ಆಗ 14, 2015

ಚೌಕಟ್ಟಿಲ್ಲದ ಉಪ್ಪಿ2 ರುಚಿಯಾಗಿದೆಯಾ?

uppi2 review
Ashok K R
ಉಪೇಂದ್ರ ನಿರ್ದೇಶನದ ಸಿನಿಮಾಗಳೆಂದರೆ ಒಂದಷ್ಟು ವಿಚಿತ್ರ ವೇಷಭೂಷಣಗಳು, ಮೊದಲಿನಿಂದ ಖಳರಂತೆ ಚಿತ್ರಿತವಾಗುವ ನಾಯಕಿ, ಹಸಿ ಬಿಸಿ ದೃಶ್ಯಗಳು, ಚಿತ್ರವಿಚಿತ್ರವಾಗಿ ಆಡುವ ನಾಯಕ, ಈ ಎಲ್ಲದರ ಮಧ್ಯೆ ಅಲ್ಲೊಂಚೂರು ಇಲ್ಲೊಂಚೂರು ಎಂಬಂತೆ ಫಿಲಾಸಫಿ! ಗಲ್ಲಾಪೆಟ್ಟಿಗೆಯಲ್ಲಿ ಕೆಲವೊಂದು ಗೆದ್ದಿವೆ, ಕೆಲವೊಂದು ಸಾಧಾರಣ ಯಶಸ್ಸು ಕಂಡಿವೆ, ಕೆಲವೊಂದು ಸೋತಿವೆ; ಆದರೆ ನಿರ್ದೇಶಕನಾಗಿ ಉಪೇಂದ್ರ ಪ್ರತಿ ಸಿನಿಮಾದಲ್ಲೂ ಗೆದ್ದಿದ್ದಾರೆ. ಕಥೆ ಮಾಮೂಲಿದ್ದರೂ ಚಿತ್ರಕಥೆಯಲ್ಲಿ ಪ್ರೇಕ್ಷಕನನ್ನು ತುದಿಗಾಲಲ್ಲಿ ನಿಲ್ಲಿಸುವ ಕಲೆ ಉಪೇಂದ್ರನಿಗಿದೆ. ಆ ಕಲೆ ಇನ್ನೂ ಜೀವಂತವಾಗಿದೆಯಾ ಎಂಬ ಕುತೂಹಲದೊಂದಿಗೆ Uppi2 ಚಿತ್ರ ನೋಡಲು ಪ್ರವೇಶಿಸಿದರೆ ಚೂರೇ ಚೂರು ನಿರಾಸೆಯಾಗುತ್ತದೆ, ಉಪೇಂದ್ರನೆಂಬ ನಿರ್ದೇಶಕನನ್ನು ಮೊದಲಿನಿಂದಲೂ ಮೆಚ್ಚಿದವರು ಮತ್ತಷ್ಟು ಮೆಚ್ಚುತ್ತಾರೆ, ಮೊದಲಿನಿಂದಲೂ ಮೆಚ್ಚದವರು ಅದನ್ನೇ ಮುಂದುವರೆಸುತ್ತಾರೆ!

ಹದಿನೈದು ವರುಷಗಳ ಹಿಂದೆ ತೆರೆಕಂಡಿದ್ದ ‘ಉಪೇಂದ್ರ’ ಚಿತ್ರದ ಮುಂದುವರಿದ ಭಾಗವಿದು. ನಾಯಕನನ್ನೂ ಸೇರಿ ಅಲ್ಲಿನವೇ ಅನೇಕ ಪಾತ್ರಗಳು ಇಲ್ಲಿ ಕಾಣಿಸಿಕೊಳ್ಳುತ್ತವೆ. ‘ಉಪೇಂದ್ರ’ ಅಷ್ಟೇ ಅಲ್ಲದೆ ‘ಶ್’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಬ್ಯಾಂಕ್ ಜನಾರ್ಧನ್ ಮತ್ತು ಬಿರಾದಾರ್ ಇಲ್ಲೂ ಪೋಲೀಸರಾಗಿ ಕಾಣಿಸಿಕೊಂಡಿದ್ದಾರೆ. ‘ಉಪೇಂದ್ರ’ ಚಿತ್ರದಲ್ಲಿ ‘ನಾನು’ ಎಂಬ ಪಾತ್ರದ ಸುತ್ತ ಕಥೆ ಹೆಣೆಯಲಾಗಿತ್ತು, ಆ ‘ನಾನು’ಗೆ ರತಿ, ಸ್ವಾತಿ, ಕೀರ್ತಿ ಎಂಬ ಮೂವರು ನಾಯಕಿಯರ ಮೇಲೆ ಕಣ್ಣು, ಅವನಿಗೆ ಮೂವರೂ ಬೇಕು. ರತಿ, ಸ್ವಾತಿ, ಕೀರ್ತಿ ಪ್ರತಿ ಗಂಡಸು ಆಸೆ ಪಡುವ ಮೂರು ಗುಣಗಳೆಂಬಂತೆ ಚಿತ್ರಿಸಲಾಗಿತ್ತು. ಕೊನೆಗೆ ಮೂವರನ್ನೂ ತೊರೆದ ‘ನಾನು’ ಎಲ್ಲವನ್ನೂ ಬಿಟ್ಟು ಹೊರಟುಬಿಡುತ್ತಾನೆ. ಅಲ್ಲಿಂದ ಹೊರಟ ‘ನಾನು’ ಇಲ್ಲಿ ‘ನೀನಾಗಿ’ ಬದಲಾಗಿದ್ದಾನೆ! ಉಪೇಂದ್ರ ‘ನಾನು ಯಾರು?’ ಎಂದು ಪ್ರಶ್ನಿಸಿದರೆ ಉಪ್ಪಿ2 ‘ನೀನು ಯಾರು?’ ಎಂದು ಪ್ರಶ್ನಿಸುತ್ತದೆ.

ಫಿಲಾಸಫಿ ಹೇಳೋದಕ್ಕೆ ಉಪೇಂದ್ರ ಆಯ್ದುಕೊಳ್ಳುವುದು ಗದ್ದಲದ ಹಾದಿ. ‘ಉಪೇಂದ್ರ’ ಚಿತ್ರದಲ್ಲಿ ಹೆಚ್ಚಾಗಿದ್ದ ಗದ್ದಲ, ದ್ವಂದಾರ್ಥ ‘ಉಪ್ಪಿ2’ ಚಿತ್ರದಲ್ಲಿ ಕಡಿಮೆಯಾಗಿದೆ. ಉಪೇಂದ್ರನಿಗೂ ಹದಿನೈದು ವರ್ಷ ವಯಸ್ಸಾಯಿತಲ್ಲವೇ?! ಉಪ್ಪಿ2 ಚಿತ್ರ ಮೂರು ಕಾಲಗಳ ಬಗೆಗಿನ ಜಿಜ್ಞಾಸೆಯ ಚಿತ್ರ. ಭೂತ – ವರ್ತಮಾನ – ಭವಿಷ್ಯ ಕಾಲದಲ್ಲಿ ಯಾವುದಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂಬುದರ ಬಗೆಗಿನ ಚಿತ್ರ. ಯೋಚನೆ ಮಾಡುವುದೇ ತಪ್ಪು ಎಂದು ಹೇಳುತ್ತಲೇ ನೋಡುಗರನ್ನು ಯೋಚನೆಗೆ ಹಚ್ಚುವ ಚಿತ್ರ! ಫಿಲಾಸಫಿಗಳನ್ನೆಲ್ಲಾ ವಾಚ್ಯವಾಗಿ ಹೇಳುವ ಪ್ರಯತ್ನ ಕೆಲವೆಡೆ ಯಶಸ್ವಿಯಾಗಿದೆ, ಕೆಲವೆಡೆ ಹಾಸ್ಯಾಸ್ಪದವಾಗಿದೆ. ‘ನಾನು’ ಹುಡುಗಿಯ ಹಿಂದೆ ಓಡಿದರೆ ‘ನೀನು’ವನ್ನು ಹುಡುಗಿಯೇ ಅಟ್ಟಿಸಿಕೊಂಡು ಬರುತ್ತಾಳೆ. ಯಾವುದರ ಬಗ್ಗೆಯೂ ಯೋಚನೆಯೇ ಮಾಡದ ‘ನೀನು’ ಮುಗ್ದನಾ ದಡ್ಡನಾ ಎಂಬ ಪ್ರಶ್ನೆಗೆ ‘ಯೋಚ್ನೆ ಮಾಡಲ್ಲ ಅಂದೆ ತಲೆ ಇಲ್ಲ ಅನ್ನಲಿಲ್ಲ’ ಎಂಬ ಉತ್ತರ ಚಿತ್ರದಲ್ಲಿಯೇ ಇದೆ. ಯೋಚನೆ ಮಾಡದ ಕಾರಣಕ್ಕೆ ನಾಯಕನಿಗೆ ನೆಮ್ಮದಿ, ಸಂಪತ್ತು, ‘ಖುಷಿ’ ಸಿಗುತ್ತದೆ. ಯಾವುದಕ್ಕೂ ಯೋಚನೆ ಮಾಡದೆ, ಭಯ ಪಡದೆ, ಮಾಡಿದ ಕೆಲಸಕ್ಕೆ ಹಣ ಪಡೆಯದೆ ಇದ್ದುಬಿಡುವ ‘ನೀನು’ ನಿಜವಾಗಿಯೂ ಬದಲಾದ ‘ನಾನು’ನಾ ಅಥವಾ ನಾಟಕವಾ ಎಂಬ ಗೊಂದಲಗಳೊಂದಿಗೆ ಮೊದಲರ್ಧ ಮುಗಿಯುತ್ತದೆ. 

ಎರಡನೇ ಭಾಗದಲ್ಲಿ ‘ಉಪೇಂದ್ರ’ ಚಿತ್ರದ ‘ನಾನು’, ಉಪ್ಪಿ2 ಚಿತ್ರದ ‘ನೀನು’ ಮತ್ತು ಇವೆರಡೂ ಚಿತ್ರದಲ್ಲಿಲ್ಲದ ‘ಅವನು’ ಕಾಣಿಸಿಕೊಳ್ಳುತ್ತಾರೆ. ‘ನಾನು’ ನೀನಾಗಿ ನಾಟಕವಾಡುತ್ತಿದ್ದಾನೆ ಎಂಬ ಸಂಗತಿಯಿಂದ ಖುಷಿ ವಿಚಲಿತಳಾಗುತ್ತಾಳೆ. ಈ ನಾನು, ನೀನು, ಅವನು ನಿಜವಾಗಿ ಒಬ್ಬನೇನಾ ಅಥವಾ ಮೂರು ಮೂರು ಮಂದಿಯಾ ಎಂಬ ಗೊಂದಲ ಚಿತ್ರ ಮುಗಿದ ಮೇಲೂ (ಅಸಲಿಗೆ ಚಿತ್ರ ಮುಗಿಯುವುದೇ ಇಲ್ಲ!) ಉಳಿದುಬಿಡುತ್ತದೆ. ‘ನಾನು’ ಎಂಬ ಭೂತಕಾಲ, ‘ನೀನು’ ಎಂಬ ವರ್ತಮಾನ, ‘ಅವನು’ ಎಂಬ ಕಲ್ಪನಾತ್ಮಕ ಭವಿಷ್ಯದ ತಂತ್ರ ಉಪಯೋಗಿಸಿದ್ದಾರೆ ಉಪೇಂದ್ರ. ಭೂತಕಾಲದ ‘ನಾನು’ ನೆನಪಿನಲ್ಲಿರುವ ಯಾವ ಪಾತ್ರಧಾರಿಗಳೂ ಚಿತ್ರದಲ್ಲಿ ಸಂತಸದಿಂದಿರುವುದಿಲ್ಲ. ‘ಅವನು’ ಎಂಬ ಕಲ್ಪನೆಯನ್ನು ನಂಬಿಕೊಂಡವರು ಗೊಂದಲದಲ್ಲಿರುತ್ತಾರೆ. ವರ್ತಮಾನದ ‘ನೀನು’ ಜೊತೆ ಇರುವ ನಾಯಕಿ ಮಾತ್ರ ‘ಖುಷಿ’ಯಾಗಿರುತ್ತಾಳೆ! 

ಭೂತವನ್ನು ಮರೆಯಿರಿ ಎಂದ್ಹೇಳುವ ಉಪ್ಪಿ2 ಚಿತ್ರದಲ್ಲಿ ಉಪೇಂದ್ರ ನಿರ್ದೇಶನದ ಶ್, ಓಂ ಚಿತ್ರಗಳ ನೆನಪುಗಳು ಬರುವುದು ಬೇಕಿರಲಿಲ್ಲ! ಉಪೇಂದ್ರನ ವೇಷಭೂಷಣ ಕೂಡ ಅವರ ಅಭಿನಯದ ರೀಮೇಕ್ ಚಿತ್ರ ‘ಬುದ್ಧಿವಂತ’ನನ್ನು ನೆನಪಿಸುತ್ತದೆ. ಉಪೇಂದ್ರ ಎಂಬ ನಿರ್ದೇಶಕನ ಬತ್ತಳಿಕೆ ನಿಧಾನಕ್ಕೆ ಖಾಲಿಯಾಗುತ್ತಿರುವ ಸೂಚನೆಯಾ? ಚಿತ್ರದ ಶುರುವಿನಲ್ಲಿ ಹೊಸ ಹೊಸ ಕೋನಗಳಿಂದ ಗಮನ ಸೆಳೆಯುವ ಛಾಯಾಗ್ರಹಣ ನಂತರದಲ್ಲಿ ಮಾಮೂಲಿಯಾಗಿದೆ. ಹಾಡುಗಳನ್ನು ಕೇಳಬಹುದೇ ಹೊರತು ಮತ್ತೆ ಮತ್ತೆ ಗುನುಗುವಂತಿಲ್ಲ. ‘ಎಲ್ಲರ ಕಾಲೆಳೀತದೆ ಕಾಲ’ ಹಾಡು ಚಿತ್ರಕ್ಕೆ ಬೇಕಾಗಿಯೇ ಇರಲಿಲ್ಲ. ತನ್ನ ಶಕ್ತಿಯ ಬಗ್ಗೆ ಸ್ವತಃ ಅರಿವಿಲ್ಲದೇ ಹೊಸಬರನ್ನು ಹಳಬರನ್ನು ಆಡಿಕೊಳ್ಳುವ ಹಾಡು ಉಪ್ಪಿ2 ಚಿತ್ರಕ್ಕೆ ಬೇಕಿರಲಿಲ್ಲ. ಆ ಇಡೀ ಹಾಡನ್ನೇ ತೆಗೆದುಹಾಕಿದರೂ ಚಿತ್ರಕ್ಕೇನು ಅಡ್ಡಪರಿಣಾಮವಾಗುತ್ತಿರಲಿಲ್ಲ. ಹಿಮಾಲಯದ ಚಳಿಯಲ್ಲಿ ತುಂಡುಡುಗೆ ಧರಿಸುವ ಅಸಂಬದ್ಧಗಳೂ ಚಿತ್ರದಲ್ಲಿವೆ! ನಟನೆಯ ವಿಚಾರಕ್ಕೆ ಬಂದರೆ ಉಪೇಂದ್ರ, ಅಕೀವಾ ಕ್ರಿಷ್ಟೀನಾ, ಪಾರುಲ್, ಟೆನ್ನಿಸ್ ಕೃಷ್ಣ, ಶೋಭರಾಜ್, ನಾಸಿರ್ ಮತ್ತಿತರರು ಪಾತ್ರಕ್ಕೆ ಎಷ್ಟು ಬೇಕೋ ಅಷ್ಟು ಚೆನ್ನಾಗಿ ಮಾಡಿದ್ದಾರೆ. ಚಿತ್ರಕಥೆಯ ಗೊಂದಲಗಳು ಉಳಿದೆಲ್ಲಾ ವಿಷಯವನ್ನು ಮಬ್ಬು ಮಾಡಿಸಿಬಿಡುತ್ತದೆ ಎನ್ನುವುದು ಸತ್ಯ. ‘ಫಿಲ್ಮ್ ಚೆನ್ನಾಗಿದೆ ಏನು ಅರ್ಥಾನೇ ಆಗ್ಲಿಲ್ಲ’ ‘ಏನೋ ಹುಳಾ ಇದೆ ಅರ್ಥ ಆಗ್ತಿಲ್ಲ’ ಎನ್ನುವ ಮಾತುಗಳು ಚಿತ್ರ ನೋಡಿದವರದು! ಇಂಥದ್ದೇ ಒಂದು ಕಥೆಯಿದೆ, ತತ್ವವಿದೆ, ಸಿದ್ಧಾಂತವಿದೆ ಎಂದು ಹೇಳಲಾಗದ ಸಿನಿಮಾವಿದು. ಸಿನಿಮಾದಲ್ಲೇ ಹೇಳಿದಂತೆ ‘ಯೋಚ್ನೆ ಮಾಡ್ಬೇಡ’!

ಈ ಮೇಲಿನ ವಿಮರ್ಶೆಯನ್ನು ಓದಿದ ನಂತರ ನಿಮ್ಮಲ್ಲಿ ಗೊಂದಲ ಮೂಡಿದರೆ ಅದಕ್ಕೆ ‘ನೀನು’ ಕಾರಣವೇ ಹೊರತು ನಾನಲ್ಲ!

Uppi2, kannada film directed by Upendra revolves around Past, Present and Future ideas of a person.

ಆಗ 10, 2015

ಅಹಂ ನಾನೇಶ್ವರ!

ಒಂದಷ್ಟು ಗಿಮಿಕ್ಕು, ಬಹಳಷ್ಟು ವಿಚಿತ್ರ ವಿಕ್ಷಿಪ್ತತೆಗೆ ಹೆಸರಾಗಿರೋ ಉಪೇಂದ್ರ ನಿರ್ದೇಶನದ ಹೊಸ ಚಿತ್ರ ಉಪ್ಪಿ 2 ಟೀಸರ್ ಸದ್ದು ಮಾಡುತ್ತಿದೆ. ಮೈಮೇಲೆಲ್ಲಾ ಬೂದಿ ಬಳಿದುಕೊಂಡು ಉಲ್ಟಾ ನಿಂತಿರೋ ಉಪೇಂದ್ರ ತಮ್ಮ ಉಲ್ಟುಲ್ಟಾ ಸ್ಟೈಲುಗಳಿಂದಲೇ ಮತ್ತೆ ಜನರ ಮನ ಗೆಲ್ಲುತ್ತಾರಾ? ಆಗಸ್ಟ್ ಹದಿನಾಲ್ಕಕ್ಕೆ ಗೊತ್ತಾಗುತ್ತದೆ. ಉಪೇಂದ್ರನೆಂಬ ನಿರ್ದೇಶಕ ಗೆಲ್ಲಬೇಕು.

ಜುಲೈ 2, 2015

ನಾಳೆಯಿಂದ 'ಆರಂಭ'

ಬೆಂಗಳೂರಿಗೆ ಬಂದ ಹೊಸದರಲ್ಲಿ ಒಂದು ಕನ್ನಡ ಸಿನಿಮಾ ನೋಡಿ ರೂಮಿಗೆ ಬಂದಾಗ ಅಲ್ಲೇ ಇದ್ದ ಸಿನಿ ತಂತ್ರಜ್ಞ ಗೆಳೆಯನೊಬ್ಬ 'ಹೆಂಗಿದೆ ಸಿನಿಮಾ?' ಎಂದು ಕೇಳಿದ. 'ಚೆನ್ನಾಗಿಲ್ಲ ಗುರು. ತಲೆ ನೋವ್ ಬಂತು' ಎಂದೆ. 'ಎಷ್ಟು ಕಷ್ಟ ಪಟ್ಟು ಮಾಡಿರ್ತಾರೆ ಗೊತ್ತಾ ಒಂದು ಫಿಲಮ್ ನಾ? ಸುಮ್ನೆ ಒಂದೇ ಮಾತಲ್ಲಿ ಚೆನ್ನಾಗಿಲ್ಲ ಅಂದ್ಬುಟ್ರೆ' ಕೋಪ ಮಾಡ್ಕಂಡ. 'ಗುರುವೇ, ಎಂಬಿಬಿಎಸ್ ಓದೋರೆಲ್ಲ ಕಷ್ಟಪಟ್ಟೇ ಪಾಸಾಗಿರ್ತಾರೆ. ಹಂಗಂದ್ಬುಟ್ಟು ಟ್ರೀಟ್ ಮೆಂಟ್ ಸರಿಯಾಗಿ ಕೊಡದೇ ಇದ್ರೆ ಬಯ್ಯದೆ ಇರ್ತೀವಾ? ಹಂಗೆ ಫಿಲಮ್ಮು. ಎಷ್ಟಾದ್ರೂ ಕಷ್ಟಪಟ್ಟಿರ್ಲಿ ಕೊನೆಗೆ ಒಂದು ವರ್ಡ್ ರೆಸ್ಪಾನ್ಸೇ ಸಿಗೋದು' ಎಂದಾಗ ಗೆಳೆಯ ಸುಮ್ಮನಾದ. 
ಈ ಘಟನೆ ನೆನಪಾಗಿದ್ದು ಇವತ್ತು ಪಾಲಿಮರ್ ಕನ್ನಡದಲ್ಲಿ 'ಸಿನಿಮಾ ಚೆನ್ನಾಗಿತ್ತಾ ಹತ್ತು ಜನಕ್ಕೆ ಹೇಳಿ, ಚೆನ್ನಾಗಿಲ್ವಾ ಫಿಲಮ್ಮಿಗೆ ಹೋಗೋರನ್ನೂ ವಾಪಸ್ ಕಳಿಸಿ' ಎಂದು ಕಡ್ಡಿತುಂಡುಮಾಡಿದಂತೆ ಗೆಳೆಯ ಅಭಿ ಹನಕೆರೆ ಹೇಳಿದಾಗ.
ಚರ್ಚೆಗೆ ಕನಸಿಗೆ ಅಪರೂಪಕ್ಕೊಮ್ಮೆ ಸಣ್ಣ ಪುಟ್ಟ ಜಗಳಕ್ಕೆ S Abhi Hanakere ಜೊತೆಯಾಗಿ ವರುಷಗಳೇ ಕಳೆದಿವೆ. ಹೊಸಬರನ್ನೇ ಇಟ್ಟುಕೊಂಡು ತರಬೇತಿ ಕೊಟ್ಟು 'ಆರಂಭ' ಸಿನಿಮಾವನ್ನು ಮಾಡಲು ಪಟ್ಟ ಕಷ್ಟವನ್ನು ನೋಡಿದ್ದೇನೆ. 
ಪ್ರೀತಿ, ಜಾತಿ, ಜಾತಿ ಪ್ರೀತಿಯ ಅಭಿಯ ಕನಸಿನ ಒಂದು ಭಾಗವಾದ ಆರಂಭ ನಾಳೆ ತೆರೆಮೇಲೆ ಮೂಡಲಿದೆ.
ಅಭಿ ಕಷ್ಟಪಟ್ಟ ಕಾರಣಕ್ಕೆ ಸಿನಿಮಾ ನೋಡೋದು ಬೇಡ! ಹೊಸತನದ ಸಿನಿಮಾ ಎಂದು ನೋಡಿ, ಅವನ ಮಾತಿನಲ್ಲೇ ಹೇಳೋದಾದರೆ ಸಿನಿಮಾ ಚೆನ್ನಾಗಿದ್ದರೆ ಹತ್ತು ಜನಕ್ಕೆ ನೋಡಲು ಹೇಳಿ.
ಸಿನಿಮಾದ ಬಗ್ಗೆ ನಾಳೆ ಮಾತನಾಡೋಣ. 

ಜೂನ್ 27, 2015

ಜುಲೈ ಮೂರರಿಂದ 'ಅಭಿ'ಯ ಆರಂಭ!

ಹೊಸಬರ ತಂಡ ಕಟ್ಟಿ ಸತತ ಎರಡು ವರುಷ ಚಿತ್ರದ ನಟ ನಟಿಯರಿಗೆ ತರಬೇತಿ ನೀಡಿ ನೈಜತೆಗೆ ಒತ್ತು ನೀಡಿ ಚಿತ್ರೀಕರಿಸಿರುವ ಆರಂಭ ಚಿತ್ರ ಜುಲೈ ಮೂರರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಸೆನ್ಸಾರಿನ ಬಾಹು ಬಂಧನದಿಂದ ಹೊರಬರಲು ಕೊಂಚ ತಡವಾಯಿತು ಎಂಬುದು ಚಿತ್ರತಂಡದ ಮಾತು! 
'ಹಾರ್ಟ್ ಟಚಿಂಗ್' ಟೀಸರ್, ಕಣಗಾಲಿನಲ್ಲಿ ಪುಟ್ಟಣ್ಣರ ನೆನಪಿಗೊಂದು ಪ್ರದರ್ಶನ, 'ಇದುವರೆಗೆ ಇದ್ದಿಲ್ಲ' ಎಂಬ ನವೀನ ಮಾದರಿಯ ಹಾಡಿನ ಮೂಲಕ ಸದ್ದು - ಸುದ್ದಿ ಮಾಡಿದ್ದ 'ಆರಂಭ' ನಿನ್ನೆ 'ಹೆಣ್ಣಿಂದ ಹಾಳಾದ ಕುಮಾರ'ನ ಟ್ರೇಲರ್ ಬಿಡುಗಡೆ ಮಾಡಿದೆ. ಜಾತಿ, ಮಹಿಳಾ ದೌರ್ಜನ್ಯದ ಎಳೆಗಳು ಟ್ರೇಲರ್ರಿನಲ್ಲಿ ಕಾಣಿಸುತ್ತಿದೆ. 

ಗೆಳೆಯ ಎಸ್.ಅಭಿ ಹನಕೆರೆ ನಿರ್ದೇಶನದ ಚಿತ್ರವನ್ನು ನಿರ್ಮಿಸಿರುವುದು ಗಣೇಶ್ ವಿ ನಾಗೇನಹಳ್ಳಿ. ಗುರಕಿರಣ್ ಸಂಗೀತವಿರುವ ಚಿತ್ರದ ಪ್ರಮುಖ ಪಾತ್ರದಲ್ಲಿ ಮಿಥುನ್ ಪ್ರಕಾಶ್, ಅಭಿರಾಮಿ, ರಸಗವಳ ನಾರಾಯಣ, ಅಭಿರಾಜು, ಬಳ್ಳಾರಿ ರಾಘವೇಂದ್ರ, ನಂದೀಶ್, ರಾಜೇಗೌಡ, ಚಂದ್ರು, ಹಾಸಿನಿ, ಪ್ರಥ್ವಿ ಮತ್ತಿತರಿದ್ದಾರೆ.

ಜೂನ್ 11, 2015

ಜಾಗತೀಕರಣದ ಮುಖವಾಡಗಳನ್ನು ಕಳಚುವ “ಕಾಕ ಮೊಟ್ಟೈ”

Dr Ashok K R
ಇದು ಮಕ್ಕಳು ಮುಖ್ಯ ಭೂಮಿಕೆಯಲ್ಲಿರುವ ದೊಡ್ಡವರ ಚಿತ್ರ. ಜೈಲು ಸೇರಿರುವ ಅಪ್ಪ, ಅಪ್ಪನನ್ನು ಜೈಲಿನಿಂದ ಹೊರತರುವುದಕ್ಕಾಗಿಯೇ ದುಡ್ಡು ಕೂಡಿಡುವ ಅಮ್ಮ. ಹಣದ ಕೊರತೆಯಿಂದ ಇರುವ ಇಬ್ಬರು ಮಕ್ಕಳನ್ನು ಶಾಲೆಯಿಂದ ಬಿಡಿಸಿ ರೈಲ್ವೆ ಹಳಿಯ ಮೇಲೆ ಬಿದ್ದ ಕಲ್ಲಿದ್ದಿಲನ್ನು ಸಂಗ್ರಹಿಸುವ ಕೆಲಸಕ್ಕೆ ಹಚ್ಚುತ್ತಾಳೆ. ದೊಡ್ಡದೊಂದು ಮೇಲ್ಸೇತುವೆ ಪಕ್ಕವಿರುವ ಕೊಳಗೇರಿಯಲ್ಲಿ ವಾಸ. ಮನೆಯಲ್ಲೊಬ್ಬಳು ವಯಸ್ಸಾದ ಅಜ್ಜಿ, ತಿನ್ನೋದು, ಮಲಗೋದು ಬಿಟ್ಟರೆ ನನ್ನಿಂದ ಮತ್ತೇನು ಆಗುತ್ತಿಲ್ಲವಲ್ಲ ಎಂದು ಕೊರಗುವ ಅಜ್ಜಿ. ಆ ಎರಡು ಮಕ್ಕಳೇ ಚಿತ್ರದ ಜೀವಾಳ. ಕಾಗೆಗೊಂದಷ್ಟು ಅನ್ನ ಹಾಕಿ, ಅವುಗಳು ಅನ್ನ ತಿನ್ನಲು ಬಂದಾಗ ಅವುಗಳ ಗೂಡಿಗೆ ಕನ್ನ ಹಾಕಿ ಮೊಟ್ಟೆ ಕದಿಯುತ್ತಾರೆ; ಹಸಿ ಹಸಿ ಕುಡಿಯುತ್ತಾರೆ. ಅವರ ನಿಜ ಹೆಸರೇ ಮರೆತುಹೋಗಿ ಸಣ್ಣವ ಚಿಕ್ಕ ಕಾಕಮೊಟ್ಟೈಯಾದರೆ (ಕಾಗೆಮೊಟ್ಟೆ) ದೊಡ್ಡವ ದೊಡ್ಡ ಕಾಕಮೊಟ್ಟೈಯಾಗುತ್ತಾನೆ! ‘ಕೋಳಿ ಮೊಟ್ಟೆ ಖರೀದಿಸುವ ಶಕ್ತಿಯಿಲ್ಲ, ಕಾಗೆ ಮೊಟ್ಟೆಯಾದರೇನು? ಅದೂ ಪಕ್ಷೀನೆ ಅಲ್ಲವೇ’ ಎನ್ನುವ ಅಜ್ಜಿ ಕೆಲವೊಂದು ಆಹಾರ ಶ್ರೇಷ್ಠ ಕೆಲವೊಂದು ನಿಕೃಷ್ಠ ಎಂದು ತೀರ್ಮಾನಿಸಿಬಿಡುವ ಜನರಿಗೆ ಉತ್ತರವಾಗುತ್ತಾಳೆ.

ಕಾಗೆ ಗೂಡಿರುವ ಮರವನ್ನು ವಾಣಿಜ್ಯ ಸಂಕೀರ್ಣ ಕಟ್ಟುವ ಉದ್ದೇಶದಿಂದ ಕೆಡವುದರೊಂದಿಗೆ ಚಿತ್ರ ಮಗ್ಗಲು ಬದಲಿಸುತ್ತದೆ. ಇದೇ ಸಮಯಕ್ಕೆ ನ್ಯಾಯ ಬೆಲೆ ಅಂಗಡಿಯಿಂದ ಎಲ್ಲರಿಗೂ ಉಚಿತ ಟಿ.ವಿ ಹಂಚಲಾಗುತ್ತದೆ. ಅಮ್ಮ ಟಿ.ವಿ ತರುತ್ತಾಳೆ, ಮತ್ತೊಂದು ಟಿ.ವಿ ಅಜ್ಜಿಯ ಕೋಟಾದಲ್ಲಿ ಬಂದು ಬಿದ್ದಿರುತ್ತದೆ! ‘ಅಕ್ಕಿ ಸಿಗಲಿಲ್ಲವೇನಮ್ಮ’ ಎಂಬ ಪ್ರಶ್ನೆಗೆ ‘ಸ್ಟಾಕ್ ಇಲ್ಲವಂತೆ’ ಎಂಬ ಉತ್ತರ ಸಿಗುತ್ತದೆ! ನಮ್ಮ ಪ್ರಾಮುಖ್ಯತೆಗಳೇ ಬದಲಾಗಿಬಿಡುತ್ತಿರುವುದನ್ನು ಒಂದು ನಿಮಿಷದ ಚಿಕ್ಕ ದೃಶ್ಯದ ಮುಖಾಂತರ ನಿರ್ದೇಶಕ ಮಣಿಕಂಠನ್ ತಿಳಿಸಿಕೊಡುತ್ತಾರೆ. ಚಿತ್ರದುದ್ದಕ್ಕೂ ಇಂತಹ ದೃಶ್ಯಗಳು ಹೇರಳವಾಗಿವೆ. ನಿರ್ದೇಶಕನ ಸೂಕ್ಷ್ಮತೆ ತೋರ್ಪಡಿಸುವ ದೃಶ್ಯಗಳಿವು. ಮತ್ತೊಂದು ದೃಶ್ಯದಲ್ಲಿ ಕುಡಿಯುವ ನೀರಿನ ಸಲುವಾಗಿ ಬಿಂದಿಗೆ ಎತ್ತಿಕೊಂಡು ಹೊರಹೋಗುತ್ತಾಳೆ. ಬಿಂದಿಗೆಯಲ್ಲಿ ಚೂರೇ ಚೂರು ನೀರಿರುತ್ತದೆ. ನೀರು ಅಧಿಕವಿರುವ ನಮ್ಮ ಮನೆಗಳಲ್ಲಾದರೆ ಬಿಂದಿಗೆಯಲ್ಲುಳಿದ ಚೂರು ನೀರನ್ನು ಚೆಲ್ಲಿ ಬಿಡುತ್ತೇವೆ. ನೀರು ಕೂಡ ಲಕ್ಷುರಿಯಾದ ಕೊಳಗೇರಿಯಲ್ಲಿ ಆ ಚುಟುಕು ನೀರನ್ನು ಕೈ ತೊಳೆಯಲುಪಯೋಗಿಸುವ ಬಕೇಟಿಗೆ ಹಾಕುತ್ತಾಳೆ. ಚಿತ್ರಕಥೆ ಮಾಡಲು ಶ್ರಮ ಪಡದಿದ್ದರೆ ಇಂತಹ ಸೂಕ್ಷ್ಮಗಳನ್ನು ತೋರಿಸಲಾದೀತೆ?

ಕಾಗೆ ಗೂಡಿದ್ದ ಮರದ ಜಾಗದಲ್ಲಿ ಪಿಜ್ಜಾ ಅಂಗಡಿಯೊಂದು ಪ್ರಾರಂಭವಾಗುತ್ತದೆ. ಖ್ಯಾತ ಚಿತ್ರನಟ ಸಿಂಬು ಅದನ್ನು ಉದ್ಘಾಟಿಸುತ್ತಾನೆ. ಬಾಯಿ ಚಪ್ಪರಿಸಿ ತಿನ್ನುತ್ತಾನೆ. ಕೊಳಗೇರಿಯ ಮಕ್ಕಳಿದನ್ನು ಗಮನಿಸುತ್ತಾರೆ, ಖುಷಿ ಪಡುತ್ತಾರೆ ಮತ್ತು ಹೊರಟುಹೋಗುತ್ತಾರೆ. ಆದರೆ ನಮ್ಮ ನಾಯಕರಿಗೆ ಅದನ್ನು ತಿನ್ನಲೇಬೇಕೆಂಬ ಮನಸ್ಸಾಗುತ್ತದೆ. ಮುನ್ನೂರು ರುಪಾಯಿ ಬೆಲೆಯ ಪಿಜ್ಜಾ ಖರೀದಿಸಬೇಕೆಂಬುದೇ ಅವರಿಬ್ಬರ ಗುರಿಯಾಗಿಬಿಡುತ್ತದೆ. ಚಿತ್ರದಲ್ಲಿ ಪಿಜ್ಜಾ ನೋಡಿಕೊಂಡು ದೋಸೆ ಪಿಜ್ಜಾ ತಯಾರಿಸುತ್ತಾಳೆ ಅಜ್ಜಿ, ಮಕ್ಕಳಿಗೆ ರುಚಿಸುವುದಿಲ್ಲ. ಹೆಚ್ಚೆಚ್ಚು ಕಲ್ಲಿದ್ದಲ್ಲು ಸಿಗುವ ಜಾಗವನ್ನು ಗ್ಯಾಂಗ್ ಮನ್ ‘ಫ್ರೂಟ್ ಜ್ಯೂಸ್’ ತೋರಿಸುತ್ತಾನೆ. ಅಂತೂ ಇಂತೂ ಮುನ್ನೂರು ರುಪಾಯಿ ಕಲೆ ಹಾಕಿ ಅಂಗಡಿಗೆ ಹೋದರೆ ಕೊಳಗೇರಿಯ ಮಕ್ಕಳನ್ನು ಸೆಕ್ಯುರಿಟಿ ಒಳಗೇ ಸೇರಿಸುವುದಿಲ್ಲ. ಒಳ್ಳೆ ಬಟ್ಟೆ ಹಾಕಿಕೊಂಡರೆ ಬಿಡುತ್ತಾರೆ ಎಂಬ ಫ್ರೂಟ್ ಜ್ಯೂಸ್ ಮಾತು ಕೇಳಿ ಬಟ್ಟೆ ಖರೀದಿಸಲು ದುಡಿಯತೊಡಗುತ್ತಾರೆ. ಜಾಣ್ಮೆಯಿಂದ ಹೊಸ ಬಟ್ಟೆ ಖರೀದಿಸಿ ಅಂಗಡಿಯ ಬಳಿ ಹೋದರೆ ಮತ್ತೆ ಸೆಕ್ಯುರಿಟಿ ತಡೆಯುತ್ತಾನೆ. ಅಂಗಡಿಯ ಮ್ಯಾನೇಜರ್ ಬಂದು ದೊಡ್ಡ ಕಾಗೆಮೊಟ್ಟೆಗೆ ರಪ್ಪಂತ ಕೆನ್ನೆಗೆ ಹೊಡೆಯುತ್ತಾನೆ. ಕೊಳಗೇರಿಯ ಇತರೆ ಹುಡುಗರು ಅದನ್ನು ವೀಡಿಯೋ ಮಾಡಿಕೊಂಡುಬಿಡುತ್ತಾರೆ. ಇದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತದೆ. ಸುದ್ದಿ ಪ್ರತಿಭಟನೆಯ ಸದ್ದಾಗುವ ಮೊದಲು ಪಿಜ್ಜಾ ಅಂಗಡಿಯವರೇ ಹುಡುಗರಿಬ್ಬರನ್ನೂ ಸತ್ಕರಿಸಿ ಪಿಜ್ಜಾ ತಿನ್ನಿಸುತ್ತಾರೆ!

ಇಡೀ ಚಿತ್ರದಲ್ಲಿ ಜಾಗತೀಕರಣದ ವಿವಿಧ ಮುಖವಾಡಗಳ ದರುಶನವಾಗುತ್ತದೆ. ಪ್ರಕೃತಿಯನ್ನು ಬದಿಗೆ ಸರಿಸಿ ಪ್ರತಿಯೊಂದನ್ನು ವ್ಯಾವಹಾರಿಕ ಮಾಡಿಬಿಡುವುದು ಮೊದಲ ಹೆಜ್ಜೆ. ನಮಗೆ ಬೇಡವಾದ ವಸ್ತುವನ್ನು ಜಗಮಗಿಸುವ ಬೆಳಕಿನಲ್ಲಿಟ್ಟು, ಖ್ಯಾತಿ ಪಡೆದ ವ್ಯಕ್ತಿಗಳಿಂದ ಅದಕ್ಕೆ ಪ್ರಚಾರ ಗಿಟ್ಟಿಸಿ (ಇತ್ತೀಚಿನ ಮ್ಯಾಗಿ ಮತ್ತದರ ರೂಪದರ್ಶಿಗಳ ವಿಚಾರ ನಿಮಗೆ ನೆನಪಿರಬೇಕು) ನಮ್ಮನ್ನು ಪ್ರಚೋದನೆಗೆ ಒಳಪಡಿಸುವುದು ಎರಡನೆಯ ಹೆಜ್ಜೆ. ಆ ಪ್ರಚೋದನೆ ಯಾವ ಮಟ್ಟಕ್ಕಿರುತ್ತದೆ ಎಂದರೆ ನಮ್ಮಿಡೀ ಜೀವನದ ಗುರಿಯೇ ಆ ಬೇಡದ ವಸ್ತುವನ್ನು ಪಡೆಯುವುದಾಗಿ ಬಿಡುತ್ತದೆ, ಹೆಚ್ಚೆಚ್ಚು ಹಣ ದುಡಿಯುವುದಕ್ಕೂ ಅದೇ ಕಾರಣವಾಗುತ್ತದೆ. ಕೊಳಗೇರಿಯ ಇತರ ಮಕ್ಕಳು ಆಟವಾಡುತ್ತಾ ತರಲೆ ಮಾಡುತ್ತಾ ಕಾಲ ಕಳೆದರೆ ಪಿಜ್ಜಾದ ಆಸೆಗೆ ಬಿದ್ದವರು ಹಣದ ಹಿಂದೆ ಬೀಳುತ್ತಾರೆ. ತಮ್ಮ ಬಾಲ್ಯತನವನ್ನೇ ಕಳೆದುಕೊಳ್ಳುತ್ತಾರೆ. ಸಂಬಂಧಗಳ ಮೌಲ್ಯಗಳನ್ನು ಕಳೆದುಕೊಳ್ಳುತ್ತಾರೆ. ಜೈಲಿನಲ್ಲಿರುವ ಅಪ್ಪ ಬರದೇ ಇದ್ದರೆ ಅಷ್ಟೇ ಹೋಯ್ತು, ನಮಗೆ ಪಿಜ್ಜಾ ಮುಖ್ಯ ಎಂಬ ಮಾತನ್ನಾಡುತ್ತಾರೆ! ಕಾರು, ಬಂಗಲೆ, ಸೈಟು, ಆಸ್ತಿಯೇ ಗುರಿಯಾಗಿಸಿಕೊಂಡ ದೊಡ್ಡವರು ಮಾಡುತ್ತಿರುವುದು ಇದನ್ನೇ ಅಲ್ಲವೇ? ನೀವು ಒಳಗೆ ಹೇಗಾದರೂ ಇರಿ Outlook ಮುಖ್ಯ ಎನ್ನುವುದು ಮೂರನೆಯ ಹೆಜ್ಜೆ. Outlook ಬದಲಿಸಿಕೊಂಡು ಹೋದಾಗ ಜಾಗತೀಕರಣ ಶ್ರೀಮಂತರ ಪರವೋ ಬಡವರ ಪರವೋ ಎಂಬುದು ವೇದ್ಯವಾಗುತ್ತದೆ. ಮತ್ತಿಲ್ಲಿ ಬಡವರನ್ನು ತಡೆಯುವುದು ಶ್ರೀಮಂತರಲ್ಲ, ಬದಲಾಗಿ ಶ್ರೀಮಂತರೇ ಸಂಬಳ ಕೊಟ್ಟು ಕೆಲಸಕ್ಕಿಟ್ಟುಕೊಂಡಿರುವ ಬಡವರೇ ಬಡವರನ್ನು ತಡೆಯುತ್ತಾರೆ, ವಿರೋಧಿಸುತ್ತಾರೆ. ಈ ಚಿತ್ರದಲ್ಲಿ ಸೆಕ್ಯುರಿಟಿಯವನು ಮಕ್ಕಳನ್ನು ತಡೆದಂತೆ, ಮಧ್ಯಮ ವರ್ಗದ ಮ್ಯಾನೇಜರ್ ಕಪಾಳಕ್ಕೆ ಬಿಗಿದಂತೆ. ಸಿರಿವಂತ ಒಳ್ಳೆಯವನಾಗಿಯೇ ಉಳಿದುಬಿಡುತ್ತಾನೆ! ಜನರು ತಮ್ಮ ವಿರುದ್ಧ ಪ್ರತಿಭಟಿಸುತ್ತಾರೆ ಎಂದರಿವಾದ ತಕ್ಷಣ ನಯವಂತಿಕೆಯ ಮುಖವಾಡವನ್ನು ದಿಢೀರನೆ ಧರಿಸಿ ಮತ್ತೆ ಒಳ್ಳೆಯವರಾಗಿಬಿಡುವುದು ಜಾಗತೀಕರಣದ ವಕ್ತಾರರ ಜಾಣ್ಮೆ! ಇಡೀ ಚಿತ್ರ ಜಾಗತೀಕರಣದ ಪರವಾಗಿ, ಪಿಜ್ಜಾದ ಪರವಾಗಿ, ಕೊಳ್ಳುಬಾಕ ಸಂಸ್ಕೃತಿಯ ಪರವಾಗಿ ಉಳಿದುಬಿಡುವ ಅಪಾಯವನ್ನು ಕೊನೆಯದೊಂದು ದೃಶ್ಯ ದೂರಮಾಡಿದೆ! ಅದನ್ನು ಚಿತ್ರದಲ್ಲಿಯೇ ನೋಡಿ!

ಏಪ್ರಿ 30, 2015

ಬೋರಾಗದ ಹಾಡು ಪಡಿಮೂಡಿದ ಬಗೆ!

hadi hadi kannada song
ಆರಂಭ ಚಿತ್ರದ ನಿರ್ದೇಶಕರಾದ ಎಸ್ ಅಭಿ ಹನಕೆರೆಯವ್ರು, ತಮ್ಮ ಚಿತ್ರದ ಹಾಡುಗಳು ಹುಟ್ಟಿದ ಬಗ್ಗೆ ಈ ಮೊದಲೇ ಹಂಚಿಕೊಂಡಿದ್ದರು. ಅವರ ಚಿತ್ರದ ಇನ್ನೊಂದು ಸೂಪರ್ ಹಿಟ್ ಆದ ಹಾಡಿನ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಲಾಂಗು, ಮಚ್ಚು ಹಿಡಿದುಕೊಂಡು ಓಡಾಡಿದ್ದನ್ನ, ಅನಾಥ ಮಕ್ಕಳ ಸೇವೆ ಮಾಡೋದನ್ನ, ರೇಪ್ ನಡೆಯುವಾಗ, ದಿಡೀರನೆ ಬಂದು ಕಾಪಾಡುವ, ಇನ್ನೂ ಏನೇನೋ ರೀತಿಯಲ್ಲಿ ತೋರಿಸೋದು ಹೀರೋಯಿಸಂ ಅಲ್ಲ. ಎಂತಹ ಕಷ್ಟ ಪರಿಸ್ಥಿತಿಯಲ್ಲೂ, ಪಾಸಿಟಿವ್ ಅಗಿರೋದನ್ನ ತೋರಿಸೋದು ಹೀರೋಯಿಸಂ! ಎಂಬ ಸಂದರ್ಭಕ್ಕೆ ಹಾಡೊಂದು ಬೇಕು, ಅನ್ನೋದನ್ನ ಗುರುಕಿರಣ್ ಹತ್ತಿರ ಚರ್ಚಿಸಿದಾಗ, ಅವರು ಯಾವತ್ತೋ, ಇವರ ಮುಂದೆ ಗುನುಗಿದ್ದ ಹಾಡಿನ ಪಲ್ಲವಿ "ಹಾಡಿ ಹಾಡಿ ರೇಡಿಯೋಗೆ ಬೋರು ಆಗೋದಿಲ್ಲ, ಕೂಡಿ ಕೂಡಿ ಪ್ರೇಮಿಗಳಿಗೆ ಸುಸ್ತೆ ಆಗೋದಿಲ್ಲ" ಪಾಸಿಟಿವ್ ಲೈನ್ಸ್ ಚೆನ್ನಾಗಿವೆ. ಇದನ್ನು ಕಂಪೋಸ್ ಮಾಡಿ, ಚೆನ್ನಾಗಿ ಇರುತ್ತೆ, ಎಂದು ತಮ್ಮ ಇಂಗಿತ ವ್ಯಕ್ತಪಡಿಸಿದ ಅಭಿಯವ್ರಿಗೆ, "ಅದು ಯಾವತ್ತೋ ಮಾಡಿದ್ದ ಹಾಡಿನ ಸಾಲು, ಯಾರಿಗೂ ಇಷ್ಟ ಆಗಿರ್ಲಿಲ್ಲ, ಹಾಗಾಗಿ ಅದನ್ನ ಡೆವೆಲಪ್ ಮಾಡಿರ್ಲಿಲ್ಲ, ಅದರಲ್ಲೂ ನಾನು ಇದುವರೆಗೂ, ಲವ್ ಹಾಡಿನ ಬಗ್ಗೆ, ಪಾಸಿಟಿವ್ ಆಗಿ ಬರೆದಿಲ್ಲ, ಅದು ಬೇಡ" ಎಂದರು. 
sandeep dance master
ನಮ್ಮ ಆರಂಭ ಚಿತ್ರದಲ್ಲಿ, ನಿಮ್ಮ ಬಿನ್ನವಾದ ಆ ಹಾಡು ಕೂಡ ಆರಂಭ ಆಗಲಿ, ಈ ಹಾಡನ್ನು ನೀವೇ ಬರೆದು, ಹಾಡಬೇಕು ಎಂದು ಪಟ್ಟು ಹಿಡಿದು ಕುಳಿತಾಗ, ಗುರುಕಿರಣ್ ಹಾಡನ್ನು ಬರೆದು, ಹಾಡಿದರು. ಗುರುಕಿರಣ್ ಮೊದಲ ಬಾರಿಗೆ ಬರೆದಂತಹ ಲವ್ ಹಾಡು ಇದಾಗಿದೆ.
ಈ ಹಾಡನ್ನು, ತುಂಬಾ ಸ್ಟೈಲಿಶ್ ಆಗಿ, ಮತ್ತು ಕಲರ್ ಫುಲ್ ಆಗಿ ಚಿತ್ರೀಕರಿಸುವ ದೃಷ್ಟಿಯಿಂದ, ಈ ಹಾಡಿನ ಡ್ಯಾನ್ಸ್ ಮಾಸ್ಟರ್ ಸಂದೀಪ್ ರವರನ್ನ ಬೇಟಿ ಮಾಡಿ, ಸಹ ನೃತ್ಯಗಾರ್ತಿಯರ ಆಯ್ಕೆ ಮಾಡಿ, ಅವ್ರಿಗೆಲ್ಲ ಪ್ರ್ಯಾಕ್ಟೀಸ್ ಮಾಡಿಸಿ, ಶೂಟಿಂಗ್ ಸ್ಪಾಟ್ಗೆ ಕರೆದೊಯ್ದುರು. ಇದಕ್ಕೆ ಬೇಕಾದ ರೇಡಿಯೋ ಪ್ರತಿಕೃತಿಗಳನ್ನು ಆರೋಗ್ಯ ಸ್ವಾಮಿಯವ್ರು ಅದ್ಬುತವಾಗಿ ಮಾಡಿಕೊಟ್ಟಿದ್ದರು. ಹಾಡಿನಲ್ಲಿ ಎಲ್ಲ ನೃತ್ಯಗಾರ್ತಿಯರ ಕೈಯಲ್ಲಿ ಎಲ್‌ಸಿಡಿ ಟೀವೀ ಹಿಡಿಸಿ, ಅದರಲ್ಲಿ ನಾಯಕಿಯ ಚಿತ್ರ ಬರುವಂತೆ ಚಿತ್ರಿಸುವ ಉಪಾಯ ಹೊಳೆದಿದ್ದ ಅಭಿಯವ್ರಿಗೆ, ನಿರ್ಮಾಪಕರ ಸಹಕಾರ ಸಿಗಲಿಲ್ಲ. ಆ ಬೇಸರದಲ್ಲಿ ಇದ್ದಾಗ, ಅದಕ್ಕೆ ತಕ್ಷಣ ಅವ್ರಿಗೆ ಹೊಳೆದಿದ್ದು, ಬಿಸಿಲಲ್ಲೂ ಹೊಳೆಯುತ್ತಿದ್ದ, ನೃತ್ಯಗಾರ್ತಿಯರ ಬಿಳಿ ಸೊಂಟದ ಮೇಲೇನೇ, ಟಿವಿ ಚಾನೆಲ್ಲಿನ ಲೋಗೋ ಬಿಡಿಸಿ ತೋರಿಸೋದು ಅಂತಾ!
aarogya swamy
ಅದಕ್ಕೆ ನೃತ್ಯಗಾರ್ತಿಯರು ಒಪ್ಪಲಿಲ್ಲ "ಚಿತ್ರ ಮಾಡುವುದು ನಟ ನಟಿಯರಿಗೆ ಸಂಭಾವನೆ ಕೊಡೋಕೆ ಅಲ್ಲ, ಜನಗಳಿಗೆ ಮನರಂಜನೆ ನೀಡುವುದಕ್ಕೆ, ಜೊತೆಗೆ ಸಾಧ್ಯವಾದರೆ ಒಂದಷ್ಟು ಒಳ್ಳೇ ಸಂದೇಶ ತಲುಪಿಸೋದಿಕ್ಕೆ" ಎಂದು ಅಭಿಯವ್ರು ಹೇಳಿ ಒಪ್ಪಿಸಿ, ಆರೋಗ್ಯ ಸ್ವಾಮಿ ಎಲ್ಲರ ಸೊಂಟದ ಮೇಲೆ ಟಿವಿ ಚ್ಯಾನೆಲ್ ಗಳ ಲೋಗೋ ಚಿತ್ತಾರ ಬಿಡಿಸಿದರು, ನಂತರ ಎಲ್ಲರೂ ಸಂತೋಷವಾಗಿ ಹಾಡಿನ ಚಿತ್ರೀಕರಣಕ್ಕೆ ಸಹಕರಿಸಿದರು ಹಾಡಿನ ಕೊನೆಯಲ್ಲಿ ಬಾಟಲ್ ಹೊಡೆಯುವ ದೃಶ್ಯದಲ್ಲಿ ಕೆಲ ನೃತ್ಯಗಾರ್ತಿಯರಿಗೆ ಗಾಯಗಳು ಸಹ ಆಯಿತಂತೆ.
ಕೊನೆಗೆ ಹಾಡಿನ ವೀಡಿಯೋ ನೋಡಿ ಸಣ್ಣ ಪುಟ್ಟ ಲೋಪ ದೋಷಗಳಿದ್ದರೂ ತುಂಬಾ ಖುಷಿಪಟ್ಟ ಅಭಿಯವರು ತಮ್ಮ ಅನುಭವ ಮೆಲುಕು ಹಾಕಿದ್ದಾರೆ.
ಗುರುಕಿರಣ್ ತಮ್ಮ ಶೋಗಳಲ್ಲಿ ಈ ಹಾಡನ್ನು ಹಾಡುವುದರ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ಕೊಡುತ್ತಾ ಬಂದಿದ್ದಾರೆ. ಹೊಸಬರೊಂದಿಗೆ ಗುರುಕಿರಣ್ ಹೆಚ್ಚು ಉತ್ಸಾಹದಿಂದ, ಒಂಚೂರು ಬೇಧವಿಲ್ಲದೆ, ಸಂಗೀತ ಸಂಯೋಜನೆ ಮಾಡಿ ಕೊಟ್ಟಿದ್ದಕ್ಕೆ ತುಂಬಾ ಖುಷಿಯಿದೆ ಎಂದು ಅಭಿ ಹೇಳುತ್ತಾರೆ.
"ಹೊಸಬರೊಂದಿಗೆ ನಾನು ಹೊಸಬನಾಗಿ ಕೆಲಸ ಮಾಡಲು ಇಚ್ಚಿಸುವುದರಿಂದ, ಹೊಸತನ ತುಂಬಾ ಖುಷಿ ಕೊಡುತ್ತೆ"ಅಂತಾ ಗುರುಕಿರಣ್ ಸಹ ಕಣ್ಣು ಮಿಟುಕಿಸಿ ಹೇಳುತ್ತಾರೆ..!
ಹಾಡಿನ ವೀಡಿಯೋ ನೋಡಿದ ಯಾರೋ ಪತ್ರಿಕಾ ಸಿಬ್ಬಂದಿ,"ಏನ್ರೀ ಟೀವೀ ಚ್ಯಾನೆಲ್ನವರನ್ನ, ಸೊಂಟದ ಮೇಲೆ ಕೂರಿಸಿದಿರಾ?" ಎಂದು ಛೇಡಿಸಿದ್ದನ್ನ ನೆನಪು ಮಾಡಿಕೊಂಡ್ರು. ಹಾಡನ್ನು ನೋಡಿದವ್ರೆಲ್ಲ ತಮ್ಮ ಮನೆಯಲ್ಲಿದ್ದ ಹಳೆಯ ರೇಡಿಯೋಗಳನ್ನು ನೆನಪು ಮಾಡಿಕೊಳ್ಳೋದು ಗ್ಯಾರೆಂಟೀ....ನೀವು ಸಾಂಗ್ ನೋಡಿಲ್ಲ ಅಂದ್ರೆ, ಒಂದ್ಸಲ ನೋಡ್ಕೊಂಡು ಅಭಿಪ್ರಾಯ ತಿಳಿಸಿ. ಚಿತ್ರ ಡಿ.ಟಿ.ಎಸ್ ಮುಗಿಸಿ ಸೆನ್ಸಾರ್ ಬೋರ್ಡಿನ ಮುಂದೆ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ.
ಹಾಡು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ

ಏಪ್ರಿ 14, 2015

ಲವ್ ಮೂಡಿತಣ್ಣ!.....ಹೀಗೆ ಮೂಡಿತಣ್ಣ!

iduvarege iddilla
ಆರಂಭ ಚಿತ್ರದ ‘ಲವ್ ಮೂಡಿತಣ್ಣ’ ಹಾಡು ಹುಟ್ಟಿದ ರೀತಿಯ ಬಗ್ಗೆ ಚಿತ್ರದ ನಿರ್ದೇಶಕ ಎಸ್. ಅಭಿ ಹನಕೆರೆ ಅವರು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಪ್ರೀತಿ ಮೂಡುವ ಸಂದರ್ಭಕ್ಕೆ ತಕ್ಕಂತೆ ಒಂದು ಹಾಡಿಗೆ ಟ್ಯೂನ್ ಹಾಕಲು ಗುರುಕಿರಣ್ ಅವರ ಜೊತೆ ಕುಳಿತುಕೊಂಡಾಗ ಗುರುಕಿರಣ್ ಅನೇಕ ಟ್ಯೂನುಗಳನ್ನು ಮಾಡಿದರು. ಅದರಲ್ಲಿ ಒಂದು ಇಷ್ಟವಾಗಿ, ಅದರ ಮೇಲೆ ಎರಡು ತಿಂಗಳು ಕೆಲಸ ಮಾಡಿದರು. ಇದ್ದಕ್ಕಿದ್ದಂತೆ ಗುರುಕಿರಣ್ ಅವರಿಗೆ, ಈ ಚಿತ್ರ ಬೇರೆ ರೀತಿಯೆ ಇದೆ, ಇದಕ್ಕೆ ಇನ್ನೂ ವಿಭಿನ್ನವಾದ ಟ್ಯೂನ್ ಮಾಡೋಣವೆಂದು ಅಲ್ಲಿಯವರೆಗೆ ಮಾಡಿದ್ದ ಟ್ಯೂನುಗಳನ್ನೆಲ್ಲಾ ತೆಗೆದು ಹಾಕಿದರು, ಇಷ್ಟವಾದ ಟ್ಯೂನನ್ನೂ ತೆಗೆದುಹಾಕಿದರು. ಬೇರೆ ಆಲೋಚನೆಗೆ ತಡಕಾಡುವಾಗ , ಒಂದು ದಿನ ಬೆಳಿಗ್ಗೆ ಎಂಟರಿಂದ ಮಧ್ಯರಾತ್ರಿ ಎರಡು ಮೂವತ್ತರ ತನಕ ಗುರುಕಿರಣ್ ಮತ್ತು ಅಭಿ ಲೋಕಾರೂಢಿ ಮಾತುಗಳನ್ನು ಆಡುತ್ತ ಕಾಲ ಕಳೆದರು.
abhi hanakere
ಅಭಿಯವರು ಮನೆಗೆ ಹೋಗಿ ಇನ್ನೇನು ಮಲಗಬೇಕು, ಆಗ ಕರೆ ಮಾಡಿದ ಗುರುಕಿರಣ್ ಒಂದು ಸಾಲು ಹೊಳೆದಿದೆ ಎನ್ನುತ್ತ ಟ್ಯೂನ್ ಜೊತೆಗೆ ’ಲವ್ ಮೂಡಿತಣ್ಣ' ಎಂದರು (ಹಾಡು ಕೇಳಲು ಇಲ್ಲಿ ಕ್ಲಿಕ್ಕಿಸಿ). ಅಭಿಯವರು, ಚೆನ್ನಾಗಿದೆ; ಮೂರು ದಿನದ ನಂತರ ಮತ್ತೆ ಕಾಡುತ್ತಾ ನೋಡೋಣ ಎಂದರು. ಒಂದು ವಾರದ ನಂತರ ಗುರುಕಿರಣ್ ಭೇಟಿಯಾಗಿ , ಸಂಗೀತ ಮಾಡಲು ಕುಳಿತಾಗಲು, ಆ ಟ್ಯೂನ್ ಕಾಡಿತು. ಆದ್ದರಿಂದ ಅದನ್ನು ಅಂತಿಮ ಆಯ್ಕೆ ಮಾಡಿದರು. ಆ ಟ್ಯೂನ್‍ಗೆ ಗೊಟೂರಿಯವರ ಕೈಯಲ್ಲಿ ಸಾಹಿತ್ಯ ಬರೆಸಿದರೆ ಚೆನ್ನಾಗಿರುತ್ತೆ ಎಂದು ಗುರುಕಿರಣ್ ಸಲಹೆ ನೀಡಿದರು. ಅದರಂತೆ ಅಭಿಯವರು, ಗೊಟೂರಿಯವರನ್ನು ಭೇಟಿ ಮಾಡಿ, ಅವರ ಜೊತೆ ಕಾರಿನಲ್ಲಿ ಸುಮಾರು ಎರಡು ಗಂಟೆಗಳ ಕಾಲ , ಬೆಂಗಳೂರಿನ ಸುತ್ತಮುತ್ತಾ ಓಡಾಡುತ್ತ ಹಾಡಿನ ಸಂದರ್ಭವನ್ನು ವಿವರಿಸಿ, ಆಮೇಲೆ ಕಾಡುಹರಟೆ ಹೊಡೆಯುತ್ತ ಕಾಲ ತಳ್ಳಿದರು. ನಂತರ, ಗುರುಕಿರಣ್ ಮನೆಗೆ ಬಂದು ಮತ್ತೆ ಮೂರು ಗಂಟೆ ಹರಟೆ! ಹರಟೆ ಮುಗಿದ ಮೇಲೆ ಕೇವಲ ಹತ್ತು ನಿಮಿಷದಲ್ಲಿ, ಗೊಟೂರಿಯವರು ಲವ್ ಮೂಡಿತಣ್ಣ ಹಾಡನ್ನು ಬರೆದು ಅಭಿಯವರ ಕೈಗಿತ್ತು, “ಇದು ದೈವ ಪ್ರೇರಣೆ, ನನ್ನಿಂದ ಈ ಹಾಡು ಬರೆಯುವಂತಾಗಿದೆ. ಈ ಹಾಡಿನಲ್ಲಿ ನೀವು ಯಾವ ಒಂದು ಪದವನ್ನೂ ಬದಲಾಯಿಸದೆ, ಸಂಗೀತಕ್ಕೆ ಅಳವಡಿಸುತ್ತೀರ ಎನ್ನುವ ನಂಬಿಕೆ ನನಗಿದೆ” ಎಂದು ಹೇಳಿ ಹೊರಟು ಹೋದರು. ಈ ಸಾಹಿತ್ಯಕ್ಕೆ ಮಾಲ್ಗುಡಿ ಶುಭ ಅವರ ಧ್ವನಿ ಹೊಂದುತ್ತದೆ ಎಂದ ಗುರುಕಿರಣ್ ಮಾಲ್ಗುಡಿ ಶುಭಾರನ್ನು ಕರೆಸಿ, ಹಾಡಿಸಿದಾಗ, ಅವರು ಸಹ, ಹಾಡುವುದರಲ್ಲಿ ತಲ್ಲೀನರಾಗಿ “ಈ ಹಾಡು, ನಾನು ಹಾಡಿದ, ಅತ್ಯುತ್ತಮ ಹಾಡುಗಳಲ್ಲಿ ಒಂದಾಗಲಿದೆ” ಎಂದು ಸಂತಸ ವ್ಯಕ್ತಪಡಿಸುತ್ತ “ಶುಭವಾಗಲಿ” ಎಂದು ಹಾರೈಸಿದರು.

gurukiran
ಹಾಡು ಸಿದ್ಧವಾದ ನಂತರ, ಅಭಿಯವರಿಗೆ ಭಯ ಕಾಡುವುದಕ್ಕೆ ಶುರುವಾಗಿತ್ತಂತೆ, ಚಿತ್ರದಲ್ಲಿ ಈ ಹಾಡೇ ಹೈಲೈಟ್ ಆಗಿಬಿಟ್ಟು, ಉಳಿದಿದ್ದೆಲ್ಲಾ ಸಪ್ಪೆಯಾಗಬಹುದು ಎಂಬುದೇ ಆ ಭಯ.

ಇನ್ನು ಹಾಡಿನ ಚಿತ್ರೀಕರಣವನ್ನು ಮೂವತ್ತು ದಿನಗಳ ಕಾಲ ಪ್ರತಿನಿತ್ಯ, ಬೆಳಗ್ಗೆ ಮತ್ತು ಸಂಜೆ, ಹೊಂಬಣ್ಣದ ಬೆಳಕಿನಲ್ಲಿ (ಗೋಲ್ಡನ್ ಅವರ್ಸ್) ಒಂದೊಂದೆ ದೃಶ್ಯವನ್ನು ನೃತ್ಯ ಸಂಯೋಜಕರಿಲ್ಲದೆ, ಸ್ವತಃ ಅಭಿಯವರೇ ಚಿತ್ರೀಕರಣ ಮಾಡಿ ಮುಗಿಸಿದರು. ಹಾಡು ಕೇಳಿದವರೆಲ್ಲ, ಗುರುಕಿರಣ್ ಇಲ್ಲಿಯವರೆಗು ಕಂಪೋಸ್ ಮಾಡಿದ ಅತ್ಯುತ್ತಮ ಹಾಡುಗಳಲ್ಲಿ, ಲವ್ ಮೂಡಿತಣ್ಣ ಹಾಡು ಕೂಡ ಒಂದು ಎಂದು ಹೇಳುತ್ತಾರೆ.

ಈಗಾಗಲೇ, ಈ ಚಿತ್ರದ ಹಾಡುಗಳು, ಭಾರಿ ಸದ್ದು ಮಾಡಿವೆ. ಅದರಲ್ಲೂ ಲವ್ ಮೂಡಿತಣ್ಣ ಹಾಡು ತುಂಬಾ ಜನರ ಪ್ರೀತಿಗೆ ಪಾತ್ರವಾಗಿದೆ. ಡಿ.ಟಿ.ಎಸ್ ಹಂತದಲ್ಲಿರುವ ಆರಂಭ ಚಿತ್ರ ಇನ್ನು ಕೆಲವೇ ದಿನಗಳಲ್ಲಿ ಜನರ ಮುಂದೆ ಬರಲು ಸಿದ್ಧವಾಗುತ್ತಿದೆ.

ಮಾರ್ಚ್ 26, 2015

ಆರಂಭ ಚಿತ್ರಕ್ಕೆ ಎಮ್ಮೆ ಬಲಿ!

ರಸಗವಳ ನಾರಾಯಣ
ಇದು ಪಟ್ಟು ಬಿಡದ ನಿರ್ದೇಶಕ ಮತ್ತು ನಟನೊಬ್ಬನ ಕಲಾನಿಷ್ಠೆಯ ಪರಿ! ಆರಂಭ ಚಿತ್ರದ ಹಾಡುಗಳು ಮತ್ತು ಟೀಸರ್ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಚಿತ್ರದಲ್ಲಿ ಸದ್ದು ಮಾಡುವ ತಮಟೆಯೊಂದರ ಹಿಂದಿನ ಕಥೆಯಿದು! ಕಥೆಯಲ್ಲ, ನೈಜ ಘಟನೆ! ಎಸ್. ಅಭಿ ಹನಕೆರೆ ನಿರ್ದೇಶನದ ‘ಆರಂಭ ಚಿತ್ರದ ಒಂದು ಪ್ರಮುಖ ಪಾತ್ರ ಕುಂಟು ಬೋರನದು. ಚಿತ್ರದ ಹಲವೆಡೆ ಕುಂಟು ಬೋರ ತಮಟೆ ಬಡಿಯುವ ದೃಶ್ಯಗಳಿತ್ತು. ತಮಟೆ ಮೇಲೆ ಕೈ ಆಡಿಸುವ ರೀತಿಯನ್ನು, ದೇಹಭಾಷೆಯ ವ್ಯತ್ಯಾಸವನ್ನು ಅಧ್ಯಯನ ಮಾಡಲು ಕುಂಟು ಬೋರನ ಪಾತ್ರ ನಿರ್ವಹಿಸಿರುವ ‘ರಸಗವಳ ನಾರಾಯಣ’ರವರನ್ನು ತಮಟೆ ಬಡಿಯುವವರ ಹತ್ತಿರವೇ ಕಳುಹಿಸಿದ್ದರಂತೆ.

ಕಲಿತು ವಾಪಸ್ಸಾದ ರಸಗವಳ ನಾರಾಯಣರಿಗೆ ‘ಎಲ್ಲಾದ್ರೂ ಹುಡುಕಿಕೊಂಡು ಒಂದು ಚರ್ಮದ ತಮಟೆಯನ್ನೇ ತರಬೇಕು’ ಎಂದು ನಿರ್ದೇಶಕರು ತಾಕೀತು ಮಾಡಿದ್ದರು. ಎಲ್ಲೆಡೆಯೂ ಪ್ಲಾಸ್ಟಿಕ್ಕು, ಫೈಬರ್ರಿನ ತಮಟೆಯನ್ನೇ ನೋಡಿ ಕಂಗೆಟ್ಟರು ರಸಗವಳ ನಾರಾಯಣ! ಅಲ್ಲೊಂದಿಲ್ಲೊಂದಿದ್ದ ಚರ್ಮದ ತಮಟೆಯನ್ನು ಕೊಡಲು ಅದರ ಯಜಮಾನರು ಒಪ್ಪುತ್ತಿರಲಿಲ್ಲ! ಕೊನೆಗೆ ಕುಂಟು ಬೋರ ಒಂದು ಎಮ್ಮೆಯನ್ನು ಬಲಿಕೊಟ್ಟು ಅದರ ಚರ್ಮದಿಂದ ಹೊಸತೊಂದು ತಮಟೆಯನ್ನೇ ಮಾಡಿಸಿಕೊಂಡು ಚಿತ್ರೀಕರಣಕ್ಕೆ ಹಾಜರಾದರು!

ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ, ಹಿನ್ನೆಲೆ ಸಂಗೀತ ನುಡಿಸುವಾಗ ನೈಜತೆಗಾಗಿ ಆ ಚರ್ಮದ ತಮಟೆಯನ್ನೇ ಬಳಸಿದರೆ ಒಳ್ಳೆಯದು ಎಂದು ತಮ್ಮ ಹಂಬಲವನ್ನು ಸಂಗೀತನಿರ್ದೇಶಕರಾದ ಗುರುಕಿರಣ್ ಹತ್ತಿರ ಅಭಿ ಹನಕೆರೆ ಹೇಳಿಕೊಂಡಾಗ, ಮತ್ತೆ ಅದೇತಮಟೆಯನ್ನು ತರಿಸಿ, ಲೈವ್ ರೆಕಾರ್ಡ್ ಮಾಡಿಸಿದ್ದಾರೆ.

ರಸಗವಳ ನಾರಾಯಣನಿಗೆ ಮತ್ತೆ,ತಮಟೆ ತರಲು ಹೇಳಿದಾಗೆ,"ಮನೆಯಲ್ಲಿ ತಮಟೆಯನ್ನುಇಟ್ಟುಕೊಂಡರೆ,ಕೆಟ್ಟಾದಾಗಬಹುದು ಎಂದು ಭಾವಿಸಿ, ಮದ್ದೂರಿನ ದೇವಸ್ತಾನದಲ್ಲಿಇರಿಸಿದ್ದನ್ನು ಕೇಳಿ,ನಿರ್ದೇಶಕರು "ಚಿತ್ರ ಚೆನ್ನಾಗಿ ಮೂಡಿಬರಲು,ನಮ್ಮ ಕೈಯಲ್ಲಿ ಎಷ್ಟುಸಾಧ್ಯ,ಅಷ್ಟು ನೈಜವಾಗಿ ಮಾಡ್ಬೇಕು,ಇಲ್ಲಿ ಎಲ್ಲಾನೂ ಒಳ್ಳೇದಾಗುತ್ತೆ,ಕೆಟ್ಟದಾಗೋ ಮಾತೆಇಲ್ಲ"ಅಂತ ಅವರಿಗೆ ಹೇಳಿ,ಅವರಿಗೆ ಅದೇ ತಮಟೆಯಿಂದ ಬ್ಯಾಕ್ ಗ್ರೌಂಡ್ ಮ್ಯೂಸಿಕ್ಮಾಡೋಣವೆಂದು,ಮತ್ತೆ ಅದೇ ತಮಟೆ ತರಿಸಿದ್ದಾರೆ.

ಚಿತ್ರದಲ್ಲಿ ಉಪಯೋಗಿಸಿದ ಚರ್ಮದ ತಮಟೆಯನ್ನೇ ಬ್ಯಾಕ್ ಗ್ರೌಂಡ್ ಮ್ಯೂಸಿಕ್ಕಿನಲ್ಲೂ ಉಪಯೋಗಿಸಿರುವುದಕ್ಕೆ ಗುರುಕಿರಣ್ ಹರ್ಷ ವ್ಯಕ್ತ ಪಡಿಸುತ್ತಾ ಈ ರೀತಿಯ ಅನುಭವ ಇದೇ ಮೊದಲು ಎಂದಿದ್ದಾರೆ. ಕುಂಟು ಬೋರನ ಪಾತ್ರದ ಅಭಿನಯಕ್ಕೆ ‘ರಸಗವಳನಾರಾಯಣ’ರಿಗೆ ಪ್ರಶಸ್ತಿಗಳ ಸುರಿಮಳೆಯೇ ಬಂದರೂ ಅಚ್ಚರಿ ಪಡಬೇಕಿಲ್ಲ ಎಂದು ಅಭಿಹೇಳುತ್ತಾರೆ.

ಹಿನ್ನೆಲೆ ಸಂಗೀತವನ್ನು ಮುಗಿಸಿರುವ ಚಿತ್ರವು ಸೆನ್ಸಾರಿಗೆ ತೆರಳಲು ತಯಾರಾಗಿದ್ದು,ಶೀಘ್ರದಲ್ಲೇ ತೆರೆ ಕಾಣಲಿದೆ.

ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಡಿ. ಗಣೇಶ್ ವಿ ನಾಗೇನಹಳ್ಳಿ ನಿರ್ಮಿಸಿ ಎಸ್ ಅಭಿ ಹನಕೆರೆ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿದೆ.

ಮಾರ್ಚ್ 3, 2015

ಛಾಯೆಗಳ ನಡುವೆ ಸ್ವಂತಿಕೆ ಮೆರೆವ ‘ಮೈತ್ರಿ’.

mythri giriraj
Dr Ashok K R
ಈ ಸಿನಿಮಾ ನೋಡಬೇಕಾದರೆ ಹಿಂದಿನ ಹತ್ತಲವು ಸಿನಿಮಾಗಳು ನೆನಪಾಗುತ್ತವೆ! ಅದರಲ್ಲಿ ಮುಖ್ಯವಾದುದು ಸ್ಲಂ ಡಾಗ್ ಮಿಲಿಯನೇರ್, ಚಿನ್ನಾರಿ ಮುತ್ತ, ಜಿಮ್ಮಿ ಗಲ್ಲು. ಸ್ಲಂ ಡಾಗ್ ಮಿಲಿಯನೇರಿನ ಹಾಗೆ ಇಲ್ಲೂ ಒಂದು ದಿಢೀರ್ ಕೋಟ್ಯಾಧಿಪತಿಯಾಗುವ ಆಟವಿದೆ. ಬಡ ಹುಡುಗನೊಬ್ಬನ ಕಥೆಯಿದೆ. ಏನೂ ಇಲ್ಲದ ಹುಡುಗನೊಬ್ಬ ನಗರಕ್ಕೆ ಬಂದು ಪ್ರಚಂಡ ಯಶಸ್ಸು ಗಳಿಸುವ ಚಿನ್ನಾರಿ ಮುತ್ತ ಇಲ್ಲಿ ಸಿದ್ಧರಾಮನಾಗುತ್ತಾನೆ. ಬಾಲಪರಾಧಿಗಳ ಬದಲಾವಣೆಗೆ ಹಂಬಲಿಸುವ ಸಿನಿಮಾ ಖೈದಿಗಳ ಮನಪರಿವರ್ತನೆಯ ಜಿಮ್ಮಿ ಗಲ್ಲು ಚಿತ್ರವನ್ನು ನೆನಪಿಸುತ್ತದೆ! ಇಷ್ಟೆಲ್ಲಾ ಸಿನಿಮಾಗಳನ್ನು ನೆನಪಿಸಿಯೂ ತನ್ನದೇ ಸ್ವಂತ ಛಾಪು ಮೂಡಿಸುವ ಸಿನಿಮಾ ‘ಮೈತ್ರಿ’. ವಿಷ್ಣುವರ್ಧನ್ ಬಹಳಷ್ಟು ಸಂದರ್ಶನಗಳಲ್ಲಿ ಹೇಳಿರುವಂತೆ ಪ್ರಪಂಚದಲ್ಲಿರುವುದು ಏಳೋ ಎಂಟೋ ಕಥೆ! ಅವುಗಳನ್ನೇ ಬೇರ್ಪಡಿಸಿ ಮಾರ್ಪಡಿಸಿ ಸಿನಿಮಾ ಮಾಡಬೇಕು. ಹಳೆಯ ಚಿತ್ರಗಳಿಗೆ ಒಂದಷ್ಟು ಸಾಮ್ಯತೆಗಳಿದ್ದರೂ ಮೈತ್ರಿಯಲ್ಲಿ ಹೊಸತನವನ್ನು ಕಾಣಲು ಸಾಧ್ಯವಾಗಿರುವುದು ಈ ಬೇರ್ಪಡಿಸಿ ಮಾರ್ಪಡಿಸುವ ವಿಧಾನದಿಂದ.

ಫೆಬ್ರ 27, 2015

ಅಮಲುಗಳ ನಡುವೆ ಕಳೆದುಹೋಗುವ ಜಟ್ಟ.

Dr Ashok K R
ಗಿರಿರಾಜರ ಹೆಸರು ಮೊದಲು ಕೇಳಿದ್ದು ‘ವರ್ತಮಾನ’ ವೆಬ್‍ಪತ್ರಿಕೆ ಪ್ರತಿ ವರುಷ ನಡೆಸುವ ಕಥಾ ಸ್ಪರ್ಧೆಯ ಫಲಿತಾಂಶದಲ್ಲಿ. ಅವರ ‘ಗಲೀಜು’ ಎಂಬ ಕಥೆಗೆ ಎರಡನೆಯ ಬಹುಮಾನ ಬಂದಿತ್ತು. ಅದರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗಿರಿರಾಜರನ್ನು ಭೇಟಿಯಾದಾಗಲೇ ತಿಳಿದಿದ್ದು ಇದೇ ಆಸಾಮಿ ‘ಜಟ್ಟ’ ಚಿತ್ರದ ನಿರ್ದೇಶಕರೆಂದು! ಜಟ್ಟ ಚಿತ್ರದ ಬಗ್ಗೆ ಆಗಲೇ ಸಾಕಷ್ಟು ಚರ್ಚೆ ನಡೆದಿತ್ತು. ಬೆಂಗಳೂರಿನ ಟ್ರಾಫಿಕ್ಕಿನಲ್ಲಿ ಹೋಗಿ ಚಿತ್ರ ನೋಡುವ ಉಮೇದು ಕಡಿಮೆಯಾಗಿದ್ದ ಕಾರಣ ‘ಜಟ್ಟ’ ಚಿತ್ರವನ್ನಿನ್ನೂ ನೋಡಿರಲಿಲ್ಲ. ಗೆಳೆಯ ನಿರ್ದೇಶಕ ಅಭಿ ಹನಕೆರೆ ಜಟ್ಟವನ್ನೊಂದಷ್ಟು ಹೊಗಳಿ ಹೋಗಿ ನೋಡು ಎಂದಿದ್ದ. ಕಾರಣಾಂತರಗಳಿಂದ ಜಟ್ಟ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದು ಸಾಧ್ಯವಾಗಲಿಲ್ಲ. ಕೊನೆಗೆ ನಮ್ಮ ‘ಹುಚ್ಚ ವೆಂಕಟ್’ ಹೇಳುವ ಹಾಗೆ ಬಿಟ್ಟಿಯಾಗಿ ಟಿವಿಯಲ್ಲೇ ನೋಡಿದೆ! ಇಂತಹುದೊಂದು ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡದಿದ್ದುದಕ್ಕೆ ಬೇಸರವಿದೆ.

ಜನ 20, 2015

ಗೆದ್ದ ಚಿತ್ರವೊಂದು 'ಯಶಸ್ವಿ'ಯಾಗದ ಕಥೆ!

2014ರ ಡಿಸೆಂಬರ್ ತಿಂಗಳಂತ್ಯದಲ್ಲಿ ಬಿಡುಗಡೆಗೊಂಡ  ಸಂತೋಷ್ ಆನಂದರಾಮ್ ನಿರ್ದೇಶನದ 'ಮಿ ಅಂಡ್ ಮಿಸೆಸ್ ರಾಮಚಾರಿ' ಚಿತ್ರ ನಾಗಲೋಟದಿಂದ ಗೆಲುವು ಸಾಧಿಸಿದೆ. ಚಿತ್ರದ ನಾಯಕ ಯಶ್ ರನ್ನು ಮತ್ತಷ್ಟು ಎತ್ತರಕ್ಕೇರಿಸಿದೆ ಈ ರಾಮಾಚಾರಿ ಚಿತ್ರ. ಕಳೆದ ವರ್ಷ ಗೆದ್ದ ಅನೇಕ ರೀಮೇಕ್ ಚಿತ್ರಗಳ ನಡುವೆ ಸಂತೋಷ್ ಆನಂದರಾಮ್ ರ ಈ ರಾಮಾಚಾರಿ ಸ್ವಮೇಕ್ ಎಂಬುದು ಕನ್ನಡ ಸಿನಿಪ್ರಿಯರು ಒಂದಷ್ಟು ಸಮಾಧಾನ ಪಡಬಹುದಾದ ಅಂಶ! ಗೆಲುವು ಕಾಣುವ ಸ್ವಮೇಕುಗಳಲ್ಲಿ ಎರಡು ವಿಧ, ಮೊದಲ ರೀತಿಯ ಗೆಲುವು ಚಿತ್ರರಂಗಕ್ಕೆ ಬಹಳಷ್ಟು ಹೊಸತನ್ನು ನೀಡಿ ಆ ಹೊಸ ದಾರಿಯಲ್ಲಿ ಇಡೀ ಚಿತ್ರರಂಗ ಮತ್ತೊಂದು ಹೊಸತನದ ಚಿತ್ರ ಬರುವವರೆಗೆ ಸಾಗುತ್ತದೆ. ಎರಡನೆಯದು ಹಳೆಯ ಹಾದಿಯಲ್ಲೇ ತೆಗೆದ ಚಿತ್ರ ಬೋರು ಹೊಡೆಸದ ತನ್ನ ನಿರೂಪಣೆಯಿಂದ ಗೆಲುವು ಸಾಧಿಸುವುದು. ಚಿತ್ರದ ಮಟ್ಟಿಗೆ, ಅದರಲ್ಲಿ ಭಾಗಿಯಾದ ಕಲಾವಿದರು - ತಂತ್ರಜ್ಞರ ಮಟ್ಟಿಗೆ ಅದು ಗೆಲುವಾದರೂ ಒಟ್ಟಾರೆಯಾಗಿ ಚಿತ್ರರಂಗದ ಮುನ್ನಡೆಗೆ ವಿಶೇಷ ಸಹಾಯವಾಗುವುದಿಲ್ಲ. ಅನುಮಾನವಿಲ್ಲದೇ ಹೇಳಬಹುದು ಈ ರಾಮಾಚಾರಿ ಎರಡನೇ ವಿಭಾಗಕ್ಕೆ ಸೇರಿರುವ ಚಿತ್ರ.

ಬಣ್ಣಗಳ ನಡುವೆ ಕಳೆದುಹೋಗಿರುವ "ದೇವರ" ನಾಡಲ್ಲಿ!

1998ರಲ್ಲಿ ನಡೆದ ಒಂದು ನೈಜ ಘಟನೆಯಿಂದ ಪ್ರೇರೇಪಿತರಾಗಿ ಕಥೆ ಹೆಣೆದಿರುವುದಾಗಿ ಹೇಳಿಕೆ ಕೊಟ್ಟಿದ್ದ ಬಿ.ಸುರೇಶ್ ನಿರ್ದೇಶನದ 'ದೇವರ ನಾಡಲ್ಲಿ' ಚಿತ್ರದ ಟ್ರೇಲರ್ ಯೂಟ್ಯೂಬಿನಲ್ಲಿ ಕಾಣಿಸಿಕೊಂಡು ಸಿನಿಮಾಸಕ್ತರ ಗಮನ ಸೆಳೆಯುತ್ತಿದೆ. ಕೇಸರಿ ಹಿಂದೂ ಧರ್ಮಕ್ಕೆ, ಹಸಿರು - ಕಪ್ಪು ಮುಸ್ಲಿಂ ಧರ್ಮಕ್ಕೆ, ಬಿಳಿ ಕ್ರಿಶ್ಚಿಯನ್ ಧರ್ಮಕ್ಕೆ ಪರ್ಯಾಯವಾಗಿಬಿಟ್ಟಿರುವ ದಿನಗಳಲ್ಲಿ ಬಣ್ಣಗಳ ಗೋಜಲುಗಳ ಹಿಂದೆ ದೇವರು ಮರೆಯಾಗಿಬಿಟ್ಟಿದ್ದಾರೆ! ದೇವರ ನಾಡಲ್ಲಿ ಚಿತ್ರದ ಟ್ರೇಲರ್ ನಲ್ಲಿ ಮೂರು ಧರ್ಮದ ಬಣ್ಣಗಳ ನಡುವೆ ಕಮ್ಯುನಿಷ್ಟರ ಕೆಂಪು ಬಣ್ಣವೂ ಅಲ್ಲಲ್ಲಿ ಇಣುಕಿದೆ! ಒಟ್ಟಿನಲ್ಲಿ ಸಿನಿಮಾದ ಬಗ್ಗೆ ಕುತೂಹಲ ಮೂಡಿಸುವಂತಹ ಎಲ್ಲಾ ಅಂಶಗಳೂ ಟ್ರೇಲರ್ರಿನಲ್ಲಿವೆ. ಪ್ರಕಾಶ್ ರೈ, ಅಚ್ಯುತ್ ಕುಮಾರ್ ಮತ್ತು ಸಿಹಿಕಹಿ ಚಂದ್ರುರವರ ಅಭಿನಯದ ಬಗ್ಗೆ ಮತ್ತೆ ಮತ್ತೆ ಹೇಳುವ ಅವಶ್ಯಕತೆಯಿಲ್ಲ! "ಮನುಷ್ಯ ಮೂಲತಃ ಕೇಡಿಗನಿರುತ್ತಾನೆ. ಒಳ್ಳೆಯವನ ಥರ ಕಾಣೋನೇ ಬಾಂಬ್ ಇಟ್ಟಿರ್ತಾನೆ" ಎಂದು ಟ್ರೇಲರ್ರಿನ ಕೊನೆಯಲ್ಲಿ ಪ್ರಕಾಶ್ ರೈ ಹೇಳುವ ಮಾತು ಚಿತ್ರಕ್ಕೆ ಕಾಯುವಂತೆ ಮಾಡುತ್ತವೆ!

ಜನ 9, 2015

ಕಣಗಾಲಿನಲ್ಲಿ 'ಆರಂಭ' ಚಿತ್ರದ ಪ್ರೀಮಿಯರ್ ಶೋ!

ಚಲನಚಿತ್ರ ನಿರ್ದೇಶಕನಾಗುವುದೆಂದರೆ ಹತ್ತು ಸರ್ಕಸ್ಸು ಕಂಪನಿಗಳನ್ನು ನಡೆಸಿದಂತೆ ಎಂದು ಬರೆದಿದ್ದು ರವಿ ಬೆಳಗೆರೆ! ಒಂದು ಚಿತ್ರಕ್ಕೆ ನಾಯಕ ನಾಯಕಿ ಸಂಗೀತ ತಾಂತ್ರಿಕ ತಂಡದ್ದು ಒಂದು ತೂಕವಾದರೆ ನಿರ್ದೇಶಕ ಸ್ಥಾನದ್ದೇ ಒಂದು ತೂಕ. Director is Captain of the Ship ಎಂಬ ಮಾತು ಸುಖಾಸುಮ್ಮನೆ ಹುಟ್ಟಿದ್ದಲ್ಲ. ಪ್ರಪಂಚದ ಅತಿ ಉತ್ತಮ ಚಿತ್ರಗಳ ಹೆಸರು ಕೇಳಿದಾಗಲೆಲ್ಲ ನೆನಪಾಗುವುದು ಅದರ ನಿರ್ದೇಶಕರು. ಅಕಿರಾ ಕುರಸೋವಾ, ಮಾಜಿದ್ ಮಾಜಿದಿ ನೆನಪಲ್ಲಿರುವಷ್ಟು ಅವರ ಚಿತ್ರಗಳ ಕಲಾವಿದರು ನೆನಪಿನಲ್ಲಿರುವುದಿಲ್ಲ. ಕಥೆಯಾಧಾರಿತ ಚಿತ್ರಗಳಲ್ಲಿ ನಿರ್ದೇಶಕರು ಮಿಂಚಿದರೆ ಭಾರತದ ಬಹುತೇಕ ಚಲನಚಿತ್ರಗಳಲ್ಲಿ ಮಿಂಚುವುದು ಕಲಾವಿದರು. ಇದಕ್ಕೆ ಬಹುಮುಖ್ಯ ಕಾರಣ ಭಾರತದ ಮನೋರಂಜನಾತ್ಮಕ ಚಿತ್ರಗಳು ಕಲಾವಿದನ ಅದರಲ್ಲೂ ನಾಯಕನಟನ ಸುತ್ತ ಸುತ್ತುವುದು. ಕಥೆಗಾಗಿ ತಮ್ಮ ಇಮೇಜನ್ನು ಮೀರುವ ನಟರ ಸಂಖೈ ಕಡಿಮೆಯೆಂದೇ ಹೇಳಬೇಕು. ಇಮೇಜಿರುವ ಕಲಾವಿದರ ಆರಾಧಕರ ಸಂಖೈಯೂ ಹೆಚ್ಚಿರುವುದು ಇದೇ ಕಾರಣಕ್ಕೆ. 

ಜನ 8, 2015

ಪೀಸ್ ಫುಲ್ಲಾಗಿಲ್ಲದ 'ಮಾಸ್ಟರ್ ಪೀಸ್' ಫಸ್ಟ್ ಲುಕ್!

manju mandavya
ಮಂಜು ಮಾಂಡವ್ಯ
ಕಳೆದ ಒಂದೆರಡು ವರ್ಷದಿಂದ ಕನ್ನಡ ಚಿತ್ರರಂಗದ ನಂಬರ್ ಒನ್ ನಾಯಕ ಸ್ಥಾನದ ಪಟ್ಟ ಯಶ್ ಗೇ ಸಿಗಬೇಕು ಎಂದು ಯಾವುದೇ ಅನುಮಾನವಿಲ್ಲದೇ ಹೇಳ್ಬೋದು.ವೆರೈಟಿ ಚಿತ್ರಗಳು, ರಿಮೇಕೂ ಯಶಸ್ಸಾಗಿ ಸ್ವಮೇಕೂ ಯಶಸ್ಸಾಗಿ ಯಶ್ ನಂಬರ್ ಒನ್ ಸ್ಥಾನಕ್ಕೆ ಬಹುಶಃ ಈಗಾಗಲೇ ತಲುಪಿಬಿಟ್ಟಿದ್ದಾರೆ, ಇಲ್ಲಾ ಒಂದೆರಡು ಹೆಜ್ಜೆಯಷ್ಟೇ ಹಿಂದಿದ್ದಾರೆ. ಮೊಗ್ಗಿನ ಮನಸ್ಸು ಗೆಲುವು ಕಂಡಿತ್ತಾದರೂ ಅದರಲ್ಲಿ ರಾಧಿಕಾ ಪಂಡಿತ್ ಪಾತ್ರ ಹೆಚ್ಚಿತ್ತು. ಮೊದಲ ಸಲ ತಾಜಾತನದಿಂದ ಹೆಸರು ಮಾಡಿತಾದರೂ ಯಶ್ ಗೆಲುವು ಕಂಡ ಚಿತ್ರ 'ಕಿರಾತಕ'. ರಿಮೇಕ್ ಚಿತ್ರ ಗೆದ್ದ ತಕ್ಷಣ ರಿಮೇಕ್ ಹಿಂದೆಯೇ ಬೀಳುವ ಚಾಳಿ ಬೆಳೆಸಿಕೊಳ್ಳದ ಯಶ್ ನಂತರ ಸ್ವಮೇಕ್ ಚಿತ್ರಗಳಾದ ಡ್ರಾಮಾ, ಗೂಗ್ಲಿಯಲ್ಲಿ ಮಿಂಚಿದರು. ಮತ್ತೆ ದೊಡ್ಡ ಮಟ್ಟದ ಯಶಸ್ಸು ಕಂಡದ್ದು ರಾಜಾಹುಲಿ ಎಂಬ ರೀಮೇಕ್ ಚಿತ್ರದಲ್ಲಿ! ಲವ್ ಸ್ಟಾರ್ ಇಮೇಜಿನಿಂದ ಮಾಸ್ ಸ್ಟಾರ್ ಇಮೇಜಿಗೆ ಬದಲಿಸಿದ ಖ್ಯಾತಿಯೂ ರಾಜಾಹುಲಿಯದ್ದೇ!

ಡಿಸೆಂ 18, 2014

ಆರಂಭ ಚಿತ್ರದ ಹಾಡುಗಳ ವೀಡಿಯೋ ಯೂಟ್ಯೂಬಿನಲ್ಲಿ ಲಭ್ಯ

ಶರ ಪ್ರೊಡಕ್ಷನ್ಸ್ ಬ್ಯಾನರ್ರಿನಡಿಯಲ್ಲಿ ಡಿ.ಗಣೇಶ್ ವಿ. ನಾಗೇನಹಳ್ಳಿ ನಿರ್ಮಿಸುತ್ತಿರುವ ಎಸ್. ಅಭಿ ಹನಕೆರೆ ನಿರ್ದೇಶನದ  "ಆರಂಭ - The Last Chance" ಚಿತ್ರದ ಹಾಡುಗಳ ವೀಡಿಯೋ, ಟ್ರೇಲರ್ ಮತ್ತು ಟೀಸರ್ ಆಲ್ಫಾ ಡಿಜಿಟೆಕ್ ಮೂಲಕ ಯೂಟ್ಯೂಬಿನಲ್ಲಿ ಬಿಡುಗಡೆಯಾಗಿದೆ. ಚಿತ್ರದ ಒಂದು ಭಾಗವಾಗಿ 'ಹಿಂಗ್ಯಾಕೆ'ಯೂ ಇರುವುದರಿಂದ ಹಾಡುಗಳ ವಿಮರ್ಶೆಯನ್ನು ನಾವೇ ಮಾಡುವುದು ಸಾಧುವಲ್ಲವಲ್ಲವೇ? ಕೇಳಿ ಕಮೆಂಟಿಸಿ ಇಷ್ಟವಾದರೆ ನಿಮ್ಮ ಸ್ನೇಹಿತರ ವಲಯದಲ್ಲಿ ಹಂಚಿಕೊಳ್ಳಿ. ಥೂ ಸರಿಯಿಲ್ಲ ಎನ್ನಿಸುವಂತಹ ದೃಶ್ಯಗಳೂ ಇದ್ದರೆ ಹೇಳಿ ನಿರ್ದೇಶಕರಿಗೆ ತಲುಪಿಸುತ್ತೇವೆ.

ಸ್ಟೋರಿ ಇದ್ರೂ ಮತ್ತೊಂದಿದ್ರು ಈ ರೀತಿ ಪೋಲಿ ಕಮರ್ಷಿಯಲ್ ಇರಲೇ ಬೇಕಾ?
https://www.youtube.com/watch?v=WCe6uecDZY0&authuser=0

ನವೆಂ 30, 2014

ಗೋವಾದಲ್ಲಿ ಆರಂಭ ಚಿತ್ರದ ದ್ವನಿಸುರುಳಿ ಬಿಡುಗಡೆ.

aarambha goa publicity
ಪತ್ರಿಕಾ ಪ್ರಕಟಣೆ 
ಅಖಿಲ ಗೋವಾ ಕನ್ನಡ ಮಹಾ ಸಂಘ ಅಧ್ಯಕ್ಷರಾದ ಸಿದ್ದಣ್ಣ ಮೀಟಿಯವರು, ಎಸ್ ಅಭಿ ಹನಕೆರೆ ನಿರ್ದೇಶನದ  ಆಡಿಯೋ ಸೀಡಿಯನ್ನು ಗೋವಾ ಬೀಚಿನಲ್ಲಿ ಬಿಡುಗಡೆಗೊಳಿಸಿದರು.

ನವೆಂ 18, 2014

ಡಬ್ಬಿಂಗ್ ಮುಗಿಸಿದ 'ಆರಂಭ'

ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ಡಿ.ಗಣೇಶ್ ವಿ.ನಾಗೇನಹಳ್ಳಿ ನಿರ್ಮಿಸುತ್ತಿರುವ 'ಆರಂಭ' ಚಿತ್ರ ಡಬ್ಬಿಂಗ್ ಪೂರ್ಣಗೊಳಿಸಿ ರೀರೆಕಾರ್ಡಿಂಗಿಗೆ ಸಿದ್ಧವಾಗಿದೆ. ಚಿತ್ರದ ಪ್ರಮುಖ ತಾರಾಗಣದಲ್ಲಿ ಮಿಥುನ್ ಪ್ರಕಾಶ್, ರಸಗವಳ ನಾರಾಯಣ,ಬೇಬಿ ಹಾಸಿನಿ,ಅಭಿರಾಮಿ,ಡಿಸ್ಕೊ ಪೃಥ್ವಿ,ಬಳ್ಳಾರಿ ರಾಘವೇಂದ್ರ,ಪ್ರವೀಣ್,ಬ್ಯಾಂಕ್ ಜನಾರ್ಧನ,ಪಾಂಡು ಕುಮಾರ್,ಅಭಿರಾಜ್ ಅಭಿನಯಿಸುತ್ತಿದ್ದಾರೆ. ಎಸ್. ಅಭಿ ಹನಕೆರೆ ನಿರ್ದೇಶನದ ಚಿತ್ರಕ್ಕೆ ಸಂಗೀತ ನೀಡಿರುವುದು ಗುರುಕಿರಣ್.
ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್ ಊರಾದ ಕಣಗಾಲಿನಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಆರಂಭ ಚಿತ್ರತಂಡದ್ದು. ಚಿತ್ರರಂಗದ ಗಣ್ಯರನ್ನು ಮತ್ತು ಸಿನಿಮಾಸಕ್ತರನ್ನು ಕಣಗಾಲಿಗೆ ಆಹ್ವಾನಿಸಿ ಪುಟ್ಟಣ್ಣ ಕಣಗಾಲರ ನೆನಪಿನಲ್ಲಿ 'ಆರಂಭ' ಚಿತ್ರದ ಪ್ರೀಮಿಯರ್ ಶೋ ನಡೆಸುವ ಉದ್ದೇಶ ನಿರ್ದೇಶಕರಿಗಿದೆ. 
ಜಿ.ಮ್ಯೂಸಿಕ್ ಲಾಂಛನದಲ್ಲಿ ಚಿತ್ರದ ಹಾಡುಗಳು ಬಿಡುಗಡೆಗೊಂಡಿದ್ದು ಜನರ ಮನಗೆದ್ದಿದೆ.

ಅಕ್ಟೋ 9, 2014

ಬೆಂಕಿ ಹಚ್ಚಲು ಪೊಟ್ಣ ಬರ್ತಿದೆ!


hingyake
ಬೆಂಕಿಪಟ್ಣ

Dr Ashok K R
ದಯಾನಂದ ಟಿ.ಕೆ ನಿರ್ದೇಶನದ ಸ್ಟೀವ್ ಕೌಶಿಕ್ ಸಂಗೀತ ನೀಡಿರುವ ‘ಬೆಂಕಿಪಟ್ಣ’ ಚಿತ್ರದ ಹಾಡುಗಳು ಬಿಡುಗಡೆಗೊಂಡಿವೆ. ದಯಾನಂದರನ್ನು ಮೊದಲು ಕಂಡಿದ್ದು ಕುಪ್ಪಳ್ಳಿಯ ‘ನಾವು ನಮ್ಮಲ್ಲಿ’ ಕಾರ್ಯಕ್ರಮದಲ್ಲಿ. ಅವರ ಪುಸ್ತಕ ‘ರಸ್ತೆ ನಕ್ಷತ್ರ’ ಬಿಡುಗಡೆಯಾಗಿತ್ತು. ನಿಜವೆನ್ನಿಸದ ನೈಜ ಕಥಾನಕಗಳ ಗುಚ್ಛವದು. ಅದ್ಭುತ ಶೈಲಿಯ ನಿರೂಪಣೆಯಿಂದ ಗಮನ ಸೆಳೆದಿತ್ತು. ಅದೇ ಶೈಲಿಯ ಕಂಡರೂ ಕಾಣದೇ ಹೋಗುವ ಜನರ ಕಥಾನಕಗಳು ಈಗ ವಿವಿಧ ದಿನಪತ್ರಿಕೆಗಳಲ್ಲೂ ನಿಯಮಿತವಾಗಿ ಬರುತ್ತಿವೆಯೆನ್ನುವುದು ದಯಾನಂದರ ಶೈಲಿಯ ಪ್ರಭಾವವನ್ನು ತಿಳಿಸುತ್ತದೆ. ಇಂಥ ಅದ್ಭುತ ಕಥೆಗಾರರೊಬ್ಬರು ಇದ್ದಕ್ಕಿದ್ದಂತೆ ಸಿನಿಮಾ ತೆಗೆಯುತ್ತೇನೆಂದು ಘೋಷಿಸಿದಾಗ ಅರೆರೇ! ಎಂದು ಅಚ್ಚರಿಯಾದರೂ ಅವರಲ್ಲಿರುವ ಕಥೆಗಾರನ ಮೇಲಿರುವ ನಂಬುಗೆಯಿಂದ ಚಿತ್ರದ ಬಗೆಗಿನ ನಿರೀಕ್ಷೆಯೂ ಹೆಚ್ಚಿದೆ.
Also read

ಅಕ್ಟೋ 3, 2014

ಕಮರಿದ ಕನಸುಗಳ ಕಲ್ಲೂರಿ

Kalloori movie review
ಕಲ್ಲೂರಿ
ಡಾ ಅಶೋಕ್ ಕೆ ಆರ್.
ದೊಡ್ಡ ಮರವೊಂದು ಬಿದ್ದಾಗ ಇಂತಹ ಚಿಕ್ಕ ಪುಟ್ಟ ಘಟನೆಗಳು ಸಹಜ ಎಂದು ಇಂದಿರಾ ಗಾಂಧಿಯ ಹತ್ಯೆಯ ನಂತರ ನಡೆದ ಸಿಖ್ ಹತ್ಯಾಕಾಂಡದ ಬಗ್ಗೆ ಹೇಳಿದ್ದು ರಾಜೀವ್ ಗಾಂಧಿ. ಕ್ರಿಯೆಗೊಂದು ಪ್ರತಿಕ್ರಿಯೆ ಸಹಜ ಎಂಬಭಿಪ್ರಾಯ ಕೇಳಿಬಂದಿದ್ದು ಗೋದ್ರೋತ್ತರದ ದಿನಗಳಲ್ಲಿ ನಡೆದ ಮುಸ್ಲಿಮರನ್ನು ಗುರಿಮಾಡಿಕೊಂಡ ಗಲಭೆಗಳಲ್ಲಿ. ಪ್ರತಿಯೊಂದು ಧಾರ್ಮಿಕ ಅಥವಾ ರಾಜಕೀಯ ಕಾರಣದ ಗಲಭೆಗಳಲ್ಲಿ ‘ಗಲಭೆ ಶುರು ಮಾಡಿದ್ದು ನಾವಲ್ಲ, ನಮ್ಮದೇನಿದ್ದರೂ ಅವರ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ’ ಎಂಬರ್ಥದ ಸಮರ್ಥನೆಗಳಿರುತ್ತವೆ. ಆದರೆ ಗಲಭೆಯ ಕಾವಿನಿಂದ ಸಾಯುವವರು ಬಹಳಷ್ಟು ಪ್ರಕರಣಗಳಲ್ಲಿ ಗಲಭೆಗೆ ಸಂಬಂಧಪಡದವರಾಗಿರುತ್ತಾರೆ. ವಿನಾಕಾರಣವಾಗಿ ತಮ್ಮದೇನೂ ತಪ್ಪಿಲ್ಲದೆ ಸತ್ತೇ ಹೋದ ಮುಗ್ದರ, ಅಮಾಯಕರ ಕಮರಿದ ಕನಸುಗಳ ಬಗೆಗಿನ ಚಿತ್ರ ಬಾಲಾಜಿ ಶಕ್ತಿವೇಲನ್ ನಿರ್ದೇಶನದ “ಕಲ್ಲೂರಿ”.
Also readಮರೀನಾ ಎಂಬ ದೃಶ್ಯಕಾವ್ಯ

ಸೆಪ್ಟೆಂ 10, 2014

ಆರಂಭ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ


ಮಧುಗಿರಿಯಲ್ಲಿ ಸೇರಿದ್ದ ಜನಸ್ತೋಮ
ಚಿತ್ರವೊಂದರ ಹಾಡುಗಳು ಜನರನ್ನು ಚಿತ್ರಮಂದಿರದೆಡೆಗೆ ಸೆಳೆಯುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ನಂತರದಲ್ಲಿ ಆ ಹಾಡುಗಳು ಅನೇಕ ವರುಷಗಳ ಕಾಲ ಜನಮಾನಸದಲ್ಲಿ ಉಳಿಯಲು ಚಿತ್ರದ ಗುಣಮಟ್ಟ ಪಾತ್ರ ವಹಿಸುತ್ತದೆ. ಈ ಕಾರಣದಿಂದಾಗಿ ಚಿತ್ರದ ಹಾಡುಗಳನ್ನು ಹೆಚ್ಚೆಚ್ಚು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಚಿತ್ರರಂಗ ಅನೇಕ ಯೋಜನೆಗಳನ್ನಾಕುತ್ತವೆ. ಅಂತರ್ಜಾಲದ ಲಭ್ಯತೆ ಹೆಚ್ಚುತ್ತಿದ್ದಂತೆ ಮತ್ತು ಬ್ಲೂಟೂಥ್ ಆಧಾರಿತ ಮೊಬೈಲ್ಗಳು ಹೆಚ್ಚಾದ ನಂತರ ಕ್ಯಾಸೆಟ್ಟುಗಳನ್ನಾಗಲೀ ಸಿಡಿಗಳನ್ನಾಗಲೀ ಕೊಳ್ಳುವವರು ಇಲ್ಲವೇ ಇಲ್ಲ ಎಂದು ಹೇಳಬಹುದು. ರೇಡಿಯೋ ಮುಖಾಂತರ, ಟಿ.ವಿ. ಮುಖಾಂತರ ಜನರಿಗೆ ತಲುಪಲು ಪ್ರಯತ್ನಿಸುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ. ನೇರವಾಗಿ ಜನರಿಗೇ ತಲುಪಿಸುವ ಹೊಸ ಪ್ರಯತ್ನ ಮಾಡುತ್ತ ನಿಧಾನವಾಗಿಯಾದರೂ ಗೆಲುವು ಕಾಣುತ್ತಿರುವುದು ‘ಆರಂಭ’ ಚಿತ್ರತಂಡ.