ಮಾರ್ಚ್ 21, 2014

ಗಲಭಾ ರಾಜಕೀಯ!

ಕೆಲವೊಮ್ಮೆ ಏನೋ ಹೇಳಲು ಹೋಗಿ ಸತ್ಯವನ್ನು ಹೊರಹಾಕಿಬಿಡಲಾಗುತ್ತದೆ! ಇವತ್ತಿನ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಬಂದಿರುವ ಒಂದು ವರದಿ ಗಲಭೆಗಳ ಹಿಂದಿನ ರಾಜಕೀಯವನ್ನು ಬಯಲು ಮಾಡಿಬಿಡುವುದರ ಜೊತೆಜೊತೆಗೆ ಬಿಜೆಪಿ ರಾಜಕೀಯ ಪಕ್ಷವಾಗಿ ಬೆಳೆಯಲು ಏನು ಕಾರಣ ಎಂಬುದನ್ನೂ ಸೂಚ್ಯವಾಗಿ ತಿಳಿಸಿಬಿಟ್ಟಿದೆ.

ಜೂನ್ 28, 2012

ಮುಖ್ಯವಾಹಿನಿಯ ಜಾಣಗುರುಡು


ಡಾ ಅಶೋಕ್ ಕೆ ಆರ್        
 ಹೆಂಡತಿ ಗಂಡನಿಗೆ ಹೊಡೆದರೆ ‘ಬ್ರೇಕಿಂಗ್ ನ್ಯೂಸ್’, ಗಂಡ ಹೆಂಡತಿಗೆ ಹೊಡೆದರೆ ‘ಬ್ರೇಕಿಂಗ್ ನ್ಯೂಸ್’, ಪೂನಂ ಪಾಂಡೆ ಬೆತ್ತಲಾದದ್ದು, ಐಶ್ವರ್ಯ ರೈ ದಪ್ಪಗಾಗಿದ್ದು ಮುಖಪುಟ ಸುದ್ದಿ! ಅಧಿಕಾರಿ, ರಾಜಕಾರಣಿ, ಸನ್ಯಾಸಿ ಮಾಡಿದ ತಪ್ಪುಗಳು ‘ಬ್ರೇಕಿಂಗ್ ನ್ಯೂಸ್’ [ofcourse ಯಾವ ವಾಹಿನಿ ವೀಕ್ಷಿಸುತ್ತಿದ್ದೀರೆಂಬುದರ ಮೇಲೆ ಈ ಕೊನೆಯ ಬ್ರೇಕಿಂಗ್ ನ್ಯೂಸ್ ಬದಲಾಗುತ್ತಿರುತ್ತದೆ!]. ಪತ್ರಕರ್ತನೊಬ್ಬ ನೆಲದ ಕಾನೂನಿಗೆ ಗೌರವ ಕೊಡದೆ ನಡೆದುಕೊಂಡಾಗ? ಅದು ಸುದ್ದಿಯೂ ಅಲ್ಲ, ರದ್ದಿಗೆ ಹಾಕುವಂಥ ವಿಷಯ ಎಂಬುದು ನಮ್ಮ ಮುಖ್ಯವಾಹಿನಿ ಮಾಧ್ಯಮಗಳ ನಿಲುವು!