ಮಾರ್ಚ್ 3, 2015

ಛಾಯೆಗಳ ನಡುವೆ ಸ್ವಂತಿಕೆ ಮೆರೆವ ‘ಮೈತ್ರಿ’.

mythri giriraj
Dr Ashok K R
ಈ ಸಿನಿಮಾ ನೋಡಬೇಕಾದರೆ ಹಿಂದಿನ ಹತ್ತಲವು ಸಿನಿಮಾಗಳು ನೆನಪಾಗುತ್ತವೆ! ಅದರಲ್ಲಿ ಮುಖ್ಯವಾದುದು ಸ್ಲಂ ಡಾಗ್ ಮಿಲಿಯನೇರ್, ಚಿನ್ನಾರಿ ಮುತ್ತ, ಜಿಮ್ಮಿ ಗಲ್ಲು. ಸ್ಲಂ ಡಾಗ್ ಮಿಲಿಯನೇರಿನ ಹಾಗೆ ಇಲ್ಲೂ ಒಂದು ದಿಢೀರ್ ಕೋಟ್ಯಾಧಿಪತಿಯಾಗುವ ಆಟವಿದೆ. ಬಡ ಹುಡುಗನೊಬ್ಬನ ಕಥೆಯಿದೆ. ಏನೂ ಇಲ್ಲದ ಹುಡುಗನೊಬ್ಬ ನಗರಕ್ಕೆ ಬಂದು ಪ್ರಚಂಡ ಯಶಸ್ಸು ಗಳಿಸುವ ಚಿನ್ನಾರಿ ಮುತ್ತ ಇಲ್ಲಿ ಸಿದ್ಧರಾಮನಾಗುತ್ತಾನೆ. ಬಾಲಪರಾಧಿಗಳ ಬದಲಾವಣೆಗೆ ಹಂಬಲಿಸುವ ಸಿನಿಮಾ ಖೈದಿಗಳ ಮನಪರಿವರ್ತನೆಯ ಜಿಮ್ಮಿ ಗಲ್ಲು ಚಿತ್ರವನ್ನು ನೆನಪಿಸುತ್ತದೆ! ಇಷ್ಟೆಲ್ಲಾ ಸಿನಿಮಾಗಳನ್ನು ನೆನಪಿಸಿಯೂ ತನ್ನದೇ ಸ್ವಂತ ಛಾಪು ಮೂಡಿಸುವ ಸಿನಿಮಾ ‘ಮೈತ್ರಿ’. ವಿಷ್ಣುವರ್ಧನ್ ಬಹಳಷ್ಟು ಸಂದರ್ಶನಗಳಲ್ಲಿ ಹೇಳಿರುವಂತೆ ಪ್ರಪಂಚದಲ್ಲಿರುವುದು ಏಳೋ ಎಂಟೋ ಕಥೆ! ಅವುಗಳನ್ನೇ ಬೇರ್ಪಡಿಸಿ ಮಾರ್ಪಡಿಸಿ ಸಿನಿಮಾ ಮಾಡಬೇಕು. ಹಳೆಯ ಚಿತ್ರಗಳಿಗೆ ಒಂದಷ್ಟು ಸಾಮ್ಯತೆಗಳಿದ್ದರೂ ಮೈತ್ರಿಯಲ್ಲಿ ಹೊಸತನವನ್ನು ಕಾಣಲು ಸಾಧ್ಯವಾಗಿರುವುದು ಈ ಬೇರ್ಪಡಿಸಿ ಮಾರ್ಪಡಿಸುವ ವಿಧಾನದಿಂದ.

ಫೆಬ್ರ 27, 2015

ಅಮಲುಗಳ ನಡುವೆ ಕಳೆದುಹೋಗುವ ಜಟ್ಟ.

Dr Ashok K R
ಗಿರಿರಾಜರ ಹೆಸರು ಮೊದಲು ಕೇಳಿದ್ದು ‘ವರ್ತಮಾನ’ ವೆಬ್‍ಪತ್ರಿಕೆ ಪ್ರತಿ ವರುಷ ನಡೆಸುವ ಕಥಾ ಸ್ಪರ್ಧೆಯ ಫಲಿತಾಂಶದಲ್ಲಿ. ಅವರ ‘ಗಲೀಜು’ ಎಂಬ ಕಥೆಗೆ ಎರಡನೆಯ ಬಹುಮಾನ ಬಂದಿತ್ತು. ಅದರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗಿರಿರಾಜರನ್ನು ಭೇಟಿಯಾದಾಗಲೇ ತಿಳಿದಿದ್ದು ಇದೇ ಆಸಾಮಿ ‘ಜಟ್ಟ’ ಚಿತ್ರದ ನಿರ್ದೇಶಕರೆಂದು! ಜಟ್ಟ ಚಿತ್ರದ ಬಗ್ಗೆ ಆಗಲೇ ಸಾಕಷ್ಟು ಚರ್ಚೆ ನಡೆದಿತ್ತು. ಬೆಂಗಳೂರಿನ ಟ್ರಾಫಿಕ್ಕಿನಲ್ಲಿ ಹೋಗಿ ಚಿತ್ರ ನೋಡುವ ಉಮೇದು ಕಡಿಮೆಯಾಗಿದ್ದ ಕಾರಣ ‘ಜಟ್ಟ’ ಚಿತ್ರವನ್ನಿನ್ನೂ ನೋಡಿರಲಿಲ್ಲ. ಗೆಳೆಯ ನಿರ್ದೇಶಕ ಅಭಿ ಹನಕೆರೆ ಜಟ್ಟವನ್ನೊಂದಷ್ಟು ಹೊಗಳಿ ಹೋಗಿ ನೋಡು ಎಂದಿದ್ದ. ಕಾರಣಾಂತರಗಳಿಂದ ಜಟ್ಟ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದು ಸಾಧ್ಯವಾಗಲಿಲ್ಲ. ಕೊನೆಗೆ ನಮ್ಮ ‘ಹುಚ್ಚ ವೆಂಕಟ್’ ಹೇಳುವ ಹಾಗೆ ಬಿಟ್ಟಿಯಾಗಿ ಟಿವಿಯಲ್ಲೇ ನೋಡಿದೆ! ಇಂತಹುದೊಂದು ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡದಿದ್ದುದಕ್ಕೆ ಬೇಸರವಿದೆ.