿದೆ ಮತ್ತು ತೀವ್ರ ರೀತಿಯ ಚರ್ಚೆಗೆ ಗ್ರಾಸವಾಗುತ್ತಲಿದೆ: ಅದೆಂದರೆ ಇಂಡಿಯಾದಲ್ಲಿ ಮತಾಂಧ ರಾಜಕಾರಣ ಮೇಲುಗೈ ಸಾದಿಸುತ್ತಿದೆಮತ್ತು ಅದರ ಕಬಂದ ಬಾಹುಗಳು ಈ ನೆಲದ ಬುಡಕಟ್ಟುಜನಾಂಗಗಳನ್ನೂ ಸಹ ಆವರಿಸಿಕೊಳ್ಳುತ್ತಿದೆ ಅನ್ನುವುದಾಗಿದೆ.ನಿಜ ಇವತ್ತು ಮತೀಯ ರಾಜಕಾರಣ ಮಾಡುತ್ತಲೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಾಜಪ ದಿನೇದಿನೇ ತನ್ನ ಶಕ್ತಿಯನ್ನು ಮತ್ತು ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುತ್ತಿದೆ.ಎಂಭತ್ತರ ದಶಕದಲ್ಲಿ ಶುರುವಾದ ಬಾಜಪದ ಕೋಮುರಾಜಕಾರಣವೀಗ ತನ್ನ ಉತ್ತುಂಗ ಸ್ಥಿತಿಯನ್ನು ತಲುಪಿದ್ದು ಈ ನಾಡಿನ ಜಾತ್ಯಾತೀತ ನೇಯ್ಗೆಯನ್ನು ಚಿಂದಿ ಮಾಡಿದೆ ಮತ್ತು ಮಾಡುತ್ತಿದೆ. ಈಹಿನ್ನೆಲೆಯಲ್ಲಿಯೇ ನಾವು ಬಾಜಪ ಹೇಗೆ ಬೆಳೆಯುತ್ತಬಂದಿತು ಮತ್ತು ಹೇಗೆ ತನ್ನ ಮತೀಯ ರಾಜಕಾರಣ ಮತ್ತು ಸಾಂಸ್ಕೃತಿಕ ರಾಜಕಾರಣವನ್ನು ಭಾರತೀಯರು ಒಪ್ಪುವಂತೆಮಾಡುವಲ್ಲಿ ಯಶಸ್ವಿಯಾಯಿತು ಎನ್ನುವುದನ್ನು ವಿಶ್ಲೇಷಿಸಿ ನೋಡಬೇಕಿದೆ. 

ಅಮೃತಯಾನ.

ಚಿತ್ರಕಲಾವಿದೆ, ವಿನ್ಯಾಸಕಿ, ರಂಗನಟಿಯಾಗಿದ್ದ ಅಮೃತಾ ರಕ್ಷಿದಿ ತನ್ನ ಬದುಕಿನ ಅನುಭವಗಳನ್ನು "ಅಮೃತ ಯಾನ" ಎಂಬ ಹೆಸರಿನಲ್ಲಿ ಪುಟಗಳ ಮೇಲಿಳಿಸಿದ್ದಾಳೆ. ಆತ್ಮಕತೆ ಬರೆದಾಯ್ತಲ್ಲ ಇನ್ನೇನು ಕೆಲಸ ಎನ್ನುವಂತೆ ತುಂಬಾ ಚಿಕ್ಕ ವಯಸ್ಸಿಗೇ ಅನಾರೋಗ್ಯದಿಂದ ಅಸುನೀಗಿಬಿಟ್ಟಳು ಅಮೃತಾ. ಅವಳ ಅನುಪಸ್ಥಿತಿಯಲ್ಲಿ ಐದು ಸಂಪುಟಗಳ "ಅಮೃತ ಯಾನ" ಇದೇ ಭಾನುವಾರ (19/11/2017) ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಬೇಸ್ ಮೆಂಟ್ ಗ್ಯಾಲರಿಯಲ್ಲಿ ಬಿಡುಗಡೆಗೊಳ್ಳಲಿದೆ. ಬಿಡುವು ಮಾಡಿಕೊಂಡು ಬನ್ನಿ. 
ಅಮೃತಯಾನದ ಒಂದು ಪುಟ್ಟ ಅಧ್ಯಾಯ ಹಿಂಗ್ಯಾಕೆಯ ಓದುಗರಿಗಾಗಿ. 

ಅಜ್ಜಮನೆ

ಅಣ್ಣಯ್ಯನಿಗೆ ಅಕ್ಟೋಬರ್ ರಜೆ ಪ್ರಾರಂಭವಾಗಿತ್ತು. ಮಳೆಗಾಲ ಕಳೆದು ಬಿಸಿಲು ಬಂದಿತ್ತು. ಈ ನಡುವೆ ಅಪ್ಪ ದೇವಾಲದ ಕೆರೆಯಲ್ಲಿನ ಕೆಲಸವನ್ನು ಬಿಟ್ಟು ಹಾರ್ಲೆಗೆ ಕೆಲಸಕ್ಕೆ ಸೇರಿದ್ದರು. ಒಮ್ಮೆ ಅಜ್ಜಮನೆಗೆ ಹೋಗಿಬರಬೇಕೆಂದು ಅಮ್ಮ ಅಪ್ಪನಲ್ಲಿ ಹೇಳುತ್ತಿದ್ದುದು ಅಣ್ಣಯ್ಯ ಮತ್ತು ಅಮೃತಾರ ಕಿವಿಗೆ ಬದ್ದಿತ್ತು. ರಜೆ ಬಂದ ಕೂಡಲೇ ಅಣ್ಣಯ್ಯ ಮತ್ತು ಅಮೃತಾ “ಅಮ್ಮ ಅಜ್ಜಮನೆಗೋಗದು ಯಾವಾಗ?” ಎಂದು ಗೋಗರೆಯಲಾರಂಭಿಸಿದರು. ಆದರೆ ಅಮ್ಮ “ಅಪ್ಪನ ಕೇಳ್ಬೇಕಷ್ಟೆ” ಎನ್ನುತ್ತಿದ್ದಳು. ಅಜ್ಜಿಯನ್ನು ಬಿಟ್ಟು ಅಮ್ಮನಿಗೆ ತಕ್ಷಣ ಹೊರಡಲಾಗುತ್ತಿರಲಿಲ್ಲ. ಅಮ್ಮ ಇಲ್ಲದಿದ್ದಾಗ ಒಬ್ಬರೇ ಮನೆಕೆಲಸಗಳನ್ನು ಮಾಡಲು ಅಜ್ಜಿಗೆ ಆಗುತ್ತಿರಲಿಲ್ಲ. ಅಪ್ಪ ಯಾವಾಗಲೂ ಹೊರಗಡೆ ದುಡಿಯಲು ಹೋಗುತ್ತಿದ್ದರು. ಹಾಗಾಗಿ ಅಪ್ಪ ಒಪ್ಪಿದ ಮೇಲೆಯೇ ಅವರೆಲ್ಲರೂ ಹೊರಡುವುದು. ಅಣ್ಣಯ್ಯ ಅಪ್ಪ ಮನೆಯಲ್ಲಿಲ್ಲದಾಗ ಅಮ್ಮನೊಂದಿಗೆ ಹಟ ಮಾಡುತ್ತಿದ್ದ. ಆದರೆ ಅಮೃತಾಳಿಗಾಗಲೀ ಅಣ್ಣಯ್ಯನಿಗಾಗಲೀ ಅಪ್ಪನಲ್ಲಿ ಕೇಳಲು ಧೈರ್ಯವಿರಲಿಲ್ಲ.

Nov 14, 2017

ಮತಾಂದರುಗಳನ್ನು ಇಲ್ಲಿಗೆ ಕರೆತನ್ನಿ

ಕು.ಸ.ಮಧುಸೂದನರಂಗೇನಹಳ್ಳಿ
ಒಮ್ಮೆಯಾದರು ಅಲ್ಲಿಗೆ ನಮ್ಮ ಎಲ್ಲ ಧರ್ಮಗಳ ಮತಾಂದರನ್ನು ಕರೆದುಕೊಂಡು ಹೋಗಬೇಕು ಅನಿಸುತ್ತಿದೆ.

ಅದು ಅಷ್ಟೇನೂ ಪ್ರಸಿದ್ದವಲ್ಲದ, ರಾಜ್ಯದ ಭೂಪಟದಲ್ಲಿ ಅಧಿಕೃತವಾಗಿ ಗುರುತಿಸಿಕೊಳ್ಳದ ಪುಟ್ಟ ಊರು! ಹೆಸರು ಹಣೆಗೆರೆ ಕಟ್ಟೆ-ನೀವು ಶಿವಮೊಗ್ಗದಿಂದ ಆಯನೂರಿಗೆ ಹೋಗಿ ಅಲ್ಲಿಂದ ಎಡಕ್ಕೆ ತಿರುಗಿ ಕಾಡಿನೊಳಗೆ ಇಪ್ಪತ್ತು ಕಿಲೊಮೀಟರ್ ಪ್ರಯಾಣ ಮಾಡಿದರೆ ಆ ಊರುಸಿಗುತ್ತದೆ. ಊರಪ್ರವೇಶದಿಂದಲೇ ರಸ್ತೆಯ ಬಲ ಬದಿಯಲ್ಲಿ ಹೂವು, ಹಣ್ಣು,ಕಾಯಿ,

Nov 3, 2017

ಗೂಗಲ್ ಮ್ಯಾಪಿಗೆ ಕನ್ನಡದ ಹೆಸರುಗಳನ್ನು ಸೇರಿಸುವ ಬಗೆ || How to add kannada name...









ಪುರುಸೊತ್ತಾದಾಗಲೆಲ್ಲ ಗೂಗಲ್ ಮ್ಯಾಪಿನಲ್ಲಿ ಕನ್ನಡದ ಹೆಸರುಗಳನ್ನು ಸೇರಿಸುತ್ತಾ ಹೋಗಿ. 

ಕನ್ನಡದ ಹೆಸರುಗಳನ್ನು ಮೊಬೈಲಿನಲ್ಲಿ ಸೇರಿಸಲು ಸುಲಭ ವಿಧಾನವನ್ನರಿಯಲು ಈ ವೀಡಿಯೋ ನೋಡಿ