May 30, 2019

ದಕ್ಷಿಣವನ್ನು ಬಾಜಪ ಯಾಕೆ ಗೆಲ್ಲಲಾಗಲಿಲ್ಲ?

ಕು.ಸ.ಮಧುಸೂದನ
ದೇಶದ ಉದ್ದಗಲಕ್ಕೂ ತನ್ನ ಪ್ರಭಾವಳಿಯನ್ನು ವಿಸ್ತರಿಸಿ ಮುನ್ನೂರಕ್ಕೂ ಅಧಿಕಸ್ಥಾನಗಳನ್ನು ಗೆದ್ದ ಬಾಜಪ ದಕ್ಷಿಣ ಭಾರತದಲ್ಲಿ ಮಾತ್ರ ಬಹುತೇಕ ವಿಫಲವಾಗಿದೆ. ಕರ್ನಾಟಕ ಒಂದನ್ನು ಹೊರತು ಪಡಿಸಿದರೆ ಮಿಕ್ಕಂತೆ ಆಂದ್ರಪ್ರದೇಶ, ತಮಿಳುನಾಡು, ಪುದುಚೇರಿ, ಕೇರಳಗಳಲ್ಲಿ ಕನಿಷ್ಠ ಖಾತೆ ತೆರೆಯಲೂ ಅದು ವಿಫಲವಾಗಿದ್ದು ತೆಲಂಗಾಣದಲ್ಲಿ ಮಾತ್ರ ಕಷ್ಟ ಪಟ್ಟು ನಾಲ್ಕು ಸ್ಥಾನಗಳನ್ನು ಗೆದ್ದಿದೆ.

ಯಾವತ್ತಿಗೂ ಬಾಜಪ ಖಾತೆ ತೆರೆಯಲೇ ಅಸಾದ್ಯವೆಂಬ ಬಲವಾದ ಅನಿಸಿಕೆಯಿದ್ದ ಈಶಾನ್ಯಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾದ ಅದು ದಕ್ಷಿಣದಲ್ಲಿ ನೆಲೆ ಕಂಡುಕೊಳ್ಳಲು ಏದುಸಿರು ಬಿಡುತ್ತಿರುವುದಾದರೂ ಯಾಕೆಂದು ವಿಶ್ಲೇಷಿಸುತ್ತ ಹೋದರೆ ಹಲವು ಐತಿಹಾಸಿಕ ಕಾರಣಗಳು ಕಂಡುಬರುತ್ತವೆ.

May 21, 2019

ಒಂದು ಬೊಗಸೆ ಪ್ರೀತಿ - 17

ಡಾ. ಅಶೋಕ್.‌ ಕೆ. ಆರ್.‌


ಒಂದು ಬೊಗಸೆ ಪ್ರೀತಿಯ ಹಿಂದಿನ ಅಧ್ಯಾಯಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ.

“ಅದನ್ನು ಅವತ್ತೇ ಹೇಳಿದ್ದೆ. ಅದಕ್ಕೆ ನನ್ನ ಉತ್ತರಾನೂ ಕೊಟ್ಟಿದ್ದೆ ಆಗಲೇ. ಮತ್ತೆ ಮತ್ತೆ ಅದನ್ನೇ ಹೇಳೋದಿಕ್ಕೆ ನನ್ನನ್ನು ಹುಡುಕೋ ಕಷ್ಟ ತೆಗೆದುಕೊಳ್ಳಬೇಡ. ಇನ್ನು ನೀನು ಹೋಗು”

‘ಯಾಕೋ ಹಿಂಗೆ ಹೋಗು ಹೋಗು ಅಂತೀಯ. ಫ್ರೆಂಡ್ಸಾಗಿರೋಣ ಕಣೋ ಮೊದಲಿನ ತರಾನೇ ಅನ್ನೋದ್ರಲ್ಲಿ ತಪ್ಪೇನಿದೆ. ನನಗೆ ನಿನ್ನ ಜೊತೆ ಮಾತಾಡ್ದೆ ಇದ್ರೆ ಬೇಜಾರಾಗುತ್ತೆ ಕಣೋ'

“ಮತ್ತೆ ಅದನ್ನೇ ಹೇಳ್ತೀಯಲ್ಲ! ನಾನು ನಿನ್ನ ಲವರ್ ಆಗಿ ಇರಬಲ್ಲೆ, ಫ್ರೆಂಡಾಗಲ್ಲ”

‘ಇದೇ ನಿನ್ನ ಕೊನೇ ತೀರ್ಮಾನಾನ?’

“ನನ್ನ ಮೊದಲ ತೀರ್ಮಾನವೂ ಅದೇ ಕೊನೇ ತೀರ್ಮಾನವೂ ಅದೇ”

‘ನಿನಗೆ ನನ್ನ ಜೊತೆ ಮಾತಾಡ್ದೆ ಇದ್ರೆ ಬೇಜಾರಾಗಲ್ವ?’

“ಆಗುತ್ತೆ”

‘ಮತ್ತೆ’

“ಬೇಜಾರಾಗುತ್ತೆ ಅಂತ ನಿನ್ನ ಜೊತೆ ಫ್ರೆಂಡ್ ತರ ನಾಟಕ ಮಾಡೋಕೆ ನನಗಿಷ್ಟವಿಲ್ಲ. ಇದ್ರೆ ಪ್ರೇಮಿಗಳ ತರ ಇರೋಣ. ಇಲ್ಲಾಂದ್ರೆ ಬೇಜಾರು ಮಾಡ್ಕೊಂಡೇ ಇರ್ತೀನಿ ಬಿಡು”

‘ನೋಡು ಹೆಂಗೆಲ್ಲ ಮಾತಾಡ್ತಿ. ನೀನು ಬೇಜಾರು ಮಾಡ್ಕೊಂಡು ಸಿಗರೇಟು ಸೇದ್ಕೊಂಡು ಸಪ್ಪಗೆ ಕುಳಿತಿದ್ರೆ ನನಗೆ ಖುಷಿಯೇನೋ’

“ನಾನು ಹೆಂಗಿದ್ರೆ ನಿನಗೆ ಏನಾಗ್ಬೇಕು? ನನ್ನ ಯೋಚನೆ ಬಿಡು”

‘ಅಂದ್ರೆ? ನಾನು ಇಷ್ಟಪಡೋ ಫ್ರೆಂಡ್ ಬಗ್ಗೆ ನಾನು ಇಷ್ಟೂ ಯೋಚನೆ ಮಾಡಬಾರದಾ?’

“ಇಷ್ಟಪಡ್ತೀನಿ ಅಂತೀಯ. ಆದ್ರೆ ಲವ್ ಮಾತ್ರ ಮಾಡೋಕಾಗಲ್ಲ ಅಲ್ವ. ಸಿಗರೇಟು ಸೇದ್ತಾನೆ, ಮನೆ ಕಡೆ ಪ್ರಾಬ್ಲಮ್ಮು, ಅಷ್ಟೇನು ಚೆನ್ನಾಗಿ ಓದಲ್ಲ. ಇವನನ್ನು ಲವ್ ಮಾಡಿ ಏನು ಸಿಗುತ್ತೆ ಅಂತೇನೋ?”

ಒಂದೊಂದೇ ಎಪಿಸೋಡು ಹುಡುಕುಡುಕಿ ಓದೋಕೆ ಬೇಸರವಾ? ಪೂರ್ತಿ ಇ - ಪುಸ್ತಕ ತೆಗೆದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

ಹಳೆ ಕುದುರೆ -ಹೊಸ ದೊರೆ

ಕು.ಸ.ಮಧುಸೂದನ ರಂಗೇನಹಳ್ಳಿ

ಉರಿಯುವ ಹಗಲು
ಗಡಿಯಾರಗಳ ಮುಳ್ಳುಗಳು ತೆವಳುತಿವೆ
ಎಷ್ಟು ಕತ್ತಿಗಳ ತಿವಿತ
ರಕ್ತ ಸ್ರಾವವಿರದೆ ಕೊಲ್ಲುವ ಹೊಸ ಮಾರ್ಗ
ಅನ್ವೇಷಿಸಿದ ಕೀರ್ತಿ ಪತಾಕೆ ಹೊತ್ತ
ಹಳೇ ಕುದುರೆಗಳ ಮೇಲಿನ ಹೊಸ ದೊರೆ
ಊರ ತುಂಬಾ ಭಯದ ಕಂಪನಗಳು
ನಿಟ್ಟುಸಿರನ್ನೂ ಬಿಗಿ ಹಿಡಿದು
ಬಿಲ ಸೇರಿಕೊಂಡ ಹುಳುಗಳು
ಬಿಸಿಲ ಧಗೆಯ ನಡುವೆಯೆದ್ದ ಬಿಸಿ ಗಾಳಿಗೆದ್ದು ದೂಳಿನಬ್ಬರಕೆ
ಮೊಳಗಿಸಿದ ರಣಘೋಷಗಳು ದಿಕ್ಕುಗಳಿಗೆ ಹಬ್ಬಿ
ಸೇನಾಧಿಪತಿಗಳ ಆವೇಶ ಆಕ್ರೋಶಗಳನ್ನೆಲ್ಲ ಮೈಮೇಲೆ ಆವಾಹಿಸಿಕೊಂಡ ಕಾಲಾಳುಗಳು ಸ್ವತ: ರಕ್ಕಸರಂತೆ
ಪರಾಕ್ರಮ ಮೆರೆಯ ತೊಡಗಿದರು
ಹಾಗೆ ಧಗಧಗಿಸಿ ಉರಿದೊಂದು ಸಂಜೆ
ಬರಬಹುದಾದ ಬಿರು ಮಳೆಗೆ ಕಾದ
ಜನ ಊರಾಚೆಯ ದಿಬ್ಬದ ಮೇಲೆ ನೆರೆದು ಹಾಡತೊಡಗಿದರು
ಹುಯ್ಯೋ ಹುಯ್ಯೋ ಮಳೆರಾಯ!

ಕು.ಸ.ಮಧುಸೂದನ ರಂಗೇನಹಳ್ಳಿಯವರ ಮತ್ತಷ್ಟು ಬರಹಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ. 

ಪುಟ್ಟ ಹುಡುಗಿಯ ಬಿಟ್ಟುಬಿಡಿ!

ಪಲ್ಲವಿ ದಿವ್ಯಾ
ಆ ಪುಟ್ಟ ಹುಡುಗಿಯ ರೆಕ್ಕೆಗಳ ಕತ್ತರಿಸದಿರಿ
ಆ ಪುಟ್ಟ ಹುಡುಗಿಯ ಕಣ್ಣುಗಳಿಗೆ ಪಟ್ಟಿ ಕಟ್ಟದಿರಿ.

ಆ ಪುಟ್ಟ ಹುಡುಗಿಯ ನಾಲಿಗೆಗೆ ಲಗಾಮು ಹಾಕದಿರಿ
ಆ ಪುಟ್ಟ ಹುಡುಗಿಯ ಕಾಲುಗಳಿಗೆ ಬೇಡಿ ಹಾಕದಿರಿ.

ಅವಳೊಂದು ಹೂವಿನ ಹಾಗೆಂದು ವರ್ಣಿಸಿ
ನಿಯಮಾವಳಿಗಳ ಮುಳ್ಳುಗಳ ಕಾವಲಿಗಿಡದಿರಿ.

ಅವಳ ಬದುಕು ಅವಳದು
ನಡೆಯುತ್ತಲೊ ಓಡುತ್ತಲೊ ಹಾರುತ್ತಲೊ ಅವಳ ಗಮ್ಯವನವಳು
ತಲುಪಿಕೊಳ್ಳಲಿ
ತಡೆಯೊಡ್ಡದಿರಿ.

ಆ ಪುಟ್ಟ ಹುಡುಗಿಯ ಮುನ್ನಡೆಸುವ ಯಜಮಾನಿಕೆ ತೋರದಿರಿ
ಆ ಪುಟ್ಟ ಹುಡುಗಿ ಬೇಡುತ್ತಿಹಳು ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ

May 18, 2019

ಅವಿಸ್ಮರಣೀಯ ಅರುಣಾಚಲ ಅದರ ಚಿತ್ರ -ವಿಚಿತ್ರ ಇತಿಹಾಸ: ಪುಸ್ತಕ ವಿಮರ್ಶೆ

ನಂದಕುಮಾರ್. ಕೆ. ಎನ್
ಅರುಣಾಚಲ ಪ್ರದೇಶ ಈಗ ಭಾರತದ ಅಂಗವನ್ನಾಗಿಯೇ ನೋಡಲಾಗುತ್ತಿದೆ. ಆದರೆ ಚೀನ ಅದನ್ನು ಈಗಲೂ ಮಾನ್ಯ ಮಾಡಿಲ್ಲ. ಅದರ ಬಗ್ಗೆ ವಿವಾದಗಳು ಈಗಲೂ ಭಾರತ, ಚೀನ ನಡುವೆ ಇವೆ. ಅರುಣಾಚಲ ಪ್ರದೇಶವನ್ನು ಭಾರತದ ಭಾಗವಾಗಿಸುವ ಪ್ರಕ್ರಿಯೆಗಳು ಬ್ರಿಟೀಷ್ ಭಾರತದಲ್ಲೇ ಶುರುವಾಗಿದ್ದವು. ಆದರೆ ಅದಕ್ಕೆ ಅಲ್ಲಿನ ಸ್ಥಳೀಯ ಸ್ವಯಂಮಾಡಳಿತ ಗಣ ವ್ಯವಸ್ಥೆಯ ಬುಡಕಟ್ಟು ಗುಂಪುಗಳು ಪ್ರಬಲವಾದ ಪ್ರತಿರೋಧ ಒಡ್ಡಿದ್ದವು. ಅವರು ಅನುಮತಿಸದೇ ಅವರ ಪ್ರದೇಶದೊಳಕ್ಕೆ ಯಾರೂ ಹೋಗುವಂತಿರಲಿಲ್ಲ. ಹೋದವರು ಜೀವಂತವಾಗಿ ವಾಪಾಸು ಬರಲಾಗುತ್ತಿರಲಿಲ್ಲ. ಬ್ರಿಟೀಷ್ ಅಧಿಕಾರಿಯೊಬ್ಬ ಆ ಪ್ರದೇಶವನ್ನು ಗ್ರಹಿಸಿ ಬ್ರಿಟೀಷ್ ಭಾರತದ ಭಾಗವಾಗಿಸಿಕೊಳ್ಳುವ ಇರಾದೆಯಿಂದ ಯಾವುದೇ ಅನುಮತಿ ಇಲ್ಲದೇ ಅಲ್ಲಿಗೆ ತೆರಳಿ ಸಾವಿಗೀಡಾಗಿದ್ದು ಬ್ರಿಟೀಷ್ ಆಡಳಿತವನ್ನು ಕೆರಳಿಸಿತ್ತು. ಆ ಪ್ರದೇಶವನ್ನು ಕೈವಶ ಮಾಡಿಕೊಳ್ಳುವ ಪ್ರಕ್ರಿಯೆಗಳು ಅಲ್ಲಿಂದ ಚುರುಕುಗೊಂಡವು ಎಂದು ಹೇಳಬಹುದು. ಅಲ್ಲಿ ಸ್ವಾಯತ್ತ ಗಣ ವ್ಯವಸ್ಥೆಯಿರುವ ಬುಡಕಟ್ಟುಗಳು ಸ್ವಯಂಪೂರ್ಣವಾಗಿ ಜೀವನ ಕಟ್ಟಿಕೊಂಡಿದ್ದರೂ ಆ ಪ್ರದೇಶದ ಮೇಲೆ ಚೀನ ಹಾಗೂ ಟಿಬೆಟ್ ನ ಹಿತಾಸಕ್ತಿಗಳೂ ಇದ್ದವು. ಟಿಬೆಟ್ ನಂತರ ಚೀನಾದ ಪ್ರದೇಶವಾಯಿತು. ಇದರ ಮಧ್ಯೆ ಆ ಪ್ರದೇಶದ ಬುಡಕಟ್ಟು ಜನರ ಅಭಿಪ್ರಾಯಗಳಿಗೆ ಯಾವುದೇ ಬೆಲೆ ನೀಡಲಿಲ್ಲ. ಹಾಗಾಗಿ ಆ ಸಮುದಾಯಗಳಲ್ಲಿ ಹಲವು ಈಗಲೂ ಭಾರತವನ್ನೂ ಅಂಗೀಕರಿಸಲಾಗದಂತಹ ಸ್ಥಿತಿಯಲ್ಲಿಯೇ ಇವೆ.

May 14, 2019

ಒಂದು ಬೊಗಸೆ ಪ್ರೀತಿ - 16

ಡಾ. ಅಶೋಕ್.‌ ಕೆ. ಆರ್.‌


ಒಂದು ಬೊಗಸೆ ಪ್ರೀತಿಯ ಹಿಂದಿನ ಅಧ್ಯಾಯಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ.

‘ಅಯ್ಯೋ ಹಂಗೆಲ್ಲ ಏನಿಲ್ಲಪ್ಪ. ರಜೆಯಲ್ಲಿ ಅಜ್ಜಿ ಮನೆಗೆ ಹೋಗಿಬಿಟ್ಟಿದ್ದೆ. ಅಲ್ಲಿ ಕಸಿನ್ಸ್ ಜೊತೆಯೆಲ್ಲ ಆಟ ಸುತ್ತಾಟ. ಸಮಯ ಕಳೆದಿದ್ದೇ ಗೊತ್ತಾಗಲಿಲ್ಲ. ನನ್ನಲ್ಲಿನ್ನೂ ಪುರುಷೋತ್ತಮನ ಬಗ್ಗೆ ಪ್ರೀತಿ ಪ್ರೇಮದ ಭಾವನೆಗಳು ಹುಟ್ಟಿರಲಿಲ್ಲವಲ್ಲ ಹಾಗಾಗಿ ಹೆಚ್ಚೇನು ಅವನ ನೆನಪಾಗಲಿಲ್ಲ. ಅವನು ಹೇಳಿದ್ದು ನೆನಪಾದಾಗಲೆಲ್ಲ ನನಗೆ ಅಶ್ವಿನಿಯನ್ನು ಹೇಗೆ ಎದುರಿಸುವುದು ಅವಳಿಗೆ ಹೇಗೆ ಹೇಳುವುದು ಎನ್ನುವುದೇ ಹೆಚ್ಚು ಕಾಡುತ್ತಿತ್ತು. ಅವಳಿಗೆ ಊಹಿಸಲು ಸಾಧ್ಯವಾಗಿದ್ದು ನನಗಾಗಲಿಲ್ಲವಲ್ಲ ಎಂದು ಬೇಸರವಾಗುತ್ತಿತ್ತು. ರಜೆಯ ಮಜದ ನಡುವೆ ಅದನ್ನೆಲ್ಲ ಜಾಸ್ತಿ ಯೋಚಿಸಲೂ ಇಲ್ಲ ಬಿಡು. ರಜೆ ಮುಗಿಸಿ ಬಂದ ಮೇಲೆ ಮನೆಯ ಬಳಿಯೇ ಅಶ್ವಿನಿ ಸಿಕ್ಕಿದಳು. ಅವಳ ಮನೆಗೇ ಹರಟಲು ಹೋದೆವು. ಮನೆಯಲ್ಯಾರೂ ಇರಲಿಲ್ಲ. ಹಾಲಿನಲ್ಲಿ ಟಿವಿ ಹಾಕಿ ಕುಳಿತೆವು. ಅದೂ ಇದೂ ಮಾತನಾಡಲು ಪ್ರಾರಂಭಿಸಿದೆವು. ನಾನು ಮುಖಕ್ಕೆ ಮುಖ ಕೊಟ್ಟು ಮಾತನಾಡದೆ ಇದ್ದುದು ಅವಳ ಗಮನಕ್ಕೆ ಬಂತು. ಜನರ ಜೊತೆ ಹೆಚ್ಚು ಬೆರೆಯದೆ ಮೂರೊತ್ತೂ ಓದ್ತಾನೇ ಕೂರ್ತಿದ್ದ ಅವಳಿಗೆ ಬೇರೆಯವರ ನಡವಳಿಕೆಯಿಂದಾನೇ ಅರ್ಧ ವಿಷಯ ಗೊತ್ತಾಗಿಬಿಡುವುದಾದರೂ ಹೇಗೆ ಎಂದು ಕೆಲವೊಮ್ಮೆ ಅಚ್ಚರಿಯಾಗುತ್ತದೆ. “ಏನಾಯ್ತೆ?” ಎಂದು ಕೇಳಿದಳು.

ಒಂದೊಂದೇ ಎಪಿಸೋಡು ಹುಡುಕುಡುಕಿ ಓದೋಕೆ ಬೇಸರವಾ? ಪೂರ್ತಿ ಇ - ಪುಸ್ತಕ ತೆಗೆದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

May 9, 2019

ಶಕ್ತಿ ನೀಡು!

ಕು.ಸ.ಮಧುಸೂದನ ರಂಗೇನಹಳ್ಳಿ. 
ಹಿತವೆನಿಸುತ್ತಿದೆ ನಿನ್ನೀ ಮೆದು ಸ್ಪರ್ಶ
ಮೆಲು ಮಾತು
ಅಂತೂ ಬಂದೆಯಲ್ಲ ಮರಣಶಯ್ಯೆಯಡೆಗಾದರು
ಅದೇ ಸಂತಸ
ಷ್ಟು ಸನಿಹವಿದ್ದೀಯವೆಂದರೆ ದೂರದ ಪರಲೋಕವೂ ಇದೀಗ ಹತ್ತಿರವೆನಿಸುತ್ತಿದೆ
ಕ್ಷಮಿಸಿಬಿಡಿ ಹಳೆಯ ಮಾತುಗಳನ್ನೂ ಮುನಿಸುಗಳನ್ನೂ
ದಾಟಿದ ಮೇಲೂ ಹೊಳೆಯ ಅಂಬಿಗನ ನೆನಪೇಕೆ
ಏನೂ ಕೊಡಲಿಲ್ಲವೆಂಬ ಕೊರಗೇಕೆ ನಿನಗೆ
ಕೊಡುವುದು ಮುಖ್ಯ ಕೊಟ್ಟದ್ದೇನೆಂದಲ್ಲ
ಸುಖವೋ ದು:ಖವೊ
ಬೇಡಬಿಡು ಯಾಕೆ ವೃಥಾ ವಾದವಿವಾದ
ಹೋಗಿಬಿಡುವ ಸಮಯದಲ್ಲೇಕೆ ತೋರುವೆ ಇಷ್ಟೊಂದು ಪ್ರೀತಿಯ
ಸ್ವರ್ಗವೊ ನರಕವೊ
ನೀನಿರದೆಯೂಬದುಕಬಲ್ಲ ಶಕ್ತಿಯ ನೀಡು!
ಕು.ಸ.ಮಧುಸೂದನರವರ ಮತ್ತಷ್ಟು ಬರಹಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ. 

May 7, 2019

ಒಂದು ಬೊಗಸೆ ಪ್ರೀತಿ - 15

ಡಾ. ಅಶೋಕ್.‌ ಕೆ. ಆರ್.‌

ಒಂದು ಬೊಗಸೆ ಪ್ರೀತಿಯ ಹಿಂದಿನ ಅಧ್ಯಾಯಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ.
ಕತೆ ಅರ್ಧಕ್ಕೆ ನಿಲ್ಲಿಸಿದ ಕಾರಣ ನಿದಿರೆ ಬರಲಿಲ್ಲ. ಎಷ್ಟು ಚೆಂದದ ದಿನಗಳಲ್ವ ಅವು. ಪೂರ್ತಿಯಾಗಿ ಹೇಳಿದರಷ್ಟೇ ನನಗೂ ಸಲೀಸು. ಇವನು ನೋಡಿದರೆ ನಿದ್ರೆ ಬರುತ್ತೆ ಅಂದುಬಿಟ್ಟ. ಅದೇನು ನಿಜವಾಗ್ಲೂ ನಿದ್ರೆ ಬಂದಿತ್ತೊ ಅಥವಾ ನಾನೇ ಜಾಸ್ತಿ ಹೇಳಿ ತಲೆ ತಿಂದೆನೋ? ಫೋನಿನಲ್ಲಿ ಹೇಗೆ ಗೊತ್ತಾಗುತ್ತೆ? ಏನೇ ಅಂದ್ರೂ ಸಾಗರ್ ಸುಳ್ಳೇಳೋ ಪೈಕಿ ಅಲ್ಲ. ಬೋರಾಗಿದ್ರೂ ನಿಜಾನೇ ಹೇಳ್ತಿದ್ದ. ನಾಳೆ ಹೇಳೋದಿಕ್ಕಾಗಲ್ಲ. ನಾಡಿದ್ದು ನೈಟ್ ಡ್ಯೂಟಿ ದಿನ ಬ್ಯುಸಿ ಇದ್ದರೆ ಮತ್ತೆ ಕಷ್ಟ. ಮತ್ಯಾವಾಗ ಹೇಳ್ತೀನೋ ಹೇಳೋದೇ ಇಲ್ವೋ ನೋಡೋಣ. ಮೊಬೈಲ್ ಗುಣುಗುಟ್ಟಿತು.

“ಯಾಕೋ ನಿದ್ರೆ ಬರ್ತಿಲ್ಲ ಕಣೇ. ಪೂರ್ತಿ ಇವತ್ತೇ ಕೇಳ್ಬೇಕು ಅನ್ನಿಸ್ತಿದೆ. ನೀನು ಮಲಗಿಬಿಟ್ಟೋ ಏನೋ. ಗುಡ್ ನೈಟ್” ಎಂದು ಸಾಗರ್ ಮೆಸೇಜು ಕಳುಹಿಸಿದ್ದ. ನನಗೆ ಅನಿಸಿದ್ದೇ ಇವನಿಗೂ ಅನ್ನಿಸಿದೆ. ಹತ್ತಿರದಲ್ಲಿದ್ದಿದ್ದರೆ ತಬ್ಬಿ ಮುದ್ದಾಡುವಷ್ಟು ಖುಷಿಯಾಯಿತು. ತಕ್ಷಣವೇ ಫೋನ್ ಮಾಡಿದೆ.

‘ಹಲೋ’

“ಹಲೋ… ನಿನಗೂ ನಿದ್ದೆ ಬಂದಿಲ್ವ?”

‘ಅರ್ಧ ಕೇಳಿಸ್ಕೊಂಡ ನಿನಗೇ ನಿದ್ದೆ ಬಂದಿಲ್ಲ. ಇನ್ನು ಅರ್ಧ ಹೇಳಿದ ನನಗೆ ಎಲ್ಲಿಂದ ಬರ್ಬೇಕು’

“ಸರಿ ಮುಂದುವರಿಸು”
ಒಂದೊಂದೇ ಎಪಿಸೋಡು ಹುಡುಕುಡುಕಿ ಓದೋಕೆ ಬೇಸರವಾ? ಪೂರ್ತಿ ಇ - ಪುಸ್ತಕ ತೆಗೆದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

ಖಾಲಿಯಾಗುತ್ತೇನೆ.

ಅನಿತಾ ಗೌಡ 
ಮೌನ ಪಾಳಿ ಮುಗಿಸಿ
ಮಾತಿಗೆಡೆ ಮಾಡಿಕೊಟ್ಟ ಗಳಿಗೆಯಲ್ಲಿ
ತೂತಾದಂತೆ ಆಕಾಶ ಮಾತುಗಳ ಮಳೆ

ಕಟ್ಟಿಕೊಂಡ ಗೋಡೆಗಳನೊಡೆದು
ಮುಚ್ಚಿಕೊಂಡ ಚಿಪ್ಪುಗಳ ತೆರೆದು
ನೆಲ ಮುಗಿಲುಗಳ ಕಿವಿಗಡಚಿಕ್ಕುವಂತ
ಶಬ್ದಗಳ ದೀಪಾವಳಿ
ಕೇಳಿದ್ದಕ್ಕೆ ಉತ್ತರ
ಮತ್ತದಕ್ಕೆ ಪ್ರತಿ ಪ್ರಶ್ನೆ

May 1, 2019

ಇಂಡಿಯಾದ ಚುನಾವಣೆಗಳು: ಡಿಸ್ಕೌಂಟ್ ಸೇಲಿನ ಬಿಗ್ ಬಜಾರುಗಳು

ಕು.ಸ.ಮಧುಸೂದನ ರಂಗೇನಹಳ್ಳಿ
ಇವತ್ತು ಇಂಡಿಯಾದಲ್ಲಿನ ಸಾರ್ವತ್ರಿಕ ಚುನಾವಣೆಗಳು ತಮ್ಮ ಸಾಂಪ್ರದಾಯಿಕ ಮೌಲ್ಯ ಮತ್ತು ಮಹತ್ವವನ್ನು ಕಳೆದು ಕೊಳ್ಳುತ್ತಿವೆಯೆಂದರೆ ತಪ್ಪಾಗಲಾರದು. ಹಾಗೆಂದು ಕಳೆದ ಏಳು ದಶಕಗಳಲ್ಲಿ ನಡೆದ ಎಲ್ಲ ಚುನಾವಣೆಗಳ ಬಗ್ಗೆಯೂ ಈ ಮಾತು ಹೇಳಲಾಗದು. 

ಆದರೆ ತೊಂಭತ್ತರ ದಶಕದ ನಂತರದಲ್ಲಿ ನಡೆದ ಬಹುತೇಕ ಚುನಾವಣೆಗಳು ತಮ್ಮ ಮೂಲ ಸ್ವರೂಪವನ್ನು ಕಳೆದುಕೊಂಡು ಒಂದು ಬೃಹತ್ ಸಂತೆಯ ಸ್ವರೂಪ ಪಡೆದುಕೊಂಡಿವೆ. ಬದಲಾದ ಆರ್ಥಿಕ ನೀತಿಯ ಫಲವಾಗಿ ಪ್ರವರ್ದಮಾನಕ್ಕೆ ಬಂದ ಎಲೆಕ್ಟ್ರಾನಿಕ್ ಮಾಧ್ಯಮಗಳು ಒಂದು ದೊಡ್ಡ ಉದ್ದಿಮೆಯಾಗಿ ಬೆಳೆದು ನಿಂತಿತು. ಆಗ ನಾಯಿಕೊಡೆಗಳಂತೆ ಹುಟ್ಟಿಕೊಂಡ ಇಂಗ್ಲೀಷ್ ಮತ್ತು ಪ್ರಾದೇಶಿಕ ಭಾಷೆಗಳ ದೃಶ್ಯ ಮಾಧ್ಯಮಗಳು ನಮ್ಮ ಇಡೀ ಚುನಾವಣೆಯ ಪ್ರಕ್ರಿಯೆಯನ್ನು ಹೈಜಾಕ್ ಮಾಡಿಬಿಟ್ಟಿವೆ.

ಇನ್ನೂ ಸ್ಪಷ್ಟವಾಗಿ ಹೇಳುವುದಾದಲ್ಲಿ, ನಮ್ಮ ಸಮೂಹ ಮಾದ್ಯಮಗಳು (ಮುಖ್ಯವಾಗಿ ಎಲೆಕ್ಟ್ರಾನಿಕ್ ಮಾದ್ಯಮಗಳು) ಇಡೀ ದೇಶವನ್ನು ಒಂದು ಮಾರುಕಟ್ಟೆಯನ್ನಾಗಿಸಿ (ನಗರದ ಬಾಷೆಯಲ್ಲಿ ಹೇಳುವುದಾದರೆ ಮಾಲ್ ಅನ್ನಾಗಿಸಿ) ಮತದಾರರನ್ನು ಗ್ರಾಹಕರನ್ನಾಗಿಸಿ, ರಾಜಕೀಯ ಪಕ್ಷಗಳು, ಮತ್ತವುಗಳ ನಾಯಕರುಗಳನ್ನು ಮಾರಾಟದ ಸರಕುಗಳನ್ನಾಗಿಸಿ ಬಿಟ್ಟಿವೆ. ಇದಕ್ಕೆ ಕಾರಣವೂ ಸ್ಪಷ್ಟ: ಮುಕ್ತ ಆರ್ಥಿಕ ನೀತಿಯ ನಂತರ ಪ್ರಾರಂಭವಾದ ಬಹುತೇಕ ಸುದ್ದಿವಾಹಿನಿಗಳು ಒಂದಲ್ಲಾ ಒಂದು ಕಾರ್ಪೋರೇಟ್-ಬಂಡವಾಳಶಾಹಿಗಳ ಒಡೆತನದಲ್ಲಿವೆ. ಅಂತಹ ಬಲಾಢ್ಯ ಶಕ್ತಿಗಳು ತಮ್ಮ ಹಿತಾಸಕ್ತಿಯನ್ನು ಕಾಪಾಡುವ ರಾಜಕೀಯ ಪಕ್ಷಗಳ ಮತ್ತು ಅವುಗಳ ನಾಯಕರುಗಳನ್ನು ತಮ್ಮ ಮಾಧ್ಯಮಗಳ ಮೂಲಕ ಪ್ರಮೋಟ್ ಮಾಡುತ್ತ, ಚುನಾವಣೆಗಳನ್ನು, ಮತ್ತದರ ಪಲಿತಾಂಶಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬರುವಂತೆ ನೋಡಿಕೊಳ್ಳುವ ಪ್ರಯತ್ನದಲ್ಲಿವೆ. ತಮಗೆ ಬೇಕಾದ ಪಕ್ಷಗಳು,ನಾಯಕರುಗಳನ್ನು ಬಣ್ಣಬಣ್ಣದ ಜಾಹಿರಾತುಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸುತ್ತ ಮತದಾರರಿಗೆ ಮಾರುತ್ತಿದ್ದಾರೆ. ಇದರ ಕಾರ್ಯವೈಖರಿ ಹೀಗಿದೆ: