ಏಪ್ರಿ 25, 2012

ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!

siachen glacier; source
ಡಾ ಅಶೋಕ್. ಕೆ. ಆರ್.
ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.

ಏಪ್ರಿ 16, 2012

ದನ ತಿಂದ್ರೆ ತಪ್ಪು ಜನಾನ್ ಬೇಕಾದ್ರೆ ತಿವ್ಕೊಳ್ಳಿ!


ಮೂಲ
ಹೈದರಾಬಾದಿನ ಉಸ್ಮಾನಿಯ ವಿಶ್ವವಿದ್ಯಾನಿಲಯದಲ್ಲಿ ಅದೇನೋ ಬೀಫ್ ಫೆಸ್ಟಿವಲ್ ಅಂತ ಮಾಡ್ತಾರಂತೆ. ದನದ ಮಾಂಸ ಮಾಡಿ ಹಬ್ಬವನ್ನಾಚರಿಸುತ್ತಾರಂತೆ. ‘ಊಟ ನಮ್ಮಿಷ್ಟದಂತಿರಬೇಕು’ ಎಂಬುದ್ದಿಶ್ಯದಿಂದ ಆರಂಭವಾದ ಹಬ್ಬವಂತೆ. ಈ ಸಂದರ್ಭದಲ್ಲಿ ಹಬ್ಬದ ಪರವಾಗಿದ್ದ ವಿದ್ಯಾರ್ಥಿಯೊಬ್ಬನಿಗೆ ಚೂರಿ ಇರಿತವಾಗಿರುವ ಸುದ್ದಿ ಬಂದಿದೆ. ದನದ ರಕ್ಷಕರು ಜನರನ್ನು ಭಕ್ಷಿಸುತ್ತಿರುವ ಕಥೆಯಿದು!

ಏಪ್ರಿ 12, 2012

ಬರ ಬಿದ್ದ ನಾಡಿನಲ್ಲಿ ವಿವೇಕಕ್ಕೂ ಅಭಾವ


          ಇಡೀ ಕರ್ನಾಟಕ ಬರ ಪರಿಸ್ಥತಿಯನ್ನೆದುರಿಸುತ್ತಿರುವ ಸಂದರ್ಭದಲ್ಲಿ ಒಂದು ಚಿತ್ರದ ಮೂಲದ ಬಗ್ಗೆ ಶುರುವಾದ ವಿವಾದ ಪಡೆಯುತ್ತಿರುವ ಅಸಹ್ಯಕರ ತಿರುವುಗಳು ಮಾಧ್ಯಮದ ಮೇಲೆ ನಂಬುಗೆಯಿಟ್ಟ ಜನರನ್ನೆಲ್ಲ ತಲೆತಗ್ಗಿಸುವ ಹಾಗೆ ಮಾಡಿದೆ. ಪತ್ರಿಕೆಗಳಿಗಿಂತ ಹೆಚ್ಚು ಜನರನ್ನು ತಲುಪಲು ಶಕ್ತವಾಗಿರುವ ದೃಶ್ಯಮಾಧ್ಯಮಗಳು ತಮ್ಮ ವೈಯಕ್ತಿಕ ದ್ವೇಷ ಸಾಧನೆಗೆ ಮಾಧ್ಯಮದ ವೇದಿಕೆಯನ್ನು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿ.