Sep 11, 2018

‘ದುರಿತಕಾಲದ ದನಿ’ ಕವನಸಂಕಲನದ ಬಿಡುಗಡೆ ಸಮಾರಂಭ.

ಕು.ಸ.ಮಧುಸೂದನರಂಗೇನಹಳ್ಳಿ ಅವರ ಕವನ ಸಂಕಲನ ಲೋಕಾರ್ಪಣೆ ಮಾಡಿದ ಖ್ಯಾತ ವಿಮರ್ಶಕ ಆರ್.ಜಿ. ಹಳ್ಳಿ ನಾಗರಾಜ್ ಈ ಸಂದರ್ಭದಲ್ಲಿ ಮಾತನಾಡುತ್ತ,

“ಸಂತೋಷ ಕೊಡುವ ಕಾಲದಲ್ಲಿ ನಾವು ಬದುಕುತ್ತಿಲ್ಲ ಅಸಹಿಷ್ಣುತೆ, ಭಯದ ಜೊತೆಗೆ ಉಸಿರುಗಟ್ಟುವ ವಾತಾವರಣದಲ್ಲಿ ಬದುಕುತ್ತಿದ್ದೇವೆ.ಸಂಸ್ಕೃತಿಯ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಹತ್ತಿಕ್ಕುವ ಕೆಲಸ ನಡೆಯುತ್ತಿದೆ.ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ.ಇಂತಹ ಸಮಕಾಲೀನ ವಿಚಾರಗಳನ್ನಿಟ್ಟುಕೊಂಡೇ ಕು.ಸ.ಮಧುಸೂದನರಂಗೇನಹಳ್ಳಿಯವರ ಕವಿತೆಗಳು ಸೃಷ್ಠಿಯಾಗಿವೆ.ಈಗಿನ ದುರಿತ ಕಾಲದ ವಿರುದ್ದ ಆರೋಗ್ಯಪೂರ್ಣ ದ್ವನಿ ಎತ್ತಿರುವ ಈ ಸಂಕಲನದ ಕವಿತೆಗಳಿಗೆ ವಿಶೇಷ ಮಹತ್ವವಿದೆ” ಎಂದು ನುಡಿದರು.

ಈ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಕವಿಯಿತ್ರಿ ಶ್ರೀಮತಿ ಹೆಚ್.ಎಲ್.ಪುಷ್ಪಾ,ಪ್ರೊ.ವೃಷಭೇಂದ್ರಪ್ಪ. ಡಾ.ಪ್ರಕಾಶ್ ಹಲಗೇರಿ, ಪ್ರೊ, ಅರವಿಂದ್, ಡಾ,ಹೊನ್ನಾಳಿ ಶಿವಕುಮಾರ್, ಶ್ರೀ ಸಂತೇಬೆನ್ನೂರು ಫೈಜ್ನಾಟ್ರಾಜ್, ವೀರಭದ್ರಪ್ಪ ತೆಲಿಗಿ ಹಾಗು ಚಿತ್ರ ಕಲಾವಿದರಾದ ಶ್ರೀ ನಾಮದೇವ ಕಾಗದಕರ ಉಪಸ್ಥಿತರಿದ್ದರು

No comments:

Post a Comment