ಮಾರ್ಚ್ 15, 2017

ಗೋವಾ: ಕಾಂಗ್ರೆಸ್ಸಿನ ದಿವ್ಯ ನಿರ್ಲಕ್ಷ್ಯದಿಂದ ಅಧಿಕಾರ ಪಡೆದ ಬಾಜಪ

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಬಹುಶ: ಇತಿಹಾಸ ಮರುಕಳಿಸುತ್ತದೆ ಎನ್ನುವ ನಾಣ್ಣುಡಿ ಹುಟ್ಟಿಕೊಂಡಿದ್ದೇ ಇಂಡಿಯಾದ ರಾಜಕಾರಣವನ್ನು ಗಮನದಲ್ಲಿಟ್ಟುಕೊಂಡೆನಿಸುತ್ತಿದೆ. ಕಳೆದ ಆರು ದಶಕಗಳ ಕಾಲ ರಾಜ್ಯಗಳ ರಾಜ್ಯಪಾಲರುಗಳನ್ನು ತನ್ನ ಪಕ್ಷದ ಕಾರ್ಯಕರ್ತರುಗಳಂತೆ ಬಳಸಿಕೊಂಡ ಕಾಂಗ್ರೆಸ್ ಇವತ್ತು ಗೋವಾದಲ್ಲಿ ರಾಜ್ಯಪಾಲರಿಂದ ತನ್ನ ಪಕ್ಷಕ್ಕೆ ಅನ್ಯಾಯವಾಗಿದೆಯೆಂದು ಬೊಬ್ಬೆ ಹೊಡೆಯುತ್ತಿದೆ. ಬಹುಶ: ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತಾಡುವ ಬಾಜಪ ಕಾಂಗ್ರೆಸ್ಸಿನ ಇಂತಹ ನೀತಿಗಳನ್ನು ಅಳವಡಿಸಿಕೊಳ್ಳುವುದರಲ್ಲಿ ಯಾವ ತಪ್ಪೂ ಇಲ್ಲವೆಂದು ಬಾವಿಸಿದಂತಿದೆ.