ಆಗ 20, 2015

Home Composting

Dr Ashok K R

Home compost
The Black Gold
As I have written in my previous posts my method of setting up of terrace/home garden is time consuming and laborious, yet it is enjoyable. In this post I will share my experiences in mining ‘black gold’ from kitchen waste. Unlike ‘golden gold’ black gold is absolutely free of cost. There are hell lot of websites which teaches you numerous methods of composting. I have learnt a lot from them, and finally it is the practical experience which teaches the real composting. The method has to be standardised for each home, for each environment.


Composting Bin DIY
My first composter - teacher.
In the beginning I tried home composting using a small waste plastic container. With the help of a knife created some holes for aeration. Added kitchen waste with news paper bits. Within few days the entire container was filled with swimming maggots and garbage smell! Since the mouth of the container was small I couldn’t turn the pile regularly and my mistake was a festival for maggots. Luckily there were no flies and addition of some more news paper bits did the magic. Maggots number reduced to minimum. Though I didn’t get black gold, got some half digested compost which I added to pots.

Send your innovative ideas of terrace gardening to hingyake@gmail.com

Since my initial experiment was ‘bit’ successful, decided to expand the composter. I tried composting in open trays. Just added kitchen waste mixed with dried leaves and covered the pile with a layer of soil to avoid attracting flies. Since the aeration is better in this open method composting process was quite fast. This method is suited only during summer. The first rain in summer ruined the entire setup as I had kept in open! Garbage smell and maggots subsided after a week!

Compost pile
My Present composter. Plastic container with holes.
I decided to steal a container from kitchen! My not so ill intention was noticed by my spouse and I dropped the idea of stealing! At last bought a new plastic container (with large mouth) for Rs 160/-. Drilled numerous holes. By this time I had collected 4 bags of dry leaves. Dry leaves are very much essential as it absorbs the moisture and the carbon of dry leaves compensates the nitrogen of kitchen waste. Though news paper bits can be used, it’s not completely natural. Better to collect dry leaves whenever possible. 
Compost pile
Kitchen waste with dry leaves
Depending upon the liquidity of the kitchen waste I add the dry leaves, mix it well and add it to the compost bin. 
DIY composter
Covering the top with newpapers will absorb extra liquid in the top layer.
On the top I will place two three layers of newspaper and close the lid. Since I broke the lid cover (over enthusiasm during gold mining!) now I use an old clay pot to cover it completely. In my experience turning the compost pile regularly is the important step in composting. Turning the pile once in three days will fasten the process and it gives us fair idea of our mistakes. More watery add more leaves, dried up add some water. Adding butter milk will hasten up the process. Once in ten/fifteen days empty the entire compost bin. We can observe the various stages of composting. Mix it again and add back. This method will ensure good aeration and will speed up the composting process.

Mining the Gold:

Sieving the compost
'Stolen' trays to mine Black Gold
This time I could not avoid. I ‘stole’ some plastic trays from kitchen. Of course my wife was not there at that time! One tray had larger holes and other smaller. I use tray with large holes to sieve the compost in first stage. 
half compost
After first stage of sieving.
The sieved product is processed with second tray with smaller holes and the black gold starts appearing! 
home made compost
The Black Gold
The larger chunks are added back to the compost bin. The product left during second stage of sieving is added to the clay pot for further composting. 
store the compost
Storage Period of Black Gold: 10 days.
The black gold is stored in a cardboard box. After a waiting period of ten days this black gold is added to the pots or used to prepare potting mix for new pots.
composting in clay pots
Larger chunks are added to clay pot for further composting.
maggots in compost
Only few maggots appear now. I am not scared of them!
adding compost to pots
Black Gold added to the grow bags.

Check list for starting composting: 

  1. Dried Leaves. (Use newspapers if you don’t have stock of dried leaves now. No excuses after next summer) 
    dried leaves for composting
    Don't forget to collect dried leaves during summer!
  2. Plastic container with holes. 
  3. Obviously Kitchen waste! 

Lack of time (are we really that busy!) might provoke you to purchase readymade composter bins. There are plastic container bins, Kambha and lot more available online. Lack of space could be a real problem. Bokashi method of composting using ecobin / smartbin is suggested by Organic Terrace Gardeners. Those bins can be kept in the kitchen and demands less work when compared to regular composters.
simple home made composter
My Simple composting setup

ಆಗ 10, 2015

ಮಂಡ್ಯದಲ್ಲಿ ಎರಡು ದಿನ ನಡೆದ 'ಬೀಜ ಮೇಳ'

seed festival mandya
ವ್ಯವಸಾಯ ಬಿಡಿ, ಮನೆಯಲ್ಲಿ ಪುಟ್ಟ ಕುಂಡದಲ್ಲಿ ಒಂದು ಗಿಡ ಬೆಳೆಸುವ ಆಸಕ್ತಿ ನಿಮ್ಮಲ್ಲಿದ್ದರೆ ಮೊದಲ ಹಂತದಲ್ಲೇ ನಿರಾಶೆಯಾಗಿಬಿಡುತ್ತೀರಿ. ಕಾರಣ, ದುಡ್ಡು ಕೊಟ್ಟು ಕೊಂಡು ತಂದ ಬೀಜಗಳು ಮೊಳಕೆಯೊಡೆಯುವ ಆಸಕ್ತಿ ತೋರಿಸದೆ ಮಣ್ಣಿನಲ್ಲೊಂದಾಗಿ ಗೊಬ್ಬರವಾಗಿಬಿಡುವುದು! ಬೀಜವೆಂಬುದು ದೊಡ್ಡ ಉದ್ಯಮವಾಗಿಬಿಟ್ಟಿದೆ. ಬಹಳಷ್ಟು ಬೀಜಗಳ ಮೇಲೆ 'ವಿಷ ಸಿಂಪಡಿಸಲಾಗಿದೆ' ಎಂದು ದೊಡ್ಡಕ್ಷರಗಳಲ್ಲಿ ಬರೆದಿರುತ್ತಾರೆ. ವಿಷದ ಬೀಜ ಬಿತ್ತಿ ವಿಷವಿಲ್ಲದೆ ಬೆಳೆದು ವಿಷಮುಕ್ತ ಆಹಾರ ತಿನ್ನಲು ಸಾಧ್ಯವಾಗುವುದಿಲ್ಲ. ಬೀಜ ಶೇಖರಿಸುವ, ಶೇಖರಿಸಿಕೊಂಡ ಬೀಜವನ್ನು ನೆರೆಹೊರೆಯವರಲ್ಲಿ ಹಂಚಿಕೊಳ್ಳುವ ಪ್ರವೃತ್ತಿ ಮಾಯವಾಗುವುದಕ್ಕೆ ಉದ್ದಿಮೆದಾರರು ಎಷ್ಟು ಕಾರಣರೋ ರೈತರೂ ಅಷ್ಟೇ ಕಾರಣ. ಬೀಜ ಶೇಖರಿಸುವ, ಒಣಗಿಸುವ, ಕೆಡದಂತೆ ನೈಸರ್ಗಿಕವಾಗಿ ಸಂಗ್ರಹಿಸಿಡುವ ಶ್ರಮಕ್ಕಿಂತ ಹಣ ಕೊಟ್ಟು ಬೀಜ ತರುವುದು ಸುಲಭದ ಕೆಲಸ. ಹೀಗೆ ಹಣ ಕೊಟ್ಟು ತರುವ ಬೀಜದ ಗುಣಮಟ್ಟದ ಅರಿವಿರುವುದಿಲ್ಲ, ಅದು ಬೆಳೆಯುವಾಗ ಅನುಭವಿಸುವ ತೊಂದರೆಗಳ ಅರಿವಿರುವುದಿಲ್ಲ. 
seed festival mandya
ಮಂಡ್ಯದಲ್ಲಿ ನಡೆದ ಬೀಜ ಜಾತ್ರೆ
ಹಳೆಯ ಪದ್ಧತಿಯ ಬೀಜ ಹಂಚುವಿಕೆಯನ್ನು, ವಿಷಮುಕ್ತವಾದ ಬೀಜಗಳನ್ನು ಸಂಗ್ರಹಿಸುವ, ಕಡಿಮೆ ಬೆಲೆಗೆ ಮಾರುವ ವೇದಿಕೆ ಸೃಷ್ಟಿಸುತ್ತಿರುವುದು 'ಸಹಜ ಸಮೃದ್ಧಿ' ಬಳಗ. ಹದಿನೈದು ವರುಷಗಳಿಂದ ವಿಧವಿಧದ ತಳಿಗಳನ್ನು ಉಳಿಸಿಕೊಳ್ಳುವುದಕ್ಕೆ ಪ್ರೋತ್ಸಾಹ ನೀಡುತ್ತಾ ವರುಷವಿಡೀ ದೇಶದ ಹತ್ತಲವು ಭಾಗಗಳಲ್ಲಿ ಬೀಜ ಮೇಳ ನಡೆಸುತ್ತಿದೆ. ಆಗಸ್ಟ್ 8 ಮತ್ತು 9ರಂದು ಮಂಡ್ಯದ ಗುರುಭವನದಲ್ಲಿ ಬೀಜ ಮೇಳ ಆಯೋಜಿಸಲಾಗಿತ್ತು. ಸಾವಯವ ಬೀಜಗಳು ಮತ್ತು ಸಾವಯವ ಪದ್ಧತಿಯಿಂದ ಬೆಳೆದ ಬೆಳೆಗಳನ್ನು ಮಾರಲು ಇಲ್ಲಿ ಅವಕಾಶ ಕಲ್ಪಿಸಲಾಗಿತ್ತು.
ಉತ್ಸಾಹದಿಂದ ಅನುಭವ ಹಂಚಿಕೊಳ್ಳುತ್ತಿದ್ದ ರೈತರು
ಜೊತೆಗೆ ಸಾವಯವ ರೈತರು ತಮ್ಮ ತಮ್ಮ ಅನುಭವಗಳನ್ನು ಸಹೋದ್ಯೋಗಿಗಳೊಡನೆ ಹಂಚಿಕೊಳ್ಳುತ್ತಿದ್ದರು. ಪಿರಿಯಾಪಟ್ಟಣ, ಬೆಳಗಾವಿ, ಹುಬ್ಬಳ್ಳಿಯ ಕಡೆಯಿಂದೆಲ್ಲ ಬಂದಿದ್ದ ರೈತರು ಸಾವಯವ ಉತ್ಪನ್ನಗಳನ್ನು ಮಾರುತ್ತಿದ್ದರು. ಮಂಡ್ಯದ ಕಿರುಗಾವಲಿನ ಘನಿ ಬರೋಬ್ಬರಿ ಏಳೂನೂರ ಐವತ್ತಕ್ಕೂ ಅಧಿಕ ರೀತಿಯ ಭತ್ತದ ತಳಿಗಳೊಡನೆ ಮಿಂಚುತ್ತಿದ್ದರು. ಭಾರತದಷ್ಟೇ ಅಲ್ಲದೇ ವಿದೇಶೀ ತಳಿ ಭತ್ತಗಳೂ ಅವರ ಬತ್ತಳಿಕೆಯಲ್ಲಿವೆ. ವಿದೇಶಿ ತಳಿಗಳೆಂದರೆ ಹೈಬ್ರಿಡ್ ಅಲ್ಲ! ವಿದೇಶಿ ಸಾವಯವ ತಳಿಗಳು.
ಇನ್ನು ಆವರಣದಲ್ಲಿ ಎಲ್ಲಾ ರೀತಿಯ ಸೊಪ್ಪು, ತರಕಾರಿ ಬೀಜಗಳು ಲಭ್ಯವಿದ್ದವು, ಹೊರಗೆ ಸಿಗುವ ಹೈಬ್ರಿಡ್ಡಿಗಿಂತ ಕಡಿಮೆ ಬೆಲೆಗೆ. ಜನರು ಹೆಚ್ಚು ಮುತ್ತಿಕೊಂಡಿದ್ದು ಮಾತ್ರ ಹಪ್ಪಳ, ಸಂಡಿಗೆ ಮಾರಾಟ ಮಾಡುತ್ತಿದ್ದ ಅಂಗಡಿಯ ಮುಂದೆ! ಅಂಗಡಿಗಳಲ್ಲಿ ಕಾಣಸಿಗದ ಕಪ್ಪು ಬೆಲ್ಲಗಳು ಇಲ್ಲಿ ಲಕಲಕ ಹೊಳೆಯುತ್ತಿದ್ದವು. ಅಂಗಡಿಯ ಬಿಳಿ ಬೆಲ್ಲಗಳು ರಾಸಾಯನಿಕಗಳ ಮುದ್ದೆ ಎಂಬುದು ತಿಳಿದಿದ್ದರೂ ಅದಕ್ಕೇ ಮಾರು ಹೋಗುತ್ತೇವೆ ನಾವು.
Ghani
750ಕ್ಕೂ ಅಧಿಕ ಭತ್ತದ ತಳಿಯೊಂದಿಗೆ ಘನಿ ಮತ್ತು ತಂಡ.
ಸಾವಯವ ಪದ್ಧತಿಯ ಬಗೆಗೆ ವಿವಿಧ ರೈತರು ಬರೆದ ಪುಸ್ತಕಗಳೂ ಲಭ್ಯವಿದ್ದವು. ವಿಷದ ಉಪಯೋಗವನ್ನು ಕಡಿಮೆಗೊಳಿಸಿ ಸಾವಯವ ಪದ್ಧತಿಯ ಕೃಷಿ ಹೆಚ್ಚಾಗುವುದಕ್ಕೆ ರೈತರ ಶ್ರಮವೊಂದೇ ಸಾಲದು. ಕಂಪನಿಗಳ ವಕ್ತಾರನಂತೆ ವರ್ತಿಸುವ ಕೃಷಿ ಇಲಾಖೆ ತನ್ನ ನೀತಿ ನಿಯಮಗಳನ್ನು ಅಮೂಲಾಗ್ರವಾಗಿ ಬದಲಿಸಿಕೊಳ್ಳಬೇಕು. ಗ್ರಾಹಕರು ಸಾವಯವ ಪದ್ಧತಿಯಲ್ಲಿ ಬೆಳೆದ ಉತ್ಪನ್ನಗಳನ್ನು ಉಪಯೋಗಿಸುವುದನ್ನು ಹೆಚ್ಚು ಮಾಡಬೇಕು. ಬೇಡಿಕೆ ಹೆಚ್ಚಾಗುತ್ತಿದ್ದಂತೆ ಸಹಜವಾಗಿ ಕೃಷಿಕರೂ ಕೂಡ ಸಾವಯವ ಪದ್ಧತಿಯತ್ತ ಆಸಕ್ತಿ ವಹಿಸುತ್ತಾರೆ. ಇವೆಲ್ಲದರ ಜೊತೆಗೆ ಸಾವಯವದ ಹೆಸರಿನಲ್ಲಿ ಹೆಚ್ಚುತ್ತಿರುವ ನಕಲಿಗಳನ್ನು ಕಂಡು ಹಿಡಿಯುವ ಕೆಲಸವೂ ದೊಡ್ಡ ಮಟ್ಟದಲ್ಲಿ ಆಗಬೇಕು.

ಆಗ 3, 2015

ರೈತರ ಸರಣಿ ಆತ್ಮಹತ್ಯೆಗಳ ಈ ಸಮಯದಲ್ಲಿ ತೇಜಸ್ವಿಯವರು ಮತ್ತೆ ನೆನಪಾದರು.


ಇದು ನನ್ನ “ನಮ್ಮ ನಡುವಿನ ತೇಜಸ್ವಿ” ಪುಸ್ತಕದ ಒಂದು ಅಧ್ಯಾಯ (2010 ಹಂಪಿ ವಿ.ವಿ. ಪ್ರಕಟನೆ). ರೈತರ ಸರಣಿ ಆತ್ಮಹತ್ಯೆಗಳ ಈ ಸಮಯದಲ್ಲಿ ತೇಜಸ್ವಿಯವರು ಮತ್ತೆ ನೆನಪಾದರು. - ಪ್ರಸಾದ್ ರಕ್ಷಿದಿ
97ನೇ ಇಸವಿಯ ಸುಮಾರಿಗೆ ಒಂದುದಿನ ಚಿಕ್ಕಮಗಳೂರಿಗೆ ಹೋದವನು ಹಿಂದಿರುಗುವಾಗ ಮೂಡಿಗೆರೆಯಲ್ಲಿ ಇಳಿದೆ. ಸಕಲೇಶಪುರದತ್ತ ಹೋಗುವ ಬಸ್ಸಿಗಾಗಿ, ಬಸ್ಟ್ಯಾಂಡಿನಲ್ಲಿ ಕಾಯುತ್ತ ಕುಳಿತಿದ್ದೆ, ನಾರಾಯಣಗೌಡ ನನ್ನಮುಂದೆ ತನ್ನ ಬೈಕನ್ನು ತಂದು ನಿಲ್ಲಿಸಿದ.

ಈತ ಹೈಸ್ಕೂಲಿನಲ್ಲಿ ನನ್ನ ಸಹಪಾಠಿ. ನಂತರ ಕೆಲವು ವರ್ಷ ದೂರಾಗಿದ್ದೆವಾದರೂ ರೈತಸಂಘ ಮತ್ತೆ ನಮ್ಮನ್ನು ಹತ್ತಿರ ತಂದಿತ್ತು. ಗೆಳೆತನ ಮತ್ತೊಮ್ಮೆ ಮುಂದುವರಿಯಿತು. ನಾರಾಯಣಗೌಡ ಮೂಡಿಗೆರೆಯ ಪಕ್ಕದ ಬಣಕಲ್ ಎಂಬ ಊರಿನವನು. ಅಲ್ಲೇ ಅವನಿಗೆ ಒಂದಷ್ಟು ಗದ್ದೆ -ತೋಟವೂ ಇದೆ. ಸಾಕಷ್ಟು ಅನುಕೂಲವಿದ್ದವನು. ಎಪ್ಪತ್ತರ ದಶಕದ ಆದಿಬಾಗದಲ್ಲೇ ಒಂದು ಸೆಕೆಂಡ್ ಹ್ಯಾಂಡ್ ಜಾವಾ ಬೈಕನ್ನು ಖರೀದಿಸಿದ್ದ. ಅದನ್ನು ಕಾಡು, ಗುಡ್ಡ, ಗದ್ದೆ ಎಲ್ಲೆಂದರಲ್ಲಿ ಓಡಿಸುತ್ತಿದ್ದ. ಗದ್ದೆಗೆ ಗೊಬ್ಬರ ಸಾಗಿಸುವುದರಿಂದ ಹಿಡಿದು ದನಗಳಿಗೆ ಹುಲ್ಲು ತರಲೂ ಅದನ್ನೇ ಬಳಸುತ್ತಿದ್ದ. ಚಿಕ್ಕಮಗಳೂರು-ಶಿವಮೊಗ್ಗದವರೆಗೂ ಅದರಲ್ಲೇ ಸಂಚರಿಸುತ್ತಿದ್ದ. ಆಗಲೇ ಇವನಿಗೆ ‘ಬೈಕ್ ನಾರಾಯಣಗೌಡ’ ಎಂದ ಅಭಿದಾನ ಪ್ರಾಪ್ತವಾಗಿತ್ತು. ಬೈಕನ್ನು ಎಲ್ಲೆಂದರಲ್ಲಿ ನಿಲ್ಲಿಸಿ ರಿಪೇರಿ ಮಾಡುವ ಕಲೆ ನಾರಾಯಣ ಗೌಡನಿಗೆ ಕರಗತವಾಗಿತ್ತು. ಅದು ಹೇಗೋ ತೇಜಸ್ವಿಯವರೊಂದಿಗೆ ಈತನಿಗೆ ಸಂಪರ್ಕವಿತ್ತು. ಕೆಲವುಬಾರಿ ಅವರಲ್ಲಿಗೆ ಈತ ಹೋಗಿಬರುತ್ತಿದ್ದ. ಇದನ್ನೇ ನೆಪವಾಗಿಟ್ಟುಕೊಂಡು ಸಂದರ್ಭ ಸಿಕ್ಕಿದಾಗಲೆಲ್ಲ, ತೇಜಸ್ವಿಯವರಿಗೆ ಸ್ಕೂಟರ್ ರಿಪೇರಿಯನ್ನು ತಾನೇ ಹೇಳಿಕೊಟ್ಟುದ್ದಾಗಿ ರೀಲು ಬಿಡುತ್ತಿದ್ದ!.

ನಾರಾಯಣ ಗೌಡ ನನ್ನನ್ನುದ್ದೇಶಿಸಿ “ಎತ್ಲಾಗೋ ಮಾರಾಯ” ಎಂದ.

“ಚಿಕ್ಮಗ್ಳೂರಿಗೋಗಿದ್ದೆ, ಈಗ ಊರಿಗೆ” ಎಂದೆ.

“ಬಾ ಇಲ್ಲೇ ತೇಜಸ್ವಿ ಮನೆತಂಕ ಹೋಗ್ಬರೋಣ ಬಾ” ಎಂದು ಕರೆದ.

ನನಗೆ ಅವನೊಂದಿಗೆ ಹೋಗುವ ಮನಸ್ಸಾದರೂ. ಆಗಲೇ ಸಂಜೆ ನಾಲ್ಕಾಗುತ್ತ ಬಂದಿತ್ತು. ಬಸ್ಸು ತಪ್ಪಿದರೆ ಎಂಬ ಚಿಂತೆಯಾಯಿತು. ನಾನು ಬರುವುದಿಲ್ಲ ನೀನೆ ಹೋಗಿ ಬಾ ಎಂದೆ.

“ನನಿಗೆ ಒಬ್ನೇ ಹೋಗಕ್ಕೆ ಬೇಜಾರು, ಅಲ್ಲದೇ ಒಬ್ನೇ ಹೋದ್ರೆ ಮಾರಾಯ ಅವ್ರು ತುಂಬ ಹೊತ್ತು ಮಾತಾಡ್ತ ಕೂತ್ಕಂಡ್ಬಿಡ್ತಾರೆ, ಆಮೇಲ್ ಪಜೀತಿ, ಇಬ್ರಾದ್ರೆ ಏನಾರಹೇಳಿ ಬೇಗ ಹೊರಡ್ಬೋದು ಬಾ” ಎಂದ. ಅವನು ಹೇಳಿದ ದಾಟಿ ತೇಜಸ್ವಿಯವರಿಗೆ ಇವನಂತಹ ಆತ್ಮೀಯ ಸ್ನೇಹಿತ ಇನ್ನೊಬ್ಬರಿಲ್ಲ ಎನ್ನುವಂತಿತ್ತು.

ಈತನ ಮಾತಿನ ಬಗ್ಗೆ ನನಗೇನೋ ಅನುಮಾನವಾಯಿತು. ಆದ್ದರಿಂದ ತಪ್ಪಿಸಿಕೊಳ್ಳಲು ನೆಪಹುಡುಕುತ್ತಾ “ನಾನೀಗ ಅಲ್ಲಿಗೆ ಬಂದು ಐದು ಗಂಟೆ ಬಸ್ ತಪ್ಪಿದ್ರೆ ನಾನಿಲ್ಲೇ ಬಾಕಿ” ಎಂದೆ.

“ಬಾ ಅಮೇಲೆ ನಮ್ಮೂರಿಗೋಗಾಣ, ನಾಳೆ ನಾನು ಆಕಡೆ(ಸಕಲೇಶಪುರ) ಬರೋದಿತ್ತು ಜೊತೆಲೇ ಹೋಗಣ” ಎಂದು ಗಂಟುಬಿದ್ದ. ನನಗೆ ಇವತ್ತು ಊರಿಗೆ ಹೋಗಲೇ ಬೇಕೆಂದೂ ನಾಳೆ ಬೆಳಗ್ಗೆ ಮುಖ್ಯವಾದ ಕೆಲಸವಿರುವುದರಿಂದ ನಿಮ್ಮೂರಿಗೆ ಬಂದು ಉಳಿಯಲು ಸಾಧ್ಯವಿಲ್ಲವೆಂದು ಹೇಳಿದೆ.

“ಸರಿ ಹಂಗಾದ್ರೆ ಇವತ್ತೆ ನಾನು ಸಕಲೇಶಪುರಕ್ಕೆ ಬರ್ತೀನಿ, ನಿನ್ನ ಊರೀಗೇ ಬಿಡ್ತೀನಲ್ಲ ಬಾ, ಹೆಂಗೂ ನಿಂಗೆ ಬಸ್ ಚಾರ್ಜ್ ಉಳಿಯುತ್ತಲ್ಲ ಅದು ದಾರೀಲಿ ಹಾನುಬಾಳಲ್ಲಿ ಸಾಯಂಕಾಲದ ಖರ್ಚಿಗಾಯ್ತು” ಎಂದು ಎಳೆದು ಬೈಕ್ ಹತ್ತಿಸಿದ. “ನಾಲ್ಕು ರುಪಾಯಿ ಉಳಿಸಿಕೊಟ್ಟು ನಲವತ್ತು ರುಪಾಯಿ ಖರ್ಚುಮಾಡ್ಸೋ ಐಡಿಯಾ ಹಾಕ್ಬೇಡ, ನಿನಗಾಗಿ ಬರ್ತೀನೀ ಆದರೆ ಸಾಯಂಕಾಲದ ಖರ್ಚೆಲ್ಲ ನಿಂದೇ” ಎನ್ನುತ್ತಾ ಅವನೊಂದಿಗೆ ಹೊರಟೆ.

ನಾನೂ ತೇಜಸ್ವಿಯವರನ್ನು ಭೇಟಿ ಮಾಡದೆ ತುಂಬ ಸಮಯವಾಗಿತ್ತು. ಈಗ ನಾರಾಯಣಗೌಡ ಜೊತೆಯಲ್ಲಿ ಇರುವುದರಿಂದ ಅವರಲ್ಲಿಗೆ ಹೋಗಲು ಒಂದು ಕಾರಣ ಸಿಕ್ಕಿತ್ತು.

ಹ್ಯಾಂಡ್ ಪೋಸ್ಟಿಗೆ ಬರುತ್ತಿದ್ದಂತೆ ಹೋಟೆಲೊಂದರ ಮುಂದೆ ಬೈಕ್‍ನಿಲ್ಲಿಸಿದ ನಾರಾಯಣಗೌಡ “ಬಾ ಕಾಫಿ ಕುಡ್ದು ಹೋಗಣ” ಎಂದ.

ಹೋಟೆಲಿನಲ್ಲಿ ಕಾಫಿಗೆ ಮೊದಲು ತಿಂಡಿಗೂ ಹೇಳಿದ. ನನ್ನ ಅನುಮಾನ ಬೆಳೆಯುತ್ತಲೇ ಇತ್ತು.

“ನಾರಾಯಣ ನೀನು ಯಾವಾಗ ಬೇಕಾದ್ರೂ ಅವರಲ್ಲಿಗೆ ಒಬ್ನೇ ಹೋಗ್ತಿದ್ದೆ, ಈಗ ನಾನು ಬರಲ್ಲ ಅಂದ್ರು ಎಳ್ಕೊಂಡು ಹೋಗ್ತಾ ಇರೋದು ನೋಡಿದ್ರೆ ನಂಗ್ಯಾಕೋ ಡೌಟು.. ನೀನೇನೋ ಮುಚ್ಚಿಡ್ತಾ ಇದ್ದೀಯ,” ಎಂದೆ.

“ಅದೊಂದು ಕತೆ ಮಾರಾಯ, ಈಗ ಒಂದು ತಿಂಗ್ಳಲ್ಲಿ ನಂಗೆ ಅವ್ರತ್ರ ಅರ್ಜೆಂಟಾಗಿ ಒಂದು ಕೆಲ್ಸ ಆಗ್ಬೇಕಿತ್ತು, ಬೆಳಗ್ಗೆ..ಬೆಳಗ್ಗೇನೆ ಅವ್ರ ಮನೆಹತ್ರ ಹೋದೆ. ಮನೇಲಿ ಯಾರೂ ಕಾಣುಸ್ಲಿಲ್ಲ, ಅಲ್ಲೇ ಮನೆ ಪಕ್ಕದಲ್ಲೇ ಕೆಲಸದೋನಿದ್ದ, ಅವನ್ನ ಕೇಳುದ್ರೆ ‘ಅವುರಾಗಳೇ ಕ್ಯಾಮರಾ ತಗಂದು ತ್ವಾಟಕ್ಕೋದ್ರು’ ಅಂದ, ಅವ್ರು ಹೋದ ದಿಕ್ಕಿಗೇ ಹುಡುಕ್ತಾ ಹೋಗಿ ತೋಟದಲ್ಲೆಲ್ಲಾ ನೋಡ್ದೆ, ಅಲ್ಲೆಲ್ಲೂ ಕಾಣುಸ್ಲಿಲ್ಲ, ಹಂಗೇ ಅವ್ರುಮನೆ ಕೆರೆ ದಾಟಿ ಕಾಡು ಹತ್ತಿ ಗದ್ದೆ ಕಡೀಗ್ ಬಂದು ನೋಡಿದ್ರೂ ಅಸಾಮಿನೇ ಪತ್ತೆ ಇಲ್ಲ. ಇನ್ನೆಂಗೂ ವಾಪಸ್ ಹೋಗದಲ್ಲ, ನನಗ್ ಅವುರ್ನ ಅರ್ಜೆಂಟಾಗಿ ಕಾಣ್ಲೇ ಬೇಕಿತ್ತು, ಇಲ್ಲೇ ಎಲ್ಲಾರ ಇರ್ಬೌದು ಅಂದ್ಕಂಡ್... ಅಣ್ಣಾ... ಅಣ್ಣಾ..... ಅಂತ ಜೋರಾಗಿ ಕೂಗ್ದೆ. ಅವೆಂತವೋ ಹಕ್ಕಿಗಳು ಮರದಿಂದ ಬರ್ರ್..... ಅಂತ ಹಾರಿಹೋದ್ವು.. ಜೊತಿಗೇ ದಡಕ್ಕಂತೆ ಎಂತದೋ ಪ್ರಾಣಿ ನೆಲದಿಂದ ಎದ್ದಂಗಾಯ್ತು. ನಾನು ಇದೆಂತದೋ ಕಾಡು ಹಂದಿನೋ.. ಕಾಟಿನೋ ಅಂತ ಗಾಭರಿಲಿ ಯಾವ್ದಾರು ಮರ ಹತ್ತಾಣ ಅಂತ ನೋಡ್ತಿದ್ರೆ, ಅದು ಇವ್ರೇ ಮಾರಾಯ... ನೆಲದಲ್ಲಿ ಸೊಪ್ಪು ಕಣಾರ (ಟೊಂಗೆ) ಎಲ್ಲ ಗುಡ್ಡಿಗೆ ಹಾಕ್ಕೊಂಡು ಅದರೊಳಗೆ ಮಲಗಿ ಫೋಟೋ ತೆಗಿಯಕ್ಕೆ ಮಾಡ್ಕಂಡಿದ್ರು, ನಂಗೆ ಗಾಬರೀಲೂ ನಗು ಬಂತು. ಅವರು ಎದ್ದೋರೆ ‘ಯಾವೋನೊ ಅವನು, ನಾನು ಅಷ್ಟೊಂತ್ತಿಂದ ಕಾಯ್ತಾ ಇದ್ರೆ ಎಲ್ಲಾ ಹಾಳು ಮಾಡ್ದೋನು, ಇಲ್ಲಿಗ್ಯಾಕಯ್ಯ ಬಂದೆ’ ಅಂಕ ಕಣಾರ ತಗಂದು ಹೊಡಿಯೋಕೇ ಬೆರಸ್ಕಂಡ್ ಬಂದ್ರು, ನಾನು ಸಿಕ್ಕಿದ್ರೆ ಹೊಡದೇ ಬಿಡೋರೋ ಏನೋ, ನಾನು ಹೆಂಗೆ ಪದರಾಡುಹಾಕ್ದೇ (ಓಟಕಿತ್ತೆ) ಅಂದ್ರೇ ಮತ್ತೆ ಇವತ್ತೇ ನೋಡು ನೀನಿರೋಹೊತ್ಗೆ ಧೈರ್ಯವಾಗಿ ಅಲ್ಲಿಗೆ ಹೊರಟಿರೋದು” ಅಂದ.

ನಾನು ಇದೇ ಕತೆಯನ್ನು ಬೇರೊಂದು ರೂಪದಲ್ಲಿ ಇನ್ನೊಬ್ಬನ ಬಾಯಲ್ಲಿ ಕೇಳಿದ್ದೆ. ಆದ್ದರಿಂದ ಇವರಿಬ್ಬರಲ್ಲಿ ಯಾರು ಯಾರ ಕಥೆಯನ್ನು ಕದ್ದಿದ್ದಾರೆ ಎಂದು ತಿಳಿಯಲಿಲ್ಲ. ಆದರೂ ಇವನೂ ಇಷ್ಟೆಲ್ಲ ಕಥೆಕಟ್ಟಿ ನನ್ನನ್ನು ಅಲ್ಲಿಗೆ ಕರೆದೊಯ್ಯತ್ತಿರಬೇಕಾದರೆ ಏನೋ ಭೀಕರವಾದದ್ದನ್ನು ಎದುರಿಸಬೇಕಾದೀತೆಂದು ಆತಂಕವಾಯಿತು. “ನೀನು ಏನೇ ಹೇಳಿದ್ರೂ ನಾರಾಯಣ ನಂಗ್ಯಾಕೋ ನಿನ್ನ ಕಥೆ ಬಗ್ಗೆ ನಂಬಿಕೇನೇ ಬರ್ತಾಇಲ್ಲಾ ನಿನ್ನ ಮಾತು ಕೇಳ್ತಾ ನನ್ನ ಅನುಮಾನ ಇನ್ನೂ ಜಾಸ್ತಿ ಆಯ್ತು” ಎಂದೆ.

“ಅನುಮಾನಂ ಪೆದ್ದರೋಗಂ.. ಸುಮ್ನೆ ಬಾರಯ್ಯ” ಎಂದು ಹೋಟೆಲ್ ಬಿಲ್ಲನ್ನು ಅವನೇ ಪಾವತಿಸಿ, ನನ್ನನ್ನು ಕಾಫಿಯ ಋಣದಲ್ಲಿ ಸಿಲುಕಿಸಿ ಮತ್ತೆ ಬೈಕನ್ನೇರಿದ, ಅನಿವಾರ್ಯವಾಗಿ ಅವನೊಡನೆ ಹೊರಟೆ. ಬೈಕು ‘ನಿರುತ್ತರ’ ದತ್ತ ಸಾಗಿತು.

ನಾವು ಹೋದಾಗ ತೇಜಸ್ವಿ ಮನೆಯಲ್ಲೇ ಇದ್ದರು. ಮನೆಯವರೆಲ್ಲ ಮೈಸೂರಿಗೆ ಹೋಗಿದ್ದಾರೆಂದು, ಸಧ್ಯಕ್ಕೆ ತಾನೊಬ್ಬನೇ ಇದ್ದೇನೆಂದು ತಿಳಿಸಿದರು. “ಊಟಕ್ಕೆ ಏನು ಮಾಡ್ತೀರಿ?” ಎಂದದಕ್ಕೆ. ಅನ್ನವನ್ನು ಮಾಡಿಕೊಳ್ಳುತ್ತೇನೆಂದೂ, ಒಂದು ವಾರಕ್ಕಾಗುವಷ್ಟು ಸಾರನ್ನು ರಾಜೇಶ್ವರಿ ಮಾಡಿಟ್ಟು ಹೋಗಿದ್ದಾರೆಂದೂ ಹೇಳಿ ಅದಕ್ಕೆ ದಿನಾ ಒಂದಿಷ್ಟು ಉಪ್ಪು- ನೀರು, ಏನು ಬೇಕೋ ಅದನ್ನು ಹಾಕಿ ಕುದಿಸುತ್ತಾ ಇದ್ದರೆ ರಾಜೇಶ್ವರಿಯವರು ಬರುವವರೆಗೂ ಎನೂ ತೊಂದರೆ ಇಲ್ಲವೆಂದು.. ಮುಂದೆ ಅವರೇ ಬರೆದ “ಪಾಕಕ್ರಾಂತಿ”ಯ ಕೆಲವು ವಿವರಗಳನ್ನು ನೀಡಿದರು.

ಮಾತು ಮುಂದುವರೆದಂತೆ ‘ಹೇಗಿದೆ ನಿಮ್ಮ ರಂಗ ಚಟುವಟಿಕೆ’ ಎಂದು ನನ್ನಲ್ಲಿ ವಿಚಾರಿಸಿಕೊಂಡರು. ಹಾಗೇ ಮಾತು ‘ ಮೈಸೂರಿನ ರಂಗಾಯಣ’ದತ್ತ ತಿರುಗಿತು. ಆಗಿನ್ನೂ ಬಿ.ವಿ.ಕಾರಂತರೇ ರಂಗಾಯಣದ ನಿರ್ದೇಶಕರಾಗಿದ್ದರು. “ಅಲ್ಲಾ ಕಣ್ರಿ ಅವತ್ತು ನಿಮ್ಮಲ್ಲಿ ರಂಗ ಶಿಬಿರ ಮಾಡೋಕೆ ಬಂದಿದ್ದರಲ್ಲ ಹುಡುಗರು (ಮಂಡ್ಯ ರಮೇಶ್ ಮತ್ತು ಕೃಷ್ಣಕುಮಾರ್ ನಾರ್ಣಕಜೆ) ಅವ್ರಿನ್ನೂ ಅಲ್ಲೇ ಇದ್ದಾರೇನ್ರಿ?” ಎಂದರು.

“ಅಲ್ಲೇ ಇದ್ದಾರೆ ಸಾರ್” ಎಂದೆ.

“ಆ ಕಾರಂತ ಎಲ್ಲ ಸರಿ ಆದ್ರೆ ಆಡಳಿತನೇ ಸರಿಯಾಗಿ ಗೊತ್ತಿಲ್ಲ ಕಣ್ರಿ.. ಪಾಪ ಈ ಹುಡುಗರ ಭವಿಷ್ಯ ಏನು, ನಾಟಕನೇ ನಂಬ್ಕೊಂಡು ಮುಂದೆ ಏನ್ಮಾಡ್ತಾರೆ. ಎಲ್ಲ ಅವ್ಯವಸ್ಥೆ ಆಗಿದಿಯಂತಲ್ರಿ, ಇದನ್ನೆಲ್ಲ ಸರಿಯಾಗಿ ಯೋಚ್ನೆ ಮಾಡ್ದೇ ಮಾಡ್ಬಾರ್ದು, ಎಲ್ಲಾ ಬೇಜವಾಬ್ದಾರಿ ಅನ್ಸುತ್ತೆ, ನಂಗೆ ಆ ಹುಡುಗರನ್ನ ಯೋಚೆ ಮಾಡಿದ್ರೆ ಬೇಜಾರಾಗುತ್ತೆ ಕಣ್ರಿ” ಎಂದರು. ರಂಗಾಯಣದಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳನ್ನು ಅವರು ಅಂದೇ ಊಹಿಸಿದ್ದರು. ನಮ್ಮ ಮಾತು ಹೀಗೇ ಮುಂದುವರಿಯಿತು. ಕೊನೆಗೆ ತೇಜಸ್ವಿಯರಿಗೆ ಮಾತು ಸಾಕೆನಿಸಿ 

“ಮತ್ತೇನು ಈಕಡೆ ಬಂದ್ರಿ” ಎಂದು ಮುಕ್ತಾಯದ ಸೂಚನೆ ನೀಡಿದರು.

ನಾವು ಇಷ್ಟೆಲ್ಲ ಮಾತನಾಡಿದರೂ ನಾರಾಯಣ ಗೌಡ ಮಾತ್ರ ಮೈಯೆಲ್ಲ ಮುಳ್ಳಾಗಿಸಿಕೊಂಡು ಹಲಸಿನಕಾಯಿಯಂತೆ ಕೂತಿದ್ದ.

ಆಗ ನಾನು ನಿರ್ವಾಹವಿಲ್ಲದೆ ನಾನು ಇವತ್ತು ಇಲ್ಲಿಗೆ ಬರುವ ಉದ್ದೇಶವಿರಲಿಲ್ಲವೆಂದೂ, ಈ ನಾರಾಯಣಗೌಡ ನನ್ನನ್ನು ಕರೆದುಕೊಂಡು ಬಂದನೆಂದೂ ಹೇಳಿದೆ.

ಆಗ ನಾರಾಯಣಗೌಡ ಅನಿವಾರ್ಯವೆಂಬಂತೆ ಬಾಯಿ ತೆರೆದ “ಅಣ್ಣಾ ನಿಮ್ಮಂತೋರೆಲ್ಲ ಕಷ್ಟಪಟ್ಟು ನಮ್ಮ ಈ ಹಾಳುಬಿದ್ದ ಮೂಡಿಗೆರೆಗೆ ಒಂದು ಕೃಷಿ ಬ್ಯಾಂಕು ತಂದ್ರಿ, ಅದ್ರಿಂದ ಇದು ಒಂದು ಊರು ಅಂತ ಆಯ್ತು. ಇಂದ್ರಾಗಾಂಧಿ ಬ್ಯಾಂಕನ್ನೆಲ್ಲ ರಾಷ್ಟ್ರೀಕರಣ ಮಾಡಿದ್ರಂದ ನಮ್ಮಂತೋರೆಲ್ಲ ಬ್ಯಾಂಕೊಳಗೆ ಕಾಲಿಡೋಹಂಗಾಯ್ತು, ಇಲ್ಲಾಂದ್ರೆ ಮೂಡಿಗೆರೇಲಿ ಬರೀ ಹತ್ತು ಹನ್ನೆರಡು ಜನರಿಗೆ ಮಾತ್ರ ಬ್ಯಾಂಕೊಳಗೆ ನುಗ್ಗೋಕೆ ಅವಕಾಶ ಇತ್ತು. ಆದ್ರೆ ಈಗ ನೀವೆಲ್ಲ ಇತ್ತೀಚೆಗೆ ಆ ಕಡೆಗೆ ಬರೋದು ಕಡಿಮೆ ಮಾಡಿದ್ರಿ. ಇವ್ರುನೆಲ್ಲಾ ವಿಚಾರಿಸ್ಕೊಳಣಾ ಅಂದ್ರೆ ರೈತಸಂಘನೂ ಇಲ್ಲ ಅದ್ಕೇ ಈ ಬ್ಯಾಂಕಿನೋರೆಲ್ಲ ಹಿಂಗ್ ಹೆಚ್ಚಿಕೊಂಡಿದ್ದಾರೆ. ನಾನೇನೋ ನ್ಯಾಯ ಮಾತಾಡಕ್ಕೋದ್ರೆ ಬ್ಯಾಂಕ್ ಮೇನೇಜರ್ ನಿನ್ ಮ್ಯಾಲೆ ಪೋಲಿಸ್ ಕಂಪ್ಲೇಂಟ್ ಕೊಡ್ತೀನಿ ಅಂದ. ಅಲ್ಲೇ ಇದ್ದ ಚಂದ್ರೇಗೌಡ್ರು ಮತ್ ಆ ಮಕಾನಳ್ಳಿ ಕಡೆಯೋರೆಲ್ಲಾ ಬ್ಯಾಂಕಿನ ಪರನೇ ಮಾತಾಡಿದ್ರು, ನೀವಿಲ್ದೇ ಹೋಗಿದ್ರೆ ಈ ಮೂಡಿಗೆರೆಗೆ ಕೃಷಿ ಬ್ಯಾಂಕೆಲ್ಲಿ ಬರ್ತಿತ್ತಣ್ಣ ಎಂದು ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಹಲವು ವಿಷಯಗಳನ್ನೆಲ್ಲಾ ಜೋಡಿಸಿ ಹೇಳುತ್ತಾ, ತೇಜಸ್ವಿಯವರನ್ನು ಯದ್ವಾತದ್ವಾ ಹೊಗಳತೊಡಗಿದ.

“ಅದೇನು ಹೇಳ್ಬೇಕೋ ಹೇಳು ಸುಮ್ನೆ ಸುತ್ತಿ ಬಳಸಿ ಮಾತಾಡ್ಬೇಡ” ಎಂದರು ತೇಜಸ್ವಿ. ಧ್ವನಿಯಲ್ಲಿ ಸಣ್ಣ ಅಸಹನೆಯಿತ್ತು.

“ಅದೇ ಅಣ್ಣ ಬ್ಯಾಂಕಲ್ಲಿ ಸ್ವಲ್ಪ ಲೋನ್ ಬಾಕಿ ಆಗಿತ್ತು. ಹಂಗಂತ ಇಡೀ ಬ್ಯಾಂಕಿಗೆ ನಾನೊಬ್ನೇ ಸುಸ್ತಿದಾರ ಅನ್ನೋತರ ಎಲ್ರ ಎದ್ರಿಗೆ, ಮ್ಯಾನೇಜರು, ಕೋರ್ಟು ಕಛೇರಿ, ಜಪ್ತಿ, ಅಂದ್ರೆ, ಹೆಂಗ್ಹೇಳಿ?. ನಂಗೂ ಸಿಟ್ಬಂತು. ನಾನೂ ಒಂದ್‍ಸೊಲ್ಪ ರಾಂಗಾದೆ. ಅಷ್ಟಕ್ಕೇ ಪೋಲಿಸಿಗೆ ಫೋನ್ ಮಾಡ್ತೀನಿ ಅಂದ್ರು. ನಾನೂ ‘ಹಂಗಾದ್ರೆ ನನ್ ಮನೆ ಜಪ್ತಿ ಮಾಡೇ ತಗಳಿ ನಿಮ್ ಹಣವ’ ಅಂದೆ. ಅಲ್ಲಾ ಅಲ್ಲಿದ್ದೋರೆಲ್ಲಾ ನನ್ನಂಗೆ ಸುಸ್ತಿದಾರ್ರೇ, ಅವ್ರೆಲ್ಲಾ ನಂದೇ ತಪ್ಪು ಅನ್ನೋತರ ಮಾತಾಡದ, ಅದ್ಕೇ ನೀವೊಂಸೊಲ್ಪ ಬುದ್ದಿ ಹೇಳಿ ಆ ಮ್ಯಾನೇಜರಿಗೆ ಅವುಂದ್ಯಾಕೋ ಅತಿಯಾಯ್ತು” ಎಂದ. ಮ್ಯಾನೇಜರ್ ಬಗ್ಗೆ ಹೇಳುವಾಗ ನಾರಾಯಣಗೌಡನ ಮಾತು ಅವನ ಸಿಟ್ಟಿಗೆ ಅನುಗುಣವಾಗಿ ಏಕವಚನ ಬಹುವಚನಗಳ ಮಧ್ಯೆ ಹೊಯ್ದಾಡುತ್ತಿತ್ತು.

“ಅಲ್ಲ ಕಣಯ್ಯ ನಂಗೀಗ ಅರ್ಥ ಆಯ್ತು ಆ ಮೇನೇಜರ್ ನಂಗೂ ಫೋನ್ ಮಾಡಿದ್ರು, ನೀನು ಅವ್ರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡ್ತೀನಿ ಅಂದ್ಯಂತೆ, ‘ತೇಜಸ್ವಿ ನಂ ನೆಂಟ್ರು ಗೊತ್ತಾ’ ಅಂತ ಹೆದರ್ಸೋತರ ಹೇಳಿದಿಯಂತೆ. ನಾನೇ ಹೇಳ್ದೆ ನನ್ನ ಹೆಸರು ಹೇಳ್ಕೊಂಡು ಏನಾದರೂ ಬೇಡದ್ದು ಮಾಡಿದ್ರೆ ಪೋಲಿಸಿಗೆ ಕೊಡಿ ಅಂತ, ನಿಂಗೇನಾದ್ರು ತಲೆಗಿಲೆಕೆಟ್ಟಿದಿಯೇನಯ್ಯ, ಬ್ಯಾಂಕಿನೋರು ಸಾಲ ಕೊಡಬೇಕಾದ್ರೆ ನಿನ್ನತ್ರ ಎಲ್ಲಾದಕ್ಕೂ ಸೈನ್ ತಗೊಂಡೇ ಅಲ್ವಾ ಕೊಟ್ಟಿರೋದು ಸುಮ್ನೆ ಗಲಾಟೆಮಾಡಿ ಒಂದೆರಡು ಕೇಸು ಮೈಮೇಲೆ ಎಳ್ಕೊಳ್ತೀಯಾ ಅಷ್ಟೆ, ಏನಾದ್ರೂ ಮಾಡಿ ಸಾಲ ತಿರ್ಸೋಕ್ಕಾಗುತ್ತೋ ನೋಡು” ಎಂದು ಹೇಳಿ, ಸ್ವಲ್ಪ ಯೋಚಿಸಿ, “ಈ ದೇಶದಲ್ಲಿ ರೈತ ಒಂದುಸಾರಿ ಸಾಲಮಾಡಿದ್ರೆ ಅದು ತೀರಿದ್ದೇ ಕಾಣೆ, ಅದ್ಯಾಕಯ್ಯ ಅಷ್ಟೊಂದು ಸಾಲ ಮಾಡಿದ್ದೀಯಂತೆ” ಎಂದರು.

“ಅಣ್ಣಾ ಅದೊಂದು ಕತೆ. ಈಗ ಮೂರನೇ ವರ್ಷದಲ್ಲಿ ಒಂದೂವರೆ ಲಕ್ಷ ಲೋನ್ ಮಾಡಿ ಹೊಳೆಪಕ್ಕದ ನಾಕೆಕರೆಗೆ ಪಚ್ಚಬಾಳೆ ಹಾಕಿದ್ದೆ, ಎಂತಾ ಚನ್ನಾಗಿ ಬಂದಿತ್ತೂ ಅಂತೀರಿ, ಹಂಗೇ ಮೈನ್ ರೋಡಿಗೆ ಕಾಣದಲ್ಲ, ಎಲ್ಲಾರೂ ಕೇಳೋರೆ ‘ಅದುಯಾರ್ದು ಮಾರಾಯ್ರೆ ಪಚ್ಚಬಾಳೆ, ಒಂದೊಂದು ಗೊನೆ ಏನಿಲ್ಲ ಅಂದ್ರೂ ಇಪ್ಪತೈದ್ ಕೇಜಿ ಮೇಲೆ ಬೀಳುತ್ತೆ’ ಅನ್ನೋರು. ಹಂಗ್ ಬಂದಿತ್ತು ಬಾಳೆ. ನೋಡೀ ನೋಡೀ ಜನಗಳ್ದೇ ಕಣ್ಣಾಯ್ತೋ ಏನೋ, ಆ ವರ್ಷ ಡಿಸೆಂಬರಲ್ಲಿ ಬಿತ್ತಲ್ಲ ಚಳಿ, ಒಂದೇವಾರದ ಚಳೀಗೆ ಬಾಳೆ ಎಲ್ಲಾ ಕೆಂಪಾಗಿ ಬತ್ತಿದಂಗಾಯ್ತು, ಆ ಮೇಲೆ ಏನೆಲ್ಲಾ ಮಾಡ್ದೆ, ಕೊನೀಗ್ ನೋಡಿದ್ರೆ ಗೊನೆಗಳೆಲ್ಲ ಪೀಚಾಗಿ ಏಳ್ ಕೇಜಿ ಎಂಟು ಕೇಜಿ ಮೇಲ್ ಬರ್ಲೇ ಇಲ್ಲ. ಪೂರಾ ಲಾಸಾಯ್ತು. ಇನ್ನು ಬ್ಯಾಂಕಿನ ಕಂತೆಲ್ಲಿ ಕಟ್ಟಲಿ” ಎಂದ.

ಚಳಿ ತೀರಾ ಹೆಚ್ಚಾದರೆ ನಮ್ಮಲ್ಲಿರುವ ಅನೇಕ ಜಾತಿಯ ಸಸ್ಯಗಳ ಬೇರುಗಳು ಕೆಲಸವನ್ನೇ ನಿಲ್ಲಿಸಿಬಿಡುವುದರಿಂದ ಈರೀತಿ ಆಗುತ್ತದೆಂದೂ, ಇದು ಯಾರ ಕಣ್ಣಿನ ಪ್ರಭಾವವೂ ಅಲ್ಲವೆಂದೂ ತೇಜಸ್ವಿ ವಿವರಿಸಿದರು. 

ಆ ವರ್ಷ ನಾನೂ ಕೂಡಾ ಸ್ವಲ್ಪ ಪಚ್ಚಬಾಳೆ ಬೆಳೆದಿದ್ದೆನೆಂದೂ, ಆ ಸಂದರ್ಭದಲ್ಲಿ ಬಾಳೆಗೆ ಚೆನ್ನಾಗಿ ನೀರು ಹಾಯಿಸಿದರೆ ಚಳಿಯ ಪ್ರಭಾವ ಕಮ್ಮಿಯಾಗುತ್ತದೆಂದೂ ನನಗೆ ಹಿರಿಯರೊಬ್ಬರು ಹೇಳಿದ್ದರು. ಅದರಂತೆ ನಾನೂ ಬಾಳೆಗೆ ಏಳೆಂಟು ದಿನಗಳ ಕಾಲ ಸ್ಪ್ರಿಂಕ್ಲರ್ ಮೂಲಕ ನೀರಾವರಿ ಮಾಡಿಸಿದ್ದೆ. ಇದರಿಂದ ಬಾಳೆಗೆ ಆದಹಾನಿ ಬಹಳಷ್ಟು ಕಡಿಮೆಯಾಗಿತ್ತು. ಈ ವಿಚಾರವನ್ನು ನಾನು ಅವರಿಗೆ ತಿಳಿಸಿದೆ.

ಹೌದು ಅದೂ ಒಂದು ಪರಿಣಾಮಕಾರಿ ವಿಧಾನವೇ ಎಂದರು.

“ಅಣ್ಣ ಅಲ್ಲಿಗೇ ನಿಂತಿಲ್ಲ ನನ್ ಕತೆ, ಹೆಂಗೂ ಇನ್ನು ಈ ಬಾಳೆಕಾಯಿ ಮಾರಿ ಬ್ಯಾಂಕ್ ಸಾಲ ತೀರ್ಸÀದು ಕನಸು ಅಂದ್ಕಂಡು ಇನ್ನೂ ಒಂದು ಲಕ್ಷ ಸಾಲ ತಗಂಡು, ಸಕಲೇಶಪುರದಲ್ಲಿ ಕೃಷ್ಣ ಅಂತಿದ್ದಾನೆ ನನ್ ಫ್ರೆಂಡು, ಚಕ್ಕೆ ವ್ಯಾಪಾರ ಮಾಡ್ತಾನೆ. ಅವುನು ಜೊತೆ ಪಾರ್ಟನರ್ ಆಗಿ ಸುಂಡೆಕೆರೆ ಹತ್ರ ಒಂದು ಸಾಬರ ಎಸ್ಟೇಟಿನ ಚಕ್ಕೆ ಕಂಟ್ರಾಕ್ಟ್ ಮಾಡುದ್ವು, ಎಲ್ಲಾ ಸರಿಯಾಗಿದ್ರೆ ನಾಕ್-ನಾಕ್ ಲಕ್ಷ ಲಾಭ ಉಳ್ದಿರೋದು. ಚಕ್ಕೆ ಎಲ್ಲಾ ಕೆತ್ತಿ ಇನ್ನೇನು ಪರ್ಮಿಟ್ ಸಿಕ್ಕೋ ಹೊತ್ತಿಗೆ ಅದೇನೋ ಕಾಂಪ್ಲಿಕೇಷನ್ ಆಗಿ ಚಕ್ಕೆ ಎಲ್ಲಾ ಪಾರೆಸ್ಟ್‍ನೋರು ಸೀಜ್ ಮಾಡಿದ್ರು. ಅದೆಲ್ಲಾ ಸರಿಮಾಡಿ ನಾವು ಬಚಾವಾಗಿ ಚಕ್ಕೆ ಮಾರೋಹೊತ್ತಿಗೆ ಅಲ್ಲಿಗಲ್ಲಿಗೆ ಸರಿಯಾಗಿ, ಕೈ ಕಾಲಿಯಾಯ್ತಣ್ಣ. ಅಲ್ಲಾ ಆ ಬ್ಯಾಂಕ್ ಮ್ಯಾನೇಜರು ಎಲ್ರ ಎದುರಿಗೆ ನನ್ ಮರ್ಯಾದಿ ಕಳುದ್ರೆ ಸಿಟ್ ಬರಲ್ವಣ್ಣ, ಅದ್ಕೇ ನಿಮ್ ಹೆಸರು ಹೇಳ್ದೆ, ಅವಾಗ ಸ್ವಲ್ಪ ಸುಮ್ನಾದ” ಎಂದು ಕರುಣಾಜನಕವಾಗಿ ತನ್ನ ಕತೆಯನ್ನು ಹೇಳಿದ. 

“ಸರಿ ಮಾರಾಯ ಮತ್ತೀಗ ಸಾಲಕ್ಕೆಂತ ಮಾಡ್ತೀಯಾ” ಎಂದು ತೇಜಸ್ವಿ.

“ಇನ್ನೆಂತದು ಮಾಡ್ಳಿ, ನನ್ನ ಹೊಳೆ ಸಾಲು ಗದ್ದೆ ಮೇಲೆ ತುಂಬಾ ಜನಕ್ಕೆಕಣ್ಣಿರಾದು, ಅದರಲ್ಲೇ ಎರಡು ಎಕರೆ ಮಾರ್ಬೇಕು ಅಂತಿದ್ದೀನಿ. ಅಲ್ಲಿವರ್ಗೂ ಸ್ವಲ್ಪ ಸುಮ್ನಿರೋಕೇ ಆ ಮ್ಯಾನೇಜರಿಗೆ ಹೇಳಿ” ಎಂದ.

“ಸರಿ ಆದ್ರೆ ಪದೇ ಪದೇ ನನ್ನ ಹೆಸರು ಹೇಳಕೊಂಡು ತಿರುಗ್ಬೇಡಾ, ನೀವೆಲ್ಲ ಒಂದು ಶಿಸ್ತು ಕಲೀಬೇಕು ಕಣ್ರಯ್ಯ ಇಲ್ಲಾಂದರೆ ಯಾರೂ ನಮ್ಮ ಸಹಾಯಕ್ಕೆ ಬರೋದೇ ಇಲ್ಲ, ಸರ್ಕಾರವಂತೋ ಬರೋದೇ ಇಲ್ಲ, ತಿಳ್ಕಳಿ” ಎಂದರು.

ನಂತರ ಅವರೇ ಒಂದಷ್ಟು ಕಾಫಿ ಮಾಡಿ ತಂದು ಕೊಟ್ಟರು. ಕಾಫಿ ಕುಡಿದು ನಾವು ಹೊರಡುವಾಗ ನಾರಾಯಣ ಗೌಡನಿಗೆ. “ಹೆಂಗಾದ್ರು ಒಂದ್ಸಾರಿ ಬಚಾವಾಗೋ ದಾರಿ ಹುಡ್ಕು” ಎಂದರು. 

ಆಗಲೇ ಗಂಟೆ ಆರಾಗುತ್ತ ಬಂದಿತ್ತು. ನಾರಾಯಣ ಗೌಡ ನನಗೆ ಕೊಟ್ಟ ಮಾತಿನಂತೆ ನನ್ನನ್ನು ಬೈಕಿನಲ್ಲಿ ಹೇರಿಕೊಂಡು ಸಕಲೇಶಪುರದ ಹಾದಿ ಹಿಡಿದ. ಹಾನುಬಾಳಿಗೆ ಬರುತ್ತಿದ್ದಂತೆ ಇಲ್ಲೇ ‘ಸಾಯಂಕಾಲದ ಕಾರ್ಯಕ್ರಮ’ ಮುಗಿಸೋಣವೆಂದೂ, ನಿನ್ನನ್ನು ಊರಿಗೆಬಿಟ್ಟು ತಾನು ಸಕಲೇಶಪುರಕ್ಕೆ ಬದಲಾಗಿ ಹೆಗ್ಗದ್ದೆಗೆ ನೆಂಟರಮನೆಗೆ ಹೋಗುವುದಾಗಿಯೂ ತಿಳಿಸಿದ. ಸಾಯಂಕಾಲದ ಕಾರ್ಯಕ್ರಮಕ್ಕೆ ಕುಳಿತಿದ್ದಾಗ ನಾರಾಯಣ ಗೌಡನಿಂದ ತಿಳಿದ ಸತ್ಯವೆಂದರೆ ಚಕ್ಕೆ ವ್ಯಾಪಾರದಲ್ಲಿ ಆದನಷ್ಟವನ್ನು ತುಂಬಿಕೊಳ್ಳಲು ಅವನು ಇಸ್ಪೀಟಾಡಲು ಪ್ರಾರಂಭಿಸಿ ಈಗ ಅದೇ ಚಟವಾಗಿ ಬಿಟ್ಟಿತ್ತು. ಎಲ್ಲೆಲ್ಲಿ ‘ರಮ್ಮಿ ನಾಕೌಟ್’ ಜಾತ್ರೆಗಳಾಗಲೀ ಅಲ್ಲೆಲ್ಲ ಹೋಗಿ ಇಸ್ಪೀಟಾಡುತ್ತಿದ್ದ. ಮತ್ತಷ್ಟು ಹಣವನ್ನು ಕಳೆದುಕೊಂಡಿದ್ದ. ಇದರಿಂದ ಅವನ ಆರ್ಥಿಕ ಪರಿಸ್ಥಿತಿ ತುಂಬ ಹದಗೆಟ್ಟು ಹೋಗಿತ್ತು. ಅವನು ಹತಾಶನಾದಂತಿದ್ದ. ಏನೇನೋ ಸುಳ್ಳುಗಳನ್ನು ಹೇಳುತ್ತಾ ಎಲ್ಲರನ್ನೂ ನಂಬಿಸಲು ಪ್ರಯತ್ನಿಸುತ್ತಿದ್ದ. 

ಇದನ್ನು ಊಹಿಸಿಯೇ ತೇಜಸ್ವಿಯವರು “ಶಿಸ್ತು ಕಲೀಬೇಕು ಕಣ್ರಯ್ಯ” ಎಂದಿರಬೇಕು.

ಜೂನ್ 6, 2015

‘ಮ್ಯಾಗಿ’ ಮೂಡಿಸಿದ ಎಚ್ಚರ ‘ಗಣೇಶ’ನಿಂದ ಮರೆಯಾಗಿಬಿಡುವುದೇ?

ಮೂರು ದಿನಗಳಿಂದ ಮಾಧ್ಯಮಗಳಲ್ಲೆಲ್ಲಾ ಮ್ಯಾಗಿಯದ್ದೇ ಸುದ್ದಿ. ಎರಡಲ್ಲದಿದ್ದರೂ ಐದು ನಿಮಿಷಕ್ಕೆ ಪಟಾಫಟ್ ಎಂದು ತಯಾರಾಗಿ ಅಡುಗೆ ಮಾಡಿಕೊಳ್ಳಬಯಸುವ ಹಾಸ್ಟೆಲ್ ವಾಸಿಗಳಿಗೆ, ಮಕ್ಕಳಿಗೆ, ದೊಡ್ಡೋರಿಗೆಲ್ಲ ಸಾಥ್ ಕೊಟ್ಟ, ರುಚಿ ಕೊಟ್ಟ ಮ್ಯಾಗಿಯಲ್ಲಿ ವಿಷಕಾರಿ ಅಂಶಗಳು ಇರುವುದು ಬೆಳಕಿಗೆ ಬರುತ್ತಿದ್ದಂತೆ ಎಲ್ಲರೂ ಅಂಡು ಸುಟ್ಟ ಬೆಕ್ಕಿನ ಥರ ವಿಲವಿಲ ಒದ್ದಾಡುತ್ತಿದ್ದಾರೆ. ನೂಡಲ್ಸ್ ಎಂದರೆ ಮ್ಯಾಗಿ ಎಂಬಷ್ಟರ ಮಟ್ಟಿಗೆ ಬೆಳೆದ, ಬಹುತೇಕರ ಮೆಚ್ಚುಗೆಗೆ ಪಾತ್ರವಾದ ಮ್ಯಾಗಿ ಹೀಗೆ ನಮಗೆ ವಿಷವುಣ್ಣಿಸಿದೆ ಎಂಬ ಸತ್ಯವನ್ನು ಅರಗಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಮ್ಯಾಗಿಯಲ್ಲಿ ವಿಷವಿದೆ ಎಂಬ ಅಂಶ ನಮ್ಮನ್ನು ಇಷ್ಟೊಂದು ವಿಹ್ವಲಗೊಳಿಸಬೇಕೆ? 

ಮ್ಯಾಗಿಯಲ್ಲಿ ಪತ್ತೆಯಾದದ್ದೇನು?
ಮ್ಯಾಗಿಯಲ್ಲಿ ದೇಹಕ್ಕೆ ಹಾನಿಯುಂಟುಮಾಡಬಲ್ಲಂಥಹ ಎರಡು ಪ್ರಮುಖ ಅಂಶಗಳು ಪತ್ತೆಯಾಗಿವೆ. ಒಂದು ಸೀಸ(lead), ಮತ್ತೊಂದು ಮೊನೋಸೋಡಿಯಮ್ ಗ್ಲುಟಾಮೇಟ್. ಸೀಸ ವಿಷಕಾರಿಯೆಂಬುದು ಸಾಬೀತಾಗಿರುವಂತದ್ದು. ದೇಹದೊಳಗೆ ಸೀಸ ಸಣ್ಣ ಪ್ರಮಾಣದಲ್ಲಿ ಸೇರುತ್ತಿದ್ದರೂ ಸಾಕು, ದೀರ್ಘಾವಧಿಯಲ್ಲಿ ತನ್ನ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ಕಾರಣ ಸೀಸ ಒಮ್ಮೆ ದೇಹದೊಳಗೆ ಸೇರಿಬಿಟ್ಟರೆ ನೈಸರ್ಗಿಕವಾಗಿ ಹೊರಹಾಕುವ ಕೌಶಲ್ಯ ನಮ್ಮ ದೇಹಕ್ಕಿಲ್ಲ. ದೇಹದ ಬೆಳವಣಿಗೆಗೆ ಕ್ಯಾಲ್ಶಿಯಂ ಅತ್ಯಗತ್ಯ ಎನ್ನುವುದು ಎಲ್ಲರಿಗೂ ತಿಳಿದ ಸತ್ಯ. ದೇಹಕ್ಕೆ ಸೀಸ ಸೇರಿದಾಗ, ನಮ್ಮಲ್ಲಿರುವ ಜೀವಕೋಶಗಳು ಕ್ಯಾಲ್ಶಿಯಂ ಬದಲಿಗೆ ಸೀಸವನ್ನು ಉಪಯೋಗಿಸಿಕೊಳ್ಳಲಾರಂಭಿಸುತ್ತದೆ. ಇದು ಅಸಹಜ ಪ್ರಕ್ರಿಯೆ, ಉಪಯೋಗಿಸಿಕೊಂಡ ಸೀಸದಿಂದ ನನಗೇ ತೊಂದರೆ ಎಂದು ಜೀವಕೋಶಕ್ಕೆ ಅರಿವಾಗುವ ವೇಳೆಗೆ ಅಪಾಯ ಸಂಭವಿಸಿಬಿಟ್ಟಿರುತ್ತದೆ. ಬೆಳೆಯುತ್ತಿರುವ ಜೀವಕೋಶಗಳ ಮೇಲೆ ಪರಿಣಾಮ ಹೆಚ್ಚಾಗಿರುವ ಕಾರಣ ಆರು ವರುಷದ ಒಳಗಿನ ಮಕ್ಕಳು ಸೀಸದ ದುಷ್ಪರಿಣಾಮಗಳಿಂದ ಪೀಡಿತರಾಗುತ್ತಾರೆ. ಮಾಂಸಖಂಡ, ಮೂಳೆ, ಮಿದುಳು, ಮೂತ್ರಪಿಂಡ, ಜಠರ – ಹೀಗೆ ಬೆಳೆಯುತ್ತಿರುವ ಎಲ್ಲಾ ಅಂಗಾಂಗಗಳೂ ಸೀಸದಿಂದ ಹಾನಿಗೊಳಗಾಗುತ್ತವೆ. ಇನ್ನು ಜೀವಕೋಶಗಳ ಬೆಳವಣಿಗೆ ಬಹುತೇಕ ನಿಂತುಹೋಗಿರುವ ದೊಡ್ಡವರಲ್ಲೂ ಸೀಸದಿಂದ ದುಷ್ಪರಿಣಾಮಗಳಿವೆ. ಮುಖ್ಯವಾಗಿ ಸಂತಾನಹೀನತೆ, ಮರೆಗುಳಿತನ, ಅಧಿಕ ರಕ್ತದೊತ್ತಡ, ಮಾಂಸಖಂಡ ಮತ್ತು ಕೀಲುಗಳ ನೋವು. 

ಇನ್ನು ಮ್ಯಾಗಿಯವರು ಲೇಬಲ್ಲಿನ ಮೇಲೆ No MSG ಎಂದು ಬರೆದುಕೊಂಡಿದ್ದರು. ಆದರೆ ನೂಡಲ್ಸಿನಲ್ಲಿ MSG ಅಂದರೆ ಮೊನೋಸೋಡಿಯಮ್ ಗ್ಲುಟಾಮೇಟ್ ಪತ್ತೆಯಾಗಿತ್ತು. ಇದೊಂದೇ ಕಾರಣ ಸಾಕು ಮ್ಯಾಗಿಯನ್ನು ಸಂಪೂರ್ಣವಾಗಿ ನಿಷೇಧಿಸಿಬಿಡಲು. ಅಂದಹಾಗೆ ಈ ಮೊನೋಸೋಡಿಯಮ್ ಗ್ಲುಟಾಮೇಟ್ ಹಾನಿಕಾರಕವಾ ಅಲ್ಲವಾ ಎಂಬುದರ ಬಗ್ಗೆಯೇ ಗೊಂದಲವಿದೆ. ಆಹಾರಕ್ಕೆ ಇದನ್ನು ಹಾಕುವುದಕ್ಕೆ ಪ್ರಮುಖ ಕಾರಣ, ರುಚಿ ಗ್ರಹಿಸುವ ನಾಲಗೆಯಲ್ಲಿರುವ ಜೀವಕೋಶಗಳನ್ನು ಉದ್ರೇಕಿಸುವ ಶಕ್ತಿ ಈ ಎಂ.ಎಸ್.ಜಿಗೆ ಇದೆ. ರುಚಿ ಉದ್ರೇಕಗೊಳ್ಳುವ ಕಾರಣ ಆ ಆಹಾರವನ್ನು ಪದೇ ಪದೇ ತಿನ್ನುವಂತಾಗುತ್ತದೆ. ಕಂಪನಿಗಳ ವ್ಯಾಪಾರ ವೃದ್ಧಿಯಾಗುತ್ತದೆ! ಇಂಥದ್ದೇ ದುಷ್ಪರಿಣಾಮಗಳನ್ನು ಎಂ.ಎಸ್.ಜಿ ಉಂಟುಮಾಡುತ್ತದೆ ಎಂಬುದನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲದ ಕಾರಣ ಎಂ.ಎಸ್.ಜಿಯ ಬಳಕೆ ಇನ್ನೂ ಚಾಲ್ತಿಯಲ್ಲಿದೆ. ತಲೆನೋವು, ಎದೆಬಡಿತದ ಹೆಚ್ಚಳ, ಪಾರ್ಕಿನ್ಸನ್ ಖಾಯಿಲೆ, ಮರೆವಿನ ಆಲ್ಜೀಮರ್ಸ್ ಖಾಯಿಲೆಗಳಿಗೆಲ್ಲ ಈ ಎಂ.ಎಸ್.ಜಿ ಕಾರಣವಾಗುತ್ತದೆ ಎಂದನೇಕ ಅಧ್ಯಯನಗಳು ಹೇಳುತ್ತವಾದರೂ ಇದರಿಂದಲೇ ಆ ಖಾಯಿಲೆ ಬಂತು ಎಂದು ಹೇಳುವಷ್ಟು ನಿಖರ ದಾಖಲೆಗಳಿಲ್ಲ. 

ಭಾರತದಲ್ಲಿ ಸೀಸ ಮತ್ತು ಮೊನೋಸೋಡಿಯಮ್ ಗ್ಲುಟಾಮೇಟ್ ಮ್ಯಾಗಿಯಲ್ಲಷ್ಟೇ ಇದೆ ಎಂದುಕೊಳ್ಳುವುದು ಮೂರ್ಖತನ. ಸೀಸದ ಅಂಶ ಆಹಾರದಿಂದ ಹಿಡಿದು ಗೊಂಬೆಗಳವರೆಗೆ, ಮನೆಗೆ ಬಳಿಯುವ ಬಣ್ಣದವರೆಗೆ ಇದೆ. ಸಿದ್ಧ ಆಹಾರದಲ್ಲಷ್ಟೇ ಸೀಸವಿರಬಹುದು, ತರಕಾರಿ ತಿನ್ಕೊಂಡು ಖುಷಿಯಾಗಿರ್ತೀನಿ ಎಂದು ಬೆನ್ನುತಟ್ಟಿಕೊಳ್ಳಬೇಡಿ. ಮನೆ ಹತ್ತಿರದ ತರಕಾರಿ ಅಂಗಡಿಯಿಂದಲೇ (ಅದರಲ್ಲೂ ನಗರಗಳಲ್ಲಿ) ಒಂದಷ್ಟು ಹಸಿ ಬಟಾಣಿ ತಂದು ನೀರಿನಲ್ಲಿ ನೆನೆಸಿಡಿ. ನಿಧಾನಕ್ಕೆ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಮತ್ತಾ ಬಣ್ಣದಲ್ಲಿ ಸೀಸದ ಅಂಶವಿರುತ್ತದೆ! ಹಸಿ ಬಟಾಣಿ ಒಂದು ಉದಾಹರಣೆಯಷ್ಟೇ, ಮಾರುಕಟ್ಟೆಯಲ್ಲಿ ಫಳಫಳ ಹೊಳೆಯುವ ಎಲ್ಲವೂ ವಿಷಕಾರಿಯಾಗಿರುತ್ತದೆ. ಸೀಸವಲ್ಲದಿದ್ದರೆ ಮತ್ತೊಂದು ವಿಷದಿಂದ. ಹೊಳೆಯುವ ವಸ್ತುಗಳೆಡೆಗೇ ಆಕರ್ಷಿತರಾಗೋ ಗ್ರಾಹಕರ ತಪ್ಪಾ? ಗ್ರಾಹಕರ ದೌರ್ಬಲ್ಯವನ್ನು ತನ್ನ ಲಾಭವನ್ನಾಗಿ ಪರಿವರ್ತಿಸಿಕೊಂಡ ವ್ಯಾಪಾರಿಯ ತಪ್ಪಾ? ಇನ್ನು ಮೊನೋಸೋಡಿಯಮ್ ಗ್ಲುಟಾಮೇಟ್ ಬಗ್ಗೆ ಚರ್ಚೆಯೇ ಬೇಡ; ಮನೆಯ ಹೊರಗೆ ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಹುತೇಕ ಎಲ್ಲಾ ತಿಂಡಿಗಳಲ್ಲೂ ಅದು ಇದ್ದೇ ಇರುತ್ತದೆ!
ಭಾರತಕ್ಕೆ ಕೆ.ಎಫ್.ಸಿ, ಮೆಕ್ ಡೊನಾಲ್ಡ್ ನಂತಹ ಬಹುರಾಷ್ಟ್ರೀಯ ಕಂಪನಿಗಳ ಆಗಮನ ಶುರುವಾದಾಗ ಅದನ್ನು ವಿರೋಧಿಸಿದ ರೈತ ಸಂಘದವರು, ಎಡಪಂಥೀಯ ವಿಚಾರಧಾರೆಯವರೆಲ್ಲ ಅಪಹಾಸ್ಯಕ್ಕೀಡಾಗಿದ್ದರು. ‘ಅಭಿವೃದ್ಧಿ’ ಬೇಡ್ವಲ್ರೀ ಇವರಿಗೆ ಎಂದು ಗೇಲಿ ಮಾಡಿದ್ದರು. ಜಾಗತೀಕರಣದ ಪರಿಣಾಮವನ್ನು ತಡೆಯಲು ಯಾರಿಗೂ ಸಾಧ್ಯವಾಗದ ಕಾರಣ ಕೆ.ಎಫ್.ಸಿಯ ಜೊತೆಜೊತೆಗೆ ಹತ್ತಲವು ದಿಡೀರ್ ಆಹಾರ ತಯಾರಕರು ದಾಳಿ ಮಾಡಿದರು. ಅವುಗಳ ಜೊತೆಗೆ ಓಡೋಡಿ ಬಂದದ್ದು ಮ್ಯಾಗಿಯಂಥ ಬಾಯಿ ಚಪ್ಪರಿಸಿಯೇ ತಿನ್ನಬೇಕಾದಂತಹ ಸಿದ್ಧಾಹಾರ ಕಂಪನಿಗಳು. ಸಿದ್ಧ ಆಹಾರಗಳು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬರಿವು ಇದ್ದರೂ ನಾವೆಲ್ಲ ಅದನ್ನು ತಿನ್ನುತ್ತಲೇ ಇದ್ದೆವು. ಈಗ ಇದ್ದಕ್ಕಿದ್ದಂತೆ ಜ್ಞಾನೋದಯವಾದಂತೆ ಮ್ಯಾಗಿಯನ್ನು ಮಾಡುವುದನ್ನೇ ಬಿಟ್ಟುಬಿಡುತ್ತೇವೆ ಎಂದು ಬಡಬಡಿಸುತ್ತಿದ್ದೇವೆ. ಕೋಕೋ ಕೋಲಾ, ಪೆಪ್ಸಿಯಂತಹ ಪಾನೀಯಗಳು ವಿಷಕ್ಕೆ ಸಮ ಎಂದು ಅಧ್ಯಯನಗಳು ಸಾರಿ ಹೇಳಿದ ಮೇಲೆ ಅದನ್ನು ಕುಡಿಯುವುದನ್ನು ಬಿಟ್ಟುಬಿಟ್ಟರಾ? ಕೆಟ್ಟ ವಸ್ತುಗಳು ಬಹುಬೇಗ ಪ್ರಿಯವಾಗಿಬಿಡುವುದು ಸುಳ್ಳಲ್ಲ. ವೃತ್ತಿಯೊಂದು ಉದ್ಯಮವಾಗಿ ಲಾಭ ನಷ್ಟವೇ ಪ್ರಮುಖವಾಗಿಬಿಟ್ಟಾಗ ಲಾಬಿ ಪ್ರಾರಂಭವಾಗುತ್ತದೆ, ಲಾಭಕ್ಕಾಗಿ ತಟ್ಟೆಗೂ ವಿಷವಿಕ್ಕುವ ಪ್ರಕ್ರಿಯೆ ವೇಗ ಪಡೆದುಕೊಳ್ಳುತ್ತದೆ. ಭೂಮಿಯಲ್ಲಿ ಬೀಜವಾಕುವ ಸಮಯದಿಂದಲೇ ವಿಷದ ತಯಾರಿ ನಡೆಯುತ್ತಿದೆ ಎಂಬುದು ವಿಪರ್ಯಾಸ. ಮ್ಯಾಗಿಯನ್ನು ವಿರೋಧಿಸುವ ಸಮೂಹ ಸನ್ನಿ ಈಗ ಕಾಣುತ್ತಿದೆ. ಇದು ಎಷ್ಟು ದಿನಗಳವರೆಗೆ ಇರಬಹುದು? ಒಂದು ತಿಂಗಳು, ಎರಡು ತಿಂಗಳು? ಕೊನೇಪಕ್ಷ ಗಣೇಶನ ಹಬ್ಬದವರೆಗೆ? ಗಣೇಶನ ಹಬ್ಬ ಬಂತೆಂದರೆ ವಿಷವನ್ನೆಲ್ಲ ಮರೆತು ಸೀಸ ತುಂಬಿದ ಬಣ್ಣದಿಂದ ಅಲಂಕೃತನಾದ ಗಣಪತಿಯನ್ನು ಕಣ್ಣಲ್ಲಿ ತುಂಬಿಕೊಂಡು ಕೊನೆಗದನ್ನು ಕೆರೆಗೆ, ನಾಲೆಗೆ ಬಿಟ್ಟು ಕೃತಾರ್ಥವಾಗುವ ಕೆಲಸವನ್ನು ಮ್ಯಾಗಿ ಮೂಡಿಸಿದ ಎಚ್ಚರಿಕೆ ತಡೆಯಬಲ್ಲದೇ? ನಿಮಗಿರುವ ಅನುಮಾನೇ ನನಗೂ ಇದೆ.
ವಿಷಯ ಸಹಾಯ: WHO, Kingcounty, Mercola, Eatingwell

ಜೂನ್ 1, 2015

ಶಾಲೆಯ ಮೇಲೊಂದು ಹೊಲವ ಮಾಡಿ......

terrace garden
ವಿಯೆಟ್ನಾಮಿನ ಹೊ ಚಿ ಮಿನ್ ನಗರದ ಬಳಿ ನಿರ್ಮಿಸಲಾಗಿರುವ ಹೊಸ ಶಾಲೆ ತನ್ನ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಅದ್ಭುತ ವಿನ್ಯಾಸದ ಕಟ್ಟಡಗಳೀಗ ಅಪರೂಪವಲ್ಲವಾದರೂ ಈ ಶಾಲೆ ಗಮನ ಸೆಳೆಯಲು ಕಾರಣ ಮೂರು ಸಾವಿರದ ಎಂಟುನೂರು ಚದರ ಅಡಿಯ ಸೂರನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಲಾಗಿದೆ! ಕೃಷಿ ಭೂಮಿಯನ್ನು ನಿರಂತರವಾಗಿ ಕೃಷಿಯೇತರ ಚಟುವಟಿಕೆಗಳಿಗೆ ಉಪಯೋಗಿಸುವುದು 'ಆಧುನಿಕ' ಜಗತ್ತೆಂದು ಕರೆದುಕೊಳ್ಳಲು ಹವಣಿಸುವ ಎಲ್ಲಾ ದೇಶಗಳಲ್ಲಿ ಕಂಡುಬರುವ ಸಾಮಾನ್ಯ ಪರಿಸ್ಥಿತಿ. ಕೃಷಿ ಮತ್ತು ಹಳ್ಳಿ ಸಮಾನಾರ್ಥಕವಾಗಿಯೇ ಉಪಯೋಗಿಸುತ್ತಿದ್ದ ಪದಗಳು. ನಗರೀಕರಣದ ಪ್ರಭಾವದಿಂದ ಹಳ್ಳಿಗಳ ವಿಸ್ತೀರ್ಣ ಮತ್ತು ತತ್ ಪರಿಣಾಮವಾಗಿ ಕೃಷಿ ಭೂಮಿಯ ವಿಸ್ತೀರ್ಣದಲ್ಲಿ ಗಾಬರಿ ಹುಟ್ಟಿಸುವಷ್ಟು ಕಡಿತವಾಗುತ್ತಿದೆ. ಇದಕ್ಕೊಂದು ಪರ್ಯಾಯವೆಂಬಂತೆ ಇತ್ತೀಚಿನ ದಿನಗಳಲ್ಲಿ ಖ್ಯಾತವಾಗುತ್ತಿರುವುದು ನಗರ ಕೃಷಿ. 
vietnam roof garden
ವಿಯೆಟ್ನಾಂ ಕೂಡ ಈ ರೀತಿಯ ಕೃಷಿ ಭೂಮಿಯ ಅವಸಾನಕ್ಕೆ ಹೊರತಾಗಿಲ್ಲ. ಕೈಗಾರಿಕೀಕರಣ ಮತ್ತು ನಗರೀಕರಣ ಪ್ರಕ್ರಿಯೆ ವೇಗ ಪಡೆಯಲಾರಂಭಿಸಿದಂತೆ ಭೂಮಿಯೊಡನೆಯ ಸಂಬಂಧವನ್ನು ಕಳೆದುಕೊಳ್ಳುವವರು ಮಕ್ಕಳು. ಭಾರತದಲ್ಲೀಗ ಮೂವತ್ತರ ಆಸುಪಾಸಿನಲ್ಲಿರುವ 'ಓದಿ' 'ಕೆಲಸ' ಹುಡುಕಿಕೊಂಡ ನಮಗೇ ಹೆಚ್ಚು ಕಡಿಮೆ ಭೂಮಿಯೊಡನೆ ಸಂಪರ್ಕ ಕಡಿದು ಹೋಗಿದೆ. ಇನ್ನು ಈಗಿನ ಮಕ್ಕಳಿಗೆ ಗಿಡದಲ್ಲಿ ಬೆಳೆಯುವುದ್ಯಾವುದು, ಮರದಲ್ಲಿ ಬೆಳೆಯುವುದ್ಯಾವುದು ಎಂಬುದರ ಅರಿವೂ ಸಿಗುತ್ತಿಲ್ಲ, ಪುಸ್ತಕಗಳಲ್ಲಿ ಗಟ್ ಹಾಕಿದ್ದು ಹೆಚ್ಚು ದಿನ ಉಳಿಯುವುದಿಲ್ಲ. ವಿಯೆಟ್ನಾಮಿನಲ್ಲೂ ಅದೇ ಪರಿಸ್ಥಿತಿ ಉದ್ಭವಿಸುವ ಸಾಧ್ಯತೆಗಳಿವೆ. ಓದುವ ಸಲುವಾಗಿ ನಗರದ ಮಕ್ಕಳು ಕೃಷಿಯಿಂದ ವಂಚಿತರಾಗಬಾರದೆಂಬ ಕಾರಣದಿಂದ ಇಂತಹುದೊಂದು ಅದ್ಭುತ ಶಾಲೆ ಕಟ್ಟಲಾಗಿದೆ. ಹತ್ತಿರದ ಶೂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವವರ ಮಕ್ಕಳು ಈ ಶಾಲೆಯ ವಿದ್ಯಾರ್ಥಿಗಳು. ನಿಯಮಿತ ಪಾಠದ ಜೊತೆ ಜೊತೆಗೆ ಕೃಷಿಯ ಪಾಠವೂ ಇರುತ್ತದೆ ಮತ್ತಾ ಪಾಠ ತರಗತಿಯೊಳಗೆ ಸೀಮಿತವಾಗದೆ ತರಗತಿಯ ಮೇಲೆ ತಾರಸಿಯಲ್ಲಿ ಮುಂದುವರೆಯುತ್ತದೆ. 
urban farming

school garden

ನೀರಿನ ಮರುಪೂರಣ, ಸೌರ ವಿದ್ಯುತ್ ಶಕ್ತಿಯ ಬಳಕೆಗಳೆಲ್ಲವೂ ಪರಿಸರದ ಮೇಲಾಗುವ ಹಾನಿಯನ್ನು ಕಡಿಮೆಗೊಳಿಸುವ ಅಂಶಗಳು. ಅವುಗಳು ಅನೇಕ ಕಡೆ ಸಾಮಾನ್ಯವಾದರೂ ಶಾಲೆಯ ತಾರಸಿಯಲ್ಲಿ ಕೃಷಿ ಕೆಲಸಕ್ಕೆ ಪ್ರೋತ್ಸಾಹ ಕೊಡುವುದು ವಿಶೇಷವೇ ಸರಿ. ಅದರ ಉದ್ದೇಶ ಪ್ರಕೃತಿ ಮತ್ತು ಮಕ್ಕಳ ಸಂಬಂಧವನ್ನು ಗಟ್ಟಿಗೊಳಿಸುವುದಕ್ಕಾಗಿ ಎಂಬ ಅಂಶ ಮತ್ತಷ್ಟು ಸಂತಸ ತರುವಂತಹುದು. ನಮ್ಮಲ್ಲೂ ಇಂಥ ಶಾಲೆಗಳನ್ನು ನಿರ್ಮಿಸುವುದು ಒಳ್ಳೆಯದಲ್ಲವೇ?!
garden children
ಸುದ್ದಿಮೂಲ: John Vibes, trueactivist.com 
ಈ ಮಾಹಿತಿಯ ಅರಿವಾಗಿದ್ದು ಜಿ.ಎನ್.ನಾಗರಾಜ್ ರವರಿಂದ. ಅವರಿಗೆ ಧನ್ಯವಾದಗಳು

ಮೇ 15, 2015

Trash plant containers!

trash plant container
Beginning!
Ashok K R
The easiest and quickest way to make our terrace/ balcony garden greener is to purchase the ‘ready to water’ plants from nearby nursery, no muddy hands. Easier method is to buy some well built ceramic/ plastic pots and start planting the seeds/ seedlings. Using ‘waste’ items in and around home to build plant container is tougher, yet exciting and creative method. Old buckets, Paint buckets (stronger and tougher) are commonly used to grow all varities of plants. Large paint buckets can be successively used to grow ‘trees’. When all old plastic items were exhausted to grow chilly plant and some flowers i started looking for other trash which can be converted to plant container with minimal expenditure. Used some plastic bottles, but somehow still i am finding it difficult to grow some plant in them. Finally my eyes fell on old, unused, partially destroyed wooden door which was bearing the brunt of all three seasons in backyard. 

Send your innovative ideas of terrace gardening to hingyake@gmail.com

DIY plant container
Plastic bush to raise the door
Using a wooden door has its advantages and disadvantages. I had no doubt that the door will bear the weight of the potting media and the plants but placing the door directly on the floor of the terrace means continous wetness beneath the door which might seep through the roof. Problem would be solved by creating a small gap between the door and the floor. Since i could not find any trash to heighten the door, i thought of alternatives. There were few cement bricks lying in the roof but if the height is more then stability will be less. Finally i decided to buy 6 plastic bush from nearby hardware store and fixed it to the door with screws. 2 inches of gap below the door is good enough for cleaning purposes.
DIY plant container
Good enough space for cleaning
Took 6 unequal wooden bars from Home Trash store! Fixed it vertically at the ends and in the middle of the door. Ofcourse opposite to the plastic bush! Now the door looked like container and only thing missing was side wall to support the potting media.
wooden plant container
Vertical wooden bars
For side wall i opted an old plastic tarpaulin sheet and tied it to the vertical wooden bars. (Now after seeing the status of other tarpaulin sheet i have decided not to use them in future. Weather will wither the sheets in a year or so and its almost impossible to remove the tiny bits of plastic from the potting media)
plant container innovative ideas
Final makeover with seedlings! Used some waste paper carton to provide additional support to side walls
Potting media consisted of red soil, cocopeat and kitchen waste compost. Filled the door, now a container, with potting media upto 1 – 11/2 feet. Fortunaltely, the plastic bush and the plastic sheet did not broke! Shifted and planted 3 chilly and one okra seedlings from small containers to the newly made Trash plant container. Its 3 months since i prepared this container. It has withstood the heavy rains last month. Okra plant was heavily infested with spider mites, had to remove it. Chilly plants are happily flowering and have harvested more than 250 gm of chillies and still counting!
plant container
After 3 months, healthy chillies and 'infested' Okra
Total cost for container: For plastic bush, screws and nails – 40 / -
Time consumed: 1 hour
Worthfulness: Cannot be priced!
diy plant container
Started harvesting!

ಏಪ್ರಿ 25, 2015

Think Small For Better Cities!


Dr Ashok K R
‘Think small’ should be the new Mantra in the era of rapid urbanisation. Residents of Mandur successfully protested against the dumping of garbage generated from the Bruhat Bengaluru Mahanagara Palike. When almost all the governments promote urbanisation, when we the people flood to cities in the name of job, future, success it’s absurd to put the entire blame on the government for mishandling the waste generated in thousands of tonnes per day in Bengaluru. Though the plastic waste is difficult to manage in individual home setup (what we can do best is to reduce the use of plastic covers wherever possible) wet waste / kitchen waste can be handled effectively in home.

Che Guevera is my inspiration for life. That inspiration led me to read more and more about Cuba. While reading many articles about Cuba urban farming/city farms ignited my interest. Cuba initiated city farming because of acute shortage of vegetables and eatables after the fall of Soviet Union and trade ban from America. That ignited interest was further inspired by Organic Terrace Gardening facebook group which actively discusses pros and cons of terrace / balcony gardening. At present Bengalurians are most active in terrace gardening. 

With all those ignition and inspiration i started to compost the kitchen waste through simple aerobic composting in plastic tubs and containers. It was smelly, too dry, too wet, too many magots in the initial days which was quite worrisome. Nature has many ways of correcting our mistakes and gradually i am learning the nature’s way of composting – combine carbon with nitrogen. It’s been a year since i threw wet waste into the garbage van! All those kitchen waste are happily nourishing the plants of our home.

Urban farm in Havana, Cuba.
When we shifted to this present house with full terrace for our use there were two options. First option was to buy the containers, soil, cocopeat, compost at once and fill the terrace with plants; quite easier. Second option to create the compost gradually from kitchen and growing garden’s waste, use the trash in home to create or innovate the containers and later buy containers as and when amount of compost increases. Absence of financial restrain tempted me to go with first option so that i can see everything green in a month’s time but my experimental mind made me to select the time consuming second option!

Ideally we should have small pockets of places for human dwelling so that waste management won’t become troublesome. When the government and we, the people are more inclined towards ‘bigger’ ‘smart’ ‘greenless’ cities amount of waste generated will be proportionately big; Huge enough to spoil the health of an entire village which are near to the ‘big’ cities. While it’s almost impossible for most of us to leave the cities and move to countryside we can atleast do our bit to protect the health of countryside. A container in our balcony/terrace to compost the kitchen waste mixed with dried leaves might appear small, but the benefits it does to the environment is enormous. Think small, save environment.

There are plenty of sites which guide us to terrace gardening, this is a tiny attempt from my side to share my experiences with simple and almost inexpensive methods to create a garden. My main aim is to avoid kitchen waste’s travelling into a distant village. 

Suggestions and full articles from the readers are welcome in both English and Kannada.

Image source: OTG fb page & thecubaneconomy.com