ಮೇ 3, 2018

ನಿರೀಕ್ಷೆ ಮತ್ತು ವಾಸ್ತವ......

ಸಾಂದರ್ಭಿಕ ಚಿತ್ರ 
ಡಾ. ಅಶೋಕ್. ಕೆ. ಆರ್. ಪೇಪರ್ರಿನವನು ಪತ್ರಿಕೆಯನ್ನು ಕಾಂಪೌಂಡಿನೊಳಗೆ ಎಸೆದ ಸದ್ದಿಗೆ ಎಚ್ಚರವಾಯಿತು. ಕಣ್ಣುಜ್ಜಿಕೊಂಡು ಬಾಗಿಲು ತೆರೆದು ಪತ್ರಿಕೆ ತೆಗೆದುಕೊಂಡು ಒಳಬಂದು ಓದಲಾರಂಭಿಸಿದೆ. ಚುನಾವಣೆಯ ಸಮಯದಲ್ಲಿ ರಾಜಕಾರಣಿಗಳ ಮಾತುಗಳಲ್ಲದೆ ಬೇರೆ ಸುದ್ದಿಗಳನ್ನು ಕಾಣಲು ಸಾಧ್ಯವೇ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾತುಗಳೇ ಇವತ್ತಿನ ಪ್ರಮುಖ ಸುದ್ದಿ:

ಏಪ್ರಿ 20, 2018

ಅತೃಪ್ತ ಆತ್ಮಗಳ ಸ್ಥಳಾಂತರ ಪ್ರಕ್ರಿಯೆಗಳು!!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
(ಇದೀಗ ಕರ್ನಾಟಕದ ಉದ್ದಗಲಕ್ಕೂ ಅತೃಪ್ತ ಆತ್ಮಗಳು ಅಡ್ಡಾಡುತ್ತಿದ್ದು ಸ್ವಪಕ್ಷೀಯರಿಂದ ಅತೃಪ್ತಿ ಶಮನವಾಗದಿದ್ದ ಆತ್ಮಗಳು ಪರಪಕ್ಷಗಳ ಸೆರಗಿನ ಚುಂಗು ಹಿಡಿದು ತಮ್ಮ ಅತೃಪ್ತಿಯನ್ನು ತಣಿಸಿಕೊಳ್ಳಲು ಪ್ರಯತ್ನಿಸುತ್ತಿವೆ, ಹಾಗೆಯೇ ಇಂತಹ ಆತ್ಮಗಳನ್ನು ಹಿಡಿದು ತಂದು ಅವಕ್ಕೊಂದು ಭದ್ರನೆಲೆ ಕಲ್ಪಿಸುವಲ್ಲಿ ನಮ್ಮ ರಾಜಕೀಯ ಪಕ್ಷಗಳು ಅಪಾರವಾಗಿ ಶ್ರಮಿಸುತ್ತಿವೆ. ಆ ಬಗ್ಗೆ ಒಂದು ಟಿಪ್ಪಣಿ)

ಅವೇ ಕ್ಷೇತ್ರಗಳು, ಅವೇ ಹೆಸರುಗಳು, ಅವೇ ಮುಖಗಳು, ಆದರೆ-ಪಕ್ಷದ ಬಾವುಟ ಮತ್ತು ಚಿಹ್ನೆ ಬೇರೆ. ಮೇ ಹನ್ನೆರಡನೆ ತಾರೀಖಿನಂದು ನಡೆಯಲಿರುವ ಕರ್ನಾಟಕ ವಿದಾನಸಭೆಯ ಚುನಾವಣೆಗಳಿಗೆ ಸ್ಪರ್ದಿಸಿರುವ ಸಾಕಷ್ಟು ಕ್ಷೇತ್ರಗಳಲ್ಲಿ ಈ ಮಾತು ನಿಜವಾಗುತ್ತಿದೆ. 2013ರ ಚುನಾವಣೆಯನ್ನು, ಆಗ ಯಾವ್ಯಾವ ಪಕ್ಷದಿಂದ ಯಾರ್ಯಾರು ಸ್ಪರ್ದಿಸಿದ್ದರೆಂಬುದನ್ನು ನಿಖರವಾಗಿ ನೆನಪಿಟ್ಟುಕೊಂಡವರಿಗೆ ನನ್ನ ಮಾತುಗಳು ಸ್ಪಷ್ಟವಾಗಿ ಅರ್ಥವಾಗುತ್ತವೆ.

ಆಗ 30, 2016

ಬಲಪಂಥೀಯ ಬಾಜಪದ ವಿರುದ್ದ ಸೃಷ್ಠಿಯಾಗಬೇಕಿರುವ ಒಂದು ಮಹಾ ಮೈತ್ರಿಕೂಟ: ಯಾಕೆ ಮತ್ತು ಹೇಗೆ? - ಒಂದು ಅವಲೋಕನ

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
30/08/2016
ಇದೀಗ ರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆಯನ್ನೇರಿ ಕೂತಿರುವ ಬಲಪಂಥೀಯ ಪಕ್ಷವಾದ ಬಾಜಪವನ್ನು ಮುಂದಿನ ಅಂದರೆ 2019 ರ ಸಾರ್ವತ್ರಿಕ ಚುನಾವಣೆಯ ವೇಳೆಗಾದರು ಎದುರಿಸಿ ನಿಂತು ಗೆಲ್ಲಬಲ್ಲ ರಾಜಕೀಯ ವೇದಿಕೆಯೊಂದನ್ನು ರಚಿಸಿಕೊಳ್ಳುವುದು ಇವತ್ತಿನ ಅನಿವಾರ್ಯವಾಗಿದೆ. ಜನಮಾನಸದಲ್ಲಿನ ಇಂತಹ ಆಶಯವನ್ನು ಕಾರ್ಯರೂಪಕ್ಕೆ ತರುವಲ್ಲಿ ನಮ್ಮ ರಾಜಕೀಯ ಪಕ್ಷಗಳು ಮನಸ್ಸು ಮಾಡುವುದು ಅಗತ್ಯವಾಗಿದೆ. ಇದು ಹೇಗೆ ಸಾದ್ಯವಾಗಬಲ್ಲದೆಂಬುದನ್ನು ಈ ಲೇಖನದಲ್ಲಿ ಚರ್ಚಿಸಲು ಯತ್ನಿಸಿದ್ದೇನೆ. ಇದಕ್ಕೆ ಪೂರಕವಾಗಿ ಬಾಜಪ ಒಂದು ಪಕ್ಷವಾಗಿ, ಮತಾಂಧ ರಾಜಕಾರಣದ ಸಂಕೇತವಾಗಿ ಬೆಳೆದು ಬಂದ ರೀತಿಯನ್ನು ಒಂದಷ್ಟು ನೆನಪಿಸಿಕೊಳ್ಳುವ ಪ್ರಯತ್ನವನ್ನೂ ಮಾಡಿದ್ದೇನೆ. ಯಾಕೆಂದರೆ ಆಗಾಗ ಇತಿಹಾಸವನ್ನು ತಿರುವಿ ಹಾಕದೇ ಹೋದರೆ ವರ್ತಮಾನದಲ್ಲಿ ಸರಿಯಾದ ಹೆಜ್ಜೆಗಳನ್ನಿಡುವಲ್ಲಿ ಕಷ್ಟವಾಗುತ್ತದೆಯೆಂಬ ಬಾವನೆಯಿಂದ. ಹೀಗಾಗಿ ಈ ಲೇಖನ ಸಾಕಷ್ಟು ದೀರ್ಘವೂ, ಮತ್ತು ಹಲವು ವಿಚಾರಗಳ ಪುನರಾವರ್ತನೆ ಎನಿಸಿದರೆ ಕ್ಷಮಿಸಬೇಕಾಗಿ ಓದುಗರಲ್ಲಿ ನನ್ನ ನಮ್ರ ವಿನಂತಿ:

ಬಹುಶ: ಇಂಡಿಯಾ ಒಂದು ದೇಶವಾಗಿ ಹಿಂದೆಂದಿಗಿಂತಲೂ ಹೆಚ್ಚು ಅಪಾಯಕಾರಿಯಾದ ಆತಂಕದ ದಳ್ಳುರಿಯಲ್ಲಿ ಒಳಗೊಳಗೇ ಬೇಯುತ್ತಿದೆ. ಸ್ವಾತಂತ್ರ ಸಿಕ್ಕ ಸರಿಸುಮಾರು ಏಳು ದಶಕಗಳಿಂದ ನಾವು ಜತನದಿಂದ ಕಾಪಾಡಿಕೊಂಡು ಬಂದಿದ್ದ ಜಾತ್ಯಾತೀತ ಸಮಾಜವೊಂದು ಅಪ್ಪಟ ಮತಾಂಧ ಸಮುದಾಯವಾಗಿ ಪರಿವರ್ತನೆಯಾಗುತ್ತಿರುವಂತೆ ಗೋಚರವಾಗುತ್ತಿದೆ. ಈ ತಕ್ಷಣಕ್ಕೆ ಎಚ್ಚರಗೊಂಡು ಜಾತ್ಯಾತೀತವಾಗಿ, ಧರ್ಮಾತೀತವಾಗಿ ಬಲಪಂಥೀಯ ಕೋಮುಶಕ್ತಿಗಳ ರಾಜಕೀಯ ಪಡೆಯ ಜೊತೆ ಹೋರಾಡಿ ಅದನ್ನು ಹಿಮ್ಮಟ್ಟಿಸದೆ ಹೋದರೆ ಕೆಲವೇ ದಿನಗಳಲ್ಲಿ ಇಂಡಿಯಾಕೂಡ ಇನ್ನೊಂದು ಮತಾಂಧರಾಷ್ಟ್ರವಾಗಿ ಜಗತ್ತಿನ ಭೂಪಟದಲ್ಲಿ ಗುರುತಿಸಿಕೊಳ್ಳುವ ಸಾದ್ಯತೆ ಹೆಚ್ಚಾಗಿದೆ. ಎಂಭತ್ತರ ದಶಕದಲ್ಲಿ ಪ್ರಾರಂಭವಾದ ಬಾಜಪದ ಕೋಮುವಾದಿ ರಾಜಕಾರಣ ಅಂತಿಮವಾಗಿ ರಾಷ್ಟ್ರವನ್ನು ಆಳುವ ಅಧಿಕಾರವನ್ನು 2014ರ ಚುನಾವಣೆಯಲ್ಲಿ ಪಡೆದು, ಜಾತಿ ಧರ್ಮಗಳನ್ನು ಮೀರಿ ಬದುಕುತ್ತಿರುವ ಕೋಟ್ಯಾಂತರ ಭಾರತೀಯರ ಆತಂಕಕ್ಕೆ ಕಾರಣವಾಗಿದೆ. ಹಾಗಾದರೆ ಬಾಜಪದಂತಹ ಬಲಪಂಥೀಯ ರಾಜಕೀಯ ಪಕ್ಷವೊಂದು ಇಂಡಿಯಾದಂತಹ ಬಹುಸಂಸ್ಕೃತಿಯ ರಾಷ್ಟ್ರದಲ್ಲಿ ಅಧಿಕಾರ ಪಡೆಯುವುದು ಹೇಗೆ ಸಾದ್ಯವಾಯಿತು ಎಂಬುದನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತ ಹೋದರೆ ಅಚ್ಚರಿಯೇನಾಗುವುದಿಲ್ಲ. ಇವತ್ತು ಅದರ ಕಾರಣಗಳನ್ನು ಹುಡುಕುತ್ತ ಹೋಗುವುದು ಹಲವರ ದೃಷ್ಠಿಯಲ್ಲಿ ಅನಗತ್ಯವೆನಿಸಿದರೂ ಭವಿಷ್ಯದಲ್ಲಿ ಮತ್ತೆ ಅಂತಹ ಪ್ರಮಾದಗಳಾಗದಂತೆ ನೋಡಿಕೊಳ್ಳಲಾದರೂ ಆ ಕಾರಣಗಳನ್ನು ನೆನಪು ಮಾಡಿಕೊಳ್ಳಲೇ ಬೇಕಾಗುತ್ತದೆ. ಬಾಜಪದ ಬೆಳವಣಿಗೆಯನ್ನು ನಾವು ಎರಡು ಹಂತದಲ್ಲಿ ಅದ್ಯಯನ ಮಾಡಬೇಕಾಗುತ್ತದೆ. 1975ರಿಂದ 2004 ರವರೆಗೆ ಅದರ ಮೊದಲ ಭಾಗವಾದರೆ 2004ರಿಂದ 2014ರವರೆಗಿನದು ಮತ್ತೊಂದು ಭಾಗ.

ಬಾಜಪದ ಬೆಳವಣಿಗೆ (1975 ರಿಂದ 2004)

1975ರಲ್ಲಿ ಅಂದಿನ ಪ್ರದಾನಮಂತ್ರಿ ಶ್ರೀಮತಿ ಇಂದಿರಾಗಾಂದಿಯವರು ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದಾಗ ಎಲ್ಲ ರಾಜಕೀಯ ಪಕ್ಷಗಳು ಜಯಪ್ರಕಾಶ್ ನಾರಾಯಣರ ನೇತೃತ್ವದಲ್ಲಿ ಇಂದಿರಾರವರ ಸರ್ವಾಧಿಕಾರಿ ನಡವಳಿಕೆಯ ಬಗ್ಗೆ, ವಂಶಪಾರಂಪರ್ಯ ಆಡಳಿತದ ಬಗ್ಗೆ ಪ್ರತಿಭಟನೆ ನಡೆಸತೊಡಗಿದವು. ಇದಕ್ಕಾಗಿ ಅಂದಿನ ಬಹುತೇಕ ರಾಜಕೀಯ ಪಕ್ಷಗಳು ಕಾಂಗ್ರೇಸ್ಸೇತರ ರಾಜಕೀಯ ವೇದಿಕೆಯೊಂದನ್ನು ರಚಿಸಿಕೊಳ್ಳಲು ಸಿದ್ದವಾದವು. ಇವತ್ತಿನ ಬಾಜಪ ಅವತ್ತು ಜನಸಂಘದ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘಪರಿವಾರದ ಕಾರಣದಿಂದಾಗಿ ಅದು ಜನಮನ್ನಣೆ ಗಳಿಸುವಲ್ಲಿ ವಿಫಲ ಯತ್ನ ನಡೆಸುತ್ತಿತ್ತು. ಯಾವಾಗ ಕಾಂಗ್ರೆಸ್ಸೇತರ ವಿರೋಧಪಕ್ಷಗಳೆಲ್ಲ ಒಗ್ಗೂಡಿ ಜನತಾ ಪಕ್ಷವನ್ನು ಸ್ಥಾಪಿಸಿಕೊಂಡವೊ ಆಗ ಜನಸಂಘವು ಸಹ ಜನತಾಪಕ್ಷದೊಳಗೆ ಸೇರಿಕೊಂಡು ತನ್ನ ಅಸ್ಪೃಶ್ಯತೆಯನ್ನು ಸ್ವಲ್ಪ ಮಟ್ಟಿಗೆ ಕಳೆದುಕೊಳ್ಳಲು ಪ್ರಯತ್ನಿಸಿತು. ಹೀಗೆ ಹಲವು ಪಕ್ಷಗಳು ಸೇರಿ ರಚಿಸಿಕೊಂಡ ಜನತಾಪಕ್ಷ 1977 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಿತು. ಹೀಗೆ ತಾನು ಕನಸಿನಲ್ಲಿಯೂ ನಿರೀಕ್ಷಿಸದ ರೀತಿಯಲ್ಲಿ ಜನಸಂಘವು ಜನತಾಪಕ್ಷದ ಒಂದು ಭಾಗವಾಗಿ ಮೊಟ್ಟಮೊದಲ ಬಾರಿಗೆ ಅಧಿಕಾರದ ರುಚಿ ನೋಡಿತು. ಅವತ್ತು ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅದ್ವಾನಿಯವರು ಕೇಂದ್ರದಲ್ಲಿ ಸಚಿವರುಗಳಾಗಿಯೂ ಕಾರ್ಯ ನಿರ್ವಹಿಸಿದರು. ಹೀಗೆ ಜನಸಂಘಕ್ಕೆ ಒಂದು ಮಾನ್ಯತೆ ತಂದುಕೊಡುವಲ್ಲಿ ಜಯಪ್ರಕಾಶ್ ನಾರಾಯಣರ ಮತ್ತು ಸಮಾಜವಾದಿಗಳ ಪಾತ್ರದ ಬಗ್ಗೆ ಇವತ್ತು ಯಾರೇನೇ ಸಮರ್ಥನೆ ಮಾಡಿಕೊಂಡರೂ ಚಾರಿತ್ರಿಕ ಪ್ರಮಾದವೊಂದು ಜರುಗಿ ಹೋಗಿತ್ತು. ಅದುವರೆಗು ಇಂಡಿಯಾದ ರಾಜಕಾರಣದಲ್ಲಿ ಯಾವುದೇ ಜನಮನ್ನಣೆಯನ್ನಾಗಲಿ, ಯಶಸ್ಸನ್ನಾಗಲಿ ಪಡೆಯದಿದ್ದ ಸಂಘಪರಿವಾರ ಸಮಾಜವಾದಿಗಳ ಹೆಗಲ ಮೇಲೆ ಕೂತು ತನ್ನ ಭವಿಷ್ಯವನ್ನು ಕಂಡುಕೊಳ್ಳುವ ಪ್ರಯತ್ನದಲ್ಲಿ ಸಾಕಷ್ಟರ ಮಟ್ಟಿಗೆ ಸಫಲವಾಯಿತೆನ್ನಬಹುದು.

ದುರಂತವೆಂದರೆ ಬೇರೆ ಪಕ್ಷಗಳ ಕೃಪೆಯಿಂದ ಯಾವ ಸಂಘಪರಿವಾರಿಗಳು ಮೊದಲ ಬಾರಿಗೆ ಅಧಿಕಾರದ ರುಚಿ ನೋಡಿದರೋ ಅದೇ ಪರಿವಾರಿಗಳು ಸರಕಾರ ಪತನಗೊಂಡು, ಜನತಾ ಪಕ್ಷ ಹೋಳಾಗಲು ಕೂಡಾ ಕಾರಣರಾದರು. ಮಧುಲಿಮಯೆ ಅಂತವರು ಎತ್ತಿದ ರಾಷ್ಟ್ರೀಯ ಸ್ವಯಂಸಂಘದ ದ್ವಿಸದಸ್ಯನೀತಿಯ ಭಿನ್ನಭಿಪ್ರಾಯಗಳಿಂದಾಗಿ ಪತನಗೊಂಡ ಜನತಾಸರಕಾರ 1980ರಲ್ಲಿ ನಡೆದ ಮತ್ತೊಂದು ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎದುರು ಸೋಲನ್ನಪ್ಪಿ ಮತ್ತೆ ಇಂದಿರಾಗಾಂದಿಯವರ ಕೈಗೆ ಅಧಿಕಾರ ಒಪ್ಪಿಸಬೇಕಾಯಿತು. ಜನತಾ ಪಕ್ಷದಿಂದ ಹೊರಬಂದ ಜನಸಂಘ ಬಾರತೀಯ ಜನತಾ ಪಕ್ಷ ಎನ್ನುವ ಹೊಸ ಹೆಸರಿನಲ್ಲಿ ಪುನರ್ ಸ್ಥಾಪಿತವಾಗಿ ತನ್ನ ರಾಜಕಾರಣವನ್ನು ಪ್ರಾರಂಬಿಸಿತು. ಈಗಾಗಲೇ ಅಧಿಕಾರದ ರುಚ ನೋಡಿದ್ದ ಬಾಜಪ ತನ್ನ ಹೊಸ ಅವತಾರದಲ್ಲಿ ಆಕ್ರಮಣಕಾರಿ ರಾಜಕೀಯ ಶುರು ಮಾಡಿತು. ಅಲ್ಲಿಯವರೆಗು ಗಾಂದಿ ಹತ್ಯೆಯ ಕಳಂಕದ ಹಿಂಜರಿಕೆಯಲ್ಲಿದ್ದ ಜನಸಂಘ ಬಾಜಪವಾಗಿ ಬದಲಾದ ನಂತರ ಮುಕ್ತವಾಗಿ ಹಳೆಯದನ್ನೆಲ್ಲ ಜನ ಮರೆತು ಹೋಗುವಂತೆ ತನ್ನ ಸಂಘಪರಿವಾರದ ಬಿಳಲುಗಳನ್ನು ಹೆಚ್ಚಿಸುತ್ತ ಮತ್ತಷ್ಟು ಹೊಸ ಮತೀಯ ಅಂಗಸಂಸ್ಥೆಗಳನ್ನು ಪ್ರಾರಂಬಿಸಿ ಕೋಮುವಾದಿ ರಾಜಕೀಯದಲ್ಲಿ ತೊಡಗಿತು. ಇಂದಿರಾಗಾಂದಿಯವರ ಹತ್ಯೆಯ ನಂತರ ಅಧಿಕಾರಕ್ಕೆ ಬಂದ ರಾಜೀವ್ ಗಾಂದಿಯವರ ಕಾಲದಲ್ಲಿ ದಶಕಗಳಿಂದಲು ನೆನಗುದಿಗೆ ಬಿದ್ದಿದ್ದ ಬಾಬ್ರಿ ಮಸೀಧಿಯ ವಿವಾದಕ್ಕೆ ಮತ್ತೆ ಜೀವ ತುಂಬಿ ತನ್ನ ಅಂಗಸಂಸ್ಥೆಗಳ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಹೋರಾಡತೊಡಗಿತು. ದಶಕಗಳಿಂದ ಬೀಗಮುದ್ರೆ ಹಾಕಿಸಿಕೊಂಡಿದ್ದ ಮಂದಿರದ ಬೀಗವನ್ನು ತೆಗೆದು ಪೂಜೆಗೆ ಅವಕಾಶ ಕೊಟ್ಟ ರಾಜೀವರ ಅವಿವೇಕಿ ನಿರ್ದಾರ ಕೂಡ ಬಾಜಪಕ್ಕೆ ಸುವರ್ಣಾವಕಾಶವನ್ನು ಒದಗಿಸಿತು. ನಂತರ ಜನರ ಧಾರ್ಮಿಕ ಬಾವನೆಗಳನ್ನು ಕೆರಳಿಸಿ ಅವುಗಳನ್ನು ಮತಗಳನ್ನಾಗಿ ಪರಿವರ್ತಿಸುವ ಹೊಸ ಕಾರ್ಯಕ್ರಮವೊಂದನ್ನು ರೂಪಿಸಿದ ಬಾಜಪ ಅದ್ವಾನಿಯವರ ನೇತೃತ್ವದಲ್ಲಿ ಅಯೋದ್ಯೆಗೆ ರಥಯಾತ್ರೆಯನ್ನು ಆಯೋಜಿಸಿತು. ಗುಜರಾತಿನ ಸೋಮನಾಥದಿಂದ ಹೊರಟ ಈಯಾತ್ರೆಯ ಮೂಲಕ ಮಂದಿರ ನಿರ್ಮಾಣಕ್ಕೆ ಇಟ್ಟಿಗೆ ಸಂಗ್ರಹಿಸುವ ಹೆಸರಿನಲ್ಲಿ ಪ್ರತಿ ರಾಜ್ಯಗಳಲ್ಲೂ ಕೋಮುಸಂಘರ್ಷದ ಬೀಜಗಳನ್ನು ಬಿತ್ತುತ್ತ ಹೋಯಿತು. ಈ ರಥಯಾತ್ರೆ ಬಿಹಾರಕ್ಕೆ ಕಾಲಿಟ್ಟಾಗ ಬಿಹಾರದ ಆಗಿನ ಮುಖ್ಯಮಂತ್ರಿಗಳಾಗಿದ್ದ ಲಾಲು ಪ್ರಸಾದ್ ಯಾದವರು ಅದ್ವಾನಿಯವರನ್ನು ಬಂದಿಸಿ ರಥಯಾತ್ರೆಗೆ ವಿರಾಮವೊಂದನ್ನು ಇಟ್ಟರು. ಆದರೆ ಇಷ್ಟರಲ್ಲಾಗಲೇ ಸಂಘಪರಿವಾರದ ಗುಪ್ತ ಕಾರ್ಯಸೂಚಿಯಂತೆ ಕರ್ನಾಟಕ, ಗುಜರಾತ್, ಉತ್ತರ ಪ್ರದೇಶ, ಆಂದ್ರಪ್ರದೇಶಗಳಲ್ಲಿ ಕೋಮುಗಲಭೆಗಳು ನಡೆಯ ತೊಡಗಿದ್ದವು. ಈ ಅವಧಿಯಲ್ಲಿ ಮಂಡಲ್ ಆಯೋಗದ ವರದಿ ಅನುಷ್ಠಾನ ವಿರೋಧಿಸಿ ನಡೆದ ಹೋರಾಟದಲ್ಲಿ ಮೀಸಲಾತಿಯನ್ನು ವಿರೋಧಿಸುತ್ತಿದ್ದ ಮೇಲ್ಜಾತಿಯವರ ಪರ ನಿಂತ ಬಾಜಪ ಹಿಂದುಗಳ ಅದರಲ್ಲು ಮೇಲ್ಜಾತಿಗಳ ಮತಗಳ ದೃವೀಕರಣಕ್ಕೆ ಮುಂದಾಯಿತು. ನಂತರ 1991ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ 120 ಸ್ಥಾನಗಳನ್ನು ಪಡೆದ ಬಾಜಪ ತನ್ನ ಬೇರುಗಳನ್ನು ಉತ್ತರ ಭಾರತದಲ್ಲಿ ಬಿಡಲು ಪ್ರಾರಂಬಿಸಿತು. ಹೀಗೆ ಧಾರ್ಮಿಕ ಬಾವನೆಗಳನ್ನು ಕೆರಳಿಸುವುದರಿಂದ ಮತಗಳಿಸಬಹುದೆಂಬ ಸತ್ಯವನ್ನು ಅರ್ಥಮಾಡಿಕೊಂಡ ಬಾಜಪ ಅಲ್ಲಿಂದಾಚೆಗೆ ಯಾವ ಸಂಕೋಚವೂ ಇಲ್ಲದೆ ತನ್ನ ಹಿಂದೂಪರ ಬಲಪಂಥೀಯ ರಾಜಕಾರಣವನ್ನು ಮುಂದುವರೆಸತೊಡಗಿತು.

ಹೀಗೆ ಹಂತಹಂತವಾಗಿ ಬೆಳೆಯತೊಡಗಿದ ಬಾಜಪ 1999ರಲ್ಲಿ ಎನ್.ಡಿ.ಎ. ಮೈತ್ರಿಕೂಟವನ್ನು ರಚಿಸಿಕೊಂಡು ಅಧಿಕಾರಕ್ಕೆ ಬಂದಿತು. ಈ ಪ್ರಕ್ರಿಯೆಯಲ್ಲಿ ಅದುವರೆಗು ತೃತೀಯ ರಂಗದಲ್ಲಿದ್ದು ಜಾತ್ಯಾತೀತ ರಾಜಕೀಯದ ಬಗ್ಗೆ ಬೊಗಳೆ ಬಿಡುತ್ತಿದ್ದ ಅನೇಕ ಪಕ್ಷಗಳು ಬಾಜಪದ ಪರವಾಗಿ ಹೋದವು. ಕಾಂಗ್ರೆಸ್ಸಿನಲ್ಲಿನ ಸಮರ್ಥ ನಾಯಕತ್ವದ ಕೊರತೆ ಮತ್ತು ತೃತೀಯರಂಗದ ನಾಯಕರುಗಳ ಸ್ವಪ್ರತಿಷ್ಠೆಗಳು, ಅವರ ಪಾಳೆಯಗಾರಿಕೆಯ ಹಮ್ಮಿನ ಒಳಜಗಳಗಳು ಬಾಜಪದ ಬೆಳವಣಿಗೆಗೆ ನೀರು ಗೊಬ್ಬರ ಹಾಕಿ ಪೋಷಿಸಿದವು. ತದನಂತರದ ಬೆಳವಣಿಗೆಗಳು ಬಾಜಪಕ್ಕೆ ಪೂರಕವಾಗಿಯೇ ನಡೆಯುತ್ತ ಹೋಗಿದ್ದು ಇಂಡಿಯಾದ ದುರಂತವೆನ್ನಬಹುದಾದರು ನಂತರದ ಹತ್ತು ವರ್ಷಗಳ ಕಾಲ ಅದು ಕಾಂಗ್ರೇಸ್ಸಿನ ಎದುರು ಸೋಲೊಪ್ಪಿಕೊಂಡು ಸುಮ್ಮನಿರಬೇಕಾಯಿತು. ಇದು ಬಾಜಪ ಬೆಳೆದ ಮೊದಲ ಹಂತ. 

ಬಾಜಪದ ಬೆಳವಣಿಗೆ(2004 ರಿಂದ 2014)

2001 ರಿಂದ2014ರ ಮೇತಿಂಗಳವರೆಗು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಶ್ರೀ ನರೇಂದ್ರಮೋದಿಯವರ ಆಡಳಿತದಲ್ಲಿ ನಡೆದ ಗೋದ್ರಾ ಹತ್ಯಾಕಾಂಡ ಮತ್ತಿತರೇ ಕೋಮು ಸಂಘರ್ಷಗಳ ನಡುವೆಯೂ 2014 ರ ಹೊತ್ತಿಗೆ ಅದೇ ಮೋದಿಯವರು ಇಂಡಿಯಾದ ಯುವಜನತೆಯ ಐಕಾನ್ ಆಗಿ ತಮ್ಮದೇ ಆದ ಅಲೆಯೊಂದನ್ನು ಬಾಜಪದ ಪರವಾಗಿ ಸೃಷ್ಠಿಸುವಲ್ಲಿ ನೆರವಾದ ಅಂಶಗಳನ್ನು ನಾವು ಗಮನಿಸಬೇಕಕು. ಇದನ್ನು ನಾವು ಕೇವಲ ರಾಜಕೀಯವಾಗಿ ಮಾತ್ರವಲ್ಲದೆ, ನಮ್ಮ ಸಾಮಾಜಿಕ ಹಿನ್ನೆಲೆಯಲ್ಲಿಯೂ ನೋಡಬೇಕಿದೆ.

2004ರ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಯು.ಪಿ.ಎ. ಅಧಿಕಾರಕ್ಕೆ ಬಂದು ಶ್ರೀ ಮನಮೋಹನ್ ಸಿಂಗ್ ಅವರು ಪ್ರದಾನಿಯಾದರೂ ಸಹ ಅವರೆಂದೂ ಜನಸಮುದಾಯದ ನಾಯಕರಾಗಿರಲಿಲ್ಲ. ಎಂದೂ ನೇರ ಚುನಾವಣೆಯನ್ನು ಎದುರಿಸಿರದ ಅವರು ಪ್ರದಾನಿಯಾದ ನಂತರವೂ ಜನನಾಯಕರಾಗುವ ಪ್ರಯತ್ನವನ್ನು ಮಾಡಲಿಲ್ಲ. ಹಾಗೆ ಮಾಡಲು ಅವರು ಪ್ರಯತ್ನಿಸಿದ ನಿದರ್ಶನಗಳೂ ಇಲ್ಲ. ಹಾಗೆ ಪ್ರಯತ್ನಿಸಿದ್ದರೂ ಕಾಂಗ್ರೆಸ್ ಅದಕ್ಕೆ ಅವಕಾಶ ನೀಡಲೂ ಇಲ್ಲ ಎಂಬುದು ಕೂಡ ಸತ್ಯ. ಹೀಗಾಗಿ 2014ರ ಚುನಾವಣೆಯವರೆಗು ಅಧಿಕಾರ ನಡೆಸಿದ ಕಾಂಗ್ರೆಸ್ ಒಬ್ಬ ಜನನಾಯಕನ್ನು ರೂಪಿಸಲು ಸಫಲವಾಗಲಿಲ್ಲ. ಸೋನಿಯಾಗಾಂದಿಯವರು ತಮ್ಮ ಪುತ್ರ ರಾಹುಲ್ ಗಾಂದಿಯನ್ನು ರಾಜಕೀಯಕ್ಕೆ ಕರೆತಂದು 2004ರಲ್ಲಿಯೇ ಸಂಸತ್ ಸದಸ್ಯರನ್ನಾಗಿ ಮಾಡಿದರೂ ಸಹ, ಅವರು ಸರಕಾರದ ಯಾವುದೇ ಹುದ್ದೆಯನ್ನೂ ನಿರ್ವಹಿಸಲು ನಿರಾಕರಿಸಿ ರಾಷ್ಟ್ರದಲ್ಲಿ ಯುವನಾಯಕರಾಗಿ ಬೆಳೆಯಬಹುದಾಗಿದ್ದ ಅವಕಾಶವೊಂದನ್ನು ಕೈಚೆಲ್ಲಿ ಕೂತರು.ಇನ್ನು ಕಾಂಗ್ರೇಸ್ ಮತ್ತು ಬಾಜಪೇತರ ಪಕ್ಷಗಳ ಯಾವ ಪ್ರಾದೇಶಿಕ ನಾಯಕರುಗಳು ಸಹ ತಮ್ಮ ರಾಜ್ಯದ ಮಿತಿಯನ್ನು ಮೀರಿ ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಅಸ್ಥಿತ್ವವನ್ನು ಸ್ಥಾಪಿಸುವ ಪ್ರಯತ್ನ ಮಾಡಲೇ ಇಲ್ಲ. ಮಾಜಿ ಪ್ರದಾನಿ ಶ್ರೀ ದೇವೇಗೌಡರಂತವರು ಸಹ ಕರ್ನಾಟಕದಲ್ಲಿ ತಮ್ಮ ಪಕ್ಷದ ಅಸ್ಥಿತ್ವವನ್ನು ಉಳಿಸಿಕೊಳ್ಳುವ ಹೋರಾಟದಲ್ಲಿಯೇ ಕಳೆದು ಹೋದರು. ಬಿಹಾರದ ಲಾಲೂ ಪ್ರಸಾದ್ ತಮ್ಮ ಮೇಲಿನ ಕೇಸುಗಳನ್ನು ನಿಬಾಯಿಸುವಲ್ಲಿ ಮಗ್ನರಾದರೆ ಮುಲಾಯಂಸಿಂಗ್ ತಮ್ಮ ಮಗನನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯನ್ನಾಗಿ ಮಾಡುವಲ್ಲಿಯೇ ಮುಳುಗಿ ಹೋದರು. ಇನ್ನು ಆಂದ್ರದ ಚಂದ್ರಬಾಬು ನಾಯ್ಡುರವರು ಸಹ ತಮ್ಮ ರಾಜ್ಯದಲ್ಲೆದುರಾದ ಶತ್ರುಗಳನ್ನು ಹಣಿಯುವಲ್ಲೇ ಸುಸ್ತಾದಂತೆ ಕಂಡರು ಮಾಯಾವತಿಯವರು ತಮ್ಮ ದಲಿತ ಇಮೇಜಿನಿಂದ ಹೊರಬಂದು ರಾಜಕೀಯ ಮಾಡುವಲ್ಲಿ ಸೋತರು. ಜಯಲಲಿತಾಗು ಸಹ ತಮ್ಮ ಕೇಸುಗಳನ್ನು ಬಗೆಹರಿಸಿಕೊಳ್ಳುವುದೇ ದುಸ್ತರದ ಕಾರ್ಯವಾಗಿತ್ತು. ಹೀಗೆ ಇಂಡಿಯಾದ ರಾಜಕಾರಣ ಸ್ವಪ್ರತಿಷ್ಠೆಯ ಮತ್ತು ಜಾತ್ಯಾಧಾರಿತ ಪ್ರಾದೇಶಿಕ ಪಕ್ಷಗಳಿಂದ ತುಂಬಿ ಹೋಗಿ ಒಬ್ಬನೇ ಒಬ್ಬ ಜನನಾಯಕನೂ ಸೃಷ್ಠಿಯಾಗಲಿಲ್ಲ. 

ಬರ್ಟೋಲ್ಡ್ ಬ್ರೆಕ್ಟ್ ಹೇಳಿದಂತೆ ನಾಯಕನಿಲ್ಲದ ನಾಡಿಗೆ ದುರಂತ ಖಾತ್ರಿ ಅನ್ನುವ ಮಾತು ಇಂಡಿಯಾದ ಮಟ್ಟಿಗೆ ನಿಜವಾಗುತ್ತ ಹೋಯಿತು. ನಾಯಕನಿಲ್ಲದ ಒಂದು ನಾಡಿನಲ್ಲಿ ಯಾವಾಗಲು ಶೂನ್ಯತೆಯೊಂದು ಆವರಿಸುತ್ತ ಹೋಗುತ್ತದೆ. ಆ ಶೂನ್ಯವನ್ನು ಧರ್ಮ ಮತ್ತು ಸರ್ವಾಧಿಕಾರ ಮಾತ್ರ ತುಂಬಬಲ್ಲದು. ಇದನ್ನು ಅರ್ಥಮಾಡಿಕೊಂಡಂತೆ ಬಾಜಪ ತನ್ನ ಕೋಮುವಾದದ ವಿಷವನ್ನು ನಾಡಿನಾದ್ಯಂತ ಬಿತ್ತ ತೊಡಗಿತು. ಈ ಅವಧಿಯಲ್ಲಿ ಜನತೆ ಸಿನಿಕತನದತ್ತ ವಾಲತೊಡಗಿದ್ದರು. ತಮಗೆ ಸಂಬಂದಿಸಿಲ್ಲದ ಯಾವುದೇ ಸಮಸ್ಯೆಗಳಿಗು ಸ್ಪಂದಿಸುವ ಪ್ರತಿಕ್ರಿಯಿಸುವ ಆಸಕ್ತಿ ತೋರದೆ ಸಿನಿಕತನದಿಂದ ವರ್ತಿಸತೊಡಗಿದರು. ಸಮುದಾಯಗಳಲ್ಲಿ ಚಳುವಳಿಗಳು ಹೋರಾಟಗಳು ಮಾಯವಾಗುತ್ತ ಹೋದವು.ಜನತೆ ರಾಜಕಾರಣವನ್ನು ನಿರಾಸಕ್ತಿಯಿಂದ ಅಸಡ್ಡೆಯಿಂದ ನೋಡತೊಡಗಿತು. ಹೀಗೆ ಜನ ಮೌನಕ್ಕೆ ಶರಣಾಗುತ್ತ ಹೋದಂತೆ ನಮ್ಮ ಕಾರ್ಯಾಂಗ ಶಾಸಕಾಂಗ ನ್ಯಾಯಾಂಗಗಳು ಸಹ ಪಾಶ್ರ್ವವಾಯುವಿಗೆ ತುತ್ತಾದಂತೆ ವರ್ತಿಸತೊಡಗಿದವು. ರಾಷ್ಟದಲ್ಲಿ ಎಂತಹ ದುರಂತಗಳು ಸಂಭವಿಸಿದರು ಅವು ತಮಗೆ ಸಂಬಂದಿಸಿಯೇ ಇಲ್ಲವೆಂಬಂತೆ ಜನ ಮಂಪರಿನಲ್ಲಿ ಬದುಕ ತೊಡಗಿದಾಗ, ಸಣ್ಣಪುಟ್ಟ ಬಾವನಾತ್ಮಕ ವಿಚಾರಗಳಿಗು ಜನ ಬಾವೋದ್ರೇಕಗೊಳ್ಳುತ್ತ ಹೋಗುತ್ತಾರೆ. ಹೀಗೆ ನಾಯಕನಿರದ ಒಂದು ನಾಡಿನ ಜನತೆ ಒಬ್ಬ ಬಲಿಷ್ಠನಾಯಕನನ್ನು ಎದುರು ನೋಡತೊಡಗುತ್ತಾರೆ. ತಮ್ಮೆಲ್ಲ ಸಮಸ್ಯೆಗಳನ್ನು ಬಗೆಹರಿಸಬಲ್ಲಂತಹ ಒಬ್ಬ ನಾಯಕನ ಆಗಮನವಾಗದೇ ಇದ್ದಾಗ ಅಂತಹ ಶೂನ್ಯವನ್ನು ಧರ್ಮವೊಂದು ಸಮರ್ಥವಾಗಿ ತುಂಬಿ ಜನರ ಆಶೋತ್ತರಗಳನ್ನು ತಾನು ಮಾತ್ರ ಪೂರೈಸಬಲ್ಲೆನೆಂಬ ಭರವಸೆ ನೀಡತೊಡಗಿ ನಿದಾನವಾಗಿ ಅದು ತಾನೇ ಪ್ರಭುತ್ವವಾಗುವ ದಾರಿಯಲ್ಲಿ ಸಾಗತೊಡಗುತ್ತದೆ. 2000ದ ನಂತರ ಇಂಡಿಯಾದಲ್ಲಿ ಆದದ್ದು ಇಂತಹುದೇ ಬೆಳವಣಿಗೆ: ನಾಯಕನ ಕೊರತೆಯಿದ್ದ ನಾಡಿನಲ್ಲಿ ತನ್ನ ಧರ್ಮರಾಜಕಾರಣ ಶುರು ಮಾಡಿದ ಬಾಜಪ ಬಹುಸಂಖ್ಯಾತ ಹಿಂದೂ ಧರ್ಮೀಯರನ್ನು ಓಲೈಸುತ್ತ ಅಲ್ಪಸಂಖ್ಯಾತರಿಂದ ಧರ್ಮ ನಾಶವಾಗುವ ಭಯವನ್ನು ಬಿತ್ತತೊಡಗಿ ಇತಿಹಾಸವನ್ನು ತನಗೆ ಅನುಕೂಲಕರವಾಗುವ ರೀತಿಯಲ್ಲಿ ಬಳಸಿಕೊಂಡು ಜನತೆಯಲ್ಲಿ ಮತೋನ್ಮಾದವನ್ನು ಸೃಷ್ಠಿಸುತ್ತ ಹೋಯಿತು. ಅದಕ್ಕಾಗಿ ಅದು ಕಾಶ್ಮೀರದ ಸಮಸ್ಯೆಯಿಂದ ಹಿಡಿದು ಬಾಬಾಬುಡನ್ಗಿರಿ, ಬಾಬ್ರಿಮಸೀದಿ ಮುಂತಾದವನ್ನು ತನ್ನ ಕಾರ್ಯತಂತ್ರಕ್ಕೆ ಬಳಸಿಕೊಂಡಿತು. 

ಇದಕ್ಕೆ ಪೂರಕವಾಗಿ ತೊಂಭತ್ತರ ದಶಕದಲ್ಲಿ ಪ್ರಾರಂಭವಾದ ಜಾಗತೀಕರಣ ಮದ್ಯಮವರ್ಗದ ಬದುಕನ್ನು ಸಂಪೂರ್ಣವಾಗಿ ಬದಲಾಯಿಸಿ, ಇಂಡಿಯಾದ ಸಮಾಜವನ್ನು ಒಂದು ಮಾರುಕಟ್ಟೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಯಿತು. ತೊಂಭತ್ತರ ದಶಕದ ನಂತರ ಹುಟ್ಟಿದ ಯುವಜನತೆಗೆ  ಇತಿಹಾಸವಾಗಲಿ, ಸ್ವಾತಂತ್ರ ಹೋರಾಟದ ಅರಿವಾಗಲಿ, ಸಮಾಜವಾದಿ ಚಿಂತನೆಗಳ ಸಂಪರ್ಕವಾಗಲಿ ಇಲ್ಲದೆ ಬೆಳೆಯುತ್ತ ಹೋಯಿತು. ಈ ವಯೋಮಾನದ ಯುವಕರಿಗೆ ಸಹಜವಾಗಿ ಹಿಂದೂ ಮೂಲಭೂತವಾದಿಗಳ ಮತಾಂಧ ಮಾತುಗಳು ಆಕರ್ಷಕವಾಗಿ ಕಂಡಿದ್ದರೆ ಅಚ್ಚರಿಯೇನಿಲ್ಲ. ಯುವಜನತೆಯ ಈ ದೌರ್ಬಲ್ಯವನ್ನು ಬಳಸಿಕೊಂಡ ಬಾಜಪ ಇತಿಹಾಸವನ್ನು ತಿರುಚುತ್ತ, ಅನ್ಯಧರ್ಮಗಳ ಮೇಲೆ ಇಲ್ಲಸಲ್ಲದ ಗೂಬೆಗಳನ್ನು ಕೂರಿಸುತ್ತ ಯುವಜನತೆಯಲ್ಲಿ ಮತಾಂಧತೆಯ ವಿಷವನ್ನು ಹರಡುತ್ತ ಹೋಯಿತು. ಇವತ್ತು ನೀವು ಯಾವುದೇ ಸಾಮಾಜಿಕ ಜಾಲತಾಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಹಿಂದೂ ಮತೀಯವಾದದ ಕುರಿತಾಗಿ ಮುವತ್ತು ವರ್ಷದೊಳಗಿನ ಯುವಕರೇ ಹೆಚ್ಚಾಗಿ ಬರೆಯುತ್ತಿರುವುದು ಮತ್ತು ತಾವು ಓದಿಕೊಂಡ ಸಂಘ ಪರಿವಾರ ಮರುಸೃಷ್ಠಿಸಿದ ಇತಿಹಾಸವನ್ನೆ ಸತ್ಯವೆಂದು ನಂಬಿರುವ ಬಲಪಂಥೀಯರ ಒಂದು ಕಾರ್ಯಪಡೆಯನ್ನೇ ಕಾಣಬಹುದು. ಹೀಗೆ ಬಾಜಪ ಮತ್ತು ಅದರ ಸಂಘಪರಿವಾರದ ಸದಸ್ಯ ಸಂಸ್ಥೆಗಳು ಯುವಜನತೆಯನ್ನು ಗುರಿಯಾಗಿಸಿಟ್ಟುಕೊಂಡು ದೇಶಭಕ್ತಿ ಮತ್ತು ಧರ್ಮ ಎರಡೂ ಒಂದೇ ಎನ್ನುವ ಹೊಸ ಸಿದ್ದಾಂತವನ್ನು ಹರಡುತ್ತ ಹೋದವು. ಹೀಗಾಗಿ ದೇಶದ ಒಟ್ಟು ಮತದಾರರ ಪೈಕಿ ಶೇಕಡಾ ಐವತ್ತಕ್ಕೂ ಹೆಚ್ಚಿರುವ ಯುವಪೀಳಿಗೆ ಸಹಜವಾಗಿ ಬಾಜಪದತ್ತ ವಾಲಿತು.

ಈ ಸಂದರ್ಭದಲ್ಲಿಯೇ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರಮೋದಿಯವರನ್ನು ಹಿಂದೂ ಧರ್ಮ ರಕ್ಷಕನೆಂದೂ, ಅಭಿವೃದ್ದಿಯ ಹರಿಕಾರನೆಂದು ಬಿಂಬಿಸಿದ ಬಾಜಪ, ನಾಯಕನೊಬ್ಬನ ನಿರೀಕ್ಷೆಯಲಿದ್ದ ಜನತೆಗೆ ಬಲಪಂಥೀಯ ನಾಯಕನೊಬ್ಬನ್ನು ನೀಡಿತು. ಇದನ್ನು ತನ್ನ ಅನುಕೂಲಕ್ಕೆ ಬಳಸಿಕೊಂಡ ಮೋದಿಯವರು ಒಬ್ಬ ಬಲಿಷ್ಠ,ಬಲಪಂಥೀಯ ನಾಯಕ ಬಳಸುವ ಬಾಷೆಯನ್ನು, ಬಾಷಣ ಮಾಡುವ ಶೈಲಿಯನ್ನು, ಅದಕ್ಕೆ ತಕ್ಕಂತಹ ದೈಹಿಕ ವರ್ತನೆಗಳನ್ನು ಆವಾಹಿಸಿಕೊಂಡು ದೇಶಭಕ್ತಿಯ ಬಗ್ಗೆ, ಹಿಂದಿನವರ ಭ್ರಷ್ಟಾಚಾರದ ಬಗ್ಗೆ, ಮುಂದೆ ತಾವು ತರಲಿರುವ ಅಮೂಲಾಗ್ರ ಬದಲಾವಣೆಗಳ ಬಗ್ಗೆ ವೀರಾವೇಶದಿಂದ ಮಾತಾಡಿ ರಾಷ್ಟ್ರ ಸುತ್ತಲು ಪ್ರಾರಂಬಿಸಿದರು. ಹೀಗೆ ಜನರ ಕನಸುಗಳನ್ನು ತಮ್ಮ ಅನುಕೂಲಕ್ಕೆ ಬಳಸಿಕೊಂಡ ಬಾಜಪ ಜನತೆಗೆ ಒಬ್ಬ ಬಲಪಂಥೀಯ ನಾಯಕನನ್ನು ನೀಡಿತು. ತನ್ನನ್ನು ಬೆಂಬಲಿಸುವ ಉದ್ಯಮಿಗಳನ್ನು, ಮಾಧ್ಯಮಗಳನ್ನೂ ಬಳಸಿಕೊಂಡ ಬಾಜಪ ಮೋದಿ ಪರವಾದ ಅಲೆಯೊಂದನ್ನು ಸೃಷ್ಠಿಸುವಲ್ಲಿ ಯಶಸ್ವಿಯಾಯಿತು. ಮೋದಿ ಅಲೆ ಎನ್ನುವುದು ಸಮೂಹ ಸನ್ನಿಯ ರೂಪ ಪಡೆದು 2014 ರ ಹೊತ್ತಿಗೆ ಅಧಿಕಾರ ಪಡೆಯುವಲ್ಲಿಗೆ ಬಂದು ನಿಂತಿತು.

ಹೀಗೆ ಬಾಜಪ ವಿರೋಧಪಕ್ಷಗಳ ಪ್ರತಿರೋಧವಿರದೆ ಅಧಿಕಾರ ಪಡೆಯುವಲ್ಲಿ ಪೂರಕವಾದ ಅಂಶಗಳು ಈ ಕೆಳಕಂಡಂತಿವೆ: 

ಬಾಜಪದ ಮತಾಂಧರಾಜಕಾರಣ, ಸಮರ್ಥನಾಯಕನನನ್ನು ಸೃಷ್ಠಿಸಿ ಹೋರಾಡಲಾಗದ ಕಾಂಗ್ರೆಸ್ಸಿನ ದೌರ್ಬಲ್ಲ, ಒಂದಾಗಿ ರಾಜಕರಣ ಮಾಡದ ವಿರೋಧಪಕ್ಷಗಳ ಒಳಜಗಳಗಳು, ಬಂಡವಾಳಶಾಹಿ ಉದ್ಯಮಪತಿಗಳ ಹಣಕಾಸಿನ ಬೆಂಬಲ, ತಮ್ಮನ್ನು ತಾವೇ ಮಾರಿಕೊಂಡ ಬಹುತೇಕ ರಾಷ್ಟ್ರೀಯ ಮಾಧ್ಯಮಗಳೆಲ್ಲ ಸೇರಿ ಬಾಜಪದ ಪರವಾಗಿ ಕೆಲಸ ಮಾಡಿ ಅದನ್ನು ಕೇಂದ್ರದ ಗದ್ದುಗೆಯಲ್ಲಿ ಕೂರಿಸಲು ಯಶಸ್ವಿಯಾದವು. ಇಷ್ಟಾದರು ಇನ್ನೂ ಇಂಡಿಯಾದ ಹಲವು ಭಾಗಗಳು ಬಾಜಪದ ತೆಕ್ಕೆಗೆ ಬಂದಿಲ್ಲ. ಉತ್ತರದ ಅನೇಕ ರಾಜ್ಯಗಳಲ್ಲಿ ಈಗಾಗಲೇ ಅಧಿಕಾರ ನಡೆಸುತ್ತಿರುವ ಬಾಜಪ ಬರಲಿರುವ ರಾಜ್ಯವಿದಾನಸಭಾ ಚುನಾವಣೆಗಳಲ್ಲಿ ಗೆಲುವು ಸಾದಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. 

ಬಾಜಪದ ಕೋಮುರಾಜಕಾರಣದ ವಿರುದ್ದ ಸೃಷ್ಠಿಯಾಗಬೇಕಿರುವ ಮಹಾಮೈತ್ರಿಕೂಟ

ಮತಾಂಧ ರಾಜಕಾರಣದ ಚುಂಗು ಹಿಡಿದು ಕೊಂಡು, ಸಂಘಪರಿವಾರದ ಗುಪ್ತ ಕಾರ್ಯಸೂಚಿಯ ಆಣತಿಯಂತೆ ರಾಜಕಾರಣ ಮಾಡುತ್ತ ಬಂದಿರುವಬಾಜಪದ ಸಿದ್ದಾಂತಗಳು ನಮ್ಮ ಬಹು ಸಂಸ್ಕೃತಿಯ ಸಮಾಜದ ಮಟ್ಟಿಗೆ ಪ್ರತಿಗಾಮಿಯಾಗಿರುತ್ತವೆ. ಪಶ್ಚಿಮದ ಏಕಧರ್ಮ, ಏಕಬಾಷೆ, ಏಕರಾಷ್ಟ ಎಂಬ ಸಿದ್ದಾಂತಗಳಿಗೆ ಪೂರಕವಾಗಿ ತನ್ನ ಮತಾಂಧ ರಾಜಕಾರಣವನ್ನು ಮಾಡುತ್ತಿರುವ ಬಾಜಪ ತನ್ನ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಇಂತಹ ಸನ್ನಿವೇಶವನ್ನು ಸೂಕ್ತವಾಗಿ ಬಳಸಿಕೊಳ್ಳಲು ಯತ್ನಿಸುವುದು ಖಚಿತ. ಯಾವುದೇ ಬಲಪಂಥೀಯ ರಾಜಕೀಯ ಕೂಟವೂ ವಿರೋಧಿಗಳ ಇರುವಿಕೆಯನ್ನು ಬಯಸುವುದಿಲ್ಲ. ಆದರಿಂದ ಅದು ದುರ್ಬಲಗೊಂಡ ಕಾಂಗ್ರೆಸ್ಸಿನ ಜೊತೆಜೊತೆಗೆ ಪ್ರಾದೇಶಿಕ ಪಕ್ಷಗಳನ್ನೂ ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತ ಹೋಗುತ್ತದೆ. ಅದರ ಇಂತಹ ಸಂಚಿಗೆ ಬಲಿಯಾದ ಪ್ರಾದೇಶಿಕ ಪಕ್ಷಗಳು ಅನಿವಾರ್ಯವಾಗಿ ರಾಷ್ಟ್ರ ಮಟ್ಟದಲ್ಲಿ ಅದರ ನೇತೃತ್ವವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಇಂತಹ ಬೆಳವಣಿಗೆಯಿಂದ ಪ್ರಾದೇಶಿಕ ಹಿತಾಸಕ್ತಿಗಳು ನಗಣ್ಯವಾಗಿ ಐಕ್ಯತೆ ಮತ್ತು ಬಲಿಷ್ಠ ರಾಷ್ಟ್ರದಹೆಸರಲ್ಲಿ ಸ್ಥಳೀಯವಾದ ಎಲ್ಲ ಪ್ರಜಾತಂತ್ರದ ವ್ಯವಸ್ಥೆಗಳನ್ನು ಅದು ನಾಶಪಡಿಸುತ್ತ ಹೋಗುತ್ತದೆ. ಇಂತಹದೊಂದು ಅಪಾಯ ಒಂದೆರಡು ದಿನಗಳಲ್ಲಿ ವರ್ಷಗಳಲ್ಲಿ ಆಗದಿರಬಹುದು. ಆದರೆ ಒಂದು ರಾಷ್ಟ್ರದ ಇತಿಹಾಸದಲ್ಲಿ ತೀರಾ ದೀರ್ಘವೆನಿಸದ ಐದರಿಂದ ಹತ್ತು ವರ್ಷಗಳಲ್ಲಿ ಈ ಬೆಳವಣಿಗೆಗಳು ಕ್ಷಿಪ್ರಗತಿಯಲ್ಲಿ ನಡೆದು ಬಿಡಬಹುದು.

ಆದ್ದರಿಂದ ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು, ಇಂಡಿಯಾದ ಎಲ್ಲ ಸಮುದಾಯ -ಸಂಸ್ಕೃತಿಗಳ ಉಳಿವಿಗಾಗಿ ಬಾಜಪಕ್ಕೆ ಸವಾಲೊಡ್ಡಬಲ್ಲ ಒಂದು ಪ್ರಬಲ ಶಕ್ತಿಯ ಅಗತ್ಯ ಇವತ್ತು ಹಿಂದೆಂದಿಗಿಂತಲೂ ಹೆಚ್ಚಿದೆ. ಹೀಗಾಗಿಯೇ ಇವತ್ತು ಪ್ರಾದೇಶಿಕ ಪಕ್ಷಗಳು ಸಮಾನಮನಸ್ಕ ರಾಜಕೀಯ ವೇದಿಕೆಯೊಂದನ್ನು ರಚಿಸಿಕೊಂಡು ತಮ್ಮತಮ್ಮ ರಾಜ್ಯಗಳಲ್ಲಿ ಬಾಜಪವನ್ನು ಎದುರಿಸಿ ನಿಲ್ಲುವ ಸವಾಲನ್ನು ಸ್ವೀಕರಿಸಬೇಕಾಗಿದೆ. 

ಬಾಜಪವನ್ನು ಎದುರಿಸುವಲ್ಲಿ ಕಾಂಗ್ರೆಸ್ ವಿಫಲವಾದರೂ ಪ್ರಾದೇಶಿಕ ಪಕ್ಷಗಳು ಮಾತ್ರ ಗಟ್ಟಿಯಾಗಿ ನೆಲೆ ನಿಂತು ಬಾಜಪವನ್ನು ಹಿಮ್ಮೆಟ್ಟಿಸಬಲ್ಲವು. ಬಾಜಪದ ಮತಾಂಧ ರಾಜಕಾರಣದ ಮತ್ತು ಸಾಂಸ್ಕೃತಿಕ ರಾಜಕಾರಣದ ತಂತ್ರಗಾರಿಕೆಗೆ ಉತ್ತರ ನೀಡುವಲ್ಲಿ ಕಾಂಗ್ರೇಸ್ ಸೋತ ಕಡೆ ಪ್ರಾದೇಶಿಕ ಪಕ್ಷಗಳು ಖಡಕ್ಕಾಗಿ ಉತ್ತರ ನೀಡುತ್ತಿವೆ. 2015ರಲ್ಲಿ ನಡೆದ ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯಲ್ಲಿ ನಿತೀಶ್ ಲಾಲೂ ಸೇರಿ ರಚಿಸಿಕೊಂಡ ಮಹಾಘಟಬಂದನ್ ಇದಕ್ಕೊಂದು ತಾಜಾ ಉದಾಹರಣೆ.ಆದರೆ ಇದನ್ನು ಅರ್ಥ ಮಾಡಿಕೊಳ್ಳಬೇಕಾದ ಉಳಿದ ಪ್ರಾದೇಶಿಕ ಪಕ್ಷಗಳ ನಾಯಕರುಗಳಿನ್ನೂ ಎಚ್ಚರಗೊಂಡಂತೆ ಕಾಣುತ್ತಿಲ್ಲ. ಕಾಂಗ್ರೆಸ್ಸನ್ನು ಹೊರತು ಪಡಿಸಿಯೂ ಪ್ರಾದೇಶಿಕ ಪಕ್ಷಗಳು ಬಾಜಪವನ್ನು ಎದುರಿಸುವ ಬಹುದೊಡ್ಡ ಶಕ್ತಿಯನ್ನು ಹೊಂದಿವೆ. ಇನ್ನುಳಿದ ರಾಜ್ಯಗಳಲ್ಲಿಯೂ ಪ್ರಾದೇಶಿಕ ನಾಯಕರುಗಳು ಇದ್ದು ಮುಂದಿನ ದಿನಗಳಲ್ಲಿ ಅವರ ರಾಜ್ಯಗಳಲ್ಲಿ ನಡೆಯುವ ವಿದಾನಸಭೆಯ ಚುನಾವಣೆಗಳು ಅವರ ಬಲಪ್ರದರ್ಶನಕ್ಕೆ ಸಾಕ್ಷಿಯಾಗಲಿವೆ. ಅಂದರೆ ಎಂಬತ್ತನೇ ದಶಕದ ಅಂತ್ಯದಲ್ಲಿ ರಚನೆಯಾದ ಕಾಂಗ್ರೇಸ್ ವಿರೋಧಿ ಮೈತ್ರಿಕೂಟದ ರೀತಿಯೇ ಇವತ್ತು ಬಾಜಪೇತರ ಪಕ್ಷಗಳ ಮೈತ್ರಿಕೂಟವೊಂದು ರಚನೆಯಾಗಬೇಕಿದೆ. ಆ ದಿನಗಳಲ್ಲಿ ಅಂತಹದೊಂದು ಕೂಟ ರಚನೆಗೆ ಬಾರಿ ಉತ್ಸಾಹದಿಂದ ಮತ್ತು ಪ್ರಾಮಾಣಿಕವಾಗಿ ಪ್ರಯತ್ನ ನಡೆಸಿದ್ದು ನಮ್ಮ ಎಡಪಕ್ಷಗಳೇ.ಇವತ್ತಿನ ಸನ್ನಿವೇಶದಲ್ಲಿಯೂ ಮತ್ತೆ ಎಡಪಕ್ಷಗಳೇ ಇಂತಹದೊಂದು ವೇದಿಕೆ ರಚನೆಗೆ ಮುಂದಾಗಿ ಮುನ್ನಡಿ ಬರೆಯಬೇಕಾಗಿದೆ. ಯಾಕೆಂದರೆ ಈಗಿರುವ ಪ್ರಾದೇಶಿಕ ಪಕ್ಷಗಳ ನಾಯಕರುಗಳನ್ನು ಒಂದೇ ವೇದಿಕೆಯಡಿ ಕರೆತಂದು ಮಾತುಕತೆಗೆ ಕೂರಿಸಲು ಬೇರಾವ ಶಕ್ತಿಗಳಿಗೂ ಸಾದ್ಯವಿಲ್ಲ. ನನಗನ್ನಿಸುವಂತೆ ತನ್ನ ಕೋಮುವಾದಿ ವಿರೋಧಿ ಮತ್ತು ಬಂಡವಾಳಶಾಹಿ ವಿರೋಧಿ ತತ್ವಗಳ ಬಗ್ಗೆ ಕಿಂಚಿತ್ತೂ ರಾಜಿಯಾಗದೆ ರಾಜಕಾರಣ ಮಾಡುತ್ತಿರುವ ಎಡಪಕ್ಷಗಳಿಗೆ ಮಾತ್ರ ಅಂತಹದೊಂದು ನೈತಿಕ ಶಕ್ತಿಯಿದೆಯೆಂದು ನಾನು ನಂಬಿದ್ದೇನೆ.

ಮುಂದಿನ ವರ್ಷ ಎದುರಾಗಲಿರುವ ಚುನಾವಣೆಗಳಿಗೂ ಮುನ್ನ ಇಂತಹ ಮೈತ್ರಿ ಸಾದ್ಯವಾಗುವುದಾದರೆ?

ಮುಂದಿನ ವರ್ಷಕ್ಕೆ ಅಂದರೆ 2017ಕ್ಕೆ ಉತ್ತರಪ್ರದೇಶ, ಉತ್ತರಾಕಾಂಡ್, ಪಂಜಾಬ್, ಗೋವಾ, ಮಣಿಪುರಗಳಲ್ಲಿ ಚುನಾವಣೆಗಳು ನಡೆಯ ಬೇಕಾಗಿದ್ದು ಬಾಜಪದ ಶಕ್ತಿಯನ್ನು ಅವು ಮತ್ತೊಮ್ಮೆ ಒರೆಹಚ್ಚಲಿವೆ. ಅಷ್ಟರ ಒಳಗಾಗಿ ಆಯಾ ರಾಜ್ಯಗಳಿಗೆ ಸೀಮಿತವಾಗಿ ಇಂತಹದೊಂದು ಮಹಾ ಮೈತ್ರಿಕೂಟ ರಚನೆಯಾಗುವುದೇ ಆದರೆ ಅದು ಬಾಜಪದ ಪಾಲಿಗೆ ಕಷ್ಟಕರ ಚುನಾವಣೆಗಳಾಗಬಹುದು.ಅದರಲ್ಲೂ ಮುಖ್ಯವಾಗಿ ಉತ್ತರ ಪ್ರದೇಶದ ವಿದಾನಸಭಾ ಚುನಾವಣೆಗಳು ತೀವ್ರ ಕುತೂಹಲ ಮೂಡಿಸಿವೆ. ಕಾರಣ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಜಪ ಬಾರಿ ಜಯಗಳಿಸಿದ್ದು, ಅಲ್ಲೀಗ ಸಮಾಜವಾದಿ ಪಕ್ಷ ಅಧಿಕಾರದಲ್ಲಿರುವುದು. ಜೊತೆಗೆ ಮುಲಾಯಂಸಿಂಗ್ ಯಾದವ್ ಮತ್ತು ಮಾಯಾವತಿಯವರಂತಹ ಘಟಾನುಘಟಿ ನಾಯಕರುಗಳು ಎರಡು ಪ್ರಾದೇಶಿಕ ಪಕ್ಷಗಳನು ಮುನ್ನಡೆಸುತ್ತಿರುವುದಾಗಿದೆ.ಬಹುಜನಪಕ್ಷ ಮತ್ತು ಸಮಾಜವಾದಿ ಪಕ್ಷಗಳು ಬಾಜಪವನ್ನು ಹೇಗೆ ಎದುರಿಸಿ ನಿಲ್ಲುತ್ತವೆಯೆಂಬುದೇ ಸದ್ಯಕ್ಕಿರುವ ಪ್ರಶ್ನೆ. ಬಾಜಪದ ಮತಾಂಧ ರಾಜಕಾರಣದ ವಿರುದ್ದದ ಹೋರಾಟದಲ್ಲಿ ಈ ಎರಡೂ ಪಕ್ಷಗಳ ಜೊತೆ ರಾಜ್ಯದ ಗಡಿಭಾಗದಲ್ಲಿ ಪ್ರಬಲವಾಗಿರುವ ನಿತೀಶರ ಸಂಯುಕ್ತ ಜನತಾದಳ,ಲಾಲೂ ಪ್ರಸಾದ್ ಯಾದವರ ರಾಷ್ಟ್ರೀಯ ಜನತಾದಳ,ಅಜಿತ್ ಸಂಗ್ ರವರ ಲೋಕದಳ ಪಕ್ಷಗಳು ಸೇರಿಕೊಂಡರೆ ಬಾಜಪದ ಜಯವನ್ನು ತಡೆಯ ಬಹುದಾಗಿದೆ. ಇಲ್ಲಿ ಗಂಬೀರವಾದ ಸಮಸ್ಯೆ ಇರುವುದು ಮಾಯಾವತಿ ಮತ್ತು ಮುಲಾಯಂ ನಡುವಿನ ಜಟಾಪಟಿ. ಇವರಿಬ್ಬರೂ ರಾಷ್ಟ್ರದ ಹಿತದೃಷ್ಠಿಯಿಂದ ತಮ್ಮ ಪ್ರತಿಷ್ಠೆಯನ್ನು ಬಿಟ್ಟು ಮೈತ್ರಿಗೆ ಮುಂದಾದರೆ ಬಹುಶ: ಬಾಜಪ ಅತ್ಯಂತ ಹೀನಾಯವಾಗಿ ಸೋಲುವುದು ಶತಸಿದ್ದ.

ಇನ್ನು ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಆಳವಾಗಿ ಬೇರು ಬಿಡುತ್ತಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿತ್ತು. ಇದೀಗ ಅಲ್ಲಿನ ಅಕಾಲಿದಳ ಮತ್ತು ಬಾಜಪ ಮೈತ್ರಿಕೂಟಕ್ಕೆ ಗೆಲುವು ಸುಲಭಸಾದ್ಯವೇನಲ್ಲ. ಇದುವರೆಗು ಕಾಂಗ್ರೇಸ್ ಮತ್ತು ಅಕಾಲಿದಳ ಮೈತ್ರಿಕೂಟದ ನಡುವೆ ನಡೆಯುತ್ತಿದ್ದ ನೇರ ಹಣಾಹಣಿಯ ಬದಲು ತ್ರಿಕೋನ ಸ್ಪರ್ದೆ ಏರ್ಪಡಲಿದ್ದು ಅಕಾಲಿದಳದ ಮೈತ್ರಿಕೂಟ ಗೆಲ್ಲಲು ಕಷ್ಟಪಡಬೇಕಾಗಿದೆ.

ಇನ್ನು ಉತ್ತರಕಾಂಡದಲ್ಲಿ ಸದ್ಯ ಕಾಂಗ್ರೆಸ್ ಆಳ್ವಿಕೆ ನಡೆಸುತ್ತಿದ್ದು ಇತ್ತೀಚೆಗೆ ಬಾಜಪ ಅಲ್ಲಿ ಕಾಂಗ್ರೆಸ್ ಶಾಸಕರನ್ನು ಪಕ್ಷಾಂತರಕ್ಕೆ ಪ್ರಚೋದಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ನ್ಯಾಯಾಲಯ ಅನೂರ್ಜಿತಗೊಳಿಸಿದ ಪ್ರಕರಣ ಮತದಾರರ ಮನಸಿನಲ್ಲಿ ಬಾಜಪದ ಬಗ್ಗೆ ಬೇಸರವುಂಟು ಮಾಡಿದ್ದು. ಕಾಂಗ್ರೇಸ್ಸಿಗೆ ಅನುಕಂಪದ ಆಸರೆ ದೊರೆಯಬಹುದಾಗಿದೆ. ಅದೂ ಅಲ್ಲದೆ ಮುಖ್ಯಮಂತ್ರಿ ರಾಬತ್ ವಿಶ್ವಾಸ ಮತ ಯಾಚಿಸುವ ಸಂದರ್ಭದಲ್ಲಿ ಬಹುಜನ ಪಕ್ಷದ ಶಾಸಕರು ಅವರಿಗೆ ಬೆಂಬಲ ನೀಡಿದ್ದರು. ಇದರ ಹೊರತಾಗಿಯು ಅಲ್ಲಿ ಸಾಕಷ್ಟು ಪ್ರಬಾವ ಹೊಂದಿರುವ ಲಾಲೂ ಪ್ರಸಾದ್, ಮುಲಾಯಂ, ಮಾಯಾವತಿಯವರು ಒಂದಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಾಂಗ್ರೇಸ್ ಮತ್ತು ಬಾಜಪದ ಸೋಲಿಗೆ ಕಾರಣವಾಗಬಹುದಾಗಿದೆ.ಇನ್ನು ಗೋವಾದಲ್ಲಿ ಬಾಜಪ ಅಧಿಕಾರದಲ್ಲಿದ್ದರೂ ಮನೋಹರ್ ಪಣಿಕ್ಕರ್ ರಾಷ್ಟ್ರ ರಾಜಕೀಯಕ್ಕೆ ಬಂದ ನಂತರ ಅಲ್ಲಿನ ಬಾಜಪ ಶಕ್ತಿಕಳೆದುಕೊಂಡಂತೆ ಕಾಣುತ್ತದೆ. ಆಡಳಿತ ವಿರೋಧಿ ಅಲೆಯೇನಾದರು ಅಲ್ಲಿ ಬೀಸಿದರೆ ಬಾಜಪ ಗೆಲ್ಲುವುದು ಕಷ್ಟವಾಗಲಿದೆ.ಮಣಿಪುರದಲ್ಲಿ ಕಾಂಗ್ರೇಸ್ ಆಳ್ವಿಕೆ ನಡೆಸುತ್ತಿದ್ದು ಸ್ಥಳೀಯ ಪಕ್ಷಗಳು ಸಹ ಬಲಾಡ್ಯವಾಗಿವೆ..

ಇವೆಲ್ಲವನ್ನೂ ಸೂಕ್ಷ್ಮವಾಗಿ ಯಾವುದೇ ಪೂರ್ವಾಗ್ರಹವಿಲ್ಲದೆ ನೋಡಿದರೆ ಮುಂದಿನ ದಿನಗಳಲ್ಲಿ ಬಾಜಪ ತಾನಂದು ಕೊಂಡಂತೆ ಸಲೀಸಾಗಿ ಗೆಲ್ಲುತ್ತಾ ಹೋಗುವುದು ಅಸಾದ್ಯದ ಮಾತು. ಮುಂದೆ ನಡೆಯಲಿರುವ ವಿದಾನಸಭಾ ಚುನಾವಣೆಗಳ ಪಲಿತಾಂಶಗಳೇನೇ ಆಗಿರಲಿ, ಪ್ರಾದೇಶಿಕ ಪಕ್ಷಗಳ ಕಾರ್ಯತಂತ್ರದ ಆಧಾರದ ಮೇಲೆ 2019ರ ಲೋಕಸಭಾ ಚುನಾವಣೆಯಲ್ಲಿ ಬಾಜಪದ ಸೋಲು ಗೆಲುವು ನಿರ್ದಾರವಾಗಲಿದೆ. ಆದರೆ ಇಂತಹ ಕಾರ್ಯತಂತ್ರ ಹೇಗಿರಬೇಕೆಂದರೆ ಬಾಜಪೇತರ ಪಕ್ಷಗಳು ಒಂದಾಗಿ ನಿಲ್ಲುವಂತಿರಬೇಕು

ಬಿಹಾರದಲ್ಲಿ ನಡೆದ ಮಹಾಘಟಬಂದನ್ ರಾಷ್ಟ್ರ ಮಟ್ಟದಲ್ಲೇನಾದರು ನಡೆದರೆ ಮುಂದಿನ ಚುನಾವಣೆಯ ದಿಕ್ಕೇ ಬದಲಾಗುವ ಸಂಭವವಿದೆ. ಆದರೆ ಈ ಮೈತ್ರಿ ಬಾಜಪ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನಾಂತರ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ. ಏಕೆಂದರೆ ತಮ್ಮನ್ನು ಕಳೆದ ವಿದಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ವಿರೋದಿಸಿದ ಕಾಂಗ್ರೇಸ್ಸನ್ನು ಮಮತಾ ಬ್ಯಾನರ್ಜಿಯಾಗಲಿ ಜಯಲಲಿತಾ ಆಗಲಿ ಒಪ್ಪಿಕೊಳ್ಳಲಾರರು. ಈ ದಿಸೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ದೂರವಿಟ್ಟು ಪ್ರಾದೇಶಿಕ ಪಕ್ಷಗಳು ಒಂದು ಮಹಾಮೈತ್ರಿಕೂಟವನ್ನು ರಚಿಸಿಕೊಂಡದ್ದೇ ಆದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರ ಮುಂದಿನ ಹಾದಿ ಕಠಿಣವಾಗಲಿದೆ. 

ನಿತೀಶ್ ಕುಮಾರ್, ಜಯಲಲಿತಾ ಹಾಗು ಮಮತಾ ಬ್ಯಾನರ್ಜಿಯವರು ಸದ್ಯದ ಮಟ್ಟಿಗೆ ತಮ್ಮ ರಾಜ್ಯಗಳಲ್ಲಿ ಬಾಜಪ ಮತ್ತು ಕಾಂಗ್ರೆಸ್ ಎನ್ನುವ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿಯೂ ಅವರುಗಳು ಒಂದಾಗಿ ಕಾರ್ಯನಿರ್ವಹಿಸುವ ಸಾದ್ಯತೆ ಹೆಚ್ಚಿದೆ. ಯಾಕೆಂದರೆ ಎಲ್ಲಿಯವರಗು ಈ ರಾಷ್ಟ್ರೀಯ ಪಕ್ಷಗಳು ಬಲಾಢ್ಯವಾಗಿರುತ್ತವೆಯೊಅಲ್ಲಿಯವರೆಗು ಪ್ರಾದೇಶಿಕ ಪಕ್ಷಗಳನ್ನು ನೆಮ್ಮದಿಯಾಗಿರಲು ಅವು ಬಿಡಲಾರವು ಎನ್ನುವ ಸತ್ಯ ಅವರಿಗೆ ಗೊತ್ತಿದೆ. ಇದರಲ್ಲಿ ಬಹಳ ಮುಖ್ಯವಾಗಿ ನಿತೀಶ್ ಕುಮಾರ್ ಬಹಳ ಆಕ್ರಮಣಕಾರಿಯಾಗಿ ಎರಡೂಪಕ್ಷಗಳನ್ನು ಎದುರಿಸಿ ನಿಂತು ರಾಷ್ಟ್ರ ಮಟ್ಟದಲ್ಲಿ ಬೆಳೆಯುವ ಇರಾದೆ ಹೊದಿದ್ದಾರೆ. ಬಿಹಾರದ ಆಚೆಗೂ ಅವರ ಆಸಕ್ತಿ ಇರುವುದರಿಂದಲೇ ಅವು ಮೊನ್ನೆ ನಡೆದ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗಳಲ್ಲಿ ತಮ್ಮ ಉಮೇದುವಾರರನ್ನು ಹಾಕಿದ್ದರು. ಇನ್ನು ಸಮಯ ಸರಿಯೆನ್ನಿಸಿದರೆ ಜಯಲಲಿತಾಸಹ ರಾಷ್ಟ್ರ ರಾಜಕಾರಣಕ್ಕೆ ದುಮುಕಲು ಸಿದ್ದರಾಗಿದ್ದಾರೆ. ಇನ್ನು ಮಮತಾ ಬ್ಯಾನರ್ಜಿ ಕೇಂದ್ರಸಚಿವೆಯಾಗಿದ್ದು ಇಡೀರಾಷ್ಟ್ರವನ್ನೇ ಸುತ್ತಿದವರು, ಅವರಿಗೂ ರಾಷ್ಟ್ರ ರಾಜಕಾರಣ ಹೊಸದೇನಲ್ಲ. ಇನ್ನು ಉತ್ತರ ಪ್ರದೇಶದಲ್ಲಿ ಮುಂದಿನ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇ ಆದರೆ ಮಾಯಾವತಿಯವರೂ ಸಹ ಇವರೊಂದಿಗೆ ಕೈ ಜೋಡಿಸಬಹುದಾಗಿದೆಇನ್ನು ಮುಲಾಯಂ ಸಿಂಗ್ ಸಹ ರಾಷ್ಟ್ರವ್ಯಾಪಿ ಗೊತ್ತಿರುವ ನಾಯಕರೇ ಆಗಿದ್ದು ಕರ್ನಾಟಕದಂತ ರಾಜ್ಯದಲ್ಲಿಯೂ ಸ್ವಲ್ಪ ಮಟ್ಟಿಗೆ ಅವರ ಪ್ರಬಾವವಿದೆ

ಇಂತಹದೊಂದು ಮೈತ್ರಿಕೂಟ ಸೃಷ್ಠಿಯಾಗುವುದೇ ಆದಲ್ಲಿ ಅದಕ್ಕೆ ರಾಷ್ಟ್ರದ ಇತರೇ ರಾಜ್ಯಗಳ ಹಲವಾರು ಬಲಾಢ್ಯ ನಾಯಕರುಗಳ ಪ್ರಾದೇಶಿಕ ಪಕ್ಷಗಳೂ ಸೇರಬಹುದಾದ ಸಾದ್ಯತೆಯಿದ್ದು, ಅವುಹೀಗಿವೆ: ಬಿಜುಜನತಾದಳ (ನವೀನ್ಪಟ್ನಾಯಕ್,), ಜನತಾದಳ (ಹೆಚ್.ಡಿ.ದೇವೇಗೌಡ), ವೈ.ಎಸ್.ಆರ್. ಕಾಂಗ್ರೆಸ್ (ಜಗನ್ಮೋಹನ ರೆಡ್ಡಿ), ತೆಲಂಗಾಣ ರಾಷ್ಟ್ರೀಯ ಸಮಿತಿ (ಚಂದ್ರಶೇಖರರಾವ್), ನ್ಯಾಷನಲ್ ಕಾನ್ಫರೆನ್ಸ್ (ಉಮರ್ ಅಬ್ದುಲ್ಲಾ) ಆಮ್ಆದ್ಮಿ (ಅರವಿಂದಕೇಜ್ರೀವಾಲ್), ಎನ್.ಸಿ.ಪಿ. (ಶರದಪವಾರ್), ರಾಷ್ಟ್ರೀಯ ಜನತಾದಳ (ಲಾಲೂಪ್ರಸಾದ್ ಯಾದವ್) ಬಹುಜನಪಕ್ಷ ( ಮಾಯಾವತಿ), ಅಸ್ಸಾಮಿನ ಏ.ಐ.ಯು.ಡಿ.ಎಫ್ ಹಾಗು ಕೇರಳದ ಕೆಲವು ಸಣ್ಣಪುಟ್ಟ ಪಕ್ಷಗಳು ಇಂತಹದೊಂದು ಮೈತ್ರಿಯಾಗುವುದಾದರೆ ಅದರ ಪಾಲುದಾರರಾಗಬಹುದಾದ ಸಾದ್ಯತೆಗಳಿವೆ.ಇಷ್ಟೆಲ್ಲ ಹೇಳಿದ ಮೇಲೂ ಬಗೆಹರಿಯದೆ ಉಳಿಯುವ ಒಂದು ಪ್ರಶ್ನೆಯೆಂದರೆ ಇಂತಹ ಮೈತ್ರಿಕೂಟದ ಪ್ರದಾನಮಂತ್ರಿ ಯಾರಾಗಬೇಕೆಂಬುದಾಗಿ.ಬಹುಶ: ಅದನ್ನು ಚುನಾವಣೆಯ ನಂತರವೇ ನಿರ್ದರಿಸುವುದು ಕ್ಷೇಮವೆನಿಸುತ್ತದೆ.

ಇಲ್ಲಿಯವರೆಗೂ ನಾನು ಹೇಳಿದ್ದೆಲ್ಲ ಒಂದು ರಾಜಕೀಯ ಬದಲಾವಣೆಯ, ದೃವೀಕರಣದ ಸಾದ್ಯತೆಯ ಬಗ್ಗೆಯೇ ಹೊರತು ಬೇರೇನಲ್ಲ. ಯಾಕೆಂದರೆ ಇದುವರೆಗೂ ಅಧಿಕೃತವಾಗಿ ಯಾವೊಂದು ಪಕ್ಷವೂ, ಯಾರೊಬ್ಬ ನಾಯಕರೂ ಈ ಬಗ್ಗೆ ಒಂದು ಹೆಜ್ಜೆಯನ್ನೂ ಇಟ್ಟಿಲ್ಲ. ಆದರೆ ತಮ್ಮಗಳ ಪಕ್ಷಗಳನ್ನು ಉಳಿಸಿಕೊಳ್ಳುವ ಮತ್ತು ತಮ್ಮ ರಾಜ್ಯಗಳಲ್ಲಿ ತಮಗಿರುವ ನೆಲೆಯನ್ನು ಉಳಿಸಿಕೊಳ್ಳುವ ದಿಕ್ಕಿನಲ್ಲಿ ಪ್ರಾದೇಶಿಕ ಪಕ್ಷಗಳು ಇಂದಲ್ಲಾ ನಾಳೆ ಇಂತಹದೊಂದು ಪ್ರಯೋಗಕ್ಕೆ ಮುಂದಾದರೆ ಅಚ್ಚರಿಯೇನಿಲ್ಲ. ಇಂತಹದೊಂದು ಮೈತ್ರಿಯೇನಾದರು ಉಂಟಾದರೆಕಾಂಗ್ರೇಸ್ ಇರಲಿ, ಬಾಜಪ ಮತ್ತು ಮೋದಿಯವರಿಗೆ ಬಹಳಷ್ಟು ಹಿನ್ನಡೆಯುಂಟಾಗುವುದು ಖಚಿತ. ಏಕೆಂದರೆಬಾಜಪ ನಡೆಸುತ್ತಿರುವ ಸಾಂಸ್ಕೃತಿಕ ಮತ್ತು ಮತಾಂಧ ರಾಜಕಾರಣಕ್ಕೆ ಪರ್ಯಾಯವಾದ ರಾಜಕೀಯ ಮಾಡುವ ಶಕ್ತಿಯೊಂದನ್ನು ಜನತೆ ಬಯಸುತ್ತಿದೆ. ಆದರೆ ಮೋದಿ ಮತ್ತು ಅಮಿತ್ ಷಾರವರ ತಂತ್ರಗಾರಿಕೆಗಳನ್ನು, ಸಂಘರಿವಾರದ ರಹಸ್ಯ ಕಾರ್ಯಸೂಚಿಗಳನ್ನೂ ಎದುರಿಸಲು ಬೇಕಾದತನ್ನದೇ ಆದ ಕಾರ್ಯತಂತ್ರವನ್ನು ರೂಪಿಸಲು ಇಲ್ಲಿಯವರೆಗು ಕಾಂಗ್ರೇಸ್ ವಿಫಲವಾಗಿದ್ದು ಜನರಿಗೆ ಅದರ ಬಗ್ಗೆ ವಿಶ್ವಾಸ ಕಡಿಮೆಯಾಗುತ್ತಿದೆ. ಹೀಗಾಗಿ ಪ್ರಾದೇಶಿಕ ಪಕ್ಷಗಳು ಎಲ್ಲಿಯವರೆಗು ಬಲವಾದ ರಾಜಕೀಯ ಶಕ್ತಿಗಳಾಗಿರುತ್ತವೆಯೊ ಅಲ್ಲಿಯವರೆಗೂ ಬಾಜಪರಾಷ್ಟ್ರದಾದ್ಯಂದ ಬೆಳೆಯುವುದು ಕಷ್ಟದ ಕೆಲಸ. ಈ ದಿಕ್ಕಿನಲ್ಲಿ ಯೋಚಿಸಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಬಲ್ಲಂತಹ ರಾಜಕೀಯ ಮುತ್ಸದ್ದಿಯೊಬ್ಬರ ಅಗತ್ಯವಿದೆ. ವ್ಯಕ್ತಿಯಾಗಲ್ಲದೆ ಪಕ್ಷವಾಗಿ ಎಡಪಕ್ಷಗಳು ಇಂತಹದೊಂದು ಮುತ್ಸದ್ದಿತನದ ಕೆಲಸ ಮಾಡಬೇಕಾಗಿದೆ. ರಾಷ್ಟ್ರದ ಕೋಮು ಸಾಮರಸ್ಯವನ್ನು ,ಬಹುಸಂಸ್ಕೃತಿಯ ನಮ್ಮ ಸಮಾಜ ವಿಚ್ಚಿದ್ರವಾಗದಂತೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಪ್ರಯತ್ನವೊಂದು ನಡೆಯದೇ ಹೋದರೆ ಭವಿಷ್ಯದಲ್ಲಿ ಬಲಪಂಥೀಯರ ಕಪಿಮುಷ್ಠಿಯಲ್ಲಿ ಸಿಲುಕುವ ರಾಷ್ಟ್ರವನ್ನು ಕಾಪಾಡಲು ಯಾರಿಂದಲೂ ಸಾದ್ಯವಿಲ್ಲ.

ಆದರೆ ಅಧಿಕಾರದ ರುಚಿ ಕಂಡಿರುವ ಕಾಂಗ್ರೆಸಾಗಲಿ, ಬಾಜಪವಾಗಲಿ ಇಂತಹದೊಂದು ಮೈತ್ರಿಕೂಟ ರಚನೆಯಾಗದಂತೆ ನೋಡಿಕೊಳ್ಳಲು ತಾವು ಕಲಿತ ವಿದ್ಯೆಯನ್ನೆಲ್ಲ ಖರ್ಚು ಮಾಡುವುದು ಖಂಡಿತಾ. ಇದನ್ನು ಅರ್ಥ ಮಾಡಿಕೊಂಡೇ ಮುಂದಿನ ಹೆಜ್ಜೆ ಇಡಬೇಕಾಗಿದೆ.

(ಈ ಲೇಖನ ಬರೆಯುವ ಹೊತ್ತಿಗೆ ನನ್ನ ಮನಸಿನಲ್ಲಿದ್ದುದು ಇಂಡಿಯಾದ ಒಬ್ಬ ಸಾಮಾನ್ಯ ಮತದಾರ ಏನನ್ನು ಬಯಸುತ್ತಾನೆಂಬುದನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಮಾತ್ರ. ಹಾಗಾಗಿ ಲೇಖನದ ಎರಡನೇ ಭಾಗ ಅತಿಯಾದ ನಿರೀಕ್ಷೆಯ ಆದರ್ಶದ ಅಂಶಗಳನ್ನು ಹೊಂದಿರಬಹುದಾಗಿದೆ. ಹಾಗಾಗಿ ಸಾಮಾನ್ಯನೊಬ್ಬ ಚಿಂತಿಸಬಹುದಾದ ರೀತಿಯಲ್ಲಿ ಸರಳವಾಗಿ ಬರೆದಿರುವೆ)

ಆಗ 23, 2016

ಈಶ್ವರಪ್ಪನವರ ಹಿಂದ ಚಳುವಳಿಯಲ್ಲಿ ಮಾಯವಾದ ಅ(ಅಲ್ಪಸಂಖ್ಯಾತರು)!

ಸಾಂದರ್ಭಿಕ ಚಿತ್ರ
ಕು.ಸ.ಮಧುಸೂದನನಾಯರ್
23/08/2016
ಸರಿಸುಮಾರು ಹನ್ನೆರಡು ವರ್ಷಗಳ ನಂತರ ಮತ್ತೆ ಅಹಿಂದ ಸುದ್ದಿ ಮತ್ತು ಸದ್ದು ಎರಡನ್ನೂ ಮಾಡುತ್ತಿದೆ. ವ್ಯತ್ಯಾಸವೆಂದರೆ 2005ರ ಸುಮಾರಿನ ಅಹಿಂದ ಇವತ್ತು ಇಲ್ಲವಾಗಿ ಕೇವಲ ಹಿಂದ ಮಾತ್ರ ರಾರಾಜಿಸುತ್ತಿದೆ. ಹಳೆಯ ಅಹಿಂದದಲ್ಲಿ ಅಲ್ಪಸಂಖ್ಯಾತರನ್ನು ಪ್ರನಿಧಿಸುವ ‘ಅ’ ವನ್ನು ಉದ್ದೇಶಪೂರ್ವಕವಾಗಿಯೇ ಕೈಬಿಡಲಾಗಿದೆ. ಯಾಕೆಂದರೆ ಈ ಬಾರಿ ಹಿಂದ ಚಳುವಳಿಯನ್ನು ಮರು ಪ್ರಾರಂಬಿಸಲು ಹೊರಟಿರುವುದು ಸಂಘಪರಿವಾರದ ಕಟ್ಟಾಳುವೂ, ಬಾಜಪದ ಪ್ರಮುಖನಾಯಕರೂ ಆದ ಶ್ರೀ ಈಶ್ವರಪ್ಪನವರು. ಹಾಗಾಗಿ ಯಾವ ಅಲ್ಪಸಂಖ್ಯಾತ ವಿರೋಧಿ ನೀತಿಯ ಸಂಘಟನೆಗಳ ನೆರಳಲ್ಲಿಯೇ ತಮ್ಮ ತಮ್ಮ ರಾಜಕಾರಣ ಮಾಡುತ್ತಾ ಬಂದರೋ ಆ ಈಶ್ವರಪ್ಪನವರಿಂದ ಹಿಂದ ಚಳುವಳಿಯಲ್ಲಿ ಅಲ್ಪಸಂಖ್ಯಾತ ವರ್ಗವೂ ಸೇರಿರುತ್ತದೆಯೆಂದು ನಂಬುವುದು ಮೂರ್ಖತನವಾಗುತ್ತದೆ. ಹಾಗಿದ್ದರೆ ಇವತ್ತೇನು ಈಶ್ವರಪ್ಪನವರು ಸಂಗೊಳ್ಳಿರಾಯಣ್ಣ ಬ್ರಿಗೇಡ್ ಮೂಲಕ ಹಿಂದ ಚಳುವಳಿಯ ಬಗ್ಗೆ ಹೇಳುತ್ತಿದ್ದಾರೆಯೊ ಅದಕ್ಕೂ ಈ ಹಿಂದೆ ಜಾತ್ಯಾತೀತ ಜನತಾದಳದಲ್ಲಿದ್ದಾಗ ಶ್ರೀ ಸಿದ್ದರಾಮಯ್ಯನವರು ಅಹಿಂದ ಚಳುವಳಿಯನ್ನು ಪುನಶ್ಚೇತನಗೊಳಿಸಿದ್ದಕ್ಕೂ ಇರುವ ಮುಖ್ಯ ವ್ಯತ್ಯಾಸವನ್ನು ನಾವಿಲ್ಲಿ ಗಮನಿಸಬೇಕಾಗಿದೆ.

ಈ ಹಿಂದೆ ಶ್ರೀ ಸಿದ್ದರಾಮಯ್ಯನವರು ಅಹಿಂದವನ್ನು ಪುನಶ್ಚೇತನಗೊಳಿಸಲು ಅವರಿಗೊಂದು ರಾಜಕೀಯ ಅನಿವಾರ್ಯತೆಯಿತ್ತು. ಜಾತ್ಯಾತೀತ ಜನತಾದಳದಲ್ಲಿ ತಮ್ಮನ್ನು ಮುಖ್ಯಮಂತ್ರಿ ಮಾಡದೆ ಉಪಮುಖ್ಯಮಂತ್ರಿ ಪಟ್ಟಕ್ಕೆ ಸೀಮಿತಗೊಳಿಸಿದ ಮಾಜಿ ಪ್ರದಾನಿಯೂ, ಜಾತ್ಯಾತೀತ ಜನತಾದಳದ ಅದ್ಯಕ್ಷರೂ ಆದ ಶ್ರೀ ದೇವೇಗೌಡರ ವಿರುದ್ದ ಸಿಡಿದು ನಿಂತು ತನ್ನ ರಾಜಕೀಯ ಅಸ್ಥಿತ್ವವನ್ನು ಸಾಬೀತು ಪಡಿಸುವ ಜರೂರತ್ತು ಅವತ್ತು ಸಿದ್ದರಾಮಯ್ಯನವರ ಮುಂದಿತ್ತು.ಜೊತೆಗೆ ಸರದಿಯಂತೆ ಅಧಿಕಾರ ಅನುಭವಿಸುತ್ತಿದ್ದ ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯದ ಪಾರುಪತ್ಯವನ್ನು ಕೊನೆಗಾಣಿಸಿ ಅಹಿಂದವನ್ನು ಅಧಿಕಾರದ ಸನಿಹಕ್ಕೆ ತರುವ ಒಂದು ಹೊಣೆಗಾರಿಕೆಯೂ ಅವರಿಗಿತ್ತು. ದುರಂತವೆಂದರೆ ಅವರು ಹೀಗೆ ಅಹಿಂದದ ಪರವಾಗಿ ನಿಂತಾಗ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು ಹಿಂದುಳಿದ ವರ್ಗದವರೇ ಆಗಿದ್ದ ಶ್ರೀ ಧರ್ಮಸಿಂಗ್ ಅವರು. ಆದರೆ ಅವರು ತಮ್ಮ ಅಧಿಕಾರ ನಡೆಸುವಲ್ಲಿ ಸಂಪೂರ್ಣವಾಗಿ ಜನತಾದಳದ ದೇವೇಗೌಡರ ಕಪಿಮುಷ್ಠಿಯಲ್ಲಿ ಸಿಲುಕಿಹಾಕಿಕೊಂಡಿದ್ದರು.

ಹೀಗಾಗಿ ರಾಜಕೀಯವಾಗಿ ತಮಗಿರುವ ಜನಸಮುದಾಯದ ಬೆಂಬಲವನ್ನೂ, ಅಹಿಂದ ವರ್ಗಗಳ ತಾಕತ್ತನ್ನು ತೋರಿಸಲು ಸಿದ್ದರಾಮಯ್ಯನವರಿಗೆ ಬೇಕಾಗಿದ್ದ ವೇದಿಕೆಯೊಂದನ್ನು ರಚಿಸಿಕೊಳ್ಳುವ ಕಷ್ಟ ಎದುರಾಗಲಿಲ್ಲ. ಯಾಕೆಂದರೆ ಅಲ್ಲಿಗಾಗಲೇ ಕರ್ನಾಟಕದಲ್ಲಿ ತನ್ನ ಅಸ್ಥಿತ್ವವನ್ನು ಪಡೆದಿದ್ದ ಅಹಿಂದವನ್ನು ಪುನರುಜ್ಜೀವನಗೊಳಿಸಿದ ಶ್ರೀ ಸಿದ್ದರಾಮಯ್ಯನವರು ಅದಕ್ಕೊಂದು ತಾರಾ ಮೆರುಗನ್ನು ನೀಡಿದರು. ಅದಾಗಲೇ ಕಾಂಗ್ರೆಸ್ಸಿನಿಂದ ದೂರಸರಿದಿದ್ದ ಒಕ್ಕಲಿಗ ಮತ್ತು ಲಿಂಗಾಯಿತ ರಾಜಕೀಯ ಶಕ್ತಿಗಳೆದುರು ಅಹಿಂದ ಎದ್ದುನಿಂತು ಕಾಂಗ್ರೆಸ್ಸಿಗೆ ಬೆಂಬಲ ನೀಡುವ ಎಲ್ಲ ಸೂಚನೆಯನ್ನು ನೀಡಿತು. ನಂತರ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಹೋದರು. 2013ರಲ್ಲಿ ನಡೆದ ರಾಜ್ಯವಿದಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಈ ಅಹಿಂದ ವರ್ಗದ ಬೆಂಬಲವೇ ಮುಖ್ಯ ಕಾರಣವಾಗಿತ್ತು.. ಅಲ್ಲಿಗೆ ಅಹಿಂದದ ಮೂಲಕ ಸಿದ್ದರಾಮಯ್ಯನವರು ಎರಡು ವಿಚಾರಗಳ್ನು ಸಾಧಿಸಿ ತೋರಿಸಿದ್ದರು. ಒಂದು, ಅಹಿಂದ ವರ್ಗಗಳು ಒಟ್ಟಾಗಿ ನಿಂತರೆ, ತಾವೇ ಒಂದು ಪ್ರಬಲ ಶಕ್ತಿಯಾಗಿ ಅಧಿಕಾರ ಹಿಡಿಯಬಹುದು ಎನ್ನುವುದು. ಎರಡನೆಯದು, ತಾವು ದೇವೇಗೌಡರು ಹಾಗು ಯಡಿಯೂರಪ್ಪನವರಂತೆ ಒಂದು ಜಾತಿಯ ನಾಯಕರಾಗಿರದೆ ಒಟ್ಟಾರೆ ಅಹಿಂದ ವರ್ಗಗಳ ನಾಯಕರಾಗಿದ್ದೇನೆಂಬುದು. ಹೀಗೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆದ ಸಿದ್ದರಾಮಯ್ಯನವರಿಗೆ ಅಹಿಂದ ಅನಿವಾರ್ಯವಾಗಿತ್ತು,ನಿಜ. ತಮ್ಮ ರಾಜಕೀಯ ಶಕ್ತಿಯ ಪ್ರದರ್ಶನಕ್ಕೆ ಅದನ್ನು ವೇದಿಕೆಯನ್ನಾಗಿ ಬಳಸಿಕೊಂಡಿದ್ದರೂ ಸಹ, ಆ ಹೊತ್ತಿಗಾಗಲೇ ಅವರಿಗಿದ್ದ ಜನಬೆಂಬಲವನ್ನು ಅಹಿಂದ ಪರವಾಗಿ ಬಳಸಿಕೊಂಡು ಅಧಿಕಾರ ಅಹಿಂಣದ ವರ್ಗಗಳಿಗೆ ಅಧಿಕಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದ ಹೊರತಾಗಿಯೂ ಅಹಿಂದಕ್ಕೆ ಪ್ರಾಮಾಣಿಕವಾಗಿ ದುಡಿದ ಮತ್ತು ಆ ವರ್ಗಗಳಿಗೊಂದು ರಾಜಕೀಯ ಅಧಿಕಾರ ತಂದುಕೊಟ್ಟ ಕೀರ್ತಿಯೂ ಸೇರುತ್ತದೆ.

ಇನ್ನು ಇವತ್ತು ಮಾಜಿ ಉಪಮುಖ್ಯಮಂತ್ರಿಯೂ, ಬಾಜಪದ ನಾಯಕರೂ ಆದ ಶ್ರೀ ಈಶ್ವರಪ್ಪನವರ ಹಿಂದ ಚಳುವಳಿಯ ಬಗ್ಗೆ ನೋಡೋಣ: ಯಡಿಯೂರಪ್ಪನವರು ಬಾಜಪದ ರಾಜ್ಯಾದ್ಯಕ್ಷರಾದ ತಕ್ಷಣ ಇಡೀ ಬಾಜಪವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಕ್ರಿಯೆಗೆ ಚಾಲನೆ ನೀಡಿದರು. ಜೊತೆಗೆ ಈ ಹಿಂದೆ ತಾವು ಕೆಜೆಪಿ ಕಟ್ಟಿದಾಗ ತಮ್ಮೊಂದಿಗೆ ಬಾರದೆ ತಮ್ಮನ್ನು ಕಟುವಾಗಿ ಟೀಕಿಸಿದ್ದ ಬಾಜಪದ ನಾಯಕರುಗಳ ವಿರುದ್ದ ಸೇಡಿನ ಕ್ರಮಕ್ಕೆ ಮುಂದಾದರು. ಇದರ ಭಾಗವಾಗಿ ಅವರು ಪಕ್ಷದ ಪದಾಧಿಕಾರಿಗಳ ಪಟ್ಟಿ ರಚಿಸುವಾಗ ಬಾಜಪದ ಇತರೇ ಯಾವುದೇ ನಾಯಕರುಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹಾಗು ತಾವು ಹಿಂದೆ ಕಟ್ಟಿದಾಗ ತಮ್ಮ ಜೊತೆಗಿದ್ದ ಕೆಜೆಪಿಯ ಬಹಳಷ್ಟು ನಾಯಕರುಗಳಿಗೆ ಬಾಜಪದ ಪದಾಧಿಕಾರಿಗಳನ್ನಾಗಿ ಮಾಡಿದ್ದರು. ಯಡಿಯೂರಪ್ಪನವರ ಆಪ್ತವಲಯಕ್ಕೆ ಮಾತ್ರ ಅನುಕೂಲಕರವಾಗಿದ್ದ ಇಂತಹದೊಂದು ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾದಾಗ ಇದನ್ನು ನಿರೀಕ್ಷಿಸಿದ್ದವರಿಗೂ ಅಚ್ಚರಿಯಾಗುವಷ್ಟು ಜನ ಯಡಿಯೂರಪ್ಪನವರ ಬೆಂಬಲಿಗರೇ ತುಂಬಿದ್ದರು. ಇದು ಬಾಜಪದೊಳಗಿನ ಯಡಿಯೂರಪ್ಪನವರ ವಿರೋಧಿಬಣಕ್ಕೆ ನುಂಗಲಾರದ ತುತ್ತಾಯಿತು. ಆದರೆ ಯಡಿಯೂರಪ್ಪನವರ ಹಟಮಾರಿ ಧೋರಣೆ ಹಾಗು ಕೋಪದ ಬಗ್ಗೆ ಅರಿವಿದ್ದ ನಾಯಕರ್ಯಾರು ಅವರ ವಿರುದ್ದ ದ್ವನಿಯೆತ್ತುವ ಧೈರ್ಯ ಮಾಡಲಿಲ್ಲ. ಆದರೆ ಬಾಜಪ ಅಧಿಕಾರದಲ್ಲಿ ಇದ್ದಾಗಲಿಂದಲೂ ಯಡಿಯೂರಪ್ಪನವರ ಬಗ್ಗೆ ನೇರಾನೇರಾ ಮಾತಾಡುತ್ತಿದ್ದ ಈಶ್ವರಪ್ಪನವರು ಮಾತ್ರ ಸುಮ್ಮನೇ ಕೂರಲಿಲ್ಲ. ಬದಲಿಗೆ ಇದರ ಬಗ್ಗೆ ಮಾಧ್ಯಮಗಳ ಎದುರೇ ಹೇಳಿಕೆ ನೀಡಿದರು. ಅವರ ಇಂತಹ ಆಕ್ರೋಶಕ್ಕೂ ಸೂಕ್ತ ಕಾರಣವಿತ್ತು. ಅದೆಂದರೆ ಕಳೆದ ವಿದಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣರಾಗಿದ್ದ ರುದ್ರೇಗೌಡರನ್ನು ಶಿವಮೊಗ್ಗ ಜಿಲ್ಲಾ ಬಾಜಪದ ಅದ್ಯಕ್ಷರನ್ನಾಗಿ ಮಾಡಲಾಗಿತ್ತು. ಇದರಿಂದ ತಮ್ಮ ಜಿಲ್ಲೆಯಲ್ಲಿಯೇ ತಮಗೆ ಅವಮಾನ ಮಾಡಲಾಗಿದೆಯೆಂಬ ಕೋಪ ಈಶ್ವರಪ್ಪನವರನ್ನು ಉದ್ರಿಕ್ತಗೊಳಿಸಿದ್ದು ನಿಜ.

ಆದರೆ ವಾಸ್ತವ ಇದಕ್ಕಿಂತ ಭಿನ್ನವಿದೆ. ಯಾಕೆಂದರೆ ಪಕ್ಷದೊಳಗಿನ ಉಳಿದ ನಾಯಕರುಗಳ ಸಂಪೂರ್ಣ ಬೆಂಬಲವಿಲ್ಲದೆ ಈಶ್ವರಪ್ಪನವರು ಯಡಿಯೂರಪ್ಪನವರ ವಿರುದ್ದ ಈ ಮಟ್ಟದಲ್ಲಿ ದನಿಯೆತ್ತುವುದು ಕಷ್ಟದ ಮಾತು. ಇದಕ್ಕೆ ತಕ್ಕ ಹಾಗೆ ಈಗ ಈಶ್ವರಪ್ಪನವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ತಾವು ಹಿಂದ( ಹಿಂದುಳಿದ ಮತ್ತು ದಲಿತ) ಚಳುವಳಿಗೆ ಮರುಜನ್ಮ ನೀಡಿ ಅವರ ಅಭಿವೃದ್ದಿಗಾಗಿ ಹೋರಾಡುವ ಮಾತಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರು ಈ ಸಮುದಾಯಗಳ ಅನೇಕ ನಾಯಕರುಗಳ ಜೊತೆ ಸಭೆಗಳನ್ನು ನಡೆಸುತ್ತಿದ್ದು, ಸಕ್ರಿಯವಾಗಿ ತಾವು ಬ್ರಿಗೇಡಿನ ಪದಾಧಿಕಾರಿಯಾಗದೇ ಹೋದರು ಹಿನ್ನೆಲೆಯಲ್ಲಿ ನಿಂತು ಅದರ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದ್ದಾರೆ. 

ಸರಿಯಾಗಿ ವಿಶ್ಲೇಷಿಸಿ ನೋಡಿದರೆ ಈಶ್ವರಪ್ಪನವರ ಈ ನಡೆಯ ಹಿಂದೆ ಯಡಿಯೂರಪ್ಪನವರ ನಾಗಾಲೋಟಕ್ಕೆ ತಡೆಯೊಡ್ಡಲು ಸಂಘಪರಿವಾರ ನಡೆಸುತ್ತಿರುವ ಚಾಣಕ್ಯ ನಡೆಯ ಒಂದು ಭಾಗವೇ ಈಶ್ವರಪ್ಪನವರ ಹಿಂದ ಚಳುವಳಿಯ ಮಾತುಗಳು. ಯಾಕೆಂದರೆ ಲಿಂಗಾಯಿತರ ಮತಬ್ಯಾಂಕಿನ ಏಕೈಕ ಕಾರಣಕ್ಕೆ ಮತ್ತು ಮುಂದಿನ ವಿದಾನಸಭಾ ಚುನಾವಣೆಗಳಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ಯಡಿಯೂರಪ್ಪನವರಿಗೆ ರಾಜ್ಯಾದ್ಯಕ್ಷ ಪದವಿ ನೀಡಿದ ಬಾಜಪದ ಹೈಕಮ್ಯಾಂಡ್, ಇದೀಗ ಕೈ ಕೈ ಹಿಚುಕಿಕೊಳ್ಳುವ ಸನ್ನಿವೇಶ ನಿಮಾಣವಾಗಿದೆ. ಯಾಕೆಂದರೆ ಅದ್ಯಕ್ಷ ಪದವಿ ದೊರೆತ ತಕ್ಷಣವೇ ಯಡಿಯೂರಪ್ಪನವರ ರಾಜಾಕಾರಣದ ನಡೆಗಳೇ ಬದಲಾಗಿತ್ತು. ಉಳಿದೆಲ್ಲ ರಾಜ್ಯಮಟ್ಟದ ನಾಯಕರುಗಳನ್ನು ಪಕ್ಕಕ್ಕೆ ಸರಿಸಿ ತಮ್ಮ ಬೆಂಬಲಿಗರನ್ನು ಆಯಕಟ್ಟಿನ ಜಾಗದಲ್ಲಿ ಕೂರಿಸುವ ಅವರ ಆಸೆಗೆ ಅನುಗುಣವಾಗಿಯೇ ಪದಾಧಿಕಾರಿಗಳ ಪಟ್ಟಿ ತಯಾರಾಗಿತ್ತು. ಜೊತೆಗೆ ಮುಂದಿನ ವಿದಾನಸಭೆಗೆ ಟಿಕೇಟು ನೀಡುವಾಗ ತಮ್ಮ ಬೆಂಬಲಿಗರಿಗೆ ಹೆಚ್ಚು ಸ್ಥಾನ ದೊರೆಯತುವಂತೆ ಮಾಡಲು ಸಹ ಈ ಪದಾಧಿಕಾರಿಗಳ ಪಟ್ಟಿ ಸಹಾಯಕವಾಗುವಂತಿತ್ತು. ಯಡಿಯೂರಪ್ಪನವರ ಈ ಮಹತ್ವಾಕಾಂಕ್ಷೆಯನ್ನು ಸಂಘಪರಿವಾರವಾಗಲಿ, ಬಾಜಪದ ಹೈಕಮ್ಯಾಂಡ್ ಅಮಿತ್ ಷಾ ಅಥವಾ ಪ್ರದಾನಮಂತ್ರಿ ನರೇಂದ್ರರ ಮೋದಿಯವರಾಗಲಿ ಸಹಿಸುವ ಪರಿಸ್ಥಿತಿಯಲ್ಲಿ ಇಲ್ಲ. ತನಗಿಂತ ದೊಡ್ಡದಾಗಿ ಬೆಳೆಯುವ ಯಾವ ನಾಯಕನನ್ನೂ ಸಂಘಪರಿವಾರ ಸಹಿಸುವುದಿಲ್ಲ. ಇನ್ನು ಕೇಂದ್ರದಲ್ಲಿಯೂ ಇದೇ ಮನಸ್ಥಿತಿ ಇದೆ. ಅಮಿತ್ ಷಾ ಮತ್ತು ಮೋದಿ ಜೋಡಿ ತಮಗಿಂತ ಗಟ್ಟಿಯಾಗಿ ಬೆಳೆಯುವ ಯಾವ ಪ್ರಾದೇಶಿಕ ನಾಯಕನನ್ನೂ ಅದು ಸಹನೆಯಿಂದ ಕಾಣುವುದಿಲ್ಲ. ಈ ಹಿನ್ನೆಲೆಯಲ್ಲಿಯೇ ಅವರು ರಾಜಸ್ಥಾನದ ಮುಖ್ಯಮಂತ್ರಿ ವಸುಂದರರಾಜ್ ಅವರ ವಿರುದ್ದ ಭಿನ್ನಮತೀಯ ದ್ವನಿಗಳನ್ನು ಬೆಂಬಲಿಸಿದ್ದರು ಆದರೆ ರಾಜ್ಯದ ಶಾಸಕರುಗಳನ್ನು ತನ್ನ ಮುಷ್ಠಿಯಲ್ಲಿಟ್ಟುಕೊಂಡಿದ್ದ ವಸುಂದರರಾಜೆ ಭಿನ್ನಮತವನ್ನು ಹತ್ತಿಕ್ಕಿ ಮುಂದುವರೆಯುತ್ತಿದ್ದಾರೆ, ಇನ್ನು ಮದ್ಯಪ್ರದೇಶದಲ್ಲಿ ಅದ್ವಾನಿಯವರ ಬೆಂಬಲಿಗರಾದ ಶಿವರಾಜಸಿಂಗ್ ಸಹ ಸ್ಥಳೀಯವಾಗಿ ಬಲಾಢ್ಯರಾಗಿದ್ದು ಅಲ್ಲಿ ಷಾ-ಮೋದಿ ಜೋಡಿಗೆ ಮಾನ್ಯತೆಯಿಲ್ಲದಂತಾಗಿದೆ. ಈ ಕಾರಣಗಳಿಂದಾಗಿಯೇ ಮಹಾರಾಷ್ಟ್ರ, ಗುಜರಾತ್, ಗೋವಾ, ಅಸ್ಸಾಮಿನಲ್ಲಿ ಮುಖರಹಿತವಾದ, ಹೊಸನಾಯಕರುಗಳನ್ನು, ತಮಗೆ ಬೇಕಾದವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿರುವುದು. ಹಾಗಾಗಿ ಮುಂದೆ ಯಡಿಯೂರಪ್ಪನವರು ರಾಜಕೀಯವಾಗಿ ಬಲಾಢ್ಯರಾಗಿ ಬಿಡುತ್ತಾರೆಂಬ ಕಾರಣದಿಂದಲೇ ಅವರನ್ನು, ಅವರ ಓಟವನ್ನು ತಡೆಹಿಡಿಯುವ ದೃಷ್ಠಿಯಿಂದಲೇ ಈಶ್ವರಪ್ಪನವರ ಕೈಲಿ ಹಿಂದ ಚಳುವಳಿಯ ಮಾತಾಡಿಸುತ್ತ, ಬಾಜಪಕ್ಕೆ ಹಿಂದ ವರ್ಗದವರ ಬೆಂಬಲವು ಇದ್ದು ಲಿಂಗಾಯಿತರ ಮತವಷ್ಟೇ ಅನಿವಾರ್ಯವಲ್ಲ ಎಂಬುದನ್ನು ಯಡಿಯೂರಪ್ಪನವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಲಾಗುತ್ತಿದೆ. ಇಂತಹ ಕಾರಣದಿಂದಲೇ ಸ್ವತ: ಯಡಿಯೂರಪ್ಪನವರೇ ಸಿದ್ದಪಡಿಸಿ ಕಳಿಸಿದ್ದ ಕೋರ್ ಕಮಿಟಿಯನ್ನು ಸಹ ಹೈಕಮ್ಯಾಂಡ್ ತನಗಿಷ್ಟಬಂದಂತೆ ಸರಿಪಡಿಸಿ ಕಳಿಸಿ, ಯಡಿಯೂರಪ್ಪನವರಿಗೆ ಒಂದು ಎಚ್ಚರಿಕೆಯನ್ನೂ ನೀಡಿದೆ.

ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಯಡಿಯೂರಪ್ಪನವರ ಯೋಜನೆಯನ್ನು ತಡೆಹಿಡಿಯಲು ಸಂಘಪರಿವಾರ ಇಂತಹದೊಂದು ತಂತ್ರಗಾರಿಕೆ ಹೆಣೆದಿದ್ದು, ಸದ್ಯ ಈಶ್ವರಪ್ಪನವರು ಅದರ ಯಾಗದ ಕುದುರೆಯಾಗಿದ್ದಾರೆ. ಇದನ್ನು ಅರಿತೊ ಅರಿಯದೆಯೋ ಈಶ್ವರಪ್ಪನವರು ಯಡಿಯೂರಪ್ಪನವರ ವಿರುದ್ದದ ತಮ್ಮ ಹಿಂದ ಚಟುವಟಿಕೆಗಳನ್ನು ಮುಂದುವರೆಸುತ್ತಿದ್ದಾರೆ. ಪಕ್ಷದೊಳಗಿರುವ ವಿವಿದ ಮೋರ್ಚಾಗಳನ್ನು ಬಳಸಿಕೊಂಡು ಈಶ್ವರಪ್ಪನವರು ಹೋರಾಟಮಾಡಲೆಂಬ ಯಡಿಯೂರಪ್ಪನವರ ಮಾತಿಗೆ ಈಶ್ವರಪ್ಪನವರು ತಲೆ ಕೆಡಿಸಿಕೊಳ್ಳದೆ, ಸೆಪ್ಟೆಂಬರ್ ತಿಂಗಳ 21ನೇ ತಾರೀಖು ಹಾವೇರಿಯಲ್ಲಿ ಹಿಂದ ಸಮಾವೇಶ ಮಾಡುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದಾರೆ. ಇದೀಗ ಮೌನವಾಗಿರುವಂತೆ ಕಾಣುತ್ತಿರುವ ಯಡಿಯೂರಪ್ಪನವರು ಅಷ್ಟು ಸುಲಭಕ್ಕೆ ಈ ತಂತ್ರಗಳಿಗೆ ಮಣಿಯುವವರಲ್ಲ.

ಈಶ್ವರಪ್ಪನವರ ಹಿಂದ ಚಳುವಳಿಯ ತಂತ್ರಗಾರಿಕೆಯಲ್ಲಿ ಅ ಅಂದರೆ ಅಲ್ಪಸಂಖ್ಯಾತರನ್ನು ಬಿಡಲಾಗಿದ್ದು, ಇದು ಸಂಘಪರಿವರದ ಪ್ರಾಯೋಜಿತ ಚಳುವಳಿ ಎನ್ನುವುದನ್ನು ಇದೊಂದೇ ತೋರಿಸುತ್ತದೆ. ಅಲ್ಲದೆ ಸಿದ್ದರಾಮಯ್ಯನವರಷ್ಟು ಜನಬೆಂಬಲವಿರದ ಈಶ್ವರಪ್ಪನವರು ಯಡಿಯೂರಪ್ಪನವರನ್ನು ಹಣಿಯುವ ಮತ್ತು ತಮ್ಮನ್ನು ಪಕ್ಷದೊಳಗೆ ಗಟ್ಟಿ ಮಾಡಿಕೊಳ್ಳುವ ಏಕೈಕ ಉದ್ದೇಶದಿಂದಲೇ ಹಿಂದವನ್ನು ಬಳಸಿಕೊಳ್ಳುತ್ತಿರುವುದು ಸ್ವತ: ಹಿಂದ ವರ್ಗಗಳಿಗೆ ಗೊತ್ತಾಗಿದೆ. ಯಾಕೆಂದರೆ ಇದೀಗ ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದು, ಅವರ ಸಚಿವ ಸಂಪುಟದಲ್ಲಿ ಹಿಂದುಳಿದ ಮತ್ತು ದಲಿತ ವರ್ಗದವರುಗಳೇ ಬಹುಮುಖ್ಯವಾದ ಖಾತೆಗಳನ್ನು ಹೊಂದಿದ್ದಾರೆ. ಜೊತೆಗೆ ಅಲ್ಪಸಂಖ್ಯಾತರಿಗೂ ಸಾಠಕಷ್ಟು ಪ್ರಾತಿನಿದ್ಯ ದೊರೆತಂತಾಗಿದೆ. ಪರಿಸ್ಥಿತಿ ಹೀಗಿರುವಾಗ, ಸ್ವತ: ಅಹಿಂದ ವರ್ಗಗಳೇ ಅಧಿಕಾರ ಅನುಭವಿಸುತ್ತಿರುವಾಗ ಮತ್ತೆ ಹಿಂದ ವರ್ಗಗಳ ಅಭಿವೃದ್ದಿಗಾಗಿ ಈ ಚಳುವಬಳಿ ಎನ್ನುವ ಈಶ್ವರಪ್ಪನವರ ಮಾತು ಚಟುವಟಿಕೆಗಳು ಹಾಸ್ಯಾಸ್ಪದವಾಗಿವೆ.

ಆಗ 10, 2016

ಗೋವಾ ವಿದಾನಸಭಾ ಚುನಾವಣೆಗಳು: ಅಖಾಡಕ್ಕಿಳಿಯಲಿರುವ ಆಮ್ ಆದ್ಮಿ ಪಕ್ಷ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
10/08/2016
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿದಾನಸಭೆಗಳ ಚುನಾವಣೆಗಳು ತಮ್ಮದೇ ಆದ ರಾಜಕೀಯ ಕಾರಣಗಳಿಗಾಗಿ ಮಾಧ್ಯಮಗಳಲ್ಲಿ ಪ್ರಾಮುಖ್ಯತೆ ಪಡೆದು ಚರ್ಚಿತವಾಗುತ್ತಿದ್ದರೆ, ಗೋವಾದಂತಹ ಪುಟ್ಟ ರಾಜ್ಯಗಳಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯಾಗಲಿ ಅವು ರಾಷ್ಟ್ರ ರಾಜಕಾರಣಕ್ಕೆ ನೀಡಬಲ್ಲ ಕೊಡುಗೆಗಳ ಬಗ್ಗೆಯಾಗಲಿ ನಾವ್ಯಾರು ಗಂಭೀರವಾಗಿ ಯೋಚಿಸುತ್ತಿಲ್ಲವೆಂಬುದು ವಿಷಾದದ ಸಂಗತಿ. ರಾಷ್ಟ್ರದ ಸಂಸತ್ತಿಗೆ ಅತಿ ಹೆಚ್ಚು ಸಂಸದರನ್ನು ನೀಡುವ ಉತ್ತರಪ್ರದೇಶಕ್ಕಾಗಲಿ, ಪ್ರದಾನಿಯವರ ತವರು ರಾಜ್ಯ ಗುಜರಾತಿಗಾಗಲಿ, ದೆಹಲಿಯ ಸನಿಹದಲ್ಲಿರುವ ಪಂಜಾಬಿಗಾಗಲಿ ನೀಡುವ ರಾಜಕೀಯ ಪ್ರಾದಾನ್ಯತೆಯಲ್ಲಿ ಒಂದಿಷ್ಟನ್ನಾದರು ನಾವು ಗೋವಾದಂತಹ ಪುಟ್ಟ ರಾಜ್ಯಗಳಿಗೆ ನೀಡದೇ ಹೋದರೆ ‘ಭಿನ್ನತೆಯಲ್ಲಿ ಏಕತೆ’ ಎನ್ನುವ ನಮ್ಮ ಘೋಷವಾಕ್ಯಕ್ಕೆ ಯಾವ ಅರ್ಥವೂ ಇರುವುದಿಲ್ಲ. ಅದರಲ್ಲೂ ಈಗ ರಾಷ್ಟ್ರದ ರಕ್ಷಣಾ ಮಂತ್ರಿಯಾಗಿರುವವರು ಗೋವಾದವರು ಎಂಬ ಹಿನ್ನೆಲೆಯಲ್ಲಾದರು ಗೋವಾದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಹೊಂದಿರುವುದು ಅಗತ್ಯವಾಗಿದೆ. ಗೋವಾ ಮತ್ತು ಕರ್ನಾಟಕದ ನಡುವೆ ಭುಗಿಲೆದ್ದಿರುವ ಮಹಾದಾಯಿ ನದಿನೀರಿನ ಹಂಚಿಕೆಯ ವಿವಾದದ (ಕಳಸಾ ಬಂಡೂರಿ ಹೋರಾಟ) ಈ ಸನ್ನಿವೇಶದಲ್ಲಿ ಗೋವಾದ ರಾಜಕಾರಣದಲ್ಲಾಗಬಹುದಾದ ಸಣ್ಣಪುಟ್ಟ ಕದಲಿಕೆಗಳು ಕರ್ನಾಟಕದ ಮಟ್ಟಿಗೆ ಮುಖ್ಯವಾಗುವ ದೃಷ್ಠಿಯಿಂದಲಾದರು ನಾವು ಕನ್ನಡಿಗರು ಗೋವಾದ ಪ್ರಸಕ್ತ ರಾಜಕೀಯದ ಬೆಳವಣಿಗೆ ಮತ್ತು ಬದಲಾವಣೆಗಳನ್ನು ಸೂಕ್ಷ್ಮವಾಗಿ ಅವಲೋಕಿಸುವುದು ಅಗತ್ಯವೆಂಬ ನನ್ನ ಆಶಯವೇ ಈ ಬರಹಕ್ಕೆ ಮುಖ್ಯ ಕಾರಣವೆಂದರೆ ತಪ್ಪಾಗಲಾರದು.

1985 ರ ನಂತರ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಗಳನ್ನು ಪಡೆದ ನಂತರ ಗೋವಾದ ರಾಜಕೀಯ ಚಿತ್ರಣ ಬದಲಾಗುತ್ತ ಹೋಯಿತು. ಅಲ್ಲಿಯವರೆಗಿದ್ದ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಅಧಿಪತ್ಯ ಇಲ್ಲವಾಗುತ್ತ ಕಾಂಗ್ರೆಸ್ ಮತ್ತು ಬಾಜಪಗಳ ನಡುವೆ ನೇರ ಹಣಾಹಣಿಯ ಚುನಾವಣಾ ಕಾಳಗ ಶುರುವಾಯಿತು. ಈ ಎರಡೂ ರಾಷ್ಟ್ರೀಯ ಪಕ್ಷಗಳು ಒಂದೊಂದು ಮೈತ್ರಿಕೂಟವನ್ನು ರಚಿಸಿಕೊಂಡೇ ಚುನಾವಣೆ ಎದುರಿಸುತ್ತ ಬಂದವು. ತನ್ನ ಮೊದಲಿನ ಪ್ರಾಬಲ್ಯ ಕಳೆದುಕೊಂಡ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ಆಗಾಗ ತನ್ನ ಮೈತ್ರಿಕೂಟವನ್ನು ಬದಲಾಯಿಸುತ್ತ ಗೋವಾ ರಾಜಕಾರಣದ ಏಳು ಬೀಳುಗಳನ್ನು ನಿಯಂತ್ರಿಸತೊಡಗಿತು. ಇವುಗಳ ಜೊತೆಗೆ ಶರದ್‍ಪವಾರರ ಎನ್.ಸಿ.ಪಿ. ಗೋವಾ ವಿಕಾಸ್ ಪಕ್ಷಗಳು ಕೂಡ ತಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದವು.

ಇನ್ನು 2005ರಿಂದ 2012ರವರೆಗು ಅಧಿಕಾರ ನಡೆಸಿದ ಕಾಂಗ್ರೆಸ್ 2012 ರಲ್ಲಿ ಬಾಜಪ ಮೈತ್ರಿಕೂಟದ ಎದುರು ಸೋಲನ್ನಪ್ಪಿ ಕೂರಬೇಕಾಯಿತು. ಗೋವಾದ ಒಟ್ಟು 40 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳನ್ನು( ಬಾಜಪ-21, ಗೋಮಾಂತಕ್ ಪಕ್ಷ-3) ಗೆದ್ದ ಬಾಜಪ ಇಂದಿನ ರಕ್ಷಣಾ ಮಂತ್ರಿಯಾಗಿರುವ ಶ್ರೀ ಮನೋಹರ್ ಪರಿಕ್ಕರ್ ಅವರನ್ನು ತನ್ನ ಮುಖ್ಯಮಂತ್ರಿಯನ್ನಾಗಿಸಿತು. ಕೇವಲ 9 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಬೇಕಾಗಿ ಬಂತು. ನಂತರ 2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ದಿಸಿ ಗೆದ್ದ ಮನೋಹರ್ ಪಣಿಕ್ಕರ್ ಕೇಂದ್ರದಲ್ಲಿ ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಆಗ ತೆರವಾದ ಮುಖ್ಯಮಂತ್ರಿಯ ಕುರ್ಚಿಯನ್ನು ಅಲಂಕರಿಸಿದವರು ಮನೋಹರ್ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದ ಶ್ರೀ ಲಕ್ಷಿಕಾಂತ್ ಪರೇಸ್ಕರ್. ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಪ್ರಚಾರಕರಾಗಿದ್ದವರು. 

ಮುಂದಿನ ವರ್ಷದ ಚುನಾವಣೆಯನ್ನು ಎದುರಿಸಲು ಬಾಜಪ ತಮ್ಮ ಮುಖ್ಯಮಂತ್ರಿಯಾದ ಲಕ್ಷ್ಮಿಕಾಂತ್ ಅವರನ್ನೇ ಅವಲಂಬಿಸುವ ಪರಿಸ್ಥಿತಿಯಿದೆ. ಆದರೆ ಪಕ್ಷದ ಆಂತರಿಕ ವಲಯದಲ್ಲಿ ಇವತ್ತಿಗೂ ಮನೋಹರ್ ಪಣಿಕ್ಕರ್ ಅವರ ಬಗ್ಗೆಯೇ ಹೆಚ್ಚು ಒಲವಿದ್ದರೂ, ಅವರು ಹಿಂದಿರುಗಿ ರಾಜ್ಯ ರಾಜಕಾರಣಕ್ಕೆ ಬರುವುದನ್ನು ಪಕ್ಷವಾಗಲಿ, ಅವರಾಗಲಿ ಒಪ್ಪಲು ಸಾದ್ಯವಿಲ್ಲ. ಹೀಗಾಗಿ ಕಳೆದೆರಡು ವರ್ಷಗಳಿಂದ ಮುಖ್ಯಮಂತ್ರಿಯಾಗಿರುವ ಪರೇಸ್ಕರ್ ಅವರೇ ಬಾಜಪವನ್ನು ಮುನ್ನಡೆಸಲಿದ್ದು ಸ್ವತ: ಮನೋಹರ್ ಪಣಿಕ್ಕರ್ ಅವರೇ ಇದನ್ನು ಖಚಿತ ಪಡಿಸಿದ್ದಾರೆ. ಇನ್ನು ಬಾಜಪದ ಮೈತ್ರಿಕೂಟದಲ್ಲಿ ಯಾವ ಬದಲಾವಣೆಯೂ ಆಗುವ ಸಾದ್ಯತೆಗಳಿಲ್ಲವಾಗಿ ಅದು ಯಾವುದೆ ಭಿನ್ನಮತಗಳಿಲ್ಲದೆ ಚುನಾವಣೆ ಎದುರಿಸಲು ಸಜ್ಜಾಗಿದೆ. ಸದ್ಯಕ್ಕೆ ಅದಕ್ಕಿರುವ ದೊಡ್ಡ ತೊಡಕೆಂದರೆ ಆಡಳಿತ ವಿರೋಧಿ ಅಲೆಯ ಭಯವಷ್ಟೆ!

ಇನ್ನು ಕಾಂಗ್ರೆಸ್ ಕೂಡ ತನ್ನ ಚುನಾವಣಾ ಸಿದ್ದತೆಗಳನ್ನು ಮಾಡಿಕೊಳ್ಳಲು ಪ್ರಾರಂಬಿಸಿದ್ದು, ಈ ಬಾರಿ ಅದು ಯಾವ ಪಕ್ಷಗಳ ಜೊತೆಗು ಮೈತ್ರಿ ಮಾಡಿಕೊಳ್ಳದಿರಲು ನಿರ್ದರಿಸಿದೆ. ಹಾಗೊಂದು ವೇಳೆ ಮೈತ್ರಿಯ ಅನಿವಾರ್ಯತೆ ಎದುರಾದರೆ ಬ್ಲಾಕ್ ಮಟ್ಟದಲ್ಲಿ ಪಕ್ಷದ ನಾಯಕರು ತೆಗೆದುಕೊಳ್ಳಬಹುದಾದ ತೀರ್ಮಾನಗಳನ್ನು ಆಧರಿಸಿಯೇ ತೆಗೆದುಕೊಳ್ಳಲಾಗುವುದೆಂದು ಅದರ ಕೇಂದ್ರ ನಾಯಕರು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಮಾಂಡೋವಿ ನದಿಯಿಂದ ಕ್ಯಾಸೀನೊಗಳನ್ನು ಸ್ಥಳಾಂತರಿಸುವ ವಿವಾದವನ್ನು ಕೈಗೆತ್ತಿಕೊಂಡಿರುವ ಕಾಂಗ್ರೆಸ್ ಬಾಜಪವು ಗೋವಾದ ಕ್ಯಾಸಿನೋ ಮಾಲೀಕರ ಜೊತೆ ಕೈ ಜೋಡಿಸಿ ಸರಕಾರ ನಡೆಸುತ್ತಿದ್ದಾರೆಂಬ ಗಂಭೀರ ಆರೋಪವನ್ನು ಸಹ ಮಾಡಿದೆ. ಗೋವಾ ಪ್ರದೇಶ ಕಾಂಗ್ರೆಸ್ ಅದ್ಯಕ್ಷ ಲೂಸಿನೊ ಫೆಲೆರೋ ಈ ಬಗ್ಗೆ ಮಾಧ್ಯಮಗಳ ಮೂಲಕ ತಮ್ಮ ಹೋರಾಟವನ್ನು ನಡೆಸುತ್ತಿದ್ದಾರೆ.

ಇವೆಲ್ಲಕ್ಕಿಂತ ಈ ಬಾರಿ ಗೋವಾ ಚುನಾವಣೆಗಳ ಮುಖ್ಯವಾದ ಅಂಶವೆಂದರೆ ದೆಹಲಿಯ ಗದ್ದುಗೆಯನ್ನು ಹಿಡಿದು ಕೂತಿರುವ ಆಮ್ ಆದ್ಮಿ ಪಕ್ಷದ ಶ್ರೀ ಅರವಿಂದ್ ಕೇಜ್ರೀವಾಲ್ ಗೋವಾದ ವಿದಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಭ್ಯರ್ಥಿಗಳನ್ನು ಹಾಕುವುದಾಗಿ ಘೋಷಿಸಿರುವುದಾಗಿದೆ. ಬಹುಶ: ಅಧಿಕಾರ ರೂಢ ಬಾಜಪಕ್ಕೆ ತಲೆ ನೋವಾಗಿರುವುದೇ ಇದು. ಇತ್ತೀಚೆಗೆ ಈ ಸಂಬಂದವಾಗಿ ಗೋವಾದಲ್ಲಿ ಒಂದು ರ್ಯಾಲಿಯನ್ನು ಉದ್ದೇಶಿಸಿ ಮಾತಾಡಿದ ಅರವಿಂದ್ ಕೇಜ್ರೀವಾಲರು 40 ಕ್ಷೇತ್ರಗಳ ಪೈಕಿ 35 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿ, ಹಿಂದೆ ದೆಹಲಿಯಲ್ಲಿ ಮಾಡಿದಂತೆ ಮನೆಮನೆಗೆ ತೆರಳಿ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತ ನೀಡುವ ಪ್ರಚಾರ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗೋವಾದ ಸ್ಥಳೀಯ ಸಮಸ್ಯೆಗಳ ಕುರಿತಾದ ಗೋವಾ ಸಂವಾದ್ ಎನ್ನುವ ಕೈಪಿಡಿಯನ್ನೂ ಈಗಾಗಲೇ ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ. ಗೋವಾದ ಸಾಕ್ಷರತೆ ಪ್ರಮಾಣ ಶೇಕಡಾ 88.70 ಇದ್ದು ಆಮ್ ಆದ್ಮಿ ಪಕ್ಷ ತನ್ನ ಪ್ರಣಾಳಿಕೆಗಳ ಮೂಲಕ ಹೆಚ್ಚು ಜನರನ್ನು ತಲುಪುವ ಸಾದ್ಯತೆ ಹೆಚ್ಚಾಗಿದೆ. ಆಮ್ ಆದ್ಮಿ ಪಕ್ಷದ ನಿಲುವನ್ನು ಮೆಚ್ಚಬಲ್ಲ ಜನರು ಗೋವಾದಲ್ಲಿ ಹೆಚ್ಚಿದ್ದರು, ಅದು ಈವರೆಗೆ ದೆಹಲಿಯಲ್ಲಿ ನಡೆಸಿದ ಆಡಳಿತದ ವೈಖರಿಯನ್ನು ಗಮನಿಸಿರುವ ಗೋವಾದ ಮತದಾರರು ಬಹಳ ಯೋಚಿಸಿಯೇ ಈ ತೀರ್ಮಾನಕ್ಕೆ ಬರಲಿದ್ದಾರೆ. 2017 ರಲ್ಲಿಯೇ ಅಧಿಕಾರ ಹಿಡಿಯಲು ಕಷ್ಟವೆಂಬುದನ್ನು ಅರಿತಿರುವ ಕೇಜ್ರೀವಾಲರು 2019ರ ಲೋಕಸಭಾ ಚುನಾವಣೆಗಾಗಿ ಈ ಚುನಾವಣೆಯನ್ನು ಪೂರ್ವಬಾವಿ ಸಿದ್ದತಾ ಚುನಾವಣೆಯನ್ನಾಗಿ ಬಳಸಿಕೊಳ್ಳಲು ನಿರ್ದರಿಸಿದಂತಿದೆ. ಆದರೆ ರಾಜಕಾರಣದಲ್ಲಿ ಒಂದು ವರ್ಷದ ಅವಧಿ ದೊಡ್ಡದು. ಹಾಗಾಗಿ ಮುಂದಿನ ಚುನಾವಣೆಯ ಹೊತ್ತಿಗೆ ಗೋವಾದ ರಾಜಕಾರಣದಲ್ಲಿ ಆಗಬಹುದಾದ ಬೆಳವಣಿಗೆಗಳನ್ನಾಗಲಿ, ಬೀಸಬಹುದಾದ ಹೊಸಗಾಳಿಯ ಬಗೆಗಾಗಲಿ ನಾವೀಗಲೇ ಭವಿಷ್ಯ ನುಡಿಯಲಾಗುವುದಿಲ್ಲ.

ಕೊನೆಯದಾಗಿ: ಕರ್ನಾಟಕದ ಉತ್ತರ ಭಾಗದಲ್ಲಿ ನಡೆಯುತ್ತಿರುವ ಕಳಸಾ ಬಂಡೂರಿ ಹೋರಾಟದ ಹಿನ್ನೆಲೆಯಲ್ಲಿ ನೋಡಿದರೆ ಬಾಜಪ ಅಥವಾ ಕಾಂಗ್ರೆಸ್ ಯಾವುದೇ ಪಕ್ಷ ಅಲ್ಲಿ ಅಧಿಕಾರಕ್ಕೆ ಬಂದರೂ ಮಹಾದಾಯಿ ನದಿ ನೀರಿನ ಹಂಚಿಕೆಗೆ ನ್ಯಾಯಾಧಿಕರಣದ ಆಚೆಗೊಂದು ಪರಿಹಾರ ಸಿಗುತ್ತದೆಯೆಂದು ನಂಬಲು ಸಾದ್ಯವಿಲ್ಲ. ಯಾಕೆಂದರೆ ಬಾಜಪವಾಗಲಿ, ಕಾಂಗ್ರೆಸ್ಸಾಗಲಿ ಮಹದಾಯಿ ನದಿಯನ್ನು ಮುಂದಿನ ಚುನಾವಣೆಯ ಮುಖ್ಯ ವಿಷಯವನ್ನಾಗಿ ಮಾಡಿ ಗೋವಾ ಜನರ ಮತಗಳನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಹೀಗಾಗಿ ಗೋವಾದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೇರಿದರೂ ನಾವು ನ್ಯಾಯಾಲಯದ ಮೂಲಕವೇ ಹೋರಾಡಿ ನೀರು ಪಡೆಯಬೇಕಾಗಿದೆ. ಗೋವಾ ಕನ್ನಡಿಗರು ತಮ್ಮದೇ ಆದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ರಾಜ್ಯದ ಹಿತಕಾಯುವ ಪಕ್ಷಕ್ಕೆ ನಮ್ಮ ಮತವೆಂದು ಘೋಷಿಸುವ ಸ್ಥಿತಿಯಲ್ಲಿ ಇಲ್ಲ. ಗೋವಾದ ಕನ್ನಡಿಗರಿಗೆ ಇವತ್ತಿಗೂ ಶಾಶ್ವತ ವಸತಿ ಸೌಲಭ್ಯವಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಲಭ್ಯತೆಯಾಗಲಿ ಇಲ್ಲದೆ ಅತಂತ್ರ ಸ್ತಿತಿಯಲ್ಲಿರುವುದರಿಂದ ನಾವು ಅವರಿಂದ ಅಂತಹದೊಂದು ನಿರೀಕ್ಷೆ ಇಟ್ಟುಕೊಳ್ಳುವುದು ಕೂಡ ತಪ್ಪಾಗುತ್ತದೆ. ಹಾಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗಳ ನಂತರ ಮಹಾದಾಯಿ ಸಮಸ್ಯೆ ಬಗೆ ಹರಿದು ಬಿಡುತ್ತದೆಯೆಂದು ನಂಬುವುದು ಮೂರ್ಖತನವಗುತ್ತದೆ. 

ಆಗ 9, 2016

ಉತ್ತರಪ್ರದೇಶದ ಜಾತಿ ರಾಜಕಾರಣ: ದಲಿತರು ವರ್ಸಸ್ ಸವರ್ಣೀಯರು

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
09/08/2016
ನಾನು ಈ ಹಿಂದೆಯೇ ಬಹಳಷ್ಟು ಬಾರಿ ಬರೆದಂತೆ ಜಾತಿ ರಾಜಕಾರಣ ಈ ದೇಶದ ಕ್ರೂರ ವಾಸ್ತವವಾಗಿದ್ದು ಅದನ್ನು ಕಡೆಗಣಿಸಿ ಚುನಾವಣಾ ರಾಜಕೀಯ ಮಾಡುವುದು ಕಷ್ಟಸಾದ್ಯದ ಮಾತಾಗಿದೆ. ಅದರಲ್ಲೂ ಉತ್ತರಪ್ರದೇಶದಂತಹ ರಾಜ್ಯದ ಸಮಾಜದಲ್ಲಿ ಜಾತಿ ಎನ್ನುವುದು ಆಳವಾಗಿ ಬೇರು ಬಿಟ್ಟಿದ್ದು ಅದನ್ನು ಮೀರಿ ರಾಜಕಾರಣ ಮಾಡಲು ಇದುವರೆಗೂ ಯಾವ ಪಕ್ಷಕ್ಕೂ ಸಾದ್ಯವಾಗಿಲ್ಲ. ಇನ್ನೇನು ಮುಂದಿನ ವರ್ಷ ಈ ರಾಜ್ಯದಲ್ಲಿ ವಿದಾನಸಭಾ ಚುನಾವಣೆಗಳು ನಡೆಯುತ್ತಿದ್ದು, ಜಾತಿಸಮೀಕರಣಗಳ ಲೆಕ್ಕಾಚಾರಗಳು ಈಗಾಗಲೇ ಶುರುವಾಗಿ, ತಮ್ಮ ಪರಾಕಾಷ್ಠೆ ತಲುಪಿವೆ. ಮೊನ್ನಿನ ಮಾಯಾವತಿಯವರ ಪ್ರಕರಣವಾದ ನಂತರ ಈ ಜಾತಿ ಲೆಕ್ಕಾಚಾರಗಳು ಇನ್ನಷ್ಟು ತೀವ್ರಗೊಂಡು ಸ್ವಲ್ಪ ಬದಲಾವಣೆಯೊಂದಿಗೆ ದಲಿತ ವರ್ಸಸ್ ಸವರ್ಣೀಯ ಎನ್ನುವ ಮಟ್ಟಕ್ಕೆ ಹೋಗಿ ನಿಂತಿದೆ.

ಕಳೆದ ತಿಂಗಳು ಉತ್ತರಪ್ರದೇಶದ ಬಾಜಪ ಪಕ್ಷದ ರಾಜ್ಯ ಘಟಕದ ಉಪಾದ್ಯಕ್ಷರಾದ ಶ್ರೀ ದಯಾಶಂಕರ್ ಸಿಂಗ್ ಅವರು ಮಾಯಾವತಿಯವರು ಚುನಾವಣಾ ಟಿಕೇಟುಗಳನ್ನು ಮಾರಾಟ ಮಾಡುತ್ತಿದ್ದಾರೆಂಬ ಅವರ ಪಕ್ಷದ ನಾಯಕರುಗಳ ಆರೋಪವನ್ನು ಪ್ರಸ್ತಾಪಿಸುತ್ತ. ಹೀಗೆ ಟಿಕೇಟು ಮಾರುವ ಮಾಯಾವತಿಯವರನ್ನು ವೇಶ್ಯೆಗೆ ಹೋಲಿಸಿದ್ದರು. ಈ ಮಾತು ಉತ್ತರಪ್ರದೇಶ ಮಾತ್ರವಲ್ಲದೆ ಇಡಿ ರಾಷ್ಟ್ರದಾದ್ಯಂತ ಅಲ್ಲೋಲ ಕಲ್ಲೋಲವನ್ನೇ ಸೃಷ್ಠಿಸಿತು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಮಾಯಾವತಿಯವರು ದಯಾಶಂಕರ್ ಅವರನ್ನು ಬಂದಿಸಿ ಕ್ರಮ ತೆಗೆದುಕೊಳ್ಳಬೇಕೆಂದೂ, ಹಾಗು ಬಾಜಪ ಕ್ಷಮೆ ಕೋರಬೇಕೆಂದು ಒತ್ತಾಯಿಸಿದರು. ಇಷ್ಟರಲ್ಲಿ ಬಾಜಪಕ್ಕೆ ಆದ ಅನಾಹುತದ ಅರಿವಾಗಿದ್ದಂತಿತ್ತು. ಅದು ದಯಾಶಂಕರ್ ಅವರನ್ನು ಉಪಾದ್ಯಕ್ಷ ಹುದ್ದೆಯಿಂದ ವಜಾ ಮಾಡಿತು. ಆದರೆ ಇಷ್ಟಕ್ಕೆ ತೃಪ್ತರಾಗದ ಬಹುಜನ ಪಕ್ಷದ ನಾಯಕರುಗಳು ರಾಜ್ಯದೆಲ್ಲೆಡೆ ಪ್ರತಿಭಟನೆಗಳನ್ನು ಶುರು ಮಾಡಿದ್ದರು. ದೇಶದಲ್ಲಿ ಹೆಚ್ಚಾಗುತ್ತಿರುವ ದಲಿತರ ಮೇಲಿನ ಹಲ್ಲೆಗಳ ಬಗ್ಗೆ ರಾಷ್ಟ್ರದಲ್ಲಿ ಚರ್ಚೆಯಾಗುತ್ತಿರುವಾಗಲೇ ನಡೆದ ಈ ಘಟನೆ ಬಾಜಪದ ಮಟ್ಟಿಗೆ ದೊಡ್ಡ ಹೊಡೆತವಾಗಿತ್ತು. ಮುಂದಿನ ವರ್ಷ ನಡೆಯಲಿರುವ ವಿದಾನಸಭಾ ಚುನಾವಣೆಗಳ ಮೇಲೆ ದಯಾಶಂಕರ್ ಅವರ ಹೇಳಿಕೆ ಪ್ರತಿಕೂಲ ಪರಿಣಾಮ ಬೀರುವ ಸಾದ್ಯತೆಗಳನ್ನು ಗಮನಿಸಿದ ಬಾಜಪ ಅವರನ್ನು ಪಕ್ಷದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿತು. ಉತ್ತರಪ್ರದೇಶದ ಪೋಲಿಸರು ಅವರ ಮೇಲೆ ಕೇಸು ದಾಖಲಿಸಿ ಬಂದಿಸಲು ಪ್ರಯತ್ನಿಸಿದರು. ಆದರೆ ಈ ನಡುವೆ ದಯಾಶಂಕರ್ ಸಿಂಗ್ ಯಾರ ಕೈಗೂ ಸಿಗದೆ ನಾಪತ್ತೆಯಾಗಿದ್ದರು. ಗುಜರಾತಿನಲ್ಲಿ ನಡೆದ ದಲಿತ ಯುವಕರ ಮೇಲಿನ ಹಲ್ಲೆಯ ವಿಚಾರದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ವಿರೋಧಪಕ್ಷಗಳ ಟೀಕೆಯನ್ನು ಎದುರಿಸುತ್ತಿರುವಾಗಲೇ ದಯಾಶಂಕರ್ ಮಾಡಿಕೊಂಡ ಈ ಎಡವಟ್ಟು ಮುಂದಿನ ಚುನಾವಣೆಯಲ್ಲಿ ದಲಿತರ ಬೆಂಬಲ ಗಳಿಸುವ ಬಾಜಪದ ಪ್ರಯತ್ನಕ್ಕೆ ತಣ್ಣೀರೆರಚಿದಂತಾಯಿತು. ಬಹುತೇಕ ಬಾಜಪೇತರ ಪಕ್ಷಗಳು ಮಾಯಾವತಿಯವರ ಬೆಂಬಲಕ್ಕೆ ನಿಂತಿದ್ದು ಬಾಜಪದ ಮಟ್ಟಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿತು. ಇನ್ನೇನು ಉತ್ತರಪ್ರದೇಶದಲ್ಲಿ ಬಹುಜನ ಪಕ್ಷಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆಯೆಂದು ಅಂದುಕೊಳ್ಳುವಷ್ಟರಲ್ಲಿ ಮಾಯಾವತಿಯವರ ಬೆಂಬಲಿಗರು ಬಹುಜನ ಪಕ್ಷದ ಮಾಜಿ ಸಚಿವ ನಸೀಮುದ್ದೀನ್ ಸಿದ್ದೀಕಿ ನೇತೃತ್ವದಲ್ಲಿ ಲಕ್ನೋವಿನ ಹಜರತ್‍ಗಂಜಿನಲ್ಲಿ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಎಲ್ಲ ಮಿತಿಗಳನ್ನು, ಮರ್ಯಾದೆಗಳನ್ನೂ ಮೀರಿ, ದಯಾಶಂಕರ್ ಅವರ ಪತ್ನಿ ಸ್ವಾತಿ ಸಿಂಗ್ ಮತ್ತು ಅವರ ಹದಿಮೂರು ವರ್ಷ ವಯಸ್ಸಿನ ಅಪ್ರಾಪ್ತ ಮಗಳ ಬಗ್ಗೆ ಕೂಗಿದ ಘೋಷಣೆಗಳು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದವು. ತಮ್ಮ ಪಕ್ಷದ ಮೇಲಾದ ಈ ಆಘಾತದಿಂದ ಚೇತರಿಸಿಕೊಳ್ಳದ ಬಾಜಪ ನಾಯಕರುಗಳು ಮೌನಕ್ಕೆ ಶರಣಾಗಿ ಬಿಟ್ಟಿದ್ದರು. 

ಆಗಲೇ ಕೇಳಿಬಂದಿದ್ದು ದಯಾಶಂಕರ್ ಅವರ ಪತ್ನಿ ಸ್ವಾತಿ ಸಿಂಗ್ ಅವರ ಮರು ಪ್ರತಿಭಟನೆಯ ದ್ವನಿ! ತನ್ನ ಹಾಗು ತನ್ನ ಮಗಳ ವಿರುದ್ದ ಕೇಳಿಬಂದ ಅಸಭ್ಯ ಘೋಷಣೆಗಳನ್ನು ಗಂಭೀರವಾಗಿ ತೆಗೆದುಕೊಂಡ ಆಕೆ ಈ ಬಗ್ಗೆ ಮಾಯಾವತಿಯವರನ್ನು, ಅವರ ಪಕ್ಷವನ್ನು ಬಹಿರಂಗವಾಗಿ ಎದುರಿಸಲು ಸಿದ್ದರಾಗಿ ಬಿಟ್ಟಿದ್ದರು. ಈ ಕುರಿತಂತೆ ಆಕೆ ಮಾಯಾವತಿ ಮತ್ತು ಉಳಿದವರ ಮೇಲೆ ಪೋಲಿಸ್ ಠಾಣೆಗೆ ದೂರನ್ನು ಕೂಡ ಸಲ್ಲಿಸಿದರು. ಸ್ವಾತಿಯವರ ಈ ಒಂದು ನಡೆ ಹಿಂಜರಿಕೆಯಲ್ಲಿದ್ದ ಬಾಜಪಕ್ಕೆ ಹೊಸ ಚೈತನ್ಯ ನೀಡಿತು, ಅದುವರೆಗು ಮೌನವಾಗಿದ್ದ ಬಾಜಪ ಈ ಅವಕಾಶವನ್ನೂ, ಸ್ವಾತಿಯವರ ಪ್ರತಿ ಆಕ್ರಮಣಕಾರಿ ನಿಲುವನ್ನೂ ಬಳಸಿಕೊಂಡು ಬಹುಜನ ಪಕ್ಷದ ದಯಾಶಂಕರ್ ಕುಟುಂಬದ ಹೆಣ್ಣು ಮಕ್ಕಳ ಬಗೆಗಿನ ಅಸಭ್ಯ ಮಾತುಗಳನ್ನು ಠಾಕೂರ್ ಸಮಾಜದ ವಿರುದ್ದದ ದಲಿತರ ಉದ್ದಟತನದ ಹೇಳಿಕೆಗಳೆಂದು ಬಿಂಬಿಸಿ ಎರಡೂ ಪಕ್ಷಗಳ ಇಬ್ಬರು ನಾಯಕರುಗಳ ಜಟಾಪಟಿಯನ್ನು ಎರಡು ಜಾತಿಗಳ ಜಗಳವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಯಿತು. ಸ್ವಾತಿಸಿಂಗ್ ಮೇಲಿನ ಅಸಭ್ಯತನದ ಮಾತುಗಳು ತಮ್ಮ ಠಾಕೂರ್ ಸಮುದಾಯದ ಆತ್ಮಗೌರವಕ್ಕೆ ಬಿದ್ದ ಪೆಟ್ಟೆಂಬಂತೆ ಆ ಸಮುದಾಯದ ನಾಯಕರುಗಳು ಹೇಳಿಕೆ ನೀಡತೊಡಗಿದರು. ಇದರ ನಡುವೆ ಮೊದಲಿಂದಲು ದಲಿತರ ಮೇಲೆ ಅಸಹನೆ ಹೊಂದಿದ್ದ ಉಳಿದೆಲ್ಲ ಮೇಲ್ಜಾತಿಗಳು ಸಹ ಸ್ವಾತಿ ಸಿಂಗ್ ಬೆಂಬಲಕ್ಕೆ ನಿಂತು ಬಿಟ್ಟವು. ಇದೇ ಸಮಯದಲ್ಲಿ ಸ್ವಾತಿಸಿಂಗ್‍ರವರು ಮಾಯಾವತಿ, ಸಿದ್ದೀಕಿ,ಮತ್ತು ಇನ್ನಿತರೇ ಬಹುಜನ ಪಕ್ಷದ ನಾಯಕರುಗಳ ಮೇಲೆ ಎಫ್.ಐ.ಆರ್.ದಾಖಲಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲಿಯವರೆಗು ರಕ್ಷಣಾತ್ಮಕವಾಗಿ ತನ್ನ ನಡೆಗಳನ್ನು ನಡೆಸುತ್ತಿದ್ದ ಬಾಜಪ ಪ್ರತಿ ಆಕ್ರಮಣದ ತೀವ್ರತೆಯನ್ನು ಹೆಚ್ಚಿಸಿ, ಇಡೀ ಘಟನೆಯನ್ನು ದಲಿತರು ವರ್ಸಸ್ ಸವರ್ಣೀಯರು ಎನ್ನುವ ಮಟ್ಟಕ್ಕೆ ತಂದು ನಿಲ್ಲಿಸಿತು. ಇದರಿಂದ ವಿಚಲಿತರಾದ ಮಾಯಾವತಿ ಪ್ರತಿಭಟನೆಗಳ ತೀವ್ರತೆಯನ್ನು ಕಡಿಮೆ ಮಾಡಿ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ತಮ್ಮ ಪಕ್ಷದವರಿಗೆ ತಾಕೀತು ಮಾಡಬೇಕಾಯಿತು. ಈ ಹಂತದಲ್ಲಿ ಮಾಯಾವತಿಯವರಿಗೆ ವಾಸ್ತವದ ಅರಿವಾಗಿತ್ತು. ಅವರಿಗೆ ಕೇವಲ ಠಾಕೂರ್ ಸಮುದಾಯದ ಮತಗಳ ಅಗತ್ಯಕ್ಕಿಂತ ಹೆಚ್ಚಾಗಿ ಬೇರೆ ಸವರ್ಣೀಯರ ಮತಗಳೂ ಬಹುಮುಖ್ಯವೆಂದು ಗೊತ್ತಿತ್ತು. ಯಾಕೆಂದರೆ ಶೇಕಡಾ 22 ರಷ್ಟಿರುವ ದಲಿತ ಮತಗಳು ಸಂಪೂರ್ಣವಾಗಿ ಬಹುಜನ ಪಕ್ಷಕ್ಕೆ ಬಂದರೂ ಅಧಿಕಾರ ಹಿಡಿಯಲು ಉಳಿದ ಸುಮಾರು ಶೇಕಡಾ 12ರಿಂದ 14 ರಷ್ಟು ಮತಗಳು ಬೇರೆ ಸಮುದಾಯಗಳಿಂದಲೇ ಬರಬೇಕಾಗಿತ್ತು. ಇನ್ನು ಕಳೆದಬಾರಿ ಸಮಾಜವಾದಿ ಪಕ್ಷವನ್ನು ಬೆಂಬಲಿಸಿದ್ದ ಮುಸ್ಲಿಮರು ಈ ಬಾರಿ ಯಾವ ಪಕ್ಷವನ್ನು ಬೆಂಬಲಿಸಬಹುದೆಂಬ ಬಗ್ಗೆ ಯಾರಿಗೂ ನಿಖರ ಮಾಹಿತಿಯಿಲ್ಲ. ಹೀಗಾಗಿ ಶೇಕಡಾ ಹತ್ತರಷ್ಟಿರುವ ಬ್ರಾಹ್ಮಣ ಸಮುದಾಯದ ಮತಗಳು ಸಹ ದಲಿತ-ಸವರ್ಣೀಯರ ಜಟಾಪಟಿಯಲ್ಲಿ ಬೇರೆ ಪಕ್ಷಗಳಿಗೆ ಹೋದರೆ ತಮ್ಮ ಪಕ್ಷ ಬಹುಮತ ಗಳಿಸಿವುದು ಕಷ್ಟವೆಂಬುದು ಅವರಿಗೆ ಗೊತ್ತಾಗಿದೆ. ಅವರ ಇಂತಹ ಸಂಕಷ್ಟ ಸಮಯದಲ್ಲಿಯೇ ಇಬ್ಬರು ಶಾಸಕರು ಮಾಯಾವತಿಯವರು ಟಿಕೇಟುಗಳನ್ನು ಮಾರುತ್ತಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿದ್ದಾರೆ. ಇವರಿಬ್ಬರನ್ನೂ ಸೇರಿಸಿದರೆ ಇದುವರೆಗೂ ಸುಮಾರು ಆರುಜನ ನಾಯಕರು ಬಹುಜನ ಪಕ್ಷ ತೊರೆದಿದ್ದಾರೆಂಬುದು ಮಾಯಾವತಿಯವರ ಆತಂಕಕ್ಕೆ ಕಾರಣವಾಗಿದೆ.

ತಮ್ಮ ಪಕ್ಷಗಳ ನಾಯಕರುಗಳನ್ನು, ಕಾರ್ಯಕರ್ತರುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳದೇ ಹೋದರೆ ಎಂತೆಂತಹ ದುಷ್ಪರಿಣಾಮಗಳು ಸಂಭವಿಸುತ್ತವೆಯೆಂಬುದನ್ನು ಉತ್ತರಪ್ರದೇಶದ ಬಾಜಪ ಮತ್ತು ಬಹುಜನ ಪಕ್ಷಗಳ ನಡವಳಿಕೆಗಳೀಗ ತೋರಿಸಿಕೊಟ್ಟಿವೆ. ಎರಡು ಪಕ್ಷಗಳ ಇಬ್ಬರು ನಾಯಕರುಗಳ ವಾಕ್ ಸಮರ ಉತ್ತರಪ್ರದೇಶದ ಸಮಾಜವನ್ನು ನಿಖರವಾಗಿ ಎರಡು ಹೋಳಾಗಿ ಮಾಡಿದೆ. ಉತ್ತರಪ್ರದೇಶ ಬಾಜಪದ ರಾಜ್ಯಘಟಕದ ಉಪಾದ್ಯಕ್ಷ ಶ್ರೀ ದಯಾಶಂಕರ್ ಸಿಂಗ್ ಆಡಿದ ಒಂದು ಮಾತು ಮತ್ತು ಅದಕ್ಕೆ ಪ್ರತ್ಯುತ್ತರವಾಗಿ ಮಾಯಾವತಿ ಮತ್ತವರ ಹಿಂಬಾಲಕರು ನೀಡಿದ ಸಾರ್ವಜನಿಕ ಹೇಳಿಕೆಗಳಿಂದಾಗಿ ದಲಿತರ ಮತ್ತು ಸವರ್ಣೀಯರ ನಡುವಿನ ಬಿರುಕು ಒಂದು ಹೆಜ್ಜೆ ಮುಂದೆ ಹೋಗಿ ಮಾಯಾವತಿ( ದಲಿತರ ಮಗಳು) ಮತ್ತು ಸ್ವಾತಿಸಿಂಗ್ (ಮಾನವತೆಯ ಮಗಳು) ಎಂಬಲ್ಲಿಗೆ ಬಂದು ನಿಂತಿದೆ.

ಮುಂದಿನ ದಿನಗಳಲ್ಲಿ ಇಂತಹ ಜಾತಿ ರಾಜಕಾರಣದ ಒಳಸುಳಿಗಳು ಇನ್ನಷ್ಟು ಹೆಚ್ಚಾಗಲಿದ್ದು ಮತಗಳಿಕೆಗಾಗಿ ಎಂತಹ ಕೃತ್ಯಗಳಿಗು ಸಿದ್ದವಾಗುವ ರಾಜಕೀಯ ಪಕ್ಷಗಳ ಭವಿಷ್ಯದ ನಡೆಗಳು ಗಾಬರಿಗೊಳಿಸುವಂತಿವೆ.

ಜುಲೈ 30, 2016

ಬಾಜಪದ ಓಟಕ್ಕೆ ಕಡಿವಾಣ ಹಾಕಲಿರುವ ಕಾಂಗ್ರೆಸ್ಸೇತರ ಪಕ್ಷಗಳು

ಕು.ಸ.ಮಧುಸೂದನರಂಗೇನಹಳ್ಳಿ
30/07/2016
ರಾಜಕಾರಣದಲ್ಲಿ ಸತತ ಗೆಲುವೆಂಬುದಾಗಲಿ, ಸೋಲೆಂಬುದಾಗಲಿ ಇರುವುದಿಲ್ಲ. ಅದರಲ್ಲೂ ಇಂಡಿಯಾದಂತಹ ಬಹುಸಂಸ್ಕೃತಿಯ, ಬಹುಬಾಷೆಯ, ವಿಶಾಲ ರಾಷ್ಟ್ರದಲ್ಲಿ ಕಾಲದಿಂದ ಕಾಲಕ್ಕೆ ಪ್ರದೇಶದಿಂದ ಪ್ರದೇಶಕ್ಕೆ ಜನರ ರಾಜಕೀಯ ಒಲವುಗಳು ಬದಲಾಗುತ್ತಲೇ ಇರುತ್ತವೆ. ಇಲ್ಲಿ ಒಬ್ಬ ರಾಜಕಾರಣಿಯನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಲು ಜನ ರಾಜಕಾರಣದ ಒಂದೇ ಮಾನದಂಡವನ್ನು ಅನುಸರಿಸುವುದಿಲ್ಲ. ಬದಲಿಗೆ ಜನಪ್ರತಿನಿದಿಯೊಬ್ಬನ ಆಯ್ಕೆಯ ಮೆಲೆ ಆತನ ಜಾತಿ, ಧರ್ಮ, ಆರ್ಥಿಕ ಹಿನ್ನೆಲೆಗಳೂ ಪ್ರಬಾವ ಬೀರುವುದರಿಂದ ಎಲ್ಲವೂ ಪೂರ್ವನಿರ್ದಾರಿತವಾಗಿ ನಡೆಯುವುದು ಕಷ್ಟ. ಹಾಗಾಗಿಯೇ ಗೆಲ್ಲುವ ಆತ್ಮವಿಶ್ವಾಸದಿಂದ ಬೀಗುವ ಪಕ್ಷಗಳು ಅವಮಾನಕಾರಿಯಗಿ ಸೋಲನ್ನಪ್ಪುವುದು, ಸೋಲುತ್ತವೆಯೆಂದು ನಾವು ತೀರ್ಮಾನಿಸಿದ ಪಕ್ಷಗಳು ಬಾರಿ ಗೆಲುವು ಸಾದಿಸುವುದು ಇಂಡಿಯಾದ ಪ್ರಜಾಸತ್ತೆಯಲ್ಲಿ ಮಾಮೂಲಾಗಿದೆ. ಅದರ ಎಲ್ಲ ದೌರ್ಬಲ್ಯಗಳ ಹೊರತಾಗಿಯೂ ಇಂಡಿಯಾದ ಪ್ರಜಾಪ್ರಭುತ್ವದ ಸೌಂದರ್ಯ ಅಡಗಿರುವುದೆ ಇಂತಹ ಆಕಸ್ಮಿಕಗಳಲ್ಲಿ. 2015ರ ಮೊದಲಿಗೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಗಳಿಸಿದ ಅಭೂತಪೂರ್ವ ಗೆಲುವು ಅಂತಹ ಅಚ್ಚರಿಗಳಲ್ಲಿ ಒಂದು, ಇರಲಿ.

2014ರ ಲೋಕಸಭಾ ಚುನಾವಣೆಯ ಹೊತ್ತಿಗೆ ಇಡೀ ದೇಶ ನರೇಂದ್ರ ಮೋದಿಯವರ ಜಪ ಮಾಡುವಷ್ಟರ ಮಟ್ಟಿಗೆ ಅವರ ಜನಪ್ರಿಯತೆ ಉತ್ತುಂಗದಲ್ಲಿತ್ತು. ಬಾಜಪೇತರ ಪಕ್ಷಗಳ ನಾಯಕರುಗಳು ಸಹ ಮೋದಿ ಅಲೆಯ ಪ್ರಬಾವವನ್ನು ತಳ್ಳಿ ಹಾಕಲಾಗದಷ್ಟು ಬಲವಾಗಿ ಮೋದಿ ಪರ ಗಾಳಿ ಬೀಸ ತೊಡಗಿತ್ತು. ಆದರೆ ಚುನಾವಣೆಯ ಪಲಿತಾಂಶ ಬಂದಾಗ ಚಿತ್ರಣವೇ ಬೇರೆಯಾಗಿತ್ತು. ಕಾರಣ, ಸುಮಾರು 200 ರಿಂದ 240 ಸ್ಥಾನಗಳನ್ನು ಗೆಲ್ಲಬುದೆಂದು ಅಂದಾಜು ಮಾಡಲಾಗಿದ್ದ ಬಾಜಪ ಸ್ಪಷ್ಟ ಬಹುಮತ ಪಡೆದು ಒಂದು ರೀತಿಯ ಅಚ್ಚರಿಗೆ ಕಾರಣವಾಗಿತ್ತು. ಇನ್ನೊಂದೆಡೆ ದೇಶದಾದ್ಯಂತ ಬಾಜಪದ ಪರ ಒಲವಿದೆಯೆಂದು ಊಹಿಸಿದ್ದವರಿಗೆ ಅಚ್ಚರಿಯಾಗುವಂತೆ ಬಾಜಪ ದೇಶದ ಕೆಲವು ಪ್ರದೇಶಗಳಲ್ಲಿ ಶೂನ್ಯ ಸಾಧನೆ ಮಾಡಿ ಇನ್ನೊಂದು ತೆರನಾದ ಅಚ್ಚರಿಗೆ ಕಾರಣವಾಯಿತು. ದೇಶದ ಉತ್ತರ ಮತ್ತು ಪಶ್ಚಿಮದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಹುಮತ ಪಡೆದಿದ್ದ ಬಾಜಪ ದೇಶದ ಪೂರ್ವ ಮತ್ತು ದಕ್ಷಿಣ ಭಾಗದಲ್ಲಿ-ಕರ್ನಾಟಕ ಹೊರತು ಪಡಿಸಿ ಹೇಳಿಕೊಳ್ಳುವಂತಹ ಸಾಧನೆಯನ್ನೇನು ಮಾಡಲಿಲ್ಲ. ಬಾಜಪದ ಬೆಂಬಲಿಗರು ಏನೇ ಹೇಳಿಕೊಂಡರೂ ಬಾಜಪ ಪಕ್ಷ ಹಿಂದಿ ಮಾತನಾಡುವ ಹೃದಯ ಭಾಗದಲ್ಲಿ ಮಾತ್ರವೇ ಮನ್ನಣೆ ಪಡೆದ ಪಕ್ಷವೆಂಬುದನ್ನು ಸದರಿ ಚುನಾವಣೆ ಸಾಬೀತು ಮಾಡಿತು.

ಇದಕ್ಕೆ ಪೂರಕವೆಂಬಂತೆ ದಕ್ಷಿಣದ ಕೇರಳ, ತಮಿಳುನಾಡು, ಪುದುಚೇರಿ, ತೆಲಂಗಾಣ, ಆಂದ್ರ ಪ್ರದೇಶಗಳಲ್ಲಿ ಬಾಜಪದ ಸಾಧನೆಯೇನು ಹೇಳಿ ಕೊಳ್ಳುವಂತಿರಲಿಲ್ಲ. ಅದೇ ರೀತಿ ಪೂರ್ವದ ಪಶ್ಚಿಮ ಬಂಗಾಳ, ಒಡಿಸ್ಸಾ, ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮುಂತಾದೆಡೆಗಳಲ್ಲಿ ಬಾಜಪ ಯಾವ ಪ್ರಬಾವವನ್ನೂ ಬೀರಲಾಗಿರಲಿಲ್ಲ. ಇದರಿಂದ ಅರ್ಥವಾಗುವುದೇನೆಂದರೆ ಲೋಕಸಭೆಯಲ್ಲಿ ಬಹುಮತ ಪಡೆದ ಬಾಜಪ ಒಂದು ರಾಷ್ಟ್ರೀಯ ಪಕ್ಷವಾಗಿ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತನ್ನ ಅಸ್ಥಿತ್ವವನ್ನು ತೋರಿಸುವಲ್ಲಿಯಂತು ವಿಫಲವಾಯಿತು.

ಬಾಜಪದ ಈ ಭಾಗಶ: ಯಶಸ್ಸಿಗೆ ಕಾರಣವೇನೇ ಇದ್ದರೂ ಅದು 2019ರ ಚುನಾವಣೆಯ ವೇಳೆಗೆ ರಾಷ್ಟ್ರದಾದ್ಯಂತ ವ್ಯಾಪಿಸಿ ಎಲ್ಲ ರಾಜ್ಯಗಳಲ್ಲಿಯೂ ಗೆಲುವು ಸಾಧಿಸುತ್ತದೆಯೆಂಬ ಅಭಿಪ್ರಾಯವನ್ನು ಅದರ ರಾಷ್ಟ್ರಾದ್ಯಕ್ಚರಾದಿಯಾಗಿ ಬಹುತೇಕ ನಾಯಕರುಗಳು ವ್ಯಕ್ತ ಪಡಿಸಿದರೂ ಅದು ಅಷ್ಟು ಸುಲಭದ ಕೆಲಸವೇನು ಅಲ್ಲ. ಬಾಜಪದ ಯಶಸ್ಸಿನಲ್ಲಿಯೇ ಅದರ ವಿಫಲತೆಯ ಕಾರಣಗಳೂ ಇವೆಯೆಂಬುದನ್ನು ನಾವು ಮರೆಯಬಾರದು. ಬಾಜಪದ ಗೆಲುವಿನ ಓಟ ಶಾಶ್ವತವೂ ಅಲ್ಲ, ನಿರಂತರವೂ ಅಲ್ಲ ಎಂಬುದನ್ನು ಕಳೆದ ಎರಡು ವರ್ಷಗಳಲ್ಲಿ ನಡೆದ ರಾಜ್ಯಗಳ ವಿದಾನಸಭೆಯ ಚುನಾವಣೆಗಳು ತೋರಿಸಿಕೊಟ್ಟಿವೆ, ಬಾಜಪ ಮಾತೆತ್ತಿದರೆ ಕಾಂಗ್ರೆಸ್ ಮುಕ್ತ ಭಾರತದ ಅಹಮ್ಮಿನ ಮಾತುಗಳನ್ನಾಡುತ್ತಲೇ ಕಾಂಗ್ರೆಸ್ಸನ್ನು ಜೀವಂತವಾಗಿಡುತ್ತಿದೆ. ಯಾಕೆಂದರೆ ಅಧಿಕಾರದಲ್ಲಿರುವ ಪಕ್ಷವೊಂದು ಇನ್ನೊಂದು ಪಕ್ಷವನ್ನು ಮುಗಿಸಿ ಬಿಡುವ ಮಾತಾಡತೊಡಗಿದೊಡನೆ ಮತದಾರರ ಮನಸಿನಲ್ಲಿ ಅನುಮಾನವೊಂದು ಹೆಡೆಯೆತ್ತುದೆ. ಸರ್ವಾಧಿಕಾರಿ ಧೋರಣೆಯನ್ನು ಸಹಿಸಿಕೊಳ್ಳದ ಭಾರತೀಯ ಮನಸ್ಥಿತಿ ಇಂತಹ ಹೇಳಿಕೆಗಳನ್ನು ನೀಡುವ ಪಕ್ಷವನ್ನು ದೀರ್ಘಕಾಲದಲ್ಲಿ ತಿರಸ್ಕರಿಸಲು ಪ್ರಯತ್ನಿಸುತ್ತದೆ. ಕಾಂಗ್ರೆಸ್ ಮುಕ್ತ ಭಾರತದ ಮಾತಾಡುವ ಬಾಜಪದ ಬಗ್ಗೆ ಪ್ರಾದೇಶಿಕ ಪಕ್ಷಗಳಿಗೂ ಸಹಜವಾದ ಭಯ ಪ್ರಾರಂಭವಾಗಿ ಅವು ಇನ್ನಷ್ಟು ಗಟ್ಟಿಯಾಗಿ ಬೆಳೆಯಲು ತಯಾರಾಗತೊಡಗುತ್ತವೆ. ಯಾಕೆಂದರೆ ಇವತ್ತು ಒಂದು ರಾಷ್ಟ್ರೀಯ ಪಕ್ಷವನ್ನೇ ಇಲ್ಲವಾಗಿಸಲು ಪ್ರಯತ್ನಿಸುವ ಪಕ್ಷವೊಂದು ಪ್ರಾದೇಶಿಕ ಪಕ್ಷಗಳನ್ನು ಉಳಿಯಲು ಬಿಡುವುದಿಲ್ಲ ಎಂಬ ಸತ್ಯ ಅವುಗಳಿಗೂ ಮನವರಿಕೆಯಾಗುತ್ತ ಹೋಗುತ್ತದೆ. ಇಂತಹ ಅಹಮ್ಮಿನ ಮಾತುಗಳ ಪ್ರಬಾವ ಈಗಾಗಲೇ ಆಗತೊಡಗಿರುವುದನ್ನು ಕೆಲವು ರಾಜ್ಯಗಳಲ್ಲಿ ನಾವು ನೋಡಿಯಾಗಿದೆ. ಸ್ವಲ್ಪ ಅವುಗಳತ್ತ ಗಮನ ಹರಿಸೋಣ:

2014ರ ಲೋಕಸಭಾ ಚುನಾವಣೆಗಳು ಮುಗಿದ ಕೆಲವೇ ತಿಂಗಳುಗಳಲ್ಲಿ ದೆಹಲಿ ವಿದಾನಸಭೆಗೆ ನಡೆದ ಚುನಾವಣೆಗಳು ಮೊಟ್ಟ ಮೊದಲಬಾರಿಗೆ ಮೋದಿಯ ಅಲೆಗೆ, ಬಾಜಪದ ನಾಗಾಲೋಟಕ್ಕೆ ಕಡಿವಾಣ ಹಾಕಿದವು. ಅರವಿಂದ್ ಕೇಜ್ರೀವಾಲಾರ ಆಮ್ ಆದ್ಮಿ ಪಕ್ಷ ಒಟ್ಟು 70ಸ್ಥಾನಗಳ ಪೈಕಿ 67ನ್ನು ಗೆಲ್ಲುವ ಮೂಲಕ ಮೋದಿ ಅಲೆಯ ಮಿಥ್ಯೆಯನ್ನು ಜಗಜ್ಜಾಹೀರು ಮಾಡಿತು. ಕೇವಲ 3 ಸ್ಥಾನಗಳನ್ನು ಗೆಲ್ಲುವ ಮೂಲಕ ಬಾಜಪ ದೆಹಲಿಯಲ್ಲಿ ಸೋಲು ಕಾಣುವುದರ ಮೂಲಕ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕಾಗಿತ್ತು.

ಆದರೆ ಹಾಗಾಗಲಿಲ್ಲ, ನಂತರ ನಡೆದ ಬಿಹಾರ ವಿದಾನಸಭಾ ಚುನಾವಣೆಯಲ್ಲಿಯೂ ಬಾಜಪ ಮೈತ್ರಿಕೂಟ, ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್ ಕಾಂಗ್ರೆಸ್ಸಿನ ಜೊತೆ ಸೇರಿ ರಚಿಸಿಕೊಂಡ ಮಹಾಘಟಬಂದನ್ ವಿರುದ್ದ ಸೋಲನ್ನಪ್ಪಬೇಕಾಯಿತು. ಖುದ್ದು ಮೋದಿಯವರೇ ಅಖಾಡಕ್ಕಿಳಿದು ಪ್ರಚಾರ ಮಾಡಿದರೂ ಅಲ್ಲಿ ತೀವ್ರವಾದ ಮುಖಭಂಗ ಅನುಭವಿಸಿತು. ಅಲ್ಲಿಗೆ ಮೋದಿಯ ಅಲೆಯೆಂಬುದು ಬಾಜಪವು ಮಾಧ್ಯಮಗಳನ್ನು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸೃಷ್ಠಿಸಿದ ಹುಸಿ ಅಲೆಯೆಂಬುದು ಕಣ್ಣಿಗೆ ರಾಚ ತೊಡಗಿತ್ತು. ಇದಾದ ನಂತರ ಮೋದಿಯವರ ತವರು ರಾಜ್ಯವಾದ ಗುಜರಾತಿನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳಲ್ಲಿಯೂ ಬಾಜಪ ಸೋಲು ಕಂಡಿತು.

ಇನ್ನು ಮೊನ್ನೆಮೊನ್ನೆ ನಡೆದ ಐದು ರಾಜ್ಯಗಳ ವಿದಾನಸಭೆಯ ಚುನಾವಣೆಯಲ್ಲಿಯೂ ವೈಯುಕ್ತಿಕವಾಗಿ ಬಾಜಪದ ಸಾಧನೆ ಮಹತ್ತರವಾದುದೇನಲ್ಲ. ಐದು ರಾಜ್ಯಗಳ ಪೈಕಿ ಅಸ್ಸಾಮಿನಲ್ಲಿ ಅದು ಅಧಿಕಾರಕ್ಕೆ ಬಂದರೂ ಅದೇನು ಅದರ ಸ್ವಂತ ಬಲದಿಂದಲ್ಲ. ಬದಲಿಗೆ ಅಸ್ಸಾಂ ಗಣಪರಿಷತ್ ಮತ್ತು ಬೋಡೋ ಪೀಪಲ್ಸ್ ಪಕ್ಷಗಳ ಮೈತ್ರಿಯಿಂದಾಗಿ ಅದು ಅಧಿಕಾರ ಪಡೆಯುವಲ್ಲಿ ಸಫಲತೆ ಸಾದಿಸಿತು. ಅಲ್ಲಿ ಅದು ಕಾಂಗ್ರೆಸ್ಸಿಗಿಂತ ಕಡಿಮೆ ಮತಗಳನ್ನು ಪಡೆದಿತ್ತು. ಅಕಸ್ಮಾತ್ ಕಾಂಗ್ರೆಸ್ ಏ.ಐ.ಯು.ಡಿ.ಎಫ್. ಜೊತೆ ಮೈತ್ರಿ ಮಾಡಿಕೊಂಡಿದ್ದರೆ ಬಾಜಪ ಇವತ್ತು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಿತ್ತು. ಇನ್ನು ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ತಮಿಳುನಾಡುಗಳಲ್ಲಿ ಗಣನೀಯ ಸಾಧನೆಯನ್ನೇನು ಬಾಜಪ ಮಾಡಲಗಲಿಲ್ಲ. ಹಾಗೆ ನೋಡಿದರೆ ಐದೂ ರಾಜ್ಯಗಳಿಂದ ಅದು ಪಡೆದ ಒಟ್ಟು ಸ್ಥಾನಗಳು ಕೇವಲ 66 ಮಾತ್ರ, ಆದರೆ ಕಾಂಗ್ರೆಸ್ 145 ಸ್ಥಾನಗಳನ್ನು ಪಡೆದು ಎಲ್ಲ ರಾಜ್ಯಗಳಲ್ಲಿಯೂ ತನ್ನ ಅಸ್ಥಿತ್ವವನ್ನು ತೋರಿಸಿಕೊಟ್ಟಿದೆ.

ಇದರಿಂದ ಅರ್ಥವಾಗುವುದೇನೆಂದರೆ ಬಾಜಪವನ್ನು ಎದುರಿಸುವಲ್ಲಿ ಕಾಂಗ್ರೆಸ್ ವಿಫಲವಾದರೂ ಪ್ರಾದೇಶಿಕ ಪಕ್ಷಗಳು ಮಾತ್ರ ಗಟ್ಟಿಯಾಗಿ ನೆಲೆ ನಿಂತು ಬಾಜಪವನ್ನು ಹಿಮ್ಮೆಟ್ಟಿಸುತ್ತಿವೆ. ಕಾಂಗ್ರೆಸ್ ಬಾಜಪದ ಮತಾಂಧ ರಾಜಕಾರಣದ ಮತ್ತು ಸಾಂಸ್ಕೃತಿಕ ರಾಜಕಾರಣದ ತಂತ್ರಗಾರಿಕೆಗೆ ಉತ್ತರ ನೀಡುವಲ್ಲಿ ಸೋತ ಕಡೆ ಪ್ರಾದೇಶಿಕ ಪಕ್ಷಗಳು ಖಡಕ್ಕಾಗಿ ಉತ್ತರ ನೀಡುತ್ತಿವೆ.. ಸ್ಥಳೀಯವಾಗಿ ಬಿಹಾರದ ನಿತೀಶ್ ಕುಮಾರ್ ರಾಷ್ಟ್ರೀಯ ನಾಯಕರಾಗಿ ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅದೇ ರೀತಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಯವರು ಸಹ ಹಿಂದೆ ರೈಲ್ವೇ ಮಂತ್ರಿಯಾಗಿ ರಾಷ್ಟ್ರೀಯ ಐಡೆಂಟಿಟಿಯನ್ನು ಪಡೆದವರಾಗಿದ್ದಾರೆ. ಹಾಗೆಯೇ ತಮಿಳುನಾಡಿನ ಕುಮಾರಿ ಜಯಲಲಿತಾರವರು ಸಹ ರಾಷ್ಟ್ರದ ರಾಜಕಾರಣದಲ್ಲಿ ಚಿರಪರಿಚಿತರೇ ಆಗಿದ್ದಾರೆ. ಇನ್ನು ದೆಹಲಿಯ ಅರವಿಂದ್ ಕೇಜ್ರೀವಾಲ್ ಸಹ ರಾಷ್ಟ್ರ ಮಟ್ಟದ ನಾಯಕರಾಗಿ ಗುರುತಿಸಿಕೊಳ್ಳುವ ಯತ್ನದಲ್ಲಿದ್ದಾರೆ. ಕಾಂಗ್ರೆಸ್ಸನ್ನು ಹೊರತು ಪಡಿಸಿಯೂ ಪ್ರಾದೇಶಿಕ ಪಕ್ಷಗಳು ಬಾಜಪವನ್ನು ಎದುರಿಸುವ ಬಹುದೊಡ್ಡ ಶಕ್ತಿಯನ್ನು ಹೊಂದಿವೆ. ಇನ್ನುಳಿದ ರಾಜ್ಯಗಳಲ್ಲಿಯೂ ಪ್ರಾದೇಶಿಕ ನಾಯಕರುಗಳು ಇದ್ದು ಮುಂದಿನ ದಿನಗಳಲ್ಲಿ ಅವರ ರಾಜ್ಯಗಳ್ಲಿ ನಡೆಯುವ ವಿದಾನಸಭೆಯ ಚುನಾವಣೆಗಳು ಅವರ ಬಲಪ್ರದರ್ಶನಕ್ಕೆ ಸಾಕ್ಷಿಯಾಗಲಿವೆ.

ಈ ಸಾಲಿನಲ್ಲಿ 2017ಕ್ಕೆ ಉತ್ತರಪ್ರದೇಶ, ಉತ್ತರಾಕಾಂಡ್, ಪಂಜಾಬ್, ಗೋವಾ, ಮಣಿಪುರಗಳಲ್ಲಿ ಚುನಾವಣೆಗಳು ನಡೆಯ ಬೇಕಾಗಿದ್ದು ಬಾಜಪದ ಶಕ್ತಿಯನ್ನು ಅವು ಮತ್ತೊಮ್ಮೆ ಒರೆಹಚ್ಚಲಿವೆ. ಅದರಲ್ಲೂ ಮುಖ್ಯವಾಗಿ ಉತ್ತರ ಪ್ರದೇಶದ ವಿದಾನಸಭಾ ಚುನಾವಣೆಗಳು ತೀವ್ರ ಕುತೂಹಲ ಮೂಡಿಸಿವೆ. ಕಾರಣ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಜಪ ಬಾರಿ ಜಯಗಳಿಸಿದ್ದು, ಅಲ್ಲೀಗ ಸಮಾಜವಾದಿ ಪಕ್ಷ ಅಧಿಕಾರದಲ್ಲಿರುವುದು. ಜೊತೆಗೆ ಮುಲಾಯಂಸಿಂಗ್ ಯಾದವ್ ಮತ್ತು ಮಾಯಾವತಿಯವರಂತಹ ಘಟಾನುಘಟಿ ನಾಯಕರುಗಳು ಎರಡು ಪ್ರಾದೇಶಿಕ ಪಕ್ಷಗಳನ್ನು ಮುನ್ನಡೆಸುತ್ತಿರುವುದಾಗಿದೆ. ಬಹುಜನಪಕ್ಷ ಮತ್ತು ಸಮಾಜವಾದಿ ಪಕ್ಷಗಳು ಬಾಜಪವನ್ನು ಹೇಗೆ ಎದುರಿಸಿ ನಿಲ್ಲುತ್ತವೆಯೆಂಬುದೇ ಸದ್ಯಕ್ಕಿರುವ ಪ್ರಶ್ನೆ. ಬಾಜಪದ ಮತಾಂಧ ರಾಜಕಾರಣದ ವಿರುದ್ದ ಈ ಎರಡೂ ಪಕ್ಷಗಳ ಜಾತಿ ಸಮೀಕರಣದ ರಾಜಕೀಯ ಹೇಗೆ ಕೆಲಸ ಮಾಡುತ್ತದೆ ಎನ್ನುವುದನ್ನು ನೋಡಬೇಕಿದೆ.

ಇನ್ನು ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಆಳವಾಗಿ ಬೇರು ಬಿಡುತ್ತಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿತ್ತು. ಇದೀಗ ಅಲ್ಲಿನ ಅಕಾಲಿದಳ ಮತ್ತು ಬಾಜಪ ಮೈತ್ರಿಕೂಟಕ್ಕೆ ಗೆಲುವು ಸುಲಭ ಸಾದ್ಯವೇನಲ್ಲ. ಇದುವರೆಗು ಕಾಂಗ್ರೆಸ್ ಮತ್ತು ಅಕಾಲಿದಳ ಮೈತ್ರಿಕೂಟದ ನಡುವೆ ನಡೆಯುತ್ತಿದ್ದ ನೇರ ಹಣಾಹಣಿಯ ಬದಲು ತ್ರಿಕೋನ ಸ್ಪರ್ದೆ ಏರ್ಪಡಲಿದ್ದು ಅಕಾಲಿದಳದ ಮೈತ್ರಿಕೂಟ ಗೆಲ್ಲಲು ಕಷ್ಟಪಡಬೇಕಾಗಿದೆ.

ಇನ್ನು ಉತ್ತರಕಾಂಡದಲ್ಲಿ ಸದ್ಯ ಕಾಂಗ್ರೆಸ್ ಆಳ್ವಿಕೆ ನಡೆಸುತ್ತಿದ್ದು ಇತ್ತೀಚೆಗೆ ಬಾಜಪ ಅಲ್ಲಿ ಕಾಂಗ್ರೆಸ್ ಶಾಸಕರನ್ನು ಪಕ್ಷಾಂತರಕ್ಕೆ ಪ್ರಚೋದಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ನ್ಯಾಯಾಲಯ ಅನೂರ್ಜಿತಗೊಳಿಸಿದ ಪ್ರಕರಣ ಮತದಾರರ ಮನಸಿನಲ್ಲಿ ಬಾಜಪದ ಬಗ್ಗೆ ಬೇಸರವುಂಟು ಮಾಡಿದ್ದು. ಕಾಂಗ್ರೆಸ್ಸಿಗೆ ಅನುಕಂಪದ ಆಸರೆ ದೊರೆಯಬಹುದಾಗಿದೆ. ಇನ್ನು ಗೋವಾದಲ್ಲಿ ಬಾಜಪ ಅಧಿಕಾರದಲ್ಲಿದ್ದರೂ ಮನೋಹರ್ ಪಣಿಕ್ಕರ್ ರಾಷ್ಟ್ರ ರಾಜಕೀಯಕ್ಕೆ ಬಂದ ನಂತರ ಅಲ್ಲಿನ ಬಾಜಪ ಶಕ್ತಿಕಳೆದುಕೊಂಡಂತೆ ಕಾಣುತ್ತದೆ. ಆಡಳಿತ ವಿರೋಧಿ ಅಲೆಯೇನಾದರು ಅಲ್ಲಿ ಬೀಸಿದರೆ ಬಾಜಪ ಗೆಲ್ಲುವುದು ಕಷ್ಟವಾಗಲಿದೆ. ಮಣಿಪುರದಲ್ಲಿ ಕಾಂಗ್ರೆಸ್ ಆಳ್ವಿಕೆ ನಡೆಸುತ್ತಿದ್ದು ಸ್ಥಳೀಯ ಪಕ್ಷಗಳು ಸಹ ಬಲಾಡ್ಯವಾಗಿವೆ. ಅಲ್ಲಿ ಬಾಜಪ ಏನಾದರು ಮಾಡಬೇಕಿದ್ದಲ್ಲಿ ಸ್ಥಳೀಯ ಪಕ್ಷಗಳ ನೆರವನ್ನು ಪಡೆಯ ಬೇಕಾಗುತ್ತದೆ.

ಇವೆಲ್ಲವನ್ನೂ ಸೂಕ್ಷ್ಮವಾಗಿ ಯಾವುದೇ ಪೂರ್ವಾಗ್ರಹವಿಲ್ಲದೆ ನೋಡಿದರೆ ಮುಂದಿನ ದಿನಗಳಲ್ಲಿ ಬಾಜಪ ತಾನಂದು ಕೊಂಡಂತೆ ಸಲೀಸಾಗಿ ಗೆಲ್ಲುತ್ತಾ ಹೋಗುವುದು ಅಸಾದ್ಯದ ಮಾತು. ಮುಂದೆ ನಡೆಯಲಿರುವ ವಿದಾನಸಭಾ ಚುನಾವಣೆಗಳ ಪಲಿತಾಂಶಗಳೇನೇ ಆಗಿರಲಿ, ಪ್ರಾದೇಶಿಕ ಪಕ್ಷಗಳ ಕಾರ್ಯತಂತ್ರದ ಆಧಾರದ ಮೇಲೆ 2019ರ ಲೋಕಸಭಾ ಚುನಾವಣೆಯಲ್ಲಿ ಬಾಜಪದ ಸೋಲು ಗೆಲುವು ನಿರ್ದಾರವಾಗಲಿದೆ.

ಬಿಹಾರದಲ್ಲಿ ನಡೆದ ಮಹಾಘಟಬಂದನ್ ರಾಷ್ಟ್ರ ಮಟ್ಟದಲ್ಲೇನಾದರು ನಡೆದರೆ ಮುಂದಿನ ಚುನಾವಣೆಯ ದಿಕ್ಕೇ ಬದಲಾಗುವ ಸಂಭವವಿದೆ. ಆದರೆ ಈ ಮೈತ್ರಿ ಬಾಜಪ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನಾಂತರ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ. ಏಕೆಂದರೆ ತಮ್ಮನ್ನು ಕಳೆದ ವಿದಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ವಿರೋದಿಸಿದ ಕಾಂಗ್ರೆಸ್ಸನ್ನು ಮಮತಾ ಬ್ಯಾನರ್ಜಿಯಾಗಲಿ ಜಯಲಲಿತಾ ಆಗಲಿ ಒಪ್ಪಿಕೊಳ್ಳಲಾರರು. ಈ ದಿಸೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗನ್ನು ದೂರವಿಟ್ಟು ಪ್ರಾದೇಶಿಕ ಪಕ್ಷಗಳು ಒಂದು ಮಹಾಮೈತ್ರಿಕೂಟವನ್ನು ರಚಿಸಿಕೊಂಡದ್ದೇ ಆದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರ ಮುಂದಿನ ಹಾದಿ ಕಠಿಣವಾಗಲಿದೆ.

ನಿತೀಶ್ ಕುಮಾರ್, ಜಯಲಲಿತಾ ಹಾಗು ಮಮತಾ ಬ್ಯಾನರ್ಜಿಯವರು ಸದ್ಯದ ಮಟ್ಟಿಗೆ ತಮ್ಮ ರಾಜ್ಯಗಳಲ್ಲಿ ಬಾಜಪ ಮತ್ತು ಕಾಂಗ್ರೆಸ್ ಎನ್ನುವ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿಯೂ ಅವರುಗಳು ಒಂದಾಗಿ ಕಾರ್ಯನಿರ್ವಹಿಸುವ ಸಾದ್ಯತೆ ಹೆಚ್ಚಿದೆ. ಯಾಕೆಂದರೆ ಎಲ್ಲಿಯವರಗು ಈ ರಾಷ್ಟ್ರೀಯ ಪಕ್ಷಗಳು ಬಲಾಢ್ಯವಾಗಿರುತ್ತವೆಯೊ ಅಲ್ಲಿಯವರೆಗು ಪ್ರಾದೇಶಿಕ ಪಕ್ಷಗಳನ್ನು ನೆಮ್ಮದಿಯಾಗಿರಲು ಅವು ಬಿಡಲಾರವು ಎನ್ನುವ ಸತ್ಯ ಅವರಿಗೆ ಗೊತ್ತಿದೆ. ಇದರಲ್ಲಿ ಬಹಳ ಮುಖ್ಯವಾಗಿ ನಿತೀಶ್‍ಕುಮಾರ್ ಬಹಳ ಆಕ್ರಮಣಕಾರಿಯಾಗಿ ಎರಡೂ ಪಕ್ಷಗಳನ್ನು ಎದುರಿಸಿ ನಿಂತು ರಾಷ್ಟ್ರ ಮಟ್ಟದಲ್ಲಿ ಬೆಳೆಯುವ ಇರಾದೆ ಹೊದಿದ್ದಾರೆ. ಬಿಹಾರದ ಆಚೆಗೂ ಅವರ ಆಸಕ್ತಿ ಇರುವುದರಿಂದಲೇ ಅವು ಮೊನ್ನೆ ನಡೆದ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗಳಲ್ಲಿ ತಮ್ಮ ಉಮೇದುವಾರರನ್ನು ಹಾಕಿದ್ದರು. ಇನ್ನು ಸಮಯ ಸರಿಯೆನ್ನಿಸಿದರೆ ಜಯಲಲಿತಾ ಸಹ ರಾಷ್ಟ್ರ ರಾಜಕಾರಣಕ್ಕೆ ದುಮುಕಲು ಸಿದ್ದರಾಗಿದ್ದಾರೆ. ಇನ್ನು ಮಮತಾ ಬ್ಯಾನರ್ಜಿ ಕೇಂದ್ರ ಸಚಿವೆಯಾಗಿದ್ದು ಇಡೀ ರಾಷ್ಟ್ರವನ್ನೇ ಸುತ್ತಿದವರು, ಅವರಿಗೂ ರಾಷ್ಟ್ರ ರಾಜಕಾರಣ ಹೊಸದೇನಲ್ಲ. ಇನ್ನು ಉತ್ತರ ಪ್ರದೇಶದಲ್ಲಿ ಮುಂದಿನ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇ ಆದರೆ ಮಾಯಾವತಿಯವರೂ ಸಹ ಇವರೊಂದಿಗೆ ಕೈ ಜೋಡಿಸಬಹುದಾಗಿದೆ. ಈ ಪಟ್ಟಿಗೆ ನಾನು ಮುಲಾಯಂಸಿಂಗವರನ್ನು ಸೇರಿಸಲು ಹಿಂಜರಿಯುತ್ತೇನೆ. ಏಕೆಂದರೆ ಅವರ ಇತ್ತೀಚೆಗಿನ ನಡವಳಿಕೆ ಚಂಚಲವಾಗಿದೆ. ಬಾಜಪವನ್ನು ವಿರೋಧಿಸುವ ಮಾತಾಡುತ್ತಲೇ ಜಾತ್ಯಾತೀತ ಶಕ್ತಿಗಳ ಒಗ್ಗೂಡುವಿಕೆಗೆ ಅಡ್ಡಗಾಲು ಹಾಕುತ್ತಾರೆ. ಬಿಹಾರದ ಮಹಾಘಟಬಂದನ್ ಸಮಯದಲ್ಲಿ ನಿತೀಶರಿಗೆ ಕೊನೆ ಗಳಿಗೆಯಲ್ಲಿ ಕೈಕೊಟ್ಟು ನಡೆದದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಇಂತಹದೊಂದು ಮೈತ್ರಿಕೂಟ ಸೃಷ್ಠಿಯಾಗುವುದೇ ಆದಲ್ಲಿ ಅದಕ್ಕೆ ರಾಷ್ಟ್ರದ ಇತರೇ ರಾಜ್ಯಗಳ ಹಲವಾರು ಬಲಾಢ್ಯ ನಾಯಕರುಗಳ ಪ್ರದೇಶಿಕ ಪಕ್ಷಗಳೂ ಸೇರಬಹುದಾದ ಸಾದ್ಯತೆಯಿದೆ. ಅವು ಯಾವುವೆಂದರೆ ಒಡಿಸ್ಸಾದ ಬಿಜುಜನತಾದಳ (ನವೀನ್‍ಪಟ್ನಾಯಕ್), ಜನತಾದಳ ಜಾತ್ಯಾತೀತ (ಹೆಚ್.ಡಿ.ದೇವೇಗೌಡ), ವೈ.ಎಸ್.ಆರ್. ಕಾಂಗ್ರೆಸ್(ಜಗನ್ಮೋಹನ ರೆಡ್ಡಿ), ತೆಲಂಗಾಣ ರಾಷ್ಟ್ರೀಯ ಸಮಿತಿ (ಚಂದ್ರಶೇಖರ ರಾವ್), ನ್ಯಾಷನಲ್ ಕಾನ್ಫರೆನ್ಸ್ (ಉಮರ್ ಅಬ್ದುಲ್ಲಾ), ಆಮ್ ಆದ್ಮಿ (ಅರವಿಂದ್‍ಕೇಜ್ರೀವಾಲ್), ಎನ್.ಸಿ.ಪಿ (ಶರದ್‍ಪವಾರ್), ರಾಷ್ಟ್ರೀಯ ಜನತಾದಳ್(ಲಾಲೂಪ್ರಸಾದ್ ಯಾದವ್) ಬಹುಜನಪಕ್ಷ( ಮಾಯಾವತಿ), ಅಸ್ಸಾಮಿನ ಏ.ಐ.ಯು.ಡಿ.ಎಫ್ ಹಾಗು ಕೇರಳದ ಕೆಲವು ಸಣ್ಣಪುಟ್ಟ ಪಕ್ಷಗಳು ಇಂತಹದೊಂದು ಮೈತ್ರಿಯಾಗುವುದಾದರೆ ಅದರ ಪಾಲುದಾರರಾಗಬಹುದಾದ ಸಾದ್ಯತೆಗಳಿವೆ.

ಅಕಸ್ಮಾತ್ ಇಂತಹ ಮಹಾಮೈತ್ರಿ ಸಾಕಾರಗೊಳ್ಳುವುದಾದಲ್ಲಿ ಅದರ ಪ್ರದಾನಮಂತ್ರಿ ಅಭ್ಯರ್ಥಿ ಯಾರಾಗಬೇಕೆಂಬುದು ತೀವ್ರವಾಗಿ ಚರ್ಚೆಯಾಗುವ ವಿಷಯವಾಗಿದೆ. ಈ ಸಾಲಿನಲ್ಲಿ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ, ಜಯಲಲಿತಾ, ಮಾಯಾವತಿಯವರ ಹೆಸರುಗಳು ಬಹುಮುಖ್ಯವಾಗಿ ಕೇಳಿ ಬರಲಿವೆ. ಈ ನಾಲ್ವರಲ್ಲಿ ರಾಷ್ಟ್ರವ್ಯಾಪಿಯಾಗಿ ಜನ ಸ್ವೀಕರಿಸಬಹುದಾದ ಹೆಸರ್ಯಾವುದು ಎಂಬುದೇ ಕುತೂಹಲಕಾರಿಯಾದುದು. ಈ ನಾಲ್ಕೂ ಜನಗಳ ಬಗ್ಗೆ ಒಂದಿಷ್ಟು ನೋಡುವುದಾದರೆ:

ನಿತೀಶ್ ಕುಮಾರ್ ಬಿಹಾರದಲ್ಲಿ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ನಡೆಸಿದ ಸ್ವಚ್ಚ ಮತ್ತು ಪಾರದರ್ಶಕ ಆಡಳಿತದ ಬಗ್ಗೆ ಇಡೀ ದೇಶ ಮೆಚ್ಚುಗೆ ವ್ಯಕ್ತಪಡಿಸಿದೆ. ಜೊತೆಗೆ ನಿತೀಶರ ಸರಳತೆ ಮತ್ತು ಪ್ರಾಮಾಣಿಕತೆಯನ್ನು ಅವರ ವಿರೋಧಿಗಳೂ ಅಲ್ಲಗೆಳೆಯುವುದಿಲ್ಲ. ಉಳಿದಂತೆ ಕೇಂದ್ರದ ರೈಲ್ವೆ ಮಂತ್ರಿಯಾಗಿ ಜನರಿಗೆ ಚಿರಪರಿಚಿತರಾಗಿದ್ದಾರೆ. 2014ರ ಚುನಾವಣಾ ಪ್ರಚಾರಕ್ಕೆ ಬಿಹಾರಕ್ಕೆ ನರೇಂದ್ರ ಮೋದಿಯವರು ಬರುವ ಅಗತ್ಯವಿಲ್ಲವೆಂದು ನೇರವಾಗಿ ಬಾಜಪಕ್ಕೆ ಹೇಳಿದ್ದು ಅವರ ಜಾತ್ಯಾತೀತ ನಿಲುವಿಗೆ ಸಾಕ್ಷಿಯಾಗಿದೆ ಮತ್ತು ಕೋಮುವಾದವನ್ನು ವಿರೋಧಿಸುವ ಜನರ ದೃಷ್ಠಿಯಲ್ಲಿ ಗಟ್ಟಿನಾಯಕರಾಗಿ ಹೊರಹೊಮ್ಮಿದವರು. ಇವೆಲ್ಲವೂ ಅವರನ್ನು ಮುಂದಿನ ಪ್ರದಾನಿ ಎಂದು ಬಿಂಬಿಸವುದಕ್ಕೆ ಪೂರಕವಿಷಯಗಳಾಗಿವೆ.

ಇನ್ನು ಮಮತಾಬ್ಯಾನರ್ಜಿಯ ವಿಷಯಕ್ಕೆ ಬಂದರೆ ಅವರು ಕಾಂಗ್ರೆಸ್ ನಲ್ಲಿದ್ದಾಗಿನಿಂದಲೂ ತಮ್ಮ ಬಂಡಾಯದ ಗುಣಕ್ಕೆ, ನೇರಾನೇರಾ ಮಾತುಗಳಿಗೆ ಹೆಸರಾದವರು. ಕೆಲವು ಕಪ್ಪು ಚುಕ್ಕಿಗಳ ಹೊರತಾಗಿಯೂ ಎಡರಂಗದವರೆದುರು ಶಕ್ತಿಯುತವಾಗಿ ನಿಂತು ಐದು ವರ್ಷಗಳ ಕಾಲ ಬಂಗಾಳವನ್ನು ಮುನ್ನಡೆಸಿದ ಕೀರ್ತಿ ಆಕೆಗಿದೆ. ಅವರೂ ಕೇಂದ್ರದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದು ರಾಷ್ಟ್ರವ್ಯಾಪಿಯಾಗಿ ಪರಿಚಿತವಾದ ಹೆಸರಾಗಿದೆ. ಆಕೆಗಿರುವ ಒಂದು ಹಿನ್ನಡೆಯ ವಿಷಯವೆಂದರೆ ಕೆಲವೊಮ್ಮೆ ಆಕೆ ತೀರಾ ಹಟಮಾರಿಯಂತೆ ವರ್ತಿಸಿ, ಮಿತ್ರ ಪಕ್ಷಗಳಿಗೆ ಕಿರಿಕಿರಿ ಉಂಟುಮಾಡುತ್ತಾರೆಂಬುದಾಗಿದೆ.

ಜಯಲಲಿತಾರವರು ಒಬ್ಬಂಟಿ ಹೆಣ್ಣುಮಗಳಾಗಿ ರಾಜಕೀಯ ಮಾಡುತ್ತಾ ಒಂದಿಡೀ ಪಕ್ಷವನ್ನು ತನ್ನ ಮುಷ್ಠಿಯಲ್ಲಿಟ್ಟುಕೊಂಡು ತಮಿಳುನಾಡಂತಹ ರಾಜ್ಯವನ್ನು ಎರಡನೇ ಅವಧಿಯಲ್ಲೂ ಮುನ್ನಡೆಸುವ ಎದೆಗಾರಿಕೆಯುಳ್ಳ ಹೆಣ್ಣುಮಗಳು. ರಾಷ್ಟ್ರಮಟ್ಟದಲ್ಲಿ ಯಾವ ಅಧಿಕಾರವನ್ನೂ ಹೊಂದಿ ಕೆಲಸ ಮಾಡದೇ ಇದ್ದರೂ ನಿಪುಣ ಆಡಳಿತಗಾರ್ತಿಯೆಂದು ಹೆಸರು ಮಾಡಿರುವ ಜನಪ್ರಿಯ ನಾಯಕಿ. ಅವರಿಗಿರುವ ಒಂದು ಕೊರತೆಯೆಂದರೆ ರಾಷ್ಟ್ರ ಮಟ್ಟದಲ್ಲಿ ಅವರ ಹೆಸರನ್ನು ಜನತೆ ಕೇಳದೇ ಇರುವುದಾಗಿದೆ.

ದಲಿತ ಸಮುದಾಯಕ್ಕೆ ಸೇರಿದ ಮಾಯಾವತಿಯವರು ಸಹ ಏಕಾಂಗಿಯಾಗಿ ಒಂದು ಪಕ್ಷವನ್ನು ಮುನ್ನಡೆಸುತ್ತಿದ್ದು ಗಟ್ಟಿ ನಾಯಕತ್ವದ ಹೆಣ್ಣು ಮಗಳು. ದಲಿತೆಯಾಗಿರುವುದರಿಂದ ಇಡೀ ರಾಷ್ಟ್ರದ ದಲಿತರ ಒಲವು ಅವರಿಗೆ ಸಿಗುವ ಸಾದ್ಯತೆಯಿದೆ. ಉಳಿದಂತೆ ಈಗಾಗಲೇ ಬಹುಜನ ಪಕ್ಷ ಅನೇಕ ರಾಜ್ಯಗಳಲ್ಲಿ ಚುನಾವಣಾ ರಾಜಕೀಯ ಮಾಡುತ್ತ ಸಾಕಷ್ಟು ಬೆಂಬಲಿಗರನ್ನು ಹೊಂದಿದೆ. ಆದರೆ ಅವರ ಮೇಲಿರವ ಸಿ.ಬಿ.ಐ ಕೇಸುಗಳು ಅವರ ಪ್ರದಾನಿಯ ಕನಸಿಗೆ ಸಂಚಕಾರ ತರಬಲ್ಲವು ಎಂಬುದಂತು ಸತ್ಯ.

ಈ ಪಟ್ಟಿಗೆ ಸೇರಿಸಬಹುದಾದ ಇನ್ನೊಂದು ಹೆಸರು ಒಡಿಸ್ಸಾದ ಬಿಜು ಜನತಾಪಕ್ಷದ ನವೀನ್ ಪಟ್ನಾಯಿಕ್ ಅವರದು. ಉತ್ತಮ ಆಡಳಿತಗಾರರಾಗಿ ಹೆಸರು ಮಾಡಿ ಯಾವುದೇ ವಿವಾದಗಳಿಂದ ದೂರವಿದ್ದು ರಾಜ್ಯಬಾರ ನಡೆಸುತ್ತಿರುವ ನವೀನ್ ಪಟ್ನಾಯಿಕ್ ಸೂಕ್ತ ವ್ಯಕ್ತಿಯಾದರೂ ಅಖಿಲ ಭಾರತ ಮಟ್ಟದಲ್ಲಿ ಅವರ ಪರಿಚಯವಿಲ್ಲದಿರುವುದು ಅವರ ಹಿನ್ನಡೆಗೆ ಕಾರಣವಾಗುವುದು ನಿಜ.

ಇಲ್ಲಿಯವರೆಗೂ ನಾನು ಹೇಳಿದ್ದೆಲ್ಲ ಒಂದು ರಾಜಕೀಯ ಬದಲಾವಣೆಯ, ದೃವೀಕರಣದ ಸಾದ್ಯತೆಯ ಬಗ್ಗೆಯೇ ಹೊರತು ಬೇರೇನಲ್ಲ. ಯಾಕೆಂದರೆ ಇದುವರೆಗೂ ಅಧಿಕೃತವಾಗಿ ಯಾವೊಂದು ಪಕ್ಷವೂ, ಯಾರೊಬ್ಬ ನಾಯಕರೂ ಈ ಬಗ್ಗೆ ಒಂದು ಹೆಜ್ಜೆಯನ್ನೂ ಇಟ್ಟಿಲ್ಲ. ಆದರೆ ತಮ್ಮಗಳ ಪಕ್ಷಗಳನ್ನು ಉಳಿಸಿಕೊಳ್ಳುವ ಮತ್ತು ತಮ್ಮ ರಾಜ್ಯಗಳಲ್ಲಿ ತಮಗಿರುವ ನೆಲೆಯನ್ನು ಉಳಿಸಿಕೊಳ್ಳುವ ದಿಕ್ಕಿನಲ್ಲಿ ಪ್ರಾದೇಶಿಕ ಪಕ್ಷಗಳು ಇಂದಲ್ಲಾ ನಾಳೆ ಇಂತಹದೊಂದು ಪ್ರಯೋಗಕ್ಕೆ ಮುಂದಾದರೆ ಅಚ್ಚರಿಯೇನಿಲ್ಲ. ಇಂತಹದೊಂದು ಮಾತುಕತೆ ಶುರುವಾದರೆ ಪ್ರದಾನಿ ಹುದ್ದೆಯ ಅಭ್ಯರ್ಥಿಯ ಹೆಸರು ಬಂದಾಗ ನಾನು ಉಲ್ಲೇಖಿಸಿದವರನ್ನು ಬಿಟ್ಟು ಸರ್ವಸಮ್ಮತವಾದ ವ್ಯಕ್ತಿಯೊಬ್ಬರ ಹೆಸರು ಕಂಡು ಬಂದರೂ ಆಶ್ಚರ್ಯವೇನಿಲ್ಲ. ಇಂತಹದೊಂದು ಮೈತ್ರಿಯೇನಾದರು ಉಂಟಾದರೆ ಕಾಂಗ್ರೆಸ್ ಇರಲಿ ಬಾಜಪ ಮತ್ತು ಮೋದಿಯವರಿಗೆ ಬಹಳಷ್ಟು ಹಿನ್ನಡೆಯುಂಟಾಗುವುದು ಖಚಿತ. ಏಕೆಂದರೆ ಬಾಜಪ ನಡೆಸುತ್ತಿರುವ ಸಾಂಸ್ಕೃತಿಕ ಮತ್ತು ಮತಾಂಧ ರಾಜಕಾರಣಕ್ಕೆ ಪರ್ಯಾಯವಾದ ರಾಜಕೀಯ ಮಾಡುವ ಶಕ್ತಿಯೊಂದನ್ನು ಜನತೆ ಬಯಸುತ್ತಿದೆ. ಆದರೆ ಮೋದಿ ಮತ್ತು ಅಮಿತ್ ಷಾರವರ ತಂತ್ರಗಾರಿಕೆಗಳನ್ನು, ಸಂಘಪರಿವಾರದ ರಹಸ್ಯ ಕಾರ್ಯಸೂಚಿಗಳನ್ನೂ ಎದುರಿಸಲು ಬೇಕಾದ ತನ್ನದೇ ಆದ ಕಾರ್ಯತಂತ್ರವನ್ನು ರೂಪಿಸಲು ಇಲ್ಲಿಯವರೆಗು ಕಾಂಗ್ರೆಸ್ ವಿಫಲವಾಗಿದ್ದು ಜನರಿಗೆ ಅದರ ಬಗ್ಗೆ ವಿಶ್ವಾಸ ಕಡಿಮೆಯಾಗುತ್ತಿದೆ. ಹೀಗಾಗಿ ಪ್ರಾದೇಶಿಕ ಪಕ್ಷಗಳು ಎಲ್ಲಿಯವರೆಗು ಬಲವಾದ ರಾಜಕೀಯ ಶಕ್ತಿಗಳಾಗಿರುತ್ತವೆಯೊ ಅಲ್ಲಿಯವರೆಗೂ ಬಾಜಪ ರಾಷ್ಟ್ರದಾದ್ಯಂದ ಬೆಳೆಯುವುದು ಕಷ್ಟದ ಕೆಲಸ.

ಆದರೆ ಅಧಿಕಾರದ ರುಚಿ ಕಂಡಿರುವ ಕಾಂಗ್ರೆಸ್ಸಾಗಲಿ, ಬಾಜಪವಾಗಲಿ ಇಂತಹದೊಂದು ಮೈತ್ರಿಕೂಟ ರಚನೆಯಾಗದಂತೆ ನೋಡಿಕೊಳ್ಳಲು ತಾವು ಕಲಿತ ವಿದ್ಯೆಯನ್ನೆಲ್ಲ ಖರ್ಚು ಮಾಡುವುದು ಖಂಡಿತಾ.

ಮೂರನೇ ರಾಜಕೀಯ ರಂಗದ ಅನಿವಾರ್ಯತೆಯ ಹಿಂದಿರುವ

ನೈಜ ಕಾರಣಗಳು!

ಕಾಂಗ್ರೆಸ್ ಮತ್ತು ಬಾಜಪಗಳ ಹೊರತಾಗಿ ರಚನೆಯಾಗಬಹುದಾದ ಒಂದು ವಿಶಾಲ ರಾಜಕೀಯ ವೇದಿಕೆಯ ಸಾದ್ಯತೆಗಳ ಕುರಿತಾಗಿ ಮಾತನಾಡಿದ ಮೇಲೂ ನಮ್ಮಲ್ಲಿ ಉಳಿಯುವ ಪ್ರಶ್ನೆ: ಇಂತಹದೊಂದು ರಾಜಕೀಯ ಶಕ್ತಿಯ ಅಗತ್ಯವೇನಿದೆ? ಎಂಬುದಾಗಿದೆ. ಈ ಪ್ರಶ್ನೆಗೆ ಸ್ಪಷ್ಟವಾದ ಮತ್ತು ನಿಖರವಾದ ಉತ್ತರ ಕಂಡುಕೊಂಡು ಜನರಿಗೆ ತಲುಪಿಸದ ಹೊರತು ಇಂತಹ ನಡೆ ಯಶಸ್ವಿಯಾಗಲಾರದು!

ಇವತ್ತು ಶತಮಾನಗಳಷ್ಟು ಹಳೆಯದಾದ ಕಾಂಗ್ರೆಸ್ ಪಕ್ಷ ತನ್ನ ಅಗಾಧಪ್ರಮಾಣದ ಭ್ರಷ್ಟಾಚಾರ ಪ್ರಕರಣಗಳಿಂದ, ಜಡಗಟ್ಟಿದ ನಾಯಕರುಗಳಿಂದ, ತಳ ಮಟ್ಟದಲ್ಲಿ ಜನಸಂಪರ್ಕ ಹೊಂದಿರದ ಭಟ್ಟಂಗಿ ರಾಜಕಾರಣಿಗಳ ಕಾರಣದಿಂದಾಗಿ ದಿನೇದಿನೇ ದುರ್ಬಲಗೊಳ್ಳುತ್ತ ಬರುತ್ತಿದೆ. ಇವೆಲ್ಲದರಿಂದ ಅದು ಬಾಜಪಕ್ಕೆ ಪರ್ಯಾಯವಾಗಿ ನಿಲ್ಲುವ ತ್ರಾಣ ಕಳೆದುಕೊಂಡಂತೆ ಕಾಣುತ್ತಿದೆ. ಅದರ ಅದ್ಯಕ್ಷರಾದ ಶ್ರೀಮತಿ ಸೋನಿಯಾಗಾಂದಿಯವರು ಸಹ ಆಯಾಸಗೊಂಡವರಂತೆ ಕಾಣುತ್ತಿದ್ದಾರೆ. ಅವರ ಸ್ಥಾನ ತುಂಬಲು ಸಿದ್ದವಾಗಿರುವ ಕಾಂಗ್ರೆಸ್ಸಿನ ಉಪಾದ್ಯಕ್ಷರಾದ ರಾಹುಲ್ ಗಾಂದಿಯವರಿಗೆ ಕಾಂಗ್ರೆಸ್ಸನ್ನು ಸಶಕ್ತವಾಗಿ ಮುನ್ನಡೆಸಬಲ್ಲ ಸಾಮರ್ಥ್ಯವಿದೆಯೆಂಬುದನ್ನು ಅವರು ತೋರಿಸಿಕೊಟ್ಟಿಲ್ಲ. ಸೋನಿಯಾರ ತಂತ್ರಗಾರಿಕೆಯಾಗಲಿ, ಖಡಕ್ ನಿರ್ದಾರ ತೆಗದುಕೊಳ್ಳಬಹುದಾದ ಪ್ರಬುದ್ದತೆಯನ್ನು ಅವರಿಲ್ಲಿಯವರೆಗೂ ತೋರಿಸಿಲ್ಲ. ಅಕಸ್ಮಾತ್ ಸೋನಿಯಾರವರೇನಾದರು ರಾಹುಲರ ಕೈಗೆ ಪಕ್ಷವನ್ನು ನೀಡಿದರೆ ಇವತ್ತಿರುವ ಕಾಂಗ್ರೆಸ್ ಇನ್ನಷ್ಟು ದುರ್ಬಲಗೊಳ್ಳಬಹುದಾದ ಸಾದ್ಯತೆಯೇ ಹೆಚ್ಚು. ಇಂತಹ ಸನ್ನಿವೇಶವೊಂದು ಎದುರಾದರೆ ಬಾಜಪದ ಮುಂದಿನ ಹಾದಿ ಸುಗಮವಾಗಲಿದ್ದು, ಅದಕ್ಕೆ ರಾಷ್ಟ್ರ ಮಟ್ಟದಲ್ಲಿ ಎದುರಾಳಿಯೇ ಇಲ್ಲದಂತಾಗಿ ಬಿಡುತ್ತದೆ. ಇದು ಬಾಜಪ ನಾಯಕತ್ವವನ್ನು ಸರ್ವಾಧಿಕಾರದತ್ತ ಕರೆದೊಯ್ದರೆ ಅಚ್ಚರಿಯೇನಿಲ್ಲ. ಸದ್ಯದಲ್ಲಿ ಪ್ರದಾನಿ ನರೇಂದ್ರ ಮೋದಿಯವರ ನಡವಳಿಕೆಗಳು ಅಂತಹದೊಂದು ಅನುಮಾನಕ್ಕೆ ಪುಷ್ಠಿ ಕೊಡುವಂತೆಯೇ ಇವೆ.

ಮತಾಂಧ ರಾಜಕಾರಣದ ಚುಂಗು ಹಿಡಿದು ಕೊಂಡು, ಸಂಘಪರಿವಾರದ ಗುಪ್ತ ಕಾರ್ಯಸೂಚಿಯ ಆಣತಿಯಂತೆ ರಾಜಕಾರಣ ಮಾಡುತ್ತ ಬಂದಿರುವ ಬಾಜಪದ ಸಿದ್ದಾಂತಗಳು ನಮ್ಮ ಬಹು ಸಂಸ್ಕೃತಿಯ ಸಮಾಜದ ಮಟ್ಟಿಗೆ ಪ್ರತಿಗಾಮಿಯಾಗಿರುತ್ತವೆ. ಪಶ್ಚಿಮದ ಏಕಧರ್ಮ, ಏಕಬಾಷೆ, ಏಕರಾಷ್ಟ ಎಂಬ ಸಿದ್ದಾಂತಗಳಿಗೆ ಪೂರಕವಾಗಿ ತನ್ನ ಮತಾಂಧ ರಾಜಕಾರಣವನ್ನು ಮಾಡುತ್ತಿರುವ ಬಾಜಪ ತನ್ನ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಇಂತಹ ಸನ್ನಿವೇಶವನ್ನು ಸೂಕ್ತವಾಗಿ ಬಳಸಿಕೊಳ್ಳಲು ಯತ್ನಿಸುವುದು ಖಚಿತ. ಯಾವುದೇ ಬಲಪಂಥೀಯ ರಾಜಕೀಯ ಕೂಟವೂ ವಿರೋಧಿಗಳ ಇರುವಿಕೆಯನ್ನು ಬಯಸುವುದಿಲ್ಲ. ಆದರಿಂದ ಅದು ದುರ್ಬಲಗೊಂಡ ಕಾಂಗ್ರೆಸ್ಸಿನ ಜೊತೆಜೊತೆಗೆ ಪ್ರಾದೇಶಿಕ ಪಕ್ಷಗಳನ್ನೂ ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತ ಹೋಗುತ್ತದೆ. ಅದರ ಇಂತಹ ಸಂಚಿಗೆ ಬಲಿಯಾದ ಪ್ರಾದೇಶಿಕ ಪಕ್ಷಗಳು ಅನಿವಾರ್ಯವಾಗಿ ರಾಷ್ಟ್ರ ಮಟ್ಟದಲ್ಲಿ ಅದರ ನೇತೃತ್ವವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಇಂತಹ ಬೆಳವಣಿಗೆಯಿಂದ ಪ್ರಾದೇಶಿಕ ಹಿತಾಸಕ್ತಿಗಳು ನಗಣ್ಯವಾಗಿ ಐಕ್ಯತೆ ಮತ್ತು ಬಲಿಷ್ಠ ರಾಷ್ಟ್ರದ ಹೆಸರಲ್ಲಿ ಸ್ಥಳೀಯವಾದ ಎಲ್ಲ ಪ್ರಜಾತಂತ್ರದ ವ್ಯವಸ್ಥೆಗಳನ್ನು ಅದು ನಾಶಪಡಿಸುತ್ತ ಹೋಗುತ್ತದೆ. ಇಂತಹದೊಂದು ಅಪಾಯ ಒಂದೆರಡು ದಿನಗಳಲ್ಲಿ ವರ್ಷಗಳಲ್ಲಿ ಆಗದಿvರಬಹುದು. ಆದರೆ ಒಂದು ರಾಷ್ಟ್ರದ ಇತಿಹಾಸದಲ್ಲಿ ತೀರಾ ದೀರ್ಘವೆನಿಸದ ಐದರಿಂದ ಹತ್ತು ವರ್ಷಗಳಲ್ಲಿ ಈ ಬೆಳವಣಿಗೆಗಳು ಕ್ಷಿಪ್ರಗತಿಯಲ್ಲಿ ನಡೆದು ಬಿಡಬಹುದು.

ಆದ್ದರಿಂದ ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು, ಇಂಡಿಯಾದ ಎಲ್ಲ ಸಮುದಾಯ -ಸಂಸ್ಕೃತಿಗಳ ಉಳಿವಿಗಾಗಿ ಬಾಜಪಕ್ಕೆ ಸವಾಲೊಡ್ಡಬಲ್ಲ ಒಂದು ಪ್ರಬಲ ಶಕ್ತಿಯ ಅಗತ್ಯ ಇವತ್ತು ಹಿಂದೆಂದಿಗಿಂತಲೂ ಹೆಚ್ಚಿದೆ. ಹೀಗಾಗಿಯೇ ಇವತ್ತು ಪ್ರಾದೇಶಿಕ ಪಕ್ಷಗಳು ಸಮಾನಮನಸ್ಕ ರಾಜಕೀಯ ವೇದಿಕೆಯೊಂದನ್ನು ರಚಿಸಿಕೊಂಡು ತಮ್ಮತಮ್ಮ ರಾಜ್ಯಗಳಲ್ಲಿ ಬಾಜಪವನ್ನು ಎದುರಿಸಿ ನಿಲ್ಲುವ ಸವಾಲನ್ನು ಸ್ವೀಕರಿಸಬೇಕಾಗಿದೆ. ಬಾಜಪ ಸಹ ಪ್ರಜಾಪ್ರಭತ್ವದಲ್ಲಿ ನಂಬಿಕೆಯನ್ನಿಟ್ಟುಕೊಂಡ ಒಂದು ರಾಷ್ಟ್ರೀಯ ಪಕ್ಷವಾಗಿ ಉಳಿಯಲು ಸಹ ಇದು ಸಹಕಾರಿಯಾಗುತ್ತದೆ.

ಆದರೆ ಇದು ಸಾದ್ಯವಾಗಲು ಪ್ರಾದೇಶಿಕ ಪಕ್ಷಗಳ ನಾಯಕರುಗಳು ತಮ್ಮ ಪಾಳೆಗಾರಿಕೆಯ ಅಹಮ್ಮನ್ನು ಬದಿಗೊತ್ತಿ, ಒಳಜಗಳಗಳನ್ನು ಕೈಬಿಟ್ಟು ಮುಕ್ತ ಮನಸ್ಸಿನಿಂದ ಮುಂದಿನ ಹೆಜ್ಜೆ ಇಡಬೇಕಾಗುತ್ತದೆ.

ಜುಲೈ 26, 2016

ಮುಗಿದ ಮಧುಚಂದ್ರದ ಅವಧಿ: ಬಾಜಪಕ್ಕೆ ಸಿದ್ದು ಬೈ! ಸರತಿಯಲ್ಲಿ ಕೀರ್ತಿ ಆಜಾದ್, ಶತ್ರುಘ್ನಸಿನ್ಹಾ?

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
26/07/2016
ತಾನು ಬಹಳ ಶಿಸ್ತಿನ ಪಕ್ಷವೆಂದೂ, ತನ್ನೆಲ್ಲ ಸದಸ್ಯರುಗಳೂ ಪಕ್ಷದ ಸಿದ್ದಾಂತಗಳಿಗೆ ಬದ್ದವಾಗಿದ್ದು ಪಕ್ಷಾಂತರದಂತಹ ಕೆಲಸಗಳನ್ನು ಮಾಡಲಾರರೆಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಬಾಜಪದ ಬಣ್ಣ ಮತ್ತೊಮ್ಮೆ ಬಯಲಾಗಿದೆ. ಇಂಡಿಯಾದ ಮತ್ತೆಲ್ಲ ಪಕ್ಷಗಳಂತೆ ಅದರ ಸದಸ್ಯರುಗಳು ಸಹ ಅಧಿಕಾರದ ಹಸಿವು ನೀಗಿಸಿಕೊಳ್ಳಲೆಂದೇ ರಾಜಕಾರಣ ಮಾಡುತ್ತಿರುವವರು ಹಾಗು ಅಂತಹ ಅವಕಾಶ ಸಿಗದೇ ಹೋದಾಗ ಸಿದ್ದಾಂತಗಳ ಮುಖವಾಡ ಕಿತ್ತೆಸೆದು ಅನ್ಯ ಪಕ್ಷಗಳಿಗೆ ಪಲಾಯನ ಮಾಡುವವರೆಂದು ಅದರೊಳಗೆ ನಡೆಯುತ್ತಿರುವ ವಿದ್ಯಾಮಾನಗಳು ತೋರಿಸಿಕೊಡುತ್ತಿವೆ. ಅದರಲ್ಲಿ ಪಂಜಾಬಿನ ಹಿರಿಯ ಸಂಸದ ಶ್ರೀ ನವಜೋತ್ ಸಿಂಗ್ ಮೊನ್ನೆ ಬಾಜಪದ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ಕೊಟ್ಟದ್ದೂ ಒಂದು. ಇತ್ತೀಚೆಗಷ್ಟೇ ಬಾಜಪ ರಾಜ್ಯಸಭೆಗೆ ಸಿದ್ದೂರವರನ್ನು ಆರಿಸಿ ಕಳಿಸಿದಾಗ ಅಂತೂ ಸಿದ್ದೂರವರಿಗು ಬಾಜಪದಲ್ಲಿ ಮನ್ನಣೆ ದೊರೆತಂತಾಯಿತೆಂದು ಎಲ್ಲರೂ ನಂಬಿದ್ದರು. ಹಾಗು ಬಾಜಪದ ಹೈಕಮ್ಯಾಂಡ್ ಜೊತೆಗಿನ ಅವರ ಭಿನ್ನಾಭಿಪ್ರಾಯಗಳು ಮುಕ್ತಾಯವಾದವೆಂದೇ ಜನ ಬಾವಿಸಿದ್ದರು. ಯಾಕೆಂದರೆ 2004ರಿಂದ 2014ರವರೆಗೆ ಪಂಜಾಬಿನ ಅಮೃತಸರದಿಂದ ಸತತವಾಗಿ ಸಂಸದರಾಗಿ ಆಯ್ಕೆಯಾಗಿ ಬರುತ್ತಿದ್ದ ನವಜೋತ್ ಸಿಂಗ್ ಅವರನ್ನು ಬಾಜಪ ಮನಸ್ಸು ಮಾಡಿದ್ದರೆ ಪಂಜಾಬಿನ ರಾಜ್ಯ ರಾಜಕೀಯದಲ್ಲಿ ತನ್ನ ಮುಖ್ಯ ದಂಡನಾಯಕನನ್ನಾಗಿ ಬಿಂಬಿಸಿ ಬೆಳೆಸಿ ಅಕಾಲಿದಳದ ನೆರಳಿಂದ ಹೊರಬಂದು ಸ್ವತಂತ್ರವಾಗಿ ರಾಜಕಾರಣ ಮಾಡಬಹುದಿತ್ತು. ಆದರೆ ಸಿದ್ದುವನ್ನು ಕಂಡರಾಗದ ಅಕಾಲಿದಳದ ಒತ್ತಡಕ್ಕೆ ಮಣಿದ ಬಾಜಪ ಸಿದ್ದುರವರಿಗೆ ರಾಜ್ಯ ರಾಜಕೀಯದಲ್ಲಿ ಪ್ರಮುಖಪಾತ್ರ ವಹಿಸುವ ಯಾವ ಅವಕಾಶವನ್ನೂ ನೀಡಲೇ ಇಲ್ಲ. ಈ ಬಗ್ಗೆ ಸಿದ್ದೂರವರಿಗೆ ಆಂತರೀಕವಾಗಿ ತೀವ್ರ ಅಸಮಾದಾನವಿದ್ದುದು ಸುಳ್ಳಲ್ಲ. 

ಗಾಯದ ಮೇಲೆ ಬರೆ ಎಳೆದಂತೆ 2014ರ ಲೋಕಸಭಾ ಚುನಾವಣೆಯಲ್ಲಿ ಅಮೃತಸರದಿಂದ ಸಿದ್ದೂಗೆ ಪಕ್ಷದ ಟಿಕೇಟ್ ನೀಡದೆ ಅರುಣ್ ಜೈಟ್ಲಿಯವರಿಗೆ ಟಿಕೇಟ್ ನೀಡಲಾಯಿತು. ಆದರೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಎದುರು ಸೋತ ಜೇಟ್ಲಿಯನ್ನು ತದನಂತರ ಸಂಪುಟದ ಅತ್ಯಂತ ಪ್ರಮುಖವಾದ ಹಣಕಾಸು ಖಾತೆಗೆ ಸಚಿವರನ್ನಾಗಿ ಮಾಡಲಾಯಿತು. ಪಕ್ಷದ ಇಂತಹ ನಡೆಗಳಿಂದ ತೀವ್ರ ಅಸಮಾದಾನಗೊಂಡಿದ್ದ ಸಿದ್ದೂರವರನ್ನು ಸಮಾದಾನ ಮಾಡಲು ಇತ್ತೀಚೆಗೆ ಅವರನ್ನು ರಾಜ್ಯಸಭೆಗೆ ಕಳಿಸಲಾಯಿತು. ಆದರೆ ಪಂಜಾಬಿನ ರಾಜ್ಯ ರಾಜಕೀಯದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸಿದ್ದೂರವರಿಗೆ ಇದರಿಂದ ತೃಪ್ತಿಯೇನೂ ಆಗಲಿಲ್ಲ. ಯಾಕೆಂದರೆ ಅವರ ಆಪ್ತರು ಹೇಳುವಂತೆ, ಮೊದಲಿನಿಂದಲು ಸಿದ್ದೂರವರಿಗೆ ರಾಜ್ಯ ರಾಜಕಾರಣದಲ್ಲಿಯೇ ಆಸಕ್ತಿಯಿದ್ದು ಪಂಜಾಬಿನ ಮುಖ್ಯಮಂತ್ರಿಯಾಗುವ ಹಂಬಲ ಹೊಂದಿದ್ದರು. ಹಾಗಾಗಿಯೇ ಅವರು ಅರುಣ್ ಜೇಟ್ಲಿಯ ಪರವಾಗಿ ಚುನಾವಣಾ ಪ್ರಚಾರವನ್ನೂ ಮಾಡಲಿಲ್ಲ. ಜೊತೆಗೆ ಒಂದಷ್ಟು ಕಾಲ ಸಕ್ರಿಯ ರಾಜಕಾರಣದಿಂದ ದೂರವಿದ್ದು ಎಂದಿನಂತೆ ಕ್ರಿಕೇಟ್ ವೀಕ್ಷಕ ವಿವರಣೆಯಲ್ಲಿ ಮತ್ತು ಕಪಿಲ್ ಶರ್ಮಾರವರ ಜನಪ್ರಿಯ ಕಾಮೆಡಿ ಶೋನಲ್ಲಿ ನಿರತರಾಗಿ ಬಿಟ್ಟರು.

ಆದರೆ ಮತ್ತೆ ಸಿದ್ದೂರವರನ್ನು ರಾಜ್ಯಸಭೆಗೆ ನೇಮಕ ಮಾಡಿದಾಗ ಎಲ್ಲವೂ ಸರಿಯಾಯಿತೆಂದು ಜನತೆ ಬಾವಿಸಿದ್ದರು. ಅದಕ್ಕೆ ತಕ್ಕ ಹಾಗೆ ಪಂಜಾಬಿನ ರಾಜಕಾರಣದ ಮಟ್ಟಿಗೆ ಸಿದ್ದೂರವರ ಅಗತ್ಯವನ್ನು ಮನಗಂಡಿತೇನೋ ಎಂಬಂತೆ ಅವರನ್ನು ರಾಜ್ಯ ಬಾಜಪದ ಕೋರ್ ಕಮಿಟಿಗೆ ಸೇರಿಸಲಾಯಿತು. ಇದು ಸಿದ್ದುರವರು ರಾಜ್ಯ ರಾಜಕೀಯಕ್ಕೆ ಎಷ್ಟು ಅನಿವಾರ್ಯವೆಂಬುದನ್ನು ಬಾಜಪ ಅರ್ಥ ಮಾಡಿಕೊಂಡಿದೆಯೆಂದು ಜನ ಬಾವಿಸಿದ್ದರು. ಸ್ವತ: ಸಿದ್ದು ಸಹ ಹಾಗೇ ಅಂದುಕೊಂಡಿದ್ದರು. ಆದರೆ ಮುಂದಿನ ವರ್ಷ ನಡೆಯಲಿರುವ ವಿದಾನಸಭೆಯ ಚುನಾವಣೆಗಳಿಗೆ ಪಕ್ಷದೊಳಗೆ ನಡೆಯುತ್ತಿರುವ ಸಿದ್ದತೆಗಳಲ್ಲಿ ಸಿದ್ದೂರವರನ್ನು ಸೇರಿಸಿಕೊಳ್ಳುವ ಯಾವ ಕ್ರಮವನ್ನು ಬಾಜಪ ಮಾಡಲಿಲ್ಲ. ಹೀಗಾಗಿ ಸಿದ್ದೂರವರು ಅನಿವಾರ್ಯವಾಗಿ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದರು. ಇದನ್ನೇ ಕಾದು ಕೂತಂತೆ ಕಂಡ ಬಾಜಪದ ನಾಯಕರುಗಳು ಸಿದ್ದೂರವರನ್ನು ಸಂಪರ್ಕಿಸುವ ಯಾವ ಪ್ರಯತ್ನವನ್ನೂ ಮಾಡದೆ ತಕ್ಷಣವೇ ಅವರ ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸುವಂತೆ ನೋಡಿಕೊಂಡರು.

ತನ್ನ ರಾಜೀನಾಮೆಯ ಬಗ್ಗೆ ವಿವರಣೆ ನೀಡಿದ ಸಿದ್ದು ಪಂಜಾಬಿನ ಅಭಿವೃದ್ದಿಯ ಕಿಟಕಿಗಳನ್ನು ಮುಚ್ಚಿದವರ ಜೊತೆಗೆ ತಾವು ಇರಲು ಸಾದ್ಯವಿಲ್ಲ. ಮನುಷ್ಯ ಸರಿ ತಪ್ಪುಗಳ ನಡುವೆ ಆಯ್ಕೆ ಬಂದಾಗ ಸರಿಯನ್ನು ಆಯ್ಕೆ ಮಾಡಿಕೊಳ್ಳಬೇಕೇ ಹೊರತು, ತಟಸ್ಥವಾಗಿರುವುದು ಸರಿಯಲ್ಲ. ನಾನು ಸ್ವಪ್ರತಿಷ್ಠೆಗಿಂತ ಪಂಜಾಬಿನ ಕಲ್ಯಾಣವೇ ಮುಖ್ಯವೆಂದು ಬಾವಿಸಿದವನು ಎಂದಿದ್ದಾರೆ. ಆದರೆ ಬಾಜಪದ ನಾಯಕರುಗಳು ಮಾತ್ರ ಸಿದ್ದುವಿನ ಈ ನಡೆ ಅವಕಾಶವಾದಿತನದಿಂದ ಕೂಡಿದ್ದು ಎಂದು ಹೇಳಿಕೆ ನೀಡಿದ್ದಾರೆ. ಆದರೆ ಸಿದ್ದು ಆಮ್‍ಆದ್ಮಿ ಪಕ್ಷವನ್ನು ಸೇರುತ್ತಾರೆಂಬ ವದಂತಿಗಳಿಂದ ಸಂತಸಗೊಂಡಿರುವ ಆಪ್ ಮಾತ್ರ ರಾಜ್ಯದ ಹಿತದೃಷ್ಠಿಗಾಗಿ ತನ್ನÀ ಸಂಸತ್ ಸ್ಥಾನವನ್ನು ತೊರೆದಿರುವ ಸಿದ್ದುರವರ ನಡೆ ನಿಜಕ್ಕೂ ಹೊಗಳಿಕೆಗೆ ಅರ್ಹವಾದುದೆಂದು ಹೇಳಿದೆ. ಆದರೆ ಬಾಜಪ ಮತ್ತು ಅಕಾಲಿದಳದ ಮೈತ್ರಿಕೂಟ ಮಾತ್ರ ಸಿದ್ದುರವರ ಈ ನಡೆಯನ್ನು ವಿಶ್ವಾಶಘಾತುಕತನವೆಂದು ಬಣ್ಣಿಸಿದ್ದಾರೆ.

ಒಟ್ಟಿನಲ್ಲಿ ಸಿದ್ದುರವರು ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಂಜಾಬಿನಲ್ಲಿ ಬಾಜಪದ ಶಾಸಕಿಯಾಗಿರುವ ಅವರ ಪತ್ನಿ ಶ್ರೀಮತಿ ನವಜೋತ್ ಕೌರ್ ಅವರು ಕೂಡ ಬಾಜಪವನ್ನು ತೊರೆಯುತ್ತಾರೆಯೇ ಎಂಬುದು ಪ್ರಶ್ನೆಯಾಗಿ ಉಳಿದಿದೆ. ಕೌರ್ ಅವರು ಹಿಂದಿನಿಂದಲೂ ತಮ್ಮದೇ ಮೈತ್ರಿ ಸರಕಾರದ ಹಲವು ತಪ್ಪು ನಡೆಗಳ ಬಗ್ಗೆ ಸಾರ್ವಜನಿಕವಾಗಿ ಟೀಕಿಸಿ ಪಕ್ಷದ ಕೆಂಗಣ್ಣಿಗೆ ತುತ್ತಾದವರಾಗಿದ್ದಾರೆ. ಸಿದ್ದು ರಾಜಿನಾಮೆಯ ನಂತರ ಆಕೆಯೂ ಪಕ್ಷವನ್ನು ತೊರೆಯಬಹುದೆಂಬ ನಿರೀಕ್ಷೆ ಸದ್ಯಕ್ಕಂತು ಹುಸಿಯಾಗಿದೆ. ಬಾಜಪದ ನಾಯಕರುಗಳು ಕೌರ್ ಜೊತೆ ಕೆಲವು ಸುತ್ತುಗಳ ಮಾತುಕತೆ ನಡೆಸಿದ ನಂತರ ತಾನಿನ್ನು ಪಕ್ಷ ತೊರೆದಿಲ್ಲ, ಬಾಜಪ ಅಕಾಲಿದಳದೊಂದಿಗಿನ ಮೈತ್ರಿಗಾಗಿ ಸಿದ್ದುವನ್ನು ಕಳೆದುಕೊಂಡಿದ್ದು, ಮುಂದಿನ ಚುನಾವಣೆಯಲ್ಲಿದು ಪಕ್ಷಕ್ಕೆ ಪ್ರತಿಕೂಲ ಪರಿಣಾಮ ಉಂಟುಮಾಡಬಹುದೆಂದು ಸೂಚ್ಯವಾಗಿ ಹೇಳಿದ್ದಾರೆ.ಸಿದ್ದು ಯಾವತ್ತಿಗೂ ತಮ್ಮ ನಿರ್ದಾರವನ್ನು ಬದಲಾಯಿಸುವುದಿಲ್ಲವೆಂದೂ ಅಭಿಪ್ರಾಯ ನೀಡಿದ್ದಾರೆ.

ಇಲ್ಲಿ ನಿಜವಾದ ಲಾಭವಾಗುತ್ತಿರುವುದು ಆಪ್ ಪಕ್ಷಕ್ಕೆ. ಈ ನಿಟ್ಟಿನಲ್ಲಿ ಅರವಿಂದ್ ಕೇಜ್ರೀವಾಲ್ ಸಿದ್ದುರವರೊಂದಿಗೆ ಹಲವು ಸುತ್ತುಗಳ ರಹಸ್ಯ ಮಾತುಕತೆಯನ್ನು ನಡೆಸಿದ್ದಾರೆಂಬ ವದಂತಿ ಹಬ್ಬಿದ್ದು ಮುಂದಿನ ವಿದಾನಸಭಾ ಚುನಾವಣೆ ಎದುರಿಸಲು ಕ್ಲೀನ್ ಇಮೇಜ್ ಇರುವ ಮತ್ತು ಗ್ರಾಮೀಣ ಪಂಜಾಬಿನಲ್ಲಿ ಜನಪ್ರಿಯತೆ ಪಡೆದಿರುವ ಸಿದ್ದುರವರಿಂದ ಆಪ್ ಪಕ್ಷಕ್ಕೆ ಹೆಚ್ಚು ಲಾಭವಾಗಲಿದೆಯೆಂದು ಹೇಳಲಾಗುತ್ತಿದೆ.

ಇದರಿಂದ ಈಗಾಗಲೇ ಆಡಳಿತ ವಿರೋದಿ ಅಲೆಯ ನಡುವೆಯೇ ಚುನಾವಣೆ ಎದುರಿಸಬೇಕಾಗಿ ಬಂದಿರುವ ಬಾಜಪ ಮತ್ತು ಅಕಾಲಿದಳದ ಮೈತ್ರಿಕೂಟಕ್ಕೆ ನವಜೋತ್ ಸಿಂಗ್ ಸಿದ್ದುರವರ ರಾಜಿನಾಮೆಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿರುವುದಂತು ಸತ್ಯ.

======

ಇದರ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಇನ್ನೊಂದು ಸ್ಪೋಟಕ ಸುದ್ದಿಯನ್ನು ಬಹಿರಂಗ ಗೊಳಿಸಿದ್ದಾರೆ: ಈಗ ಬಾಜಪದಿಂದ ಅಮಾನತಾಗಿರುವ ಮಾಜಿ ಕ್ರಿಕೇಟಿಗ  ಕೀರ್ತಿ ಆಜಾದ್ ಮತ್ತು ಶತ್ರುಘ್ನ ಸಿನ್ಹಾ ರವರು ಸಹ ಆದಷ್ಟು ಬೇಗ ಬಾಜಪ ತೊರೆದು ಆಪ್ ಸೇರಲಿದ್ದಾರೆಂದು ಟ್ವೀಟ್ ಮಾಡಿದ್ದಾರೆ.

ಇದರಲ್ಲಿ ಮುಖ್ಯವಾಗಿರುವುದು ಕೀರ್ತಿ ಆಜಾದ್ ಅವರ ಮುಂದಿನ ನಡೆ. ಯಾಕೆಂದರೆ ದೆಹಲಿ ಕ್ರಿಕೇಟ್ ಸಂಸ್ಥೆಯ ಆಡಳಿತಕ್ಕೆ ಸಂಬಂದಿಸಿದಂತೆ ಕೀರ್ತಿಯವರು ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿಯವರ ವಿರುದ್ದ ಹಣ ದುರುಪಯೋಗದ ಆರಂಭ ಮಾಡಿದ್ದರು. ಈ ಕಾರಣಕ್ಕಾಗಿ ಕೀರ್ತಿಯವರನ್ನು ಪಕ್ಷದಿಂದ ಅಮಾನತ್ತು ಮಾಡಲಾಗಿತ್ತು. ಇದೀಗ ಅವರ ಪತ್ನಿ ಶ್ರೀಮತಿ ಪೂನಂ ಆಜಾದ್ ಸಹ ಪಕ್ಷ ತೊರೆದು ಆಪ್ ಸೇರಲಿದ್ದಾರೆಂಬುದು ಸುದ್ದಿಯಾಗಿದೆ. ಪೂನಂ ಸಹ ಬಾಜಪ ದೆಹಲಿ ಘಟಕದ ಮಾಜಿ ಉಪಾದ್ಯಕ್ಷೆಯಾಗಿದ್ದು ಮೂರು ಬಾರಿ ಬಾಜಪದ ರಾಷ್ಟ್ರೀಯ ಕಾರ್ಯಕಾರಿಯ ಸದಸ್ಯೆಯಾಗಿ ಕೆಲಸ ನಿರ್ವಹಿಸಿದ್ದು ಇದೀಗ ದೆಹಲಿಯ ಬಾಜಪದ ವಕ್ತಾರರಾಗಿ ಕೆಲಸ ಮಾಡುತ್ತಿದ್ದು ದೆಹಲಿಯ ಬಾಜಪದ ಮಹಿಳಾ ಕಾರ್ಯಕರ್ತರಲ್ಲಿ ಜನಪ್ರಿಯರಾಗಿದ್ದಾರೆ. ಕೀರ್ತಿ ಆಜಾದರ ಅಮಾನತಿನ ನಂತರ ಪೂನಂ ಅವರನ್ನು ಸಹ ಪಕ್ಷ ಕಡೆಗಣಿಸುತ್ತಿದೆಯೆಂಬ ಆರೋಪ ಬಾಜಪ ನಾಯಕರ ಮೇಲಿದ್ದು ಇದರಿಂದ ಬೇಸರಗೊಂಡಿರುವ ಪೂನಂ ಬಾಜಪ ತೊರೆದು ಆಪ್ ಸೇರುವ ಸಾದ್ಯತೆ ಹೆಚ್ಚಿದೆ. 

ಇನ್ನು ಮಾಜಿ ಸಿನಿಮಾ ನಟರೂ ಬಾಜಪದ ಬಿಹಾರದ ಮುಖ್ಯ ನಾಯಕರೂ ಆದ ಶತ್ರುಘ್ನಸಿನ್ಹಾರವರು ಸಹ ಬಾಜಪದ ನಾಯಕರುಗಳಿಂದ ನಿಲ್ರ್ಯಕ್ಷಕ್ಕೆ ಗುರಿಯಾಗಿದ್ದಾರೆ. ಕಳೆದ ಬಾರಿ ನಡೆದ ಬಿಹಾರದ ವಿದಾನಸಭಾ ಚುನಾವಣೆಗಳಲ್ಲಿ ಸಿನ್ಹಾರವರನ್ನು ಸರಿಯಾಗಿ ಬಳಸಿಕೊಳ್ಳದೆ ಪ್ರಚಾರದಿಂದ ದೂರವಿಟ್ಟು ಅದಕ್ಕೆ ಪ್ರತಿಯಾಗಿ ಸೋಲನ್ನಪ್ಪಿತು. ನಂತರವೂ ಸಿನ್ಹಾರವರಿಗೆ ಸೂಕ್ತವಾದ ಸ್ಥಾನಮಾನಗಳನ್ನು ಬಾಜಪ ನೀಡಿಲ್ಲವೆಂಬ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಕ್ಷದ ಚಟುವಟಿಕೆಗಳಿಂದ ದೂರವಿರುವ ಅವರು ಸಹ ಕೆಲವೇ ದಿನಗಳಲ್ಲಿ ಆಪ್ ಸೇರಲಿದ್ದಾರೆಂಬ ಮಾತು ಕೇಳಿ ಬರುತ್ತಿದ್ದು, ಬಾಜಪದ ಮಟ್ಟಿಗಿದು ಸಿಹಿ ಸುದ್ದಿಯೇನಲ್ಲ.

ಒಟ್ಟಿನಲ್ಲಿ 2014 ರಲ್ಲಿ ಅಭೂತಪೂರ್ವ ಜಯಗಳಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಾಜಪದ ಮಧುಚಂದ್ರದ ದಿನಗಳು ಮುಗಿಯುತ್ತಿರುವಂತೆ ಕಾಣುತ್ತಿವೆ. ಆಡಳಿತ ಪಕ್ಷವೊಂದು ಎದುರಿಸಬೇಕಾದ ಎಲ್ಲ ರೀತಿಯ ಆಂತರೀಕ ಬಿರುಕುಗಳೂ ಆಪಕ್ಷದಲ್ಲಿ ಕಾಣತೊಡಗಿವೆ. ಆದರೆ ಇಂತಹ ಬಿರುಕುಗಳು ಮುಂದಿನ ವರ್ಷ ನಡೆಯಲಿರುವ ಹಲವು ರಾಜ್ಯವಿದಾನಸಭಾ ಚುನಾವಣೆಗಳ ಮೇಲೆ ಯಾವ ರೀತಿಯ ವ್ಯತಿರಿಕ್ತ ಪರಿಣಾಮಗಳು ಬೀರಬಹುದೆನ್ನುವುದನ್ನು ನಾವು ಕಾದು ನೋಡ ಬೇಕಾಗಿದೆ,

ಜುಲೈ 17, 2016

ಉತ್ತರ ಪ್ರದೇಶ: ಬ್ರಾಹ್ಮಣ ಸಮುದಾಯದ ಓಲೈಕೆಯಲ್ಲಿ ಮುಳುಗಿರುವ ರಾಜಕೀಯ ಪಕ್ಷಗಳ ಜಾತಿ ರಾಜಕಾರಣದ ಪರಾಕಾಷ್ಠೆ

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
17/07/2016
ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಗಳಿಗೆ ಪೂರ್ವಬಾವಿಯಾಗಿ ಕಾಂಗ್ರೆಸ್ಸಿನ ಹಿರಿಯ ನಾಯಕಿಯು, ಕೇಂದ್ರದ ಮಾಜಿ ಸಚಿವೆಯೂ, ದೆಹಲಿ ರಾಜ್ಯದ ಮೂರು ಅವಧಿಯ ಮಾಜಿ ಮುಖ್ಯಮಂತ್ರಿಯೂ ಆದ ಶ್ರೀಮತಿ ಶೀಲಾದೀಕ್ಷಿತ್ ಅವರನ್ನು ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸುವುದರ ಮೂಲಕ ಅದರ ಆಂತರಿಕ ತೊಳಲಾಟಕ್ಕೊಂದು ಅಂತ್ಯ ಹಾಡಿದೆ. ಇದು ಚುನಾವಣಾ ತಂತ್ರಗಾರಿಕೆಯ ನಿಪುಣನೆಂದು ಹೆಸರು ಮಾಡಿದ ಪ್ರಶಾಂತ್ ಕಿಶೋರ್ ಅವರ ಸಲಹೆಯೆಂದು ಹೇಳಲಾಗುತ್ತಿದೆ. ದೆಹಲಿಯ ಮುಖ್ಯಮಂತ್ರಿಯಾಗಿ ದೀಕ್ಷಿತ್ ಅವರು ಮಾಡಿದ ಅಭಿವೃದ್ದಿ ಪರ ಕೆಲಸಗಳನ್ನು ಚುನಾವಣೆಯ ಪ್ರಚಾರಕ್ಕೆ ಬಳಸಿಕೊಳ್ಳುವ ತಂತ್ರ ಇದೆಂದು ಹೇಳಲಾಗುತ್ತಿದೆಯಾದರು, ನಿಜವಾದ ವಿಷಯವೇ ಬೇರೆ ಇದೆ. ಎಂತ್ತರ ದಶಕದ ಉತ್ತರಾರ್ದದ ನಂತರ ಕಾಂಗ್ರೆಸ್ಸಿನಿಂದ ದೂರ ಹೋಗಿದ್ದ ಬ್ರಾಹ್ಮಣ ಸಮುದಾಯವನ್ನು ತನ್ನತ್ತ ಸೆಳೆದುಕೊಳ್ಳುವ ಉದ್ದೇಶವೇ ಈ ನಿರ್ದಾರದ ಹಿಂದಿನ ಕಾರಣವೆಂದು ಪಕ್ಷದ ಕೆಲವು ಮೂಲಗಳು ತಿಳಿಸಿವೆ. ಇದು ಬಹುತೇಕ ಸತ್ಯಕ್ಕೆ ಹತ್ತಿರವಾದ ವಿಚಾರವೆನಿಸುತ್ತದೆ. ಯಾಕೆಂದರೆ ತೊಂಭತ್ತರ ದಶಕದವರೆಗು ಕಾಂಗ್ರೆಸ್ಸಿನ ಬೆಂಬಲಿಗ ಸಮುದಾಯವಾಗಿದ್ದ ಬ್ರಾಹ್ಮಣ ಸಮುದಾಯ ೧೯೮೯ ರಿಂದ ೧೯೯೧ ರವರೆಗೆ ನಡೆದ ಮಂಡಲ ವರದಿ ವಿರೋಧಿ ಚಳುವಳಿ ಮತ್ತು ಬಾಬ್ರಿ ಮಸೀದಿಯ ವಿವಾದದ ನಂತರ ಬಾಜಪದತ್ತ ಮುಖ ಮಾಡಿತು. ಅಲ್ಲಿಂದ ಶುರುವಾದ ಕಾಂಗ್ರೆಸ್ಸಿನ ಸೋಲಿನ ಸರಮಾಲೆ ಉತ್ತರಪ್ರದೇಶದಲ್ಲಿ ಇಂದಿಗೂ ಮುಂದುವರೆಯುತ್ತಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ ಹತ್ತರಷ್ಟಿರುವ ಬ್ರಾಹ್ಮಣರು ಸುಮಾರು ನಲವತ್ತರಿಂದ ಐವತ್ತು ಕ್ಷೇತ್ರಗಳಲ್ಲಿ ನಿರ್ಣಾಯಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ಬ್ರಾಹ್ಮಣ ಮತಗಳನ್ನು ತನ್ನತ್ತ ಸೆಳೆಯಲು ಶೀಲಾ ದೀಕ್ಷಿತರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸುತ್ತಿದೆ.

ಪಂಜಾಬಿನಲ್ಲಿ ಜನಿಸಿದ ಶ್ರೀಮತಿ ಶೀಲಾ ದೀಕ್ಷಿತ್ ಕಾಂಗ್ರೆಸ್ಸಿನ ಅತ್ಯಂತ ಹಿರಿಯ ನಾಯಕರೂ, ಕೇಂದ್ರದ ಮಾಜಿ ಸಚಿವರೂ, ರಾಜ್ಯಪಾಲರೂ ಆಗಿದ್ದ ಉತ್ತರಪ್ರದೇಶದ ದಿವಂಗತ ಉಮಾಶಂಕರ ದೀಕ್ಷಿತ್ ಅವರ ಸೊಸೆ. ಉಮಾಶಂಕರ ದೀಕ್ಷಿತರು ಉತ್ತರ ಪ್ರದೇಶದ ಬ್ರಾಹ್ಮಣ ಸಮುದಾಯದಲ್ಲಿ ಅತ್ಯಂತ ಗೌರವಾನ್ವಿತ ರಾಜಕಾರಣಿಯಾಗಿ ಹೆಸರು ಮಾಡಿದ್ದವರು.ಇಂತವರ ಸೊಸೆಯಾಗಿರುವ ದೀಕ್ಷಿತರು ಮೂರು ಅವಧಿಗೆ ದೆಹಲಿಯ ಮುಖ್ಯಮಂತ್ರಿಯಾಗಿ ಕೆಲಸ ಮಾಡಿ ೨೦೧೩ರಲ್ಲಿ ಆಮ್ ಆದ್ಮಿಯ ಅಲೆಯಲ್ಲಿ ಸೋತವರು. ದೆಹಲಿಯ ಆಡಳಿತದಲ್ಲಿ ತಮ್ಮದೇ ಛಾಪು ಮೂಡಿಸಿ ಜನಪ್ರಿಯರಾಗಿದ್ದ ಅವರ ಬಗ್ಗೆ ಅವರ ವಿರೋಧಿಗಳು ತೀರಾ ಕ್ಷುಲ್ಲಕವಾಗಿ ಮಾತಾಡುತ್ತಿರಲಿಲ್ಲ. ನೆಹರೂ ಕುಟುಂಬಕ್ಕೆ ಅತ್ಯಂತ ನಿಷ್ಠರಾಗಿರುವ ಶೀಲಾರವರು ಆಡಳಿತದ ವಿಚಾರದಲ್ಲಿ ಪರಿಣಿತರೆಂಬ ಮಾತು ಸಹ ಉತ್ತರಪ್ರದೇಶದ ಚುನಾವಣೆಯಲ್ಲಿ ಪ್ರಬಾವ ಬೀರಬಹುದಾಗಿದೆ. ಆದರೆ ಇತ್ತೀಚೆಗೆ ಅವರ ಮೇಲೆ ಮಾಡಲಾಗಿರುವ ವಾಟರ್ ಟ್ಯಾಂಕರ್ ಹಗರಣವನ್ನು ವಿರೋಧಪಕ್ಷಗಳು ಅದರಲ್ಲೂ ಬಾಜಪದವರು ಚುನಾವಣೆಯ ವಿಷಯವನ್ನಾಗಿ ಮಾಡುವ ನಿರೀಕ್ಷೆಯಿದೆ. ಆದರೆ ಕೆಲವು ಸ್ಥಳೀಯ ಕಾಂಗ್ರೆಸ್ಸಿಗರ ಪ್ರಕಾರ, ಬ್ರಾಹ್ಮಣರನ್ನೇ ಮುಖ್ಯಮಂತ್ರಿ ಅಭ್ಯಥಿಯನ್ನಾಗಿ ಘೋಷಿಸಲೇ ಬೇಕೆಂದಿದ್ದರೆ ಎಪ್ಪತ್ತು ವರ್ಷದ ಶೀಲಾದೀಕ್ಷಿತರಿಗಿಂತ ನಲವತ್ತೆರಡು ವರ್ಷದ ಜಿತೇಂದ್ರ ಪ್ರಸಾದ ಉತ್ತಮ ಆಯ್ಕೆಯಾಗುವುದು ಸಾದ್ಯವಿತ್ತು. ಈ ಬಗ್ಗೆ ಕಾಂಗ್ರೆಸ್ಸಿನ ಆಂತರಿಕ ವಲಯದಲ್ಲಿ ಒಂದಷ್ಟು ಪಿಸುಮಾತುಗಳೂ ಕೇಳಿ ಬರುತ್ತಿರುವುದು ನಿಜವಾದರು, ಅನುಭವ, ದಕ್ಷತೆಯ ವಿಚಾರದಲ್ಲಿ ಶೀಲಾರವರೆ ಮೇಲುಗೈ ಸಾದಿಸಿದ್ದಾರೆ. ಹಾಗಾದರೆ ತನ್ನ ಮಾಮೂಲಿ ಸಂಪ್ರದಾಯವನ್ನು ಮುರಿದು ಕಾಂಗ್ರೆಸ್ ಯಾಕೆ ಶೀಲಾದೀಕ್ಷಿತರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿತು ಎಂದು ನೋಡಿದರೆ ಹಲವು ಕಾರಣಗಳು ಕಂಡು ಬರುತ್ತವೆ.

ಮೊದಲನೆಯದಾಗಿ ಮೋದಿಯವರನ್ನು ಮತ್ತು ನಿತೀಶ್ ಕುಮಾರ್ ಯಾದವರನ್ನು ಚುನಾವಣೆಗಳಲ್ಲಿ ಗೆಲ್ಲಿಸುವ ತಂತ್ರಗಳನ್ನು ಹೆಣೆದರು ಎನ್ನಲಾದ ಪ್ರಶಾಂತ್ ಕಿಶೋರ್ ಅವರನ್ನು ಈ ಬಾರಿ ತನ್ನ ಬೆನ್ನಿಗಿಟ್ಟುಕೊಂಡ ಕಾಂಗ್ರೆಸ್ ಅವರ ಸಲಹೆಯಂತೆಯೇ ಶೀಲಾರನ್ನು ಆಯ್ಕೆ ಮಾಡಿದ್ದು ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಇನ್ನು ಎರಡನೆಯದಾಗಿ ಶೀಲಾದೀಕ್ಷಿತರ ಬ್ರಾಹ್ಮಣ ಜಾತಿ ಅವರ ಆಯ್ಕೆಯಲ್ಲಿ ಕೆಲಸ ಮಾಡಿದೆ. ಮೂರನೆಯದಾಗಿ ಉತ್ತರಪ್ರದಶದ ಅತ್ಯಂತ ಹಿರಿಯ ಮತ್ತು ಗೌರವಾನ್ವಿತ ನಾಯಕರಾದ ಉಮಾಶಂಕರ ದೀಕ್ಷಿತರ ಕುಟುಂಬದ ಸೊಸೆ ಎಂಬುದು ಸಹ ಶೀಲಾರವರ ಆಯ್ಕೆಯಲ್ಲಿ ಪ್ರದಾನ ಪಾತ್ರ ವಹಿಸಿದೆ. ನಾಲ್ಕನೆಯದಾಗಿ ಉತ್ತರಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆಯಾಗಿ ೧೯೮೪ರಲ್ಲಿ ಆಕೆ ಪಕ್ಷವನ್ನು ಗೆಲ್ಲಿಸಿಕೊಂಡು ಬಂದಿದ್ದು ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿಗಳು ಮತ್ತು ಕಾರ್ಯಕರ್ತರು ಆಕೆಗೆ ಚಿರಪರಿಚಿತವಾಗಿರುವುದು. ಐದನೆಯದಾಗಿ ಆಕೆಯನ್ನು ಉತ್ತರಪ್ರದೇಶಕ್ಕೆ ಕಳಿಸುವುದರಿಂದ ದೆಹಲಿ ಕಾಂಗ್ರೆಸ್ಸಿನ ನಾಯಕತ್ವವನ್ನು ಇನ್ನೊಬ್ಬ ದೆಹಲಿಯ ನಾಯಕ ಅಜಯ್ ಮಕ್ವಾನರಿಗೆ ಹಸ್ತಾಂತರಿಸುವುದು ಸುಲಭದ ಕಾರ್ಯವಾಗಿದೆ. ಆರನೆಯದು ತೀರಾ ಇತ್ತೀಚೆಗೆ ಅವರ ಮೇಲೆ ಮಾಡಲಾದ ವಾಟರ್ ಟ್ಯಾಂಕರ್ ಹಗರಣದ ಹೊರತಾಗಿ ಅವರ ಮೇಲೆ ಇನ್ಯಾವ ಆಪಾದನೆಯೂ ಇಲ್ಲವಾಗಿದ್ದು ದೆಹಲಿಯಲ್ಲಿ ಸತತವಾಗಿ ಮೂರು ಬಾರಿ ಪಕ್ಚವನ್ನು ಗೆಲ್ಲಿಸಿದ ಕೀರ್ತಿ ಅವರ ಬೆನ್ನಿಗಿರುವುದಾಗಿದೆ. 

ಇನ್ನು ಈ ಬಾರಿ ಉತ್ತರಪ್ರದೇಶದ ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಬ್ರಾಹ್ಮಣರನ್ನು ಓಲೈಸುವ ಕಾರ್ಯಕ್ಕೆ ಮುಂದಾಗಿರುವುದು ವಿಶೇಷವಾಗಿದೆ, ಬಹುಶ: ತೊಂಭತ್ತರ ದಶಕದ ನಂತರ ಇದೇ ಮೊದಲಬಾರಿಗೆ ಬ್ರಾಹ್ಮಣ ಸಮುದಾಯಕ್ಕೆ ಈ ಮಟ್ಟಿಗಿನ ಪ್ರಾದಾನ್ಯತೆ ನೀಡಲಾಗುತ್ತಿದೆಯೆನ್ನಬಹುದು. ಈಗಾಗಲೇ ಬಹುಜನ ಪಕ್ಷದ ಮಾಯಾವತಿಯವರು ಐವತ್ತಕ್ಕು ಅಧಿಕ ಸ್ಥಾನಗಳಿಗೆ ಬ್ರಾಹ್ಮಣ ಅಭ್ಯರ್ಥಿಗಳನ್ನು ಘೋಷಣೆ ಮಾಡಿಯಾಗಿದ್ದು, ಈ ಸಮುದಾಯದ ಓಲೈಕೆಯಲ್ಲಿ ಮುಂದಿದ್ದಾರೆ. ಮೊನ್ನೆ ತಾನೇ ಬಾಜಪವು ಉತ್ತರಪ್ರದೇಶದ ಬ್ರಾಹ್ಮಣ ನಾಯಕರಾದ ಶ್ರೀ ಶಿವಪ್ರಕಾಶ್ ಶುಕ್ಲಾರವರನ್ನು ರಾಜ್ಯಸಭೆಗೆ ಕಳಿಸಿ, ಬ್ರಾಹ್ಮಣರ ಓಲೈಕೆಗೆ ತನ್ನ ಕಾಣಿಕೆಯನ್ನೂ ನೀಡಿದೆ. ಬಹಳ ಹಿಂದೆ ಕಲ್ಯಾಣ್ ಸಿಂಗ್ ಸರಕಾರದಲ್ಲಿ ಸಚಿವರಾಗಿದ್ದು ನಂತರ ಅಜ್ಞಾತವಾಸದಲ್ಲಿದ್ದ ಶುಕ್ಲಾರವರನ್ನು ಪುನ: ಸಕ್ರಿಯ ರಾಜಕಾರಣಕ್ಕೆ ತರುವುದರ ಹಿಂದೆ ಬಾಜಪದ ಬ್ರಾಹ್ಮಣ ಓಲೈಕೆಯ ತಂತ್ರವೇ ಅಡಗಿದೆ. ಇದೇ ರೀತಿ ಸಮಾಜವಾದಿ ಪಕ್ಷವು ಸಹ ಮೂರು ಜನ ಬ್ರಾಹ್ಮಣರನ್ನು ರಾಜ್ಯಸಬೆಗೆ ಕಳಿಸುವ ಮೂಲಕ ತಾವೇನು ಹಿಂದೆ ಬಿದ್ದಿಲ್ಲವೆಂಬುದನ್ನು ತೋರಿಸಿಕೊಟ್ಟಿದ್ದಾರೆ.

ಹೀಗೆ ಉತ್ತರಪ್ರದೇಶದಲ್ಲಿನ ನಾಲ್ಕೂ ಪಕ್ಷಗಳು ಬ್ರಾಹ್ಮಣ ಮತದಾರರನ್ನು ಓಲೈಸುವ ದಾರಿ ಹಿಡಿದಿದ್ದು ಅದು ಎಷ್ಟರ ಮಟ್ಟಿಗೆ, ಯಾವ ಪಕ್ಷಕ್ಕೆ ಸಫಲತೆಯನ್ನು ತಂದು ಕೊಡುತ್ತದೆಯೆಂಬವುದನ್ನು ನಾವು ಕಾದು ನೋಡಬೇಕಿದೆ.

ಜುಲೈ 2, 2016

ಸಮಾಜವಾದಿ ಪಕ್ಷದಿಂದ ದೂರಸರಿಯುತ್ತಿರುವ ಮುಸ್ಲಿಂ ಸಮುದಾಯ: ಒಂದು ಟಿಪ್ಪಣಿ.

ಕು.ಸ.ಮಧುಸೂದನನಾಯರ್
ಈ ದೇಶದ ಅಲ್ಪಸಂಖ್ಯಾತರಾದ ಮುಸ್ಲಿಮರನ್ನು ಎಲ್ಲಾ ರಾಜಕೀಯ ಪಕ್ಷಗಳು ಮತಬ್ಯಾಂಕನ್ನಾಗಿ ಮಾತ್ರ ನೋಡುತ್ತಿವೆಯೆಂಬ ಮಾತನ್ನು ನಾವು ಒಪ್ಪಿಕೊಳ್ಳುತ್ತಲೇ ಉತ್ತರಪ್ರದೇಶದ ರಾಜಕೀಯ ಲೆಕ್ಕಾಚಾರಗಳನ್ನು, ಮತ್ತು ಅಲ್ಲಿನ ಮುಸ್ಲಿಮರ ರಾಜಕೀಯ ನಡವಳಿಕೆಯನ್ನು ವಿಶ್ಲೇಷಣೆಗೊಳಪಡಿಸಬೇಕಾದುದು ಅಗತ್ಯವೆಂದು ನನ್ನ ಬಾವನೆ. ಉತ್ತರ ಪ್ರದೇಶದ ಒಟ್ಟು ಮತದಾರರ ಪೈಕಿ ಶೇಕಡಾ ೨೮ರಷ್ಟು ಮತದಾರರು ಮುಸ್ಲಿಂ ಸಮುದಾಯದವರಾಗಿದ್ದು ಸುಮಾರು ೭೫ ಕ್ಷೇತ್ರಗಳಲ್ಲಿ ಅವರ ಮತಗಳೇ ನಿರ್ಣಾಯಕವಾಗಿರುವುದು ಸುಳ್ಳಲ್ಲ. ಈ ಹಿನ್ನೆಲೆಯಲ್ಲಿ ೨೦೧೭ರಲ್ಲಿ ನಡೆಯಲಿರುವ ವಿದಾನಸಭಾ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯ ಒಂದು ಸಂಘಟಿತ ಗುಂಪಾಗಿ ಮತ ಚಲಾಯಿಸುವುದೇ ಆದರೆ, ಯಾವ ಪಕ್ಷವನ್ನು ಯಾಕೆ ಬೆಂಬಲಿಸಬಹುದೆಂಬುದನ್ನೂ ನಾವೊಂದಿಷ್ಟು ನೋಡೋಣ.

ಕಳೆದ ವಿದಾನಸಭಾ ಚುನಾವಣೆಯಲ್ಲಿ ಮುಲಾಯಂ ಸಿಂಗ್ ಯಾದವರ ಸಮಾಜವಾದಿ ಪಕ್ಷ ಶೇಕಡಾ ೫೮ ರಷ್ಟು ಮುಸ್ಲಿಂ ಮತದಾರರ ಬೆಂಬಲನ್ನು ಗಳಿಸಿದ್ದರ ಪರಿಣಾಮವಾಗಿ ಆ ಪಕ್ಷ ಬಹುಮತ ಪಡೆದು ಅದಿಕಾರದ ಗದ್ದುಗೆ ಹಿಡಿದಿತ್ತು. ಆದರೆ ತದನಂತರದ ೨೦೧೪ರ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್, ಬಹುಜನ ಪಕ್ಷ, ಸಮಾಜವಾದಿ ಪಕ್ಷಗಳ ನಡುವೆ ಹಂಚಿ ಹೋಗಿದ್ದರಿಂದಾಗಿ ಬಾಜಪದ ಹಿಂದು ಮತಗಳನ್ನು ದೃವೀಕರಣಗೊಳಿಸಿ ಗೆಲ್ಲಲು ಸಾದ್ಯವಾಗಿತ್ತು. ಇದೀಗ ಪರಿಸ್ಥಿತಿ ಬಹಳ ಬದಲಾವಣೆಗಳನ್ನು ಕಂಡಿದೆ. ಹಿಂದಿನ ಹಾಗೆ ಮುಸ್ಲಿಂ ಸಮುದಾಯ ಸಮಾಜವಾದಿ ಪಕ್ಷವನ್ನು ಬೆಂಬಲಿಸುವಂತಹ ಸ್ಥಿತಿಯಲ್ಲಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಮುಸ್ಲಿಂ ಸಮುದಾಯವು ಸಮಾಜವಾದಿ ಪಕ್ಷದ ವಿರುದ್ದ ಮುನಿಸಿಕೊಳ್ಳುವಂತಹ ಹಲವಾರು ಘಟನೆಗಳು ನಡೆದು ಹೋಗಿದ್ದು, ಆ ಸಮುದಾಯ ಅಖಿಲೇಶ್ ಆಳ್ವಿಕೆಯಿಂದ ಭ್ರಮನಿರಸನಗೊಂಡಿದೆ. ಹಾಗಾದರೆ ಯಾಕೆ ಮುಂದಿನ ಚುನಾವಣೆಯಲ್ಲಿ ಮುಸ್ಲಿಂ ಮತದಾರರು ಸಮಾಜವಾದಿ ಪಕ್ಷದ ವಿರುದ್ದ ಮತ ಚಲಾಯಿಸುತ್ತಾರೆಂಬುದನ್ನು ಒಂದಿಷ್ಟು ವಿಶ್ಲೇಷಿಸೋಣ:

1.ಮುಸ್ಲಿಂ ಮತವಿಭಜನೆ ತಡೆಯಲು:

ಮುಸ್ಲಿಮರು ಯಾವಾಗಲೂ ಒಂದು ಸಂಘಟಿತ ಗುಂಪಾಗಿ ಒಂದೇ ಪಕ್ಷಕ್ಕೆ ಮತಚಲಾಯಿಸತ್ತಾರೆಂಬ ಜನಪ್ರಿಯ ಅನಿಸಿಕೆಯನ್ನೂ ಮೀರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಹುಜನಪಕ್ಷ, ಬಾಜಪ ಮತ್ತು ಸಮಾಜವಾದಿ ಪಕ್ಷಗಳಿಗೆ ಬಿಡಿಬಿಡಿಯಾಗಿ ಮತಚಲಾಯಿಸಿದ್ದರು. ಬಾಜಪ ಮುಸ್ಲಿಂ ಮತ ಪಡೆಯುವಲ್ಲಿ ಸಮಾಜವಾದಿ ಪಕ್ಷದ ನಂತರದ ಸ್ಥಾನದಲ್ಲಿತ್ತು. ಹೀಗಾಗಿಯೇ ಮುಸ್ಲಿಂ ಮತದಾರರೇ ನಿರ್ಣಾಯಕವಾದ ಸ್ಥಾನಗಳ ಪೈಕಿ ಬಾಜಪ ಶೇಕಡಾ ೨೩ರಷ್ಟನ್ನು ಗೆಲ್ಲುವಂತಾಗಿತ್ತು. ಹಾಗಾಗಿ ಈ ಬಾರಿ ಮುಸ್ಲಿಂ ಮತದಾರರು ಸಮಾಜವಾದಿ ಪಕ್ಷವನ್ನು ಬೆಂಬಲಿಸಲು ಹಿಂದೆ ಮುಂದೆ ನೋಡುವುದೇ ಆದರೆ, ಅದರ ಬದಲಿಗೆ ಅವರ ಕಣ್ಮುಂದಿರುವ ಮತ್ತೊಂದು ಪಕ್ಷವೆಂದರೆ ಬಹುಜನ ಪಕ್ಷ ಮಾತ್ರ.

2. ಸಮಾಜವಾದಿ ಪಕ್ಷದಿಂದಾದ ಭ್ರಮನಿರಸನ:

ಮುಜಾಫರ್ ನಗರದ ಕೋಮುಗಲಭೆಗಳ ನಂತರ ಸಮಾಜವಾದಿ ಪಕ್ಷದ ಬಗ್ಗೆ ಮುಸ್ಲಿಮರಿಗಿದ್ದ ಒಲವು ಕಡಿಮೆಯಾಗಿದೆ. ಅಧಿಕಾರದಲ್ಲಿರುವ ಸಮಜವಾದಿ ಪಕ್ಷ ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಪಕ್ಷಪಾತವಾಗಿ ವರ್ತಿಸಲಿಲ್ಲವೆಂದು ಅವರು ಬಾವಿಸಿದ್ದಾರೆ. ಜೊತೆಗೆ ಗಲಭೆಗಳು ತೀವ್ರಸ್ವರೂಪ ಪಡೆದುಕೊಂಡ ನಂತರವೂ ಸ್ಥಳಕ್ಕೆ ಪಕ್ಷದ ಮುಖ್ಯ ನಾಯಕರಾದ ಶ್ರೀ ಮುಲಾಯಂ ಸಿಂಗ್ ಯಾದವರಾಗಲಿ, ಮುಖ್ಯಮಂತ್ರಿ ಅಖಿಲೇಶ್ ಯಾದವರಾಗಲಿ ದಾವಿಸಲಿಲ್ಲವೆಂಬುದು ಮುಸ್ಲಿಮರ ಮುಖ್ಯ ಆರೋಪ. ಮುಲಾಯಂ ಮತ್ತು ಅಖಿಲೇಶ್ ಮುಜಾಫರ್ ನಗರಕ್ಕೆ ಬೇಟಿ ನೀಡಿದ್ದು ಗಲಭೆಗಳಾದ ಆರು ತಿಂಗಳ ನಂತರ, ಅದೂ ಲೋಕಸಭಾ ಚುನಾವಣೆಗೆ ಮತ ಕೇಳಲು. ಇದು ರಾಜ್ಯದ ಬಹುತೇಕ ಮುಸ್ಲಿಂ ನಾಯಕರುಗಳನ್ನು ಕೆರಳಿಸಿದ್ದರಲ್ಲಿ ಅಚ್ಚರಿಯೇನಿಲ್ಲ. ನಂತರ ನಡೆದ ದಾದ್ರಿ ಪ್ರಕರಣ ಮುಸ್ಲಿಮರನ್ನು ಇನ್ನಷ್ಟು ಕೆರಳಿಸಿತು. ಸಮಾಜವಾದಿ ಪಕ್ಷವು ದಾದ್ರಿ ಪ್ರಕರಣವನ್ನು ನಿಬಾಯಿಸಿದ ರೀತಿ ಬಾಜಪದ ಪರವಾಗಿತ್ತೆಂಬ ಅನುಮಾನವೂ ಮುಸ್ಲಿಮರಲ್ಲಿ ಮೂಡಿತ್ತು. ಇತ್ತೀಚಗೆ ಎಬಿಪಿ ಸಂಸ್ಥೆಯು ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ ೬೫ ರಷ್ಟು ಮುಸ್ಲಿಮರು ಸಮಾಜವಾದಿ ಪಕ್ಷವನ್ನು ಈ ವಿಷಯಗಳಲ್ಲಿ ಟೀಕಿಸಿದ್ದಾರೆ.

3. ಬಾಜಪವನ್ನು ಅಧಿಕಾರದಿಂದ ದೂರವಿಡಲು:

ಉತ್ತರ ಪ್ರದೇಶದ ಮುಸ್ಲಿಂ ಮತದಾರರು ವಿದಾನಸಭಾ ಚುನಾವಣೆಗಳಲ್ಲಿ ಬಾಜಪ ಕೇಂದ್ರಿತವಾದ ನಕಾರಾತ್ಮಕ ಮತಚಲಾವಣೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿದ್ದಾರೆ. ಬಾಜಪವನ್ನು ಸೋಲಿಸಲು ಶಕ್ತಿ ಹೊಂದಿರಬಹುದಾದ ಪಕ್ಷಕ್ಕವರು ಮತ ಚಲಾಯಿಸುವುದು ಹಿಂದಿನಿಂದ ನಡೆದುಬಂದ ರೀತಿ. ಈಗ ಸಮಾಜವಾದಿ ಪಕ್ಷದ ವಿರುದ್ದ ಅವರಿಗಿರುವ ಮುನಿಸು, ಜೊತೆಗೆ ಅದಕ್ಕಿರುವ ಆಡಳಿತ ವಿರೋಧಿ ಅಲೆಯಲ್ಲಿ ಸಮಾಜವಾದಿ ಪಕ್ಷ ಬಾಜಪವನ್ನು ಸೋಲಿಸುವುದು ಸಾದ್ಯವಿಲ್ಲವೆಂಬ ನೆಲೆಯಲ್ಲಿ ಉತ್ತರ ಪ್ರದೇಶದ ಮುಸ್ಲಿಮರು ಬಹುಜನ ಪಕ್ಷದತ್ತ ವಾಲುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡಿರುವ ಮಾಯಾವತಿ ಈಗಾಗಲೇ ಸುಮಾರು ೧೦೦ ಸ್ಥಾನಗಳನ್ನು ಮುಸ್ಲಿಮರಿಗೆ ಮೀಸಲಿಟ್ಟು ಅವರನ್ನು ಸೆಳೆಯುವ ಕಾರ್ಯಕ್ಕೆ ಕೈ ಹಾಕಿದ್ದಾರೆ. ಜೊತೆಗೆ ತಾವು ಯಾವತ್ತಿಗೂ ಬಾಜಪವನ್ನು ಬೆಂಬಲಿಸುವುದಿಲ್ಲವೆಂಬ ಘೋಷಣೆಯನ್ನೂ ಮಾಡಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶದ ಮಟ್ಟಿಗೆ ಕಾಂಗ್ರೆಸ್ ತೀರಾ ದುರ್ಬಲವಾಗಿದ್ದು ಅದನ್ನು ಬೆಂಬಲಿಸುವುದರಲ್ಲಿ ಪ್ರಯೋಜನವಿಲ್ಲವೆಂಬ ಅಭಿಪ್ರಾಯಕ್ಕೆ ಮುಸ್ಲಿಮರು ಬಂದಿದ್ದಾರೆ.

4.ಮುಸ್ಲಿಮರ ಶೋಚನೀಯ ಸ್ಥಿತಿಗತಿಗಳು.

ಹಾಗೆ ನೋಡಿದರೆ ಕಳೆದ ಎರಡೂವರೆ ದಶಕಗಳಿಂದ ಅಂದರೆ ೧೯೯೦ರಿಂದ ಅರ್ದಕ್ಕಿಂತ ಹೆಚ್ಚು ಅವಧಿಯಲ್ಲಿ ಮುಸ್ಲಿಮರ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ ಅನುಭವಿಸಿರುವ ಸಮಾಜವಾದಿ ಪಕ್ಷ ಆ ಸಮುದಾಯಕ್ಕೆ ಸೂಕ್ತ ನ್ಯಾಯ ಒದಗಿಸಿಲ್ಲವೆಂಬುದು ಆ ಸಮುದಾಯದ ಜನರ ಆಕ್ರೋಶವಾಗಿದೆ. ಬಹಳ ಮಟ್ಟಿಗೆ ಅದು ನಿಜವೂ ಆಗಿದೆ. ಇಡೀ ರಾಷ್ಟ್ರದಲ್ಲಿ ಮುಸ್ಲಿಂ ಮಕ್ಕಳ ಶಾಲಾ ದಾಖಲಾತಿ ಪ್ರಮಾಣ ಶೇಕಡಾ ೧೨.೮ ಇದ್ದರೆ ಉತ್ತರ ಪ್ರದೇಶದಲ್ಲಿ ಕೇವಲ ಶೇಕಡಾ ೯.೬೪ ಮಾತ್ರವಿದೆ. ಕೇಂದ್ರದ ಮಾನವ ಸಂಪನ್ಮೂಲ ಖಾತೆಯೇ ನೀಡಿರುವ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಸಾಕ್ಷರತಾ ಪ್ರಮಾಣ ಇಡೀ ದೇಶಕ್ಕೆ ಹೋಲಿಸಿದರೆ ತೀರಾ ಕೆಳಮಟ್ಟದಲ್ಲಿದ್ದು ಸರಕಾರಿ ನೌಕರಿಗಳಲ್ಲು ಅವರದು ತೀರಾ ಶೋಚನೀಯ ಪರಿಸ್ಥಿತಿ. ಇನ್ನು ಮುಸ್ಲಿಂ ಮಹಿಳೆಯರ ಸಾಮಾಜಿಕ ಸ್ಥಾನಮಾನವಂತು ಇತರೇ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ತಳಮಟ್ಟದಲ್ಲಿದೆ.ಇನ್ನು ಸಾಮಾಜಿಕವಾಗಿ ಕೋಮುಗಲಭೆಗಳ ಪ್ರಮಾಣವೂ ಬೇರೆ ರಾಜ್ಯಗಳಿಗಿಂತ ಹೆಚ್ಚಿದ್ದು ಇದು ಮುಸ್ಲಿಮರಲ್ಲಿ ಸದಾ ಅಭದ್ರತೆಯ ಬಾವ ಮೂಡಿಸಿರುತ್ತದೆ. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಮುಸ್ಲಿಂ ಸಮುದಾಯದ ಬೆಂಬಲವನ್ನು ಕಳೆದುಕೊಳ್ಳುತ್ತಾ ಸಾಗುತ್ತಿದೆ

ಇವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದರೆ ಮುಂದಿನ ಚುನಾವಣೆಯ ಹೊತ್ತಿಗೆ ಮುಸ್ಲಿಂ ಸಮುದಾಯ ಸಮಾಜವಾದಿ ಪಕ್ಷದಿಂದ ದೂರ ಸರಿಯುವುದರಲ್ಲಿ ಸಂದೇಹವೇ ಇಲ್ಲ. ಒಂದು ಸಮುದಾಯವಾಗಿ ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಅದು ಬಾಜಪ ಕೇಂದ್ರಿತ ನಕಾರಾತ್ಮಕವಾಗಿಯೇ ಮತ ಚಲಾವಣೆ ಮಾಡುವುದೇ ಆದರೆ ಅದರ ಮುಂದಿರುವ ಉತ್ತಮ ಆಯ್ಕೆಯೆಂದರೆ ಬಹುಜನ ಪಕ್ಷ ಮಾತ್ರವೆನಿಸುತ್ತದೆ.

ಜೂನ್ 30, 2016

ಉತ್ತರಪ್ರದೇಶ: ಮಾಯಾವತಿ ಮತ್ತು ಮುಸ್ಲಿಂ ಸಮುದಾಯ!

ಕು.ಸ.ಮಧುಸೂದನ ನಾಯರ್

ದೇಶದ ಹಿಂದಿ ಹೃದಯಭಾಗವಾದ ಬಿಹಾರವನ್ನು ಕಳೆದುಕೊಂಡ ನಂತರದಲ್ಲಿ ಉತ್ತರಪ್ರದೇಶ ರಾಜ್ಯವನ್ನು ಗೆಲ್ಲಲೇಬೇಕಾಗಿರುವುದು ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರಮೋದಿಯವರು ಮತ್ತು ಬಾಜಪದ ರಾಷ್ಟ್ರಾದ್ಯಕ್ಷರಾದ ಶ್ರೀ ಅಮಿತ್ ಷಾರವರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿಬಿಟ್ಟಿದೆ. ಈ ದಿಸೆಯಲ್ಲವರು ಹಲವು ಚುನಾವಣಾ ಪೂರ್ವ ತಂತ್ರಗಳನ್ನು ಹೆಣೆಯುತ್ತ ಸಾದ್ಯವಿರಬಹುದಾದ ಎಲ್ಲ ನಡೆಗಳನ್ನೂ ನಡೆಸಲು ಪ್ರಾರಂಬಿಸಿದ್ದಾರೆ. ಮೊದಲಿನಿಂದಲೂ ಉತ್ತರಪ್ರದೇಶ ಜಾತಿಯಾಧಾರಿತ ರಾಜಕಾರಣಕ್ಕೆ ಹೆಸರು ವಾಸಿಯಾಗಿದ್ದು, ತೊಂಬತ್ತರ ದಶಕದ ನಂತರ ಜಾತಿ ರಾಜಕಾರಣದ ಜೊತೆಗೆ ಧರ್ಮ ರಾಜಕಾರಣವೂ ದೊಡ್ಡ ಮಟ್ಟದಲ್ಲಿ ಕೆಲಸ ಮಾಡುತ್ತಿದೆ. ಹೀಗಾಗಿ ಉತ್ತರಪ್ರದೇಶದಲ್ಲಿರುವ ಶೇಕಡಾ 28 ರಷ್ಟು ಮುಸ್ಲಿಂ ಮತದಾರರು ಮುಂದಿನ ವಿದಾನಸಭಾ ಚುನಾವಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಲಿದ್ದಾರೆಂಬುದು ಖಚಿತ. ಅದೂ ಅಲ್ಲದೆ ಸುಮಾರು 73 ಕ್ಷೇತ್ರಗಳಲ್ಲಿ ಅವರ ಮತಗಳೇ ನಿರ್ಣಾಯಕವೂ ಆಗಿದೆ. ಹಾಗಾಗಿ ಈ 28ರಷ್ಟು ಮತವನ್ನು ಯಾವ ಪಕ್ಷ ಹೆಚ್ಚು ಸೆಳೆಯುತ್ತದೆಯೊ ಆ ಪಕ್ಷ ಬಹುಮತ ಪಡೆಯುವುದು ಸಾದ್ಯವಾಗುತ್ತದೆಯೆಂಬುದು ಒಂದು ಲೆಕ್ಕಾಚಾರ. ಈ ದೃಷ್ಠಿಯಿಂದ ಎಲ್ಲ ಪಕ್ಷಗಳು ಮುಸ್ಲಿಂ ಮತದಾರರನ್ನು ಓಲೈಸುವ ಮಾತುಗಳನ್ನಾಡುತ್ತಿವೆ.

ಇದುವರೆಗೂ ಬಹುತೇಕ ಮುಸ್ಲಿಂ ಮತದಾರರು ಸಮಾಜವಾದಿ ಪಕ್ಷದ ಕಟ್ಟಾ ಬೆಂಬಲಿಗರಾಗಿದ್ದರು. ಕಳೆದ ವಿದಾನಸಭಾ ಚುನಾವಣೆಯಲ್ಲಿ ಅಂದರೆ 2012ರಲ್ಲಿ ಸಮಾಜವಾದಿ ಪಕ್ಷವು ಶೇಕಡಾ 54ರಷ್ಟು ಮುಸ್ಲಿಂ ಮತಗಳನ್ನು ಪಡೆದು ನಿಚ್ಚಳ ಬಹುಮತ ಪಡೆದಿತ್ತು. ಆದರೆ 2014ರ ಲೋಕಸಭಾ ಚುನಾವಣೆಗಳ ನಂತರ ಈ ಸಮೀಕರಣ ಬಹಳಷ್ಟು ಬದಲಾದಂತೆ ಕಾಣುತ್ತಿದೆ. ಈ ಹಿಂದಿನಂತೆ ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಸಮಾಜವಾದಿ ಪಕ್ಷದ ಜೊತೆಗಿಲ್ಲ. ಅದು ಕಳೆದ ನಾಲ್ಕೂವರೆ ವರುಷಗಳ ಅಖಿಲೇಶ್ ಯಾದವ್ ಆಳ್ವಿಕೆಯಿಂದ ಭ್ರಮನಿರಸವಗೊಂಡಿದೆ. ಸಮಾಜವಾದಿ ಪಕ್ಷವು ಮುಜಾಫರ್ ನಗರದ ಗಲಬೆಗಳನ್ನು, ಮತ್ತು ದಾದ್ರಿ ಪ್ರಕರಣವನ್ನು ನಿರ್ವಹಿಸಿದ ರೀತಿ ಮುಸ್ಲಿಂ ಸಮುದಾಯದ ಕೋಪಕ್ಕೆ ಕಾರಣವಾಗಿದೆ. ಮುಜಾಫರ್ ನಗರದ ಗಲಬೆಗಳಾದ ಸುಮಾರು ಆರು ತಿಂಗಳ ನಂತರ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಅಲ್ಲಿಗೆ ಬೇಟಿ ನೀಡುವ ಮನಸ್ಸು ಮಾಡಿದ್ದರು, ಅದೂ ಲೋಕಸಭಾ ಚುನಾವಣೆಗೆ ಮತ ಕೇಳಲು. ಹೀಗಾಗಿ ಗಲಬೆಯಾದ ತಕ್ಷಣ ಸ್ಥಳಕ್ಕೆ ದಾವಿಸದ ಸಮಾಜವಾದಿ ಪಕ್ಷದ ತಂದೆ ಮಕ್ಕಳ ಬಗ್ಗೆ ಮುಸ್ಲಿಂ ಸಮುದಾಯ ತೀವ್ರ ಅಸಮಾದಾನಗೊಂಡಿದೆ. ನಂತರದಲ್ಲಿ ನಡೆದ ದಾದ್ರಿ ಪ್ರಕರಣವನ್ನು ಬಾಜಪಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ವಹಿಸಿದ ಉತ್ತರಪ್ರದೇಶದ ಸರಕಾರದ ಬಗ್ಗೆ ಆ ಸಮುದಾಯ ಮತ್ತಷ್ಟು ಕೋಪಗೊಂಡು ದೂರ ಸರಿಯುವಲ್ಲಿ ಕಾರಣವಾಯಿತು. ಇದರ ಜೊತೆಗೆ ಬಿಹಾರದಲ್ಲಿ ನಡೆದ ಮಹಾಘಟಬಂದನ್ ಜೊತೆ ಸೇರದೆ ಬಾಜಪಕ್ಕೆ ಅನುಕೂಲ ಮಾಡಿಕೊಡುವ ರೀತಿಯಲ್ಲಿ ನಡೆದುಕೊಂಡ ಮುಲಾಯಂ ಸಿಂಗ್ ಅವರ ನಡವಳಿಕೆ ಮುಸ್ಲಿಂ ಸಮುದಾಯಕ್ಕೆ ಸಮಾಜವಾದಿ ಪಕ್ಷದ ಬಗ್ಗೆ ದಶಕಗಳಿಂದ ಇದ್ದ ನಂಬಿಕೆ ಕುಸಿಯುವಂತೆ ಮಾಡಿತು.

ಇಂತಹ ಪರಿಸ್ಥಿತಿಯಲ್ಲ್ಲಿ ಬಾಜಪವನ್ನು ಸೋಲಿಸಬಲ್ಲ ಒಂದು ಪಕ್ಷವನ್ನು ಮುಸ್ಲಿಂ ಸಮುದಾಯ ಬೆಂಬಲಿಸುವ ಯೋಚನೆಯಲ್ಲಿದೆ ಮತ್ತು ಅಂತಹ ಪಕ್ಷದ ಹುಡುಕಾಟದಲ್ಲಿ ತೊಡಗಿರುವಾಗಲೇ ಬಹುಜನ ಪಕ್ಷದ ಮಾಯಾವತಿಯವರು ಮುಸ್ಲಿಂ ಸಮುದಾಯದ ಬೆಂಬಲ ಪಡೆಯಲು ಬೇಕಾದ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ಈ ಕಾರ್ಯಕ್ಕೆ ಪೂರ್ವಬಾವಿಯಾಗಿಯೇ ಅವರು ಉತ್ತರಕಾಂಡದಲ್ಲಿ ಇತ್ತೀಚೆಗೆ ನಡೆದ ವಿಶ್ವಾಸ ಮತ ಯಾಚನೆಯಲ್ಲಿ ತಮ್ಮ ಪಕ್ಷದ ಶಾಸಕರುಗಳು ಕಾಂಗ್ರೆಸ್ಸಿಗೆ ಮತಚಲಾಯಿಸುವಂತೆ ನೋಡಿಕೊಂಡರು. ಹೀಗೆ ತಾನು ಕಾಂಗ್ರೆಸ್ಸಿನ ಪರವಾಗಿರುವುದನ್ನು ಸಾರ್ವಜನಿಕವಾಗಿ ತೋರಿಸಿಕೊಡುವುದರ ಮೂಲಕ ತಮ್ಮ ಪಕ್ಷ ಭವಿಷ್ಯದಲ್ಲಿ ಬಾಜಪವನ್ನು ಯಾವ ಕಾರಣಕ್ಕೂ ಬೆಂಬಲಿಸುವುದಿಲ್ಲವೆಂಬ ಸ್ಪಷ್ಟ ಸಂದೇಶವನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಲ್ಲಿ ಯಶಸ್ವಿಯಾದರು. ಸಮಾಜವಾದಿ ಪಕ್ಷದಿಂದ ದೂರ ಸರಿಯುತ್ತಿರುವ ಮುಸ್ಲಿಂ ಸಮುದಾಯವನ್ನು ಸೆಳೆಯಲು ನಿರ್ದರಿಸಿರುವ ಮಾಯಾವತಿಯವರು ತಾವು ಹಿಂದೆ ಪ್ರಯೋಗಿಸಿದ ದಲಿತ ಮತ್ತು ಮುಸ್ಲಿಂ ಸಮೀಕರಣವನ್ನು ಮತ್ತೊಮ್ಮೆ ಪ್ರಯೋಗಿಸಲು ಸಿದ್ದತೆ ನಡೆಸಿದ್ದಾರೆ. 2007ರಲ್ಲಿ ಅವರು 206 ಸ್ಥಾನಗಳನ್ನು ಗೆದ್ದು ಮುಖ್ಯಮಂತ್ರಿಯಾಗಲು ಸಹಾಯ ಮಾಡಿದ್ದೇ ಈ ದಲಿತ-ಮುಸ್ಲಿಂ-ಬ್ರಾಹ್ಮಣ ಸಮೀಕರಣ. ಈಗಾಗಲೇ ಟಿಕೇಟ್ ಹಂಚಿಕೆಯನ್ನು ಪ್ರಾರಂಬಿಸಿರುವ ಬಹುಜನ ಪಕ್ಷವು ಸುಮಾರು 100 ಸ್ಥಾನಗಳನ್ನು ಮುಸ್ಲಿಮರಿಗು, 50 ಸ್ಥಾನಗಳನ್ನು ಬ್ರಾಹ್ಮಣರಿಗೂ ಮೀಸಲಿಟ್ಟಿದ್ದು ಒಟ್ಟು ಸ್ಥಾನಗಳ ಪೈಕಿ ಶೇಕಡಾ ಇಪ್ಪತ್ತೈದರಷ್ಟನ್ನು ಮುಸ್ಲಿಂ ಸಮುದಾಯಕ್ಕೆ ಮೀಸಲಿಟ್ಟು , ತಾನು ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತಹ ಸೂಚನೆಯನ್ನು ನೀಡಿದ್ದಾರೆ. 

ಈ ದಿಸೆಯಲ್ಲಿ ಅವರು ಬಾಜಪವನ್ನು ಸೋಲಿಸಲು ಕಾಂಗ್ರೆಸ್ ಜೊತೆಗೆ ಕೈಜೋಡಿಸುವ ಇರಾದೆಯನ್ನು ಹೊಂದಿದ್ದಾರೆ. ಇಂತಹ ಮೈತ್ರಿಯ ವಿಚಾರದಲ್ಲಿ ಕಾಂಗ್ರೆಸ್ ತಗೆದುಕೊಳ್ಳಬಹುದಾದ ನಿರ್ದಾರ ಬಹಳ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ನೋಡಿದರೆ ಮುಂದಿನ ವಿದಾನಸಭಾ ಚುನಾವಣೆಗಳಲ್ಲಿ ಜಾತಿ ಲೆಕ್ಕಾಚಾರದ ಜೊತೆಜೊತೆಗೆ ಧಾರ್ಮಿಕ ಧ್ರವೀಕರಣಗಳೂ ನಡೆಯುವುದು ಖಂಡಿತಾ. ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಠಿಯಿಂದ ಇಂತಹ ಬೆಳವಣಿಗೆಗಳು ಒಳ್ಳೆಯದಲ್ಲವಾದರೂ, ಇಂಡಿಯಾದ ರಾಜಕಾರಣ ನಡೆಯುತ್ತಿರುವುದೇ ಇಂತಹ ಜಾತಿ ಧರ್ಮಗಳ ಆಧಾರದ ಮೇಲೆ ಎನ್ನುವುದು ವಿಷಾದದ ವಿಷಯವಾಗಿದೆ.

ಜೂನ್ 25, 2016

2017ರ ಪಂಜಾಬ್ ವಿದಾನಸಭಾ ಚುನಾವಣೆಗಳು ಊರಿಗೆ ಮುಂಚೆಯೇ ಸಿದ್ದಗೊಳ್ಳುತ್ತಿರುವ ರಾಜಕೀಯ ಪಕ್ಷಗಳು!

punjab elections
ಕು.ಸ.ಮಧುಸೂದನ ನಾಯರ್
25/06/2016
ಪಂಜಾಬ್ ವಿದಾನಸಭಾ ಚುನಾವಣೆಗಳು ನಡೆಯುವುದು ಮುಂದಿನ ವರ್ಷದಲ್ಲಾದರು (2017) ಅದು ಸೃಷ್ಠಿಸಿರುವ ಕುತೂಹಲ ಮಾತ್ರ ಅಗಾಧ. ಯಾಕೆಂದರೆ ಉತ್ತರಪ್ರದೇಶದಂತೆ ಇಲ್ಲಿಯೂ ತಾನು ಗೆಲ್ಲಲೇ ಬೇಕು ಮತ್ತು ತನ್ಮೂಲಕ ಇಡೀ ಉತ್ತರ ಭಾರತದಲ್ಲಿ ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರವಿಡಲೇಬೇಕೆಂಬ ಹಟಕ್ಕೆ ಬಿದ್ದ ಬಾಜಪ ಆ ನೆಲೆಯಲ್ಲಿಯೇ ತನ್ನ ಮಿತ್ರಪಕ್ಷವಾದ ಶಿರೋಮಣಿ ಅಕಾಲಿದಳದ ಜೊತೆ ಸೇರಿ ಚುನಾವಣಾ ತಯಾರಿಮಾಡಿಕೊಳ್ಳುತ್ತಿತ್ತು. ಇಷ್ಟಲ್ಲದೆ ಕಾಂಗ್ರೆಸ್ ಕೂಡಾ ತನ್ನ ಮುಂದಿನ ನಡೆಗಳ ಕುರಿತು ಲೆಕ್ಕಾಚಾರ ಹಾಕುತ್ತಿತ್ತು.  ಆದರೆ ಈ ಎರಡೂಪಕ್ಷಗಳಿಗೆ ಆಘಾತಕಾರಿಯಾಗವಂತಹ ಸುದ್ದಿಯೊಂದೀಗ ಹೊರಬಿದ್ದಿದೆ: ಹಫ್ ಪೋಸ್ಟ್-ಸಿ-ವೋಟರ್ ಒಂದು ಸಮೀಕ್ಷೆಯನ್ನು ನಡೆಸಿದ್ದು ಅದರ ಪ್ರಕಾರ ಮುಂದಿನ ಚುನಾವಣೆಯಲ್ಲಿ  ದೆಹಲಿಯ ಮುಖ್ಯಮಂತ್ರಿಯಾದ ಶ್ರೀ ಅರವಿಂದ್ ಕೇಜ್ರೀವಾಲರ ಆಮ್ ಆದ್ಮಿ ಪಕ್ಷ ಒಟ್ಟು 117 ಸ್ಥಾನಗಳ ಪೈಕಿ 94ರಿಂದ100 ಸ್ಥಾನಗಳನ್ನು ಗಳಿಸುತ್ತದೆಯೆಂಬ ಪಲಿತಾಂಶ ಬಿಡುಗಡೆ ಮಾಡಿದೆ. ಇಷ್ಟಲ್ಲದೆ ಪಂಜಾಬಿ ಜನ ತಮ್ಮ ಮುಖ್ಯಮಂತ್ರಿಯನ್ನಾಗಿ ಕೇಜ್ರಿವಾಲರನ್ನು ಮೊದಲ ಸ್ಥಾನದಲ್ಲಿಯೂ, ಕಾಂಗ್ರೆಸ್ಸಿನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಎರಡನೇ ಸ್ಥಾನದಲ್ಲಿಯೂ ನೋಡಲು ಬಯಸಿದ್ದಾರೆಂಬ ಮಾಹಿತಿಯನ್ನೂ ನೀಡಿದೆ. ಶೇಕಡಾ 51ರಷ್ಟು ಜನ ಕೇಜ್ರಿವಾಲರನ್ನು, ಶೇಕಡಾ35 ರಷ್ಟು ಜನ ಅಮರಿಂದರ್ ಸಿಂಗ್ ಅನ್ನು ಆರಿಸುವ ಬಯಕೆ ಹೊಂದಿರುವುದು  ಸಮೀಕ್ಷೆಯಲ್ಲಿ ಗೊತ್ತಾಗಿದ್ದು  ಈ ಪಟ್ಟಿಯಲ್ಲಿ ಬಾಜಪದ ಅಥವಾ ಅಕಾಲಿದಳದ ಯಾವೊಬ್ಬ ನಾಯಕನೂ ಇಲ್ಲದಿರುವುದೇ ಬಾಜಪದ ತಲೆನೋವಿಗೆ ಕಾರಣವಾಗಿದೆ.
       ಈ ಬೆಳವಣಿಗೆಗಳಿಂದ ಕಂಗೆಟ್ಟಂತಾಗಿರುವ ಬಾಜಪ ಪಂಜಾಬ್ ರಾಜಕಾರಣದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೇರೊಂದು ತಂತ್ರಗಾರಿಕೆ ಅನುಸರಿಸಲು ಸಿದ್ದವಾಗಿ ನಿಂತಿದೆ. ಪಂಜಾಬ್ ಬಾಜಪದ ರಾಜ್ಯಾದ್ಯಕ್ಷರಾದ ಕಮಲ್ ಶರ್ಮಾ ಮತ್ತು ಇತರೇ ಸ್ಥಳೀಯ ನಾಯಕರುಗಳು ಅಕಾಲಿದಳದೊಂದಿಗಿನ ಮೈತ್ರಿ ಮುರಿದುಕೊಂಡು ಬಾಜಪ ಏಕಾಂಗಿಯಾಗಿ ಚುನಾವಣೆ ಎದುರಿಸುವುದರಿಂದ  ಮೋದಿಯವರ ಅಭಿವದ್ದಿಯ ಮಂತ್ರ ಮತ್ತು ಅವರ ವರ್ಚಸ್ಸಿನಿಂದ ಚುನಾವಣೆ ಗೆಲ್ಲಲು ಸಾದ್ಯವೆಂದು ರಾಷ್ಟ್ರೀಯ ಅದ್ಯಕ್ಷರಾದ ಅಮಿತ್ ಷಾಗೆ ಮನವಿ ಸಲ್ಲಿಸಿದ್ದಾರೆ.  ಈ ವರ್ಷ ಅದ್ಯಕ್ಷ ಶರ್ಮಾರವರ ಅವಧಿ ಮುಗಿಯಲಿದ್ದು ಸಂಸತ್ ಸದಸ್ಯ ಮತ್ತು ಮಾಜಿ ಕ್ರಿಕೇಟಿಗ ಶ್ರೀ ನವಜೋತ್ ಸಿಂಗ್ ಸಿದ್ದುರವರನ್ನು ಪಕ್ಷಾದ್ಯಕ್ಷರನ್ನಾಗಿ ಮಾಡಲು ಸಹ  ಒಂದುವರ್ಗ ಕೋರಿಕೆಯನ್ನಿಟ್ಟಿದೆ. ಇಷ್ಟು ದಿನ ಪಂಜಾಬಿನಲ್ಲಿ ನೆಲೆ ಕಂಡುಕೊಳ್ಳಲು ಮತ್ತು ಅಧಿಕಾರ ನಡೆಸಲು ಸಹಾಯ ಮಾಡಿದ ಅಕಾಲಿದಳಕ್ಕೆ ಕೈಕೊಡುವುದು ಮಾತ್ರವಲ್ಲದೆ, ಇಷ್ಟು ದಿನದ ದುರಾಡಳಿತಕ್ಕೆ ಮತ್ತೆಲ್ಲ ಕೆಡುಕುಗಳಿಗೂ ಅಕಾಲಿದಳವನ್ನೇ ಹೊಣೆಯಾಗಿಸಿ ತಾನು ಸ್ಪಟಿಕದಂತೆ ಸ್ವಚ್ಚ ಎಂಬ  ಘೊಷಣೆಯೊಂದಿಗೆ ಜನತೆಯ ಮುಂದೆ ಹೋಗುವುದು ಬಾಜಪದ ಸದ್ಯದ ಲೆಕ್ಕಾಚಾರವಾಗಿದೆ. ಕಳೆದ ಹತ್ತು ವರ್ಷಗಳಿಂದ ಪಂಜಾಬಿನ ಅಧಿಕಾರದ ಗದ್ದುಗೆಯನ್ನು ಹಿಡಿದಿರುವ ಬಾಜಪ-ಅಕಾಲಿದಳದ ಮೈತ್ರಿಕೂಟ ಈಗಾಗಲೆ ಜನರಿಂದ ದೂರವಾಗುತ್ತಿದ್ದು ಮುಂದಿನ ಚುನಾವಣೆಯಲ್ಲಿ  ಸೋಲುವ ಬೀತಿಯಲ್ಲಿದ್ದು, ತಾನು ಗೆಲ್ಲಲು ಸಾದ್ಯವಿಲ್ಲವೆಂಬ ಅಂಶವನ್ನು ತಿಳಿದೇ ಅಕಾಲಿದಳವನ್ನು  ದೂರ ಮಾಡಿ ಆಗಿರುವ ಅನಾಹುತಕ್ಕೆಲ್ಲ ಅದೇ ಹೊಣೆ ತಾನಲ್ಲ ಎಂಬ ಅಂಶವನ್ನು ಜನರಿಗೆ ರವಾನಿಸಲು ಸಿದ್ದವಾಗಿ ನಿಂತಿದೆ.
ಇದೆಲ್ಲದರ ನಡುವೆ ಆಡಳಿತ ವಿರೋಧಿ ಅಲೆಯ ಲಾಭ ಪಡೆಯಬಹುದಾಗಿದ್ದ ಕಾಂಗ್ರೆಸ್ ಅನಾಹುತವೊಂದನ್ನು ಮಾಡಿಕೊಂಡಿತು. ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿದ ಕಾಂಗ್ರೆಸ್ ಪಂಜಾಬಿನ ಉಸ್ತುವಾರಿಯನ್ನು  ಶ್ರೀ ಕಮಲ್‍ನಾಥ್ ಅವರಿಗೆ ನೀಡಿತು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ನೇಮಕವನ್ನು ಸಮರ್ಥಿಸಿಕೊಂಡರೂ ಪಂಜಾಬಿನ ಕಾಂಗ್ರೆಸ್ ಕಾರ್ಯಕರ್ತರಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿಬಿಟ್ಟಿತು. ಯಾಕೆಂದರೆ 1984 ರಲ್ಲಿ ನಡೆದ ಸಿಖ್  ನರಮೇಧದ ಹಿಂದೆ ಕಮಲ್‍ನಾಥ್ ಕೈವಾಡವಿದೆಯೆಂಬ ಆರೋಪವಿದ್ದು ಪಂಜಾಬಿನ ಜನತೆ ಅದನ್ನಿನ್ನೂ ಮರೆತಿಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಥಳೀಯ ನಾಯಕರುಗಳ ಅಭಿಪ್ರಾಯವನ್ನು ಕೇಳಿಲ್ಲವೆಂಬ ಅಸಮಧಾನ ಅಲ್ಲಿನ ನಾಯಕರಲ್ಲಿ ಮೂಡಿದ್ದು ಸುಳ್ಳಲ್ಲ. ಯಾಕೆಂದರೆ ಈ ಹಿಂದೆ ಕಮಲ್ ನಾಥ್ ಅಮೇರಿಕಾ ಪ್ರವಾಸ ಕೈಗೊಂಡಾಗಲೂ ಅಲ್ಲಿನ ಸಿಖ್ ಜನತೆ ಅವರ ವಿರುದ್ದ ಪ್ರತಿಭಟನೆ ನಡೆಸಿದ್ದರು.  ಇದನ್ನು ಅರಿತ ಕಮಲ್ ನಾಥ್ ಕೇವಲ ಮೂರೇ ದಿನಕ್ಕೆ ತಮ್ಮ ಹುದ್ದೆಗೆ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರು. ನಂತರದಲ್ಲಿ ಶ್ರೀ ಗುಲಾಂನಬಿ ಆಜಾದ್ ಅವರನ್ನು ಆ ಹುದ್ದೆಗೆ ನೇಮಿಸಲಾಯಿತು. ಹೀಗೆ ಸಿಖ್ ಜನಾಂಗದವರ ಬಾವನಾತ್ಮಕ ವಿಚಾರವನ್ನು ಪರಿಗಣಿಸದೆ ಮಾಡಿದ ಒಂದು ನೇಮಕ ಒಂದಷ್ಟು ದಿನಗಳ ಕಾಲ ಕಾಂಗ್ರೆಸ್ಸಿಗೆ ಇರುಸುಮುರುಸನ್ನು ಉಂಟು ಮಾಡಿತು.
 ಇನ್ನು ಅಕಾಲಿದಳ ಎಂದಿನಂತೆ  ಬಾಜಪ ಜೊತೆಗಿನ ಮೈತ್ರಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಮ್‍ಆದ್ಮಿಪಕ್ಷ ಮಾತ್ರ  ಮುಂದಿನ ಚುನಾವಣೆಯನ್ನು ಎದುರಿಸಲು ಸರ್ವಸಿದ್ದತೆಗಳನ್ನೂ ಮಾಡಿಕೊಳ್ಳುತ್ತಿದೆ. ಇದರ ಒಂದು ಭಾಗವಾಗಿ ಅದು ಎಲ್ಲ 117 ಕ್ಷೇತ್ರಗಳಲ್ಲಿಯೂ ತನ್ನ ಕಾರ್ಯಕರ್ತರ ಪಡೆ ಸಿದ್ದಗೊಳಿಸಲು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕಾರ್ಯಕರ್ತರ ಹೊಣೆಗಾರಿಕೆಗಳ ಬಗ್ಗೆ ಕೈಪಿಡಿಯೊಂದನ್ನು ಸಿದ್ದಪಡಿಸಿ ಅವನ್ನು ಕಾರ್ಯಕರ್ತರಿಗೆ ತಲುಪಿಸುವ ಯತ್ನವನ್ನೂ ಅದು ಮಾಡುತ್ತಿದೆ.
ಎಂದಿನಂತೆ ಬಾಜಪ ತನ್ನ ಹಳೆಯ ಚಾಳಿಯನ್ನು ಇಲ್ಲಿಯೂ ಮಂದುವರೆಸುವಂತೆ ಕಾಣುತ್ತಿದೆ. ಈ ಹಿಂದೆ ಅದು ಮಹಾರಾಷ್ಟ್ರದಲ್ಲಿ ಚುನಾವಣೆಗೂ ಮುಂಚೆ  ಶಿವಸೇನೆಯಿಂದ ಮೈತ್ರಿ ಕಡಿದುಕೊಂಡು ಹಿಂದಿನ ಎಲ್ಲ ತಪ್ಪುಗಳಿಗೂ ಅದನ್ನು ಹೊಣೆಯಾಗಿಸಿ ತಾನು ಮಾತ್ರ ಸರ್ವಸಂಪನ್ನ ಪಕ್ಷವೆಂಬಂತೆ ಜನರ ಮುಂದೆ ಹೋಗಿ ನಿಂತು ಸರಳ ಬಹುಮತದತ್ತ ಹೋಗುವಲ್ಲಿ ಯಶಸ್ವಿಯಾಗಿತ್ತು. ಆಡಳಿತ ವಿರೋಧಿ ಅಲೆಯ ಭಯವಿರುವುದರಿಂದ ಪಂಜಾಬಿನಲ್ಲಯೂ ಅದು ಅಕಾಲಿದಳದೊಂದಿಗಿನ ಮೈತ್ರಿಗೆ ತಿಲಾಂಜಲಿ ಬಿಟ್ಟು ಹೊಸ ಮುಖವಾಡದೊಂದಿಗೆ ಚುನಾವಣೆ ಎದುರಿಸುವ ನಿರೀಕ್ಷೆಯಲ್ಲಿರುವಂತೆ ಕಾಣುತ್ತಿದೆ.  ಬಾಜಪ ಹೈಕಮ್ಯಾಂಡಿನ ಈ ನಿರ್ದಾರಕ್ಕೆ ಮೂಲ ಕಾರಣ ಸ್ಥಳೀಯ ಬಾಜಪ ನಾಯಕರ ಮನವಿ ಎಂದು ಸಾರ್ವಜನಿಕರಿಗೆ ತೋರಿಸಲು ಅದು ರಾಜ್ಯ ನಾಯಕರುಗಳು ಈ ಬಗ್ಗೆ ಅಮಿತ್‍ ಷಾಗೆ ಮನವಿ ಮಾಡಿಕೊಂಡಂತಹ ಒಂದು ಪೂರ್ವನಿಯೋಜಿತ ನಾಟಕವನ್ನು ಈಗಾಗಲೇ ಮಾಡಿ ಮುಗಿಸಿದೆ.
ಇವೆಲ್ಲವನ್ನೂ ನೋಡಿದರೆ ಯಾವಾಗಲು ಕಾಂಗ್ರೆಸ್ ಮತ್ತು ಬಾಜಪ ಮೈತ್ರಿಕೂಟದ ನಡುವೆ ನಡೆಯುತ್ತಿದ್ದ ನೇರ ಸ್ಪರ್ದೆಯ ಬದಲಿಗೆ ಈ ಬಾರಿ  ಚತುಷ್ಕೋನ ಸ್ಪರ್ದೆ ನಡೆಯುವ ಸಾದ್ಯತೆ ಹೆಚ್ಚಾಗಿದೆ. ಇದರಿಂದ ಯಾವ ಪಕ್ಷ ಶೇಕಡಾ 30ರಷ್ಟು ಮತ ಪಡೆಯುತ್ತದೆಯೊ ಅದು ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೂ ಈ ಬಗ್ಗೆ ನಾವು ಅಧಿಕೃತವಾಗಿ ಏನನ್ನೂ ನುಡಿಯಲು ಸಾದ್ಯವಿಲ್ಲ. ಮತ್ತು ನುಡಿಯಲೂಬಾರದು.