ಅಕ್ಟೋ 9, 2014

ಬೆಂಕಿ ಹಚ್ಚಲು ಪೊಟ್ಣ ಬರ್ತಿದೆ!


hingyake
ಬೆಂಕಿಪಟ್ಣ

Dr Ashok K R
ದಯಾನಂದ ಟಿ.ಕೆ ನಿರ್ದೇಶನದ ಸ್ಟೀವ್ ಕೌಶಿಕ್ ಸಂಗೀತ ನೀಡಿರುವ ‘ಬೆಂಕಿಪಟ್ಣ’ ಚಿತ್ರದ ಹಾಡುಗಳು ಬಿಡುಗಡೆಗೊಂಡಿವೆ. ದಯಾನಂದರನ್ನು ಮೊದಲು ಕಂಡಿದ್ದು ಕುಪ್ಪಳ್ಳಿಯ ‘ನಾವು ನಮ್ಮಲ್ಲಿ’ ಕಾರ್ಯಕ್ರಮದಲ್ಲಿ. ಅವರ ಪುಸ್ತಕ ‘ರಸ್ತೆ ನಕ್ಷತ್ರ’ ಬಿಡುಗಡೆಯಾಗಿತ್ತು. ನಿಜವೆನ್ನಿಸದ ನೈಜ ಕಥಾನಕಗಳ ಗುಚ್ಛವದು. ಅದ್ಭುತ ಶೈಲಿಯ ನಿರೂಪಣೆಯಿಂದ ಗಮನ ಸೆಳೆದಿತ್ತು. ಅದೇ ಶೈಲಿಯ ಕಂಡರೂ ಕಾಣದೇ ಹೋಗುವ ಜನರ ಕಥಾನಕಗಳು ಈಗ ವಿವಿಧ ದಿನಪತ್ರಿಕೆಗಳಲ್ಲೂ ನಿಯಮಿತವಾಗಿ ಬರುತ್ತಿವೆಯೆನ್ನುವುದು ದಯಾನಂದರ ಶೈಲಿಯ ಪ್ರಭಾವವನ್ನು ತಿಳಿಸುತ್ತದೆ. ಇಂಥ ಅದ್ಭುತ ಕಥೆಗಾರರೊಬ್ಬರು ಇದ್ದಕ್ಕಿದ್ದಂತೆ ಸಿನಿಮಾ ತೆಗೆಯುತ್ತೇನೆಂದು ಘೋಷಿಸಿದಾಗ ಅರೆರೇ! ಎಂದು ಅಚ್ಚರಿಯಾದರೂ ಅವರಲ್ಲಿರುವ ಕಥೆಗಾರನ ಮೇಲಿರುವ ನಂಬುಗೆಯಿಂದ ಚಿತ್ರದ ಬಗೆಗಿನ ನಿರೀಕ್ಷೆಯೂ ಹೆಚ್ಚಿದೆ.
Also read

ಸೆಪ್ಟೆಂ 3, 2012

ಮಿನುಗುವ ಮನಗಳ “ರಸ್ತೆ ನಕ್ಷತ್ರ”



-      ಡಾ ಅಶೋಕ್ ಕೆ ಆರ್.

ಇಲ್ಲಿಯವರೆಗೆ ಹೆಚ್ಚುಕಡಿಮೆ ನಾಲ್ಕುನೂರು ಪುಸ್ತಕಗಳನ್ನು ಓದಿದ್ದೇನೆ. ಕಥೆ – ಕವಿತೆ – ಕಾದಂಬರಿ – ನಾಟಕ – ಹಾಸ್ಯ – ಆತ್ಮಕತೆ – ಸಾಮಾಜಿಕ – ಚಿಂತನೆ – ಪ್ರಬಂಧಗಳು – ಐತಿಹಾಸಿಕ – ಕಾಮೋದ್ರೇಕ – ಆದ್ಯಾತ್ಮ ಹೀಗೆ ಇನ್ನೂ ವಿಧವಿಧವಾದ ಪುಸ್ತಕಗಳನ್ನು ಓದಿರುವೆನಾದರೂ ಇದೊಂದು ಪುಸ್ತಕವನ್ನು ಸಾಹಿತ್ಯದ ಯಾವ ಉಪವಿಭಾಗಕ್ಕೆ ಸೇರಿಸಬೇಕೆಂದು ತಿಳಿಯದೆ ಗೊಂದಲಕ್ಕೀಡಾಗಿದ್ದೇನೆ! ಬಡಜನರ ಆತ್ಮಕಥೆಯಷ್ಟೇ ಎಂದುಕೊಳ್ಳೋಣವೆಂದರೆ ದುತ್ತನೆ ರಾಜಕೀಯ ಧಾರ್ಮಿಕ ವಿಶ್ಲೇಷಣೆ ಎದುರಾಗುತ್ತದೆ! ಯಾವ ತಾತ್ವಿಕನಿಗೂ ಕಾಣದ ಜೀವನದೃಷ್ಟಿ ಇಲ್ಲಿರುವ ಜನಸಾಮಾನ್ಯರ ಮಾತಿನಲ್ಲಿ ಸಲೀಸಾಗಿ ಕಾಣಸಿಗುತ್ತದೆ. ಅಯೋಧ್ಯೆಯಿಂದ ಹಿಡಿದು ಭಾರತೀಯ ಸೈನ್ಯದ ವಿಶ್ಲೇಷಣೆಯೂ ನಡೆದುಬಿಡುತ್ತದೆ! ಅಂದಹಾಗೆ ಪುಸ್ತಕದ ಹೆಸರು ‘ರಸ್ತೆ ನಕ್ಷತ್ರ’. ಆಕಾಶದೆಡೆಗೆ ನೆಟ್ಟು ಹೋದ ನಮ್ಮ ನಿಲುವುಗಳನ್ನು ರಸ್ತೆಯ ಮೇಲೆ ಎಳೆದುತಂದು ನಕ್ಷತ್ರಗಳನ್ನು ಗುರುತಿಸುವಂತೆ ಮಾಡಿದ ಶ್ರೇಯ ಇತ್ತೀಚೆಗಷ್ಟೇ ಪಿ.ಸಾಯಿನಾಥ್ ಪ್ರಶಸ್ತಿ ಪಡೆದ ಟಿ.ಕೆ. ದಯಾನಂದರವರದು.

ಜುಲೈ 30, 2012

ಹುಬ್ಬಳ್ಳಿ ನಗರದ ಚಾಣಕ್ಯಪುರಿ ರಸ್ತೆಯ ಮ್ಯಾನ್ಹೋಲ್ ವಿಷಾನಿಲ ಸೇವನೆಯಿಂದ ಮೃತಪಟ್ಟ ಇಬ್ಬರ ಸಾವಿನ ಕುರಿತ ಸಪಾಯಿಕರ್ಮಚಾರಿ ಕಾವಲುಸಮಿತಿಯ ಸತ್ಯಶೋಧನಾ ವರದಿ.

 ಧರ್ಮ ಸಂಸ್ಕೃತಿ ನಗ್ನತೆ ಸಭ್ಯತೆ ಬುರ್ಖ ದನ ಹಂದಿ ಮಾಂಸ ಎಣ್ಣೆ ಬಾರು ಪಬ್ಬುಗಳ ಬಗ್ಗೆಯೇ ಬರೆಯುತ್ತ ಕೂರುವ ನಮ್ಮಂಥವರ ನಡುವೆ ಇತ್ತೀಚೆಗಷ್ಟೇ ಪಿ.ಸಾಯಿನಾಥ್ ರವರಿಂದ ಕೌಂಟರ್ ಮೀಡಿಯ ಪ್ರಶಸ್ತಿ ಪಡೆದುಕೊಂಡ ದಯಾನಂದ್ ಟಿ.ಕೆರವರು ಮಲದಗುಂಡಿ ಸ್ವಚ್ಛಗೊಳಿಸಲು ಹೋಗಿ ಪ್ರಾಣ ಕಳೆದುಕೊಂಡವರ ಬಗ್ಗೆ ಸತ್ಯಶೋಧನಾ ವರದಿ ಬರೆದಿದ್ದಾರೆ. ಇಂಥ ವಿಪರ್ಯಾಸದ ಸಂಗತಿಗಳು ಕೂಡ ನಮ್ಮ ಭಾರತದ ಸಂಸ್ಕೃತಿಯೇ ಅಲ್ಲವೇ??