ಸೆಪ್ಟೆಂ 30, 2012

ಧರ್ಮಗುರುಗಳ ಸಹಜ ಮನಸ್ಸಿನ ಅನಾವರಣ


Habemus papam [photo source - iloveitalianmovies]

ಡಾ ಅಶೋಕ್ ಕೆ ಆರ್
ಸ್ವಾಮೀಜಿಗಳ, ಮೌಲ್ವಿಗಳ, ಒಟ್ಟಾರೆ ಎಲ್ಲ ಧರ್ಮದ ಗುರುಗಳ ಸ್ಥಾನದಲ್ಲಿರುವವರ ಮನಸ್ಥಿತಿ ಎಂತಹುದು ಎಂಬುದು ನಿಜಕ್ಕೂ ಕುತೂಹಲದ ವಿಷಯ. ವರುಷದ ಮುನ್ನೂರೈವತ್ತು ದಿನವೂ ಅವರು ಧರ್ಮಚಿಂತನೆಯಲ್ಲೇ ತೊಡಗುತ್ತಾರಾ? ಹಳೆಯ ತಪ್ಪುಗಳು, ಹಿಂದಿನ ದಿನಗಳು, ಆ ದಿನಗಳ ಜನರ ಒಡನಾಟ ಅವರಿಗೆ ಕಾಡುವುದೇ ಇಲ್ಲವಾ? ನೆನಪಿನಾಳದಿಂದ ಒತ್ತರಿಸಿ ಬರುವ ಭಾವನೆಗಳಿಂದ ಸಂಪೂರ್ಣ ಮುಕ್ತರಾಗಲು ಸಾಧ್ಯವೇ? ದೂರದಲ್ಲಿ ನಿಂತು ಧರ್ಮಗುರುಗಳನ್ನು ದೇವರ ಅವತಾರದಂತೆ ದೇವದೂತನಂತೆ ನೋಡುವವರಿಗೆ ಆ ಧರ್ಮಗುರುಗಳೂ ಕೂಡ ನಮ್ಮಂತೆಯೇ ಒಬ್ಬ ಮನುಷ್ಯ ಆತನಿಗೂ ಒಂದು ಮನಸ್ಸಿದೆ ಎಂಬುದೇ ಮರೆತುಹೋಗಿರುತ್ತದೆ. ಪೋಪ್ ಸ್ಥಾನಕ್ಕೆ ಆರಿಸಲ್ಪಟ್ಟ ಒಬ್ಬ ವ್ಯಕ್ತಿಯ ಮನಸ್ಥಿತಿಯ ಅನಾವರಣವಾಗಿರುವುದು ನನ್ನಿ ಮೊರೆಟ್ಟಿ [Nanni Moratti] ನಿರ್ದೇಶನದ ಇಟಾಲಿಯನ್ ಚಿತ್ರ “ಹೆಬೆಮಸ್ ಪಾಪಮ್”ನಲ್ಲಿ [Habemus Papam ಅರ್ಥಾತ್ we have a pope].

ಸೆಪ್ಟೆಂ 29, 2012

ಆದರ್ಶವೇ ಬೆನ್ನು ಹತ್ತಿ . . . ಭಾಗ 7


ಆದರ್ಶವೇ ಬೆನ್ನು ಹತ್ತಿ . . . ಭಾಗ 6

ಶಿವಶಂಕರ್ ಅಳುತ್ತಿದ್ದರು.

ವಿಕ್ರಮ್ ಯಾರು? ಎಂಬ ಯೋಚನೆಯಲ್ಲಿ ಅರ್ಧ ಜೀವನವೇ ಕಣ್ಮುಂದೆ ಸುಳಿದು ಹೋಯ್ತಲ್ಲ ಎಂದು ಅಚ್ಚರಿಗೊಳ್ಳುತ್ತ ವಾಸ್ತವಕ್ಕೆ ಬಂದನು ಲೋಕೇಶ್. ತಂದೆಯೆಡೆಗೆ ನೋಡಿದ. ಅಳುತ್ತಿದ್ದರು. ಭಯ ಗೊಂದಲ ಉಂಟಾಯಿತು. ನಾನೇ ಒಳಗೆ ಹೋಗಲಾ? ವಿಜಿ ಏನು ಮಾಡಿರಬಹುದು? ಕಳ್ಳತನ? ಅಥವಾ ಅವನಿಗೇನಾದ್ರೂ . . .ಛೀ ಕೆಟ್ಟದನ್ಯಾಕೆ ಯೋಚಿಸಬೇಕು. ವಿಕ್ರಮ್ ಹೊರಬಂದರು.

ಮನುಷ್ಯ ಧರ್ಮದ ‘ಅಂಗೈಯಲ್ಲೇ ಆಕಾಶ’




ಡಾ. ಅಶೋಕ್. ಕೆ. ಆರ್

ಹತ್ತದಿನೈದು ಸಾಲಿನಲ್ಲೇ ಮುಗಿದುಹೋಗುವ ಸಣ್ಣ ಸಣ್ಣ ಕಥೆಗಳು ಮನಸ್ಸನ್ನು ತಟ್ಟುವಷ್ಟು ದೊಡ್ಡ ಕತೆಗಳು ತಲುಪುವುದು ಕಷ್ಟ. ಹನಿಗಥೆಗಳ ಪ್ರಭಾವದ ಅರಿವಾಗಿದ್ದು ಸದತ್ ಹಸನ್ ಮಾಂಟೋ ಭಾರತ ವಿಭಜನೆಯ ಸಂದರ್ಭದಲ್ಲಿ ಬರೆದ ಕಥೆಗಳನ್ನು ಓದಿದಾಗ. ಕೆಲವೇ ಕೆಲವು ಸಾಲುಗಳಲ್ಲಿ ಜೀವನ ದರ್ಶನದ ಅನುಭವ ಮಾಡಿಸುವುದು ಕಷ್ಟವೇ ಸರಿ. ಆದರೂ ಓದಿ ಮುಗಿಸಿದ ಕೆಲವು ವರುಷಗಳ ನಂತರವೂ ನೆನಪಿನಲ್ಲುಳಿಯುವುದು ದೊಡ್ಡ ಕತೆಗಳೇ! ದೊಡ್ಡ ಕತೆಗಳು ಕಟ್ಟಿಕೊಡುವ ವ್ಯಕ್ತಿ – ಪ್ರದೇಶ – ವಿಷಯದ ವಿವರಗಳೇ ಆ ಕಥೆಗಳನ್ನು ಬಹುಕಾಲ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡುತ್ತದೆ. ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಸುದ್ದಿ ಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿರುವ ಬಿ. ಎಂ. ಬಶೀರರ ಹನಿ ಹನಿ ಕತೆಗಳ ಸಂಕಲನ ‘ಅಂಗೈಯಲ್ಲೇ ಆಕಾಶ’ ಸಣ್ಣ ಕತೆಗಳ ಮಿತಿಗಳನ್ನೂ ದಾಟಿ ಬಹುದಿನಗಳವರೆಗೆ ಕಾಡುವುದು ಆ ಕತೆಗಳಲ್ಲಿನ ವಿಷಯ ವೈವಿಧ್ಯದಿಂದ; ಇಂದಿಗೂ ಮತ್ತು ಮುಂದಿಗೂ ಪ್ರಸ್ತುತವಾಗಿ ಉಳಿಯುವ ಸಂಗತಿಗಳಿಂದ.

ಸೆಪ್ಟೆಂ 24, 2012

ಬರಹಗಾರನ ಭಾಷೆ ಮತ್ತು ಸ್ಮಾರಕ


R K Narayan's house in Mysore
ಡಾ ಅಶೋಕ್ ಕೆ. ಆರ್.
ಆರ್. ಕೆ. ನಾರಯಣ್ ಯಾರಿಗೆ ಸೇರಿದವರು? ಅವರು ಮೂಲತಃ ತಮಿಳಿಗ, ಕರ್ನಾಟಕದ ಮೈಸೂರಿನಲ್ಲೂ ವಾಸಿಸಿದ್ದರು. ಬರೆದಿದ್ದು ತಮಿಳಿನಲ್ಲೂ ಅಲ್ಲ, ಕನ್ನಡದಲ್ಲೂ ಅಲ್ಲ; ನಮ್ಮ ದೇಶದ್ದೇ ಅಲ್ಲದ ಆಂಗ್ಲ ಭಾಷೆಯಲ್ಲಿ. ಇದೊಂದೇ ಕಾರಣಕ್ಕೆ ಅವರನ್ನು ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ ಕೊನೆಗೆ ಭಾರತದವರೇ ಅಲ್ಲ ಎನ್ನಲಾದೀತೆ? ಬರಹಗಳು ಒಂದು ಭಾಷೆ, ರಾಜ್ಯ, ರಾಷ್ಟ್ರಕ್ಕಷ್ಟೇ ಸೀಮಿತವಾದ ಸಂಗತಿಯೇ? ಮನದ ಭಾವನೆ ತುಮುಲಗಳನ್ನು, ಸಮಾಜದ ಜೀವನ ವಿಧಾನವನ್ನು ಬರಹರೂಪದಲ್ಲಿ ಕಟ್ಟಬಯಸುವ ಲೇಖಕನಿಗೆ ತನಗೆ ಹಿಡಿತವಿರುವ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿದ್ದೇ ಇದೆ. ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಮೇಲ್ನೋಟಕ್ಕೆ ಆ ಭಾಷಿಗರಿಗಷ್ಟೇ ಸೀಮಿತವೆಂಬಂತೆ ತೋರಿದರೂ ಅನುವಾದಗಳ ಮುಖಾಂತರ ಅನ್ಯಭಾಷಿಗರನ್ನೂ ತಲುಪುತ್ತದೆ. ರಷಿಯನ್ ಭಾಷೆಯಲ್ಲಿ ಬರೆದ ಲಿಯೋ ಟಾಲ್ ಸ್ಟಾಯ್, ದಸ್ತೋವಸ್ಕಿ ಪ್ರಪಂಚವನ್ನೆಲ್ಲ ತಲುಪಲು ಸಾಧ್ಯಾವಾಗಿದ್ದು ಅನುವಾದದಿಂದ. ತೆಲುಗಿನ ಯಂಡಮೂರಿ ವಿರೇಂದ್ರನಾಥ್ ನಮ್ಮವನೆನಿಸಿದ್ದು ಅನುವಾದದಿಂದ. ಭಾಷೆಗಿಂತ ಬರಹಗಳಲ್ಲಿನ ಮಾನವೀಯತೆ, ಸಾರ್ವತ್ರಿಕತೆಯಷ್ಟೇ ಕೊನೆಗೆ ಮುಖ್ಯವಾಗುಳಿಯುವುದು. ಆರ್. ಕೆ. ನಾರಾಯಣ್ ರ ಬಹುತೇಕ ಕೃತಿಗಳು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರನ್ನೂ ತಲುಪಿದೆ. ಓದಲು ಬಾರದವರಿಗೆ, ಓದಲು ಇಚ್ಛಿಸದವರಿಗೆ ಶಂಕರ್ ನಾಗ್ ರ ಸಮರ್ಥ ನಿರ್ದೇಶನದಲ್ಲಿ ಮೂಡಿಬಂದ ಮಾಲ್ಗುಡಿ ಡೇಸ್ ಧಾರಾವಾಹಿಯ ಮುಖಾಂತರ ಹಿಂದಿ ಅರ್ಥೈಸಿಕೊಳ್ಳುವ ಜನರಿಗೂ ತಲುಪಿದೆ. ಎಲ್ಲರ ಮನಸ್ಸು ತಟ್ಟುವ ನಮ್ಮದೇ ಜೀವನದ ತುಣುಕುಗಳಂತೆ ಕಾಣುವ ನಾರಾಯಣ್ ರ ಕಥೆಗಳು ಭಾಷೆಯನ್ನು ಮೀರಿ ನಮ್ಮನ್ನು ತಲುಪುತ್ತದೆ.

ಸೆಪ್ಟೆಂ 14, 2012

ಮುಲ್ಲಾ ಇಸ್ಲಾಂ ಮತ್ತು ಮಹಾತ್ಮರ ಘನತೆ


ಚಿತ್ರಮೂಲ - kvgmi
 ಡಾ ಅಶೋಕ್ ಕೆ ಆರ್
ವರುಷದ ಹಿಂದೆ ಸಂದರ್ಶನವೊಂದರಲ್ಲಿ ಶಾರೂಕ್ ಖಾನ್ ‘ಮುಲ್ಲಾಗಳ ಇಸ್ಲಾಂ ಮತ್ತು ಅಲ್ಲಾಹುವಿನ ಇಸ್ಲಾಂ’ ಎಂಬ ಮಾತು ಹೇಳಿದ್ದರು. ಮುಲ್ಲಾಗಳ ಇಸ್ಲಾಂನಿಂದ ಇಸ್ಲಾಂ ಧರ್ಮಕ್ಕೆ ಮತ್ತು ಮುಖ್ಯವಾಗಿ ಮನುಷ್ಯತ್ವಕ್ಕೆ ಆಗುತ್ತಿರುವ ಹಾನಿಯನ್ನು ವಿವರಿಸಿದ್ದರು ಶಾರೂಕ್. ಚಲನಚಿತ್ರವೊಂದರ ಸಂಬಂಧವಾಗಿ ಲಿಬಿಯಾ ಮತ್ತಿತರ ಮುಸ್ಲಿಂ ಬಾಹುಳ್ಯದ ದೇಶಗಳಲ್ಲಿ ನಡೆಯುತ್ತಿರುವ ವಿನಾಕಾರಣದ ಹಿಂಸಾಚಾರದ ವರದಿಗಳನ್ನು ಓದಿದಾಗ ಶಾರುಕ್ ಮಾತುಗಳು ನೆನಪಾದವು. ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡುವ ಕೆಲವು ಚಲನಚಿತ್ರಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ಆಯಾ ದೇಶ – ಧರ್ಮ –ಪ್ರದೇಶಕ್ಕೆ ಸೀಮಿತವಾದಂತಹ ಚಿತ್ರಗಳಷ್ಟೇ.

ಸೆಪ್ಟೆಂ 13, 2012

ವಿದ್ಯುತ್ ಅನಿವಾರ್ಯ ... ಆದರೆ?

ಚಿತ್ರ ಕೃಪೆ - firstpost
ಡಾ ಅಶೋಕ್ ಕೆ ಆರ್
ಕೂಡುಂಕುಳಂ ಅಣುಸ್ಥಾವರದಲ್ಲಿ ನಿನ್ನೆ [10/09/1012] ಯುರೇನಿಯಂ ಇಂಧನವನ್ನು ತುಂಬುವುದರ ವಿರುದ್ಧ ನಡೆದ ಪ್ರತಿಭಟನೆ ಅಂತೋನಿ  ಜಾನ್ ಎಂಬ ಮೀನುಗಾರನ ಹತ್ಯೆಯಿಂದ ಹೊಸ ಮಜಲು ಪಡೆದಿದೆ. ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ತೂತ್ತುಕುಡಿಯಲ್ಲಿ ಪೋಲೀಸ್ ಠಾಣೆ ಮತ್ತು ಚೆಕ್ ಪೋಸ್ಟ್ ಮೇಲೆ ನಡೆಸಿದ ದಾಳಿಗೆ ಪ್ರತಿಕ್ರಿಯೆಯಾಗಿ ಪೋಲೀಸರು ಗುಂಡು ಹಾರಿಸಿದ್ದಾರೆ ಎಂಬುದು ಅಲ್ಲಿನ ಹಿರಿಯ ಪೋಲೀಸ್ ಅಧಿಕಾರಿಗಳ ಹೇಳಿಕೆ; ಮೀನುಗಾರನ ಹತ್ಯೆಗೆ ಅವರು ಕೊಟ್ಟ ಸಮರ್ಥನೆ! ಪ್ರತಿಭಟನಾಕಾರರನ್ನು ದಾಳಿಗೆ ಪ್ರಚೋದಿಸಿದ ಕಾರಣಗಳು?!

ಸೆಪ್ಟೆಂ 11, 2012

ಆದರ್ಶವೇ ಬೆನ್ನು ಹತ್ತಿ . . . ಭಾಗ 6


“ಥ್ಯಾಂಕ್ಸ್ ಸರ್” ಎಂದು ಹೇಳಿ ಇಬ್ಬರೂ ಹೊರಬಂದರು.

“ನಿನಗೇನನ್ನಿಸುತ್ತೆ ಸಯ್ಯದ್”

“ಇವರ ಮಾತು, ಅವರ ಮುಖದಲ್ಲಿನ ಭಾವ ನೋಡಿದರೆ ಅಲ್ಲೇನೂ ನಡೆದೇ ಇಲ್ಲ ಅನ್ನಿಸುತ್ತೆ”

ಸೆಪ್ಟೆಂ 3, 2012

ಮಿನುಗುವ ಮನಗಳ “ರಸ್ತೆ ನಕ್ಷತ್ರ”



-      ಡಾ ಅಶೋಕ್ ಕೆ ಆರ್.

ಇಲ್ಲಿಯವರೆಗೆ ಹೆಚ್ಚುಕಡಿಮೆ ನಾಲ್ಕುನೂರು ಪುಸ್ತಕಗಳನ್ನು ಓದಿದ್ದೇನೆ. ಕಥೆ – ಕವಿತೆ – ಕಾದಂಬರಿ – ನಾಟಕ – ಹಾಸ್ಯ – ಆತ್ಮಕತೆ – ಸಾಮಾಜಿಕ – ಚಿಂತನೆ – ಪ್ರಬಂಧಗಳು – ಐತಿಹಾಸಿಕ – ಕಾಮೋದ್ರೇಕ – ಆದ್ಯಾತ್ಮ ಹೀಗೆ ಇನ್ನೂ ವಿಧವಿಧವಾದ ಪುಸ್ತಕಗಳನ್ನು ಓದಿರುವೆನಾದರೂ ಇದೊಂದು ಪುಸ್ತಕವನ್ನು ಸಾಹಿತ್ಯದ ಯಾವ ಉಪವಿಭಾಗಕ್ಕೆ ಸೇರಿಸಬೇಕೆಂದು ತಿಳಿಯದೆ ಗೊಂದಲಕ್ಕೀಡಾಗಿದ್ದೇನೆ! ಬಡಜನರ ಆತ್ಮಕಥೆಯಷ್ಟೇ ಎಂದುಕೊಳ್ಳೋಣವೆಂದರೆ ದುತ್ತನೆ ರಾಜಕೀಯ ಧಾರ್ಮಿಕ ವಿಶ್ಲೇಷಣೆ ಎದುರಾಗುತ್ತದೆ! ಯಾವ ತಾತ್ವಿಕನಿಗೂ ಕಾಣದ ಜೀವನದೃಷ್ಟಿ ಇಲ್ಲಿರುವ ಜನಸಾಮಾನ್ಯರ ಮಾತಿನಲ್ಲಿ ಸಲೀಸಾಗಿ ಕಾಣಸಿಗುತ್ತದೆ. ಅಯೋಧ್ಯೆಯಿಂದ ಹಿಡಿದು ಭಾರತೀಯ ಸೈನ್ಯದ ವಿಶ್ಲೇಷಣೆಯೂ ನಡೆದುಬಿಡುತ್ತದೆ! ಅಂದಹಾಗೆ ಪುಸ್ತಕದ ಹೆಸರು ‘ರಸ್ತೆ ನಕ್ಷತ್ರ’. ಆಕಾಶದೆಡೆಗೆ ನೆಟ್ಟು ಹೋದ ನಮ್ಮ ನಿಲುವುಗಳನ್ನು ರಸ್ತೆಯ ಮೇಲೆ ಎಳೆದುತಂದು ನಕ್ಷತ್ರಗಳನ್ನು ಗುರುತಿಸುವಂತೆ ಮಾಡಿದ ಶ್ರೇಯ ಇತ್ತೀಚೆಗಷ್ಟೇ ಪಿ.ಸಾಯಿನಾಥ್ ಪ್ರಶಸ್ತಿ ಪಡೆದ ಟಿ.ಕೆ. ದಯಾನಂದರವರದು.