ಆಗ 1, 2011

ಮತ್ಸ್ಯಗಂಧಿಯ ಮೀನುಗಳು

-->
ಮತ್ಸ್ಯಗಂಧಿ 
ಬೆಳಗಿನ ಜಾವ ಮೂರಕ್ಕೆ ನಂತರ ಪ್ರಯತ್ನಪಟ್ಟರೂ ನೆನಪಿಗೆ ಬಾರದ ಸ್ವಪ್ನವೊಂದರಿಂದ ಎಚ್ಚರವಾಯಿತು. ಅರ್ಧ ಗಂಟೆ ಹೊರಳಾಡಿದೆನಾದರೂ ನಿದ್ರೆ ಹತ್ತಲಿಲ್ಲ. ಎದ್ದು ಕುಳಿತು ಕೊನೆಯ ಕೆಲವು ಪುಟಗಳಷ್ಟೇ ಉಳಿದಿದ್ದ ‘ನನ್ನ ತೇಜಸ್ವಿ’ ಪುಸ್ತಕವನ್ನು ಕೈಗೆತ್ತಿಕೊಂಡೆ. ಆರಾಗುವಷ್ಟರಲ್ಲಿ ಪುಸ್ತಕದ ಪುಟಗಳು ಮುಗಿದುಹೋದವು. ರೂಮಿನಲ್ಲೇ ಅತ್ತಿಂದಿತ್ತ ಹೆಜ್ಜೆ ಹಾಕಿದೆ. ಇಂದೇಕೋ ಮಳೆಯಿರಲಿಲ್ಲ. ಏನು ಮಾಡಬೇಕೆಂದು ತೋಚದೆ ಮೊಬೈಲೆತ್ತಿಕೊಂಡು ಗೂಗಲ್ ಗೆ ಹೋಗಿ ಸುಳ್ಯ ಎಂದು ಟೈಪಿಸಿ ಮೂಡುವ ಪುಟಗಳಿಗೆ ಕಾದೆ. ಮೊದಲ ಪುಟ ವಿಕಿಪೀಡಿಯಾದಾಗಿತ್ತು. ಅದನ್ನೇ ತೆರೆದೆ. ಸುಳ್ಯದ ಹತ್ತಿರದ ಜಾಗಗಳ ಹೆಸರುಗಳನ್ನು ನೋಡುತ್ತಿದ್ದಾಗ ತೊಡಿಕಾನ, ಮತ್ಸ್ಯಗಂಧಿ, ದೇವರಗುಂಡಿಯ ಹೆಸರುಗಳು ಕಂಡವು. ಸುಳ್ಯದಿಂದ ಹತ್ತಿರದಲ್ಲೇ ಇದ್ದ ಜಾಗಗಳವು. ಸರಿ ನಡಿ ಹೊರಡೋಣ ಎಂದು ಶರ್ಟು ಪ್ಯಾಂಟು ತೊಟ್ಟು ಜರ್ಕಿನ್ನಿನ ಒಳಜೇಬಿಗೆ ಕ್ಯಾಮೆರಾ, ಮೊಬೈಲನ್ನು ಹಾಕಿ ಜರ್ಕಿನ್ನನ್ನು ಹೆಗಲಿಗೇರಿಸಿ ಬೈಕೇರಿ ಹೊರಟೆ. ದಾರಿ ಕೇಳಲು ರಸ್ತೆಯಲ್ಲಿ ಜನ ಸಂಚಾರವೇ ಆರಂಭವಾಗಿರಲಿಲ್ಲ. ಎಲ್ಲರೂ ಭಾನುವಾರದ ರಜೆಯ ಮೋಜನ್ನು ನಿದ್ರೆಯಲ್ಲಾನಂದಿಸುತ್ತಿರುವಾಗ ನನಗ್ಯಾವ ಹುಕಿ ಇದು? ಎಂದು ನಗೆ ಬಂತು. ಬಸ್ ನಿಲ್ದಾಣದ ಬಳಿ ಹೋಗಿ ಆಟೋದವರನ್ನು ತೊಡಿಕಾನಕ್ಕೆ ಹೋಗುವ ದಾರಿ ಕೇಳಿದೆ. ಮಡಿಕೇರಿಯೆಡೆಗೆ ಹೋಗುವ ರಸ್ತೆಯಲ್ಲೇ ಹೋಗಿ ಅರಂತೋಡುವಿನ ಬಳಿ ಬಲಕ್ಕೆ ಹೊರಳಿ ಐದು ಕಿ.ಮಿ ಕ್ರಮಿಸಿದರೆ ತೊಡಿಕಾನ ಸಿಗುತ್ತದೆ ಎಂದರು.

ಜುಲೈ 27, 2011

25,228 ಪುಟಗಳು ರದ್ದಿಗಾ??!

Individual photos from net edited by author

-->
ಅಶೋಕ್. ಕೆ.ಅರ್
ಪತ್ರಕರ್ತ ಗೆಳೆಯ ಅವಿಗೆ ಹಿಂದೊಮ್ಮೆ ನಿಮಗೆ ಬಿಡಪ್ಪ ಜನ ಸತ್ತರೂ ಖುಷಿಯಾಗ್ತೀರಾ ಬರೆಯೋದಿಕ್ಕೆ ಸರಕು ಸಿಗ್ತು ಅಂತ ರೇಗಿಸಿದ್ದಾಗ “ನೋಡಪ್ಪಾ ಆ್ಯಕ್ಸಿಡೆಂಟ್ ಆಗಿದ್ದು ಕೊಲೆ ಆಗಿದ್ದು ಒಳ್ಳೆ ಘಟನೆ ಅಲ್ಲ ಆದರೆ ಸುದ್ದಿಯ ಸಂಗ್ರಹದ ವಿಚಾರಕ್ಕೆ ಬಂದರೆ ಅದು ಒಳ್ಳೆ ಸುದ್ದಿ” ಎಂದು ಒಂದಷ್ಟು ಖಾರವಾಗೇ ಪ್ರತಿಕ್ರಯಿಸಿದ್ದ. ಸುದ್ದಿಗೂ ಘಟನೆಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದ. ಒಬ್ಬ ಪತ್ರಕರ್ತನಿಗೆ ಒಳ್ಳೆ ಸುದ್ದಿಯಾಗುವ ಇಂಥ ಸಂಗತಿಗಳು ಕೆಟ್ಟ ಘಟನೆಯಾಗಿ ಓದುಗರ ಮನ ತಲುಪಿದರೆ ಆಗ ಆ ಪತ್ರಕರ್ತನನ್ನು ಯಶಸ್ವಿಯೆಂದು ಕರೆಯಬಹುದೇನೋ? ಆದರೆ ಈಗಿನ ದಿನಗಳಲ್ಲಿ ಕೆಟ್ಟ ಘಟನೆಗಳು ಕೂಡ ಓದುಗರಿಗೆ ಕೇವಲ ಸುದ್ದಿಯಾಗಷ್ಟೇ ತಲುಪುತ್ತಿದೆ. ಇದು ಪತ್ರಕರ್ತರ ಸೋಲಾ ಅಥವಾ ಜನರ ಮನಸ್ಸಿನ ಸೂಕ್ಷ್ಮತೆಯ ಮಟ್ಟವೇ ಕಡಿಮೆಯಾಗುತ್ತಿದೆಯಾ?

ಜುಲೈ 22, 2011

ತೊಡಿಕಾನ, ದೇವರಗುಂಡಿ ಮತ್ತು ಸರಕಾರದ ಹುಂಡಿ!!

ಅಶೋಕ್. ಕೆ.ಅರ್
ಒಂದು ಕಡೆ ಎಕ್ಸಪ್ರೆಸ್ ಹೈವೇ,ಬೆಂಗಳೂರು ಮೈಸೂರು  ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ, ಆರು ಲೇನ್ - ಎಂಟು ಲೇನ್ ರಸ್ತೆ, ದೊಡ್ಡ ನಗರಗಳಲ್ಲಿ ಹೆಜ್ಜೆಗೊಂದರಂತೆ ಫ್ಲೈಓವರ್ ಗಳು, ಸಬ್ವೇಗಳು - ಆಹಾ!! ಸಂಪೂರ್ಣ  ಅಭಿವೃದ್ಧಿಯಾಗಿಬಿಟ್ವಲ್ಲ!! ಇನ್ನೊಂದೆಡೆ ಪ್ರಾಚೀನ ಯುಗದಲ್ಯಾವಾಗಲೋ ಟಾರು ಕಂಡಿದ್ದ ರಸ್ತೆಗಳು. ದಪ್ಪ ಜಲ್ಲಿ ಕಲ್ಲಿನ ಮೊನಚಾದ ತುದಿಗಳು ನಮ್ಮ ಸ್ವಾಗತಕ್ಕೆ ಮುಗಿಲೆಡೆಗೆ ಮುಖ ಮಾಡಿ ನಿಂತಿರುವ ರಸ್ತೆಗಳು. ಇಂತಿಪ್ಪ ರಸ್ತೆಗಳನ್ನು ದಾಟಿ ಮುನ್ನಡೆದರೆ ಮತ್ತಷ್ಟು ಹಿಂದಿನ ಯುಗವನ್ನೂ ತೋರಿಸುವ ಮಣ್ಣಿನ ರಸ್ತೆಗಳು. ಮಳೆಗಾಲದಲ್ಲಿ ಕೆಸರು ತುಂಬಿದ ರಸ್ತೆಗಳು.
ತೊಡಿಕಾನದಿಂದ ದೇವರಗುಂಡಿಯೆಡೆಗೆ ಹೋಗುವ ರಸ್ತೆಯಲ್ಲಿ ಸಂಚರಿಸಿದಾಗ ಬಂದ ಭಾವನೆಯಿದು. ಇಂಥ ರಸ್ತೆಗಳನ್ನು ಬಯಲುಸೀಮೆಯಲ್ಲೂ ಕಾಣಬಹುದಾದರೂ ಇಲ್ಲಿ ಅದೂ ಮಳೆಗಾಲದಲ್ಲಿ ಇಂಥ ರಸ್ತೆಗಳಲ್ಲಿ ಸಂಚರಿಸುವುದು ಹೊಸಬರಿಗೆ ಸಾಹಸವೇ ಸರಿ. ಅದೂ ಬೈಕಿನಲ್ಲಿ ಮತ್ತಷ್ಟು ಕಷ್ಟದ ಕೆಲಸ.

ಜುಲೈ 21, 2011

ಭಿನ್ನಹ

ಮನದ ಮೂಲೆಯ
ಕತ್ತಲು ಕೋಣೆಯಾದರೂ ಸರಿಯೇ
ನನಗೊಂದು ಪುಟ್ಟ ಜಾಗವಿರಲಿ.
ನಿನ್ನ ಗರ್ಭದೊಳಗೆನ್ನ
ಬೆಚ್ಚಗೆ ಪೋಷಿಸು
ತಿಂಗಳಅಂತ್ಯಕ್ಕೆ ಹೊರದಬ್ಬಬೇಡ.
ಕಾಡುವ ಬೇಡುವ ಆಸೆಯಿಲ್ಲ
ಒಂದಾಗಬೇಕು
ನಿನ್ನೊಳಗೆ ಒಂದಾಗಬೇಕು .
-ಅಶೋಕ್. ಕೆ.ಅರ್

ಏಪ್ರಿ 25, 2011

ಏಪ್ರಿ 3, 2011

ಏಪ್ರಿ 1, 2011

ಡಿಸೆಂ 5, 2009

ಅಹಂ.

ಅಹಮ್ಮಿನ
ಕೋಟೆಯಲ್ಲಿ
ಅಧಿಪತಿಯಾಗಿ ಮೆರೆವಾಗ
ಸಂಬಂಧಗಳಿಗೆ ಬೆಲೆಸಿಗುವುದೇ?
- ಅಭಿ ಹನಕೆರೆ.

ಸಾವಿನಾಚೆ.

ಸಾವಿನಾಚೆಗೊಂದು
ಬದುಕು ಕಟ್ಟಿಕೊಳ್ಳಿ,
ಅಲ್ಲಿ ಸಾವಿನ ಭಯವಿರುವುದಿಲ್ಲ!!
- ಪ್ರಶಾಂತ್ ಅರಸ್ 

ಉತ್ತರಗಳಿಲ್ಲದ ಪ್ರಶ್ನೆ.

ನದಿ ಹರಿದು
ಸಾಗರ ಸೇರೋದು
ಕಳೆದುಹೊಗೋದು
ಪ್ರೀತಿಯಿಂದಲೋ
ಅಥವಾ
ಅಂತ್ಯ ಸಂಸ್ಕಾರಕ್ಕೋ?
- ವಿನಯ್ ಬಿ. ಎಸ್