ಫೆಬ್ರ 24, 2015

‘ಎಕೆ 49’ ಎಕೆ 67 ಆದ ಯಶಸ್ಸಿನ ಕಥೆ

Dr Ashok K R
ರಾಜ್ಯವಲ್ಲದ ರಾಜ್ಯದ ಚುನಾವಣೆಯೊಂದು ದೇಶದ ರಾಜಕೀಯ ಭವಿಷ್ಯದ ದಾರಿಯನ್ನೇ ಬದಲಿಸಿಬಿಡುವ ಭಯ – ಆಶಾಭಾವನೆ ಮೂಡಿಸಿದೆ. ಈ ಭಯ ಮತ್ತು ಆಶಾಭಾವನೆಗಳೆರಡೂ ಪ್ರತಿಯೊಂದನ್ನೂ ಅತಿಗೆ ತೆಗೆದುಕೊಂಡು ಹೋಗುವ ಇವತ್ತಿನ ಸಾಮಾನ್ಯ ಮನಸ್ಥಿತಿಯ ಪ್ರತೀಕವಾಗಿದೆಯಾ? ದೆಹಲಿಯ ಚುನಾವಣೆಯ ನಂತರದಲ್ಲಿ ಮಾಧ್ಯಮ ಒಂದು ದೊಡ್ಡ ಯು – ಟರ್ನ್ ತೆಗೆದುಕೊಂಡು ಅರವಿಂದ್ ಕೇಜ್ರಿವಾಲ್ ಎಂಬ ನಾಯಕನ ಮತ್ತಾತನ ಆಮ್ ಆದ್ಮಿ ಪಕ್ಷದ ಗುಣಗಾನದಲ್ಲಿ ನಿಂತುಬಿಟ್ಟಿದೆ. ಸರಿಸುಮಾರು ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ಕಡೆಗಣಿಸಲ್ಪಟ್ಟ ವ್ಯಕ್ತಿಯೊಬ್ಬ ಮತ್ತೆ ಮೀಡಿಯಾ ಡಾರ್ಲಿಂಗ್ ಆಗಿಬಿಟ್ಟಿದ್ದು ಹೇಗೆ? ಗೆದ್ದೆತ್ತಿನ ವರದಿ ಮಾಡುವುದಕ್ಕೂ ಗೆದ್ದೆತ್ತಿನ ಬಾಲ ಹಿಡಿಯುವುದಕ್ಕೂ ವ್ಯತ್ಯಾಸವಿದೆಯಲ್ಲವೇ? ಮಾಧ್ಯಮದ ಸಹಾಯವಿದ್ದರೆ ಚುನಾವಣೆಯಲ್ಲಿ ಗೆಲುವು ಕಾಣಬಹುದು ಎಂಬುದಕ್ಕೆ ಹೋದ ಬಾರಿಯ ದೆಹಲಿಯ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಉದಾಹರಣೆಯಾಗಿದ್ದರೆ ಮಾಧ್ಯಮಕ್ಕೆ ಅಪ್ರಿಯರಾದರೂ ಜನರ ನೇರ ಸಂಪರ್ಕದಿಂದ ಚುನಾವಣೆಯೊಂದನ್ನು ಗೆಲ್ಲಬಹುದು ಎಂಬುದನ್ನು ನಿರೂಪಿಸಿದೆ ಈ ಬಾರಿಯ ದೆಹಲಿ ಚುನಾವಣೆ.

ಫೆಬ್ರ 10, 2015

ಗೆಲುವು ಕಂಡ ಆಮ್ ಆದ್ಮಿಗಿದು ಜವಾಬ್ದಾರಿ ಪರ್ವ!

ದೆಹಲಿ ಚುನಾವಣೆಗೆ ಸಂಬಂಧಪಟ್ಟಂತೆ ಬರೆದಿದ್ದ ಹಿಂದಿನ ಲೇಖನದ ಕೊನೆಯಲ್ಲಿ ಅರವಿಂದ್ ಕೇಜ್ರಿವಾಲರ ಅರಾಜಕತೆ ಕಿರಣ್ ಬೇಡಿಯವರ ಅನುಕೂಲಸಿಂಧುತ್ವಗಳೇನೇ ಇದ್ದರೂ ಪ್ರಾಮಾಣಿಕತೆಯ ವಿಷಯದಲ್ಲಿ ಸದ್ಯದ ಮಟ್ಟಿಗೆ ಇಬ್ಬರಲ್ಲೂ ತುಂಬ ವ್ಯತ್ಯಾಸಗಳನ್ನುಡುಕುವುದು ಕಷ್ಟ. ಕಿರಣ್ ಬೇಡಿಯವರು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿ ಎಂಬ ಕಾರಣಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ಬದಲಾಗಿ ಬಿಜೆಪಿಗೆ ಮತ ಚಲಾಯಿಸುವವರು ಇರುವ ಹಾಗೆಯೇ ಬಿಜೆಪಿಯ ಅವಕಾಶವಾದಿತನದ ರಾಜಕಾರಣದಿಂದ ಬೇಸತ್ತು ಆಮ್ ಆದ್ಮಿ ಪಕ್ಷಕ್ಕೆ ಮತ ಚಲಾಯಿಸುವವರೂ ಇರುತ್ತಾರೆ. ಒಟ್ಟಿನಲ್ಲಿ ದೇಶದ ರಾಜಧಾನಿಯ ಚುನಾವಣೆ ಹತ್ತಲವು ಕಾರಣಗಳಿಂದ ಗಮನ ಸೆಳೆಯುತ್ತಿದೆ. ಕೊನೆಗೆ ಪ್ರಜಾಪ್ರಭುತ್ವ ಗೆಲ್ಲಲಿ ಎಂಬುದಷ್ಟೇ ಆಶಯ - ಎಂದು ಬರೆದಿದ್ದೆ. ಚುನಾವಣೋತ್ತರ ಸಮೀಕ್ಷೆಗಳು ಆಪ್ ಗೆ ಸ್ಪಷ್ಟ ಬಹುಮತದ ನಿರೀಕ್ಷೆಯನ್ನು ಹುಟ್ಟುಹಾಕಿದ್ದವು. ಇಂದಿನ ಫಲಿತಾಂಶ ಕಾಂಗ್ರೆಸ್ಸಿನ ಧೂಳಿಪಟವನ್ನು ಖಚಿತಪಡಿಸಿ, ಬಿಜೆಪಿಗೂ ಅಘಾತಕಾರಿಯಾದಂತಹ ತೀರ್ಪು ನೀಡಿದ್ದಾರೆ ದೆಹಲಿಯ ಮತದಾರರು. ಇರುವ ಎಪ್ಪತ್ತು ಸೀಟುಗಳಲ್ಲಿ ಆಮ್ ಆದ್ಮಿ ಪಕ್ಷ 67ರಲ್ಲಿ ಜಯ ಗಳಿಸಿದ್ದರೆ, ಬಿಜೆಪಿ ಮೂರರಲ್ಲಿ ಮಾತ್ರ ಗೆಲುವು ಖಂಡಿದೆ. ಕಾಂಗ್ರೆಸ್ಸಿಗೆ ಒಂದೂ ಇಲ್ಲ!

ಜನ 6, 2015

ಆರ್ಡಿನೆನ್ಸ್ ರಾಜ್ ವಿರುದ್ಧ ಆಮ್ ಆದ್ಮಿ ಪಕ್ಷದ ಪ್ರತಿಭಟನೆ

aap karnataka protest
ಪತ್ರಿಕಾ ಪ್ರಕಟಣೆ
ಅಧಿವೇಶನವಿರದ ಸಂದರ್ಭವನ್ನು ಬಳಸಿಕೊಂಡು, ಲೋಕಸಭೆಯಲ್ಲಿ ಚರ್ಚಿಸದೇ ಕೇಂದ್ರದ ಬಿ.ಜೆ.ಪಿ. ಸರ್ಕಾರವು ವಾಮಮಾರ್ಗದಿಂದ ಭೂಸ್ವಾಧೀನ ಕಾಯಿದೆಗೆ ತಿದ್ದುಪಡಿ ತರಲು ಹೊರಟಿದೆ. ಈಗಾಗಲೇ ರಾಷ್ಟ್ರಪತಿಯವರ ಅಂಗೀಕಾರವನ್ನು ಪಡೆಯಲಾಗಿರುವ ಈ ತಿದ್ದುಪಡಿಗಳು ಸಂಪೂರ್ಣವಾಗಿ ಜನವಿರೋಧಿ ಮತ್ತು ರೈತವಿರೋಧಿಯಾಗಿವೆ. ಸಹಿ ಹಾಕುವ ಸಂದರ್ಭದಲ್ಲಿ ರಾಷ್ತ್ರಪತಿಗಳು ಸಹ, ತುರ್ತಾಗಿ ಈ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿದ್ದಾರೆನ್ನಲಾಗಿದೆ.

ಮೇ 22, 2014

ಕೆ.ಪಿ.ಎಸ್.ಸಿ ಕರ್ಮಕಾಂಡ - ಆಮ್ ಆದ್ಮಿ ಪಕ್ಷದ ಪತ್ರಿಕಾ ಟಿಪ್ಪಣಿ

ಸಿದ್ಧಾರ್ಥ್ ಶರ್ಮ - ರಾಜ್ಯ ಸಂಚಾಲಕರು
ರವಿ ಕೃಷ್ಣಾರೆಡ್ಡಿ - ಕಾರ್ಯಕಾರಿ ಸಮಿತಿ ಸದಸ್ಯರು


ಪತ್ರಿಕಾ ಟಿಪ್ಪಣಿ 22/05/2014
ಕೆಪಿಎಸ್‌ಸಿ ಕರ್ಮಕಾಂಡ : 1998, 1999, 2004 ರ ಪತ್ರಾಂಕಿತ ಅಧಿಕಾರಿಗಳ ನೇಮಕಾತಿಗಳಲ್ಲಿ ಅಪಾರ ಅಕ್ರಮ, ಭ್ರಷ್ಟಾಚಾರ, ನಿಯಮ ಉಲ್ಲಂಘನೆ ಆಗಿದೆ ಅಂದ ಮೇಲೆ, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಒತ್ತಾಯಿಸುತ್ತಿದ್ದರೂ ಸಹ ಸರ್ಕಾರ ಸುಮ್ಮನಿರುವುದೇಕೆ?