ಡಿಸೆಂ 12, 2018

ತೆಲಂಗಾಣ! ಟಿ.ಆರ್.ಎಸ್. ಗೆಲುವಿನ ಐದು ಮುಖ್ಯ ಕಾರಣಗಳು

ಕು.ಸ.ಮಧುಸೂದನರಂಗೇನಹಳ್ಳಿ
ಎಲ್ಲ ನಿರೀಕ್ಷೆಗಳನ್ನೂ ಮೀರಿ ಕೆ.ಚಂದ್ರಶೇಖರ್ ರಾವ್ ಅವರ ಟಿ.ಆರ್.ಎಸ್. ತೆಲಂಗಾಣ ವಿದಾನಸಭಾ ಚುನಾವಣೆಗಳಲ್ಲಿ ಅಭೂತಪೂರ್ವ ಜಯಗಳಿಸಿದೆ.ಚುನಾವಣೆ ನಡೆದ 119ಸ್ಥಾನಗಳ ಪೈಕಿ 88ಸ್ಥಾನಗಳನ್ನು ಗೆಲ್ಲುವ ಮೂಲಕ ವಿರೋಧಪಕ್ಷಗಳು ದೂಳಿಪಟವಾಗುವಂತೆ ಮಾಡಿದೆ.ಟಿ.ಆರ್.ಎಸ್.ಗೆಲ್ಲಬಹುದೆಂದು ಭವಿಷ್ಯ ನುಡಿದಿದ್ದವರಿಗೂ ಅಚ್ಚರಿಯಾಗುವಂತೆ ಅದು ಜಯಗಳಿಸಿರುವುದರ ಹಿಂದೆ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಅವರ ಚುನಾವಣಾ ತಂತ್ರಗಾರಿಕೆ ಕೆಲಸ ಮಾಡಿದೆ.

ಹಾಗೆ ನೋಡಿದರೆ ತೆಲಂಗಾಣ ವಿದಾನಸಭಾ ಚುನಾವಣೆಗಳು 2019ರ ಮೇ ತಿಂಗಳ ಲೋಕಸಭಾ ಚುನಾವಣೆಗಳ ಜೊತೆಗೆ ನಡೆಯಬೇಕಿತ್ತು. ಆದರೆ ಲೋಕಸಭಾ ಚುನಾವಣೆಗಳಲ್ಲಿ ಬೀಸಬಹುದಾದ ಪ್ರದಾನಮಂತ್ರಿ ಶ್ರೀನರೇಂದ್ರ ಮೋದಿಯವರ ಅಲೆಯಿಂದ ತಪ್ಪಿಸಿಕೊಳ್ಳಲೆಂಬಂತೆ ಕೆ.ಸಿ.ಆರ್. ಅವಧಿಗೆ ಮುನ್ನವೇ ವಿದಾನಸಭೆ ವಿಸರ್ಜಿಸಿ ರಾಜ್ಯಕ್ಕೆ ಪ್ರತ್ಯೇಕವಾಗಿ ಚುನಾವಣೆ ನಡೆಯುವಂತೆ ನೋಡಿಕೊಂಡರು. ಅವರ ಈ ನಿರ್ದಾರವನ್ನು ವಿರೋಧಪಕ್ಷಗಳು ಟೀಕಿಸಿ, ರಾಜಕೀಯ ಪಂಡಿತರು ಅವರ ಈ ಲೆಕ್ಕಾಚಾರ ಉಲ್ಟಾ ಹೊಡೆಯಲಿದೆಯೆಂದು ನಕ್ಕಿದ್ದರು. ಆದರೆ ಅಂತಿಮವಾಗಿ ಕೆ.ಸಿ.ರಾವ್ ಗೆಲುವಿನ ನಗೆ ಬೀರಿದ್ದಾರೆ. ಆದರೆ ಇಂತಹ ಅಭೂತಪೂರ್ವ ಗೆಲುವು ತಮ್ಮದಾಗಬಹುದೆಂದು ಸ್ವತ: ಅವರೇ ನಿರೀಕ್ಷಿಸಿದ್ದರೆಂದು ಹೇಳುವುದು ತಪ್ಪಾಗುತ್ತದೆ.

ಡಿಸೆಂ 7, 2018

ಆಪರೇಷನ್ ಕಮಲದ ಅನಿವಾರ್ಯತೆ ಯಾರಿಗಿದೆ?

ಕು.ಸ.ಮಧುಸೂದನ
'ಆಪರೇಷನ್ ಕಮಲ' ಮತ್ತೊಮ್ಮೆ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳದ ಮೈತ್ರಿ ಸರಕಾರ ಆರು ತಿಂಗಳು ಪೂರೈಸುತ್ತಿರುವ ಈ ಸಮಯದಲ್ಲಿ ಬಿಡುಗಡೆಯಾಗಿರುವ ಆಡಿಯೋ ತುಣುಕೊಂದು ಹೀಗೊಂದು ಸಂಶಯವನ್ನು ಹುಟ್ಟು ಹಾಕಿದೆ. ಈ ಆಡಿಯೋ ತುಣುಕಿನ ಸತ್ಯಾಸತ್ಯತೆಯೇನೇ ಇರಲಿ ಈ ಸರಕಾರವನ್ನು ಕೆಡವಿ ಅಧಿಕಾರಕ್ಕೇರಲು ಬಾಜಪ ಪ್ರಯತ್ನಿಸುತ್ತಿರುವುದೇನು ಹೊಸತಲ್ಲ.

ಚುನಾವಣೆಗಳು ಮುಗಿದ ನಂತರ ನೂರಾ ನಾಲ್ಕು ಸ್ಥಾನಗಳನ್ನು ಗೆದ್ದ ಶ್ರೀ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಲೇ ವಿಶ್ವಾಸ ಮತ ಸಾಬೀತಿಗೆ ಬೇಕಾದ ಸಂಖ್ಯೆ ಹೊಂದಲು ಆಪರೇಷನ್ ಕಮಲ ನಡೆಸಲು ಪ್ರಯತ್ನಗಳು ನಡೆದಿದ್ದವು. ವಿಶ್ವಾಸ ಮತದ ಮೇಲಿನ ಚರ್ಚೆಯಲ್ಲಿ ಮಾತಾಡುತ್ತ ಸ್ವತ: ಯಡಿಯೂರಪ್ಪನವರೇ ತಾವು ಕಾಂಗ್ರೆಸ್ ಮತ್ತು ಜನತಾದಳದ ಶಾಸಕರುಗಳನ್ನು ಸಂಪರ್ಕಿಸಿದ್ದು ನಿಜವೆಂದು ಹೇಳಿಕೊಂಡಿದ್ದರು. ಅದಾದ ನಂತರ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರವೂ ಆಪರೇಷನ್ ಕಮಲ ನಡೆಸುವ ನಂಬಿಕೆಯಿಂದಲೇ ಬಾಜಪದ ಬಹುತೇಕ ನಾಯಕರುಗಳು ಈ ಸರಕಾರ ಇನ್ನು ಒಂದು ವಾರದಲ್ಲಿ ಬೀಳುತ್ತದೆ, ಇನ್ನು ಎರಡು ವಾರದಲ್ಲಿ ಬೀಳುತ್ತದೆಯೆಂದು ಭವಿಷ್ಯ ನುಡಿಯುತ್ತ ನಗೆಪಾಟಲಿಗೀಡಾಗುತ್ತ ಹೋಗಿದ್ದು ನಮ್ಮ ಮುಂದಿದೆ. ಇದೀಗ ಚಳಿಗಾಲದ ಅಧಿವೇಶನ ಈ ತಿಂಗಳು ಹತ್ತನೇ ತಾರೀಖು ಪ್ರಾರಂಭವಾಗಲಿದ್ದು, ಅದಕ್ಕೂ ಮುಂಚೆ ಸಂಪುಟ ವಿಸ್ತರಣೆ ಮಾಡುವ ತರಾತುರಿಯಲ್ಲಿರುವ ಮೈತ್ರಿ ಸರಕಾರಕ್ಕೆ ಈಗ ಮತ್ತೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಯಥಾ ಪ್ರಕಾರ ಬಾಜಪ ಈ ಆಡಿಯೋದ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದು ತಮ್ಮ ಪಕ್ಷ ಆಪರೇಷನ್ ಕಮಲ ಮಾಡಲು ಹೊರಟಿಲ್ಲ. ತಾವಾಗಿಯೇ ಪಕ್ಷ ಸೇರಲು ಬಯಸುವ ಶಾಸಕರುಗಳಿಗೆ ಬೇಡ ಎನ್ನುವುದಿಲ್ಲ ಎಂದು ಹೇಳಿಕೆ ನೀಡಿದೆ. ಈ ಆಡಿಯೋದ ಅಧಿಕೃತತೆಯನ್ನು ಮತ್ತು ಇದರ ಮೂಲದ ಬಗ್ಗೆ ಚರ್ಚಿಸುವುದಕ್ಕಿಂತ ಮುಖ್ಯವಾಗಿ ಈಗ ಈ ಆಪರೇಷನ್ ಕಮಲ ಯಾರಿಗೆ ಹೆಚ್ಚು ಅನಿವಾರ್ಯವಾಗಿದೆ ಎಂಬುದನ್ನು ನಾವು ವಿಶ್ಲೇಷಿಸಿ ನೋಡಬೇಕಾಗಿದೆ. 

ನವೆಂ 9, 2018

ಖಾಸಗಿ ಬ್ಯಾಂಕಿನ ಅಮಾನವೀಯ ನಡೆ! ಮುಕ್ತ ಆರ್ಥಿಕ ನೀತಿಯ ಫಲ

ಕು.ಸ.ಮಧುಸೂದನ ರಂಗೇನಹಳ್ಳಿ
ಜಾಗತೀಕರಣದ ಮತ್ತೊಂದು ಮಾರಕಾಯುಧ ನಮ್ಮ ರೈತರ ಬಲಿ ಪಡೆಯುವತ್ತ ಮುಂದಾಗಿದೆ.ಅದೇ ಆಕ್ಸಿಸ್ ಬ್ಯಾಂಕ್! 

ತೊಂಭತ್ತರ ದಶಕದಲ್ಲಿ ಜಾರಿಗೊಂಡ ಮುಕ್ತ ಆರ್ಥಿಕ ನೀತಿಯ ಫಲವಾಗಿ 1993ರಲ್ಲಿ ಜನ್ಮ ತಳೆದ ಖಾಸಗಿ ವಲಯದ ಈ ಬ್ಯಾಂಕ್ ದೇಶದಾದ್ಯಂತ 1947 ಶಾಖೆಗಳನ್ನು ಹೊಂದಿದೆ. ಖಾಸಗಿ ವಲಯದ ಅತ್ಯಂತ ಪ್ರಮುಖ ಬ್ಯಾಂಕ್ ಎಂದು ಹೆಸರು ಮಾಡಿರುವ ಇದು ದೇಶದ ಬೇರೆಲ್ಲ ಬ್ಯಾಂಕುಗಳಿಗಿಂತ ಹೆಚ್ಚು ಎ.ಟಿ.ಎಂ. ಗಳನ್ನು ಸಹ ಹೊಂದಿದೆ. ಇದರ ಕೇಂದ್ರಕಛೇರಿ ಮುಂಬೈನಲ್ಲಿದೆ..ಇರಲಿ ನಾನೇನು ಇಲ್ಲಿಈ ಬ್ಯಾಂಕಿನ ಮಾಹಿತಿ ನೀಡಲು ಇದನ್ನು ಬರೆಯುತ್ತಿಲ್ಲ. ವಿಷಯಕ್ಕೆ ಹೋಗುವ ಮೊದಲು ಈ ಬ್ಯಾಂಕಿನ ಬಗ್ಗೆ ಒಂದಿಷ್ಟು ಮಾಹಿತಿ ನಿಮಗಿರಲೆಂದು ಹೇಳಿದೆ. 

ಇದೀಗ ಈ ಬ್ಯಾಂಕು ಕನಾಟಕ ರಾಜ್ಯದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸುಮಾರು 181 ರೈತರ ವಿರುದ್ದ ಸಾಲ ಮರುಪಾವತಿ ಮಾಡಿಲ್ಲವೆಂದು ಕೋರ್ಟಿನಿಂದ ಬಂಧನದ ಆದೇಶವನ್ನು ಹೊರಡಿಸಿ ತನ್ನ ರಾಕ್ಷಸೀತನವನ್ನು ಮೆರೆದಿದೆ. ಇದೀಗ ರೈತಸಂಘ ಮತ್ತು ರಾಜ್ಯ ಸರಕಾರಗಳ ಮದ್ಯಸ್ಥಿಕೆಯಿಂದ ತನ್ನ ಕಾನೂನು ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಬ್ಯಾಂಕಿನ ಸ್ಥಳೀಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆದರೆ ಅಷ್ಟು ಸುಲಭಕ್ಕೆ ಈ ಬಂಧನದ ವಾರೆಂಟುಗಳು ರದ್ದಾಗುವುದಿಲ್ಲ. ಯಾಕೆಂದರೆ ಈ ವಾರೆಂಟುಗಳನ್ನು ಹೊರಡಿಸಿರುವುದು ಎರಡು ಸಾವಿರ ಮೈಲುಗಳಷ್ಟು ದೂರವಿರುವ ಕೊಲ್ಕತ್ತಾದ ನ್ಯಾಯಾಲಯಗಳು. ಕಾರಣ ಕರ್ನಾಟಕದಲ್ಲಿನ ಈ ಬ್ಯಾಂಕುಗಳು ಕೊಲ್ಕತ್ತಾದ ಆಡಳಿತವಲಯಕ್ಕೆ ಸೇರಿರುವುದು. ಈಗ ಅಲ್ಲಿ ನ್ಯಾಯಾಲಯಗಳಿಗೆ ದೀಪಾವಳಿಯ ರಜೆ ಇರುವುದರಿಂದ ಅವುಗಳು ಮತ್ತೆ ತಮ್ಮಕಲಾಪಗಳನ್ನು ಪ್ರಾರಂಭಿಸುವವರೆಗು ನಮ್ಮ ರೈತರು ಬಂಧನದ ಭೀತಿಯಲ್ಲಿಯೇ ಬದುಕುವ ಅನಿವಾರ್ಯ ಸೃಷ್ಠಿಯಾಗಿದೆ.

ಅಕ್ಟೋ 31, 2018

ಮೀಟೂ ಮತ್ತು ಶಬರಿಮಲೆ ವಿವಾದಗಳ ನಡುವೆ ನಾವು ಮರೆತದ್ದೇನು?

ಕು.ಸ.ಮಧುಸೂದನ ರಂಗೇನಹಳ್ಳಿ 
ಇಂಡಿಯಾದ ಸಂಸದೀಯ ಪ್ರಜಾಸತ್ತೆಯ ದೌರ್ಬಲ್ಯ ಮತ್ತು ದುರಂತವಿರುವುದೇ ನಮ್ಮ ಈ ತೆರನಾದ ನಡವಳಿಕೆಗಳಲ್ಲಿ. ಈ ನೆಲದ ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳು ಕಾಲಕಾಲಕ್ಕೆ ಇಂತಹ ಹುಸಿಕ್ರಾಂತಿಗಳ ಹೆಸರಿನಲ್ಲಿ ಪ್ರಜಾಸತ್ತಾತ್ಮಕ ಚುನಾವಣೆಗಳನ್ನು, ಅವುಗಳ ಸುತ್ತ ಚರ್ಚೆಯಾಗಬೇಕಾದ ವಿಚಾರಗಳ ದಾರಿ ತಪ್ಪಿಸುತ್ತ ಹೋಗುವುದು ನಡೆದುಕೊಂಡೇ ಬಂದಿದೆ.ನಾವು ಸಹ ನಮಗರಿವಿದ್ದೊ ಇಲ್ಲದೆಯೊ ದಾರಿ ತಪ್ಪುತ್ತಲೇ ಬರುತ್ತಿದ್ದೇವೆ. 

ಇದೀಗ ಎರಡು ವಿಷಯಗಳು ಇಡೀದೇಶದ ಗಮನವನ್ನು ಸೆಳೆದಿದ್ದು ನಮ್ಮ ಗಮನ ಮತ್ತು ಚರ್ಚೆಗಳನ್ನು ಆ ಎರಡು ವಿಚಾರಗಳೇ ಆವರಿಸಿಕೊಂಡಿವೆ. ಮೊದಲನೆಯದು ಮಾಜಿ ನಟಿ ತನುಶ್ರೀ ದತ್ತಾ ಶುರು ಮಾಡಿದ ಮೀಟೂ ಅಭಿಯಾನವಾದರೆ ಎರಡನೆಯದು, ಶಬರಿಮಲೆಗೆ ಮಹಿಳೆಯರ ಮುಕ್ತ ಪ್ರವೇಶದ ಬಗ್ಗೆ ಎದ್ದಿರುವ ವಿವಾದ ಮತ್ತು ಅದರ ಪರ-ವಿರೋಧ ಪ್ರತಿಭಟನೆಗಳು!. 

ಅಕ್ಟೋ 19, 2018

ಛತ್ತೀಸ್ ಗಡ್ ಮತ್ತು ರಾಜಸ್ಥಾನಗಳಲ್ಲಿ ಬಾಜಪದ ಹಿನ್ನಡೆಗೆ ಇರಬಹುದಾದ ಕಾರಣಗಳು?

ಕು.ಸ.ಮಧುಸೂದನ ರಂಗೇನಹಳ್ಳಿ  
ಛತ್ತೀಸ್ ಗಡ 
ಇತ್ತೀಚೆಗೆ ಹೊರಬಿದ್ದಿರುವ ಚುನಾವಣಾಪೂರ್ವ ಸಮೀಕ್ಷೆಗಳನ್ನೇ ನಂಬುವುದಾದಲ್ಲಿ ಕಳೆದ ಐದು ವರ್ಷಗಳಿಂದ ಬಾಜಪದ ತೆಕ್ಕೆಯಲ್ಲಿರುವ ಛತ್ತೀಸ್ಗಡ ರಾಜ್ಯ ಈ ಬಾರಿ ಕಾಂಗ್ರೆಸ್ಸಿನ ಮಡಿಲಿಗೆ ಜಾರಿ ಬೀಳಲಿದೆ. 

ಛತ್ತೀಸ್ ಗಡ ರಾಜ್ಯದ ಒಟ್ಟು 90 ಸ್ಥಾನಗಳ ಪೈಕಿ ಕಾಂಗ್ರೆಸ್ 47 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿದರೆ, ಬಾಜಪ 40 ಸ್ಥಾನಗಳೊಂದಿಗೆ ವಿಪಕ್ಷದಲ್ಲಿ ಕೂರಬೇಕಾಗುತ್ತದೆ. 2013ರಲ್ಲಿ ಬಾಜಪ 49 ಸ್ಥಾನಗಳನ್ನು, ಕಾಂಗ್ರೆಸ್ 39 ಸ್ಥಾನಗಳನ್ನು ಗೆದ್ದಿದ್ದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಐದು ವರ್ಷಗಳ ಹಿಂದೆಯೂ ಬಾಜಪ ಮತ್ತು ಕಾಂಗ್ರೆಸ್ಸಿನ ನಡುವಿನ ಮತಗಳಿಕೆಯ ಪ್ರಮಾಣದಲ್ಲಿ ಹೆಚ್ಚೇನು ವ್ಯತ್ಯಾಸವಿರಲಿಲ್ಲ.ಈ ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಎರಡೂ ರಾಷ್ಟ್ರೀಯ ಪಕ್ಷಗಳ ಮತಗಳಿಕೆಯ ಪ್ರಮಾಣದಲ್ಲಿ ಅಂತಹ ಅಗಾಧ ಅಂತರವೇನು ಇರುವುದಿಲ್ಲ. ಎರಡು ಪಕ್ಷಗಳ ಮತಗಳಿಕೆಯ ವ್ಯತ್ಯಾಸ ಶೇಕಡಾ 0.7ರಷ್ಟು ಮಾತ್ರ ಇರುತ್ತದೆ ಎಂದು ಹೇಳಲಾಗಿದ್ದು. ತೀವ್ರವಾದ ಹಣಾಹಣಿಯ ಕಾಳಗ ಇದಾಗಲಿರುವುದು ಖಚಿತ! 

ಈ ಹಿನ್ನೆಲೆಯಲ್ಲಿ ಛತ್ತೀಸ್ ಗಡ್ ರಾಜ್ಯದಲ್ಲಿನ ಬಾಜಪ ಸೋಲಿಗೆ ಕಾರಣಗಳೇನಾಗಿರಬಹುದೆಂಬುದನ್ನು ವಿಶ್ಲೇಷಿಸಿ ನೋಡಬೇಕಾಗುತ್ತದೆ. 

ಅಕ್ಟೋ 15, 2018

ಬಾಜಪಕ್ಕೆ ಲಾಭ ತರಲಿರುವ ಕಾಂಗ್ರೆಸ್-ಜನತಾದಳದ ಉಪಚುನಾವಣಾ ಮೈತ್ರಿ!

ಕು.ಸ.ಮಧುಸೂದನ ರಂಗೇನಹಳ್ಳಿ
ಕಾಂಗ್ರೆಸ್ ಮತ್ತು ಜನತಾದಳದ ಮೈತ್ರಿಯ ದೆಸೆಯಿಂದ ಹಳೆಯ ಮೈಸೂರು ಭಾಗದಲ್ಲಿ ಬಾಜಪ ಬೇರೂರಲು ಸುವರ್ಣಾವಕಾಶವೊಂದು ಸೃಷ್ಠಿಯಾಗಿದೆಯೇ? ಹೌದೆನ್ನುತ್ತಾರೆ, ಹಳೆ ಮೈಸೂರು ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರು! ಅವರುಗಳ ಈ ಭಯ ಅಕಾರಣವೇನಲ್ಲ.

ನವೆಂಬರ್ ಮೊದಲ ವಾರದಲ್ಲಿ ನಡೆಯಲಿರುವ ಮೂರು ಸಂಸತ್ ಸ್ಥಾನಗಳ ಮತ್ತು ಎರಡು ವಿದಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳ ಮೈತ್ರಿಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿಯುವುದು ಬಹುತೇಕ ಸ್ಪಷ್ಟವಾಗಿದೆ. ರಾಮನಗರ ವಿದಾನಸಭಾ ಕ್ಷೇತ್ರದಲ್ಲಿ ಜನತಾದಳವು (ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರ ಪತ್ನಿ, ಮಾಜಿ ಶಾಸಕಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿ!) ಮಂಡ್ಯಮತ್ತು ಶಿವಮೊಗ್ಗ ಸಂಸತ್ ಕ್ಷೇತ್ರಗಳಲ್ಲಿ ಬಹುತೇಕ ಜನತಾದಳದ ಅಭ್ಯರ್ಥಿಗಳೇ ಕಣಕ್ಕಿಳಿಯಲಿರುವುದು ಖಚಿತವಾಗಿದೆ. ಅದರಲ್ಲೂ ಮಂಡ್ಯ ಮತ್ತು ರಾಮನಗರ ಕ್ಷೇತ್ರಗಳಲ್ಲಿ ಇದುವರೆಗು ಕಾಂಗ್ರೆಸ್ ಮತ್ತು ಜನತಾದಳಗಳೇ ಸಾಂಪ್ರದಾಯಿಕ ಎದುರಾಳಿಗಳಾಗಿದ್ದು ಬಾಜಪ ಯಾವತ್ತಿಗೂ ಮೂರನೇ ಸ್ಥಾನದಲ್ಲಿರುತ್ತಿತ್ತು. ಇನ್ನು ಶಿವಮೊಗ್ಗದಲ್ಲಿ ಕಾಂಗ್ರೆಸ್ ಮತ್ತು ಬಾಜಪದ ನಡುವೆ ಹೋರಾಟವಿರುತ್ತಿದ್ದರೂ ಜನತಾದಳಕ್ಕೂ ಇಲ್ಲಿ ಬೇರು ಮಟ್ಟಿನ ಕಾರ್ಯಕರ್ತರುಗಳ ಪಡೆ ಇದೆ ಎನ್ನಬಹುದು. 

ಅಕ್ಟೋ 4, 2018

'ವಿದಾನಸಭೆ ವಿಸರ್ಜನೆಯಾದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿ': ಕೇಂದ್ರ ಚುನಾವಣಾ ಆಯೋಗದ ಅಪರೂಪದ ನಿರ್ದಾರದ ಹಿಂದಿರುವುದೇನು?

ಕು.ಸ.ಮಧುಸೂದನ ರಂಗೇನಹಳ್ಳಿ
ತೆಲಂಗಾಣ ವಿದಾನಸಭೆ ವಿಸರ್ಜನೆಯಾದ ಕ್ಷಣದಿಂದಲೇ ಆ ರಾಜ್ಯದಲ್ಲಿ ನೀತಿಸಂಹಿತೆ ಜಾರಿಯಾಗಿದ್ದು, ತೆಲಂಗಾಣದ ಉಸ್ತುವಾರಿ ಸರಕಾರವಾಗಲಿ ಅಥವಾ ಆ ರಾಜ್ಯ ಕುರಿತಂತೆ ಕೇಂದ್ರ ಸರಕಾರವಾಗಲಿ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬಾರದೆಂಬ ಆದೇಶವನ್ನು ಹೊರಡಿಸಿದೆ. 

ಕೇಂದ್ರ ಸರಕಾರದ ಆಜ್ಞಾಪಾಲಕನಂತೆ ವರ್ತಿಸುವ ಸಾಂವಿಧಾನಿಕ ಸಂಸ್ಥೆಯೊಂದು ತೆಗೆದುಕೊಳ್ಳಬಹುದಾದ ಅವೈಜ್ಞಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿರ್ದಾರವನ್ನು ನಮ್ಮ ಕೇಂದ್ರ ಚುನಾವಣಾ ಆಯೋಗ ಈಗ ತೆಗೆದುಕೊಂಡಿದೆ. ತೆಲಂಗಾಣದಲ್ಲಿ ಹಾಲಿ ಇರುವ ಕೆ.ಚಂದ್ರಶೇಖರ್ ರಾವ್ ಅವರ ಸರಕಾರವು ಉಸ್ತುವಾರಿ ಸರಕಾರವಾಗಿದ್ದು, ಜನಪರವಾದ ಯಾವುದೇ ಜನಪ್ರಿಯ ಯೋಜನೆಗಳನ್ನು ಹೊಸದಾಗಿ ಘೋಷಿಸಲು ಅದು ಅಧಿಕಾರ ಹೊಂದಿಲ್ಲವೆಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ತೆಲಂಗಾಣದ ಮುಖ್ಯಮಂತ್ರಿಗಳಾದ ಶ್ರೀ ಕೆ.ಚಂದ್ರಶೇಖರರಾವ್ ಇದೇ ಸೆಪ್ಟೆಂಬರ್ ಆರನೇ ತಾರೀಖು ವಿದಾನಸಭೆಯನ್ನು ಅವಧಿಗೆ ಮುನ್ನವೇ ವಿಸರ್ಜಿಸಿದ್ದನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದು. ಹಾಗೆ ವಿದಾನಸಭೆಯನ್ನು ವಿಸರ್ಜಿಸಿದಾಗ ಶ್ರೀ ರಾವ್ ಅವರು ಬಹುಶ: ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಚುನಾವಣೆಗಳು ಘೋಷಣೆಯಾಗಬಹುದು ಮತ್ತು ಡಿಸೆಂಬರ್ ಮದ್ಯಭಾಗದ ಹೊತ್ತಿಗೆ ಚುನಾವಣೆಗಳು ನಡೆಯಬಹುದು. ಈ ಬಗ್ಗೆ ನಾನು ಚುನಾವಣಾ ಆಯೋಗದ ಜೊತೆ ಚರ್ಚಿಸಿದ್ದೇನೆಂದೂ ಹೇಳಿದ್ದರು.

ಸೆಪ್ಟೆಂ 16, 2018

ತೆಲಂಗಾಣ: ಕೆ. ಚಂದ್ರಶೇಖರ್ ರಾವ್ ಅವರ ರಾಜಕೀಯ ಜೂಜಾಟ!

ಕು.ಸ.ಮಧುಸೂದನ ರಂಗೇನಹಳ್ಳಿ
ವರ್ತಮಾನದ ರಾಜಕಾರಣದಲ್ಲಿ ಇದ್ದಕ್ಕಿದ್ದಂತೆ ಯೂಟರ್ನ್ ಹೊಡೆದು ತನ್ನ ಅಧಿಕಾರದಾಹವನ್ನು ಪ್ರದರ್ಶಿಸಿ, ಅದಕ್ಕೆ ಪೂರಕವಾಗಿ ಸಂವಿದಾನದತ್ತವಾಗಿ ಜನತೆ ನೀಡಿದ ಐದು ವರ್ಷದ ಅಧಿಕಾರಾವಧಿಯನ್ನು ತಿರಸ್ಕರಿಸಿ, ವಿದಾನಸಭೆಯನ್ನು ವಿಸರ್ಜಿಸಿದ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಶ್ರೀ ಕೆ.ಚಂದ್ರಶೇಖರ್ ರಾವ್ ತಮ್ಮ ರಾಜ್ಯದ ಜನತೆಗೆ ಮಾತ್ರವಲ್ಲದೆ ಸಂವಿದಾನಕ್ಕೂ ದ್ರೋಹ ಬಗೆದಿದ್ದಾರೆ. ಈ ಹಿಂದೆಯೂ ಇಂಡಿಯಾದ ರಾಜಕಾರಣದಲ್ಲಿ ಹಲವಾರು ಮುಖ್ಯಮಂತ್ರಿಗಳು ಅವಧಿಗು ಮುನ್ನವೇ ವಿದಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿದ್ದಿದೆ. ಆದರೆ ಅವರೆಲ್ಲರಿಗೂ ಹೇಳಿಕೊಳ್ಳಲು ಒಂದೊಂದು ಕಾರಣಗಳಿರುತ್ತಿದ್ದವು. ಸ್ಪಷ್ಟ ಬಹುಮತ ಇಲ್ಲದಿರುವುದು, ಸರಕಾರದ ಒಳಗೆ ಹಲವು ರೀತಿಯ ಭಿನ್ನಮತೀಯ ಚಟುವಟಿಕೆಗಳಿರುವುದು, ಸರಕಾರವೇ ದೊಡ್ಡ ಹಗರಣಗಳ ಸುಳಿಗೆ ಸಿಲುಕುವುದು ಹೀಗೇ ವಿದಾನಸಭೆ ವಿಸರ್ಜನೆ ಸಮರ್ಥಿಸಿಕೊಳ್ಳಲು ಅವರುಗಳಿಗೆ ಗಟ್ಟಿ ಕಾರಣಗಳಿರುತ್ತಿದ್ದವು. 

ಈ ಹಿನ್ನೆಲೆಯಲ್ಲಿ ನೋಡಿದರೆ ಚಂದ್ರಶೇಖರ್ರಾವ್ ಅವರಿಗೆ ಇಂತಹ ಯಾವುದೇ ಕಾರಣಗಳೂ ಇರಲಿಲ್ಲ ಮತ್ತು ಅವರ ಸರಕಾರದ ಭದ್ರತೆಗೆ ಯಾವುದೇ ಆಂತರೀಕ ಮತ್ತು ಬಾಹ್ಯ ಬೆದರಿಕೆಯೂ ಇರಲಿಲ್ಲ. ನೂರಾ ಹತ್ತೊಂಭತ್ತು ಸಂಖ್ಯಾಬಲದ ವಿದಾನಸಭೆಯಲ್ಲಿ ಅವರ ಟಿ.ಆರ್.ಎಸ್.ಪಕ್ಷಕ್ಕೆ ತೊಂಭತ್ತು ಸ್ಥಾನಗಳ ರಾಕ್ಷಸ ಬಹುಮತ ಲಭ್ಯವಿತ್ತು. ಜೊತೆಗೆ ಅಂತಹ ಯಾವುದೇ ಭಿನ್ನಮತೀಯ ಚಟುವಟಿಕೆಯಾಗಲಿ, ಹಗರಣಗಳ ಆರೋಪವಾಶಗಲಿ ಇರಲಿಲ್ಲ. ಇಷ್ಟೆಲ್ಲ ಇದ್ದಾಗ್ಯೂ ಚಂದ್ರಶೇಖರ್ ರಾವ್ ಮುಂದಿನ ವರ್ಷದ ಮೇ-ಜೂನ್ ತಿಂಗಳಲ್ಲಿ ಅಂತ್ಯಗೊಳ್ಳಬೇಕಿದ್ದ ವಿದಾನಸಭೆಯನ್ನು ಹೆಚ್ಚೂಕಡಿಮೆ ಹತ್ತು ತಿಂಗಳಿಗೂ ಮುನ್ನವೇ ವಿಸರ್ಜನೆ ಮಾಡಿ ತಮ್ಮ ರಾಜ್ಯವನ್ನು ಚುನಾವಣೆಗೆ ನೂಕಿದ್ದಾರೆ. 

ಆಗ 14, 2018

ಏಕಕಾಲಕ್ಕೆ ಚುನಾವಣೆಗೆ ಬಾಜಪದ ಶಿಫಾರಸ್ಸು! ಯಾಕೆ ಮತ್ತು ಹೇಗೆ?

ಕು.ಸ.ಮಧುಸೂದನ ರಂಗೇನಹಳ್ಳಿ 
ಅಂತೂ ವಿವಿದ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಪಂಡಿತರುಗಳ ವಿರೋಧಗಳ ನಡುವೆಯೂ ದೇಶದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿದಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ತನ್ನ ನಿಲುವಿಗೆ ಬದ್ದವಾಗಿರುವ ಬಾಜಪ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತೆ ಕಾಣುತ್ತಿದೆ. ಇದೀಗ ಅದು ಮುಂದಿನ ವರ್ಷದ ಮೇ ತಿಂಗಳಲ್ಲಿ ನಡೆಯಬಹುದಾದ ಲೋಕಸಭಾ ಚುನಾವಣೆಗಳ ಜೊತೆಗೆ ದೇಶದ ಇತರೆ ಹನ್ನೊಂದು ರಾಜ್ಯಗಳ ವಿದಾನಸಭೆಗಳಿಗೂ ಚುನಾವಣೆ ನಡೆಸುವ ಶಿಫಾರಸ್ಸೊಂದನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳಿಸುವ ಬಗ್ಗೆ ಚಿಂತಿಸುತ್ತಿದೆ. ಈ ಹಿನ್ನೆಲೆಯಲ್ಲಿಯೇ ಬಾಜಪದ ರಾಷ್ಟ್ರೀಯ ಅದ್ಯಕ್ಷರಾದ ಶ್ರೀ ಅಮಿತ್ ಷಾರವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದ್ದಾರೆ. ಇನ್ನು ಕೇಂದ್ರ ಸರಕಾರ ಅಧಿಕೃತವಾಗಿ ಈ ಬಗ್ಗೆ ಚುನಾವಣಾ ಅಯೋಗಕ್ಕೆ ಶಿಫಾರಸ್ಸು ಮಾಡುವ ಸಾದ್ಯತೆ ಹೆಚ್ಚಿದೆ. 

ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಬೇಕಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ್, ಮಿಜೋರಾಂ ರಾಜ್ಯಗಳಲ್ಲಿ ಮುಂದಿನ ಮೆ ತಿಂಗಳವರೆಗು ರಾಜ್ಯಪಾಲರ ಆಡಳಿತವನ್ನು ಹೇರುವುದು. 2019ರ ಅಂತ್ಯಕ್ಕೆ ಅವಧಿ ಮುಗಿಯಲಿರುವ ತಮ್ಮದೇ ಆಡಳಿತ ಇರುವ ಮಹಾರಾಷ್ಟ್ರ,ಹರಿಯಾಣ, ಜಾರ್ಖಂಡ್ ರಾಜ್ಯಗಳ ಸರಕಾರಗಳನ್ನು ಅವಧಿಗೆ ಮುಂಚಿತವಾಗಿಯೇ ವಿದಾನಸಭೆ ವಿಸರ್ಜಿಸಿ ಲೋಕಸಭಾ ಚುನಾವಣೆಯ ಜೊತೆಗೆ ಸದರಿ ರಾಜ್ಯಗಳಿಗೂ ಚುನಾವಣೆ ನಡೆಸುವಂತೆ ಆಯೋಗವನ್ನು ಕೋರುವ ನಿರ್ಣಯವನ್ನು ಅಂಗೀಕರಿಸುವಂತೆ ಮಾಡುವುದು. 2020ಕ್ಕೆ ಚುನಾವಣೆಗೆ ಹೋಗಬೇಕಿರುವ ಬಿಹಾರದಲ್ಲಿ ತಮ್ಮ ಮೈತ್ರಿ ಸರಕಾರದ ನೇತೃತ್ವ ವಹಿಸಿರುವ ಸಂಯುಕ್ತ ಜನತಾದಳದ ಶ್ರೀ ನಿತೀಶ್ ಕುಮಾರ್ ಅವರ ಮನವೊಲಿಸಿ ಬಿಹಾರದ ವಿದಾನಸಭೆಯನ್ನೂ ಅವಧಿಗೆ ಮುನ್ನವೇ ವಿಸರ್ಜಿಸಿ ಲೋಕಸಭೆಯ ಜೊತೆಗೇನೆ ಚುನಾವಣೆಗೆ ಹೋಗುವಂತೆ ಮಾಡುವುದು. ಅಲ್ಲಿಗೆ ತಮ್ಮ ಹಿಡಿತದಲ್ಲಿರುವ ಎಂಟು ರಾಜ್ಯಗಳನ್ನು ಚುನಾವಣೆಗೆ ಸಿದ್ದಪಡಿಸಿದಂತಾಗುತ್ತದೆ. ಇದರ ಜೊತೆಗೆ ಹೇಗಿದ್ದರೂ ಮುಂದಿನ ಮೇ ತಿಂಗಳ ಹೊತ್ತಿಗೆ ಸಹಜವಾಗಿಯೆ ಚುನಾವಣೆ ನಡೆಯಬೇಕಿರುವ ಆಂದ್ರ ಪ್ರದೇಶ, ತೆಲಂಗಾಣ, ಒಡಿಶ್ಸಾ ರಾಜ್ಯಗಳೂ ಸೇರಿಕೊಂಡರೆ ದೇಶದ ಮುವತ್ತು ರಾಜ್ಯಗಳ ಪೈಕಿ ಸುಮಾರು ಹನ್ನೊಂದು ರಾಜ್ಯಗಳು ಲೋಕಸಭೆಯ ಜೊತೆಗೆಯೇ ಚುನಾವಣೆ ಎದುರಿಸುವಂತಾಗುತ್ತದೆ. ಇದು ಸದ್ಯದಲ್ಲಿ ಬಾಜಪ ಮಾಡಲಿರುವ ಶಿಫಾರಸ್ಸಿನ ಹಿಂದಿರುವ ಚಾಣಾಕ್ಷ್ಯ ನಡೆಯಾಗಿದೆ. 

ಆಗ 12, 2018

ದಳದ ಅದ್ಯಕ್ಷರಾಗಿ ಹೆಚ್.ವಿಶ್ವನಾಥ್: ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆಯುತ್ತಿರುವ ಶ್ರೀ ಹೆಚ್.ಡಿ.ದೇವೇಗೌಡರು

ಕು.ಸ.ಮಧುಸೂದನ ರಂಗೇನಹಳ್ಳಿ
ಅಂತೂ ಮಾಜಿ ಸಚಿವರಾದ ಶ್ರೀ ಹೆಚ್. ವಿಶ್ವನಾಥ್ ಅವರನ್ನು ಜಾತ್ಯಾತೀತ ಜನತಾದಳದ ರಾಜ್ಯಾದ್ಯಕ್ಷರನ್ನಾಗಿ ಮಾಡುವ ಮೂಲಕ ಶ್ರೀ ದೇವೇಗೌಡರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿಗಳನ್ನು ಹೊಡೆಯುವ ಚಾಣಾಕ್ಷ್ಯ ತಂತ್ರಗಾರಿಕೆಗೆ ಮೊರೆ ಹೋಗಿದ್ದಾರೆ. ಆದರೆ ಅದು ಅವರದೇ ಪಕ್ಷದ ಮೈತ್ರಿ ಸರಕಾರದ ಮೇಲೆ ಬೀರಬಹುದಾದ ಪ್ರಭಾವಗಳೇನು ಎಂಬುದನ್ನು ನಾವು ಅವಲೋಕಿಸಬೇಕಾಗಿದೆ

ಇದೀಗ ಕರ್ನಾಟಕ ರಾಜ್ಯದ ಜಾತ್ಯಾತೀತ ಜನತಾದಳದ ರಾಜ್ಯಾದ್ಯಕ್ಷರನ್ನಾಗಿ ಶ್ರೀ ಹೆಚ್. ವಿಶ್ವನಾಥವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಆಂತರೀಕ ವಲಯದಲ್ಲಿ ಇದರ ಬಗ್ಗೆ ಯಾವುದೇ ಭಿನ್ನಮತದ ಮಾತುಗಳು ಕೇಳಿಬರುತ್ತಿಲ್ಲವಾದರೂ ಮೈತ್ರಿ ಸರಕಾರದ ಪಾಲುದಾರ ಪಕ್ಷವಾದ ಕಾಂಗ್ರೆಸ್ಸಿನಲ್ಲಿ ಮಾತ್ರ ಈ ನೇಮಕದ ಹಿಂದಿನ ತಂತ್ರಗಾರಿಕೆಯ ಬಗ್ಗೆ ಪಿಸುಮಾತಿನ ಅಸಮಾದಾನಗಳು ಕೇಳಿ ಬರುತ್ತಿವೆ. ಅದರಲ್ಲೂ ಕಾಂಗ್ರೇಸ್ ಒಳಗಿನ ಸಿದ್ದರಾಮಯ್ಯನವರ ಗುಂಪಿಗೆ ಈ ನೇಮಕ ಇರುಸುಮುರುಸು ಉಂಟು ಮಾಡಿರುವುದಂತು ಸುಳ್ಳೇನಲ್ಲ.

ರಾಜಕೀಯದಲ್ಲಿ ಬಹಳಷ್ಟು ವಿದ್ಯಾಮಾನಗಳು ಸಾಮಾನ್ಯ ಜನರ ಊಹೆಗೂ ನಿಲುಕದ ರೀತಿಯಲ್ಲಿ ನಡೆದು ಹೋಗುವುದು ಸಾಮಾನ್ಯ. ಅದರಲ್ಲೂ ಇಂಡಿಯಾದ ಬಹುಪಕ್ಷೀಯ ರಾಜಕಾರಣದ ಚದುರಂಗದಾಟದಲ್ಲಿ ಮಿತ್ರರು ಶತ್ರುಗಳಾಗುವುದು, ಶತ್ರುಗಳು ಮಿತ್ರರಾಗುವುದು ತೀರಾ ಸಹಜವಾದ ಕ್ರಿಯೆಗಳು. ಇದಕ್ಕೆ ಅತ್ಯುತ್ತಮ ಉದಾಹರಣೆಯೆಂದರೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮತ್ತು ಅವರ ಒಂದು ಕಾಲದ ಗೆಳೆಯ ಶ್ರೀ ಹೆಚ್. ವಿಶ್ವನಾಥ್ ಅವರು. 

ಜುಲೈ 26, 2018

ಶಿಷ್ಟಾಚಾರದ ರಾಜಕಾರಣವನ್ನು ಮೀರಿದ ಒಂದು ಅಪ್ಪುಗೆ!

ಕು.ಸ.ಮಧುಸೂದನರಂಗೇನಹಳ್ಳಿ
ಬಹುಶ: ಅದೊಂದು ಸಣ್ಣ ತಪ್ಪನ್ನು ರಾಹುಲರು ಮಾಡದೇ ಹೋಗಿದ್ದರೆ ಮೊನ್ನೆಯ ವಿಸ್ವಾಸ ಮತ ಯಾಚನೆಯ ದಿನದಂದು ರಾಹುಲ್ ಗಾಂದಿಯವರು ನಡೆದುಕೊಂಡ ರೀತಿ ಮತ್ತು ಮಾಡಿದ ಬಾಷಣ ಬಹುಕಾಲ ಇಂಡಿಯಾ ಜನಮಾನಸದಲ್ಲಿ ಅಚ್ಚಳಿಯದೆ ಉಳಿದು ಬಿಡುತ್ತಿತ್ತು.

ವಿಶ್ವಾಸಮತದ ಪರವಾಗಿ ಸುದೀರ್ಘವಾಗಿ ವಸ್ತುನಿಷ್ಠವಾಗಿ(ಬಹುಶ: ಪ್ರಾನ್ಸ್ ಸರಕಾರದ ಹೇಳಿಕೆಯ ಉಲ್ಲೇಖವೊಂದನ್ನು ಹೊರತು ಪಡಿಸಿ) ಯಾವ ಹಿಂಜರಿಕೆಯೂ ಇರದಂತೆ ಮಾತಾಡಿದ ರಾಹುಲರ ಸರಕಾರದ ವಿರುದ್ದದ ಟೀಕೆಗಳಿಗೆ ಅಷ್ಟೇ ವಸ್ತುನಿಷ್ಠವಾಗಿ ಉತ್ತರ ಕೊಡುವುದು ಕಷ್ಟವಾಗುತ್ತಿತ್ತು. ಅದರೆ ತಮ್ಮ ಮಾತು ಮುಗಿಸಿದಾಕ್ಷಣ ಅವರು ನೇರವಾಗಿ ಪ್ರದಾನ ಮಂತ್ರಿಗಳ ಆಸನದ ಬಳಿ ಹೋಗಿ ಪ್ರದಾನಿಯವರನ್ನು ಅಪ್ಪಿಕೊಂಡಿದ್ದು ಸದನವನ್ನಿರಲಿ ಸ್ವತ: ಪ್ರದಾನಿಯವರಿಗೆ ವಿಸ್ಮಯವನ್ನುಂಟು ಮಾಡಿದ್ದು ನಿಜ. ಅಲ್ಲಿಯವರೆಗು ಎಲ್ಲವೂ ಚೆನ್ನಾಗಿಯೇ ಇತ್ತು. ಅದರೆ ಪ್ರದಾನಿಯವರ ಅಪ್ಪುಗೆಯ ನಂತರ ತಮ್ಮ ಸ್ಥಾನಕ್ಕೆ ಮರಳಿದ ರಾಹುಲ್ ಕ್ಯಾಮೆರಾಗಳಿವೆಯೆಂಬುದನ್ನು ಮರೆತವರಂತೆ ತಮ್ಮ ಗೆಳೆಯ ಸಹ ಸಂಸದನತ್ತ ತಿರುಗಿ ಎಡಗಣ್ಣು ಮಿಟುಕಿಸಿದ್ದು ಅಲ್ಲಿಯವರೆಗಿನ ರಾಹುಲರ ವರ್ತನೆಯ ಗಾಂಭೀರ್ಯತೆಯನ್ನು ಮರೆಸಿಬಿಟ್ಟಿತು. ಅವರು ಸಹಜವಾಗಿಯೇ ಕಣ್ಣು ಮಿಟುಕಿಸಿದ್ದರೂ ನೇರ ಪ್ರಸಾರ ನೋಡುತ್ತಿದ್ದ ಜನರಿಗೆ ರಾಹುಲ್ ಪ್ರದಾನಿಯವರನ್ನು ತಬ್ಬಿಕೊಂಡಿದ್ದೇ ಒಂದು ನಾಟಕವೇನೊ ಎನ್ನುವಂತಹ ತಪ್ಪು ಸಂದೇಶ ನೀಡಿಬಿಟ್ಟಿತು. ಮೊದಲೇ ರಾಹುಲರನ್ನು ಸಮಯ ಬಂದಾಗಲೆಲ್ಲ ನೆಗೆಟಿವ್ ಶೇಡ್ ನಲ್ಲಿಯೇ ತೋರಿಸುವ ಪಟ್ಟಭದ್ರ ವಿದ್ಯುನ್ಮಾನ ಮಾಧ್ಯಮಗಳು ಸಹ ಅದನ್ನೆ ಹೈಲೈಟ್ ಮಾಡುತ್ತ ರಾಹುಲರ ಗಂಬೀರವಾದ ಬಾಷಣ ಮತ್ತು ಅಪ್ಪುಗೆಯ ಹಿಂದಿದ್ದ ಮಹತ್ವವನ್ನು ಮತ್ತು ನೈಜತೆಯನ್ನು ಮರೆಮಾಚಿ ಬಿಟ್ಟವು.

ಜುಲೈ 19, 2018

ವರ್ಷಾಂತ್ಯದ ಮೂರು ರಾಜ್ಯಗಳ ಚುನಾವಣೆಗಳ ಮಹತ್ವ.

ಕು.ಸ.ಮಧುಸೂದನ ರಂಗೇನಹಳ್ಳಿ 
2019ರ ಲೋಕಸಭಾ ಚುನಾವಣೆಗಳಿಗೂ ಮೊದಲೇ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮೂರು ರಾಜ್ಯಗಳ ವಿದಾನಸಭಾ ಚುನಾವಣೆಗಳಿಗೆ ಈ ಬಾರಿ ವಿಶೇಷವಾದ ರಾಷ್ಟ್ರೀಯ ಮಹತ್ವವೊಂದು ಬಂದು ಬಿಟ್ಟಿದೆ. ಮದ್ಯಪ್ರದೇಶ, ರಾಜಾಸ್ಥಾನ್ ಮತ್ತು ಮಿಜೋರಾಂ ರಾಜ್ಯಗಳಲ್ಲಿ ನಡೆಯಲಿರುವ ವಿದಾನಸಭಾ ಚುನಾವಣೆಗಳು 2019ರ ಲೋಕಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗಬಹುದೆಂಬುದು ಬಹುತೇಕ ರಾಜಕೀಯ ವೀಕ್ಷಕರ ಅಭಿಪ್ರಾಯವಾಗಿದೆ. 

ಇವುಗಳಲ್ಲಿ ಕೇವಲ ನಲವತ್ತು ಸ್ಥಾನಗಳನ್ನು ಹೊಂದಿರುವ ಈಶಾನ್ಯರಾಜ್ಯ ಮಿಜೋರಾಂ ಬಿಟ್ಟರೆ ಉಳಿದೆರಡು ರಾಜ್ಯಗಳಾದ ಮಧ್ಯಪ್ರದೇಶ(230ಸ್ಥಾನ) ರಾಜಾಸ್ಥಾನ(200ಸ್ಥಾನ)ಗಳಲ್ಲಿ ಬಾಜಪ ಅಧಿಕಾರದಲ್ಲಿದ್ದು 2019ರ ಲೋಕಸಭಾ ಚುನಾವಣೆಗಳಲ್ಲಿ ಸುಮಾರು 54 ಸಂಸತ್ ಸದಸ್ಯರನ್ನು ಆರಿಸಿ ಕಳಿಸಿಕೊಡಲಿವೆ. 2014ರ ಚುನಾವಣೆಯಲ್ಲಿ ರಾಜಾಸ್ಥಾನದ 24 ಸ್ಥಾನಗಳಲ್ಲಿ ಬಾಜಪ 20 ಸ್ಥಾನಗಳನ್ನು ಗೆದ್ದಿದ್ದರೆ, ಮಧ್ಯಪ್ರದೇಶದ 29 ಸ್ಥಾನಗಳ ಪೈಕಿ ಬಾಜಪ 26 ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಬಾಜಪ ಬಹುಮತ ಪಡೆಯುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದವು. ಹಾಗೆ ನೋಡಿದರೆ. 2013ರಲ್ಲಿ ಈ ರಾಜ್ಯಗಳಲ್ಲಿ ನಡೆದ ವಿದಾನಸಭೆಯ ಚುನಾವಣೆಗಳು 2014ರ ಸಾರ್ವತ್ರಿಕ ಚುನಾವಣೆಗಳಿಗೆ ಬಾಜಪಕ್ಕೆ ಪೂರ್ವಸಿದ್ದತೆಯ ಚುನಾವಣೆಗಳಾಗಿದ್ದು, ಶ್ರೀ ನರೇಂದ್ರ ಮೋದಿಯವರ ಜನಪ್ರಿಯತೆಯ ಮೊದಲ ರಿಹರ್ಸಲ್ ಆಗಿತ್ತೆನ್ನಬಹುದು.ಅವತ್ತು ಆ ಎರಡೂ ರಾಜ್ಯಗಳಲ್ಲಿ ಪಡೆದ ಬಾರಿ ಬಹುಮತದ ಆತ್ಮವಿಶ್ವಾಸವೇ ನಂತರದಲ್ಲಿ ಬಾಜಪ ರಾಷ್ಟ್ರದಾದ್ಯಂತ ಬಿರುಸಿನ ಆಕ್ರಮಣಕಾರಿ ಚುನಾವಣಾ ಪ್ರಚಾರ ಕೈಗೊಳ್ಳಲು ಸ್ಪೂರ್ತಿದಾಯಕವಾಗಿತ್ತು. 

ಇದೀಗ ಬಾಜಪ ಈ ಎರಡೂ ರಾಜ್ಯಗಳಲ್ಲಿ ಹೆಚ್ಚುಕಡಿಮೆ ಐದು ವರ್ಷಗಳ ಕಾಲ ನಿರಾತಂಕವಾಗಿ ತನ್ನ ಆಳ್ಬಿಕೆ ನಡೆಸಿದೆ. ಇವತ್ತು ಬಾಜಪ ಮತ್ತು ಕಾಂಗ್ರೆಸ್ ಎಂಬ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಈ ರಾಜ್ಯಗಳ ಚುನಾವಣೆಗಳು ಹಲವು ಕಾರಣಗಳಿಗಿಂದಾಗಿ ಮಹತ್ವಪೂರ್ಣವಾಗಿವೆ. ಯಾಕೆಂದು ಸ್ವಲ್ಪ ನೋಡೋಣ: 

ಜುಲೈ 18, 2018

ಏಕಕಾಲದ ಚುನಾವಣೆಗಳ ಮಾತು: ಹಿಂದಿರುವ ರಾಜಕೀಯ ಕಾರಣಗಳು

ಕು.ಸ. ಮಧುಸೂದನ ರಂಗೇನಹಳ್ಳಿ
ಕು.ಸ.ಮಧುಸೂದನ ರಂಗೇನಹಳ್ಳಿ
ಲೋಕಸಭೆ ಮತ್ತು ವಿದಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯಬೇಕೆಂಬ ಹೇಳಿಕೆ ನೀಡುವ ಮೂಲಕ ಪ್ರದಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರ ಮಟ್ಟದ ಚರ್ಚೆಯೊಂದಕ್ಕೆ ಮತ್ತೊಮ್ಮೆ ನಾಂದಿ ಹಾಡಿದ್ದಾರೆ.

ಯಾವುದೋ ಚುನಾವಣೆಯ ಪ್ರಚಾರಸಭೆಯಲ್ಲಿಯೋ ಇಲ್ಲ ಖಾಸಗಿ ಸಮಾರಂಭಗಳಲ್ಲಿ ಪ್ರದಾನಿಯವರು ಈ ಮಾತನ್ನಾಡಿದ್ದರೆ ನಾವು ನಿರ್ಲಕ್ಷಿಸಬಹುದಿತ್ತು. ಆದರೆ ಮೊನ್ನೆ ನೀತಿ ಆಯೋಗದ ಸಭೆಯ ಸಮಾರೋಪ ಸಮಾರಂಭದಲ್ಲಿ ದೇಶದ ಹಲವಾರು ಮುಖ್ಯಮಂತ್ರಿಗಳ ಹಾಗು ಉನ್ನತ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಈ ಮಾತುಗಳನ್ನು ಆಡಿರುವುದರಿಂದ ಅದಕ್ಕೊಂದು ಮಾನ್ಯತೆ ಬಂದಿದೆ ಜೊತೆಗೆ ರಾಜಕೀಯ ಪಕ್ಷಗಳೂ ಸೇರಿದಂತೆ ಚುನಾವಣಾ ತಜ್ಞರುಗಳು, ವಿವಿಧಕ್ಷೇತ್ರಗಳಪರಿಣಿತರು ಈ ವಿಷಯದ ಮೇಲೆ ಚರ್ಚೆ ನಡೆಸಲೇ ಬೇಕಾದ ಅನಿವಾರ್ಯತೆ ಬಂದೊದಗಿದೆ. 2016ರಲ್ಲಿ ಕೇಂದ್ರ ಚುನಾವಣಾ ಆಯೋಗವು ಕಾನೂನು ಸಚಿವಾಲಯಕ್ಕೆ ಇಂತಹದೊಂದು ಶಿಫಾರಸ್ಸನ್ನು ಮಾಡಿತ್ತುಅಲ್ಲದೆ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಸಹ ಇಂತಹದೊಂದು ಅನಿಸಿಕೆಯನ್ನು ಸಾರ್ವಜನಿಕವಾಗಿಯೇ ಹೇಳಿದ್ದರು. ಆದರೆ ಅದರ ಹಿಂದೆ ಇರಬಹುದಾದ ರಾಜಕೀಯ ಕಾರಣಗಳನ್ನು ಮನಗಂಡವರ್ಯಾರೂ ಅದರ ಬಗ್ಗೆ ಅಷ್ಟೊಂದು ಗಂಬೀರವಾಗೇನು ಚರ್ಚೆ ಮಾಡಲು ಹೋಗಿರಲಿಲ್ಲ..

ಆದರೆ ಇದೀಗ ನೀತಿ ಆಯೋಗದ ಸಭೆಯಲ್ಲಿ ಪ್ರದಾನಮಂತ್ರಿಯವರು ಅಧಿಕೃತವಾಗಿಯೇ ಈ ಮಾತನ್ನು ಹೇಳಿರುವುದರಿಂದ ಅದರ ಹಿಂದೆ ಇರಬಹುದಾದ ರಾಜಕೀಯ ಕಾರಣಗಳನ್ನು ತಿಳಿಯುವುದರ ಜೊತೆಗೆ ಆ ಬಗ್ಗೆ ಚರ್ಚೆ ನಡೆಸಬೇಕಾಗಿರುವುದು ಅತ್ಯಗತ್ಯವಾಗಿದೆ. ಯಾಕೆಂದರೆ ಕಾನೂನು ಸಚಿವಾಲಯವೇ ಹೇಳಿದಂತೆ ಇದಕ್ಕೆ ದೇಶದ ಎಲ್ಲ ರಾಜಕೀಯ ಪಕ್ಷಗಳ ಸಮ್ಮತಿ ಬೇಕಾಗುತ್ತದೆ. ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ನಮ್ಮ ರಾಜಕೀಯ ಪಕ್ಷಗಳು ಮಾತಾಡಿರುವುದು ಇದು ಹೊಸದೇನಲ್ಲ. ಆದರೆ ಇದರ ಹಿಂದಿನ ರಾಜಕೀಯ ಉದ್ದೇಶಗಳನ್ನು ಚರ್ಚಿಸುವ ಮೊದಲು ನಮ್ಮ ಚುನಾವಣೆಗಳು ನಡೆಯುತ್ತಿದ್ದ ಮತ್ತು ನಡೆಯುತ್ತಿರುವ ರೀತಿಗಳನ್ನು ಸ್ವಲ್ಪ ಹಿಂದಕ್ಕೆ ಹೋಗಿ ನೋಡೋಣ:

ಜುಲೈ 14, 2018

ಮೈತ್ರಿಯ ಲಾಭ ನಷ್ಟಗಳು! ಯಾರ್ಯಾರಿಗೆ ಎಷ್ಟೆಷ್ಟು?

ಕು.ಸ.ಮಧುಸೂದನರಂಗೇನಹಳ್ಳಿ
ಮತೀಯವಾದಿ ಬಾಜಪವನ್ನು ಅಧಿಕಾರದಿಂದ ದೂರ ಇಡುವ ಏಕೈಕ ಕಾರಣದಿಂದ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿ ಮೊದಲ ಬಜೆಟ್ಟನ್ನೂ ಮಂಡಿಸಿಯಾಗಿದೆ.104 ಸ್ಥಾನಗಳನ್ನು ಗೆದ್ದೂ ಅದಿಕಾರ ಹಿಡಿಯಲಾಗದ ಹತಾಶೆಯಲ್ಲಿರುವ ಬಾಜಪ ಈ ಮೈತ್ರಿಯನ್ನು ಅಪವಿತ್ರ ಮೈತ್ರಿ ಎಂದು ಕರೆಯುತ್ತಿದೆ. ಹಾಗೆ ನೋಡಿದರೆ ಚುನಾವಣೋತ್ತರ ಮೈತ್ರಿಗಳ ಹಿಂದಿರುವುದು ಕೇವಲ ಅಧಿಕಾರದಾಹ ಮಾತ್ರ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ!. 2006ರಲ್ಲಿ ಕಾಂಗ್ರೆಸ್ ಜೊತೆ ಸೇರಿ ಸರಕಾರ ರಚಿಸಿದ್ದ ಜನತಾದಳ ಮದ್ಯರಾತ್ರಿಯ ರಕ್ತರಹಿತ ಕ್ರಾಂತಿಯಲ್ಲಿ(ಅವತ್ತಿನ ಮಟ್ಟಿಗೆ ಕುಮಾರಸ್ವಾಮಿ ಮತ್ತು ಅವರ ಗೆಳೆಯರ ದೃಷ್ಠಿಯಲ್ಲಿ ಅದು ಕ್ರಾಂತಿಯೇ ಆಗಿತ್ತೆನ್ನಬಹುದು) ಬಾಜಪದ ಜೊತೆ ಸೇರಿ ಅಧಿಕಾರ ಹಿಡಿದಿದ್ದು ಸಹ ಅಪವಿತ್ರ ಮೈತ್ರಿಯ ಫಲವೇ ಆಗಿತ್ತೆಂಬುದನ್ನು ಬಾಜಪದ ನಾಯಕರುಗಳು ಮರೆತಂತಿದೆ. ಶಕ್ತಿ ರಾಜಕಾರಣವೇ ವಿಜೃಂಭಿಸುತ್ತಿರುವ ಇವತ್ತಿನೀ ಕಾಲಘಟ್ಟದಲ್ಲಿ ಪವಿತ್ರ ಎನ್ನುವ ಶಬ್ದ ತನ್ನ ನಿಜಾರ್ಥ ಕಳೆದುಕೊಂಡಾಗಿದೆ. ಕಳೆದ ವರ್ಷ ಗೋವಾದಲ್ಲಿ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಸ್ವತ: ಬಾಜಪವೇ ಇಂತಹ ಹಲವು ಅಪವಿತ್ರ ಮೈತ್ರಿಗಳ ರೂವಾರಿಯಾಗಿದ್ದನ್ನು ಬಾಜಪದ ನಾಯಕರಿಗೆ ನಾವೇನು ನೆನಪು ಮಾಡಿಕೊಡುವ ಅಗತ್ಯವಿಲ್ಲ.

ಇರಲಿ, ಈ ಮೈತ್ರಿ ಇಲ್ಲಿಗೆ ಮುಗಿಯುವುದಿಲ್ಲ, ಬದಲಿಗೆ ಮುಂದಿನ 2019ರ ಲೋಕಸಭಾ ಚುನಾವಣೆಗಳಿಗೂ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೇ ಸರಕಾರದಲ್ಲಿ ಆಂತರಿಕವಾಗಿ ಮತ್ತು ಬಹಿರಂಗವಾಗಿ ಭಿನ್ನಮತೀಯ ಚಟುವಟಿಕೆಗಳು ನಡೆಯ ತೊಡಗಿದ್ದು ಸರಕಾರದ ಸ್ಥಿರತೆಯ ಬಗ್ಗೆಯೇ ಅನುಮಾನ ಹುಟ್ಟಿದೆ. ಸಚಿವ ಸ್ಥಾನ ಹಂಚಿಕೆ, ಖಾತಿಗಳ ಹಂಚಿಕೆ, ನಿಗಮ ಮಂಡಳಿಗಳಿಗೆ ಮಾಡಬೇಕಿರುವ ನೇಮಕಾತಿಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿವೆ. ಬಹುಶ: ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ದಿಗೆ ಕಂಟಕವಾಗಬಹುದಾದಷ್ಟು ಭಿನ್ನಮತೀಯ ಚಟುವಟಿಕೆಗಳು ತಲೆ ಎತ್ತುವುದರಲ್ಲಿ ಸಂಶಯವಿಲ್ಲ.

ಜುಲೈ 10, 2018

ಅರವಿಂದ್ ಕೇಜ್ರೀವಾಲ್ ವರ್ಸಸ್ ನರೇಂದ್ರಮೋದಿ!

ಸಾಂಧರ್ಬಿಕ ಚಿತ್ರ. ಮೂಲ: ಡಿ.ಏನ್.ಎ ಇಂಡಿಯಾ 
ಕು.ಸ.ಮಧುಸೂದನ ರಂಗೇನಹಳ್ಳಿ 
ನ್ಯಾಯಾಲಯಗಳ ಮದ್ಯಪ್ರವೇಶಗಳ ನಂತರವೂ ದೆಹಲಿಯ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಶ್ರೀ ಕೇಜ್ರೀವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ (ಇವರ ಹಿಂದಿರುವುದು ಅದೇ ದೆಹಲಿಯ ಗದ್ದುಗೆ ಹಿಡಿದಿರುವ ಪ್ರದಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಕೇಂದ್ರಸರಕಾರ) ನಡುವಿನ ಜಟಾಪಟಿ ಮುಗಿಯುವಂತೆ ಕಾಣುತ್ತಿಲ್ಲ. 

2015ರಲ್ಲಿ ಬಾರೀ ಬಹುಮತದೊಂದಿಗೆ ದೆಹಲಿಯಲ್ಲಿ ಅಧಿಕಾರ ಹಿಡಿದ ಶ್ರೀ ಅರವಿಂದ್ ಕೇಜ್ರೀವಾಲರು ಒಂದು ದಿನವೂ ನೆಮ್ಮದಿಯಾಗಿ ಸರಕಾರ ನಡೆಸಲು ಅಲ್ಲಿನ ಲೆಫ್ಟಿನಂಟ್ ಗವರ್ನರ್ ಬಿಡಲೇ ಇಲ್ಲ. ಬ್ರಿಟೀಷ್ ಸಂಸದೀಯ ಪ್ರಜಾಸತ್ತೆಯಿಂದ ಎರವಲು ಪಡೆದು ನಾವು ಸ್ಥಾಪಿಸಿಕೊಂಡಿರುವ ಈ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಲ್ಲಿರುವವರು ಸದಾ ಕೇಂದ್ರದಲ್ಲಿ ಅಧಿಕಾರ ಹೊಂದಿರುವ ಪಕ್ಷದ ಆಣತಿಯಂತೆ ನಡೆದುಕೊಳ್ಳುವವರೇ ಆಗಿರುತ್ತಾರೆ. ಶೀಲಾ ದೀಕ್ಷಿತ್ ಅಂತವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ ಇಂತಹ ಸಮಸ್ಯೆಗಳೇನು ಎದುರಾಗಿರಲಿಲ್ಲ. ಅದಕ್ಕೆ ಕಾರಣ ಆಗ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದದ್ದು ಶ್ರೀಮತಿ ಶೀಲಾದೀಕ್ಷೀತರ ಕಾಂಗ್ರೆಸ್ ಪಕ್ಷವೇ. ಹೀಗಾಗಿ ಆಗ ದೆಹಲಿ ಮುಖ್ಯಮಂತ್ರಿಗಳ ಅಧಿಕಾರವನ್ನು ಕೇಂದ್ರಸರಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ನಿಯಂತ್ರಿಸಲು ಹೋಗಿರಲಿಲ್ಲ. ಆ ನಂತರವೂ ಬಾಜಪದ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ದಿವಂಗತ ಶ್ರಿ ಮದನಲಾಲ್ ಖುರಾನರವರುಗಳು ಮುಖ್ಯಮಂತ್ರಿಗಳಾಗಿದ್ದಾಗಲೂ ಮುಖ್ಯಮಂತ್ರಿಗಳ ಅಧಿಕಾರಕ್ಕೆ ಕಡಿವಾಣ ಹಾಕುವ ಕೆಲಸವನ್ನು ಅಂದಿನ ಕಾಂಗ್ರೆಸ್ ಸರಕಾರ ಮಾಡಿರಲಿಲ್ಲ. ತನ್ಮೂಲಕ ಪ್ರಜಾಸತ್ತಾತ್ಮಕವಾಗಿ ದೆಹಲಿಯ ಜನತೆ ಆಯ್ಕೆ ಮಾಡಿದ ಸರಕಾರವೊಂದು ತನಗಿರುವ ಅದಿಕಾರಗಳ ಮಿತಿಯಲ್ಲಿಯೇ ಸುಗಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿತ್ತು.

ಜೂನ್ 4, 2018

ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವ ಪಿಯು ಶಿಕ್ಷಣ!

ಕು.ಸ.ಮಧುಸೂದನ
ಸುದ್ದಿವಾಹಿನಿಯೊಂದರಲ್ಲಿ ಉಪಚುನಾವಣೆಯ ಪಲಿತಾಂಶ ನೋಡುತ್ತಿದ್ದಾಗ ಪ್ರಸಾರವಾದ ಜಾಹೀರಾತೊಂದು ನನ್ನ ಗಮನ ಸೆಳೆಯಿತು. ಅದು ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳ ಜೊತೆ ಸೇರಿ ನಡೆಸುತ್ತಿರುವ ಬೃಹತ್ ಎಜುಕೇಶನ್ ಎಕ್ಸಪೊ ಕುರಿತದ್ದು. ಅದೇ ಸಮಯಕ್ಕೆ ಸರಿಯಾಗಿ ನನ್ನ ಪರಿಚಿತರೊಬ್ಬರು ಒಂದು ಸಮಸ್ಯೆಯೊಂದಿಗೆ ಮನಗೆ ಬಂದರು. ಅವರ ಮಗ ಎಸ್.ಎಸ್.ಎಲ್.ಸಿ.ಯಲ್ಲಿ ಶೇಕಡಾ 74ರಷ್ಟು ಅಂಕ ಪಡೆದಿದ್ದರೂ ಯಾವುದೇ ಒಳ್ಳೆಯ( ಅವರ ದೃಷ್ಠಿಯಲ್ಲಿ ನೂರಕ್ಕೆ ನೂರು ಪಲಿತಾಂಶ ನೀಡುವ) ಕಾಲೇಜುಗಳಲ್ಲಿ ಅವನಿಗೆ ಸೀಟು ಸಿಗಲು ಸಾದ್ಯವಿರಲಿಲ್ಲ. ಪ್ರವೇಶದ ಅರ್ಜಿ ಪಾರಂ ತರಲು ಹೋದಾಗಲೇ ಸಿಬ್ಬಂದಿ ಈ ಬಗ್ಗೆ ಅವರಿಗೆ ಸೂಚನೆ ನೀಡಿ ಮ್ಯಾನೇಜುಮೆಂಟ್ ಕೋಟಾದಲ್ಲಿ ಒಂದೂವರೆ ಲಕ್ಷ ಕಟ್ಟಿದರೆ ಮಾತ್ರ ಸೀಟು ಸಿಗುವುದಾಗಿಯೂ, ಅದಕ್ಕೆ ಮುಂಗಡವಾಗಿ ಟೋಕನ್ ಅಡ್ವಾನ್ಸ್ ನೀಡಿ(ಸೈಟು ವ್ಯಾಪಾರ ಮಾಡುವ ರಿಯಲ್ ಎಸ್ಟೇಟ್ ದಂದೆಯವರಂತೆ) ಸೀಟು ಬುಕ್ ಮಾಡಿ ಎಂದಿದ್ದಾರೆ. ಇವರೊ ನೋಡುವ ಮತ್ತೆ ಬರುವೆ ಅಂತ ಹೇಳಿ ಇನ್ನೂ ಮೂರ್ನಾಲ್ಕು ಕಾಲೇಜುಗಳಲ್ಲಿ ವಿಚಾರಿಸಿದಾಗ ಬಹುತೇಕ ಎಲ್ಲ ಪ್ರತಿಷ್ಠಿತ ಕಾಲೇಜುಗಳಲ್ಲಿಯೂ ಅಂತಹುದೇ ಉತ್ತರ ಸಿಕ್ಕಿದೆ. ಈಗೇನು ಮಾಡಲಿ ಎಂದು ಕೇಳಲು ಎಂದು ನನ್ನ ಮನೆಗೆ ಬಂದಿದ್ದರು. ನಾನು ನಿಮ್ಮ ಮಗನಿಗೆ ಸೈನ್ಸೇ ಆಗಬೇಕೆ ಆರ್ಟ್ಸ್ ಓದಲು ಆಗುವುದಿಲ್ಲವೇ ಎಂದಾಗ ಮುಖ ಕಿವುಚಿ (ನನ್ನನ್ನು ತಮ್ಮ ಹೊಸ ಶತ್ರುವಂತೆನೋಡುತ್ತ) ಏನು ಸಾರ್ ಹೀಗೆ ಹೇಳ್ತೀರಿ. ದುಡ್ಡಿಗಾಗಿ ಅವನ ಭವಿಷ್ಯ ಹಾಳು ಮಾಡೋಕಾಗುತ್ತ? ಅದಕ್ಕೆ ಬೆಲೆ ಎಲ್ಲಿದೆ? ಪಿಯುಸಿ ಆದ ಮೇಲೆ ಬಿಎ, ಎಂಎ ಬಿಟ್ಟರೆ ಬೇರೇನು ಓದೋಕಾಗುತ್ತೆ. ಅವನ್ನು ಓದಿದರೆ ಕೆಲಸ ಎಲ್ಲಿ ಸಿಗುತ್ತೆ? ಅಂತ ನನಗೇನೆ ಹತ್ತಾರು , ಉತ್ತರವಿರದ ಪ್ರಶ್ನೆಗಳನ್ನು ಕೇಳಿದರು. ಸದ್ಯದ ಸ್ಥಿತಿಯಲ್ಲಿ ಅವರ ಮಾತು ನಿಜ ಅನಿಸಿತು. ನನಗೂ ಬೇರೇನು ಹೇಳಲು ತೋಚದೆ ನೋಡುವ ತಡೆಯಿರಿ ಸೀಟುಗಳು ಅಧಿಕೃತವಾಗಿ ಅನೌನ್ಸ್ ಆಗಲಿ. ನಾನೂ ನಿಮ್ಮ ಜೊತೆ ಬರುತ್ತೇನೆ. ಹೇಗಾದರು ಮಾಡಿ ಫೀಸು ಕಡಿಮೆ ಮಾಡಿಸೋಣ ಅಂತ ಹೇಳಿ ಕಳಿಸಿ ನಿಟ್ಟುಸಿರುಬಿಟ್ಟೆ. 
ಕು.ಸ. ಮಧುಸೂದನ್ ರವರ ಮತ್ತಷ್ಟು ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ.

ಮೇ 22, 2018

ಬಹುಮತ! ಒಂದು ಒಳನೋಟ

ಕು.ಸ. ಮಧುಸೂದನ ರಂಗೇನಹಳ್ಳಿ
ನಾವೆಷ್ಟೇ ಮಾತಾಡಿದರೂ ಕೆಲವೊಮ್ಮೆ ನಮ್ಮ ಸಂವಿದಾನದ ಆಶಯಗಳನ್ನು ನಾವು ಈಡೇರಿಸಲೇ ಆಗದಂತಹ ಪರಿಸ್ಥಿತಿ ಬಂದೊದಗಿಬಿಡುತ್ತದೆ. ಪ್ರಜಾಪ್ರಭುತ್ವದ ಅಡಿಗಲ್ಲುಗಳೆಂದು ನಾವು ಕೊಂಡಾಡುವ ಚುನಾವಣೆಗಳು ಮತ್ತು ಅದರಲ್ಲಿ ಬಹುಮತ ಪಡೆಯುವ ಪಕ್ಷಗಳು ಅಧಿಕಾರ ಪಡೆಯಬೇಕೆನ್ನುವ ನಮ್ಮ ಆಶಯಗಳು ಕೆಲವೊಮ್ಮೆ ತಲೆಕೆಳಗಾಗಿ ಬಿಡುತ್ತವೆ. ಮತ್ತೆ ಕಾನೂನಿನ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ಕೆಲವೊಂದು ಹೆಜ್ಜೆಗಳನ್ನಿಟ್ಟು ಪ್ರಜಾಸತ್ತೆಯನ್ನು ಉಳಿಸಿಕೊಳ್ಳಬೇಕಾಗುತ್ತದೆ. ಇದನ್ನು ನಾನು ನಮ್ಮ ಅಸಹಾಯಕತೆಯೆಂದೇ ಬಾವಿಸುತ್ತೇನೆಯೇ ಹೊರತು ಇದು ಸರಿಯೊ-ತಪ್ಪೊ ಎಂದು ತೀರ್ಪು ನೀಡಲು ಹೋಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕಾದರೆ ಮೊನ್ನೆ ಹೊರಬಿದ್ದ ಕರ್ನಾಟಕ ರಾಜ್ಯದ ವಿದಾನಸಭಾ ಚುನಾವಣೆಗಳ ಪಲಿತಾಂಶಗಳನ್ನು ನಂತರ ನಡೆದ ಸರಕಾರ ರಚನೆಯ ಸರ್ಕಸ್ಸುಗಳನ್ನು ಸೂಕ್ಷ್ಮವಾಗಿ ಅದ್ಯಯನ ಮಾಡಬೇಕಾಗುತ್ತದೆ: 

ಪಲಿತಾಂಶ ಹೀಗಿತ್ತು: ಒಟ್ಟು 224 ಕ್ಷೇತ್ರಗಳ ಪೈಕಿ ಚುನಾವಣೆ ನಡೆದು ಪಲಿತಾಂಶ ಹೊರಬಿದ್ದಿದ್ದು 222 ಕ್ಷೇತ್ರಗಳಲ್ಲಿ ಮಾತ್ರ. ಇದರಲ್ಲಿ ಪಕ್ಷಗಳು ಪಡೆದ ಸ್ಥಾನಗಳು ಹೀಗಿವೆ. ಬಾಜಪ-104, ಕಾಂಗ್ರೇಸ್-78, ಜನತಾದಳ-37, ಬಹುಜನ ಪಕ್ಷ-01, ಪಕ್ಷೇತರ-02. ಸರಕಾರ ರಚಿಸಲು ಬೇಕಿದ್ದ ಸಂಖ್ಯೆ- 112. 

ಮೇ 3, 2018

ನಿರೀಕ್ಷೆ ಮತ್ತು ವಾಸ್ತವ......

ಸಾಂದರ್ಭಿಕ ಚಿತ್ರ 
ಡಾ. ಅಶೋಕ್. ಕೆ. ಆರ್. ಪೇಪರ್ರಿನವನು ಪತ್ರಿಕೆಯನ್ನು ಕಾಂಪೌಂಡಿನೊಳಗೆ ಎಸೆದ ಸದ್ದಿಗೆ ಎಚ್ಚರವಾಯಿತು. ಕಣ್ಣುಜ್ಜಿಕೊಂಡು ಬಾಗಿಲು ತೆರೆದು ಪತ್ರಿಕೆ ತೆಗೆದುಕೊಂಡು ಒಳಬಂದು ಓದಲಾರಂಭಿಸಿದೆ. ಚುನಾವಣೆಯ ಸಮಯದಲ್ಲಿ ರಾಜಕಾರಣಿಗಳ ಮಾತುಗಳಲ್ಲದೆ ಬೇರೆ ಸುದ್ದಿಗಳನ್ನು ಕಾಣಲು ಸಾಧ್ಯವೇ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾತುಗಳೇ ಇವತ್ತಿನ ಪ್ರಮುಖ ಸುದ್ದಿ:

ಏಪ್ರಿ 5, 2018

ಪ್ರಜಾಪ್ರಭುತ್ವದ ಜಯದ ಹಿಂದೆ ಪ್ರಜೆಯ ಸೋಲು!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಪ್ರಜಾಪ್ರಭುತ್ವ ಜಯಸಾದಿಸಿದೆ!

ಪ್ರತಿ ಚುನಾವಣೆಗಳ ಪಲಿತಾಂಶಗಳು ಹೊರಬಿದ್ದಾಗಲು ನಮ್ಮ ಮಾಧ್ಯಮಗಳ ಮೊದಲಪುಟದ ತಲೆಬರಹವೇ ಇದಾಗಿರುವುದನ್ನು ನಾವು ನೋಡುತ್ತಾ ಬಂದಿದ್ದೇವೆ. ಮತ್ತು ನಮ್ಮ ಖಾಸಗಿ ಮಾತುಗಳ ನಡುವೆಯೂ ಇಂಡಿಯಾದ ಪ್ರಜಾಪ್ರಭುತ್ವದ ನಿಜವಾದ ಗೆಲುವಿರುವುದೇ ಶಾಂತಿಯುತ ಚುನಾವಣಾ ಪ್ರಕ್ರಿಯೆಯಲ್ಲಿ ಎಂದು ಬಡಾಯಿ ಕೊಚ್ಚಿಕೊಳ್ಳುವುದು ಸರ್ವೇಸಾಮಾನ್ಯವಾಗಿದೆ,

ಹಾಗಿದ್ದರೆ ನಿಜಕ್ಕೂ ನಮ್ಮ ಪ್ರಜಾಪ್ರಭುತ್ವ ಗೆಲ್ಲುತ್ತಿದೆಯಾ? ಶಾಂತಿಯುತ ಮತದಾನದ ಮಾನದಂಡವೊಂದರಿಂದಲೇ ನಮ್ಮ ಪ್ರಜಾಪ್ರಭುತ್ವದ ಯಶಸ್ಸನ್ನುಅಲೆಯಬಹುದಾ? ಚುನಾವಣಾ ಪ್ರಕ್ರಿಯೆಯ ಉಳಿದ ಯಾವ ವಿಷಯಗಳಿಗು ಇಲ್ಲಿ ಮಹತ್ವವೇ ಇಲ್ಲವಾ? ಇದು ನನ್ನನ್ನು ಕಾಡುತ್ತಿರುವ ಪ್ರಶ್ನೆ. ಇದಕ್ಕೆ ಉತ್ತರ ಕಂಡುಕೊಳ್ಳಲು ಈ ಬಾರಿಯ ಚುನಾವಣಾ ಪ್ರಕ್ರಿಯೆಗಳು ಆರಂಭವಾದ ಹಂತದಿಂದಲೇ ನೋಡೋಣ:

ಮಾರ್ಚ್ 21, 2018

ಕಾಂಗ್ರೆಸ್ಸನ್ನು ಹೊರಗಿಟ್ಟು ಹುಟ್ಟುಹಾಕುವ ಸಂಯುಕ್ತರಂಗದ ಯಶಸ್ಸು ಮರೀಚಿಕೆಯಷ್ಟೆ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಕಾಂಗ್ರೇಸ್ಸೇತರ ತೃತೀಯ ರಂಗ ಅಥವಾ ಸಂಯುಕ್ತರಂಗವೊಂದರ ಸ್ಥಾಪನೆಯ ಮಾತು ಮತ್ತೆ ಕೇಳಿ ಬರತೊಡಗಿದೆ. ಕೇಂದ್ರದ ಮಲತಾಯಿ ಧೋರಣೆಯ ವಿರುದ್ದ ಸಿಡಿದೆದ್ದಿರುವ ತೆಲಂಗಾಣ ಮುಖ್ಯಮಂತ್ರಿ ಶ್ರೀ ಕೆ.ಚಂದ್ರೇಖರ್ರಾವ್ ಪ್ರಸ್ತಾಪಿಸಿರುವ ಕಾಂಗ್ರೇಸ್ಸೇತರ ತೃತೀಯರಂಗವೊಂದರ ಬಗ್ಗೆ ಈಗಾಗಲೇ ರಾಷ್ಟ್ರ ರಾಜಕಾರಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾಬ್ಯಾನಜರ್ಿಯಂತವರು ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನುಳಿದ ಹಲವಾರು ಪ್ರಾದೆಶಿಕಪಕ್ಷಗಳು ಸಹ ಈ ಪ್ರಯತ್ನಕ್ಕೆ ಕೈಜೋಡಿಸಬಹುದೆಂಬ ನಂಬಿಕೆಯಲ್ಲಿ ರಾವ್ ಓಡಾಡುತ್ತಿದ್ದಾರೆ. ಕನರ್ಾಟಕದ ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅದ್ಯಕ್ಷರಾದ ದೇವೇಗೌಡರು ಸಹ ರಾವ್ ಯತ್ನವನ್ನು ಸ್ವಾಗತಿಸಿರುವುದು ವಿಶೇಷವಾಗಿದೆ. ಅದರಲ್ಲೂ ಉತ್ತರಪ್ರದೇಶ ಮತ್ತು ಬಿಹಾರದ ಉಪಚುನಾವಣೆಗಳಲ್ಲಿ ಬಂದ ಬಾಜಪ ವಿರೋಧ ಪಲಿತಾಂಶಗಳ ನಂತರ ಈ ವಾದಕ್ಕೆ ಮತ್ತಷ್ಟು ಪುಷ್ಠಿ ಬಂದಂತೆ ಕಾಣುತ್ತಿದೆ