ಮೇ 3, 2018

ನಿರೀಕ್ಷೆ ಮತ್ತು ವಾಸ್ತವ......

ಸಾಂದರ್ಭಿಕ ಚಿತ್ರ 
ಡಾ. ಅಶೋಕ್. ಕೆ. ಆರ್. ಪೇಪರ್ರಿನವನು ಪತ್ರಿಕೆಯನ್ನು ಕಾಂಪೌಂಡಿನೊಳಗೆ ಎಸೆದ ಸದ್ದಿಗೆ ಎಚ್ಚರವಾಯಿತು. ಕಣ್ಣುಜ್ಜಿಕೊಂಡು ಬಾಗಿಲು ತೆರೆದು ಪತ್ರಿಕೆ ತೆಗೆದುಕೊಂಡು ಒಳಬಂದು ಓದಲಾರಂಭಿಸಿದೆ. ಚುನಾವಣೆಯ ಸಮಯದಲ್ಲಿ ರಾಜಕಾರಣಿಗಳ ಮಾತುಗಳಲ್ಲದೆ ಬೇರೆ ಸುದ್ದಿಗಳನ್ನು ಕಾಣಲು ಸಾಧ್ಯವೇ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾತುಗಳೇ ಇವತ್ತಿನ ಪ್ರಮುಖ ಸುದ್ದಿ:

ಜೂನ್ 18, 2016

ಕಾಂಗ್ರೆಸ್ ಪಕ್ಷದ ಪುನಶ್ಚೇತನ: ಕಾಂಗ್ರೆಸ್ಸಿನ ರಾಷ್ಟ್ರೀಯ ಅದ್ಯಕ್ಷರಾಗಲಿರುವ ರಾಹುಲ್‍ಗಾಂಧಿ?

ಕು. ಸ. ಮಧುಸೂದನ್
18/06/2016
ಚುನಾವಣೆಯ ಸೋಲಿನ ಹೊಣೆ ಹೊತ್ತುಕೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುವುದು: ಶ್ರೀಮತಿ ಸೋನಿಯಾ ಗಾಂಧಿ, ಅದ್ಯಕ್ಷರು, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ನವದೆಹಲಿ, 19-05-2016.

ರಾಜಕೀಯ ಪಕ್ಷವೊಂದು ಸತತವಾಗಿ ಚುನಾವಣೆಗಳನ್ನು ಸೋಲುತ್ತಾ ಬಂದಾಗ, ಪಕ್ಷವನ್ನು ಪುನಶ್ಚೇತನಗೊಳಿಸುವ ಮತ್ತು ತಳ ಪಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂಬ ಹಳಸಲು ಹೇಳಿಕೆಯನ್ನು ನೀಡುವುದು ಸಾಮಾನ್ಯವಾಗಿ ಬಿಟ್ಟಿದೆ. ಪ್ರಜಾಪ್ರಭುತ್ವದಲ್ಲಿ ಇದು ಸಹಜವೂ ಕೂಡ. ಆದರೆ ಕಾಂಗ್ರೆಸ್ ಪಕ್ಷ ಕಳೆದ ಐದು ವರ್ಷಗಳಲ್ಲಿ ಬಹಳಷ್ಟು ಸಾರಿ ಇಂತಹ ಹೇಳಿಕೆಗಳನ್ನು ನೀಡಿದ್ದು, ಪುನಶ್ಚೇತನದ ಯಾವುದೇ ಲಕ್ಷಣಗಳು ಕಂಡುಬರದೇ ಇರುವುದರಿಂದ ಜನರಿರಲಿ, ಆ ಪಕ್ಷದ ಕಾರ್ಯಕರ್ತರೇ ಈ ಮಾತನ್ನು ಗಂಬೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ. ಇದು ಆ ಪಕ್ಷದ ದುರಂತ ಮಾತ್ರವಲ್ಲ ಪ್ರಜಾಸತ್ತೆಯಲ್ಲಿ ನಂಬುಗೆಯಿಟ್ಟ ಭಾರತೀಯರ ದುರಂತವೂ ಹೌದು! 2011ರ ಕೆಲವು ರಾಜ್ಯಗಳ ವಿದಾನಸಭಾ ಚುನಾವಣೆಗಳ ನಂತರ ಸೋನಿಯಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರುಗಳು ಇಂತಹುದೇ ಮಾತುಗಳನ್ನಾಡಿದ್ದರು. ಆದರೆ ನಂತರದ ದಿನದಲ್ಲಿ ಪಕ್ಷದಲ್ಲಾದ ಏಕೈಕ ಬದಲಾವಣೆ ಎಂದರೆ 2013ರ ಜವರಿಯಲ್ಲಿ ರಾಹುಲ್ ಗಾಂದಿಯವರನ್ನು ಕಾಂಗ್ರೆಸ್ ಪಕ್ಷದ ಉಪಾದ್ಯಕ್ಷರನ್ನಾಗಿ ನೇಮಕ ಮಾಡಿದ್ದು  ಮಾತ್ರ. ಆದರೆ ಈ ಬಾರಿಯಾದರೂ ಕಾಂಗ್ರೆಸ್ ತನ್ನ ಮಾತುಗಳನ್ನು ಗಂಬೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳಬಹುದೆಂಬ ಭಾವನೆ ಮೂಡಿರುವುದು, ಅದು ಪಕ್ಷಾದ್ಯಕ್ಷರನ್ನು ಬದಲಾಯಿಸಲು ತೆಗೆದುಕೊಂಡಿದೆಯೆಂದು ಹೇಳಲಾಗುತ್ತಿರುವ ತೀರ್ಮಾನದ ಕಾರಣದಿಂದ. 

ಕೊನೆಗೂ ಪಕ್ಷವನ್ನು ಸಂಪೂರ್ಣವಾಗಿ ರಾಹುಲ್ ಗಾಂಧಿಯವರ ಕೈಗಿಡಲು ಕಾಂಗ್ರೆಸ್ ಪಕ್ಷ ನಿರ್ದರಿಸಿದಂತಿದೆ. ಇದು ಮೊನ್ನೆತಾನೆ ಮುಗಿದ ಐದು ರಾಜ್ಯಗಳ ವಿದಾನಸಭಾ ಚುನಾವಣೆಗಳ ಪಲಿತಾಂಶಗಳ ಪರಿಣಾಮವೆಂದರೆ ತಪ್ಪಾಗಲಾರದು. ಸೋನಿಯಾಗಾಂಧಿ ಪಕ್ಷದ ಅದ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸರಿಸುಮಾರು ಹದಿನೆಂಟು ವರ್ಷಗಳ ನಂತರ ಮೊದಲ ಬಾರಿಗೆ ಅವರ ಸ್ಥಾನದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪ್ರತಿಷ್ಠಾಪಿಸುವ ಕಾರ್ಯಕ್ಕೆ ಪಕ್ಷ ಸಿದ್ಧವಾದಂತಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಾಜಪದ ಎದುರು ಅನುಭವಿಸಿದ ಹೀನಾಯ ಸೋಲು, ಮತ್ತದರ ನಂತರವೂ ಅನೇಕ ದೊಡ್ಡ ರಾಜ್ಯಗಳ ವಿದಾನಸಭಾ ಚುನಾವಣೆಗಳಲ್ಲಿ ಸೋತಿದ್ದು, ಮತ್ತೀಗ ಐದು ರಾಜ್ಯಗಳ ವಿದಾನಸಭಾ ಚುನಾವಣೆಗಳಲ್ಲಿ ಮುಖಭಂಗ ಅನುಭವಿಸಿ ಅಧಿಕಾರದಲ್ಲಿದ್ದ ಎರಡೂ ರಾಜ್ಯಗಳನ್ನು ಕಳೆದುಕೊಂಡು ಮುಂದೇನು ಎನ್ನುವ ಗೊಂದಲದಲ್ಲಿರುವ ಕಾಂಗ್ರೆಸ್ಸಿಗೆ ಒಂದಷ್ಟು ಪುನಶ್ಚೇಚೇತನ ನೀಡುವುದು ಅಗತ್ಯವೂ, ಅನಿವಾರ್ಯವೂ ಆಗಿತ್ತು. ಪಕ್ಷದಾಚೆಗಿನ ರಾಜಕೀಯ ಪಂಡಿತರುಗಳು, ರಾಜಕೀಯ ವಿಶ್ಲೇಷಕರು ಇಂತಹ ಮಾತುಗಳನ್ನಾಡಿದಾಗ ಕುಟುಂಬ ರಾಜಕಾರಣದ ಭಟ್ಟಂಗಿತನಕ್ಕೆ ಒಗ್ಗಿ ಹೋಗಿರುವ ಕಾಂಗ್ರೆಸ್ ನಾಯಕರುಗಳಿಗೆ, ಇದು ಆಳದಲ್ಲಿ ಸರಿಯೆನಿಸಿದರು, ಬಹಿರಂಗವಾಗಿ ಇದನ್ನು ಒಪ್ಪುವ ಮನಸ್ಥಿತಿಯಿರಲಿಲ್ಲ. ಗಾಂಧಿ ಕುಟುಂಬವನ್ನು ಹೊರತುಪಡಿಸಿ ರಾಜಕಾರಣ ಮಾಡುವ ಕೆಲವೇ ಕೆಲವು ಪ್ರಾದೇಶಿಕ ನಾಯಕರುಗಳನ್ನು ಹೊರತು ಪಡಿಸಿ ಉಳಿದವವರಿಗೆ ಸೋನಿಯಾ ನಾಯಕತ್ವ ಅಗತ್ಯವಾಗಿದ್ದಕ್ಕೆ ಕಾರಣ ಇಂದಲ್ಲಾ ನಾಳೆ ಅವರ ವರ್ಚಸ್ಸಿನಿಂದ ಮತ್ತೆ ಅಧಿಕಾರ ಹಿಡಿಯಬಹುದೆಂಬ ನಂಬಿಕೆ.

ಹಾಗೆ ನೋಡಿದರೆ ಕಾಂಗ್ರೆಸ್ಸಿನ ನಾಯಕರುಗಳಿಗೆ ಅದನ್ನು ಬಿಟ್ಟರೆ ಇವತ್ತಿಗೂ ಬೇರೆ ದಾರಿ ಇರುವಂತೆ ಕಾಣುತ್ತಿಲ್ಲ. ಇಂಡಿಯಾದ ರಾಜಕಾರಣದ ಮಟ್ಟಿಗೆ ವಾಸ್ತವತೆ ಏನೆಂದರೆ ಗಾಂಧಿ ಕುಟುಂಬದ ನಿಯಂತ್ರಣ ತಪ್ಪಿದೊಡನೆ ಕಾಂಗ್ರೆಸ್ ತನ್ನೆಲ್ಲ ರಾಷ್ಟ್ರೀಯ ಐಡೆಂಟಿಟಿಯನ್ನು ಕಳೆದುಕೊಂಡು ಚೂರು ಚೂರಾಗುತ್ತದೆ ಎಂಬ ಭ್ರಮೆ! 1991 ರಲ್ಲಿ ರಾಜೀವ್ ಗಾಂಧಿಯವರ ಹತ್ಯೆಯಾದ ನಂತರ ನರಸಿಂಹರಾಯರು ಪ್ರದಾನಿಯಾದರೂ, ಕಾಂಗ್ರೆಸ್ಸಿನ ಮೇಲೆ ಗಾಂಧಿ ಕುಟುಂಬದ ಹಿಡಿತ ತೆರೆಮರೆಯಲ್ಲಿ ಇದ್ದುದರಿಂದ ಮತ್ತು ಇಂದಲ್ಲ ನಾಳೆ ಸೋನಿಯಾ ಮುಂಚೂಣಿಗೆ ಬಂದು ಪಕ್ಷವನ್ನು ಮುನ್ನಡೆಸುತ್ತಾರೆಂಬ ನಂಬಿಕೆ ಕಾಂಗ್ರೆಸ್ಸಿಗರಿಗೆ ಇದ್ದುದರಿಂದಲೇ 1998 ರವರೆಗು ಶ್ರೀ ನರಸಿಂಹರಾಯರು ಮತ್ತು ಶ್ರೀ ಸೀತಾರಾಂ ಕೇಸರಿಯವರು ಅದ್ಯಕ್ಷರಾಗಿ ಕಾರ್ಯನಿರ್ವಹಿಸಲು ಸಾದ್ಯವಾಯಿತು. ಆದರೆ 1996ರಲ್ಲಿ ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡಾಕ್ಷಣ ಯಥಾ ಪ್ರಕಾರ ಕಾಂಗ್ರೆಸ್ ನಾಯಕನಿರದ ನಾವೆಯಂತಾಗಿ ಗುಂಪುಗಾರಿಕೆಗಳು ಶುರುವಾದವು. ಅಂದಿನ ಅದ್ಯಕ್ಷ ಸೀತಾರಾಂ ಕೇಸರಿಯವರ ವಿರುದ್ದ ತಾರೀಖ್ ಅನ್ವರ್, ಕುಮಾರಮಂಗಳಂ ಮುಂತಾದವರು ಬಂಡೆದ್ದು ಸೋನಿಯಾರವರು ಪಕ್ಷದ ಚುಕ್ಕಾಣಿ ಹಿಡಿಯಬೇಕೆಂದು ಒತ್ತಾಯಿಸತೊಡಗಿದರು. ಆದರೆ ಸೋನಿಯಾರವರು ಸುಲಭವಾಗಿ ಈ ಮಾತಿಗೆ ಒಪ್ಪದೆ, ಸೀತಾರಾಂ ಕೇಸರಿಯವರು ತಾವಾಗಿಯೇ ಅದ್ಯಕ್ಷ ಗಾದಿ ತೊರೆದು ತಮ್ಮನ್ನು ಆಹ್ವಾನಿಸಿದರೆ ಮಾತ್ರ ಪಕ್ಷಾದ್ಯಕ್ಷರ ಜವಾಬ್ದಾರಿಯನ್ನು ಹೊರುವುದಾಗಿ ಹೇಳಿದರು. ಆದರೆ ಕೇಸರಿಯವರು ಈ ಮಾತಿಗೆ ಮಣಿಯಲಿಲ್ಲ. ಈ ಸಂದರ್ಭದಲ್ಲಿ ಜಿತೇಂದ್ರಪ್ರಸಾದ್, ಏ.ಕೆ.ಆಂಟೋನಿ ಮತ್ತು ಪ್ರಣಬ್ ಮುಖರ್ಜಿಯವರು ರಹಸ್ಯ ಸಭೆಗಳ ಮೂಲಕ ಕೇಸರಿಯವರನ್ನುಇಳಿಸುವ ಕಾರ್ಯತಂತ್ರ ರೂಪಿಸತೊಡಗಿದರು. ಆಗ ಶರದ್ ಪವಾರ್ ಅವರು ಸಹ ಕೇಸರಿಯವರನ್ನು ಇಳಿಸಲು ಮುಂದಾದರು. ಎಲ್ಲಿಯವರೆಗೆ ಕೇಸರಿಯವರು ಅದ್ಯಕ್ಷರಾಗಿರುತ್ತಾರೊ ಅಲ್ಲಿಯವರೆಗು ಉದ್ಯಮಿಗಳ ಬೆಂಬಲ ಪವಾರ್ ಅವರಿಗೆ ಸಿಗಲಾರದೆಂಬ ಉದ್ಯಮಿಗಳ ಎಚ್ಚರಿಕೆಯ ಮಾತು ಪವಾರರು ಕಣಕ್ಕಿಳಿಯಲು ಕಾರಣವಾಯಿತು. ನಂತರ 1998 ರಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿಗೆ ಕೆಲವೊಂದು ತಿದ್ದುಪಡಿ ತರುವುದರ ಮೂಲಕ ಲೋಕಸಭಾ ಸದಸ್ಯೆಯೂ ಆಗಿರದ ಶ್ರೀಮತಿ ಸೋನಿಯಾ ಗಾಂದಿಯವರನ್ನು ಪಕ್ಷದ ಅದ್ಯಕ್ಷರನ್ನಾಗಿ ಮಾಡಲಾಯಿತು.

ನಂತರ 1999ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 21 ಪಕ್ಷಗಳ ಬಾಜಪ ನೇತೃತ್ವದ ಎನ್.ಡಿ.ಎ. ಗೆದ್ದರೂ 140 ಸ್ಥಾನ ಗಳಿಸಲು ಶಕ್ತವಾದ ಕಾಂಗ್ರೆಸ್ ತನ್ನ ಮತಬ್ಯಾಂಕು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ, ಗೌರವ ಉಳಿಸಿಕೊಂಡಿತ್ತು. ಆಮೇಲೆ ಸುಮಾರು ಹದಿನಾಲ್ಕು ವರ್ಷಗಳ ಕಾಲ ಅಂದರೆ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ತನಕವೂ ಸೋನಿಯಾರವರು ಕಾಂಗ್ರೆಸ್ ಪಕ್ಷದ ಪ್ರಶ್ನಾತೀತ ನಾಯಕಿಯಾಗಿ ಆಡಳಿತ ನಡೆಸಿದರು. 2004ರಲ್ಲಿ ಪ್ರದಾನಿಯಾಗಬಹುದಾಗಿದ್ದ ಅವಕಾಶವನ್ನು ನಿರಾಕರಿಸಿದ ಸೋನಿಯಾರವರು ಸಾಮಾನ್ಯ ಭಾರತೀಯರ ದೃಷ್ಠಿಯಲ್ಲಿ ತ್ಯಾಗಮಯಿಯಂತೆ ಕಂಡಿದ್ದರು. ತದ ನಂತರದ ಯು.ಪಿ.ಎ. ಎರಡರ ಅವಧಿಯಲ್ಲಿ ನಡೆದ ಅಗಾಧವಾದ ಭ್ರಷ್ಟಾಚಾರ ಪ್ರಕರಣಗಳು ಮತ್ತು ಬಾಜಪದ ಆಕ್ರಮಣಕಾರಿ ಮತಾಂಧ ರಾಜಕಾರಣದಿಂದಾಗಿ ಹಾಗು ಬಲಪಂಥೀಯ ಮತ್ತು ಬಂಡವಾಳಶಾಹಿ ಹಿಡಿತದಲ್ಲಿದ್ದ ಮಾದ್ಯಮಗಳ ಬಾಜಪ ಪರವಾದ ಪ್ರಚಾರ ತಂತ್ರಗಳಿಂದಾಗಿ 2013ರಲ್ಲಿ ಕಾಂಗ್ರೆಸ್ ತೀರಾ ಅವಮಾನಕಾರಿಯಾಗಿ ಸೋಲುಂಡಿತಲ್ಲದೆ. ಅದರ ಜೊತೆ ಜೊತೆಗೆ ನಡೆದ ಕೆಲವು ರಾಜ್ಯ ವಿದಾನಸಭಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ವಿಫಲವಾಯಿತು. ತೀರಾ ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಗಳಲ್ಲಿಯು ಕಾಂಗ್ರೆಸ್ ಸೋಲನ್ನಪ್ಪಿ ಪಕ್ಷದ ಕೆಲ ವಲಯಗಳಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬಂದವು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಬದಲಾವಣೆ ಎಂದರೆ ಅದ್ಯಕ್ಷರ ಹುದ್ದೆಯ ಬದಲಾವಣೆ ಮಾತ್ರ. ಅದೂ ಸೋನಿಯಾರವರಿಂದ ರಾಹುಲರಿಗೆ ಎಂದಷ್ಟೆ ಆಗಿದೆ.

ಮೊನ್ನೆಯ ಚುನಾವಣೆಗಳನ್ನು ಸೋತ ಕೂಡಲೆ ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಶ್ರೀ ದಿಗ್ವಿಜಯಸಿಂಗ್ ಮತ್ತು ಕಮಲನಾಥ್ ಅವರುಗಳು ಮೊದಲ ಬಾರಿಗೆ ರಾಹುಲ್ ಗಾಂದಿಯವರನ್ನು ಪಕ್ಷದ ಅದ್ಯಕ್ಷರನ್ನಾಗಿ ಮಾಡುವ ಪ್ರಸ್ತಾಪ ಮಾಡಿದರು. ಈ ಬಗ್ಗೆ ಕಾಂಗ್ರೆಸ್ಸಿನ ಬಹುತೇಕ ನಾಯಕರುಗಳಿಗೆ ಅಭ್ಯಂತರವಿರದೇ ಹೋದರು, ಕೆಲವು ಹಳೆಯ ತಲೆಗಳಿಗಳಿಗೆ ಮತ್ತು ಸೋನಿಯಾರವರಿಗೆ ಬಹಳ ಆಪ್ತರಾಗಿರುವ ಕೆಲವರಿಗೆ ಮಾತ್ರ ಸೋನಿಯಾರವರೆ ಮುಂದುವರೆಯಬೇಕೆಂಬ ಬಯಕೆಯಿದೆ. ರಾಹುಲರನ್ನು ಅದ್ಯಕ್ಷರನ್ನಾಗಿಸಲು ತೀರ್ಮಾನಿಸುವುದರ ಹಿಂದೆ ಸ್ವತ: ರಾಹುಲರ ಬಯಕೆಯೂ ಕಾಣವಿದೆಯೆಂದು ನಂಬಲಾಗುತ್ತಿದೆ. ಯಾಕೆಂದರೆ ಅವರು ಉಪಾದ್ಯಕ್ಷರಾದ ನಂತರದ ಎಲ್ಲ ಸೋಲುಗಳಿಗೂ ಅವರನ್ನೇ ಗುರಿಯನ್ನಾಗಿಸಲಾಗುತ್ತಿದೆ. ಚುನಾವಣೆಗಳ ಕಾರ್ಯತಂತ್ರಗಳ ನಿರ್ದಾರ ತಮ್ಮದಲ್ಲವಾದರೂ, ಸೋಲಿಗೆ ಮಾತ್ರ ತಾವು ತಲೆಕೊಡಬೇಕಾಗಿ ಬಂದಿರುವುದು ರಾಹುಲರಿಗೆ ಬೇಸರ ಮೂಡಿಸಿರುವುದಂತು ಸತ್ಯ. ಈ ಕಾರಣಕ್ಕಾಗಿಯೇ ಅವರ ಅನುಮತಿಯಿಂದಲೇ ನಾಯಕರುಗಳು ಅವರಿಗೆ ಅದ್ಯಕ್ಷ ಸ್ಥಾನ ನೀಡಬೇಕೆಂದು ಧೈರ್ಯವಾಗಿ ಹೇಳುತ್ತಿರುವುದು. ರಾಹುಲರ ಅನಿಸಿಕೆಯಲ್ಲಿ ಯಾವುದೇ ತಪ್ಪಿಲ್ಲ. ಯಾಕೆಂದರೆ ಚುನಾವಣೆಯ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಮತ್ತು ಟಿಕೇಟ್ ಹಂಚುವಲ್ಲಿ ನಿರ್ದಾರಗಳನ್ನು ತಗೆದುಕೊಳ್ಳುತ್ತಿದ್ದ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳು ರಾಹುಲ್ ಗಾಂದಿಯವರ ಅಭಿಪ್ರಾಯಗಳಿಗೆ ಸಾಕಷ್ಟು ಮನ್ನಣೆ ನೀಡುತ್ತಿರಲಿಲ್ಲವೆಂಬುದಂತು ನಿಜ. ಉದಾಹರಣೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿಯವರ ಜೊತೆ ಸುಮಧುರ ಬಾಂದವ್ಯ ಹೊಂದಿರುವ ರಾಹುಲರಿಗೆ ಅವರ ಜೊತೆ ಮೈತ್ರಿಮಾಡಿಕೊಳ್ಳುವ ಇಚ್ಚೆಯಿದ್ದರೂ ಸ್ಥಳೀಯ ನಾಯಕರುಗಳ ಒತ್ತಾಯದ ಮೇಲೆ ಎಡರಂಗದ ಜೊತೆ ಹೋಗಿ ಸೋಲಬೇಕಾಯಿತು. ಅದೇ ರೀತಿ ಅಸ್ಸಾಮಿನಲ್ಲಿ ಎ.ಐ.ಡಿ.ಯಿ.ಎಫ್. ಜೊತೆ ಮೈತ್ರಿಗೆ ರಾಹುಲ್ ಸಿದ್ದರಿದ್ದರೂ ಗೋಗೋಯ್ ಅವರ ನಿರಾಕರಣೆಯಿಂದ ಅಲ್ಲಿಯೂ ಪಕ್ಷ ಸೋಲಬೇಕಾಯಿತು. ಇದು ಇತ್ತೀಚೆಗೆ ರಾಹುಲ್ ಗಾಂದಿಯವರಲ್ಲಿ ಅಸಮಾದಾನ ಮೂಡಿಸಿದ್ದನ್ನು ಅವರ ನಾಯಕರುಗಳೇ ಒಪ್ಪಿ ಕೊಳ್ಳುತ್ತಾರೆ. ಪಕ್ಷದಲ್ಲಿನ ಎರಡು ಅಧಿಕಾರ ಕೇಂದ್ರಗಳ ಪರಿಣಾಮವನ್ನು ಈಗ ಅರಿತಂತಿರುವ ಕಾಂಗ್ರೆಸ್ಸಿಗರಿಗೆ ರಾಹುಲರಿಗೆ ಪಕ್ಷದ ಸಂಪೂರ್ಣ ಜವಾಬ್ದಾರಿಯನ್ನು ಕೊಟ್ಟು ಪಕ್ಷ ಕಟ್ಟುವ ಆಸೆ ಬಂದಿದ್ದರೆ ತಪ್ಪೇನಲ್ಲ. ಅದೂ ಅಲ್ಲದೆ ಒಂದು ಪಕ್ಷದಲ್ಲಿ ಎರಡು ಅಧಿಕಾರ ಕೇಂದ್ರಗಳಿರುವುದರಿಂದ ಆಗಬಹುದಾದ ಮತ್ತು ಈಗಾಗಲೇ ಆಗಿರುವ ಅನಾಹುತಗಳ ಬಗ್ಗೆ ಕಾಂಗ್ರೆಸ್ ನಾಯಕರುಗಳಿಗೆ ಮನವರಿಕೆಯಾಗಿರುವುದು ಸಹ ಇಂತಹದೊಂದು ನಿರ್ದಾರಕ್ಕೆ ಕಾರಣವೆನ್ನಲಾಗುತ್ತಿದೆ. ಇದು ವಾಸ್ತವವೂ ಹೌದು. ಉದಾಹರಣೆಗೆ ಸೋನಿಯಾ ತೆಗೆದುಕೊಳ್ಳು ನಿರ್ಣಯಗಳ ರೀತಿ ಒಂದು ತರನದ್ದಾದರೆ ರಾಹುಲರ ರಾಜಕೀಯ ತೀರ್ಮಾನಗಳೇ ಬೇರೆ ರೀತಿಯಲ್ಲಿ ಇರುತ್ತಿದ್ದವು. ಇಂತಹ ಸಂದಿಗ್ದ ಸನ್ನಿವೇಶದಲ್ಲಿ ಸೋನಿಯಾರ ನಿರ್ದಾರಗಳೇ ಜಾರಿಯಾದರೂ ಅದರ ವೈಫಲ್ಯದ ಹೊಣೆಗಾರಿಕೆ ಮಾತ್ರ ರಾಹುಲರ ಹೆಗಲೇರುತ್ತಿತ್ತು. ಬಹಳಷ್ಟು ಬಾರಿ ಇಂತಹ ಮುಜುಗರಗಳಿಂದ ಪಾರಾಗಲೆಂದೇ ರಾಹುಲರು ಯಾರಿಗೂ ಮಾಹಿತಿ ನೀಡದೆ ವಿದೇಶಗಳಿಗೆ ತರಳಿ ಬಿಡುತ್ತಿದ್ದರು. ಇತ್ತೀಚೆಗೆ ಇದನ್ನು ಅರ್ಥಮಾಡಿಕೊಂಡಂತೆ ಕಾಣುತ್ತಿರುವ ಸೋನಿಯಾರವರು ತಮ್ಮ ಏರುತ್ತಿರುವ ವಯಸ್ಸು ಮತ್ತು ಅನಾರೋಗ್ಯಗಳ ಕಾರಣದಿಂದ ಇದಕ್ಕೆ ಹಸಿರು ನಿಶಾನೆ ತೋರಿಸಿದಂತಿದೆ.

ಆದರೆ ಕಾಂಗ್ರೆಸ್ಸಿನ ನಿಜವಾದ ಸಮಸ್ಯೆ ಇರುವುದೇ ಇಲ್ಲಿ ಕಾಂಗ್ರೆಸ್ಸಿನಂತಹ ದೊಡ್ಡ ಪಕ್ಷವನ್ನು ನಿಬಾಯಿಸುವಷ್ಟು ಶಕ್ತಿ ಮತ್ತು ರಾಜಕೀಯ ಚಾಣಾಕ್ಷತೆ ರಾಹುಲರಿಗಿದೆಯೇ ಎನ್ನುವುದಾಗಿದೆ. ಯಾಕೆಂದರೆ ಸೋನಿಯಾರವರಿಗಾದರೆ ತನ್ನ ಅತ್ತೆ ಮಾಜಿ ಪ್ರದಾನಿ ಶ್ರೀಮತಿ ಇಂದಿರಾಗಾಂದಿಯವರ ಕಾಲದಿಂದಲೂ ತೀರಾ ಹತ್ತಿರದಿಂದ ಕಾಂಗ್ರೆಸ್ಸಿನ ಬೆಳವಣಿಗೆಗಳನ್ನು ನೋಡಿದ ಅನುಭವವಿತ್ತು. ತದನಂತರ ತಮ್ಮ ಪತಿಯ ನಿಧನಾ ನಂತರವೂ ಪಕ್ಷದಲ್ಲಿ ಯಾವುದೇ ಅಧಿಕಾರ ಸ್ಥಾನವನ್ನು ಹಿಡಿಯದೇ ಇದ್ದರೂ ಪಕ್ಷದ ಆಗುಹೋಗುಗಳನ್ನು ಅವರ ಗಮನಕ್ಕೆ ತಂದು ಸೂಕ್ತ ಸಲಹೆ ಪಡೆಯುವ ಒಂದು ಅನಧಿಕೃತ ವ್ಯವಸ್ಥೆಯು ಪಕ್ಷದಲ್ಲಿತ್ತು. ಇದು ಮುಂದೆ ಸೋನಿಯಾರವರಿಗೆ ಅನುಕೂಲಕರವಾಗಿ ಪರಿಣಮಿಸಿತು. ಹೀಗಾಗಿಯೇ ಸುಮಾರು ಹದಿನೆಂಟು ವರ್ಷಗಳ ಕಾಲ ಅವರು ಯಶಸ್ವಿಯಾಗಿ ಪಕ್ಷವನ್ನು ಮುನ್ನಡೆಸಿಕೊಂಡು ಬಂದರು. ಬಹಳ ಜನ ಸೋನಿಯಾರವರು ಪಕ್ಷವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದರು ಎನ್ನುವ ಮಾತನ್ನು ಒಪ್ಪದೇ ಇರಬಹುದು. ಹಲವು ಚುನಾವಣೆಗಳನ್ನು ಅವರು ಸೋತಿರಬಹುದು. ಆದರೆ ಕಾಂಗ್ರೆಸ್ಸಿನಂತಹ ದೊಡ್ಡ ಪಕ್ಷವೊಂದನ್ನು ಹದಿನೆಂಟು ವರ್ಷಗಳ ಕಾಲ ಒಗ್ಗೂಡಿಸಿ ಇಟ್ಟುಕೊಳ್ಳುವುದೇ ಒಂದು ಸಾಧನೆಯಾಗುವುದರ ನಡುವೆ, ಬಾಜಪದ ಮತಾಂಧ ರಾಜಕಾರಣವನ್ನು, ಪ್ರಾದೇಶಿಕ ಪಕ್ಷಗಳ ಪಾಳೇಗಾರಿಕೆಯ ಐಲುತನಗಳನ್ನು ಏಕಕಾಲಕ್ಕೆ ನಿಬಾಯಿಸುವುದು ನಿಜಕ್ಕೂ ಒಂದು ಸವಾಲೇ ಸರಿ. ಈಗ ರಾಹುಲ್ ಗಾಂದಿಯವರಿಗೆ ಕಾಂಗ್ರೆಸ್ಸಿನಂತಹ ರಾಷ್ಟ್ರೀಯ ಪಕ್ಷದ ಆಗುಹೋಗುಗಳನ್ನು ನಿಬಾಯಿಸುವಷ್ಟು ಪ್ರೌಢಿಮೆ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಾಗಿದೆ. ಹಾಗೆ ನೋಡಿದರೆ ರಾಹುಲರು ಅವರ ತಂದೆ ರಾಜೀವ್ ಗಾಂದಿಯವರಂತೆಯೇ ಸಂಕೋಚದ ಸ್ವಬಾವದವರು. ಅಷ್ಟು ಸುಲಭವಾಗಿ ಒಂದು ನಾಯಕತ್ವವನ್ನು ಒಪ್ಪಿಕೊಂಡು ಮುನ್ನಡೆಸುವ ತೆರೆದ ಮನಸ್ಸಿನ ಸ್ವಬಾವದವರೇನಲ್ಲ. ಆದರೆ ರಾಜೀವ್ ಗಾಂದಿಯವರು ಅಂದಿನ ಸನ್ನಿವೇಶವನ್ನು ಬೇಗ ಅರ್ಥಮಾಡಿಕೊಂಡು ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿದು ನಾಯಕತ್ವದ ಹೊಣೆ ನಿಬಾಯಿಸಿದ್ದರು. ಇದರ ಜೊತೆಗೆ ಅವತ್ತು ರಾಜೀವ್ ಗಾಂದಿಗೆ ಸವಾಲಾಗಿ ನಿಲ್ಲಬಲ್ಲ ವಿರೋದ ಪಕ್ಷಗಳಲ್ಲಿ ಯಾರದೇ ನಾಯಕತ್ವವೂ ಇರಲಿಲ್ಲ. ಹೀಗಾಗಿ ರಾಜೀವರು ಸುಲಭವಾಗಿ ರಾಜಕಾರಣದ ಕೇಂದ್ರಬಿಂದುವಾಗಿ ಎದ್ದು ನಿಲ್ಲಲು ಸಾದ್ಯವಾಗಿತ್ತು. ಆದರೆ ರಾಹುಲ್ ಗಾಂದಿಗೆ ತಕ್ಷಣಕ್ಕೆ ಅದ್ಯಕ್ಷತೆಯ ಯಾವ ಅನಿವಾರ್ಯತೆಯೂ ಇಲ್ಲವಾಗಿದೆ. ಜೊತೆಗೆ 2004ರಲ್ಲಿ ರಾಜಕೀಯ ಪ್ರವೇಶಿಸಿದಾಗಿನಿಂದಲೂ ಅವರು ಒಂದು ಹೆಜ್ಜೆ ಮುಂದಿಡಲೂ ಮೀನಾಮೇಷ ಎಣಿಸುತ್ತಲೇ ಬಂದಿದ್ದಾರೆ. ಅವರು ನಿಜಕ್ಕೂ ನಾಯಕತ್ವದ ಲಕ್ಷಣಗಳನ್ನು ತೋರಿಸುವವರಾಗಿದ್ದರೆ ಯು.ಪಿ.ಎ. ಸರಕಾರದಲ್ಲಿ ಯಾವುದಾದರು ಸಚಿವಗಿರಿಯನ್ನು ವಹಿಸಿಕೊಂಡು ಆಡಳಿತದ ಒಂದಿಷ್ಟು ಪಾಠಗಳನ್ನು ಕಲಿಯುತ್ತ ಜನರ ನಡುವೆ ಕೆಲಸ ಮಾಡಬಹುದಿತ್ತು. ಆದರೆ ತಮ್ಮ ಸರಕಾರದ ಎರಡು ಅವಧಿಯಲ್ಲೂ ಅವರು ಸರಕಾರಿ ಯಂತ್ರದ ಒಂದು ಭಾಗವಾಗಲೇ ಇಲ್ಲ. ಚುನಾವಣೆ ಬಂದಾಗ ಪ್ರಚಾರ ಮಾಡುವಷ್ಟಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಂಡು ಬಿಟ್ಟರು. ಅದೂ ಅಲ್ಲದೆ ರಾಹುಲರು ರಾಜಕಾರಣಕ್ಕೆ ಪ್ರವೇಶಿಸುವ ಹೊತ್ತಿಗಾಗಲೇ ಶ್ರೀ ಎಲ್.ಕೆ. ಅದ್ವಾನಿ ಅಂತವರು ಬಹು ಎತ್ತರದ ನಾಯಕರಾಗಿ ಬೆಳೆದು ನಿಂತಿದ್ದರು. ತದ ನಂತರದಲ್ಲೂ ಇಂದಿನ ಪ್ರದಾನಿಗಳಾದ ಶ್ರೀ ನರೇಂದ್ರಮೋದಿಯವರು ಬಲಿಷ್ಠ ರಾಷ್ಟ್ರೀಯ ನಾಯಕರಾಗಿ ಬಳೆದು ನಿಂತು ರಾಹುಲ್ ಗಾಂದಿಯನ್ನು ರಾಷ್ಟ್ರೀಯ ನಾಯಕರದು ಒಪ್ಪಿಕೊಳ್ಳಲು ಜನ ಹಿಂದೆ ಮುಂದೆ ನೋಡುವಂತಹ ಸನ್ನಿವೇಶ ಸೃಷ್ಠಿಯಾಗಿತ್ತು. ಜೊತೆಗೆ ಮತಾಂಧ ರಾಜಕಾರಣದ ಆವೇಶದ ನಡುವೆ ರಾಹುಲರಂತ ಸೌಮ್ಯ ಸ್ವಬಾವದ ನಾಯಕರು ಎದ್ದು ನಿಲ್ಲುವುದು ದುಸ್ತರವಾಗುವಂತ ಪರಿಸ್ಥಿತಿ ಬಂದು ನಿಂತಿತ್ತು. ಈಗಲೂ ಸಹ ರಾಹುಲರು ಅಧ್ಯಕ್ಷರಾದ ತಕ್ಷಣ ಕಾಂಗ್ರೆಸ್ಸಿನ ಕಷ್ಟಗಳೆಲ್ಲ ಬಗೆಹರಿಯುತ್ತವೆಯೆಂಬ ಭ್ರಮೆಯನ್ನು ಯಾರೂ ಇಟ್ಟುಕೊಳ್ಳಲು ಸಾದ್ಯವಿಲ್ಲ. ಯಾಕೆಂದರೆ ಸೋನಿಯಾರವರಿಗಿದ್ದ ಪಕ್ಷದ ಮೇಲಿನ ಹಿಡಿತವನ್ನು ಸಾಧಿಸಲು ರಾಹುಲರು ಶಕ್ತರಾಗಿದ್ದಾರೆಯೇ ಎಂಬುದಿನ್ನು ಸಾಬೀತಾಗಿಲ್ಲ. ಜೊತೆಗೆ ರಾಹುಲರ ಸಮೀಪವರ್ತಿಗಳೇ ಹೇಳುವಂತೆ ಅವರು ಪೂರ್ವನಿಗದಿತ ವೇಳಾ ಪಟ್ಟಿಯ ಪ್ರಕಾರ ಕೆಲಸ ಮಾಡುವಲ್ಲಿ ಆಸಕ್ತಿ ತೋರುವುದಿಲ್ಲ. ಜೊತೆಗೆ ಯಾವುದೇ ನಾಯಕರುಗಳನ್ನು, ಅವರ ಹೆಸರುಗಳನ್ನು ನೆನಪಿಟ್ಟಿಕೊಂಡು ಅವರುಗಳು ಬಂದಾಗ ಬೇಟಿಯಾಗುವ ಸೌಜನ್ಯವನ್ನು ತೋರುವಲ್ಲಿಯೂ ಅವರು ನಿರ್ಲಕ್ಷ್ಯ ವಹಿಸುತ್ತಾರೆಂಬ ಮಾತಿದೆ. ಅದೂ ಅಲ್ಲದೆ ರಾಹುಲರಿಗೆ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳ ಮಾತಿಗಿಂತ ತಮ್ಮ ಜೊತೆಯೇ ರಾಜಕಾರಣಕ್ಕೆ ಬಂದ ಯುವಪೀಳಿಗೆಯ ಜ್ಯೋತಿರಾದಿತ್ಯ ಸಿಂದಿಯಾ, ಸಚಿನ್ ಪೈಲಟ್ ಮುಂತಾದವರ ಅಪಕ್ವ, ಅನನುಭವಿ ಸಲಹೆಗಳಿಗೆ ಹೆಚ್ಚು ಮಾನ್ಯತೆ ನೀಡುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಪದೇ ಪದೆ ಹೇಳದೆ ಕೇಳದೆ ವಿದೇಶಗಳಿಗೆ ಅನಧಿಕೃತವಾಗಿ ಹೋಗಿ ಪಕ್ಷದವರಲ್ಲಿ ಗೊಂದಲ ಸೃಷ್ಠಿಸುವುದು ಸಹ ರಾಹುಲರ ಅಬ್ಯಾಸವಾಗಿದೆ. ಇದೆಲ್ಲದರ ಪರಿಣಾಮವಾಗಿ ರಾಹುಲರು ಅದ್ಯಕ್ಷರಾಗಲಿ ಎಂದು ಬಯಸುವವರಿಗೇನೆ ಅವರ ಸಫಲತೆಯ ಬಗ್ಗೆ ಸಂಶಯವಿದೆ, ಇರಲಿ.

ಇದೀಗ ರಾಹುಲರನ್ನು ಪಕ್ಷದ ಅದ್ಯಕ್ಷ ಸ್ಥಾನಕ್ಕೆ ತಂದು ಪಕ್ಷದ ಸಂಘಟನೆಯಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಲು ತಯಾರಾಗಿರುವ ಮೂಲಕ ಕಾಂಗ್ರೆಸ್ ತನ್ನ ನೂರು ವರ್ಷಗಳ ಇತಿಹಾಸದಲ್ಲಿ ಮತ್ತೊಂದು ಹೊಸ ಅದ್ಯಾಯ ಬರೆಯಲು ಹೊರಟಿದೆ. ಆದರೆ ಪಕ್ಷದ ಅದ್ಯಕ್ಷತೆಯನ್ನು ರಾಹುಲ್ ಗಾಂದಿಯವರಿಗೆ ನೀಡುವುದರಿಂದ ಮಾತ್ರಕ್ಕೆ ಕಾಂಗ್ರೆಸ್ಸಿನ ಕಷ್ಟಗಳು ಇಲ್ಲವಾಗುತ್ತವೆಯೇ? ಎಂಬುದೆ ಎಲ್ಲರನ್ನೂ ಕಾಡುತ್ತಿರುವ ಮುಖ್ಯ ಪ್ರಶ್ನೆಯಾಗಿದೆ.  ಕೇವಲ ಪಕ್ಷದ ಅದ್ಯಕ್ಷರನ್ನು ಬದಲಾಯಿಸುವುದರಿಂದ ಪಕ್ಷದ ಬಲವರ್ದನೆ ಸಾದ್ಯವಿಲ್ಲ. ತಳಮಟ್ಟದಿಂದಲೂ ಈ ಬದಲಾವಣೆ ಪ್ರಾರಂಭವಾಗ ಬೇಕಾಗಿದೆ. ಜೊತೆಗೆ ಬದಲಾಗುತ್ತಿರುವ ಕಾಲಮಾನಕ್ಕೆ ತಕ್ಕಂತೆ ಅದು ತನ್ನ ಒಟ್ಟು ಸ್ವರೂಪದಲ್ಲಿಯೇ ಭಿನ್ನತೆಯತ್ತ ಸಾಗಬೇಕಿದೆ. ಇದು ಕೇವಲ ಕಾಂಗ್ರೆಸ್ ಎನ್ನುವ ಪಕ್ಷದ ಲಾಭದ ದೃಷ್ಠಿಯಿಂದ ಮಾತ್ರವಲ್ಲ, ರಾಷ್ಟ್ರ ರಾಜಕೀಯದ ಒಳಿತಿಗಾಗಿಯೂ ಆಗಬೇಕಾದ ಕಾರ್ಯವಾಗಿದೆ. ಯಾಕೆಂದರೆ ಇವತ್ತಿನ ರಾಜಕೀಯ ಪರಿಸ್ಥಿತಿ ಅಷ್ಟೊಂದು ಆಶಾದಾಯಕವಾಗಿಲ್ಲ. ಬಾಜಪ ಪ್ರಬಲವಾದ ಒಂದು ಶಕ್ತಿಯಾಗಿ ಬೆಳೆದು ಮತಾಂಧತೆ ಮತ್ತು ಖಾಸಗಿ ಬಂಡವಾಳಶಾಹಿ ಎಂಬೆರಡು ಶಕ್ತಿಗಳ ಅಭೂತ ಪೂರ್ವ ಬೆಂಬಲದೊಂದಿಗೆ ದೈತ್ಯಾಕಾರವಾಗಿ ಬೆಳೆದು ನಿಂತಿದ್ದರೆ, ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ನಾಯಕರುಗಳು ರಾಷ್ಟ್ರೀಯ ಹಿತಾಸಕ್ತಿಯ ಬಗ್ಗೆ ಯೋಚಿಸಲೂ ಪುರುಸೊತ್ತಿಲ್ಲದವರಂತೆ ಮೆರೆಯುತ್ತಿದ್ದಾರೆ. ಇವೆರಡೂ ಶಕ್ತಿಗಳನ್ನು ಎದುರಿಸಿ ನಿಂತು ಜನಪರ ರಾಜಕೀಯ ಮಾಡುತ್ತ ಚುನಾವಣೆಗಳನ್ನುಗೆಲ್ಲುವುದು ಅಂದು ಕೊಂಡಷ್ಟು ಸುಲಭವಲ್ಲ. ಹೊಸತನದ ರಾಜಕಾರಣವನ್ನು ಕಾಂಗ್ರೆಸ್ ಶುರು ಮಾಡುವುದೇ ಆದಲ್ಲಿ 2019 ಅದರ ಗುರಿಯಾಗುವುದಕ್ಕಿಂತ 2024 ಅದರ ನೈಜ ಗುರಿಯಾಗಬೇಕು. ಯಾಕೆಂದರೆ ಅಸಾದ್ಯವಾದ ಸಮೀಪದ ಗುರಿಗಿಂತ ಸಾದ್ಯವಾಗಬಹುದಾದ ದೀರ್ಘಕಾಲೀನ ಗುರಿ ಅತ್ಯುತ್ತಮವಾದುದು.

ಈ ದಿಸೆಯಲ್ಲಿ ಆದಷ್ಟು ಬಗ ಕಾಂಗ್ರೆಸ್ ತನ್ನ ಬದಲಾವಣೆಯ ಕಾರ್ಯವನ್ನು ಪ್ರಾರಂಬಿಸುವುದು ಉತ್ತಮ!

ಸೆಪ್ಟೆಂ 9, 2015

ಮಂಗಳೂರಿನ ಮತಿಗೆಟ್ಟ 'ಯುವಕರು'


Ashok K R
ದಕ್ಷಿಣ ಕನ್ನಡದಲ್ಲಿ ಬಿಜೆಪಿಯದೇ ಪಾರುಪತ್ಯವಿತ್ತು. ಬಿಜೆಪಿ ಬೆಂಬಲಿತ ಸಂಘಪರಿವಾರದ ವಿವಿಧ ಶಾಖೆಗಳ ಆಟೋಟಾಪಗಳು, ಸಾಮಾನ್ಯ ಜನರಿಗೆ ವಿನಾಕಾರಣವಾಗಿ ಅವರು ನೀಡಿದ ತೊಂದರೆ, ಅದರ ಜೊತೆಜೊತೆಗೇ ಬೆಳೆದ ಮುಸ್ಲಿಂ ಮೂಲಭೂತವಾದಿಗಳ ಕಾಟವೆಲ್ಲವೂ ಸೇರಿ ಜನರನ್ನು ಜಿಗುಪ್ಸೆಗೆ ತಳ್ಳಿತ್ತು. ಆ ಜಿಗುಪ್ಸೆಯ ಫಲವೆಂಬಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು, ಸುಳ್ಯ ಕ್ಷೇತ್ರವೊಂದನ್ನು ಹೊರತುಪಡಿಸಿ. ಓ! ಕಾಂಗ್ರೆಸ್ ಬಂತು, ಅದರಲ್ಲೂ ಸಿದ್ಧರಾಮಯ್ಯನಂತಹ 'ಸಮಾಜವಾದಿ' 'ಅಹಿಂದ' ನಾಯಕ ಈಗ ಮುಖ್ಯಮಂತ್ರಿ. ಇನ್ನೇನು ಇಡೀ ದಕ್ಷಿಣ ಕನ್ನಡ ಶಾಂತಿಯ ಬೀಡಾಗಿಬಿಡುತ್ತದೆ ಎಂದುಕೊಂಡಿರಾದರೆ ಅದು ಖಂಡಿತ ತಪ್ಪು. ತಪ್ಪೆಂದು ನಿರೂಪಿಸಲು ಮತ್ತೆ ಮತ್ತೆ ಅನೈತಿಕ ಪೋಲೀಸ್ ಗಿರಿಯಂತಹ ಕಾರ್ಯಗಳು ನಡೆಯುತ್ತಲೇ ಇವೆ. 
ಮುಸ್ಲಿಮನೊಬ್ಬ ಪರಿಚಯದ ಹಿಂದೂ ಹುಡುಗಿಯೊಂದಿಗೆ ಹೋಗುವುದು, ಹಿಂದೂವೊಬ್ಬ ಪರಿಚಯದ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುವುದು ಇಲ್ಲಿ ಧರ್ಮದ್ರೋಹದ ಅಪರಾಧ! ಇಂತವರ ವಿರುದ್ಧ ಮಾತನಾಡಿದರೆ ಅದು ದೇಶದ್ರೋಹಕ್ಕೆ ಸಮ! ನಿನ್ನೆ ದಿನ ಹಿಂದೂ ಯುವಕೊನೊಬ್ಬನನ್ನು ನಡುಬೀದಿಯಲ್ಲಿ ಹೊಡೆಯಲಾಗಿದೆ. ಕಾರಣ ಆತ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುತ್ತಿದ್ದ. ಹೆಣ್ಣುಮಕ್ಕಳ 'ರಕ್ಷಣೆಯ' ನೆಪದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಇಂತಹ ಕೃತ್ಯವೆಸಗಿದ್ದಾರೆ! ಸಹಪಾಠಿಗಳೂ ಮಾತನಾಡದಂತಹ ಸ್ಥಿತಿಗೆ ಮಂಗಳೂರು ತಲುಪಿರುವುದಾದರೂ ಯಾಕೆ?
ಮೇಲಿನ ಚಿತ್ರ ಗಮನಿಸಿ, ಆ ಹಿಂದೂ ಹುಡುಗನ ಎದುರಿಗೆ ನಿಂತು ಬಹುಶಃ 'ಸಂಸ್ಕೃತಿ'ಯ ಪಾಠ ಮಾಡುತ್ತಿರುವವರೆಲ್ಲರೂ ಯುವಕರು. ಇಂತಹ ಯುವಕರಿಗೆ ಕೋಮುನಂಜನ್ನು ತುಂಬುತ್ತಿರುವವರಾರು? ಆ ಕೋಮು ವಿಷವನ್ನು ತುಂಬುವ ವ್ಯಕ್ತಿಗಳು ದೊಡ್ಡ ದೊಡ್ಡ ಭಾಷಣ ಬಿಗಿದು ಬೆಚ್ಚಗೆ ಮನೆ ಸೇರುತ್ತಾರೆ. ವಿಷದ ನಂಜೇರಿದ ಈ ಯುವಕರು ಬೀದಿಯಲ್ಲಿ ಓಡಾಡುತ್ತಿದ್ದ ಗೆಳೆಯರಿಬ್ಬರನ್ನೂ ಹಿಡಿದು ಚಚ್ಚುತ್ತಾರೆ. ಕೊನೆಗೆ ಜೈಲು ಪಾಲಾಗುವ ಸಂದರ್ಭ ಬಂದರೆ ಅದು ಈ ಹುಡುಗರಿಗೇ ಹೊರತು ಭೀಕರ ಭಾಷಣ ಕುಟ್ಟುವವರಿಗಲ್ಲ.
ಅಂದಹಾಗೆ ಕಾಂಗ್ರೆಸ್ ಸರಕಾರ ಬಂದ ಮೇಲೂ ಇದು ಯಾಕೆ ನಡೆಯುತ್ತಿದೆ ಎಂದಿರಾ? ಬಿಜೆಪಿ ಮಂಗಳೂರಿನಲ್ಲಿ ಉಗ್ರ ಹಿಂದೂ ಮೂಲಭೂತವಾದ ನಡೆಸಿದರೆ ಕಾಂಗ್ರೆಸ್ ನಡೆಸುವುದು ಸೌಮ್ಯ ಹಿಂದೂ ಮೂಲಭೂತವಾದ.... ಹಿಂದೂ ಮೂಲಭೂತ ಅಸ್ತಿತ್ವದಲ್ಲಿರಬೇಕಾದರೆ ಮುಸ್ಲಿಂ ಮೂಲಭೂತವಿಲ್ಲದಿದ್ದರೆ 'ಇಸ್ಲಾಮಿಗೆ' ಅವಮಾನವೆಂದು ಈ ಯುವಕರು ತಿಳಿದಿರಬೇಕು! ತನ್ನಲ್ಲಿರುವ ಅಪಾರ ಪ್ರಮಾಣದ ನೈಸರ್ಗಿಕ ಸೌಂದರ್ಯದಿಂದ ಗಮನ ಸೆಳೆಯಬೇಕಿದ್ದ ಮಂಗಳೂರು ಮತಿಗೆಟ್ಟವರ ಕಾರಣದಿಂದಲೇ ಸುದ್ದಿಯಾಗುತ್ತಿರುವುದು ಬೇಸರದ ಸಂಗತಿ.

ಈ ಇಡೀ ಲೇಖನವನ್ನು ಹೊಸದಾಗಿ ಬರೆದಿಲ್ಲ. ಅತ್ತಾವರದಲ್ಲಿ ಹಿಂದೂ ಮೂಲಭೂತವಾದಿಗಳು ನಡೆಸಿದ ದಾಂಧಲೆಯ ಸಂದರ್ಭದಲ್ಲಿ ಬರೆದ "ಮಂಗಳೂರಿನ ಮತಿಗೆಟ್ಟ ಹುಡುಗರು "ಲೇಖನವನ್ನೇ ಕಾಪಿ ಪೇಸ್ಟ್ ಮಾಡಲಾಗಿದೆ! ಹಿಂದೂ ಎನ್ನುವ ಜಾಗದಲ್ಲಿ ಮುಸ್ಲಿಂ ಎಂದು ಮುಸ್ಲಿಂ ಎಂದು ಬರೆದಿದ್ದ ಜಾಗದಲ್ಲಿ ಹಿಂದೂ ಎಂದು ತಿದ್ದಿದರೆ ಈ ಲೇಖನ ಸಿದ್ಧವಾಗಿಬಿಟ್ಟಿತು. ಮೂಲಭೂತವಾದಿಗಳ ಕಾರ್ಯವೈಖರಿಯಲ್ಲಿ ಅಷ್ಟರಮಟ್ಟಿಗೆ ಹೋಲಿಕೆಗಳಿವೆ.

ಸೆಪ್ಟೆಂ 3, 2015

ಮುಜಾಫರ್ ನಗರದ ಕೋಮುಗಲಭೆಯಲ್ಲಿ ನಲುಗಿದ ಧರ್ಮವ್ಯಾವುದು?

Muzaffarnagar baaqi hai
Dr Ashok K R
ದೃಶ್ಯ 1: 
ಪುಟ್ಟ ಹುಡುಗನನ್ನು ಸಂದರ್ಶನಕಾರರು ಮಾತನಾಡಿಸುತ್ತಿರುತ್ತಾರೆ. ಬಾಗಿಲ ಹೊರಗೆ ಗೋಡೆಗೊರಗಿಕೊಂಡು ನಿಂತಿರುತ್ತಾನೆ ಹುಡುಗ. ನಿಮ್ಮ ಊರು ಬಿಟ್ಟು ಇಲ್ಲಿಗ್ಯಾಕೆ ಬಂದೆ ಎನ್ನುತ್ತಾನೆ ಸಂದರ್ಶಕ. ‘ನಮ್ಮ ಮನೆ ಅಂಗಡಿಗೆಲ್ಲ ಬೆಂಕಿ ಹಚ್ಚಿಬಿಟ್ಟಿದ್ದರು. ಅದಕ್ಕೆ ಇಲ್ಲಿಗೆ ಬಂದೆ’.
‘ಶಾಲೆಗೆ ಹೋಗುತ್ತಿದ್ದಾ ಅಲ್ಲಿ’
‘ಹ್ಞೂ’
‘ಈಗ ಹೋಗ್ತಿಲ್ವಾ ಶಾಲೆಗೆ’
‘ಇಲ್ಲ’
‘ಯಾಕೆ’
ಹುಡುಗ ಒಂದರೆಕ್ಷಣ ಯೋಚಿಸುತ್ತಾನೆ ‘ಹೋಗ್ತೀನಿ ಇನ್ಮೇಲೆ’ ಎಂದ್ಹೇಳಿ ಒಳಗೋಡುತ್ತಾನೆ. ಒಂದೇ ಕೋಣೆಯ ಮನೆಯಲ್ಲಿ ಅಡುಗೆ ಮಾಡುತ್ತಿರುತ್ತಾಳೆ ಅಮ್ಮ. ‘ಅಮ್ಮ ಅಮ್ಮ ನಾನು ಶಾಲೆಗೆ ಹೋಗ್ತೀನಲ್ವಾ’ ಎಂದು ಕೇಳುತ್ತಾನೆ. ಅಮ್ಮನ ಬಳಿ ಸರಿಯಾದ ಉತ್ತರವಿರುವುದಿಲ್ಲ.
ದೃಶ್ಯ 2:
ರೈತರ ಸಂಘಟನೆಯ ಮುಖಂಡನೊಡನೆ ಮಾತುಕತೆ. ‘ಕಬ್ಬಿಗೆ ಬೆಲೆ ಸಿಕ್ಕಿಲ್ಲವಲ್ಲ ಯಾಕೆ?’
‘ಪ್ರತಿ ವರ್ಷ ಸರಿಯಾದ ಬೆಲೆ ಸಿಗುತ್ತಿರಲಿಲ್ಲ. ಹೋರಾಟ ಮಾಡುತ್ತಿದ್ದೋ. ಕಾರ್ಖಾನೆಯವರು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುತ್ತಿದ್ದರು’
‘ಈಗ’
‘ಈಗೆಲ್ಲಿ ಗಲಭೆ ನಡೆದ ನಂತರ ರೈತರೆಲ್ಲ ಮುಸ್ಲಿಂ ಜಾಟ್, ಹಿಂದೂ ಜಾಟ್ ಆಗಿಬಿಟ್ಟಿದ್ದಾರೆ. ರೈತ ಹೋರಾಟ ಹಳ್ಳಹಿಡಿದಿದೆ. ಮೊದಲು ಮುಸ್ಲಿಮರು ಅಲ್ಲಾಹೋ ಅಕ್ಬರ್ ಅಂದ್ರೆ ಹಿಂದೂ ಹರಹರ ಮಹಾದೇವ್ ಅಂತ ಪ್ರತಿಕ್ರಿಯಿಸುತ್ತಿದ್ದ. ಈಗ ಹರಹರ ಮಹಾದೇವ್ ಅಷ್ಟೇ ಉಳಿದಿದೆ. ಅದೂ ಇಲ್ಲ ಹರಹರ ಮೋದಿ ಅಷ್ಟೇ ಉಳಿದಿದೆ.
Muzaffarnagar baaqi hai
ಗಲಭೆಗೆ ಬಲಿಯಾದ ಬಾಲ್ಯ
ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ಕೋಮುಗಲಭೆಯ ಬಗ್ಗೆ ನಕುಲ್ ಸಿಂಗ್ ಸಾಹ್ನಿ ತೆಗೆದಿರುವ ‘ಮುಜಾಫರ್ ನಗರ್ ಬಾಕೀ ಹೈ’ ಸಾಕ್ಷ್ಯಚಿತ್ರದ ಎರಡು ದೃಶ್ಯಗಳಿವು. ಇಡೀ ಕೋಮುಗಲಭೆಯಿಂದ ಅನ್ಯಾಯಕ್ಕೊಳಗಾದವರಾರೆಂದು ಈ ಎರಡೇ ದೃಶ್ಯದಲ್ಲಿ ತೋರಿಸಿಬಿಡುತ್ತಾರೆ. ಬಾಲ್ಯ ಕಳೆದುಕೊಂಡ ಮಕ್ಕಳು, ಹಕ್ಕಿನ ಹೋರಾಟ ಕಳೆದುಕೊಂಡ ರೈತರು ಇಡೀ ಕೋಮುಗಲಭೆಯೆಂಬ ಪೂರ್ವನಿಯೋಜಿತ ಹಿಂಸಾ ನಾಟಕದಿಂದ ನೊಂದವರು. ಕೋಮುಗಲಭೆಯ ಸಂದರ್ಭವನ್ನನುಸರಿಸಿ ತೆಗೆಯುವ ಸಾಕ್ಷ್ಯಚಿತ್ರಗಳು ಒಂದು ಧರ್ಮದ ಪರವಾಗಿ ಮತ್ತೊಂದು ಧರ್ಮದ ವಿರುದ್ಧವಾಗಿ ವಾದ ಮಂಡಿಸಿಬಿಡುವ ಸಾಧ್ಯತೆಗಳೇ ಹೆಚ್ಚು. ತಮಗೆ ಬೇಕಾದವರ ಮಾತುಗಳನ್ನಷ್ಟೇ ಚಿತ್ರೀಕರಿಸಿಕೊಂಡು ತಮ್ಮಲ್ಲಿರುವ ಸ್ಥಾಪಿತ ಸತ್ಯಕ್ಕೆ ಮತ್ತಷ್ಟು ಪುರಾವೆಗಳನ್ನು ಸೃಷ್ಟಿಸಿಕೊಳ್ಳುವುದು ಸುಲಭದ ಕೆಲಸ. ಮನಸ್ಸಿನಲ್ಲಿ ಸ್ಥಾಪಿತವಾದ ಸತ್ಯಗಳನ್ನೆಲ್ಲ ತೊಡೆದುಹಾಕಿ ಹೊಡೆದವರ ಹೊಡೆಸಿಕೊಂಡವರನ್ನೆಲ್ಲಾ ಚಿತ್ರಿಸಿ ಕಣ್ಣಿಗೆ ಕಾಣಿಸುವ ಸತ್ಯದ ಹಿಂದಿರುವ ಸತ್ಯಗಳನ್ನು ಹುಡುಕಿ ತೆಗೆಯುವ ಕೆಲಸವನ್ನು ಈ ಸಾಕ್ಷ್ಯಚಿತ್ರ ಮಾಡಿದೆ. 
Muzaffarnagar riots documentary
ಧರ್ಮ ರಕ್ಷಿಸುವ ಕೆಲಸ...

ಮುಜಾಫರ್ ನಗರ ಗಲಭೆಯಲ್ಲಿ ಹಿಂದೂಗಳು ಹೊಡೆಯುವವರಾಗಿದ್ದರು, ಮುಸ್ಲಿಮರು ಹೊಡೆಸಿಕೊಂಡವರಾಗಿದ್ದರು. ಬಹುತೇಕ ಎಲ್ಲಾ ನಿರಾಶ್ರಿತರ ಶಿಬಿರಗಳು ಮುಸ್ಲಿಮರದೇ ಆಗಿತ್ತು. ಒಂದೇ ಒಂದು ನಿರಾಶ್ರಿತ ಶಿಬಿರ ಹಿಂದೂಗಳಿಗಿತ್ತು. ಅಲ್ಲಿಗೆ ಮುಸ್ಲಿಮರು ತಮ್ಮ ಕೈಲಾದ ಮಟ್ಟಿಗೆ ಹಿಂಸೆಯಲ್ಲಿ ಪಾಲ್ಗೊಂಡಿದ್ದು ನಿಚ್ಚಳವಾಗಿತ್ತು. ಆ ಹಿಂದೂ ನಿರಾಶ್ರಿತ ಶಿಬಿರದಲ್ಲಿದ್ದವರೆಲ್ಲ ಕೂಲಿ ನಾಲಿ ಮಾಡುತ್ತಿದ್ದ ದಲಿತರು. ಇನ್ನು ಮುಸ್ಲಿಂ ನಿರಾಶ್ರಿತ ಶಿಬಿರಗಳಲ್ಲೂ ಹೆಚ್ಚಿನ ಸಂಖೈಯಲ್ಲಿದ್ದಿದ್ದು ಕೂಲಿ ಕಾರ್ಮಿಕರೇ. ಐವತ್ತು ಚಿಲ್ಲರೆ ಬಾಗಿಲಿದ್ದ ಮನೆಯ ಒಡೆಯರು, ಸಣ್ಣ ಪುಟ್ಟ ಅಂಗಡಿ ನಡೆಸುತ್ತಿದ್ದವರು ಕೂಡ ಬೀದಿಗೆ ಬಿದ್ದಿದ್ದರು. ಒಂದು ಕೋಮುಗಲಭೆಗೆ ಎರಡೂ ಕೋಮಿನ ಜನರ ತಪ್ಪುಗಳಿರುವುದೇ ಅಧಿಕ. ಮುಜಾಫರ್ ನಗರದಲ್ಲೂ ಹಾಗೆಯೇ ಆಗಿತ್ತೆ? 

ಎಳೆಎಳೆಯಾಗಿ ಕೋಮುರಾಜಕಾರಣದ ಬಿಡಿಸುತ್ತಾ ಸಾಗುತ್ತದೆ ಸಾಕ್ಷ್ಯಚಿತ್ರ. ಮುಜಾಫರ್ ನಗರದ ಗಲಭೆಗೆ ಆರು ತಿಂಗಳ ಹಿಂದೆಯವರೆಗೂ ಆ ಪ್ರದೇಶದಲ್ಲಿನ ಪ್ರಮುಖ ಪತ್ರಿಕೆಗಳು ರಾಜಕೀಯದ, ಸಮಾಜದ ಸಂಕಟಗಳ ಸುದ್ದಿಯನ್ನು ಮುಖಪುಟದಲ್ಲಿ ಪ್ರಕಟಿಸುತ್ತಿರುತ್ತವೆ. ಆರು ತಿಂಗಳಿನಿಂದ ಬಹುತೇಕ ಪತ್ರಿಕೆಗಳಲ್ಲಿ ‘ಒಂದು ಕೋಮಿನ ಹುಡುಗ ಮತ್ತೊಂದು ಕೋಮಿನ ಹುಡುಗಿಯನ್ನು ಚುಡಾಯಿಸಿದ’ ಎನ್ನುವುದೇ ವಿವಿಧ ರೀತಿಯಲ್ಲಿ ಮರುಪ್ರಕಟವಾಗುತ್ತಿರುತ್ತದೆ. ಅಷ್ಟೊಂದು ಪ್ರಕರಣಗಳು ನಡೆದವಾ ಎಂದು ಗಮನಿಸಿದರೆ ಇಲ್ಲವೆಂಬ ಉತ್ತರ ಸಿಗುತ್ತದೆ. ಇದರ ಜೊತೆಜೊತೆಗೆ ಲವ್ ಜಿಹಾದ್ ಎಂಬ ಭೂತವನ್ನು ತೋರಿಸಿ ಬೆದರಿಸಲಾಗುತ್ತದೆ. ಹಿಂದೂ ಸಂಘಟನೆಯೊಂದರ ಮುಖಂಡನನ್ನು ಇದರ ಬಗ್ಗೆ ಸಂದರ್ಶಿಸಿದಾಗ ಆತ ಲವ್ ಜಿಹಾದ್ ಇದೆ ಎನ್ನುತ್ತಾನೆ. ‘ಸರಿ. ಲವ್ ಜಿಹಾದ್ ಇಂದ ತೊಂದರೆಗೊಳಗಾದ ಒಂದು ಹುಡುಗಿಯ ಕುಟುಂಬವನ್ನು ಪರಿಚಯಿಸಿ’ ಎಂದು ಸಂದರ್ಶನಕಾರ ಕೇಳಿಕೊಂಡಾಗ ತನ್ನ ಶಿಷ್ಯರಿಗೆ ಹಲವು ಫೋನ್ ಮಾಡುತ್ತಾನೆ. ಆ ಹುಡುಗಿ ಈಗ ಇಲ್ಲ, ಅವರ ಕುಟುಂಬ ಊರು ಬಿಟ್ಟಿದೆ, ಅವರು ಮಾತನಾಡಲು ತಯಾರಿಲ್ಲ ಎಂಬಂತಹ ಉತ್ತರಗಳೇ ದೊರಕುತ್ತವೆ. ಒಟ್ಟಿನಲ್ಲಿ ಒಂದು ಗಲಭೆಗೆ ಬೇಕಾದ ಎಲ್ಲಾ ಪೂರ್ವ ತಯಾರಿ ಮುಜಾಫರ್ ನಗರದ ವಿವಿಧ ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುತ್ತದೆ. ರಾಜಕೀಯ ಭಾಷಣಗಳಲ್ಲಿ ಎಲ್ಲರೂ ಪರಧರ್ಮ ನಿಂದನೆಯನ್ನೇ ಪ್ರಮುಖವಾಗಿಸಿಕೊಂಡುಬಿಡುತ್ತಾರೆ. ಕೊನೆಗೆ ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ್ದನ್ನು ನೆಪವಾಗಿಸಿಕೊಂಡು ಮುಸ್ಲಿಂ ಹುಡುಗನನ್ನು ಸಾಯುವವರೆಗೆ ಹೊಡೆಯುತ್ತಾರೆ. ಇತ್ತ ಮುಸ್ಲಿಮರು ಆ ಹಿಂದೂ ಹುಡುಗರಲ್ಲಿಬ್ಬರನ್ನು ಹೊಡೆದು ಸಾಯಿಸುತ್ತಾರೆ. ಕೋಮುಗಲಭೆ ಹೊತ್ತಿಕೊಳ್ಳಲು ಇದಕ್ಕಿಂತ ಹೆಚ್ಚು ಕಾರಣ ಬೇಕೆ? ಅದೂ ಗಲಭೆಯ ಆಟವಾಡಲು ಭೂಮಿಕೆ ಸಿದ್ಧವಾಗಿರುವಾಗ? ಕೋಮುಗಲಭೆಯ ಜ್ವಾಲೆಗಳು ಎಲ್ಲೆಡೆ ಹರಡಲು ವಾಟ್ಸಪ್ಪು ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಹುಡುಗರಿಬ್ಬರನ್ನು ಸಾಯಿಸಿದ ವೀಡಿಯೋ ಕೂಡ ಪ್ರಮುಖ ಕಾರಣ. ಬಿಜೆಪಿಯ ನಾಯಕರೂ ಈ ವೀಡಿಯೋವನ್ನು ಹಂಚುತ್ತಾರೆ. ಅಸಲಿಗೆ ಆ ವೀಡಿಯೋ ಪಾಕಿಸ್ತಾನದಲ್ಯಾವಗಲೋ ಚಿತ್ರಿತವಾಗಿದ್ದು ಎಂಬ ಸಂಗತಿ ತಿಳಿಯುವುದರೊಳಗೆ ಹಿಂಸೆ ವ್ಯಾಪಕವಾಗಿ ಸಾವಿರಾರು ಜನರು ನಿರಾಶ್ರಿತರಾಗುತ್ತಾರೆ. ಒಂದು ಊರಿನ ಬೀದಿಯಲ್ಲಿನ ಎರಡು ಅಂಗಡಿಯ ಮೇಲೆ ಹಿಂದೂ ಹೆಸರಿದೆ. ಮಧ್ಯದ ಅಂಗಡಿಯ ಮೇಲೆ ಮುಸ್ಲಿಂ ಹೆಸರಿದೆ. ಹಿಂದೂ ಅಂಗಡಿಗಳು ಸುರಕ್ಷಿತವಾಗಿದ್ದರೆ ಮುಸ್ಲಿಂ ಅಂಗಡಿ ಸುಟ್ಟು ಕರಕಾಲಗಿರುವ ದೃಶ್ಯ ಇಡೀ ಮುಜಾಫರ್ ನಗರ ಗಲಭೆಯಲ್ಲಿ ಹಾನಿಗೀಡಾದವರು ಯಾರು ಎನ್ನುವುದನ್ನು ತಿಳಿಸಿಬಿಡುತ್ತದೆ. 
muzaffarnagar baaqi hai
ಒಂದು ಬದಲಾವಣೆಗೆ ಪ್ರಯತ್ನಿಸುವವರು.....
ಸಂತ್ರಸ್ತರ ಗೋಳು, ರಾಜಕಾರಣಿಗಳ ಕಪಟ ಮಾತುಗಳು, ಮತಾಂಧ ಸಂಘಟನೆಯ ಕಾರ್ಯಕರ್ತರ ಅಟ್ಟಹಾಸದ ನಡುವೆ ಅಲ್ಲಲ್ಲಿ ಇದ್ದಕ್ಕಿದ್ದಂತೆ ರೈತ, ಕಬ್ಬು, ಆಲೆಮನೆ, ಸಕ್ಕರೆ ಕಾರ್ಖಾನೆಗಳನ್ನು ತೋರಿಸುತ್ತಾರೆ. ಕೋಮುಗಲಭೆಯಲ್ಲಿ ರೈತನ ಚಿತ್ರಣವ್ಯಾಕೆ ಎನ್ನುವುದಕ್ಕೆ ಉತ್ತರ ಸಾಕ್ಷ್ಯಚಿತ್ರ ಸಾಗಿದಂತೆ ತಿಳಿಯುತ್ತದೆ. ರೈತನಾಗಿದ್ದ ರೈತನಲ್ಲಿ ಮುಸ್ಲಿಂ ರೈತ ಹಿಂದೂ ರೈತ ಎಂಬ ಭಿನ್ನಾಭಿಪ್ರಾಯ ಮೂಡುತ್ತದೆ. ಜೊತೆಜೊತೆಯಾಗಿದ್ದವರೇ ಹೊಡೆದಾಡಿಕೊಳ್ಳುತ್ತಾರೆ. ಧರ್ಮಭೇದವಿಲ್ಲದೇ ಒಂದಾಗಿದ್ದ ರೈತ ಸಂಘಟನೆಗಳು ಧರ್ಮಾಧಾರಿತವಾಗಿ ವಿಭಜಿತವಾಗಿ ಬಿಟ್ಟ ಮೇಲೆ ಎಲ್ಲಿಯ ರೈತ ಹೋರಾಟ? ‘ಗಲಭೆಯಿಂದ ಹೆಚ್ಚು ಲಾಭ ಪಡೆದುಕೊಂಡಿದ್ದು ಸಕ್ಕರೆ ಕಾರ್ಖಾನೆಗಳು. ಅವರು ಕೊಟ್ಟಷ್ಟೇ ದುಡ್ಡಿಗೆ ನಾವೀಗ ಕಬ್ಬು ಹೊಡೆಯಬೇಕು. ಯಾಕೆಂದರೆ ನಮ್ಮಲ್ಲೀಗ ಹೋರಾಟವಿಲ್ಲ. ಮುಸ್ಲಿಂ ರೈತ ಬಂದರೆ ಹಿಂದೂ ಬರೋದಿಲ್ಲ, ಹಿಂದೂ ಬಂದರೆ ಮುಸ್ಲಿಂ ಬರೋದಿಲ್ಲ’ ಎಂದೊಬ್ಬ ಬೆಳೆಗಾರ ಹೇಳುವ ದೃಶ್ಯ ಒಂದು ಗಲಭೆಯ ದುರ್ಬಾಹುಗಳು ಎಲ್ಲಿಯವರೆಗೆ ಚಾಚಲು ಸಾಧ್ಯ ಎಂದು ತಿಳಿಸುತ್ತದೆ. ಅಯೋಧ್ಯಾ ಗಲಭೆಯ ಸಂದರ್ಭದಲ್ಲೂ ಶಾಂತವಾಗಿದ್ದ ಹಳ್ಳಿಗಳಲ್ಲಿ ಈ ಬಾರಿ ಗಲಭೆ ನಡೆಯಿತು. ಇದೆಲ್ಲದರ ಲಾಭ ಪಡೆದಿದ್ಯಾರು? 

ಇವೆಲ್ಲದರ ಆಯೋಜಕ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ಎಂದು ನಿಸ್ಸಂಶಯವಾಗಿ ಹೇಳಬಹುದು. ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶಕ್ಕೆ ಪ್ರಾಮುಖ್ಯತೆ ಜಾಸ್ತಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಹತ್ತು ಸ್ಥಾನಗಳನ್ನಷ್ಟೇ ಗಳಿಸಿದ್ದ ಬಿಜೆಪಿ ಈ ಎಲ್ಲ ಗಲಭೆಯ ನಂತರ ನಡೆದ ಚುನಾವಣೆಯಲ್ಲಿ ಬರೋಬ್ಬರಿ ಎಪ್ಪತ್ತು ಸ್ಥಾನಗಳಲ್ಲಿ ಗೆದ್ದು ಬೀಗಿತು. ಅದು ನಡೆಸಿದ ಕೋಮುಗಲಭೆಯ ರಾಜಕೀಯ ಧರ್ಮಾಧಾರಿತವಾಗಿ ಹಿಂದೂಗಳೆಲ್ಲರೂ ಬಿಜೆಪಿಗೆ ಮತ ಹಾಕುವಂತೆ ಮಾಡಿತು. ಮುಸ್ಲಿಮರ ಪರ ಎಂಬ ಸೋಗಿನ ಸಮಾಜವಾದಿ ಪಕ್ಷ ನಿರಾಶ್ರಿತ ಶಿಬಿರಗಳಲ್ಲಿರುವ ಜನರ ಸಂಕಷ್ಟಗಳನ್ನು ಪರಿಹರಿಸುವ ಕೆಲಸ ಮಾಡುವುದನ್ನು ಬಿಟ್ಟು ನಿರಾಶ್ರಿತ ಶಿಬಿರಗಳನ್ನೇ ರಾತ್ರೋರಾತ್ರಿ ಬೀಳಿಸಿ ನಿರಾಶ್ರಿತರನ್ನು ಮತ್ತೊಮ್ಮೆ ಬೀದಿಗೆ ತಳ್ಳಿದರು. ‘ದೀದಿ ಒಮ್ಮೆ ಗಲಭೆಯಲ್ಲಿ ತೊಂದರೆಗೊಳಗಾದವರನ್ನು ಭೇಟಿಯಾಗಿಬಿಟ್ಟಿದ್ದರೆ ಎಲ್ಲೆಡೆಯೂ ಅವರೇ ಗೆಲ್ಲುತ್ತಿದ್ದರು. ಅವರ ಸುತ್ತಲಿರುವ ಮೂವರು ಬ್ರಾಹ್ಮಣರು ನಮ್ಮನ್ನವರು ಭೇಟಿಯಾಗಲು ಬಿಡಲಿಲ್ಲ’ ಎಂದು ಮಾಯವತಿಯ ಬಿ.ಎಸ್.ಪಿಯ ಸೋಲನ್ನು ಅಲ್ಲಿಯವರು ವಿಶ್ಲೇಷಿಸುತ್ತಾರೆ. ಒಂದು ಅಪಾಯಕಾರಿ ಗಲಭೆಯನ್ನು ಪ್ರಾಯೋಜಿಸಿ ದೊಡ್ಡ ಮಟ್ಟದಲ್ಲಿ ಗೆದ್ದು ಬೀಗುತ್ತದೆ ಬಿಜೆಪಿ. ಈ ಎಲ್ಲಾ ರಾಜಕಾರಣಿಗಳ ನಡುವೆ ಭಗತ್ ಸಿಂಗನ ಒಂದು ಫೋಟೋ ಹಿಡಿದುಕೊಂಡು ಐದು ಹುಡುಗರು ಹಳ್ಳಿ ಹಳ್ಳಿ ತಿರುಗುತ್ತಾರೆ. ವಸ್ತುಸ್ಥಿತಿಯನ್ನು ವಿವರಿಸುತ್ತಾರೆ. ಗಲಭೆಯ ದೆಸೆಯಿಂದ, ಕೋಮು ರಾಜಕಾರಣದ ದೆಸೆಯಿಂದ ಹೇಗೆ ಊರಿನ ನಿಜವಾದ ಸಮಸ್ಯೆಗಳು ಚರ್ಚೆಗೇ ಬರದೆ ಹೋಗುತ್ತಿದೆ ಎಂದು ವಿವರಿಸಿ ಹೇಳುತ್ತಾರೆ. ಹೌದೆಂದು ತಲೆಯಾಡಿಸುವ ಜನ ಧರ್ಮಾಧಾರಿತವಾಗಿ ಮತ ಚಲಾಯಿಸುತ್ತಾರೆ....... ಉಳುವುದಕ್ಕೆ ಭೂಮಿಗೆ ಕಾಲಿಟ್ಟ ರೈತನಿಗೆ ಧರ್ಮವಿಲ್ಲ; ಕೋಮುಗಲಭೆಯ ದೆಸೆಯಿಂದ ಈಗಾತ ಒಬ್ಬಂಟಿ......

ಒಂದು ಸಶಕ್ತ ಸಾಕ್ಷ್ಯಚಿತ್ರವಿದು. ಪ್ರಮುಖ ಅಂಶಗಳ ಬಗ್ಗೆಯಷ್ಟೇ ಇಲ್ಲಿ ಬರೆದಿದ್ದೇನೆ. ಇಡೀ ಸಾಕ್ಷ್ಯಚಿತ್ರದಲ್ಲಿ ಸತ್ಯದ ಮಾತನಾಡುವವರು ಮಹಿಳೆಯರು. ಗಂಡಸರ ದ್ವಂದ್ವಗಳನ್ನವರು ಈಚೆಗೆಳೆಯುತ್ತಾರೆ! ಭಯೋತ್ಪಾದನೆ, ಉಗ್ರತೆಗಳೆಲ್ಲವೂ ಮುಸ್ಲಿಮರದೇ ಕೃತ್ಯ, ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು, ಉಗ್ರಗಾಮಿಗಳಾಗಲು ಸಾಧ್ಯವೇ ಇಲ್ಲ ಎಂದಿನ್ನೂ ನಂಬುವವರು ಈ ಸಾಕ್ಷ್ಯಚಿತ್ರವನ್ನು ನೋಡಲೇಬೇಕು. ಕೈಯಲ್ಲಿ ಬಂದೂಕು ಹಿಡಿದವ ಮಾತ್ರ ಭಯೋತ್ಪಾದಕನಲ್ಲ, ಮನಸ್ಸಿನ ತುಂಬ ನಂಜು ತುಂಬಿಕೊಂಡು ಅನ್ಯಧರ್ಮದವನ ಮನೆ ಸುಡಲೆಂದೇ ಜೇಬಿನಲ್ಲೊಂದು ಬೆಂಕಿಪಟ್ಟಣ ಇಟ್ಟುಕೊಂಡವನೂ ಭಯೋತ್ಪಾದಕನೇ ಎಂಬ ಸತ್ಯದ ಅರಿವಾಗುತ್ತದೆ.
ಟ್ರೇಲರ್ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ

ಆಗ 25, 2015

ಮಂಗಳೂರಿನ ಮತಿಗೆಟ್ಟ ಹುಡುಗರು.

Ashok K R
ದಕ್ಷಿಣ ಕನ್ನಡದಲ್ಲಿ ಬಿಜೆಪಿಯದೇ ಪಾರುಪತ್ಯವಿತ್ತು. ಬಿಜೆಪಿ ಬೆಂಬಲಿತ ಸಂಘಪರಿವಾರದ ವಿವಿಧ ಶಾಖೆಗಳ ಆಟೋಟಾಪಗಳು, ಸಾಮಾನ್ಯ ಜನರಿಗೆ ವಿನಾಕಾರಣವಾಗಿ ಅವರು ನೀಡಿದ ತೊಂದರೆ, ಅದರ ಜೊತೆಜೊತೆಗೇ ಬೆಳೆದ ಮುಸ್ಲಿಂ ಮೂಲಭೂತವಾದಿಗಳ ಕಾಟವೆಲ್ಲವೂ ಸೇರಿ ಜನರನ್ನು ಜಿಗುಪ್ಸೆಗೆ ತಳ್ಳಿತ್ತು. ಆ ಜಿಗುಪ್ಸೆಯ ಫಲವೆಂಬಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು, ಸುಳ್ಯ ಕ್ಷೇತ್ರವೊಂದನ್ನು ಹೊರತುಪಡಿಸಿ. ಓ! ಕಾಂಗ್ರೆಸ್ ಬಂತು, ಅದರಲ್ಲೂ ಸಿದ್ಧರಾಮಯ್ಯನಂತಹ 'ಸಮಾಜವಾದಿ' 'ಅಹಿಂದ' ನಾಯಕ ಈಗ ಮುಖ್ಯಮಂತ್ರಿ. ಇನ್ನೇನು ಇಡೀ ದಕ್ಷಿಣ ಕನ್ನಡ ಶಾಂತಿಯ ಬೀಡಾಗಿಬಿಡುತ್ತದೆ ಎಂದುಕೊಂಡಿರಾದರೆ ಅದು ಖಂಡಿತ ತಪ್ಪು. ತಪ್ಪೆಂದು ನಿರೂಪಿಸಲು ಮತ್ತೆ ಮತ್ತೆ ಅನೈತಿಕ ಪೋಲೀಸ್ ಗಿರಿಯಂತಹ ಕಾರ್ಯಗಳು ನಡೆಯುತ್ತಲೇ ಇವೆ. 
ಮುಸ್ಲಿಮನೊಬ್ಬ ಪರಿಚಯದ ಹಿಂದೂ ಹುಡುಗಿಯೊಂದಿಗೆ ಹೋಗುವುದು, ಹಿಂದೂವೊಬ್ಬ ಪರಿಚಯದ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುವುದು ಇಲ್ಲಿ ಧರ್ಮದ್ರೋಹದ ಅಪರಾಧ! ಇಂತವರ ವಿರುದ್ಧ ಮಾತನಾಡಿದರೆ ಅದು ದೇಶದ್ರೋಹಕ್ಕೆ ಸಮ! ನಿನ್ನೆ ದಿನ ಮುಸ್ಲಿಂ ಯುವಕೊನೊಬ್ಬನನ್ನು ನಡುಬೀದಿಯಲ್ಲಿ ಬಟ್ಟೆ ಕಳಚಿ ಕಂಬಕ್ಕೆ ಕಟ್ಟಿ ಹೊಡೆಯಲಾಗಿದೆ. ಕಾರಣ ಆತ ಹಿಂದೂ ಹುಡುಗಿಯೊಟ್ಟಿಗೆ ಹೋಗುತ್ತಿದ್ದ. ಲವ್ ಜಿಹಾದ್ ಎಂಬ ಅದೃಶ್ಯ ಭೀತಿಯನ್ನು ನೈಜವಾಗಿಸಲು ಹಿಂದೂ ಮೂಲಭೂತವಾದಿಗಳು ಇಂತಹ ಕೃತ್ಯಕ್ಕೆ ಕೈಹಾಕುತ್ತಾರಾ? ಸಹಪಾಠಿಗಳೂ ಮಾತನಾಡದಂತಹ ಸ್ಥಿತಿಗೆ ಮಂಗಳೂರು ತಲುಪಿರುವುದಾದರೂ ಯಾಕೆ?
ಮೇಲಿನ ಚಿತ್ರ ಗಮನಿಸಿ, ಆ ಮುಸಲ್ಮಾನನನ್ನು ಹಿಡಿದುಕೊಂಡಿರುವ ವ್ಯಕ್ತಿ ಮತ್ತವನ ಹಿಂದೆ ನಿಂತು ಮೊಬೈಲಿನಲ್ಲಿ ಅದನ್ನು ಸೆರೆಹಿಡಿಯುತ್ತಿರುವ ವ್ಯಕ್ತಿಯನ್ನು ನೋಡಿ. ಸರಿಯಾಗಿ ಮೀಸೆಯೂ ಚಿಗುರದ ಎಳೆಯ ಹುಡುಗರವರು. ಅಬ್ಬಬ್ಬಾ ಎಂದರೆ ಯಾವುದೋ ಕಾಲೇಜಿನಲ್ಲಿ ಓದುತ್ತಿರುವವರು. ಇಂತಹ ಹುಡುಗರಿಗೆ ಕೋಮುನಂಜನ್ನು ತುಂಬುತ್ತಿರುವವರಾರು? ಆ ಕೋಮು ವಿಷವನ್ನು ತುಂಬುವ ವ್ಯಕ್ತಿಗಳು ದೊಡ್ಡ ದೊಡ್ಡ ಭಾಷಣ ಬಿಗಿದು ಬೆಚ್ಚಗೆ ಮನೆ ಸೇರುತ್ತಾರೆ. ವಿಷದ ನಂಜೇರಿದ ಈ ಯುವಕರು - ಯುವಕರೂ ಅಲ್ಲ ಹುಡುಗರು - ಬೀದಿಯಲ್ಲಿ ಓಡಾಡುತ್ತಿದ್ದ ಗೆಳೆಯರಿಬ್ಬರನ್ನೂ ಹಿಡಿದು ಚಚ್ಚುತ್ತಾರೆ. ಕೊನೆಗೆ ಜೈಲು ಪಾಲಾಗುವ ಸಂದರ್ಭ ಬಂದರೆ ಅದು ಈ ಹುಡುಗರಿಗೇ ಹೊರತು ಭೀಕರ ಭಾಷಣ ಕುಟ್ಟುವವರಿಗಲ್ಲ.
ಅಂದಹಾಗೆ ಕಾಂಗ್ರೆಸ್ ಸರಕಾರ ಬಂದ ಮೇಲೂ ಇದು ಯಾಕೆ ನಡೆಯುತ್ತಿದೆ ಎಂದಿರಾ? ಬಿಜೆಪಿ ಮಂಗಳೂರಿನಲ್ಲಿ ಉಗ್ರ ಹಿಂದೂ ಮೂಲಭೂತವಾದ ನಡೆಸಿದರೆ ಕಾಂಗ್ರೆಸ್ ನಡೆಸುವುದು ಸೌಮ್ಯ ಹಿಂದೂ ಮೂಲಭೂತವಾದ.... ತನ್ನಲ್ಲಿರುವ ಅಪಾರ ಪ್ರಮಾಣದ ನೈಸರ್ಗಿಕ ಸೌಂದರ್ಯದಿಂದ ಗಮನ ಸೆಳೆಯಬೇಕಿದ್ದ ಮಂಗಳೂರು ಮತಿಗೆಟ್ಟವರ ಕಾರಣದಿಂದಲೇ ಸುದ್ದಿಯಾಗುತ್ತಿರುವುದು ಬೇಸರದ ಸಂಗತಿ.

ಆಗ 20, 2015

ಲಜ್ಜೆಗೆಡುವುದರಲ್ಲಿ ಎಲ್ಲರೂ ಮುಂದು....

ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಕನ್ನಡ, ಇಂಗ್ಲೀಷಿನ ಜೊತೆಗೆ ತೆಲುಗು, ತಮಿಳು, ಉರ್ದು ಭಾಷೆಯಲ್ಲಿಯೂ ಪ್ರಕಟಿಸಿ ಮತಗಳಿಕೆಗಾಗಿ ಕನ್ನಡತನವನ್ನು ಕೊಲ್ಲುವುದಕ್ಕೆ ತಾನು ಹಿಂಜರಿಯುವುದಿಲ್ಲ ಎಂದು ತೋರಿಸಿತ್ತು. 

ಲಜ್ಜೆಗೆಟ್ಟ ಕಾಂಗ್ರೆಸ್ಸಿನಿಂದ ಪಂಚ ಭಾಷಾ ಪ್ರಣಾಳಿಕೆ.


ಉಳಿದೆರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಂಚ ಭಾಷಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಸಮಾಧಾನ ಪಟ್ಟುಕೊಳ್ಳುವ ವೇಳೆಗೆ ನಾ ಮುಂದು ತಾ ಮುಂದು ಎಂಬಂತೆ So Called ರಾಷ್ಟ್ರೀಯ ಪಕ್ಷಗಳು ತಮಿಳು ಭಾಷೆಯ ಕರಪತ್ರವನ್ನು ಹಂಚುತ್ತಿವೆ. ಕರ್ನಾಟಕದ ನಾಯಕ ಶಿರೋಮಣಿಗಳಾದ ದೇವೇಗೌಡ, ಕುಮಾರಸ್ವಾಮಿ, ಸಿದ್ಧರಾಮಯ್ಯ, ಪರಮೇಶ್ವರ್, ಅನಂತಕುಮಾರ್, ಯಡಿಯೂರಪ್ಪ, ಸದಾನಂದಗೌಡ ಮುಂತಾದವರು ತಮಿಳು ಭಾಷಾ ಕರಪತ್ರದಲ್ಲಿ ಮಿಂಚುತ್ತಿರುವ ಪರಿಯನ್ನು ಆನಂದಿಸಿ ತಣ್ಣಗೆ ಒಂದು ಲೋಟ ನೀರು ಕುಡ್ಕೊಳ್ಳಿ....
BJP tamil bbmp

Congress Tamil BBMP

JDS Tamil BBMP

ಆಗ 11, 2015

ಲಜ್ಜೆಗೆಟ್ಟ ಕಾಂಗ್ರೆಸ್ಸಿನಿಂದ ಪಂಚ ಭಾಷಾ ಪ್ರಣಾಳಿಕೆ.

Dr Ashok K R
ಬಿಬಿಎಂಪಿ ಚುನಾವಣೆಯನ್ನು ಮುಂದಕ್ಕಾಕುವ ಸರಕಾರದ ಎಲ್ಲಾ ಪ್ರಯತ್ನಗಳನ್ನೂ ನ್ಯಾಯಾಲಯಗಳು ತಳ್ಳಿಹಾಕಿದ ಪರಿಣಾಮವಾಗಿ ಈ ತಿಂಗಳಾಂತ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಪಕ್ಷಗಳ ರಾಜಕೀಯ ಚಟುವಟಿಕೆಯೂ ಹೆಚ್ಚಾಗಿದೆ. ನಿನ್ನೆ ಕಾಂಗ್ರೆಸ್ ಪಕ್ಷವು ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಬಿಬಿಎಂಪಿಯನ್ನು ಮೂರಾಗಿ ಐದಾಗಿ ವಿಭಜಿಸಲು ವಿಪರೀತವಾಗಿ ಪ್ರಯತ್ನಪಟ್ಟು ಸದ್ಯಕ್ಕೆ ವಿಫಲವಾಗಿರುವ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ತಮಿಳು, ತೆಲುಗು ಭಾಷೆಗಳಲ್ಲಿ ಪ್ರಕಟಮಾಡಿ ವೋಟುಗಳಿಗೋಸ್ಕರ ಬೆಂಗಳೂರಿನಲ್ಲಿ ಕನ್ನಡವನ್ನು ಇಲ್ಲವಾಗಿಸುವುದಕ್ಕೂ ತಾನು ಹೇಸುವುದಿಲ್ಲ ಎಂದು ತೋರಿಸಿಕೊಟ್ಟಿದೆ. ಸಾಮಾನ್ಯವಾಗಿ ಪ್ರಣಾಳಿಕೆಯನ್ನು ಕನ್ನಡದಲ್ಲಿ ಮತ್ತು ನಮಗೆ ಬೇಕೋ ಬೇಡವೋ ಅನಿವಾರ್ಯವಾಗಿಬಿಟ್ಟಿರುವ ಇಂಗ್ಲೀಷಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿಕೊಂಡ ಕರ್ನಾಟಕದಲ್ಲಿ ಅನ್ಯಭಾಷಿಕರ ಸಂಖೈ ಹೆಚ್ಚುತ್ತಲೇ ಇರುವುದು ಸತ್ಯ. ಜೊತೆಗೆ ಬೆಂಗಳೂರು ತಮಿಳುನಾಡು ಮತ್ತು ಆಂಧ್ರ ಗಡಿಗಳಿಗೆ ಹೊಂದಿಕೊಂಡಂತೆಯೇ ಇರುವುದರಿಂದ ಸಹಜವಾಗಿ ಅನೇಕ ಪ್ರದೇಶಗಳಲ್ಲಿ ತೆಲುಗು ಮತ್ತು ತಮಿಳು ಭಾಷಿಕರು ನೆಲೆಸಿದ್ದಾರೆ. ಅನ್ಯ ರಾಜ್ಯಗಳಿಂದ ಬಂದವರು ಕನ್ನಡ ಕಲಿಯುವಂತೆ ಪ್ರೇರೇಪಿಸಬೇಕಾದ ಕರ್ನಾಟಕ ಸರಕಾರ ಅವರ ವೋಟುಗಳನ್ನು ಪಡೆಯಲೋಸುಗ ಅವರ ಭಾಷೆಯಲ್ಲಿಯೇ ಪ್ರಣಾಳಿಕೆ ಬಿಡುಗಡೆ ಮಾಡುವಂತಹ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ಸರಿಯೇ? 
ಆಂಧ್ರದ ಒವೈಸಿ, ಚಂದ್ರಬಾಬು ನಾಯ್ಡು ತಮಿಳುನಾಡಿನ ಜಯಲಲಿತಾ ತಮ್ಮ ತಮ್ಮ ಪಕ್ಷವನ್ನು ಬಿಬಿಎಂಪಿ ಚುನಾವಣೆಗೆ ಅಣಿಗೊಳಿಸುತ್ತಿದೆಯಂತೆ ಎಂಬ ಸುದ್ದಿಗಳು ಕಾಂಗ್ರೆಸ್ಸಿನ ಈ ನಿರ್ಧಾರಕ್ಕೆ ಕಾರಣವಾಯಿತಾ? ಕನ್ನಡಿಗರ ರಾಷ್ಟ್ರೀಯ ಪಕ್ಷಗಳ ಮೇಲಿನ ಪ್ರೇಮದಿಂದ ಹಿಂದಿ ಹೇರಿಕೆಯೆಂಬುದು ನಿರಂತರವಾಗಿಬಿಟ್ಟಿದೆ. ಈಗ ಬೆಂಗಳೂರಿನಲ್ಲಿ ಅನ್ಯಭಾಷಾ ಪ್ರಣಾಳಿಕೆಯನ್ನು ಕಣ್ಣು ಕಣ್ಣು ಬಿಟ್ಟು ನೋಡುವ ಸರದಿ ಬೆಂಗಳೂರಿಗರದು. ಬಿಬಿಎಂಪಿ ವಿಭಜನೆಯಾಗುವ ಮುನ್ನವೇ ಭಾಷಾ ವಿರೋಧಿಯಾಗಿ ವರ್ತಿಸುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಪ್ಪಿತಪ್ಪಿ 'ಆಡಳಿತದ' ಹೆಸರಿನಲ್ಲಿ ಬಿಬಿಎಂಪಿಯನ್ನು ವಿಭಜನಗೊಳಿಸಿಬಿಟ್ಟರೆ ಯಾವ ರೀತಿ ವರ್ತಿಸಬಹುದು? ತೆಲುಗು ಭಾಷಿಕರು ಹೆಚ್ಚಿರುವ ಪ್ರದೇಶದಲ್ಲಿ ಕೇವಲ ತೆಲುಗು ಪ್ರಣಾಳಿಕೆ, ತಮಿಳರು ಹೆಚ್ಚಿರುವ ಕಡೆ ತಮಿಳು ಪ್ರಣಾಳಿಕೆ, ಉರ್ದು ಭಾಷಿಕರಿರುವ ಕಡೆ (ಇಲ್ಲಿರುವ ಮುಸ್ಲಿಮರು ಮಾತನಾಡುವುದು ಉರ್ದುವಾ?) ಉರ್ದು ಪ್ರಣಾಳಿಕೆಯನ್ನಷ್ಟೇ ಪ್ರಕಟಿಸಿ ಕನ್ನಡವನ್ನೇ ಮೂಲೆಗುಂಪು ಮಾಡಿಬಿಡುವ ದಿನಗಳು ದೂರವಿಲ್ಲ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮರಾಠಿ ಪಕ್ಷಗಳು ನಗರಸಭೆಗಳಲ್ಲಿ ನಿರ್ಣಯ ತೆಗೆದುಕೊಂಡಂತೆ ಮುಂದೊಂದು ದಿನ ಬೆಂಗಳೂರಿನ ಈ ಭಾಗವನ್ನು ಆಂಧ್ರಕ್ಕೆ ತಮಿಳುನಾಡಿಗೆ ಸೇರಿಸಿಬಿಡಿ ಎಂಬ ನಿರ್ಣಯಗಳೂ ಕೇಳಿ ಬರಬಹುದು. 
ಒಟ್ಟಿನಲ್ಲಿ ಕನ್ನಡ, ಕರ್ನಾಟಕ ಎಂದು ಎದೆತಟ್ಟಿ ಹೇಳುತ್ತಾ ದೇಶವನ್ನೇ ಎದುರುಹಾಕಿಕೊಳ್ಳುವ ಪಕ್ಷವೊಂದು ಕರ್ನಾಟಕದಲ್ಲಿ ಇಲ್ಲದ ಫಲಗಳನ್ನು ನಾವೀಗ ನೋಡುತ್ತಿದ್ದೇವೆ. ದೇಶ ಮೊದಲು ಎಂಬ 'ವಿಶಾಲ ಮನೋಭಾವವನ್ನು' ತೊರೆದು ರಾಜ್ಯ ಮೊದಲು ಭಾಷೆ ಮೊದಲು ಎಂಬ 'ಸಂಕುಚಿತ ಮನೋಭಾವವನ್ನು' ಬೆಳೆಸಿಕೊಳ್ಳದಿದ್ದರೆ ಈ ರಾಜಕಾರಣಿಗಳ ಸೋಗಲಾಡಿತನದಿಂದ ಕನ್ನಡಕ್ಕೆ ಚೇತರಿಸಿಕೊಳ್ಳಲಾಗದ ಪೆಟ್ಟು ಬೀಳುತ್ತದೆ.

ಜನ 4, 2015

ಆರ್ಡಿನೆನ್ಸುಗಳಿಗಿದು ಅಚ್ಛೇ ದಿನ್!

Dr Ashok K R
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರವಿಡಿದಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಹತ್ತು ವರ್ಷದ, ಅದರಲ್ಲೂ ಎರಡನೇ ಯುಪಿಎ ಸರಕಾರದ ದುರಾಡಳಿತವನ್ನು ಹೀಗಳೆಯುತ್ತ. ಜೊತೆಜೊತೆಗೆ ಕಾಂಗ್ರೆಸ್ ಸರಕಾರ ಸಾಧಿಸಲಾಗದ ಅನೇಕ ಸಂಗತಿಗಳನ್ನು ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮಾಡುವುದಾಗಿ ಹೇಳುತ್ತಿದ್ದ ನರೇಂದ್ರ ಮೋದಿ ‘ಅಚ್ಛೇ ದಿನ್’ ಅಭಿಯಾನವನ್ನು ಪ್ರಾರಂಭಿಸಿದ್ದರು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಿತು. ಬಹುತೇಕ ಸರಕಾರಗಳಂತೆ ಕೆಲವಷ್ಟು ಒಳ್ಳೆಯ ಕೆಲಸ, ಬಹಳಷ್ಟು ಅನಗತ್ಯ ಕೆಲಸಗಳು ಸರಕಾರದ ವತಿಯಿಂದ ನಡೆಯುತ್ತಿವೆ. ಜೊತೆಜೊತೆಗೆ ಅಪಾಯಕಾರಿ ರೀತಿಯ ಕೆಟ್ಟ ಕಾರ್ಯಗಳು ನರೇಂದ್ರ ಮೋದಿಯವರ ಸರಕಾರದಿಂದ ನಿಧನಿಧಾನಕ್ಕೆ ಜಾರಿಯಾಗುತ್ತಿವೆ. ಮತ್ತೀ ಅಪಾಯಗಳು ಪ್ರಸ್ತುತಕ್ಕೆ ಅನಿವಾರ್ಯವೆಂಬ ಭಾವನೆ ಜನಮಾನಸದಲ್ಲಿ ಮೂಡಿಸುವಲ್ಲಿ ಸರಕಾರದ ವಿವಿಧ ಮಂತ್ರಿಗಳ ಮಾತಿನ ಕಸರತ್ತು ಸಹಕರಿಸುತ್ತಿದೆ. ಆರ್ಡಿನೆನ್ಸುಗಳ ಬೆನ್ನು ಹತ್ತಿರುವ ಕೇಂದ್ರ ಸರಕಾರದ ಹೆಜ್ಜೆಗಳು ಕೊನೆಗೆ ಪ್ರಜಾಪ್ರಭುತ್ವದ ಮೂಲಭೂತ ಆಶಯಗಳಿಗೆ ಧಕ್ಕೆಯುಂಟುಮಾಡುತ್ತಿವೆ.

ಡಿಸೆಂ 22, 2014

ಮತಾಂತರವೂ ತಪ್ಪಲ್ಲ ಮರುಮತಾಂತರವೂ ತಪ್ಪಲ್ಲ; ಆದರೆ?

religious conversion
Dr Ashok K R
ಅಭಿವೃದ್ಧಿಯ ಹೆಸರಿನಿಂದ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ‘ಅಭಿವೃದ್ಧಿ’ಯ ಪಥದಿಂದ ಪಕ್ಕಕ್ಕೆ ಸರಿದು ತನ್ನ ಮಾತೃ ಸಂಸ್ಥೆಯಾದ ಆರ್.ಎಸ್.ಎಸ್ ಮತ್ತದರ ಪರಿವಾರದ ಇತರ ಸಂಸ್ಥೆಗಳ ತಾಳಕ್ಕೆ ಕುಣಿಯಲು ಸಿದ್ಧತೆಗಳು ನಡೆಯುತ್ತಿವೆಯಾ? ಇಂತಹುದೊಂದು ಅನುಮಾನಕ್ಕೆ ಕಾರಣವಾಗುವ ಅನೇಕ ಬಿಡಿ ಬಿಡಿ ಘಟನೆಗಳು ಒಂದಾದ ಮೇಲೊಂದರಂತೆ ನಡೆಯುತ್ತಿರುವುದು ಕಾಕತಾಳೀಯವಲ್ಲ. ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸುವ ಪ್ರಯತ್ನ, ಕ್ರಿಸ್ ಮಸ್ ದಿನದ ರಜಾ ವಿವಾದ, ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವನ್ನಾಗಿಸುವ ಹೇಳಿಕೆಗಳು, ಉತ್ತರಪ್ರದೇಶದಲ್ಲಿ ಠುಸ್ಸೆಂದ ಲವ್ ಜೆಹಾದ್ ವಿವಾದ ಮತ್ತೀಗ ಪರಿವಾರದ ವಿವಿಧ ಅಂಗಸಂಸ್ಥೆಗಳು ನಡೆಸುತ್ತಿರುವ ‘ಘರ್ ವಾಪಸಿ’ ಎಂಬ ಮರುಮತಾಂತರದ ವಿವಾದಗಳೆಲ್ಲವೂ ಬಿಜೆಪಿಯೆಂದರೆ ಧರ್ಮಧಾರಿತ ರಾಜಕಾರಣ ಮಾಡುವುದಕ್ಕಷ್ಟೇ ಸರಿ ಎಂಬ ಆರೋಪಕ್ಕೆ ಪೂರಕವಾಗಿಯೇ ಇವೆ. ‘ಘರ್ ವಾಪಸಿ’ ಎಂಬ ಕಾರ್ಯಕ್ರಮ ಮುಂಚೆಯೂ ಅಲ್ಲಲ್ಲಿ ನಡೆದಿತ್ತು, ಈಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಬಹುಮತದ ಸರಕಾರವಿರುವಾಗ ಅದಕ್ಕೆ ಮತ್ತಷ್ಟು ರಂಗು ಬಂದಿದೆ. ಒಂದು ಧರ್ಮದವರನ್ನು ಓಲೈಸುವ ರಾಜಕಾರಣ ಮಾಡುವ ಆರೋಪಕ್ಕೆ ಗುರಿಯಾಗಿದ್ದ ಕಾಂಗ್ರೆಸ್ಸಿಗೆ ಪರ್ಯಾಯವಾಗಿ ಮತ್ತೊಂದು ಧರ್ಮದವರನ್ನು ಓಲೈಸುವ ರಾಜಕಾರಣ ಮಾಡುವ ಆರೋಪಕ್ಕೆ ಗುರಿಯಾಗುವ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂಬುದನ್ನು ಹೊರತುಪಡಿಸಿದರೆ ಹೆಚ್ಚೇನೂ ವ್ಯತ್ಯಾಸಗಳು ಗೋಚರಿಸುತ್ತಿಲ್ಲ.

ನವೆಂ 19, 2014

ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ .... ಭಾಗ 2

modi cabinetDr Ashok K R
ಕೇಂದ್ರ ಸರ್ಕಾರವನ್ನು ರೂಪಿಸುವಲ್ಲಿ ಉತ್ತರ ಪ್ರದೇಶದ ಪ್ರಭಾವ ಹೆಚ್ಚು. ದೊಡ್ಡ ರಾಜ್ಯ, ವಿಪರೀತ ಜನಸಂಖೈಯಿರುವ ಉತ್ತರಪ್ರದೇಶದಿಂದ ಎಂಭತ್ತು ಜನ ಸಂಸದರು ಲೋಕಸಭೆ ಪ್ರವೇಶಿಸುತ್ತಾರೆ. ಸಂಸದರ ಸಂಖೈಯ ಆಧಾರದಲ್ಲಿ ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರದಿಂದ ಆಯ್ಕೆಯಾಗುವವರ ಸಂಖೈ ನಲವತ್ತೆಂಟು! ಉತ್ತರ ಪ್ರದೇಶ ಗೆದ್ದರೆ ಅಧಿಕಾರದ ಗದ್ದುಗೆ ಏರಿದಂತೆಯೇ ಎಂಬ ಮಾತು ಅದಕ್ಕಾಗೇ ಹುಟ್ಟಿರಬೇಕು. ಎಂಭತ್ತು ಸ್ಥಾನದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಪ್ಪತ್ತೊಂದು ಸ್ಥಾನದಲ್ಲಿ ಜಯಗಳಿಸಿತ್ತು. ಸಹಜವಾಗಿ ಅಲ್ಲಿನವರಿಗೆ ಸಚಿವ ಸಂಪುಟದಲ್ಲೂ ಪ್ರಾಮುಖ್ಯತೆ ದೊರೆಯಬೇಕು. ಮೊದಲ ಸಂಪುಟದಲ್ಲಿ ಉತ್ತರಪ್ರದೇಶದ ಎಂಟು ಮಂದಿಯಿದ್ದರೆ ಈ ಬಾರಿ ಮತ್ತೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ದಲಿತ ನಾಯಕರಿಗೆ, ನಿಶಾದರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ ಆರೆಸ್ಸೆಸ್ ನಾಯಕ ರಾಮ್ ಶಂಕರ್ ಕಥಾರಿಯಾ, ನಿಶಾದರ ಮತಗಳನ್ನು ಬಿಜೆಪಿಗೆ ತಂದುಕೊಟ್ಟ ಸಾಧ್ವಿ ನಿರಂಜನ್ ಜ್ಯೋತಿಯವರಿಗೆ ಸಚಿವ ಸ್ಥಾನ ದಕ್ಕಿದೆ. 
ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ ಭಾಗ 1

ನವೆಂ 18, 2014

ಪ್ರಹಸನವಾಗದ ವಿಸ್ತರಣೆಯಲ್ಲಿ ಅನ್ಯಾಯವಾಗಿದ್ದು ಕರ್ನಾಟಕಕ್ಕೆ .... ಭಾಗ 1


modi cabinet
Dr Ashok K R
ಸಂಪುಟ ವಿಸ್ತರಣೆಯೆಂಬುದು ಪ್ರಹಸನದಂತೆ ನಡೆಯುವ ಸಂದರ್ಭಗಳೇ ಹೆಚ್ಚಾಗುತ್ತಿರುವ ದಿನಗಳಲ್ಲಿ ನರೇಂದ್ರ ಮೋದಿಯವರ ಸಂಪುಟ ವಿಸ್ತರಣೆಯ ಕಾರ್ಯ ಸುಸೂತ್ರವಾಗಿ ನಡೆದಿದೆ ಎಂದೇ ಹೇಳಬಹುದು. ಅನೇಕ ವರುಷಗಳಿಂದ ಸಮ್ಮಿಶ್ರ ಸರ್ಕಾರಗಳೇ ಅಸ್ತಿತ್ವದಲ್ಲಿದ್ದ ಕಾರಣ ಬಹುಮತ ಪಡೆಯಲಾಗದ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳ ಕೋರಿಕೆ – ಅಣತಿಯ ಮೇರೆಗೆ ಸಂಪುಟ ವಿಸ್ತರಣೆ ನಡೆಸಬೇಕಾಗುತ್ತಿತ್ತು. ಒಂದು ಪಕ್ಷಕ್ಕೆ ಕೊಟ್ಟರೆ ಮತ್ತೊಂದು ಪಕ್ಷಕ್ಕೆ ಮುನಿಸು. ಅವರ ಮುನಿಸು ತಣಿಸುವಷ್ಟರಲ್ಲಿ ಮಗದೊಬ್ಬರ ಕೋಪ; ಇವೆಲ್ಲ ಘಟನೆಗಳೂ ಸೇರಿ ಸಂಪುಟ ವಿಸ್ತರಣೆಯೆಂದರೆ ಅಧಿಕಾರದಲ್ಲಿರುವ ಮುಖ್ಯಸ್ಥನಿಗೆ ತಲೆನೋವಿನ ಸಂಗತಿಗಳನ್ನಾಗಿ ಮಾಡಿತ್ತು. ದಶಕಗಳ ನಂತರ ಕೇಂದ್ರದಲ್ಲಿ ಏಕಪಕ್ಷ ಬಹುಮತ ಪಡೆದಿದೆ, ಚುನಾವಣಾ ಪೂರ್ವದಿಂದ ಜೊತೆಗಿದ್ದ ಮಿತ್ರಪಕ್ಷಗಳಿಗೆ ಸಚಿವ ಸ್ಥಾನ ನೀಡಿದ್ದ ಬಿಜೆಪಿಯ ಮೇಲೆ ‘ನಮಗೆ ಇಂತಹ ಸ್ಥಾನ ಬೇಕು’ ಎಂದು ಒತ್ತಾಯಿಸುವಂತಿಲ್ಲ, ಒತ್ತಾಯಿಸಿದರೆ ಎನ್ ಡಿ ಎ ತೊರೆದು ಹೋಗಲು ಸಿದ್ಧರಾಗಬೇಕಾಗುತ್ತದೆ. ಅದರಲ್ಲೂ ಏಕಪಕ್ಷಕ್ಕಿಂತ ಏಕವ್ಯಕ್ತಿ ಆಡಳಿತದಂತಿರುವ ಈಗಿನ ಕೇಂದ್ರ ಸರ್ಕಾರದಲ್ಲಿ ಬಿಜೆಪಿಯವರೇ ಮೇಲಿನವರ ಮಾತುಗಳನ್ನು ಪ್ರಶ್ನಿಸುವಂತಿಲ್ಲ, ಇನ್ನು ಉಳಿದ ಪಕ್ಷಗಳು ಪ್ರಶ್ನಿಸಲು ಹೇಗೆ ಸಾಧ್ಯ?! ಕಾಂಗ್ರೆಸ್ಸಿನ ಹೈಕಮಾಂಡಿನ ಕಾರ್ಯವೈಖರಿಯನ್ನು ಟೀಕಿಸುತ್ತಿದ್ದ ಬಿಜೆಪಿಯಲ್ಲೂ ಹೈಕಮಾಂಡ್ ಸಂಸ್ಕೃತಿ ಬಹುವೇಗವಾಗಿ ಬೆಳೆಯುತ್ತಿದೆ! ಅಲ್ಲಿಗೆ ಬಿಜೆಪಿ ಕಾಂಗ್ರೆಸ್ ಆಗುವ ಪ್ರಯತ್ನದಲ್ಲಿ ವೇಗದಿಂದಲೇ ಮುಂದುವರೆಯುತ್ತಿದೆ!

ಅಕ್ಟೋ 29, 2014

P. Sainath: 100 days of Namo and Sycophant media.



Sainath P
ಪಿ. ಸಾಯಿನಾಥ್

P.Sainath
Its barely a couple of weeks ago since the media and the elite celebrated hundred days of the Modi government in power. I want to speak about the media, because at this point the media are an embarrassment not only to themselves but to Mr Modi’s public relation officers who must be feeling insecure about their jobs! You know, so since the media are doing so much better, the sycophantic projection, that PR firm which he had hired, I don’t think there contract need be renewed. The first hundred days, you know we had that tamasha over the first hundred days, I ask myself this question whether its Mr Modi or whether it is Mr Dr Manmohan singh or whoever, what about, what happens in those hundred days typically in rural area. 

ಜುಲೈ 7, 2014

ರಕ್ತಭಾಗ್ಯ

mahadevappa
ಮಹದೇವಪ್ಪ
ವಾಸು ಹೆಚ್.ವಿ (ಫೇಸ್ ಬುಕ್ ಪುಟದಿಂದ)
ಹಿಂದೆ.....
ಜನಗಳು ತಿನ್ನುವ ಅನ್ನದ ಪ್ರತಿ ಅಗುಳಿಗೂ ನಮ್ಮ ಬೆವರು ಮೆತ್ತಿಕೊಂಡಿರುತ್ತಿತ್ತು.
ಈಗ.....

ಮೇ 20, 2014

ನಿರೀಕ್ಷೆಗಳನ್ನು ಮೀರಿಸಿದ ಮತದಾರ “ಪ್ರಭು”



ಡಾ ಅಶೋಕ್ ಕೆ ಆರ್
ಭಾರತದ ಬಹುದೊಡ್ಡ ಐಂದ್ರಜಾಲ ಮತದಾನ ಮತ್ತು ಬಹುದೊಡ್ಡ ಐಂದ್ರಜಾಲಿಕ ಮತದಾರ! 2004ರ ಲೋಕಸಭಾ ಚುನಾವಣೆಗಳಿಂದಲೂ ಇದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಭಾರತೀಯ ಲೋಕಸಭಾ ಚುನಾವಣೆ ಬಲವಂತವಾಗಿ ಅಮೆರಿಕಾದ ಅಧ್ಯಕ್ಷೀಯ ಮಾದರಿಯ ಚುನಾವಣೆಯ ರೂಪದಲ್ಲಿ ನಡೆದು ಬಿಜೆಪಿ ಮತ್ತು ನರೇಂದ್ರ ಮೋದಿಯ ವಿರೋಧಿಗಳಿಗಿರಲಿ ಸ್ವತಃ ಬಿಜೆಪಿ ಮತ್ತು ನರೇಂದ್ರ ಮೋದಿಗೇ ಅಚ್ಚರಿಯೆನ್ನಿಸುವ ಫಲಿತಾಂಶ ನೀಡಿದ್ದಾನೆ ಭಾರತದ ಮತದಾರ. ಕಳೆದ ಇಪ್ಪತ್ತೈದು ಮೂವತ್ತು ವರುಷಗಳಿಂದ ಸಾಧ್ಯವಾಗದಿದ್ದ ಇನ್ನು ಮುಂದೆಯೂ ಅಸಾಧ್ಯವೆಂದೇ ತೋರಿದ್ದ ಏಕಪಕ್ಷದ ಬಹುಮತದ ಸಾಧನೆ 2014ರ ಚುನಾವಣೆಯಲ್ಲಿ ಸಾಧ್ಯವಾಗಿದೆ. ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರಕಾರವೊಂದು ಸರಳ ಬಹುಮತದೊಂದಿಗೆ ಸರಕಾರ ರಚಿಸುವಂತಾಗಿದೆ, ಎಲ್ಲರ ನಿರೀಕ್ಷೆಗಳನ್ನೂ ಮೀರಿ. ಚುನಾವಣ ಪೂರ್ವ ಹೊಂದಾಣಿಕೆಗಳನ್ನು ಮಾಡಿಕೊಂಡು ಎನ್.ಡಿ.ಎ ಹೆಸರಿನಡಿಯಲ್ಲಿ ಚುನಾವಣಾ ಆಖಾಡಕ್ಕೆ ಇಳಿದಿದ್ದ ಬಿಜೆಪಿ ತಂಡ ಮುನ್ನೂರಕ್ಕೂ ಅಧಿಕ ಸ್ಥಾನಗಳನ್ನು ಗೆದ್ದುಕೊಂಡಿದೆ. ಮತ್ತೊಂದೆಡೆ ಸ್ವಾತಂತ್ರೋತ್ತರ ಭಾರತದಲ್ಲಿ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್ ಹಿಂದೆಂದೂ ಕಾಣದ ಸೋಲನ್ನನುಭವಿಸಿದೆ. ಕಾಂಗ್ರೆಸ್ ನೇತೃತ್ವದ ಯು.ಪಿ.ಎ ಅರವತ್ತು ಚಿಲ್ಲರೆ ಸ್ಥಾನಗಳಿಗೆ ಸೀಮಿತಗೊಂಡಿದ್ದರೆ ಕಾಂಗ್ರೆಸ್ ಐವತ್ತರ ಗಡಿಯನ್ನೂ ದಾಟಲಾಗಲಿಲ್ಲ. ನರೇಂದ್ರ ಮೋದಿ ಮತ್ತಾತನ ಥಿಂಕ್ ಟ್ಯಾಂಕಿನ ಚಾಣಾಕ್ಷತನ, ಜಾಗರೂಕ ರಾಜಕೀಯ ನಡೆಗಳು ನಿರೀಕ್ಷೆಗೂ ಮೀರಿದ ಫಲಿತಾಂಶವನ್ನು ನೀಡಿದೆ ಎಂಬುದರಲ್ಲಿ ಸಂದೇಹವಿಲ್ಲ.

ಮೇ 14, 2014

ಹೋಗಿ ಸಿಂಗ್ ಜಿ.... ಮತ್ತೆ ಮರಳದಿರಿ...

ಮುನೀರ್ ಕಾಟಿಪಳ್ಳ
 ಹತ್ತು ವರ್ಷಗಳ ಕಾಲ ಇಂಡಿಯಾ ದೇಶವನ್ನು ಆಳಿದ ಮೌನಿ ಬಾಬ ಸಿಂಗ್ ಜಿ ನಿರ್ಗಮಿಸುತ್ತಿದ್ದಾರೆ. ಪಲಿತಾಂಶ ಏನೇ ಇದ್ದರು ಅವರ ನಿರ್ಗಮನ ಖಚಿತ ಮತ್ತು ಶಾಶ್ವತ.

ಏಪ್ರಿ 17, 2014

ಕಾಂಗ್ರೆಸ್ ರಹಿತ ಭಾರತ ಸಾಧ್ಯವೇ?

 ಡಾ.ಅಶೋಕ್. ಕೆ. ಆರ್


ಮೋದಿ ಜಪದ ಭಾಜಪ ಕಾಂಗ್ರೆಸ್ಸನ್ನು ಭಾರತದಿಂದ ಸಂಪೂರ್ಣ ನಿರ್ನಾಮವಾಗಿಸುವುದೇ ನಮ್ಮ ಗುರಿ ಎಂದು ಬಹಳಷ್ಟು ಪ್ರಚರಿಸುತ್ತಿದೆ. ಅನೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಏಳಿಗೆಯಿಂದ ರಾಷ್ಟ್ರೀಯ ಪಕ್ಷಗಳೆನ್ನಿಸಿಕೊಂಡ ಕಾಂಗ್ರೆಸ್ ಮತ್ತು ಭಾಜಪ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲೂ ಎಣಗುತ್ತಿರುವ ಪರಿಸ್ಥಿತಿಯಿದೆ. ಒಂದಷ್ಟು ರಾಜ್ಯಗಳಲ್ಲಿ ಭಾಜಪ ಪ್ರಭಾವಶಾಲಿಯಾಗಿ ಮಗದೊಂದಷ್ಟು ಕಡೆ ಕಾಂಗ್ರೆಸ್ ಪ್ರಭಾವಶಾಲಿಯಾಗಿ ಮತ್ತೊಂದು ಪಕ್ಷದ ಏಳಿಗೆಗೆ ಅಡ್ಡಿಯಾಗಿದ್ದರೆ ಇನ್ನುಳಿದವುಗಳಲ್ಲಿ ಮತದಾರ ಒಮ್ಮೆ ಕಾಂಗ್ರೆಸ್ಸಿಗೆ ಮತ್ತೊಮ್ಮೆ ಭಾಜಪಕ್ಕೆ ಅವಕಾಶ ನೀಡುವ ಮನಸ್ಸು ಮಾಡಿದ್ದಾನೆ.

ಏಪ್ರಿ 1, 2014

ನಮೋನೂ ಅಲ್ಲ ರಾಗಾನೂ ಅಲ್ಲ ಆಡಳಿತ ನಡೆಸುವುದು ಕಾಂಚಾಣ.....

ಪ್ರಜಾವಾಣಿ ಪತ್ರಿಕೆಯಿಂದ
ಡಾ ಅಶೋಕ್ ಕೆ ಆರ್

ನಮ್ಮ ದೇಶದ ಆಡಳಿತ ನಡೆಸುವುದ್ಯಾರು? ಬಿಜೆಪಿ ಕಾಂಗ್ರೆಸ್ ತೃತೀಯ ರಂಗ? ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮೋದಿ, ಅಡ್ವಾಣಿ? ತತ್ವ ಸಿದ್ಧಾಂತಗಳ ಪಕ್ಷವೋ ಆದರ್ಶ ನೀತಿ ನಿಯಮಗಳ ವ್ಯಕ್ತಿಯೋ ದೇಶವನ್ನು ಮುನ್ನಡೆಸುತ್ತಾರೆಂಬುದು ನಮ್ಮ ಕನಸಷ್ಟೇ. ಪಾಶ್ಚಿಮಾತ್ಯ ದೇಶಗಳಲ್ಲಿ ಎಂದೋ ಘಟಸಿ ಅಲ್ಲಿನವರಲ್ಲಿ ಹೆಚ್ಚಿನವರು ಅದನ್ನೂ ಒಪ್ಪಿಯೂ ಮುಗಿದು ಹೋದ ಸಂಗತಿಗಳು ಭಾರತದಲ್ಲಿ ಈಗ ಬೆಳಕಿಗೆ ಬರುತ್ತಿವೆ. ಆಡಳಿತವಿರುವ ಪಕ್ಷ ಯಾವುದೇ ಇರಲಿ, ವ್ಯಕ್ತಿ ಯಾರೇ ಇರಲಿ ಸರಕಾರದ ನೀತಿ ನಿಯಮಗಳ ದಿಕ್ಕುದೆಸೆಗಳನ್ನು ನಿರ್ಧರಿಸುವವರು ಕೆಲವೇ ಕೆಲವು ಉದ್ಯಮಪತಿಗಳು.

ಹದಿನಾರನೇ ಲೋಕಸಭೆಗೆ ಕ್ಷಣಗಣನೆ - ವಿಚಾರಗಳು ಹಿಂದಾಗಿ ಗದ್ದಲಗಳೇ ವಿಜೃಂಭಿಸುವ ಚುನಾವಣೆಯ ಸಮಯ



ಡಾ ಅಶೋಕ್ ಕೆ ಆರ್
ವರುಷದ ಹಿಂದಿನಿಂದಲೇ ಪ್ರಾರಂಭವಾಗಿದ್ದ ಚುನಾವಣಾ ತಯಾರಿಗಳು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ವೇಗೋತ್ಕರ್ಷಕ್ಕೊಳಗಾಗಿವೆ. ಚುನಾವಣಾ ತಯಾರಿಗಳು ಆರಂಭಗೊಂಡ ದಿನದಿಂದಲೂ ಈ ಬಾರಿಯ ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ‘ಸಮರ’ ಎಂದೇ ಬಿಂಬಿಸಲಾಗುತ್ತಿತ್ತು. ಚುನಾವಣೆ ಘೋಷಣೆಯಾದ ನಂತರವಾದರೂ ವಿಷಯಾಧಾರಿತ ಚರ್ಚೆಗಳು ಮುನ್ನೆಲೆಗೆ ಬರದಿರುವುದು ನಮ್ಮ ಪ್ರಜಾಪ್ರಭುತ್ವ ಹಿಡಿಯುತ್ತಿರುವ ಜಾಡನ್ನು ತೋರುತ್ತಿದೆಯೇ? ಈಗಲೂ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಭಾಷಣಗಳಲ್ಲಿ ಕಾಂಗ್ರೆಸ್ ಮತ್ತದರ ನಾಯಕರ ಬಗೆಗಿನ ಅವಹೇಳನಕಾರಿ ಮಾತುಗಳು ಮತ್ತು ಕಾಂಗ್ರೆಸ್ಸಿಗರ ಭಾಷಣಗಳಲ್ಲಿ ನರೇಂದ್ರ ಮೋದಿ ಬಗೆಗಿನ ವ್ಯಂಗ್ಯಮಿಶ್ರಿತ ಕೆಲವೊಮ್ಮೆ ಅಸಂಬದ್ಧ ಮಾತುಗಳೇ ವಿಜೃಂಭಿಸುತ್ತಿದೆಯೇ ಹೊರತು ಅಧಿಕಾರಕ್ಕೆ ಬಂದರೆ ತಾವು ನೀಡಬಹುದಾದ ಆಡಳಿತದ ಮಾದರಿಯ ಬಗೆಗಿನ ವಿಚಾರಗಳು ಚರ್ಚೆಗೊಳಪಡುತ್ತಲೇ ಇಲ್ಲ. ಇವತ್ತಿನ ಚುನಾವಣಾ ಮಾದರಿ ಪ್ರಜಾಪ್ರಭುತ್ವದ ಅಣಕವಾಡುತ್ತಿದೆ.

ಮಾರ್ಚ್ 19, 2014

ಈ ಅಭ್ಯರ್ಥಿಯ ಒಟ್ಟು ಆಸ್ತಿ ರೂ 750 ಮಾತ್ರ!

ಮುನೀರ್ ಕಾಟಿಪಳ್ಳ
ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭ್ರಷ್ಟಾಚಾರ ವಿರೋಧಿ , ಪ್ರಾಮಾಣಿಕತೆ , ಸರಳತೆ ಮುಂತಾದ ವಿಷಯಗಳು ಗಂಭೀರ ರಾಜಕೀಯ ಚರ್ಚೆಯ ವಿಷಯವಾಗಿದೆ. ಕಳೆದ ಲೋಕಸಭೆಯಲ್ಲಿ ಕೋಟ್ಯಾಧೀಶರುಗಳ ಸಂಖ್ಯೆ ಗಣನೀಯವಾಗಿತ್ತು. ಎಲ್ಲಾ ರಾಜ್ಯಗಳಲ್ಲಿ ವಿಧಾನಸಭೆಗೆ ಆರಿಸಿ ಬರುವವರು ಬಹುಕೋಟಿಯ ಒಡೆಯರು ಆಗಿರುವುದು ಈಗ ಒಂದು ಪದ್ದತಿಯಾಗಿದೆ.

ಮಾರ್ಚ್ 8, 2014

BJP RULES!!

Elections are nearing. Probably Loksabha elections in India was never portrayed like the one we are seeing in this. Instead of being a democratic election's publicity it has become a fight between the two individuals. Here is a small piece of article which i read in facebook. Appears hilarious but unfortunately true - hingyake