ಡಿಸೆಂ 7, 2018

ಆಪರೇಷನ್ ಕಮಲದ ಅನಿವಾರ್ಯತೆ ಯಾರಿಗಿದೆ?

ಕು.ಸ.ಮಧುಸೂದನ
'ಆಪರೇಷನ್ ಕಮಲ' ಮತ್ತೊಮ್ಮೆ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳದ ಮೈತ್ರಿ ಸರಕಾರ ಆರು ತಿಂಗಳು ಪೂರೈಸುತ್ತಿರುವ ಈ ಸಮಯದಲ್ಲಿ ಬಿಡುಗಡೆಯಾಗಿರುವ ಆಡಿಯೋ ತುಣುಕೊಂದು ಹೀಗೊಂದು ಸಂಶಯವನ್ನು ಹುಟ್ಟು ಹಾಕಿದೆ. ಈ ಆಡಿಯೋ ತುಣುಕಿನ ಸತ್ಯಾಸತ್ಯತೆಯೇನೇ ಇರಲಿ ಈ ಸರಕಾರವನ್ನು ಕೆಡವಿ ಅಧಿಕಾರಕ್ಕೇರಲು ಬಾಜಪ ಪ್ರಯತ್ನಿಸುತ್ತಿರುವುದೇನು ಹೊಸತಲ್ಲ.

ಚುನಾವಣೆಗಳು ಮುಗಿದ ನಂತರ ನೂರಾ ನಾಲ್ಕು ಸ್ಥಾನಗಳನ್ನು ಗೆದ್ದ ಶ್ರೀ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಲೇ ವಿಶ್ವಾಸ ಮತ ಸಾಬೀತಿಗೆ ಬೇಕಾದ ಸಂಖ್ಯೆ ಹೊಂದಲು ಆಪರೇಷನ್ ಕಮಲ ನಡೆಸಲು ಪ್ರಯತ್ನಗಳು ನಡೆದಿದ್ದವು. ವಿಶ್ವಾಸ ಮತದ ಮೇಲಿನ ಚರ್ಚೆಯಲ್ಲಿ ಮಾತಾಡುತ್ತ ಸ್ವತ: ಯಡಿಯೂರಪ್ಪನವರೇ ತಾವು ಕಾಂಗ್ರೆಸ್ ಮತ್ತು ಜನತಾದಳದ ಶಾಸಕರುಗಳನ್ನು ಸಂಪರ್ಕಿಸಿದ್ದು ನಿಜವೆಂದು ಹೇಳಿಕೊಂಡಿದ್ದರು. ಅದಾದ ನಂತರ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರವೂ ಆಪರೇಷನ್ ಕಮಲ ನಡೆಸುವ ನಂಬಿಕೆಯಿಂದಲೇ ಬಾಜಪದ ಬಹುತೇಕ ನಾಯಕರುಗಳು ಈ ಸರಕಾರ ಇನ್ನು ಒಂದು ವಾರದಲ್ಲಿ ಬೀಳುತ್ತದೆ, ಇನ್ನು ಎರಡು ವಾರದಲ್ಲಿ ಬೀಳುತ್ತದೆಯೆಂದು ಭವಿಷ್ಯ ನುಡಿಯುತ್ತ ನಗೆಪಾಟಲಿಗೀಡಾಗುತ್ತ ಹೋಗಿದ್ದು ನಮ್ಮ ಮುಂದಿದೆ. ಇದೀಗ ಚಳಿಗಾಲದ ಅಧಿವೇಶನ ಈ ತಿಂಗಳು ಹತ್ತನೇ ತಾರೀಖು ಪ್ರಾರಂಭವಾಗಲಿದ್ದು, ಅದಕ್ಕೂ ಮುಂಚೆ ಸಂಪುಟ ವಿಸ್ತರಣೆ ಮಾಡುವ ತರಾತುರಿಯಲ್ಲಿರುವ ಮೈತ್ರಿ ಸರಕಾರಕ್ಕೆ ಈಗ ಮತ್ತೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಯಥಾ ಪ್ರಕಾರ ಬಾಜಪ ಈ ಆಡಿಯೋದ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದು ತಮ್ಮ ಪಕ್ಷ ಆಪರೇಷನ್ ಕಮಲ ಮಾಡಲು ಹೊರಟಿಲ್ಲ. ತಾವಾಗಿಯೇ ಪಕ್ಷ ಸೇರಲು ಬಯಸುವ ಶಾಸಕರುಗಳಿಗೆ ಬೇಡ ಎನ್ನುವುದಿಲ್ಲ ಎಂದು ಹೇಳಿಕೆ ನೀಡಿದೆ. ಈ ಆಡಿಯೋದ ಅಧಿಕೃತತೆಯನ್ನು ಮತ್ತು ಇದರ ಮೂಲದ ಬಗ್ಗೆ ಚರ್ಚಿಸುವುದಕ್ಕಿಂತ ಮುಖ್ಯವಾಗಿ ಈಗ ಈ ಆಪರೇಷನ್ ಕಮಲ ಯಾರಿಗೆ ಹೆಚ್ಚು ಅನಿವಾರ್ಯವಾಗಿದೆ ಎಂಬುದನ್ನು ನಾವು ವಿಶ್ಲೇಷಿಸಿ ನೋಡಬೇಕಾಗಿದೆ. 

ಆಗ 14, 2018

ಏಕಕಾಲಕ್ಕೆ ಚುನಾವಣೆಗೆ ಬಾಜಪದ ಶಿಫಾರಸ್ಸು! ಯಾಕೆ ಮತ್ತು ಹೇಗೆ?

ಕು.ಸ.ಮಧುಸೂದನ ರಂಗೇನಹಳ್ಳಿ 
ಅಂತೂ ವಿವಿದ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಪಂಡಿತರುಗಳ ವಿರೋಧಗಳ ನಡುವೆಯೂ ದೇಶದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿದಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ತನ್ನ ನಿಲುವಿಗೆ ಬದ್ದವಾಗಿರುವ ಬಾಜಪ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತೆ ಕಾಣುತ್ತಿದೆ. ಇದೀಗ ಅದು ಮುಂದಿನ ವರ್ಷದ ಮೇ ತಿಂಗಳಲ್ಲಿ ನಡೆಯಬಹುದಾದ ಲೋಕಸಭಾ ಚುನಾವಣೆಗಳ ಜೊತೆಗೆ ದೇಶದ ಇತರೆ ಹನ್ನೊಂದು ರಾಜ್ಯಗಳ ವಿದಾನಸಭೆಗಳಿಗೂ ಚುನಾವಣೆ ನಡೆಸುವ ಶಿಫಾರಸ್ಸೊಂದನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳಿಸುವ ಬಗ್ಗೆ ಚಿಂತಿಸುತ್ತಿದೆ. ಈ ಹಿನ್ನೆಲೆಯಲ್ಲಿಯೇ ಬಾಜಪದ ರಾಷ್ಟ್ರೀಯ ಅದ್ಯಕ್ಷರಾದ ಶ್ರೀ ಅಮಿತ್ ಷಾರವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದ್ದಾರೆ. ಇನ್ನು ಕೇಂದ್ರ ಸರಕಾರ ಅಧಿಕೃತವಾಗಿ ಈ ಬಗ್ಗೆ ಚುನಾವಣಾ ಅಯೋಗಕ್ಕೆ ಶಿಫಾರಸ್ಸು ಮಾಡುವ ಸಾದ್ಯತೆ ಹೆಚ್ಚಿದೆ. 

ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಬೇಕಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ್, ಮಿಜೋರಾಂ ರಾಜ್ಯಗಳಲ್ಲಿ ಮುಂದಿನ ಮೆ ತಿಂಗಳವರೆಗು ರಾಜ್ಯಪಾಲರ ಆಡಳಿತವನ್ನು ಹೇರುವುದು. 2019ರ ಅಂತ್ಯಕ್ಕೆ ಅವಧಿ ಮುಗಿಯಲಿರುವ ತಮ್ಮದೇ ಆಡಳಿತ ಇರುವ ಮಹಾರಾಷ್ಟ್ರ,ಹರಿಯಾಣ, ಜಾರ್ಖಂಡ್ ರಾಜ್ಯಗಳ ಸರಕಾರಗಳನ್ನು ಅವಧಿಗೆ ಮುಂಚಿತವಾಗಿಯೇ ವಿದಾನಸಭೆ ವಿಸರ್ಜಿಸಿ ಲೋಕಸಭಾ ಚುನಾವಣೆಯ ಜೊತೆಗೆ ಸದರಿ ರಾಜ್ಯಗಳಿಗೂ ಚುನಾವಣೆ ನಡೆಸುವಂತೆ ಆಯೋಗವನ್ನು ಕೋರುವ ನಿರ್ಣಯವನ್ನು ಅಂಗೀಕರಿಸುವಂತೆ ಮಾಡುವುದು. 2020ಕ್ಕೆ ಚುನಾವಣೆಗೆ ಹೋಗಬೇಕಿರುವ ಬಿಹಾರದಲ್ಲಿ ತಮ್ಮ ಮೈತ್ರಿ ಸರಕಾರದ ನೇತೃತ್ವ ವಹಿಸಿರುವ ಸಂಯುಕ್ತ ಜನತಾದಳದ ಶ್ರೀ ನಿತೀಶ್ ಕುಮಾರ್ ಅವರ ಮನವೊಲಿಸಿ ಬಿಹಾರದ ವಿದಾನಸಭೆಯನ್ನೂ ಅವಧಿಗೆ ಮುನ್ನವೇ ವಿಸರ್ಜಿಸಿ ಲೋಕಸಭೆಯ ಜೊತೆಗೇನೆ ಚುನಾವಣೆಗೆ ಹೋಗುವಂತೆ ಮಾಡುವುದು. ಅಲ್ಲಿಗೆ ತಮ್ಮ ಹಿಡಿತದಲ್ಲಿರುವ ಎಂಟು ರಾಜ್ಯಗಳನ್ನು ಚುನಾವಣೆಗೆ ಸಿದ್ದಪಡಿಸಿದಂತಾಗುತ್ತದೆ. ಇದರ ಜೊತೆಗೆ ಹೇಗಿದ್ದರೂ ಮುಂದಿನ ಮೇ ತಿಂಗಳ ಹೊತ್ತಿಗೆ ಸಹಜವಾಗಿಯೆ ಚುನಾವಣೆ ನಡೆಯಬೇಕಿರುವ ಆಂದ್ರ ಪ್ರದೇಶ, ತೆಲಂಗಾಣ, ಒಡಿಶ್ಸಾ ರಾಜ್ಯಗಳೂ ಸೇರಿಕೊಂಡರೆ ದೇಶದ ಮುವತ್ತು ರಾಜ್ಯಗಳ ಪೈಕಿ ಸುಮಾರು ಹನ್ನೊಂದು ರಾಜ್ಯಗಳು ಲೋಕಸಭೆಯ ಜೊತೆಗೆಯೇ ಚುನಾವಣೆ ಎದುರಿಸುವಂತಾಗುತ್ತದೆ. ಇದು ಸದ್ಯದಲ್ಲಿ ಬಾಜಪ ಮಾಡಲಿರುವ ಶಿಫಾರಸ್ಸಿನ ಹಿಂದಿರುವ ಚಾಣಾಕ್ಷ್ಯ ನಡೆಯಾಗಿದೆ. 

ಜುಲೈ 10, 2018

ಅರವಿಂದ್ ಕೇಜ್ರೀವಾಲ್ ವರ್ಸಸ್ ನರೇಂದ್ರಮೋದಿ!

ಸಾಂಧರ್ಬಿಕ ಚಿತ್ರ. ಮೂಲ: ಡಿ.ಏನ್.ಎ ಇಂಡಿಯಾ 
ಕು.ಸ.ಮಧುಸೂದನ ರಂಗೇನಹಳ್ಳಿ 
ನ್ಯಾಯಾಲಯಗಳ ಮದ್ಯಪ್ರವೇಶಗಳ ನಂತರವೂ ದೆಹಲಿಯ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಶ್ರೀ ಕೇಜ್ರೀವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ (ಇವರ ಹಿಂದಿರುವುದು ಅದೇ ದೆಹಲಿಯ ಗದ್ದುಗೆ ಹಿಡಿದಿರುವ ಪ್ರದಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಕೇಂದ್ರಸರಕಾರ) ನಡುವಿನ ಜಟಾಪಟಿ ಮುಗಿಯುವಂತೆ ಕಾಣುತ್ತಿಲ್ಲ. 

2015ರಲ್ಲಿ ಬಾರೀ ಬಹುಮತದೊಂದಿಗೆ ದೆಹಲಿಯಲ್ಲಿ ಅಧಿಕಾರ ಹಿಡಿದ ಶ್ರೀ ಅರವಿಂದ್ ಕೇಜ್ರೀವಾಲರು ಒಂದು ದಿನವೂ ನೆಮ್ಮದಿಯಾಗಿ ಸರಕಾರ ನಡೆಸಲು ಅಲ್ಲಿನ ಲೆಫ್ಟಿನಂಟ್ ಗವರ್ನರ್ ಬಿಡಲೇ ಇಲ್ಲ. ಬ್ರಿಟೀಷ್ ಸಂಸದೀಯ ಪ್ರಜಾಸತ್ತೆಯಿಂದ ಎರವಲು ಪಡೆದು ನಾವು ಸ್ಥಾಪಿಸಿಕೊಂಡಿರುವ ಈ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಲ್ಲಿರುವವರು ಸದಾ ಕೇಂದ್ರದಲ್ಲಿ ಅಧಿಕಾರ ಹೊಂದಿರುವ ಪಕ್ಷದ ಆಣತಿಯಂತೆ ನಡೆದುಕೊಳ್ಳುವವರೇ ಆಗಿರುತ್ತಾರೆ. ಶೀಲಾ ದೀಕ್ಷಿತ್ ಅಂತವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ ಇಂತಹ ಸಮಸ್ಯೆಗಳೇನು ಎದುರಾಗಿರಲಿಲ್ಲ. ಅದಕ್ಕೆ ಕಾರಣ ಆಗ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದದ್ದು ಶ್ರೀಮತಿ ಶೀಲಾದೀಕ್ಷೀತರ ಕಾಂಗ್ರೆಸ್ ಪಕ್ಷವೇ. ಹೀಗಾಗಿ ಆಗ ದೆಹಲಿ ಮುಖ್ಯಮಂತ್ರಿಗಳ ಅಧಿಕಾರವನ್ನು ಕೇಂದ್ರಸರಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ನಿಯಂತ್ರಿಸಲು ಹೋಗಿರಲಿಲ್ಲ. ಆ ನಂತರವೂ ಬಾಜಪದ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ದಿವಂಗತ ಶ್ರಿ ಮದನಲಾಲ್ ಖುರಾನರವರುಗಳು ಮುಖ್ಯಮಂತ್ರಿಗಳಾಗಿದ್ದಾಗಲೂ ಮುಖ್ಯಮಂತ್ರಿಗಳ ಅಧಿಕಾರಕ್ಕೆ ಕಡಿವಾಣ ಹಾಕುವ ಕೆಲಸವನ್ನು ಅಂದಿನ ಕಾಂಗ್ರೆಸ್ ಸರಕಾರ ಮಾಡಿರಲಿಲ್ಲ. ತನ್ಮೂಲಕ ಪ್ರಜಾಸತ್ತಾತ್ಮಕವಾಗಿ ದೆಹಲಿಯ ಜನತೆ ಆಯ್ಕೆ ಮಾಡಿದ ಸರಕಾರವೊಂದು ತನಗಿರುವ ಅದಿಕಾರಗಳ ಮಿತಿಯಲ್ಲಿಯೇ ಸುಗಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿತ್ತು.

ಮೇ 3, 2018

ನಿರೀಕ್ಷೆ ಮತ್ತು ವಾಸ್ತವ......

ಸಾಂದರ್ಭಿಕ ಚಿತ್ರ 
ಡಾ. ಅಶೋಕ್. ಕೆ. ಆರ್. ಪೇಪರ್ರಿನವನು ಪತ್ರಿಕೆಯನ್ನು ಕಾಂಪೌಂಡಿನೊಳಗೆ ಎಸೆದ ಸದ್ದಿಗೆ ಎಚ್ಚರವಾಯಿತು. ಕಣ್ಣುಜ್ಜಿಕೊಂಡು ಬಾಗಿಲು ತೆರೆದು ಪತ್ರಿಕೆ ತೆಗೆದುಕೊಂಡು ಒಳಬಂದು ಓದಲಾರಂಭಿಸಿದೆ. ಚುನಾವಣೆಯ ಸಮಯದಲ್ಲಿ ರಾಜಕಾರಣಿಗಳ ಮಾತುಗಳಲ್ಲದೆ ಬೇರೆ ಸುದ್ದಿಗಳನ್ನು ಕಾಣಲು ಸಾಧ್ಯವೇ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾತುಗಳೇ ಇವತ್ತಿನ ಪ್ರಮುಖ ಸುದ್ದಿ:

ಸೆಪ್ಟೆಂ 28, 2017

ನಾನೀಗ ಮಾತನಾಡಲೇಬೇಕಿದೆ: ಯಶವಂತ್ ಸಿನ್ಹಾ

ಯಶವಂತ್ ಸಿನ್ಹಾ
ಬಿಜೆಪಿ ಸದಸ್ಯ, ಮಾಜಿ ಹಣಕಾಸು ಸಚಿವ. 
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್ 
ನಮ್ಮ ಹಣಕಾಸು ಸಚಿವರು ದೇಶದ ಆರ್ಥಿಕತೆಯನ್ನು ಗಬ್ಬೆಬ್ಬಿಸಿಬಿಟ್ಟಿರುವುದರ ಬಗ್ಗೆ ನಾನು ಈಗಲೂ ಮಾತನಾಡದೇ ಹೋದರೆ ದೇಶದೆಡೆಗಿನ ನನ್ನ ಕರ್ತವ್ಯಕ್ಕೆ ದ್ರೋಹ ಬಗೆದಂತೆ. ನಾನೀಗ ಹೇಳಲೊರಟಿರುವ ವಿಷಯವು ಬಿಜೆಪಿಯ ಬಹಳಷ್ಟು ಜನರ ಅಭಿಪ್ರಾಯವು ಹೌದು, ಆದರವರು ಭೀತಿಯ ಕಾರಣದಿಂದಾಗಿ ಮಾತನಾಡುತ್ತಿಲ್ಲ ಅಷ್ಟೇ.

ಈ ಸರಕಾರದಲ್ಲಿ ಅರುಣ್ ಜೇಟ್ಲಿಯವರನ್ನು ಅತ್ಯುತ್ತಮ ಮಂತ್ರಿ ಎಂದು ಪರಿಗಣಿಸಲಾಗಿದೆ. ೨೦೧೪ರ ಚುನಾವಣೆ ನಡೆಯುವುದಕ್ಕೆ ಮೊದಲೇ ಹೊಸ ಸರ್ಕಾರದಲ್ಲಿ ಅರುಣ್ ಜೇಟ್ಲಿ ಹಣಕಾಸು ಸಚಿವರಾಗುತ್ತಾರೆನ್ನುವುದು ನಿರ್ಧಾರವಾಗಿಬಿಟ್ಟಿತ್ತು. ಅವರು ಅಮೃತಸರದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದು ಅವರ ಮಂತ್ರಿ ಪದವಿಗೆ ಅಡ್ಡಿಯಾಗಲಿಲ್ಲ. ಇದೆ ರೀತಿಯ ಪರಿಸ್ಥಿತಿ ೧೯೯೮ರಲ್ಲೂ ಉಂಟಾಗಿತ್ತು. ಆಗ ಚುನಾವಣೆ ಸೋತಿದ್ದ ಜಸ್ವಂತ್ ಸಿಂಗ್ ಮತ್ತು ಪ್ರಮೋದ್ ಮಹಾಜನ್ ಅಟಲ್ ಬಿಹಾರಿ ವಾಜಪೇಯಿಯವರಿಗೆ ಹತ್ತಿರದವರಾಗಿದ್ದರೂ ಕೂಡ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದರು. ಆದರೆ ಅರುಣ್ ಜೇಟ್ಲಿಯವರ ವಿಷಯದಲ್ಲಿ ಇದಾಗಲಿಲ್ಲ. ಬದಲಿಗೆ ಪ್ರಧಾನ ಮಂತ್ರಿಯವರು ಅರುಣ್ ಜೇಟ್ಲಿಯವರಿಗೆ ಹಣಕಾಸು ಸಚಿವಾಲಯದ ಜೊತೆಗೆ, ಡಿಸ್ ಇನ್ವೆಸ್ಟ್ಮೆಂಟ್, ರಕ್ಷಣೆ ಮತ್ತು ಕಾರ್ಪೊರೇಟ್ ಕಾರುಬಾರಿನ ಸಚಿವಾಲಯವನ್ನೂ ನೀಡಿದರು. ಒಂದೇ ಏಟಿಗೆ ಒಟ್ಟು ನಾಲ್ಕು ಸಚಿವಾಲಯಗಳನ್ನು ಪಡೆದುಕೊಂಡರು. ಈಗಲೂ ಅವರ ಬಳಿ ಮೂರೂ ಖಾತೆಗಳಿವೆ. ನಾನೂ ಕೂಡ ಹಣಕಾಸು ಸಚಿವನಾಗಿದ್ದವನು. ಆ ಸಚಿವಾಲಯದಲ್ಲಿ ಎಷ್ಟು ಶ್ರಮ ಬೀಳಬೇಕೆನ್ನುವುದು ನನಗೆ ಗೊತ್ತಿದೆ. ಹಣಕಾಸು ಸಚಿವಾಲಯ ಸರಿಯಾಗಿ ಕಾರ್ಯನಿರ್ವಹಿಸಲು ಅದರ ಸಚಿವರು ತಮ್ಮೆಲ್ಲ ಗಮನವನ್ನು ಅತ್ತಲೇ ಕೇಂದ್ರೀಕರಿಸಬೇಕಾದ ಅವಶ್ಯಕತೆಯಿದೆ. ಸವಾಲಿನ ಸಮಯದಲ್ಲಿ ಇಲ್ಲಿನದು ೨೪/೭ ಗಿಂತಲೂ ಹೆಚ್ಚಿನ ಕೆಲಸ ಮಾಡಬೇಕಾಗುತ್ತದೆ ಎಂದರದು ಅತಿಶಯೋಕ್ತಿಯೇನಲ್ಲ. ಸಹಜವಾಗಿ, ಜೇಟ್ಲಿಯಂತಹ ಸೂಪರ್ ಮ್ಯಾನ್ ಕೂಡ ಈ ಕಾರ್ಯದಲ್ಲಿ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. 

ಆಗ 23, 2016

ಈಶ್ವರಪ್ಪನವರ ಹಿಂದ ಚಳುವಳಿಯಲ್ಲಿ ಮಾಯವಾದ ಅ(ಅಲ್ಪಸಂಖ್ಯಾತರು)!

ಸಾಂದರ್ಭಿಕ ಚಿತ್ರ
ಕು.ಸ.ಮಧುಸೂದನನಾಯರ್
23/08/2016
ಸರಿಸುಮಾರು ಹನ್ನೆರಡು ವರ್ಷಗಳ ನಂತರ ಮತ್ತೆ ಅಹಿಂದ ಸುದ್ದಿ ಮತ್ತು ಸದ್ದು ಎರಡನ್ನೂ ಮಾಡುತ್ತಿದೆ. ವ್ಯತ್ಯಾಸವೆಂದರೆ 2005ರ ಸುಮಾರಿನ ಅಹಿಂದ ಇವತ್ತು ಇಲ್ಲವಾಗಿ ಕೇವಲ ಹಿಂದ ಮಾತ್ರ ರಾರಾಜಿಸುತ್ತಿದೆ. ಹಳೆಯ ಅಹಿಂದದಲ್ಲಿ ಅಲ್ಪಸಂಖ್ಯಾತರನ್ನು ಪ್ರನಿಧಿಸುವ ‘ಅ’ ವನ್ನು ಉದ್ದೇಶಪೂರ್ವಕವಾಗಿಯೇ ಕೈಬಿಡಲಾಗಿದೆ. ಯಾಕೆಂದರೆ ಈ ಬಾರಿ ಹಿಂದ ಚಳುವಳಿಯನ್ನು ಮರು ಪ್ರಾರಂಬಿಸಲು ಹೊರಟಿರುವುದು ಸಂಘಪರಿವಾರದ ಕಟ್ಟಾಳುವೂ, ಬಾಜಪದ ಪ್ರಮುಖನಾಯಕರೂ ಆದ ಶ್ರೀ ಈಶ್ವರಪ್ಪನವರು. ಹಾಗಾಗಿ ಯಾವ ಅಲ್ಪಸಂಖ್ಯಾತ ವಿರೋಧಿ ನೀತಿಯ ಸಂಘಟನೆಗಳ ನೆರಳಲ್ಲಿಯೇ ತಮ್ಮ ತಮ್ಮ ರಾಜಕಾರಣ ಮಾಡುತ್ತಾ ಬಂದರೋ ಆ ಈಶ್ವರಪ್ಪನವರಿಂದ ಹಿಂದ ಚಳುವಳಿಯಲ್ಲಿ ಅಲ್ಪಸಂಖ್ಯಾತ ವರ್ಗವೂ ಸೇರಿರುತ್ತದೆಯೆಂದು ನಂಬುವುದು ಮೂರ್ಖತನವಾಗುತ್ತದೆ. ಹಾಗಿದ್ದರೆ ಇವತ್ತೇನು ಈಶ್ವರಪ್ಪನವರು ಸಂಗೊಳ್ಳಿರಾಯಣ್ಣ ಬ್ರಿಗೇಡ್ ಮೂಲಕ ಹಿಂದ ಚಳುವಳಿಯ ಬಗ್ಗೆ ಹೇಳುತ್ತಿದ್ದಾರೆಯೊ ಅದಕ್ಕೂ ಈ ಹಿಂದೆ ಜಾತ್ಯಾತೀತ ಜನತಾದಳದಲ್ಲಿದ್ದಾಗ ಶ್ರೀ ಸಿದ್ದರಾಮಯ್ಯನವರು ಅಹಿಂದ ಚಳುವಳಿಯನ್ನು ಪುನಶ್ಚೇತನಗೊಳಿಸಿದ್ದಕ್ಕೂ ಇರುವ ಮುಖ್ಯ ವ್ಯತ್ಯಾಸವನ್ನು ನಾವಿಲ್ಲಿ ಗಮನಿಸಬೇಕಾಗಿದೆ.

ಈ ಹಿಂದೆ ಶ್ರೀ ಸಿದ್ದರಾಮಯ್ಯನವರು ಅಹಿಂದವನ್ನು ಪುನಶ್ಚೇತನಗೊಳಿಸಲು ಅವರಿಗೊಂದು ರಾಜಕೀಯ ಅನಿವಾರ್ಯತೆಯಿತ್ತು. ಜಾತ್ಯಾತೀತ ಜನತಾದಳದಲ್ಲಿ ತಮ್ಮನ್ನು ಮುಖ್ಯಮಂತ್ರಿ ಮಾಡದೆ ಉಪಮುಖ್ಯಮಂತ್ರಿ ಪಟ್ಟಕ್ಕೆ ಸೀಮಿತಗೊಳಿಸಿದ ಮಾಜಿ ಪ್ರದಾನಿಯೂ, ಜಾತ್ಯಾತೀತ ಜನತಾದಳದ ಅದ್ಯಕ್ಷರೂ ಆದ ಶ್ರೀ ದೇವೇಗೌಡರ ವಿರುದ್ದ ಸಿಡಿದು ನಿಂತು ತನ್ನ ರಾಜಕೀಯ ಅಸ್ಥಿತ್ವವನ್ನು ಸಾಬೀತು ಪಡಿಸುವ ಜರೂರತ್ತು ಅವತ್ತು ಸಿದ್ದರಾಮಯ್ಯನವರ ಮುಂದಿತ್ತು.ಜೊತೆಗೆ ಸರದಿಯಂತೆ ಅಧಿಕಾರ ಅನುಭವಿಸುತ್ತಿದ್ದ ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯದ ಪಾರುಪತ್ಯವನ್ನು ಕೊನೆಗಾಣಿಸಿ ಅಹಿಂದವನ್ನು ಅಧಿಕಾರದ ಸನಿಹಕ್ಕೆ ತರುವ ಒಂದು ಹೊಣೆಗಾರಿಕೆಯೂ ಅವರಿಗಿತ್ತು. ದುರಂತವೆಂದರೆ ಅವರು ಹೀಗೆ ಅಹಿಂದದ ಪರವಾಗಿ ನಿಂತಾಗ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು ಹಿಂದುಳಿದ ವರ್ಗದವರೇ ಆಗಿದ್ದ ಶ್ರೀ ಧರ್ಮಸಿಂಗ್ ಅವರು. ಆದರೆ ಅವರು ತಮ್ಮ ಅಧಿಕಾರ ನಡೆಸುವಲ್ಲಿ ಸಂಪೂರ್ಣವಾಗಿ ಜನತಾದಳದ ದೇವೇಗೌಡರ ಕಪಿಮುಷ್ಠಿಯಲ್ಲಿ ಸಿಲುಕಿಹಾಕಿಕೊಂಡಿದ್ದರು.

ಹೀಗಾಗಿ ರಾಜಕೀಯವಾಗಿ ತಮಗಿರುವ ಜನಸಮುದಾಯದ ಬೆಂಬಲವನ್ನೂ, ಅಹಿಂದ ವರ್ಗಗಳ ತಾಕತ್ತನ್ನು ತೋರಿಸಲು ಸಿದ್ದರಾಮಯ್ಯನವರಿಗೆ ಬೇಕಾಗಿದ್ದ ವೇದಿಕೆಯೊಂದನ್ನು ರಚಿಸಿಕೊಳ್ಳುವ ಕಷ್ಟ ಎದುರಾಗಲಿಲ್ಲ. ಯಾಕೆಂದರೆ ಅಲ್ಲಿಗಾಗಲೇ ಕರ್ನಾಟಕದಲ್ಲಿ ತನ್ನ ಅಸ್ಥಿತ್ವವನ್ನು ಪಡೆದಿದ್ದ ಅಹಿಂದವನ್ನು ಪುನರುಜ್ಜೀವನಗೊಳಿಸಿದ ಶ್ರೀ ಸಿದ್ದರಾಮಯ್ಯನವರು ಅದಕ್ಕೊಂದು ತಾರಾ ಮೆರುಗನ್ನು ನೀಡಿದರು. ಅದಾಗಲೇ ಕಾಂಗ್ರೆಸ್ಸಿನಿಂದ ದೂರಸರಿದಿದ್ದ ಒಕ್ಕಲಿಗ ಮತ್ತು ಲಿಂಗಾಯಿತ ರಾಜಕೀಯ ಶಕ್ತಿಗಳೆದುರು ಅಹಿಂದ ಎದ್ದುನಿಂತು ಕಾಂಗ್ರೆಸ್ಸಿಗೆ ಬೆಂಬಲ ನೀಡುವ ಎಲ್ಲ ಸೂಚನೆಯನ್ನು ನೀಡಿತು. ನಂತರ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಹೋದರು. 2013ರಲ್ಲಿ ನಡೆದ ರಾಜ್ಯವಿದಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಈ ಅಹಿಂದ ವರ್ಗದ ಬೆಂಬಲವೇ ಮುಖ್ಯ ಕಾರಣವಾಗಿತ್ತು.. ಅಲ್ಲಿಗೆ ಅಹಿಂದದ ಮೂಲಕ ಸಿದ್ದರಾಮಯ್ಯನವರು ಎರಡು ವಿಚಾರಗಳ್ನು ಸಾಧಿಸಿ ತೋರಿಸಿದ್ದರು. ಒಂದು, ಅಹಿಂದ ವರ್ಗಗಳು ಒಟ್ಟಾಗಿ ನಿಂತರೆ, ತಾವೇ ಒಂದು ಪ್ರಬಲ ಶಕ್ತಿಯಾಗಿ ಅಧಿಕಾರ ಹಿಡಿಯಬಹುದು ಎನ್ನುವುದು. ಎರಡನೆಯದು, ತಾವು ದೇವೇಗೌಡರು ಹಾಗು ಯಡಿಯೂರಪ್ಪನವರಂತೆ ಒಂದು ಜಾತಿಯ ನಾಯಕರಾಗಿರದೆ ಒಟ್ಟಾರೆ ಅಹಿಂದ ವರ್ಗಗಳ ನಾಯಕರಾಗಿದ್ದೇನೆಂಬುದು. ಹೀಗೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆದ ಸಿದ್ದರಾಮಯ್ಯನವರಿಗೆ ಅಹಿಂದ ಅನಿವಾರ್ಯವಾಗಿತ್ತು,ನಿಜ. ತಮ್ಮ ರಾಜಕೀಯ ಶಕ್ತಿಯ ಪ್ರದರ್ಶನಕ್ಕೆ ಅದನ್ನು ವೇದಿಕೆಯನ್ನಾಗಿ ಬಳಸಿಕೊಂಡಿದ್ದರೂ ಸಹ, ಆ ಹೊತ್ತಿಗಾಗಲೇ ಅವರಿಗಿದ್ದ ಜನಬೆಂಬಲವನ್ನು ಅಹಿಂದ ಪರವಾಗಿ ಬಳಸಿಕೊಂಡು ಅಧಿಕಾರ ಅಹಿಂಣದ ವರ್ಗಗಳಿಗೆ ಅಧಿಕಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದ ಹೊರತಾಗಿಯೂ ಅಹಿಂದಕ್ಕೆ ಪ್ರಾಮಾಣಿಕವಾಗಿ ದುಡಿದ ಮತ್ತು ಆ ವರ್ಗಗಳಿಗೊಂದು ರಾಜಕೀಯ ಅಧಿಕಾರ ತಂದುಕೊಟ್ಟ ಕೀರ್ತಿಯೂ ಸೇರುತ್ತದೆ.

ಇನ್ನು ಇವತ್ತು ಮಾಜಿ ಉಪಮುಖ್ಯಮಂತ್ರಿಯೂ, ಬಾಜಪದ ನಾಯಕರೂ ಆದ ಶ್ರೀ ಈಶ್ವರಪ್ಪನವರ ಹಿಂದ ಚಳುವಳಿಯ ಬಗ್ಗೆ ನೋಡೋಣ: ಯಡಿಯೂರಪ್ಪನವರು ಬಾಜಪದ ರಾಜ್ಯಾದ್ಯಕ್ಷರಾದ ತಕ್ಷಣ ಇಡೀ ಬಾಜಪವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಕ್ರಿಯೆಗೆ ಚಾಲನೆ ನೀಡಿದರು. ಜೊತೆಗೆ ಈ ಹಿಂದೆ ತಾವು ಕೆಜೆಪಿ ಕಟ್ಟಿದಾಗ ತಮ್ಮೊಂದಿಗೆ ಬಾರದೆ ತಮ್ಮನ್ನು ಕಟುವಾಗಿ ಟೀಕಿಸಿದ್ದ ಬಾಜಪದ ನಾಯಕರುಗಳ ವಿರುದ್ದ ಸೇಡಿನ ಕ್ರಮಕ್ಕೆ ಮುಂದಾದರು. ಇದರ ಭಾಗವಾಗಿ ಅವರು ಪಕ್ಷದ ಪದಾಧಿಕಾರಿಗಳ ಪಟ್ಟಿ ರಚಿಸುವಾಗ ಬಾಜಪದ ಇತರೇ ಯಾವುದೇ ನಾಯಕರುಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹಾಗು ತಾವು ಹಿಂದೆ ಕಟ್ಟಿದಾಗ ತಮ್ಮ ಜೊತೆಗಿದ್ದ ಕೆಜೆಪಿಯ ಬಹಳಷ್ಟು ನಾಯಕರುಗಳಿಗೆ ಬಾಜಪದ ಪದಾಧಿಕಾರಿಗಳನ್ನಾಗಿ ಮಾಡಿದ್ದರು. ಯಡಿಯೂರಪ್ಪನವರ ಆಪ್ತವಲಯಕ್ಕೆ ಮಾತ್ರ ಅನುಕೂಲಕರವಾಗಿದ್ದ ಇಂತಹದೊಂದು ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾದಾಗ ಇದನ್ನು ನಿರೀಕ್ಷಿಸಿದ್ದವರಿಗೂ ಅಚ್ಚರಿಯಾಗುವಷ್ಟು ಜನ ಯಡಿಯೂರಪ್ಪನವರ ಬೆಂಬಲಿಗರೇ ತುಂಬಿದ್ದರು. ಇದು ಬಾಜಪದೊಳಗಿನ ಯಡಿಯೂರಪ್ಪನವರ ವಿರೋಧಿಬಣಕ್ಕೆ ನುಂಗಲಾರದ ತುತ್ತಾಯಿತು. ಆದರೆ ಯಡಿಯೂರಪ್ಪನವರ ಹಟಮಾರಿ ಧೋರಣೆ ಹಾಗು ಕೋಪದ ಬಗ್ಗೆ ಅರಿವಿದ್ದ ನಾಯಕರ್ಯಾರು ಅವರ ವಿರುದ್ದ ದ್ವನಿಯೆತ್ತುವ ಧೈರ್ಯ ಮಾಡಲಿಲ್ಲ. ಆದರೆ ಬಾಜಪ ಅಧಿಕಾರದಲ್ಲಿ ಇದ್ದಾಗಲಿಂದಲೂ ಯಡಿಯೂರಪ್ಪನವರ ಬಗ್ಗೆ ನೇರಾನೇರಾ ಮಾತಾಡುತ್ತಿದ್ದ ಈಶ್ವರಪ್ಪನವರು ಮಾತ್ರ ಸುಮ್ಮನೇ ಕೂರಲಿಲ್ಲ. ಬದಲಿಗೆ ಇದರ ಬಗ್ಗೆ ಮಾಧ್ಯಮಗಳ ಎದುರೇ ಹೇಳಿಕೆ ನೀಡಿದರು. ಅವರ ಇಂತಹ ಆಕ್ರೋಶಕ್ಕೂ ಸೂಕ್ತ ಕಾರಣವಿತ್ತು. ಅದೆಂದರೆ ಕಳೆದ ವಿದಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣರಾಗಿದ್ದ ರುದ್ರೇಗೌಡರನ್ನು ಶಿವಮೊಗ್ಗ ಜಿಲ್ಲಾ ಬಾಜಪದ ಅದ್ಯಕ್ಷರನ್ನಾಗಿ ಮಾಡಲಾಗಿತ್ತು. ಇದರಿಂದ ತಮ್ಮ ಜಿಲ್ಲೆಯಲ್ಲಿಯೇ ತಮಗೆ ಅವಮಾನ ಮಾಡಲಾಗಿದೆಯೆಂಬ ಕೋಪ ಈಶ್ವರಪ್ಪನವರನ್ನು ಉದ್ರಿಕ್ತಗೊಳಿಸಿದ್ದು ನಿಜ.

ಆದರೆ ವಾಸ್ತವ ಇದಕ್ಕಿಂತ ಭಿನ್ನವಿದೆ. ಯಾಕೆಂದರೆ ಪಕ್ಷದೊಳಗಿನ ಉಳಿದ ನಾಯಕರುಗಳ ಸಂಪೂರ್ಣ ಬೆಂಬಲವಿಲ್ಲದೆ ಈಶ್ವರಪ್ಪನವರು ಯಡಿಯೂರಪ್ಪನವರ ವಿರುದ್ದ ಈ ಮಟ್ಟದಲ್ಲಿ ದನಿಯೆತ್ತುವುದು ಕಷ್ಟದ ಮಾತು. ಇದಕ್ಕೆ ತಕ್ಕ ಹಾಗೆ ಈಗ ಈಶ್ವರಪ್ಪನವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ತಾವು ಹಿಂದ( ಹಿಂದುಳಿದ ಮತ್ತು ದಲಿತ) ಚಳುವಳಿಗೆ ಮರುಜನ್ಮ ನೀಡಿ ಅವರ ಅಭಿವೃದ್ದಿಗಾಗಿ ಹೋರಾಡುವ ಮಾತಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರು ಈ ಸಮುದಾಯಗಳ ಅನೇಕ ನಾಯಕರುಗಳ ಜೊತೆ ಸಭೆಗಳನ್ನು ನಡೆಸುತ್ತಿದ್ದು, ಸಕ್ರಿಯವಾಗಿ ತಾವು ಬ್ರಿಗೇಡಿನ ಪದಾಧಿಕಾರಿಯಾಗದೇ ಹೋದರು ಹಿನ್ನೆಲೆಯಲ್ಲಿ ನಿಂತು ಅದರ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದ್ದಾರೆ. 

ಸರಿಯಾಗಿ ವಿಶ್ಲೇಷಿಸಿ ನೋಡಿದರೆ ಈಶ್ವರಪ್ಪನವರ ಈ ನಡೆಯ ಹಿಂದೆ ಯಡಿಯೂರಪ್ಪನವರ ನಾಗಾಲೋಟಕ್ಕೆ ತಡೆಯೊಡ್ಡಲು ಸಂಘಪರಿವಾರ ನಡೆಸುತ್ತಿರುವ ಚಾಣಕ್ಯ ನಡೆಯ ಒಂದು ಭಾಗವೇ ಈಶ್ವರಪ್ಪನವರ ಹಿಂದ ಚಳುವಳಿಯ ಮಾತುಗಳು. ಯಾಕೆಂದರೆ ಲಿಂಗಾಯಿತರ ಮತಬ್ಯಾಂಕಿನ ಏಕೈಕ ಕಾರಣಕ್ಕೆ ಮತ್ತು ಮುಂದಿನ ವಿದಾನಸಭಾ ಚುನಾವಣೆಗಳಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ಯಡಿಯೂರಪ್ಪನವರಿಗೆ ರಾಜ್ಯಾದ್ಯಕ್ಷ ಪದವಿ ನೀಡಿದ ಬಾಜಪದ ಹೈಕಮ್ಯಾಂಡ್, ಇದೀಗ ಕೈ ಕೈ ಹಿಚುಕಿಕೊಳ್ಳುವ ಸನ್ನಿವೇಶ ನಿಮಾಣವಾಗಿದೆ. ಯಾಕೆಂದರೆ ಅದ್ಯಕ್ಷ ಪದವಿ ದೊರೆತ ತಕ್ಷಣವೇ ಯಡಿಯೂರಪ್ಪನವರ ರಾಜಾಕಾರಣದ ನಡೆಗಳೇ ಬದಲಾಗಿತ್ತು. ಉಳಿದೆಲ್ಲ ರಾಜ್ಯಮಟ್ಟದ ನಾಯಕರುಗಳನ್ನು ಪಕ್ಕಕ್ಕೆ ಸರಿಸಿ ತಮ್ಮ ಬೆಂಬಲಿಗರನ್ನು ಆಯಕಟ್ಟಿನ ಜಾಗದಲ್ಲಿ ಕೂರಿಸುವ ಅವರ ಆಸೆಗೆ ಅನುಗುಣವಾಗಿಯೇ ಪದಾಧಿಕಾರಿಗಳ ಪಟ್ಟಿ ತಯಾರಾಗಿತ್ತು. ಜೊತೆಗೆ ಮುಂದಿನ ವಿದಾನಸಭೆಗೆ ಟಿಕೇಟು ನೀಡುವಾಗ ತಮ್ಮ ಬೆಂಬಲಿಗರಿಗೆ ಹೆಚ್ಚು ಸ್ಥಾನ ದೊರೆಯತುವಂತೆ ಮಾಡಲು ಸಹ ಈ ಪದಾಧಿಕಾರಿಗಳ ಪಟ್ಟಿ ಸಹಾಯಕವಾಗುವಂತಿತ್ತು. ಯಡಿಯೂರಪ್ಪನವರ ಈ ಮಹತ್ವಾಕಾಂಕ್ಷೆಯನ್ನು ಸಂಘಪರಿವಾರವಾಗಲಿ, ಬಾಜಪದ ಹೈಕಮ್ಯಾಂಡ್ ಅಮಿತ್ ಷಾ ಅಥವಾ ಪ್ರದಾನಮಂತ್ರಿ ನರೇಂದ್ರರ ಮೋದಿಯವರಾಗಲಿ ಸಹಿಸುವ ಪರಿಸ್ಥಿತಿಯಲ್ಲಿ ಇಲ್ಲ. ತನಗಿಂತ ದೊಡ್ಡದಾಗಿ ಬೆಳೆಯುವ ಯಾವ ನಾಯಕನನ್ನೂ ಸಂಘಪರಿವಾರ ಸಹಿಸುವುದಿಲ್ಲ. ಇನ್ನು ಕೇಂದ್ರದಲ್ಲಿಯೂ ಇದೇ ಮನಸ್ಥಿತಿ ಇದೆ. ಅಮಿತ್ ಷಾ ಮತ್ತು ಮೋದಿ ಜೋಡಿ ತಮಗಿಂತ ಗಟ್ಟಿಯಾಗಿ ಬೆಳೆಯುವ ಯಾವ ಪ್ರಾದೇಶಿಕ ನಾಯಕನನ್ನೂ ಅದು ಸಹನೆಯಿಂದ ಕಾಣುವುದಿಲ್ಲ. ಈ ಹಿನ್ನೆಲೆಯಲ್ಲಿಯೇ ಅವರು ರಾಜಸ್ಥಾನದ ಮುಖ್ಯಮಂತ್ರಿ ವಸುಂದರರಾಜ್ ಅವರ ವಿರುದ್ದ ಭಿನ್ನಮತೀಯ ದ್ವನಿಗಳನ್ನು ಬೆಂಬಲಿಸಿದ್ದರು ಆದರೆ ರಾಜ್ಯದ ಶಾಸಕರುಗಳನ್ನು ತನ್ನ ಮುಷ್ಠಿಯಲ್ಲಿಟ್ಟುಕೊಂಡಿದ್ದ ವಸುಂದರರಾಜೆ ಭಿನ್ನಮತವನ್ನು ಹತ್ತಿಕ್ಕಿ ಮುಂದುವರೆಯುತ್ತಿದ್ದಾರೆ, ಇನ್ನು ಮದ್ಯಪ್ರದೇಶದಲ್ಲಿ ಅದ್ವಾನಿಯವರ ಬೆಂಬಲಿಗರಾದ ಶಿವರಾಜಸಿಂಗ್ ಸಹ ಸ್ಥಳೀಯವಾಗಿ ಬಲಾಢ್ಯರಾಗಿದ್ದು ಅಲ್ಲಿ ಷಾ-ಮೋದಿ ಜೋಡಿಗೆ ಮಾನ್ಯತೆಯಿಲ್ಲದಂತಾಗಿದೆ. ಈ ಕಾರಣಗಳಿಂದಾಗಿಯೇ ಮಹಾರಾಷ್ಟ್ರ, ಗುಜರಾತ್, ಗೋವಾ, ಅಸ್ಸಾಮಿನಲ್ಲಿ ಮುಖರಹಿತವಾದ, ಹೊಸನಾಯಕರುಗಳನ್ನು, ತಮಗೆ ಬೇಕಾದವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿರುವುದು. ಹಾಗಾಗಿ ಮುಂದೆ ಯಡಿಯೂರಪ್ಪನವರು ರಾಜಕೀಯವಾಗಿ ಬಲಾಢ್ಯರಾಗಿ ಬಿಡುತ್ತಾರೆಂಬ ಕಾರಣದಿಂದಲೇ ಅವರನ್ನು, ಅವರ ಓಟವನ್ನು ತಡೆಹಿಡಿಯುವ ದೃಷ್ಠಿಯಿಂದಲೇ ಈಶ್ವರಪ್ಪನವರ ಕೈಲಿ ಹಿಂದ ಚಳುವಳಿಯ ಮಾತಾಡಿಸುತ್ತ, ಬಾಜಪಕ್ಕೆ ಹಿಂದ ವರ್ಗದವರ ಬೆಂಬಲವು ಇದ್ದು ಲಿಂಗಾಯಿತರ ಮತವಷ್ಟೇ ಅನಿವಾರ್ಯವಲ್ಲ ಎಂಬುದನ್ನು ಯಡಿಯೂರಪ್ಪನವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಲಾಗುತ್ತಿದೆ. ಇಂತಹ ಕಾರಣದಿಂದಲೇ ಸ್ವತ: ಯಡಿಯೂರಪ್ಪನವರೇ ಸಿದ್ದಪಡಿಸಿ ಕಳಿಸಿದ್ದ ಕೋರ್ ಕಮಿಟಿಯನ್ನು ಸಹ ಹೈಕಮ್ಯಾಂಡ್ ತನಗಿಷ್ಟಬಂದಂತೆ ಸರಿಪಡಿಸಿ ಕಳಿಸಿ, ಯಡಿಯೂರಪ್ಪನವರಿಗೆ ಒಂದು ಎಚ್ಚರಿಕೆಯನ್ನೂ ನೀಡಿದೆ.

ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಯಡಿಯೂರಪ್ಪನವರ ಯೋಜನೆಯನ್ನು ತಡೆಹಿಡಿಯಲು ಸಂಘಪರಿವಾರ ಇಂತಹದೊಂದು ತಂತ್ರಗಾರಿಕೆ ಹೆಣೆದಿದ್ದು, ಸದ್ಯ ಈಶ್ವರಪ್ಪನವರು ಅದರ ಯಾಗದ ಕುದುರೆಯಾಗಿದ್ದಾರೆ. ಇದನ್ನು ಅರಿತೊ ಅರಿಯದೆಯೋ ಈಶ್ವರಪ್ಪನವರು ಯಡಿಯೂರಪ್ಪನವರ ವಿರುದ್ದದ ತಮ್ಮ ಹಿಂದ ಚಟುವಟಿಕೆಗಳನ್ನು ಮುಂದುವರೆಸುತ್ತಿದ್ದಾರೆ. ಪಕ್ಷದೊಳಗಿರುವ ವಿವಿದ ಮೋರ್ಚಾಗಳನ್ನು ಬಳಸಿಕೊಂಡು ಈಶ್ವರಪ್ಪನವರು ಹೋರಾಟಮಾಡಲೆಂಬ ಯಡಿಯೂರಪ್ಪನವರ ಮಾತಿಗೆ ಈಶ್ವರಪ್ಪನವರು ತಲೆ ಕೆಡಿಸಿಕೊಳ್ಳದೆ, ಸೆಪ್ಟೆಂಬರ್ ತಿಂಗಳ 21ನೇ ತಾರೀಖು ಹಾವೇರಿಯಲ್ಲಿ ಹಿಂದ ಸಮಾವೇಶ ಮಾಡುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದಾರೆ. ಇದೀಗ ಮೌನವಾಗಿರುವಂತೆ ಕಾಣುತ್ತಿರುವ ಯಡಿಯೂರಪ್ಪನವರು ಅಷ್ಟು ಸುಲಭಕ್ಕೆ ಈ ತಂತ್ರಗಳಿಗೆ ಮಣಿಯುವವರಲ್ಲ.

ಈಶ್ವರಪ್ಪನವರ ಹಿಂದ ಚಳುವಳಿಯ ತಂತ್ರಗಾರಿಕೆಯಲ್ಲಿ ಅ ಅಂದರೆ ಅಲ್ಪಸಂಖ್ಯಾತರನ್ನು ಬಿಡಲಾಗಿದ್ದು, ಇದು ಸಂಘಪರಿವರದ ಪ್ರಾಯೋಜಿತ ಚಳುವಳಿ ಎನ್ನುವುದನ್ನು ಇದೊಂದೇ ತೋರಿಸುತ್ತದೆ. ಅಲ್ಲದೆ ಸಿದ್ದರಾಮಯ್ಯನವರಷ್ಟು ಜನಬೆಂಬಲವಿರದ ಈಶ್ವರಪ್ಪನವರು ಯಡಿಯೂರಪ್ಪನವರನ್ನು ಹಣಿಯುವ ಮತ್ತು ತಮ್ಮನ್ನು ಪಕ್ಷದೊಳಗೆ ಗಟ್ಟಿ ಮಾಡಿಕೊಳ್ಳುವ ಏಕೈಕ ಉದ್ದೇಶದಿಂದಲೇ ಹಿಂದವನ್ನು ಬಳಸಿಕೊಳ್ಳುತ್ತಿರುವುದು ಸ್ವತ: ಹಿಂದ ವರ್ಗಗಳಿಗೆ ಗೊತ್ತಾಗಿದೆ. ಯಾಕೆಂದರೆ ಇದೀಗ ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದು, ಅವರ ಸಚಿವ ಸಂಪುಟದಲ್ಲಿ ಹಿಂದುಳಿದ ಮತ್ತು ದಲಿತ ವರ್ಗದವರುಗಳೇ ಬಹುಮುಖ್ಯವಾದ ಖಾತೆಗಳನ್ನು ಹೊಂದಿದ್ದಾರೆ. ಜೊತೆಗೆ ಅಲ್ಪಸಂಖ್ಯಾತರಿಗೂ ಸಾಠಕಷ್ಟು ಪ್ರಾತಿನಿದ್ಯ ದೊರೆತಂತಾಗಿದೆ. ಪರಿಸ್ಥಿತಿ ಹೀಗಿರುವಾಗ, ಸ್ವತ: ಅಹಿಂದ ವರ್ಗಗಳೇ ಅಧಿಕಾರ ಅನುಭವಿಸುತ್ತಿರುವಾಗ ಮತ್ತೆ ಹಿಂದ ವರ್ಗಗಳ ಅಭಿವೃದ್ದಿಗಾಗಿ ಈ ಚಳುವಬಳಿ ಎನ್ನುವ ಈಶ್ವರಪ್ಪನವರ ಮಾತು ಚಟುವಟಿಕೆಗಳು ಹಾಸ್ಯಾಸ್ಪದವಾಗಿವೆ.

ಸೆಪ್ಟೆಂ 9, 2015

ಮಂಗಳೂರಿನ ಮತಿಗೆಟ್ಟ 'ಯುವಕರು'


Ashok K R
ದಕ್ಷಿಣ ಕನ್ನಡದಲ್ಲಿ ಬಿಜೆಪಿಯದೇ ಪಾರುಪತ್ಯವಿತ್ತು. ಬಿಜೆಪಿ ಬೆಂಬಲಿತ ಸಂಘಪರಿವಾರದ ವಿವಿಧ ಶಾಖೆಗಳ ಆಟೋಟಾಪಗಳು, ಸಾಮಾನ್ಯ ಜನರಿಗೆ ವಿನಾಕಾರಣವಾಗಿ ಅವರು ನೀಡಿದ ತೊಂದರೆ, ಅದರ ಜೊತೆಜೊತೆಗೇ ಬೆಳೆದ ಮುಸ್ಲಿಂ ಮೂಲಭೂತವಾದಿಗಳ ಕಾಟವೆಲ್ಲವೂ ಸೇರಿ ಜನರನ್ನು ಜಿಗುಪ್ಸೆಗೆ ತಳ್ಳಿತ್ತು. ಆ ಜಿಗುಪ್ಸೆಯ ಫಲವೆಂಬಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು, ಸುಳ್ಯ ಕ್ಷೇತ್ರವೊಂದನ್ನು ಹೊರತುಪಡಿಸಿ. ಓ! ಕಾಂಗ್ರೆಸ್ ಬಂತು, ಅದರಲ್ಲೂ ಸಿದ್ಧರಾಮಯ್ಯನಂತಹ 'ಸಮಾಜವಾದಿ' 'ಅಹಿಂದ' ನಾಯಕ ಈಗ ಮುಖ್ಯಮಂತ್ರಿ. ಇನ್ನೇನು ಇಡೀ ದಕ್ಷಿಣ ಕನ್ನಡ ಶಾಂತಿಯ ಬೀಡಾಗಿಬಿಡುತ್ತದೆ ಎಂದುಕೊಂಡಿರಾದರೆ ಅದು ಖಂಡಿತ ತಪ್ಪು. ತಪ್ಪೆಂದು ನಿರೂಪಿಸಲು ಮತ್ತೆ ಮತ್ತೆ ಅನೈತಿಕ ಪೋಲೀಸ್ ಗಿರಿಯಂತಹ ಕಾರ್ಯಗಳು ನಡೆಯುತ್ತಲೇ ಇವೆ. 
ಮುಸ್ಲಿಮನೊಬ್ಬ ಪರಿಚಯದ ಹಿಂದೂ ಹುಡುಗಿಯೊಂದಿಗೆ ಹೋಗುವುದು, ಹಿಂದೂವೊಬ್ಬ ಪರಿಚಯದ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುವುದು ಇಲ್ಲಿ ಧರ್ಮದ್ರೋಹದ ಅಪರಾಧ! ಇಂತವರ ವಿರುದ್ಧ ಮಾತನಾಡಿದರೆ ಅದು ದೇಶದ್ರೋಹಕ್ಕೆ ಸಮ! ನಿನ್ನೆ ದಿನ ಹಿಂದೂ ಯುವಕೊನೊಬ್ಬನನ್ನು ನಡುಬೀದಿಯಲ್ಲಿ ಹೊಡೆಯಲಾಗಿದೆ. ಕಾರಣ ಆತ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುತ್ತಿದ್ದ. ಹೆಣ್ಣುಮಕ್ಕಳ 'ರಕ್ಷಣೆಯ' ನೆಪದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಇಂತಹ ಕೃತ್ಯವೆಸಗಿದ್ದಾರೆ! ಸಹಪಾಠಿಗಳೂ ಮಾತನಾಡದಂತಹ ಸ್ಥಿತಿಗೆ ಮಂಗಳೂರು ತಲುಪಿರುವುದಾದರೂ ಯಾಕೆ?
ಮೇಲಿನ ಚಿತ್ರ ಗಮನಿಸಿ, ಆ ಹಿಂದೂ ಹುಡುಗನ ಎದುರಿಗೆ ನಿಂತು ಬಹುಶಃ 'ಸಂಸ್ಕೃತಿ'ಯ ಪಾಠ ಮಾಡುತ್ತಿರುವವರೆಲ್ಲರೂ ಯುವಕರು. ಇಂತಹ ಯುವಕರಿಗೆ ಕೋಮುನಂಜನ್ನು ತುಂಬುತ್ತಿರುವವರಾರು? ಆ ಕೋಮು ವಿಷವನ್ನು ತುಂಬುವ ವ್ಯಕ್ತಿಗಳು ದೊಡ್ಡ ದೊಡ್ಡ ಭಾಷಣ ಬಿಗಿದು ಬೆಚ್ಚಗೆ ಮನೆ ಸೇರುತ್ತಾರೆ. ವಿಷದ ನಂಜೇರಿದ ಈ ಯುವಕರು ಬೀದಿಯಲ್ಲಿ ಓಡಾಡುತ್ತಿದ್ದ ಗೆಳೆಯರಿಬ್ಬರನ್ನೂ ಹಿಡಿದು ಚಚ್ಚುತ್ತಾರೆ. ಕೊನೆಗೆ ಜೈಲು ಪಾಲಾಗುವ ಸಂದರ್ಭ ಬಂದರೆ ಅದು ಈ ಹುಡುಗರಿಗೇ ಹೊರತು ಭೀಕರ ಭಾಷಣ ಕುಟ್ಟುವವರಿಗಲ್ಲ.
ಅಂದಹಾಗೆ ಕಾಂಗ್ರೆಸ್ ಸರಕಾರ ಬಂದ ಮೇಲೂ ಇದು ಯಾಕೆ ನಡೆಯುತ್ತಿದೆ ಎಂದಿರಾ? ಬಿಜೆಪಿ ಮಂಗಳೂರಿನಲ್ಲಿ ಉಗ್ರ ಹಿಂದೂ ಮೂಲಭೂತವಾದ ನಡೆಸಿದರೆ ಕಾಂಗ್ರೆಸ್ ನಡೆಸುವುದು ಸೌಮ್ಯ ಹಿಂದೂ ಮೂಲಭೂತವಾದ.... ಹಿಂದೂ ಮೂಲಭೂತ ಅಸ್ತಿತ್ವದಲ್ಲಿರಬೇಕಾದರೆ ಮುಸ್ಲಿಂ ಮೂಲಭೂತವಿಲ್ಲದಿದ್ದರೆ 'ಇಸ್ಲಾಮಿಗೆ' ಅವಮಾನವೆಂದು ಈ ಯುವಕರು ತಿಳಿದಿರಬೇಕು! ತನ್ನಲ್ಲಿರುವ ಅಪಾರ ಪ್ರಮಾಣದ ನೈಸರ್ಗಿಕ ಸೌಂದರ್ಯದಿಂದ ಗಮನ ಸೆಳೆಯಬೇಕಿದ್ದ ಮಂಗಳೂರು ಮತಿಗೆಟ್ಟವರ ಕಾರಣದಿಂದಲೇ ಸುದ್ದಿಯಾಗುತ್ತಿರುವುದು ಬೇಸರದ ಸಂಗತಿ.

ಈ ಇಡೀ ಲೇಖನವನ್ನು ಹೊಸದಾಗಿ ಬರೆದಿಲ್ಲ. ಅತ್ತಾವರದಲ್ಲಿ ಹಿಂದೂ ಮೂಲಭೂತವಾದಿಗಳು ನಡೆಸಿದ ದಾಂಧಲೆಯ ಸಂದರ್ಭದಲ್ಲಿ ಬರೆದ "ಮಂಗಳೂರಿನ ಮತಿಗೆಟ್ಟ ಹುಡುಗರು "ಲೇಖನವನ್ನೇ ಕಾಪಿ ಪೇಸ್ಟ್ ಮಾಡಲಾಗಿದೆ! ಹಿಂದೂ ಎನ್ನುವ ಜಾಗದಲ್ಲಿ ಮುಸ್ಲಿಂ ಎಂದು ಮುಸ್ಲಿಂ ಎಂದು ಬರೆದಿದ್ದ ಜಾಗದಲ್ಲಿ ಹಿಂದೂ ಎಂದು ತಿದ್ದಿದರೆ ಈ ಲೇಖನ ಸಿದ್ಧವಾಗಿಬಿಟ್ಟಿತು. ಮೂಲಭೂತವಾದಿಗಳ ಕಾರ್ಯವೈಖರಿಯಲ್ಲಿ ಅಷ್ಟರಮಟ್ಟಿಗೆ ಹೋಲಿಕೆಗಳಿವೆ.

ಸೆಪ್ಟೆಂ 3, 2015

ಮುಜಾಫರ್ ನಗರದ ಕೋಮುಗಲಭೆಯಲ್ಲಿ ನಲುಗಿದ ಧರ್ಮವ್ಯಾವುದು?

Muzaffarnagar baaqi hai
Dr Ashok K R
ದೃಶ್ಯ 1: 
ಪುಟ್ಟ ಹುಡುಗನನ್ನು ಸಂದರ್ಶನಕಾರರು ಮಾತನಾಡಿಸುತ್ತಿರುತ್ತಾರೆ. ಬಾಗಿಲ ಹೊರಗೆ ಗೋಡೆಗೊರಗಿಕೊಂಡು ನಿಂತಿರುತ್ತಾನೆ ಹುಡುಗ. ನಿಮ್ಮ ಊರು ಬಿಟ್ಟು ಇಲ್ಲಿಗ್ಯಾಕೆ ಬಂದೆ ಎನ್ನುತ್ತಾನೆ ಸಂದರ್ಶಕ. ‘ನಮ್ಮ ಮನೆ ಅಂಗಡಿಗೆಲ್ಲ ಬೆಂಕಿ ಹಚ್ಚಿಬಿಟ್ಟಿದ್ದರು. ಅದಕ್ಕೆ ಇಲ್ಲಿಗೆ ಬಂದೆ’.
‘ಶಾಲೆಗೆ ಹೋಗುತ್ತಿದ್ದಾ ಅಲ್ಲಿ’
‘ಹ್ಞೂ’
‘ಈಗ ಹೋಗ್ತಿಲ್ವಾ ಶಾಲೆಗೆ’
‘ಇಲ್ಲ’
‘ಯಾಕೆ’
ಹುಡುಗ ಒಂದರೆಕ್ಷಣ ಯೋಚಿಸುತ್ತಾನೆ ‘ಹೋಗ್ತೀನಿ ಇನ್ಮೇಲೆ’ ಎಂದ್ಹೇಳಿ ಒಳಗೋಡುತ್ತಾನೆ. ಒಂದೇ ಕೋಣೆಯ ಮನೆಯಲ್ಲಿ ಅಡುಗೆ ಮಾಡುತ್ತಿರುತ್ತಾಳೆ ಅಮ್ಮ. ‘ಅಮ್ಮ ಅಮ್ಮ ನಾನು ಶಾಲೆಗೆ ಹೋಗ್ತೀನಲ್ವಾ’ ಎಂದು ಕೇಳುತ್ತಾನೆ. ಅಮ್ಮನ ಬಳಿ ಸರಿಯಾದ ಉತ್ತರವಿರುವುದಿಲ್ಲ.
ದೃಶ್ಯ 2:
ರೈತರ ಸಂಘಟನೆಯ ಮುಖಂಡನೊಡನೆ ಮಾತುಕತೆ. ‘ಕಬ್ಬಿಗೆ ಬೆಲೆ ಸಿಕ್ಕಿಲ್ಲವಲ್ಲ ಯಾಕೆ?’
‘ಪ್ರತಿ ವರ್ಷ ಸರಿಯಾದ ಬೆಲೆ ಸಿಗುತ್ತಿರಲಿಲ್ಲ. ಹೋರಾಟ ಮಾಡುತ್ತಿದ್ದೋ. ಕಾರ್ಖಾನೆಯವರು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುತ್ತಿದ್ದರು’
‘ಈಗ’
‘ಈಗೆಲ್ಲಿ ಗಲಭೆ ನಡೆದ ನಂತರ ರೈತರೆಲ್ಲ ಮುಸ್ಲಿಂ ಜಾಟ್, ಹಿಂದೂ ಜಾಟ್ ಆಗಿಬಿಟ್ಟಿದ್ದಾರೆ. ರೈತ ಹೋರಾಟ ಹಳ್ಳಹಿಡಿದಿದೆ. ಮೊದಲು ಮುಸ್ಲಿಮರು ಅಲ್ಲಾಹೋ ಅಕ್ಬರ್ ಅಂದ್ರೆ ಹಿಂದೂ ಹರಹರ ಮಹಾದೇವ್ ಅಂತ ಪ್ರತಿಕ್ರಿಯಿಸುತ್ತಿದ್ದ. ಈಗ ಹರಹರ ಮಹಾದೇವ್ ಅಷ್ಟೇ ಉಳಿದಿದೆ. ಅದೂ ಇಲ್ಲ ಹರಹರ ಮೋದಿ ಅಷ್ಟೇ ಉಳಿದಿದೆ.
Muzaffarnagar baaqi hai
ಗಲಭೆಗೆ ಬಲಿಯಾದ ಬಾಲ್ಯ
ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ಕೋಮುಗಲಭೆಯ ಬಗ್ಗೆ ನಕುಲ್ ಸಿಂಗ್ ಸಾಹ್ನಿ ತೆಗೆದಿರುವ ‘ಮುಜಾಫರ್ ನಗರ್ ಬಾಕೀ ಹೈ’ ಸಾಕ್ಷ್ಯಚಿತ್ರದ ಎರಡು ದೃಶ್ಯಗಳಿವು. ಇಡೀ ಕೋಮುಗಲಭೆಯಿಂದ ಅನ್ಯಾಯಕ್ಕೊಳಗಾದವರಾರೆಂದು ಈ ಎರಡೇ ದೃಶ್ಯದಲ್ಲಿ ತೋರಿಸಿಬಿಡುತ್ತಾರೆ. ಬಾಲ್ಯ ಕಳೆದುಕೊಂಡ ಮಕ್ಕಳು, ಹಕ್ಕಿನ ಹೋರಾಟ ಕಳೆದುಕೊಂಡ ರೈತರು ಇಡೀ ಕೋಮುಗಲಭೆಯೆಂಬ ಪೂರ್ವನಿಯೋಜಿತ ಹಿಂಸಾ ನಾಟಕದಿಂದ ನೊಂದವರು. ಕೋಮುಗಲಭೆಯ ಸಂದರ್ಭವನ್ನನುಸರಿಸಿ ತೆಗೆಯುವ ಸಾಕ್ಷ್ಯಚಿತ್ರಗಳು ಒಂದು ಧರ್ಮದ ಪರವಾಗಿ ಮತ್ತೊಂದು ಧರ್ಮದ ವಿರುದ್ಧವಾಗಿ ವಾದ ಮಂಡಿಸಿಬಿಡುವ ಸಾಧ್ಯತೆಗಳೇ ಹೆಚ್ಚು. ತಮಗೆ ಬೇಕಾದವರ ಮಾತುಗಳನ್ನಷ್ಟೇ ಚಿತ್ರೀಕರಿಸಿಕೊಂಡು ತಮ್ಮಲ್ಲಿರುವ ಸ್ಥಾಪಿತ ಸತ್ಯಕ್ಕೆ ಮತ್ತಷ್ಟು ಪುರಾವೆಗಳನ್ನು ಸೃಷ್ಟಿಸಿಕೊಳ್ಳುವುದು ಸುಲಭದ ಕೆಲಸ. ಮನಸ್ಸಿನಲ್ಲಿ ಸ್ಥಾಪಿತವಾದ ಸತ್ಯಗಳನ್ನೆಲ್ಲ ತೊಡೆದುಹಾಕಿ ಹೊಡೆದವರ ಹೊಡೆಸಿಕೊಂಡವರನ್ನೆಲ್ಲಾ ಚಿತ್ರಿಸಿ ಕಣ್ಣಿಗೆ ಕಾಣಿಸುವ ಸತ್ಯದ ಹಿಂದಿರುವ ಸತ್ಯಗಳನ್ನು ಹುಡುಕಿ ತೆಗೆಯುವ ಕೆಲಸವನ್ನು ಈ ಸಾಕ್ಷ್ಯಚಿತ್ರ ಮಾಡಿದೆ. 
Muzaffarnagar riots documentary
ಧರ್ಮ ರಕ್ಷಿಸುವ ಕೆಲಸ...

ಮುಜಾಫರ್ ನಗರ ಗಲಭೆಯಲ್ಲಿ ಹಿಂದೂಗಳು ಹೊಡೆಯುವವರಾಗಿದ್ದರು, ಮುಸ್ಲಿಮರು ಹೊಡೆಸಿಕೊಂಡವರಾಗಿದ್ದರು. ಬಹುತೇಕ ಎಲ್ಲಾ ನಿರಾಶ್ರಿತರ ಶಿಬಿರಗಳು ಮುಸ್ಲಿಮರದೇ ಆಗಿತ್ತು. ಒಂದೇ ಒಂದು ನಿರಾಶ್ರಿತ ಶಿಬಿರ ಹಿಂದೂಗಳಿಗಿತ್ತು. ಅಲ್ಲಿಗೆ ಮುಸ್ಲಿಮರು ತಮ್ಮ ಕೈಲಾದ ಮಟ್ಟಿಗೆ ಹಿಂಸೆಯಲ್ಲಿ ಪಾಲ್ಗೊಂಡಿದ್ದು ನಿಚ್ಚಳವಾಗಿತ್ತು. ಆ ಹಿಂದೂ ನಿರಾಶ್ರಿತ ಶಿಬಿರದಲ್ಲಿದ್ದವರೆಲ್ಲ ಕೂಲಿ ನಾಲಿ ಮಾಡುತ್ತಿದ್ದ ದಲಿತರು. ಇನ್ನು ಮುಸ್ಲಿಂ ನಿರಾಶ್ರಿತ ಶಿಬಿರಗಳಲ್ಲೂ ಹೆಚ್ಚಿನ ಸಂಖೈಯಲ್ಲಿದ್ದಿದ್ದು ಕೂಲಿ ಕಾರ್ಮಿಕರೇ. ಐವತ್ತು ಚಿಲ್ಲರೆ ಬಾಗಿಲಿದ್ದ ಮನೆಯ ಒಡೆಯರು, ಸಣ್ಣ ಪುಟ್ಟ ಅಂಗಡಿ ನಡೆಸುತ್ತಿದ್ದವರು ಕೂಡ ಬೀದಿಗೆ ಬಿದ್ದಿದ್ದರು. ಒಂದು ಕೋಮುಗಲಭೆಗೆ ಎರಡೂ ಕೋಮಿನ ಜನರ ತಪ್ಪುಗಳಿರುವುದೇ ಅಧಿಕ. ಮುಜಾಫರ್ ನಗರದಲ್ಲೂ ಹಾಗೆಯೇ ಆಗಿತ್ತೆ? 

ಎಳೆಎಳೆಯಾಗಿ ಕೋಮುರಾಜಕಾರಣದ ಬಿಡಿಸುತ್ತಾ ಸಾಗುತ್ತದೆ ಸಾಕ್ಷ್ಯಚಿತ್ರ. ಮುಜಾಫರ್ ನಗರದ ಗಲಭೆಗೆ ಆರು ತಿಂಗಳ ಹಿಂದೆಯವರೆಗೂ ಆ ಪ್ರದೇಶದಲ್ಲಿನ ಪ್ರಮುಖ ಪತ್ರಿಕೆಗಳು ರಾಜಕೀಯದ, ಸಮಾಜದ ಸಂಕಟಗಳ ಸುದ್ದಿಯನ್ನು ಮುಖಪುಟದಲ್ಲಿ ಪ್ರಕಟಿಸುತ್ತಿರುತ್ತವೆ. ಆರು ತಿಂಗಳಿನಿಂದ ಬಹುತೇಕ ಪತ್ರಿಕೆಗಳಲ್ಲಿ ‘ಒಂದು ಕೋಮಿನ ಹುಡುಗ ಮತ್ತೊಂದು ಕೋಮಿನ ಹುಡುಗಿಯನ್ನು ಚುಡಾಯಿಸಿದ’ ಎನ್ನುವುದೇ ವಿವಿಧ ರೀತಿಯಲ್ಲಿ ಮರುಪ್ರಕಟವಾಗುತ್ತಿರುತ್ತದೆ. ಅಷ್ಟೊಂದು ಪ್ರಕರಣಗಳು ನಡೆದವಾ ಎಂದು ಗಮನಿಸಿದರೆ ಇಲ್ಲವೆಂಬ ಉತ್ತರ ಸಿಗುತ್ತದೆ. ಇದರ ಜೊತೆಜೊತೆಗೆ ಲವ್ ಜಿಹಾದ್ ಎಂಬ ಭೂತವನ್ನು ತೋರಿಸಿ ಬೆದರಿಸಲಾಗುತ್ತದೆ. ಹಿಂದೂ ಸಂಘಟನೆಯೊಂದರ ಮುಖಂಡನನ್ನು ಇದರ ಬಗ್ಗೆ ಸಂದರ್ಶಿಸಿದಾಗ ಆತ ಲವ್ ಜಿಹಾದ್ ಇದೆ ಎನ್ನುತ್ತಾನೆ. ‘ಸರಿ. ಲವ್ ಜಿಹಾದ್ ಇಂದ ತೊಂದರೆಗೊಳಗಾದ ಒಂದು ಹುಡುಗಿಯ ಕುಟುಂಬವನ್ನು ಪರಿಚಯಿಸಿ’ ಎಂದು ಸಂದರ್ಶನಕಾರ ಕೇಳಿಕೊಂಡಾಗ ತನ್ನ ಶಿಷ್ಯರಿಗೆ ಹಲವು ಫೋನ್ ಮಾಡುತ್ತಾನೆ. ಆ ಹುಡುಗಿ ಈಗ ಇಲ್ಲ, ಅವರ ಕುಟುಂಬ ಊರು ಬಿಟ್ಟಿದೆ, ಅವರು ಮಾತನಾಡಲು ತಯಾರಿಲ್ಲ ಎಂಬಂತಹ ಉತ್ತರಗಳೇ ದೊರಕುತ್ತವೆ. ಒಟ್ಟಿನಲ್ಲಿ ಒಂದು ಗಲಭೆಗೆ ಬೇಕಾದ ಎಲ್ಲಾ ಪೂರ್ವ ತಯಾರಿ ಮುಜಾಫರ್ ನಗರದ ವಿವಿಧ ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುತ್ತದೆ. ರಾಜಕೀಯ ಭಾಷಣಗಳಲ್ಲಿ ಎಲ್ಲರೂ ಪರಧರ್ಮ ನಿಂದನೆಯನ್ನೇ ಪ್ರಮುಖವಾಗಿಸಿಕೊಂಡುಬಿಡುತ್ತಾರೆ. ಕೊನೆಗೆ ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ್ದನ್ನು ನೆಪವಾಗಿಸಿಕೊಂಡು ಮುಸ್ಲಿಂ ಹುಡುಗನನ್ನು ಸಾಯುವವರೆಗೆ ಹೊಡೆಯುತ್ತಾರೆ. ಇತ್ತ ಮುಸ್ಲಿಮರು ಆ ಹಿಂದೂ ಹುಡುಗರಲ್ಲಿಬ್ಬರನ್ನು ಹೊಡೆದು ಸಾಯಿಸುತ್ತಾರೆ. ಕೋಮುಗಲಭೆ ಹೊತ್ತಿಕೊಳ್ಳಲು ಇದಕ್ಕಿಂತ ಹೆಚ್ಚು ಕಾರಣ ಬೇಕೆ? ಅದೂ ಗಲಭೆಯ ಆಟವಾಡಲು ಭೂಮಿಕೆ ಸಿದ್ಧವಾಗಿರುವಾಗ? ಕೋಮುಗಲಭೆಯ ಜ್ವಾಲೆಗಳು ಎಲ್ಲೆಡೆ ಹರಡಲು ವಾಟ್ಸಪ್ಪು ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಹುಡುಗರಿಬ್ಬರನ್ನು ಸಾಯಿಸಿದ ವೀಡಿಯೋ ಕೂಡ ಪ್ರಮುಖ ಕಾರಣ. ಬಿಜೆಪಿಯ ನಾಯಕರೂ ಈ ವೀಡಿಯೋವನ್ನು ಹಂಚುತ್ತಾರೆ. ಅಸಲಿಗೆ ಆ ವೀಡಿಯೋ ಪಾಕಿಸ್ತಾನದಲ್ಯಾವಗಲೋ ಚಿತ್ರಿತವಾಗಿದ್ದು ಎಂಬ ಸಂಗತಿ ತಿಳಿಯುವುದರೊಳಗೆ ಹಿಂಸೆ ವ್ಯಾಪಕವಾಗಿ ಸಾವಿರಾರು ಜನರು ನಿರಾಶ್ರಿತರಾಗುತ್ತಾರೆ. ಒಂದು ಊರಿನ ಬೀದಿಯಲ್ಲಿನ ಎರಡು ಅಂಗಡಿಯ ಮೇಲೆ ಹಿಂದೂ ಹೆಸರಿದೆ. ಮಧ್ಯದ ಅಂಗಡಿಯ ಮೇಲೆ ಮುಸ್ಲಿಂ ಹೆಸರಿದೆ. ಹಿಂದೂ ಅಂಗಡಿಗಳು ಸುರಕ್ಷಿತವಾಗಿದ್ದರೆ ಮುಸ್ಲಿಂ ಅಂಗಡಿ ಸುಟ್ಟು ಕರಕಾಲಗಿರುವ ದೃಶ್ಯ ಇಡೀ ಮುಜಾಫರ್ ನಗರ ಗಲಭೆಯಲ್ಲಿ ಹಾನಿಗೀಡಾದವರು ಯಾರು ಎನ್ನುವುದನ್ನು ತಿಳಿಸಿಬಿಡುತ್ತದೆ. 
muzaffarnagar baaqi hai
ಒಂದು ಬದಲಾವಣೆಗೆ ಪ್ರಯತ್ನಿಸುವವರು.....
ಸಂತ್ರಸ್ತರ ಗೋಳು, ರಾಜಕಾರಣಿಗಳ ಕಪಟ ಮಾತುಗಳು, ಮತಾಂಧ ಸಂಘಟನೆಯ ಕಾರ್ಯಕರ್ತರ ಅಟ್ಟಹಾಸದ ನಡುವೆ ಅಲ್ಲಲ್ಲಿ ಇದ್ದಕ್ಕಿದ್ದಂತೆ ರೈತ, ಕಬ್ಬು, ಆಲೆಮನೆ, ಸಕ್ಕರೆ ಕಾರ್ಖಾನೆಗಳನ್ನು ತೋರಿಸುತ್ತಾರೆ. ಕೋಮುಗಲಭೆಯಲ್ಲಿ ರೈತನ ಚಿತ್ರಣವ್ಯಾಕೆ ಎನ್ನುವುದಕ್ಕೆ ಉತ್ತರ ಸಾಕ್ಷ್ಯಚಿತ್ರ ಸಾಗಿದಂತೆ ತಿಳಿಯುತ್ತದೆ. ರೈತನಾಗಿದ್ದ ರೈತನಲ್ಲಿ ಮುಸ್ಲಿಂ ರೈತ ಹಿಂದೂ ರೈತ ಎಂಬ ಭಿನ್ನಾಭಿಪ್ರಾಯ ಮೂಡುತ್ತದೆ. ಜೊತೆಜೊತೆಯಾಗಿದ್ದವರೇ ಹೊಡೆದಾಡಿಕೊಳ್ಳುತ್ತಾರೆ. ಧರ್ಮಭೇದವಿಲ್ಲದೇ ಒಂದಾಗಿದ್ದ ರೈತ ಸಂಘಟನೆಗಳು ಧರ್ಮಾಧಾರಿತವಾಗಿ ವಿಭಜಿತವಾಗಿ ಬಿಟ್ಟ ಮೇಲೆ ಎಲ್ಲಿಯ ರೈತ ಹೋರಾಟ? ‘ಗಲಭೆಯಿಂದ ಹೆಚ್ಚು ಲಾಭ ಪಡೆದುಕೊಂಡಿದ್ದು ಸಕ್ಕರೆ ಕಾರ್ಖಾನೆಗಳು. ಅವರು ಕೊಟ್ಟಷ್ಟೇ ದುಡ್ಡಿಗೆ ನಾವೀಗ ಕಬ್ಬು ಹೊಡೆಯಬೇಕು. ಯಾಕೆಂದರೆ ನಮ್ಮಲ್ಲೀಗ ಹೋರಾಟವಿಲ್ಲ. ಮುಸ್ಲಿಂ ರೈತ ಬಂದರೆ ಹಿಂದೂ ಬರೋದಿಲ್ಲ, ಹಿಂದೂ ಬಂದರೆ ಮುಸ್ಲಿಂ ಬರೋದಿಲ್ಲ’ ಎಂದೊಬ್ಬ ಬೆಳೆಗಾರ ಹೇಳುವ ದೃಶ್ಯ ಒಂದು ಗಲಭೆಯ ದುರ್ಬಾಹುಗಳು ಎಲ್ಲಿಯವರೆಗೆ ಚಾಚಲು ಸಾಧ್ಯ ಎಂದು ತಿಳಿಸುತ್ತದೆ. ಅಯೋಧ್ಯಾ ಗಲಭೆಯ ಸಂದರ್ಭದಲ್ಲೂ ಶಾಂತವಾಗಿದ್ದ ಹಳ್ಳಿಗಳಲ್ಲಿ ಈ ಬಾರಿ ಗಲಭೆ ನಡೆಯಿತು. ಇದೆಲ್ಲದರ ಲಾಭ ಪಡೆದಿದ್ಯಾರು? 

ಇವೆಲ್ಲದರ ಆಯೋಜಕ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ಎಂದು ನಿಸ್ಸಂಶಯವಾಗಿ ಹೇಳಬಹುದು. ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶಕ್ಕೆ ಪ್ರಾಮುಖ್ಯತೆ ಜಾಸ್ತಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಹತ್ತು ಸ್ಥಾನಗಳನ್ನಷ್ಟೇ ಗಳಿಸಿದ್ದ ಬಿಜೆಪಿ ಈ ಎಲ್ಲ ಗಲಭೆಯ ನಂತರ ನಡೆದ ಚುನಾವಣೆಯಲ್ಲಿ ಬರೋಬ್ಬರಿ ಎಪ್ಪತ್ತು ಸ್ಥಾನಗಳಲ್ಲಿ ಗೆದ್ದು ಬೀಗಿತು. ಅದು ನಡೆಸಿದ ಕೋಮುಗಲಭೆಯ ರಾಜಕೀಯ ಧರ್ಮಾಧಾರಿತವಾಗಿ ಹಿಂದೂಗಳೆಲ್ಲರೂ ಬಿಜೆಪಿಗೆ ಮತ ಹಾಕುವಂತೆ ಮಾಡಿತು. ಮುಸ್ಲಿಮರ ಪರ ಎಂಬ ಸೋಗಿನ ಸಮಾಜವಾದಿ ಪಕ್ಷ ನಿರಾಶ್ರಿತ ಶಿಬಿರಗಳಲ್ಲಿರುವ ಜನರ ಸಂಕಷ್ಟಗಳನ್ನು ಪರಿಹರಿಸುವ ಕೆಲಸ ಮಾಡುವುದನ್ನು ಬಿಟ್ಟು ನಿರಾಶ್ರಿತ ಶಿಬಿರಗಳನ್ನೇ ರಾತ್ರೋರಾತ್ರಿ ಬೀಳಿಸಿ ನಿರಾಶ್ರಿತರನ್ನು ಮತ್ತೊಮ್ಮೆ ಬೀದಿಗೆ ತಳ್ಳಿದರು. ‘ದೀದಿ ಒಮ್ಮೆ ಗಲಭೆಯಲ್ಲಿ ತೊಂದರೆಗೊಳಗಾದವರನ್ನು ಭೇಟಿಯಾಗಿಬಿಟ್ಟಿದ್ದರೆ ಎಲ್ಲೆಡೆಯೂ ಅವರೇ ಗೆಲ್ಲುತ್ತಿದ್ದರು. ಅವರ ಸುತ್ತಲಿರುವ ಮೂವರು ಬ್ರಾಹ್ಮಣರು ನಮ್ಮನ್ನವರು ಭೇಟಿಯಾಗಲು ಬಿಡಲಿಲ್ಲ’ ಎಂದು ಮಾಯವತಿಯ ಬಿ.ಎಸ್.ಪಿಯ ಸೋಲನ್ನು ಅಲ್ಲಿಯವರು ವಿಶ್ಲೇಷಿಸುತ್ತಾರೆ. ಒಂದು ಅಪಾಯಕಾರಿ ಗಲಭೆಯನ್ನು ಪ್ರಾಯೋಜಿಸಿ ದೊಡ್ಡ ಮಟ್ಟದಲ್ಲಿ ಗೆದ್ದು ಬೀಗುತ್ತದೆ ಬಿಜೆಪಿ. ಈ ಎಲ್ಲಾ ರಾಜಕಾರಣಿಗಳ ನಡುವೆ ಭಗತ್ ಸಿಂಗನ ಒಂದು ಫೋಟೋ ಹಿಡಿದುಕೊಂಡು ಐದು ಹುಡುಗರು ಹಳ್ಳಿ ಹಳ್ಳಿ ತಿರುಗುತ್ತಾರೆ. ವಸ್ತುಸ್ಥಿತಿಯನ್ನು ವಿವರಿಸುತ್ತಾರೆ. ಗಲಭೆಯ ದೆಸೆಯಿಂದ, ಕೋಮು ರಾಜಕಾರಣದ ದೆಸೆಯಿಂದ ಹೇಗೆ ಊರಿನ ನಿಜವಾದ ಸಮಸ್ಯೆಗಳು ಚರ್ಚೆಗೇ ಬರದೆ ಹೋಗುತ್ತಿದೆ ಎಂದು ವಿವರಿಸಿ ಹೇಳುತ್ತಾರೆ. ಹೌದೆಂದು ತಲೆಯಾಡಿಸುವ ಜನ ಧರ್ಮಾಧಾರಿತವಾಗಿ ಮತ ಚಲಾಯಿಸುತ್ತಾರೆ....... ಉಳುವುದಕ್ಕೆ ಭೂಮಿಗೆ ಕಾಲಿಟ್ಟ ರೈತನಿಗೆ ಧರ್ಮವಿಲ್ಲ; ಕೋಮುಗಲಭೆಯ ದೆಸೆಯಿಂದ ಈಗಾತ ಒಬ್ಬಂಟಿ......

ಒಂದು ಸಶಕ್ತ ಸಾಕ್ಷ್ಯಚಿತ್ರವಿದು. ಪ್ರಮುಖ ಅಂಶಗಳ ಬಗ್ಗೆಯಷ್ಟೇ ಇಲ್ಲಿ ಬರೆದಿದ್ದೇನೆ. ಇಡೀ ಸಾಕ್ಷ್ಯಚಿತ್ರದಲ್ಲಿ ಸತ್ಯದ ಮಾತನಾಡುವವರು ಮಹಿಳೆಯರು. ಗಂಡಸರ ದ್ವಂದ್ವಗಳನ್ನವರು ಈಚೆಗೆಳೆಯುತ್ತಾರೆ! ಭಯೋತ್ಪಾದನೆ, ಉಗ್ರತೆಗಳೆಲ್ಲವೂ ಮುಸ್ಲಿಮರದೇ ಕೃತ್ಯ, ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು, ಉಗ್ರಗಾಮಿಗಳಾಗಲು ಸಾಧ್ಯವೇ ಇಲ್ಲ ಎಂದಿನ್ನೂ ನಂಬುವವರು ಈ ಸಾಕ್ಷ್ಯಚಿತ್ರವನ್ನು ನೋಡಲೇಬೇಕು. ಕೈಯಲ್ಲಿ ಬಂದೂಕು ಹಿಡಿದವ ಮಾತ್ರ ಭಯೋತ್ಪಾದಕನಲ್ಲ, ಮನಸ್ಸಿನ ತುಂಬ ನಂಜು ತುಂಬಿಕೊಂಡು ಅನ್ಯಧರ್ಮದವನ ಮನೆ ಸುಡಲೆಂದೇ ಜೇಬಿನಲ್ಲೊಂದು ಬೆಂಕಿಪಟ್ಟಣ ಇಟ್ಟುಕೊಂಡವನೂ ಭಯೋತ್ಪಾದಕನೇ ಎಂಬ ಸತ್ಯದ ಅರಿವಾಗುತ್ತದೆ.
ಟ್ರೇಲರ್ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ

ಆಗ 25, 2015

ಮಂಗಳೂರಿನ ಮತಿಗೆಟ್ಟ ಹುಡುಗರು.

Ashok K R
ದಕ್ಷಿಣ ಕನ್ನಡದಲ್ಲಿ ಬಿಜೆಪಿಯದೇ ಪಾರುಪತ್ಯವಿತ್ತು. ಬಿಜೆಪಿ ಬೆಂಬಲಿತ ಸಂಘಪರಿವಾರದ ವಿವಿಧ ಶಾಖೆಗಳ ಆಟೋಟಾಪಗಳು, ಸಾಮಾನ್ಯ ಜನರಿಗೆ ವಿನಾಕಾರಣವಾಗಿ ಅವರು ನೀಡಿದ ತೊಂದರೆ, ಅದರ ಜೊತೆಜೊತೆಗೇ ಬೆಳೆದ ಮುಸ್ಲಿಂ ಮೂಲಭೂತವಾದಿಗಳ ಕಾಟವೆಲ್ಲವೂ ಸೇರಿ ಜನರನ್ನು ಜಿಗುಪ್ಸೆಗೆ ತಳ್ಳಿತ್ತು. ಆ ಜಿಗುಪ್ಸೆಯ ಫಲವೆಂಬಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು, ಸುಳ್ಯ ಕ್ಷೇತ್ರವೊಂದನ್ನು ಹೊರತುಪಡಿಸಿ. ಓ! ಕಾಂಗ್ರೆಸ್ ಬಂತು, ಅದರಲ್ಲೂ ಸಿದ್ಧರಾಮಯ್ಯನಂತಹ 'ಸಮಾಜವಾದಿ' 'ಅಹಿಂದ' ನಾಯಕ ಈಗ ಮುಖ್ಯಮಂತ್ರಿ. ಇನ್ನೇನು ಇಡೀ ದಕ್ಷಿಣ ಕನ್ನಡ ಶಾಂತಿಯ ಬೀಡಾಗಿಬಿಡುತ್ತದೆ ಎಂದುಕೊಂಡಿರಾದರೆ ಅದು ಖಂಡಿತ ತಪ್ಪು. ತಪ್ಪೆಂದು ನಿರೂಪಿಸಲು ಮತ್ತೆ ಮತ್ತೆ ಅನೈತಿಕ ಪೋಲೀಸ್ ಗಿರಿಯಂತಹ ಕಾರ್ಯಗಳು ನಡೆಯುತ್ತಲೇ ಇವೆ. 
ಮುಸ್ಲಿಮನೊಬ್ಬ ಪರಿಚಯದ ಹಿಂದೂ ಹುಡುಗಿಯೊಂದಿಗೆ ಹೋಗುವುದು, ಹಿಂದೂವೊಬ್ಬ ಪರಿಚಯದ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುವುದು ಇಲ್ಲಿ ಧರ್ಮದ್ರೋಹದ ಅಪರಾಧ! ಇಂತವರ ವಿರುದ್ಧ ಮಾತನಾಡಿದರೆ ಅದು ದೇಶದ್ರೋಹಕ್ಕೆ ಸಮ! ನಿನ್ನೆ ದಿನ ಮುಸ್ಲಿಂ ಯುವಕೊನೊಬ್ಬನನ್ನು ನಡುಬೀದಿಯಲ್ಲಿ ಬಟ್ಟೆ ಕಳಚಿ ಕಂಬಕ್ಕೆ ಕಟ್ಟಿ ಹೊಡೆಯಲಾಗಿದೆ. ಕಾರಣ ಆತ ಹಿಂದೂ ಹುಡುಗಿಯೊಟ್ಟಿಗೆ ಹೋಗುತ್ತಿದ್ದ. ಲವ್ ಜಿಹಾದ್ ಎಂಬ ಅದೃಶ್ಯ ಭೀತಿಯನ್ನು ನೈಜವಾಗಿಸಲು ಹಿಂದೂ ಮೂಲಭೂತವಾದಿಗಳು ಇಂತಹ ಕೃತ್ಯಕ್ಕೆ ಕೈಹಾಕುತ್ತಾರಾ? ಸಹಪಾಠಿಗಳೂ ಮಾತನಾಡದಂತಹ ಸ್ಥಿತಿಗೆ ಮಂಗಳೂರು ತಲುಪಿರುವುದಾದರೂ ಯಾಕೆ?
ಮೇಲಿನ ಚಿತ್ರ ಗಮನಿಸಿ, ಆ ಮುಸಲ್ಮಾನನನ್ನು ಹಿಡಿದುಕೊಂಡಿರುವ ವ್ಯಕ್ತಿ ಮತ್ತವನ ಹಿಂದೆ ನಿಂತು ಮೊಬೈಲಿನಲ್ಲಿ ಅದನ್ನು ಸೆರೆಹಿಡಿಯುತ್ತಿರುವ ವ್ಯಕ್ತಿಯನ್ನು ನೋಡಿ. ಸರಿಯಾಗಿ ಮೀಸೆಯೂ ಚಿಗುರದ ಎಳೆಯ ಹುಡುಗರವರು. ಅಬ್ಬಬ್ಬಾ ಎಂದರೆ ಯಾವುದೋ ಕಾಲೇಜಿನಲ್ಲಿ ಓದುತ್ತಿರುವವರು. ಇಂತಹ ಹುಡುಗರಿಗೆ ಕೋಮುನಂಜನ್ನು ತುಂಬುತ್ತಿರುವವರಾರು? ಆ ಕೋಮು ವಿಷವನ್ನು ತುಂಬುವ ವ್ಯಕ್ತಿಗಳು ದೊಡ್ಡ ದೊಡ್ಡ ಭಾಷಣ ಬಿಗಿದು ಬೆಚ್ಚಗೆ ಮನೆ ಸೇರುತ್ತಾರೆ. ವಿಷದ ನಂಜೇರಿದ ಈ ಯುವಕರು - ಯುವಕರೂ ಅಲ್ಲ ಹುಡುಗರು - ಬೀದಿಯಲ್ಲಿ ಓಡಾಡುತ್ತಿದ್ದ ಗೆಳೆಯರಿಬ್ಬರನ್ನೂ ಹಿಡಿದು ಚಚ್ಚುತ್ತಾರೆ. ಕೊನೆಗೆ ಜೈಲು ಪಾಲಾಗುವ ಸಂದರ್ಭ ಬಂದರೆ ಅದು ಈ ಹುಡುಗರಿಗೇ ಹೊರತು ಭೀಕರ ಭಾಷಣ ಕುಟ್ಟುವವರಿಗಲ್ಲ.
ಅಂದಹಾಗೆ ಕಾಂಗ್ರೆಸ್ ಸರಕಾರ ಬಂದ ಮೇಲೂ ಇದು ಯಾಕೆ ನಡೆಯುತ್ತಿದೆ ಎಂದಿರಾ? ಬಿಜೆಪಿ ಮಂಗಳೂರಿನಲ್ಲಿ ಉಗ್ರ ಹಿಂದೂ ಮೂಲಭೂತವಾದ ನಡೆಸಿದರೆ ಕಾಂಗ್ರೆಸ್ ನಡೆಸುವುದು ಸೌಮ್ಯ ಹಿಂದೂ ಮೂಲಭೂತವಾದ.... ತನ್ನಲ್ಲಿರುವ ಅಪಾರ ಪ್ರಮಾಣದ ನೈಸರ್ಗಿಕ ಸೌಂದರ್ಯದಿಂದ ಗಮನ ಸೆಳೆಯಬೇಕಿದ್ದ ಮಂಗಳೂರು ಮತಿಗೆಟ್ಟವರ ಕಾರಣದಿಂದಲೇ ಸುದ್ದಿಯಾಗುತ್ತಿರುವುದು ಬೇಸರದ ಸಂಗತಿ.

ಆಗ 20, 2015

ಲಜ್ಜೆಗೆಡುವುದರಲ್ಲಿ ಎಲ್ಲರೂ ಮುಂದು....

ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಕನ್ನಡ, ಇಂಗ್ಲೀಷಿನ ಜೊತೆಗೆ ತೆಲುಗು, ತಮಿಳು, ಉರ್ದು ಭಾಷೆಯಲ್ಲಿಯೂ ಪ್ರಕಟಿಸಿ ಮತಗಳಿಕೆಗಾಗಿ ಕನ್ನಡತನವನ್ನು ಕೊಲ್ಲುವುದಕ್ಕೆ ತಾನು ಹಿಂಜರಿಯುವುದಿಲ್ಲ ಎಂದು ತೋರಿಸಿತ್ತು. 

ಲಜ್ಜೆಗೆಟ್ಟ ಕಾಂಗ್ರೆಸ್ಸಿನಿಂದ ಪಂಚ ಭಾಷಾ ಪ್ರಣಾಳಿಕೆ.


ಉಳಿದೆರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಂಚ ಭಾಷಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಸಮಾಧಾನ ಪಟ್ಟುಕೊಳ್ಳುವ ವೇಳೆಗೆ ನಾ ಮುಂದು ತಾ ಮುಂದು ಎಂಬಂತೆ So Called ರಾಷ್ಟ್ರೀಯ ಪಕ್ಷಗಳು ತಮಿಳು ಭಾಷೆಯ ಕರಪತ್ರವನ್ನು ಹಂಚುತ್ತಿವೆ. ಕರ್ನಾಟಕದ ನಾಯಕ ಶಿರೋಮಣಿಗಳಾದ ದೇವೇಗೌಡ, ಕುಮಾರಸ್ವಾಮಿ, ಸಿದ್ಧರಾಮಯ್ಯ, ಪರಮೇಶ್ವರ್, ಅನಂತಕುಮಾರ್, ಯಡಿಯೂರಪ್ಪ, ಸದಾನಂದಗೌಡ ಮುಂತಾದವರು ತಮಿಳು ಭಾಷಾ ಕರಪತ್ರದಲ್ಲಿ ಮಿಂಚುತ್ತಿರುವ ಪರಿಯನ್ನು ಆನಂದಿಸಿ ತಣ್ಣಗೆ ಒಂದು ಲೋಟ ನೀರು ಕುಡ್ಕೊಳ್ಳಿ....
BJP tamil bbmp

Congress Tamil BBMP

JDS Tamil BBMP

ಮೇ 21, 2015

Arvind Kejriwal vs Lieutenant Governor Najeeb Jung

Narasimhan Khadri
The public spat between Arvind Kejriwal and Lieutenant Governor Najeeb Jung is condemnable but inevitable, given the notorious and dubious roles played by governors and LGs in the past.

Read this story when modi as a CM had such vocal fight between his governor related to the appointment of lokayukta


Reforming the role and appointment process of the governors is the need of the hour. Whimsical and often adhoc manner that every union government uses in the appointments of governors should be done away with and a uniform procedures should be brought in, consistent with the federal nature of our polity. Raj bhavan cannot be a retirement homes for bureaucrats and aged politicians.

As they often do, media always picks the wrong end of the stick. Or rather the end which just creates noice more than anything alse. Salman khan verdict could have been used as a classical case of educating people about the dangers of drunken driving. All they did instead was to give ball-by-ball commentary about salman's road trip to the court. Similarly, Lieutenant Governor v/s Chief Minister issue can be used by the media to educate people about the intricacies about such conflicts and also lobby for reforms. 

Modi's supporters have used this occasion to pounce on Arvind Kejriwal and have labelled him as an anarchist who is not interested in governing but only controversies. It is true that Arvind Kejriwal should stop indulging in theatrics time and time again, there is not an iota of truth that he is doing mal-governance.His innovative idea of decentralized budget preparation, despite its many short comings, requires widest possible publicity. His attempts to bring transparency in the administration deserves credit which is due. Mainstream media has colour blindness for such issues. 

If the delhi Chief Minister can't chose his chief secretary and even that call will be taken by the Home minister or Lieutenant Governor then why did we have an election and why did our PM and his cabinet colleagues canvas?

To conclude, delhi government has raised a very valid issue that many Chief Ministers have raised in the past(including PM modi). It might still be for a half-state of delhi. One can indeed argue that it could have been done in a more mellowed voice. Popular CMs like kejriwal and Mamata Banerjee should learn the 'art' to take the combat into south block and not come back with empty hands.

Share your views
image source: ndtv

ಜನ 31, 2015

AAP Manifesto

1. Aam Aadmi Party resolves to legislate the Delhi Jan Lokpal Bill after coming to power.
2. Aam Aadmi Party will legislate the Swaraj Act to devolve power directly to the people.
3. Acting within constitutional framework AAP will use its moral nd political authority to push fr full statehood for Delhi
4. Aam Aadmi Party government will keep its promise of reducing electricity bills by half.

Kiran Bedi's Blue Print

Here's a 20-point plan for Housing, Civic Infrastructure and Transportation that will raise the quality of life for Delhi.
1) Pukka housing for jhuggie dwellers – under the Jan Punarvas Yojana; multi-level housing for people residing in jhuggies
2) Simplify housing allotment rules and convert leasehold to freehold, where appropriate

ಜನ 4, 2015

ಆರ್ಡಿನೆನ್ಸುಗಳಿಗಿದು ಅಚ್ಛೇ ದಿನ್!

Dr Ashok K R
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರವಿಡಿದಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಹತ್ತು ವರ್ಷದ, ಅದರಲ್ಲೂ ಎರಡನೇ ಯುಪಿಎ ಸರಕಾರದ ದುರಾಡಳಿತವನ್ನು ಹೀಗಳೆಯುತ್ತ. ಜೊತೆಜೊತೆಗೆ ಕಾಂಗ್ರೆಸ್ ಸರಕಾರ ಸಾಧಿಸಲಾಗದ ಅನೇಕ ಸಂಗತಿಗಳನ್ನು ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮಾಡುವುದಾಗಿ ಹೇಳುತ್ತಿದ್ದ ನರೇಂದ್ರ ಮೋದಿ ‘ಅಚ್ಛೇ ದಿನ್’ ಅಭಿಯಾನವನ್ನು ಪ್ರಾರಂಭಿಸಿದ್ದರು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಿತು. ಬಹುತೇಕ ಸರಕಾರಗಳಂತೆ ಕೆಲವಷ್ಟು ಒಳ್ಳೆಯ ಕೆಲಸ, ಬಹಳಷ್ಟು ಅನಗತ್ಯ ಕೆಲಸಗಳು ಸರಕಾರದ ವತಿಯಿಂದ ನಡೆಯುತ್ತಿವೆ. ಜೊತೆಜೊತೆಗೆ ಅಪಾಯಕಾರಿ ರೀತಿಯ ಕೆಟ್ಟ ಕಾರ್ಯಗಳು ನರೇಂದ್ರ ಮೋದಿಯವರ ಸರಕಾರದಿಂದ ನಿಧನಿಧಾನಕ್ಕೆ ಜಾರಿಯಾಗುತ್ತಿವೆ. ಮತ್ತೀ ಅಪಾಯಗಳು ಪ್ರಸ್ತುತಕ್ಕೆ ಅನಿವಾರ್ಯವೆಂಬ ಭಾವನೆ ಜನಮಾನಸದಲ್ಲಿ ಮೂಡಿಸುವಲ್ಲಿ ಸರಕಾರದ ವಿವಿಧ ಮಂತ್ರಿಗಳ ಮಾತಿನ ಕಸರತ್ತು ಸಹಕರಿಸುತ್ತಿದೆ. ಆರ್ಡಿನೆನ್ಸುಗಳ ಬೆನ್ನು ಹತ್ತಿರುವ ಕೇಂದ್ರ ಸರಕಾರದ ಹೆಜ್ಜೆಗಳು ಕೊನೆಗೆ ಪ್ರಜಾಪ್ರಭುತ್ವದ ಮೂಲಭೂತ ಆಶಯಗಳಿಗೆ ಧಕ್ಕೆಯುಂಟುಮಾಡುತ್ತಿವೆ.

ಡಿಸೆಂ 22, 2014

ಮತಾಂತರವೂ ತಪ್ಪಲ್ಲ ಮರುಮತಾಂತರವೂ ತಪ್ಪಲ್ಲ; ಆದರೆ?

religious conversion
Dr Ashok K R
ಅಭಿವೃದ್ಧಿಯ ಹೆಸರಿನಿಂದ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ‘ಅಭಿವೃದ್ಧಿ’ಯ ಪಥದಿಂದ ಪಕ್ಕಕ್ಕೆ ಸರಿದು ತನ್ನ ಮಾತೃ ಸಂಸ್ಥೆಯಾದ ಆರ್.ಎಸ್.ಎಸ್ ಮತ್ತದರ ಪರಿವಾರದ ಇತರ ಸಂಸ್ಥೆಗಳ ತಾಳಕ್ಕೆ ಕುಣಿಯಲು ಸಿದ್ಧತೆಗಳು ನಡೆಯುತ್ತಿವೆಯಾ? ಇಂತಹುದೊಂದು ಅನುಮಾನಕ್ಕೆ ಕಾರಣವಾಗುವ ಅನೇಕ ಬಿಡಿ ಬಿಡಿ ಘಟನೆಗಳು ಒಂದಾದ ಮೇಲೊಂದರಂತೆ ನಡೆಯುತ್ತಿರುವುದು ಕಾಕತಾಳೀಯವಲ್ಲ. ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸುವ ಪ್ರಯತ್ನ, ಕ್ರಿಸ್ ಮಸ್ ದಿನದ ರಜಾ ವಿವಾದ, ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವನ್ನಾಗಿಸುವ ಹೇಳಿಕೆಗಳು, ಉತ್ತರಪ್ರದೇಶದಲ್ಲಿ ಠುಸ್ಸೆಂದ ಲವ್ ಜೆಹಾದ್ ವಿವಾದ ಮತ್ತೀಗ ಪರಿವಾರದ ವಿವಿಧ ಅಂಗಸಂಸ್ಥೆಗಳು ನಡೆಸುತ್ತಿರುವ ‘ಘರ್ ವಾಪಸಿ’ ಎಂಬ ಮರುಮತಾಂತರದ ವಿವಾದಗಳೆಲ್ಲವೂ ಬಿಜೆಪಿಯೆಂದರೆ ಧರ್ಮಧಾರಿತ ರಾಜಕಾರಣ ಮಾಡುವುದಕ್ಕಷ್ಟೇ ಸರಿ ಎಂಬ ಆರೋಪಕ್ಕೆ ಪೂರಕವಾಗಿಯೇ ಇವೆ. ‘ಘರ್ ವಾಪಸಿ’ ಎಂಬ ಕಾರ್ಯಕ್ರಮ ಮುಂಚೆಯೂ ಅಲ್ಲಲ್ಲಿ ನಡೆದಿತ್ತು, ಈಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಬಹುಮತದ ಸರಕಾರವಿರುವಾಗ ಅದಕ್ಕೆ ಮತ್ತಷ್ಟು ರಂಗು ಬಂದಿದೆ. ಒಂದು ಧರ್ಮದವರನ್ನು ಓಲೈಸುವ ರಾಜಕಾರಣ ಮಾಡುವ ಆರೋಪಕ್ಕೆ ಗುರಿಯಾಗಿದ್ದ ಕಾಂಗ್ರೆಸ್ಸಿಗೆ ಪರ್ಯಾಯವಾಗಿ ಮತ್ತೊಂದು ಧರ್ಮದವರನ್ನು ಓಲೈಸುವ ರಾಜಕಾರಣ ಮಾಡುವ ಆರೋಪಕ್ಕೆ ಗುರಿಯಾಗುವ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂಬುದನ್ನು ಹೊರತುಪಡಿಸಿದರೆ ಹೆಚ್ಚೇನೂ ವ್ಯತ್ಯಾಸಗಳು ಗೋಚರಿಸುತ್ತಿಲ್ಲ.

ನವೆಂ 19, 2014

ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ .... ಭಾಗ 2

modi cabinetDr Ashok K R
ಕೇಂದ್ರ ಸರ್ಕಾರವನ್ನು ರೂಪಿಸುವಲ್ಲಿ ಉತ್ತರ ಪ್ರದೇಶದ ಪ್ರಭಾವ ಹೆಚ್ಚು. ದೊಡ್ಡ ರಾಜ್ಯ, ವಿಪರೀತ ಜನಸಂಖೈಯಿರುವ ಉತ್ತರಪ್ರದೇಶದಿಂದ ಎಂಭತ್ತು ಜನ ಸಂಸದರು ಲೋಕಸಭೆ ಪ್ರವೇಶಿಸುತ್ತಾರೆ. ಸಂಸದರ ಸಂಖೈಯ ಆಧಾರದಲ್ಲಿ ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರದಿಂದ ಆಯ್ಕೆಯಾಗುವವರ ಸಂಖೈ ನಲವತ್ತೆಂಟು! ಉತ್ತರ ಪ್ರದೇಶ ಗೆದ್ದರೆ ಅಧಿಕಾರದ ಗದ್ದುಗೆ ಏರಿದಂತೆಯೇ ಎಂಬ ಮಾತು ಅದಕ್ಕಾಗೇ ಹುಟ್ಟಿರಬೇಕು. ಎಂಭತ್ತು ಸ್ಥಾನದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಪ್ಪತ್ತೊಂದು ಸ್ಥಾನದಲ್ಲಿ ಜಯಗಳಿಸಿತ್ತು. ಸಹಜವಾಗಿ ಅಲ್ಲಿನವರಿಗೆ ಸಚಿವ ಸಂಪುಟದಲ್ಲೂ ಪ್ರಾಮುಖ್ಯತೆ ದೊರೆಯಬೇಕು. ಮೊದಲ ಸಂಪುಟದಲ್ಲಿ ಉತ್ತರಪ್ರದೇಶದ ಎಂಟು ಮಂದಿಯಿದ್ದರೆ ಈ ಬಾರಿ ಮತ್ತೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ದಲಿತ ನಾಯಕರಿಗೆ, ನಿಶಾದರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ ಆರೆಸ್ಸೆಸ್ ನಾಯಕ ರಾಮ್ ಶಂಕರ್ ಕಥಾರಿಯಾ, ನಿಶಾದರ ಮತಗಳನ್ನು ಬಿಜೆಪಿಗೆ ತಂದುಕೊಟ್ಟ ಸಾಧ್ವಿ ನಿರಂಜನ್ ಜ್ಯೋತಿಯವರಿಗೆ ಸಚಿವ ಸ್ಥಾನ ದಕ್ಕಿದೆ. 
ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ ಭಾಗ 1

ನವೆಂ 18, 2014

ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ .... ಭಾಗ 1


modi cabinet
Dr Ashok K R
ಸಂಪುಟ ವಿಸ್ತರಣೆಯೆಂಬುದು ಪ್ರಹಸನದಂತೆ ನಡೆಯುವ ಸಂದರ್ಭಗಳೇ ಹೆಚ್ಚಾಗುತ್ತಿರುವ ದಿನಗಳಲ್ಲಿ ನರೇಂದ್ರ ಮೋದಿಯವರ ಸಂಪುಟ ವಿಸ್ತರಣೆಯ ಕಾರ್ಯ ಸುಸೂತ್ರವಾಗಿ ನಡೆದಿದೆ ಎಂದೇ ಹೇಳಬಹುದು. ಅನೇಕ ವರುಷಗಳಿಂದ ಸಮ್ಮಿಶ್ರ ಸರ್ಕಾರಗಳೇ ಅಸ್ತಿತ್ವದಲ್ಲಿದ್ದ ಕಾರಣ ಬಹುಮತ ಪಡೆಯಲಾಗದ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳ ಕೋರಿಕೆ – ಅಣತಿಯ ಮೇರೆಗೆ ಸಂಪುಟ ವಿಸ್ತರಣೆ ನಡೆಸಬೇಕಾಗುತ್ತಿತ್ತು. ಒಂದು ಪಕ್ಷಕ್ಕೆ ಕೊಟ್ಟರೆ ಮತ್ತೊಂದು ಪಕ್ಷಕ್ಕೆ ಮುನಿಸು. ಅವರ ಮುನಿಸು ತಣಿಸುವಷ್ಟರಲ್ಲಿ ಮಗದೊಬ್ಬರ ಕೋಪ; ಇವೆಲ್ಲ ಘಟನೆಗಳೂ ಸೇರಿ ಸಂಪುಟ ವಿಸ್ತರಣೆಯೆಂದರೆ ಅಧಿಕಾರದಲ್ಲಿರುವ ಮುಖ್ಯಸ್ಥನಿಗೆ ತಲೆನೋವಿನ ಸಂಗತಿಗಳನ್ನಾಗಿ ಮಾಡಿತ್ತು. ದಶಕಗಳ ನಂತರ ಕೇಂದ್ರದಲ್ಲಿ ಏಕಪಕ್ಷ ಬಹುಮತ ಪಡೆದಿದೆ, ಚುನಾವಣಾ ಪೂರ್ವದಿಂದ ಜೊತೆಗಿದ್ದ ಮಿತ್ರಪಕ್ಷಗಳಿಗೆ ಸಚಿವ ಸ್ಥಾನ ನೀಡಿದ್ದ ಬಿಜೆಪಿಯ ಮೇಲೆ ‘ನಮಗೆ ಇಂತಹ ಸ್ಥಾನ ಬೇಕು’ ಎಂದು ಒತ್ತಾಯಿಸುವಂತಿಲ್ಲ, ಒತ್ತಾಯಿಸಿದರೆ ಎನ್ ಡಿ ಎ ತೊರೆದು ಹೋಗಲು ಸಿದ್ಧರಾಗಬೇಕಾಗುತ್ತದೆ. ಅದರಲ್ಲೂ ಏಕಪಕ್ಷಕ್ಕಿಂತ ಏಕವ್ಯಕ್ತಿ ಆಡಳಿತದಂತಿರುವ ಈಗಿನ ಕೇಂದ್ರ ಸರ್ಕಾರದಲ್ಲಿ ಬಿಜೆಪಿಯವರೇ ಮೇಲಿನವರ ಮಾತುಗಳನ್ನು ಪ್ರಶ್ನಿಸುವಂತಿಲ್ಲ, ಇನ್ನು ಉಳಿದ ಪಕ್ಷಗಳು ಪ್ರಶ್ನಿಸಲು ಹೇಗೆ ಸಾಧ್ಯ?! ಕಾಂಗ್ರೆಸ್ಸಿನ ಹೈಕಮಾಂಡಿನ ಕಾರ್ಯವೈಖರಿಯನ್ನು ಟೀಕಿಸುತ್ತಿದ್ದ ಬಿಜೆಪಿಯಲ್ಲೂ ಹೈಕಮಾಂಡ್ ಸಂಸ್ಕೃತಿ ಬಹುವೇಗವಾಗಿ ಬೆಳೆಯುತ್ತಿದೆ! ಅಲ್ಲಿಗೆ ಬಿಜೆಪಿ ಕಾಂಗ್ರೆಸ್ ಆಗುವ ಪ್ರಯತ್ನದಲ್ಲಿ ವೇಗದಿಂದಲೇ ಮುಂದುವರೆಯುತ್ತಿದೆ!

ಅಕ್ಟೋ 29, 2014

P. Sainath: 100 days of Namo and Sycophant media.



Sainath P
ಪಿ. ಸಾಯಿನಾಥ್

P.Sainath
Its barely a couple of weeks ago since the media and the elite celebrated hundred days of the Modi government in power. I want to speak about the media, because at this point the media are an embarrassment not only to themselves but to Mr Modi’s public relation officers who must be feeling insecure about their jobs! You know, so since the media are doing so much better, the sycophantic projection, that PR firm which he had hired, I don’t think there contract need be renewed. The first hundred days, you know we had that tamasha over the first hundred days, I ask myself this question whether its Mr Modi or whether it is Mr Dr Manmohan singh or whoever, what about, what happens in those hundred days typically in rural area. 

ಮೇ 20, 2014

ನಿರೀಕ್ಷೆಗಳನ್ನು ಮೀರಿಸಿದ ಮತದಾರ “ಪ್ರಭು”



ಡಾ ಅಶೋಕ್ ಕೆ ಆರ್
ಭಾರತದ ಬಹುದೊಡ್ಡ ಐಂದ್ರಜಾಲ ಮತದಾನ ಮತ್ತು ಬಹುದೊಡ್ಡ ಐಂದ್ರಜಾಲಿಕ ಮತದಾರ! 2004ರ ಲೋಕಸಭಾ ಚುನಾವಣೆಗಳಿಂದಲೂ ಇದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಭಾರತೀಯ ಲೋಕಸಭಾ ಚುನಾವಣೆ ಬಲವಂತವಾಗಿ ಅಮೆರಿಕಾದ ಅಧ್ಯಕ್ಷೀಯ ಮಾದರಿಯ ಚುನಾವಣೆಯ ರೂಪದಲ್ಲಿ ನಡೆದು ಬಿಜೆಪಿ ಮತ್ತು ನರೇಂದ್ರ ಮೋದಿಯ ವಿರೋಧಿಗಳಿಗಿರಲಿ ಸ್ವತಃ ಬಿಜೆಪಿ ಮತ್ತು ನರೇಂದ್ರ ಮೋದಿಗೇ ಅಚ್ಚರಿಯೆನ್ನಿಸುವ ಫಲಿತಾಂಶ ನೀಡಿದ್ದಾನೆ ಭಾರತದ ಮತದಾರ. ಕಳೆದ ಇಪ್ಪತ್ತೈದು ಮೂವತ್ತು ವರುಷಗಳಿಂದ ಸಾಧ್ಯವಾಗದಿದ್ದ ಇನ್ನು ಮುಂದೆಯೂ ಅಸಾಧ್ಯವೆಂದೇ ತೋರಿದ್ದ ಏಕಪಕ್ಷದ ಬಹುಮತದ ಸಾಧನೆ 2014ರ ಚುನಾವಣೆಯಲ್ಲಿ ಸಾಧ್ಯವಾಗಿದೆ. ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರಕಾರವೊಂದು ಸರಳ ಬಹುಮತದೊಂದಿಗೆ ಸರಕಾರ ರಚಿಸುವಂತಾಗಿದೆ, ಎಲ್ಲರ ನಿರೀಕ್ಷೆಗಳನ್ನೂ ಮೀರಿ. ಚುನಾವಣ ಪೂರ್ವ ಹೊಂದಾಣಿಕೆಗಳನ್ನು ಮಾಡಿಕೊಂಡು ಎನ್.ಡಿ.ಎ ಹೆಸರಿನಡಿಯಲ್ಲಿ ಚುನಾವಣಾ ಆಖಾಡಕ್ಕೆ ಇಳಿದಿದ್ದ ಬಿಜೆಪಿ ತಂಡ ಮುನ್ನೂರಕ್ಕೂ ಅಧಿಕ ಸ್ಥಾನಗಳನ್ನು ಗೆದ್ದುಕೊಂಡಿದೆ. ಮತ್ತೊಂದೆಡೆ ಸ್ವಾತಂತ್ರೋತ್ತರ ಭಾರತದಲ್ಲಿ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್ ಹಿಂದೆಂದೂ ಕಾಣದ ಸೋಲನ್ನನುಭವಿಸಿದೆ. ಕಾಂಗ್ರೆಸ್ ನೇತೃತ್ವದ ಯು.ಪಿ.ಎ ಅರವತ್ತು ಚಿಲ್ಲರೆ ಸ್ಥಾನಗಳಿಗೆ ಸೀಮಿತಗೊಂಡಿದ್ದರೆ ಕಾಂಗ್ರೆಸ್ ಐವತ್ತರ ಗಡಿಯನ್ನೂ ದಾಟಲಾಗಲಿಲ್ಲ. ನರೇಂದ್ರ ಮೋದಿ ಮತ್ತಾತನ ಥಿಂಕ್ ಟ್ಯಾಂಕಿನ ಚಾಣಾಕ್ಷತನ, ಜಾಗರೂಕ ರಾಜಕೀಯ ನಡೆಗಳು ನಿರೀಕ್ಷೆಗೂ ಮೀರಿದ ಫಲಿತಾಂಶವನ್ನು ನೀಡಿದೆ ಎಂಬುದರಲ್ಲಿ ಸಂದೇಹವಿಲ್ಲ.

ಮೇ 14, 2014

ಹೋಗಿ ಸಿಂಗ್ ಜಿ.... ಮತ್ತೆ ಮರಳದಿರಿ...

ಮುನೀರ್ ಕಾಟಿಪಳ್ಳ
 ಹತ್ತು ವರ್ಷಗಳ ಕಾಲ ಇಂಡಿಯಾ ದೇಶವನ್ನು ಆಳಿದ ಮೌನಿ ಬಾಬ ಸಿಂಗ್ ಜಿ ನಿರ್ಗಮಿಸುತ್ತಿದ್ದಾರೆ. ಪಲಿತಾಂಶ ಏನೇ ಇದ್ದರು ಅವರ ನಿರ್ಗಮನ ಖಚಿತ ಮತ್ತು ಶಾಶ್ವತ.