ಫೆಬ್ರ 27, 2015

ಅಮಲುಗಳ ನಡುವೆ ಕಳೆದುಹೋಗುವ ಜಟ್ಟ.

Dr Ashok K R
ಗಿರಿರಾಜರ ಹೆಸರು ಮೊದಲು ಕೇಳಿದ್ದು ‘ವರ್ತಮಾನ’ ವೆಬ್‍ಪತ್ರಿಕೆ ಪ್ರತಿ ವರುಷ ನಡೆಸುವ ಕಥಾ ಸ್ಪರ್ಧೆಯ ಫಲಿತಾಂಶದಲ್ಲಿ. ಅವರ ‘ಗಲೀಜು’ ಎಂಬ ಕಥೆಗೆ ಎರಡನೆಯ ಬಹುಮಾನ ಬಂದಿತ್ತು. ಅದರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗಿರಿರಾಜರನ್ನು ಭೇಟಿಯಾದಾಗಲೇ ತಿಳಿದಿದ್ದು ಇದೇ ಆಸಾಮಿ ‘ಜಟ್ಟ’ ಚಿತ್ರದ ನಿರ್ದೇಶಕರೆಂದು! ಜಟ್ಟ ಚಿತ್ರದ ಬಗ್ಗೆ ಆಗಲೇ ಸಾಕಷ್ಟು ಚರ್ಚೆ ನಡೆದಿತ್ತು. ಬೆಂಗಳೂರಿನ ಟ್ರಾಫಿಕ್ಕಿನಲ್ಲಿ ಹೋಗಿ ಚಿತ್ರ ನೋಡುವ ಉಮೇದು ಕಡಿಮೆಯಾಗಿದ್ದ ಕಾರಣ ‘ಜಟ್ಟ’ ಚಿತ್ರವನ್ನಿನ್ನೂ ನೋಡಿರಲಿಲ್ಲ. ಗೆಳೆಯ ನಿರ್ದೇಶಕ ಅಭಿ ಹನಕೆರೆ ಜಟ್ಟವನ್ನೊಂದಷ್ಟು ಹೊಗಳಿ ಹೋಗಿ ನೋಡು ಎಂದಿದ್ದ. ಕಾರಣಾಂತರಗಳಿಂದ ಜಟ್ಟ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದು ಸಾಧ್ಯವಾಗಲಿಲ್ಲ. ಕೊನೆಗೆ ನಮ್ಮ ‘ಹುಚ್ಚ ವೆಂಕಟ್’ ಹೇಳುವ ಹಾಗೆ ಬಿಟ್ಟಿಯಾಗಿ ಟಿವಿಯಲ್ಲೇ ನೋಡಿದೆ! ಇಂತಹುದೊಂದು ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡದಿದ್ದುದಕ್ಕೆ ಬೇಸರವಿದೆ.