ಅಕ್ಟೋ 26, 2011

ಕೊನೆಯ ಪುಟಗಳು


ಡಾ. ಅಶೋಕ್. ಕೆ. ಆರ್.
          ಅಕ್ಟೋಬರ್ 1 – ಪ್ರತಿಯೊಬ್ಬನಿಗೂ ವರ್ಷದ ಯಾವುದಾದರೊಂದು ದಿನ ಪ್ರಮುಖವಾಗಿರುತ್ತೆ. ಹೈಸ್ಕೂಲಿನಲ್ಲಿ ಪುಂಡಾಟಗಳು; ಮುಂಜಾನೆ ಟ್ಯೂಷನ್ನೂ, ಬೆಳಿಗ್ಗೆ ಕಾಲೇಜು, ಸಂಜೆ ಮತ್ತೊಂದೆರಡು ಟ್ಯೂಷನ್ನೂ, ರಾತ್ರಿ ಒಂದಷ್ಟು ಓದು – ಪಿ ಯು ಸಿಯಲ್ಲಿ ಬೇರೇನನ್ನೂ ಯೋಚಿಸಲು ಸಮಯವಿರಲಿಲ್ಲ. ಓದಿದ್ದು ವ್ಯರ್ಥವಾಗದೆ ಮೆಡಿಕಲ್ ಸೀಟು ಸಿಕ್ಕಿ ಇವತ್ತಿಗಾಗಲೇ ಹತ್ತು ವರ್ಷವಾಯಿತು. ಜೀವನದ ವಿವಿಧ ಮಜಲುಗಳನ್ನು ಪರಿಚಯಿಸಿದ ಚೇತನ್ ನ ಪರಿಚಯವಾದ ದಿನವಿದು. ನನ್ನ ಜೀವನದ ಪ್ರಮುಖ ದಿನ. ಕೆಲವು ವರ್ಷಗಳ ಹಿಂದಿನವರೆಗೂ ನನ್ನಲ್ಲಿ ಉತ್ಸಾಹ ಮೂಡಿಸುತ್ತಿದ್ದ ದಿನ. ಆದರೀಗ? ಆತ್ಮಸಾಕ್ಷಿಯ ಇರಿತಕ್ಕೆ ಜರ್ಝರಿತನಾಗಿದ್ದೇನೆ.

ಅಕ್ಟೋ 15, 2011

ಅಂತ್ಯ ಕಾಣದ ತೆಲಂಗಾಣ ಚಳುವಳಿ

telangana;source - wikipedia
ಡಾ. ಅಶೋಕ್. ಕೆ. ಆರ್
           ಮತ್ತೆ ತೆಲಂಗಾಣ ಸುದ್ದಿಯಲ್ಲಿದೆ. ಎಲ್ಲ ಸಂಚಾರ ಮಾರ್ಗಗಳನ್ನು ಮುಚ್ಚಿಸಲಾರಂಭಿಸಿದ್ದಾರೆ ತೆಲಂಗಾಣ ರಾಜ್ಯ ಪರ ಹೋರಾಟಗಾರರು. ಕನ್ನಡ ಪತ್ರಿಕೆಗಳಲ್ಲಿ ಈ ಹೋರಾಟದಿಂದ ಕರ್ನಾಟಕ್ಕೆ ವಿದ್ಯುತ್ ಉತ್ಪಾದಿಸಲು ಸರಬರಾಜಾಗುವ ಕಲ್ಲಿದ್ದಲ್ಲಿನ ಬಗೆಗಿನ ಚಿಂತೆಯೇ ಅಧಿಕವಾಗಿ ಪ್ರಕಟವಾಗುತ್ತಿದೆ. ದಶಕಗಳ ಹೋರಾಟದ ಇತಿಹಾಸದ ವಿವಿಧ ಮಜಲುಗಳ ಬಗ್ಗೆ ಬೆಳಕು ಚೆಲ್ಲುತ್ತಿರುವವರೇ ಕಡಿಮೆ. ತೆಲಂಗಾಣ ಹೋರಾಟದ ಬಗ್ಗೆ ವಿವಿಧ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಗಳ ಸಂಕ್ಷಿಪ್ತ ಕನ್ನಡಾನುವಾದ ಹಿಂಗ್ಯಾಕೆ?!ಯಲ್ಲಿ.

ಅಕ್ಟೋ 11, 2011

ಅನ್ನದ ಉತ್ಪಾದಕರಿಗೆ ಮೂರು ಫೇಸು ಮೂರೇ ತಾಸು

-      ಡಾ.ಅಶೋಕ್. ಕೆ. ಆರ್
ಅನಧಿಕೃತವಾಗಿ ಹೋಗುತ್ತಿದ್ದ ವಿದ್ಯುತ್ತಿಗೆ ಈಗ ಅಧಿಕೃತೆಯ ಮುದ್ರೆ ಬಿದ್ದಿದೆ; ಅಷ್ಟೇ ವ್ಯತ್ಯಾಸ! ಆಳುವ ವರ್ಗದ ಹಿತಾಸಕ್ತಿಗಳೇನು ಎಂಬುದನ್ನು ಅರಿಯಲು ಸರಕಾರದ ಈ ಅಧಿಕೃತ ಲೋಡ್ ಶೆಡ್ಡಿಂಗ್ ವಿವರವನ್ನು ಪರಿಶೀಲಿಸಬೇಕು. ಬೆಂಗಳೂರು ನಗರದಲ್ಲಿ ಲೋಡ್ ಶೆಡ್ಡಿಂಗಿಲ್ಲ, ಇತರೆ ನಗರಗಳಲ್ಲಿ ಒಂದು ತಾಸಿನ ಶೆಡ್ಡಿಂಗ್. ಹಳ್ಳಿಗಳಿಗೆ ಮೂರು ತಾಸು ಮಾತ್ರ ಮೂರು ಫೇಸಿನ ವಿದ್ಯುತ್. ಸಂಜೆ ಆರರಿಂದ ಮಾರನೇ ಬೆಳಿಗ್ಗೆ ಆರರವರೆಗೆ ಬಲ್ಬುಗಳು ಹತ್ತುವುದಕ್ಕೇ ಏದುಸಿರುಬಿಡುವ ಒಂದು ಫೇಸಿನ ವಿದ್ಯುತ್. ಆರು ತಾಸು ಕೊಡಲಾಗುತ್ತಿದ್ದ ಮೂರು ಫೇಸಿನ ವಿದ್ಯುತ್ತನ್ನು ಈಗ ಮೂರು ತಾಸಿಗೆ ಇಳಿಸಲಾಗಿದೆ. ಕಾರಣ?- ಬೆಂಗಳೂರು ಮತ್ತಿತರ ನಗರಗಳಿಗೆ ಅಭಾದಿತ ವಿದ್ಯುತ್ ಪೂರೈಕೆ ಮಾಡಬೇಕಿರುವುದು.

ಅಕ್ಟೋ 3, 2011

ಸುಳ್ಯದಲ್ಲಿ ನಲವತ್ತನೇ ವರ್ಷದ ದಸರಾ ಮಹೋತ್ಸವ.


ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ಸುಳ್ಯ ಮತ್ತು ದಸರಾ ಉತ್ಸವ ಸಮಿತಿ ಸುಳ್ಯ ಜಂಟಿಯಾಗಿ ನಡೆಸುತ್ತಿರುವ ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆಯಿತು. ಇದು ನಲವತ್ತನೇ ವರ್ಷದ ಮಹೋತ್ಸವ ಎಂಬುದು ವಿಶೇಷ. ಪ್ರಾರಂಭೋತ್ಸವದ ಒಂದಷ್ಟು ಚಿತ್ರಗಳು.