ಜೂನ್ 10, 2025
ಬೆಚ್ಚಿ ಬೀಳಿಸದ "ಸ್ಟೋಲನ್"
ಡಿಸೆಂ 28, 2024
ಕ್ಯಾಪಿಟಲಿಸಂ ಬಿಟ್ಟು ಬೇರೆ ಆಯ್ಕೆ ನಿಜಕ್ಕೂ ನಮ್ಮ ಮುಂದಿದೆಯೇ?
![]() |
image source: yourdictionary |
ಡಾ. ಅಶೋಕ್. ಕೆ. ಆರ್.
ಯಾರಾದರೂ
ಎಡಪಂಥೀಯ – ಬಲಪಂಥೀಯ ಅಂತ ಮಾತನಾಡುವಾಗ, ವಾದ ಮಾಡುವಾಗ ನಿಜಕ್ಕೂ ಈಗ ನಮ್ಮಲ್ಲಿ ಎಡಪಂಥೀಯತೆ – ಬಲಪಂಥೀಯತೆ
ಅನ್ನುವುದಿದೆಯೇ ಎನ್ನುವ ಪ್ರಶ್ನೆ ನನ್ನಲ್ಲಿ ಮೂಡುತ್ತಲೇ ಇರುತ್ತದೆ. ಈ ರೀತಿಯಾಗಿ ಮಾತನಾಡುವ, ವಾದ
ಮಾಡುವ ನಾವೆಲ್ಲರೂ ಬಂಡವಾಳಶಾಹಿ – ಕ್ಯಾಪಿಟಲಿಸ್ಟುಗಳೇ ಅಲ್ಲವೇ ಎನ್ನುವ ಯೋಚನೆ ಸುಳಿಯುತ್ತದೆ. ಅಬ್ಬಬ್ಬಾ
ಅಂದರೆ ಒಂಚೂರು ಎಡಕ್ಕಿರುವ ಅಥವಾ ಒಂದಷ್ಟು ಬಲಕ್ಕಿರುವ ಕ್ಯಾಪಿಟಲಿಸ್ಟುಗಳಷ್ಟೇ ಅಲ್ಲವೇ ನಾವು ಬಹುತೇಕರು…
ನರಸಿಂಹರಾವ್ ಕಾಲದಲ್ಲಿ, ಮನಮೋಹನ್ ಸಿಂಗ್ರವರು ಹಣಕಾಸು ಸಚಿವರಾಗಿದ್ದಾಗಿನ ಸಮಯದಲ್ಲಿ ಇಂಡಿಯಾ ಜಾಗತೀಕರಣಕ್ಕೆ ಸಂಪೂರ್ಣವಾಗಿ ತೆರೆದುಕೊಂಡಿತು. ಹಲವು ವರುಷಗಳ ಕಾಲ ವಿಧವಿಧದ ವಿರೋಧಗಳನ್ನು ಈ ಹೊಸ ಆರ್ಥಿಕ ನೀತಿಗಳು ಎದುರಿಸಿತಾದರೂ ಅಂತಿಮವಾಗಿ ಕ್ಯಾಪಿಟಲಿಸಂ ಎನ್ನುವ ಸಿದ್ಧಾಂತವಲ್ಲದ ಸಿದ್ಧಾಂತ ಉಳಿದೆಲ್ಲ ಸಿದ್ಧಾಂತಗಳನ್ನು ಮೀರಿ ಜಯಿಸಲಾರಂಭಿಸಿತು ಎನ್ನುವುದು ತಿರಸ್ಕರಿಸಲಾಗದ ವಾಸ್ತವ.
ಏಪ್ರಿ 18, 2023
ಕಾಡಿನ ನ್ಯಾಯಕ್ಕೆ ವಿರುದ್ಧವಾದ "ದಿ ಎಲಿಫೆಂಟ್ ವಿಸ್ಪರರ್ಸ್"
![]() |
ಚಿತ್ರಮೂಲ: ಎಕನಾಮಿಕ್ ಟೈಮ್ಸ್ |
ಕಾಡ ನಡುವಿನಲ್ಲಿ ಮರಿಯಾನೆಯೊಂದು ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗುತ್ತದೆ. ಆಹಾರ ಹುಡುಕುವ, ನೀರನ್ನರಸುವ ಗುಣಗಳನ್ನು ಹಿಂಡಿನ ಹಿರಿಯರಿಂದ ಇನ್ನೂ ಕಲಿಯದ ಮರಿಯಾನೆಗೆ ಜೀವವುಳಿಸಿಕೊಳ್ಳುವುದು ಕಷ್ಟದ ಸಂಗತಿಯೇ ಸರಿ. ಮರಿಯಾನೆಯ ಕೂಗಾಟ ಅರಣ್ಯ ಇಲಾಖೆಯ ಕಿವಿಗೆ ತಲುಪುತ್ತದೆ. ಕಾಡಿನ ನಿಯಮಗಳಿಂದ ರಕ್ಷಿಸಲ್ಪಟ್ಟ ಈ ಮರಿಯಾನೆಯನ್ನು ಸಾಕುವ ಜವಾಬ್ದಾರಿಯನ್ನು ಇಲಾಖೆಯ ಕೆಲಸಗಾರರಾದ, ಮೂಲತಃ ಆದಿವಾಸಿಗಳಾದ ಇಬ್ಬರಿಗೆ ವಹಿಸಲಾಗುತ್ತದೆ. ಆ ಈರ್ವರ ನಡುವಿನ ವೈಯಕ್ತಿಕ ಸಂಬಂಧ, ಆನೆಯನ್ನು ಸಾಕಿ ಸಲಹುವ ಪರಿ, ಆನೆ ಜೊತೆಗಿನ ಮಮಕಾರದ ಸಂಬಂಧವೇ "ದಿ ಎಲಿಫೆಂಟ್ ವಿಸ್ಪರರ್ಸ್" ಸಾಕ್ಷ್ಯಚಿತ್ರದ ಹೂರಣ.
ಆಸ್ಕರ್ರಿಗೆ ಭಾರತದಿಂದ ಕಳುಹಿಸಲ್ಪಟ್ಟ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮವೆಂಬ ಪ್ರಶಸ್ತಿಯೂ ದೊರೆತು ಖ್ಯಾತಿಗಳಿಸಿದ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ನೋಡಲು ಲಭ್ಯವಿದೆ. ಆಸ್ಕರ್ ದೊರೆಯುವ ಮುಂಚೆ ಈ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೆ. ನೋಡಿದ ಯಾರಿಗಾದರೂ ಕಣ್ಣಂಚಿನಲ್ಲಿ ನೀರು ತರಿಸುವ ಚಿತ್ರವಿದು. ನಾನೂ ಅದಕ್ಕೆ ಹೊರತಲ್ಲ.
ಆಗ 19, 2022
ಎಲ್ಲಕಿಂತ ಜೀವ ಮುಖ್ಯ…
ಜೂನ್ 4, 2020
ಬೇಸಿಕಲಿ ವಿ ಆರ್ ಬ್ಲಡಿ ಹಿಪೋಕ್ರೈಟ್ಸ್…
ಅಕ್ಟೋ 4, 2019
ಗಾಂಧಿ ಜಯಂತಿಯ ದಿನ ಪ್ರಧಾನಿ ಹೇಳಿದ ಸುಳ್ಳು.
ಅಕ್ಟೋ 2, 2019
ಬಲಾಡ್ಯ ರಾಜಕೀಯ ಶಕ್ತಿಯಾಗಬೇಕಿರುವ ಕನ್ನಡ ಭಾಷಿಕ ಸಮುದಾಯ
ಸೆಪ್ಟೆಂ 24, 2019
ಬಂಡವಾಳ ಹೂಡಿಕೆದಾರರ ಸಮಾವೇಶ ಎಂಬ ಬೃಹತ್ ಪ್ರಹಸನ!
ಆಗ 28, 2019
ಸಮ್ಮಿಶ್ರ ಸರಕಾರದ ಪತನ: ನಾಯಕರುಗಳ ಆರೋಪ-ಪ್ರತ್ಯಾರೋಪ!
ಆಗ 24, 2019
ನೈತಿಕತೆಯ ಬಗೆಗೆ ಕೆಲವು ಮೂರ್ಖ ಪ್ರಶ್ನೆಗಳು!
ಜೂನ್ 28, 2019
'ಏಕಕಾಲಕ್ಕೆ ಚುನಾವಣೆ' ಬಾಜಪದ ಹಳೆಯಜೆಂಡಾ
ಮೇ 30, 2019
ದಕ್ಷಿಣವನ್ನು ಬಾಜಪ ಯಾಕೆ ಗೆಲ್ಲಲಾಗಲಿಲ್ಲ?
ದೇಶದ ಉದ್ದಗಲಕ್ಕೂ ತನ್ನ ಪ್ರಭಾವಳಿಯನ್ನು ವಿಸ್ತರಿಸಿ ಮುನ್ನೂರಕ್ಕೂ ಅಧಿಕಸ್ಥಾನಗಳನ್ನು ಗೆದ್ದ ಬಾಜಪ ದಕ್ಷಿಣ ಭಾರತದಲ್ಲಿ ಮಾತ್ರ ಬಹುತೇಕ ವಿಫಲವಾಗಿದೆ. ಕರ್ನಾಟಕ ಒಂದನ್ನು ಹೊರತು ಪಡಿಸಿದರೆ ಮಿಕ್ಕಂತೆ ಆಂದ್ರಪ್ರದೇಶ, ತಮಿಳುನಾಡು, ಪುದುಚೇರಿ, ಕೇರಳಗಳಲ್ಲಿ ಕನಿಷ್ಠ ಖಾತೆ ತೆರೆಯಲೂ ಅದು ವಿಫಲವಾಗಿದ್ದು ತೆಲಂಗಾಣದಲ್ಲಿ ಮಾತ್ರ ಕಷ್ಟ ಪಟ್ಟು ನಾಲ್ಕು ಸ್ಥಾನಗಳನ್ನು ಗೆದ್ದಿದೆ.
ಯಾವತ್ತಿಗೂ ಬಾಜಪ ಖಾತೆ ತೆರೆಯಲೇ ಅಸಾದ್ಯವೆಂಬ ಬಲವಾದ ಅನಿಸಿಕೆಯಿದ್ದ ಈಶಾನ್ಯಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾದ ಅದು ದಕ್ಷಿಣದಲ್ಲಿ ನೆಲೆ ಕಂಡುಕೊಳ್ಳಲು ಏದುಸಿರು ಬಿಡುತ್ತಿರುವುದಾದರೂ ಯಾಕೆಂದು ವಿಶ್ಲೇಷಿಸುತ್ತ ಹೋದರೆ ಹಲವು ಐತಿಹಾಸಿಕ ಕಾರಣಗಳು ಕಂಡುಬರುತ್ತವೆ.
ಮೇ 1, 2019
ಇಂಡಿಯಾದ ಚುನಾವಣೆಗಳು: ಡಿಸ್ಕೌಂಟ್ ಸೇಲಿನ ಬಿಗ್ ಬಜಾರುಗಳು
ಏಪ್ರಿ 28, 2019
ಚುನಾವಣಾ ನೀತಿಸಂಹಿತೆ ಎಂಬ ಪ್ರಹಸನ
ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ.
ಇಲ್ಲಿನ ಮತದಾರರ ಸಂಖ್ಯೆ ತೊಂಭತ್ತು ಕೋಟಿ.ಇಪ್ಪತ್ತು ಲಕ್ಷ ಮತಯಂತ್ರಗಳು. ಒಂದೂಕಾಲು ಕೋಟಿಗೂ ಅಧಿಕ ಮತಗಟ್ಟೆಯನ್ನು ನಿರ್ವಹಿಸುವ ಸಿಬ್ಬಂದಿಗಳು, ಎರಡೂವರೆ ಕೋಟಿಗೂ ಅಧಿಕ ಭದ್ರತಾ ಸಿಬ್ಬಂದಿ. ಅಧಿಕೃತವಾಗಿ ಇಷ್ಟಲ್ಲದೆ ಚುನಾವಣೆಗಳಿಗೆ ಪರೋಕ್ಷವಾಗಿ ನೆರವಾಗುವ ಮೂರು ಕೋಟಿ ಇತರೇ ನೌಕರರು. ಇಷ್ಟು ದೊಡ್ಡ ಮಟ್ಟದ ಚುನಾವಣಾ ವ್ಯವಸ್ಥೆ ಹೊಂದಿರುವ ನಮ್ಮ ದೇಶದಲ್ಲಿ ಇದುವರೆಗು ಬಹುತೇಕ ಚುನಾವಣೆಗಳು ಶಾಂತಿಯುತವಾಗಿ (ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಚುನಾವಣೆಗಳನ್ನು ಹೊರತು ಪಡಿಸಿದರೆ) ನಡೆದಿದ್ದು ತಮ್ಮ ವಿಸ್ವಾಸಾರ್ಹತೆಯನ್ನು ಉಳಿಸಿಕೊಂಡು ಬರುತ್ತಿವೆ.
ಅದರೆ ಈ ಬಾರಿ ನಡೆದ ಇದುವರೆಗಿನ ಮೂರು ಹಂತದ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣಾ ನೀತಿ ಸಂಹಿತೆ ಎನ್ನುವುದು ಹಾಸ್ಯಾಸ್ಪದ ವಿಷಯವಾಗಿ ಬಿಟ್ಟಿದೆ. ತಾನೆ ವಿಧಿಸಿದ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಚುನಾವಣಾ ಆಯೋಗ ವಿಫಲವಾಗುತ್ತಿಯೆಂಬ ಅನುಮಾನ ತಲೆದೋರುತ್ತಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬಹುದಾದಂತ ದತ್ತ ಅಧಿಕಾರವನ್ನು ಹೊಂದಿರುವ ಆಯೋಗ ಯಾಕೊ ಈ ಅಧಿಕಾರವನ್ನು ಉಪಯೋಗಿಸಿಕೊಳ್ಳುವಲ್ಲಿ ಆಸಕ್ತಿಯನ್ನೇನು ತೋರುತ್ತಿಲ್ಲ. ಚುನಾವಣಾ ಆಯೋಗದ ಈ ಕ್ರಿಯಾಹೀನತೆಯನ್ನು ಕಂಡ ಸುಪ್ರೀಂ ಕೋರ್ಟ ಮದ್ಯಪ್ರವೇಶಿಸಿ ನೀತಿಸಂಹಿತೆ ಉಲ್ಲಂಘಿಸಿದವರ ವಿರುದ್ದಕ್ರಮ ತೆಗೆದುಕೊಳ್ಳಲು ಆಯೋಗಕ್ಕೆ ಸೂಚನೆ ನೀಡಬೇಕಾಗಿ ಬಂದಿತು.
ಮಾರ್ಚ್ 5, 2019
ಸುಮಲತಾ ಅಂಬರೀಷ್ ಗೊಂದು ಪತ್ರ.
ಫೆಬ್ರ 1, 2019
ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಮೈತ್ರಿಕೂಟ ರಚನೆಯಾಗುತ್ತದೆಯೇ?
ತಮಿಳುನಾಡಿನ ಅಧಿಕಾರರೂಢಪಕ್ಷ ಎ.ಐ.ಎ.ಡಿ.ಎಂ.ಕೆ. ನಿದಾನವಾಗಿ ಬಾಜಪ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದತ್ತ ಸರಿಯುತ್ತಿರುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಗೋಚರವಾಗುತ್ತಿವೆ. ಬಾಜಪ ಸಹ ಇದಕ್ಕೆ ಪೂರಕವಾಗಿಯೇ ತನ್ನ ರಾಜಕಾರಣದ ದಾಳಗಳನ್ನು ಉರುಳಿಸುತ್ತಿದೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುವುದು ಕಷ್ಟವೆಂಬುದು ಬಾಜಪಕ್ಕೆ ಮನವರಿಕೆಯಾಗಿದೆ. ಕೆಲತಿಂಗಳ ಹಿಂದೆ ನಡೆದ ಮದ್ಯಪ್ರದೇಶ, ರಾಜಾಸ್ಥಾನ, ಚತ್ತೀಸಗಡ ಮೂರು ರಾಜ್ಯಗಳ ವ್ಯತಿರಿಕ್ತ ಪಲಿತಾಂಶ, ದಿನದಿಂದ ದಿನಕ್ಕೆ ಗಟ್ಟಿಯಾಗುವತ್ತ ನಡೆದಿರುವ ವಿರೋಧಪಕ್ಷಗಳ ಮಹಾಮೈತ್ರಿಯ ಮಾತುಗಳು, ಉತ್ತರಪ್ರದೇಶದಲ್ಲಿ ಬಹುಜನಪಕ್ಷ ಮತ್ತು ಸಮಾಜವಾದಿ ಪಕ್ಷಗಳ ನಡುವೆ ನಡೆದ ಸ್ಥಾನ ಹೊಂದಾಣಿಕೆಯ ಅಂತಿಮ ಪ್ರಕ್ರಿಯೆ, ಕೊಲ್ಕೊತ್ತಾದಲ್ಲಿ ತೃಣಮೂಲ ಕಾಂಗ್ರೇಸ್ಸಿನ ನಾಯಕಿ ಕುಮಾರಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ವಿರೋಧಪಕ್ಷಗಳ ಬೃಹತ್ ರ್ಯಾಲಿ, ಉತ್ತರ ಪ್ರದೇಶದ ರಾಜಕಾರಣಕ್ಕೆ ಕಾಂಗ್ರೇಸ್ಸಿನ ಪ್ರಿಯಾಂಕಗಾಂದಿ ಪ್ರವೇಶಿಸಿರುವುದು ಬಾಜಪ ನಾಯಕರುಗಳ ನಿದ್ದೆಗೆಡಿಸಿರುವುದು ನಿಜ. ಇದರ ಜೊತೆಗೆ ಅದರ ಕೆಲವು ಮಿತ್ರಪಕ್ಷಗಳು ದೂರವಾಗಿವೆ. ಆಂದ್ರಪ್ರದೇಶದ ತೆಲುಗುದೇಶಂ ಹಾಗು ಜಮ್ಮು ಕಾಶ್ಮೀರದ ಪಿ.ಡಿ.ಪಿ. ಪಕ್ಷಗಳು ಈಗಾಗಲೇ ಎನ್.ಡಿ.ಎ. ಮೈತ್ರಿಕೂಟದಿಂದ ಹೊರಬಂದಿವೆ.ಮಹಾರಾಷ್ಟ್ರದಲ್ಲಿ ಶಿವಸೇನೆ ಬಾಜಪದ ವಿರುದ್ದ ಸ್ವತಂತ್ರವಾಗಿ ಸ್ಪರ್ದಿಸುವುದಾಗಿ ಹೇಳಿಕೊಂಡಿದೆ. ಈ ನಡುವೆ ಬಿಹಾರದ ಮುಖ್ಯಮಂತ್ರಿಗಳಾದ ಸಂಯುಕ್ತ ಜನತಾದಳದ ಶ್ರೀ ನಿತೀಶ್ ಕುಮಾರ್ ತ್ರಿವಳಿ ತಲಾಖ್ ಮತ್ತು ಪೌರತ್ವ ಮಸೂದೆಗಳ ಬಗೆಗಿನ ಕೇಂದ್ರ ಸರಕಾರದ ನೀತಿಗಳನ್ನು ನೇರವಾಗಿಯೇ ಟೀಕಿಸುತ್ತಿದ್ದಾರೆ. ಈಗಾಗಲೇ ಬಾಜಪದೊಂದಿಗೆ ಮಾಡಿಕೊಂಡಿರುವ ಸ್ಥಾನ ಹೊಂದಾಣಿಕೆಯ ಕರಾರನ್ನು ಕೊನೆಗಳಿಗೆಯಲ್ಲಿ ಅವರು ಮುರಿದರೂ ಅಚ್ಚರಿಯೇನೂ ಇಲ್ಲ.
ಜನ 14, 2019
ಬಾಜಪದ ಬಲ ಕುಗ್ಗಿಸಬಲ್ಲ ಮೈತ್ರಿ
ಇಂಡಿಯಾದ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯಲ್ಲಿ ಶಾಶ್ವತ ಶತ್ರುಗಳಾಗಲಿ, ಶಾಶ್ವತ ಮಿತ್ರರುಗಳಾಗಲಿ ಇರಲು ಸಾದ್ಯವಿಲ್ಲವೆಂಬ ಮಾತು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗುವ ಮುನ್ನವೇ ಉತ್ತರ ಪ್ರದೇಶದ ಎರಡು ಬಲಿಷ್ಠ ಪ್ರಾದೇಶಿಕ ಪಕ್ಷಗಳಾದ ಶ್ರೀಅಖಿಲೇಶಯಾದವರ ಸಮಾಜವಾದಿ ಪಕ್ಷ ಮತ್ತು ಕುಮಾರಿ ಮಾಯಾವತಿಯವರ ಬಹುಜನ ಪಕ್ಷ ಚುನಾವಣಾಪೂರ್ವ ಮೈತ್ರಿಯನ್ನು ಮಾಡಿಕೊಂಡಿರುವುದೇ ಇದಕ್ಕೆ ಸಾಕ್ಷಿ! ತೊಂಭತ್ತರ ದಶಕದಲ್ಲಿ ಮಿತ್ರರಾಗಿದ್ದ ಈ ಎರಡೂ ಪಕ್ಷಗಳು ತದನಂತರ ವ್ಯಕ್ತಿಗತ ಪ್ರತಿಷ್ಠೆಯ ಪ್ರತಿಷ್ಠಾಪನೆಯಿಂದ ದೂರವಾಗಿ, ಸರದಿಯಂತೆ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತ ಬಂದಿದ್ದವು. ಆದರೆ 2017ರ ಹೊತ್ತಿಗೆ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ರಾಮಮಂದಿರದ ವಿಷಯಗಳಿಂದಾಗಿ ಬಾಜಪ ಈ ಎರಡೂ ಪಕ್ಷಗಳನ್ನು ಸೋಲಿಸಿ ಉತ್ತರ ಪ್ರದೇಶದ ಗದ್ದುಗೆ ಹಿಡಿಯಿತು. ಆ ಸೋಲಿನ ಕಾರಣಗಳನ್ನು ಅರ್ಥಮಾಡಿಕೊಂಡಂತೆ ಇದೀಗ ಬಾಜಪವನ್ನು ಸೋಲಿಸಲೇಬೇಕೆಂಬ ಕಾರಣದಿಂದ, ಸುಮಾರು ಎರಡು ದಶಕಗಳ ತಮ್ಮ ವೈಮನಸ್ಸನ್ನು ಹಿನ್ನೆಲೆಗೆ ನೂಕಿ ಮೈತ್ರಿಕೂಟವನ್ನು ರಚಿಸಿಕೊಂಡಿವೆ.
ಡಿಸೆಂ 18, 2018
ರಾಜಾಸ್ಥಾನ ಬಾಜಪ ಸೋಲಿಗೆ ಕಾರಣವಾದ ಆಡಳಿತ ವೈಖರಿ!
![]() |
ಚಿತ್ರಮೂಲ: election commission of India |
ಕಳೆದ ಐದು ವರ್ಷಗಳಿಂದ ರಾಜಾಸ್ಥಾನದಲ್ಲಿ ಆಡಳಿತ ನಡೆಸುತ್ತಿದ್ದ ಬಾಜಪದ ಶ್ರೀಮತಿ ವಸುಂದರಾ ರಾಜೆಯವರ ಸರಕಾರ ಈ ಬಾರಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ಸಿಗೆ ಅಧಿಕಾರ ವಹಿಸಿಕೊಟ್ಟಿದೆ. ಚುನಾವಣೆಗಳಿಗು ಮೊದಲು ಬಿಡುಗಡೆಯಾದ ಹಲವು ಚುನಾವಣಾ ಪೂರ್ವ ಸಮೀಕ್ಷೆಗಳು ಮತ್ತು ಮತದಾನದ ಸಂಜೆ ದೊರೆತ ಎಕ್ಸಿಟ್ ಪೋಲ್ ಸಹ ಬಾಜಪ ಸರಕಾರದ ಸೋಲನ್ನು ಖಚಿತ ಪಡಿಸಿದ್ದವು.
ಎಲ್ಲರೂ ಬಾಜಪ ಸೋಲಬಹುದೆಂದೇನೊ ನುಡಿದಿದ್ದರೂ ಅದು ಈ ಮಟ್ಟಿಗೆ ಸೋಲುತ್ತದೆಯೆಂಬ ನಿರೀಕ್ಷೆ ಇರಲಿಲ್ಲ. ಯಾಕೆಂದರೆ 2013ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟ 200 ಸ್ಥಾನಗಳ ಪೈಕಿ 163 ರಲ್ಲಿ ಬಾಜಪ ಗೆದ್ದಿದ್ದರೆ, ಕಾಂಗ್ರೆಸ್ 21 ರಲ್ಲಿ ಮಾತ್ರ ಗೆಲ್ಲಲು ಶಕ್ತವಾಗಿತ್ತು. ಹೆಚ್ಚೂ ಕಡಿಮೆ ಅಂದು ಪ್ರದಾನಮಂತ್ರಿ ಅಭ್ಯರ್ಥಿಯಾಗಿದ್ದ ಶ್ರೀ ನರೇಂದ್ರ ಮೋದಿಯವರ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿತ್ತು. ಅಷ್ಟು ಬಲಿಷ್ಠವಾಗಿ ಹೊರಹೊಮ್ಮಿದ್ದ ಬಾಜಪ ಇವತ್ತು ಕೇವಲ ಐದೇ ವರ್ಷಗಳಲ್ಲಿ ಕಾಂಗ್ರೆಸ್ಸಿನೆದುರು ಮಂಡಿಯೂರಿದೆ. ಈ ಬಾರಿ ಚುನಾವಣೆ ನಡೆದ 199ಕ್ಷೇತ್ರಗಳ ಪೈಕಿ ಕಾಂಗ್ರೆಸ್ 99 ಸ್ಥಾನವನ್ನು, ಬಾಜಪ 73 ಸ್ಥಾನಗಳನ್ನು ಗೆದ್ದಿವೆ. ಇನ್ನು ಯಥಾ ಪ್ರಕಾರ ಇಲ್ಲಿ ಅಷ್ಟೇನು ಪ್ರಭಾವಶಾಲಿಯಲ್ಲದ ಬಹುಜನ ಪಕ್ಷ 6 ಸ್ಥಾನಗಳನ್ನೂ ಪಡೆದಿದೆ. ಇರಲಿ ಈಗ ನಾವು ರಾಜಾಸ್ಥಾನದಲ್ಲಿನ ಬಾಜಪ ಸೋಲಿಗೆ ಕಾರಣವಾದ ಅಂಶಗಳನ್ನು ನೋಡೋಣ: