ಜುಲೈ 30, 2012
ಜುಲೈ 26, 2012
'ಆ ಅಂಗಡಿ' ಮತ್ತು 'ಈ ಅಂಗಡಿ' ನಡುವೆ...
ಫೇಸ್ ಬುಕ್ಕಿನಲ್ಲಿ ಕೊನೆಯ ಕಂತೆಂಬಂತೆ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್ ರವರು ಪ್ರಜಾವಾಣಿ ತೊರೆಯುತ್ತಿರುವ ಸಂಗತಿ ತಿಳಿಸಿದ್ದಾರೆ! ಪ್ರಜಾವಾಣಿಯನ್ನು ಆ ಅಂಗಡಿಯೆಂದು ಕರೆಯುತ್ತ ಯಡಿಯೂರಪ್ಪನವರನ್ನು ಚೂಪು ಮೀಸೆಯ ಸರದಾರನೆಂದು ಕರೆಯುತ್ತ ಕಾರಣಗಳನ್ನು ಹೇಳಿದ್ದಾರೆ. ಯಾವ ಪಕ್ಷಕ್ಕೂ ಸೇರಿದ್ದಲ್ಲವೆಂಬ ಭಾವನೆ ಮೂಡಿಸಿದ್ದ 'ಕರ್ನಾಟಕದ ವಿಶ್ವಾಸರ್ಹ ದಿನಪತ್ರಿಕೆಯ' ವಿಶ್ವಾಸಾರ್ಹತೆಯನ್ನು ಬೆತ್ತಲು ಮಾಡಿದ್ದಾರೆ. ಖುಷಿಯ ಸಂಗತಿಯೆಂದರೆ ಅವರು ಈ ಅಂಗಡಿಯನ್ನು ಸೇರಲಿದ್ದಾರೆ. 'ನಂಬರ್ ಒನ್' ಈ ಅಂಗಡಿ ವಿಜಯ ಕರ್ನಾಟಕವೇ ತಾನೇ?!!
ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?
ಡಾ. ಅಶೋಕ್. ಕೆ. ಆರ್.
ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ
ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ.
ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ
ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು
ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು
ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್
ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ
ಎಂಬುದನ್ನು ಕಾದುನೋಡಬೇಕಷ್ಟೇ.
ಜುಲೈ 25, 2012
ಮೂರುವರೆ ರುಪಾಯಿಯ ಓದುಗ ಆರೂವರೆ ರುಪಾಯಿಯ ಜಾಹೀರಾತುದಾರ...
ಪ್ರಜಾವಾಣಿಯಿಂದ ನಿವೃತ್ತರಾದ
ವ್ಯಂಗ್ಯಚಿತ್ರಕಾರ ಪಿ.ಮಹಮ್ಮದ್ ರವರು ವ್ಯಂಗ್ಯಚಿತ್ರಕಾರರ ಬವಣೆ, ಹಣ ನೀಡದ ಪತ್ರಿಕಾ ಸಂಸ್ಥೆಗಳಬಗ್ಗೆ ತಮ್ಮ ಅಭಿಪ್ರಾಯವನ್ನು ಫೇಸ್ ಬುಕ್ಕಿನಲ್ಲಿ ಪತ್ರದ ರೂಪದಲ್ಲಿ ಬರೆದುಕೊಂಡಿದ್ದರು.ಅದಕ್ಕೆ ಪ್ರತಿಕ್ರಿಯೆಯಾಗಿ ಪ್ರಜಾವಾಣಿಯ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ಕಿನಲ್ಲಿ
ಕೆಳಗಿನಂತೆ ಬರೆದಿದ್ದಾರೆ.
ಜುಲೈ 22, 2012
ಪ್ರತಿ ಓದಿನಲ್ಲೂ ಹೊಸ ಹೊಳಹು ನೀಡುವ “ಕರ್ವಾಲೋ”
ತೇಜಸ್ವಿಯ ಪುಸ್ತಕಗಳೇ ಹಾಗೆ. ವಿಡಂಬನೆ, ಹಾಸ್ಯ ಪ್ರಸಂಗಗಳು, ಒಂದಷ್ಟು ವ್ಯಂಗ್ಯ – ಇವಿಷ್ಟೂ ಇದ್ದ ಮೇಲೆ ಸರಾಗವಾಗಿ ಓದಿಸಿಕೊಂಡು ಹೋಗುತ್ತದೆಯೆನ್ನುವುದರಲ್ಲಿ ಸಂಶಯವಿಲ್ಲ. ಕೊನೆಯ ಹಾಳೆ ಮಗುಚಿ ನಕ್ಕು ಪುಸ್ತಕವನ್ನು ಕಪಾಟಿಗೆ ಸೇರಿಸಿಯೋ ಅಥವಾ ಸ್ನೇಹಿತರಿಗೆ ಎರವಲು ಕೊಟ್ಟ ನಂತರ ತೇಜಸ್ವಿಯವರ ‘ಕಥೆ’ ಕಾಡಲಾರಂಭಿಸುತ್ತದೆ! ಉಹ್ಞೂ, ನಕ್ಕು ಮರೆಯಲಷ್ಟೇ ಈ ಕೃತಿ ಸೀಮಿತವಾಗಿಲ್ಲ. ನನ್ನರಿವಿಗೆ ಬಾರದ ತಿರುಳಿದೆ ಇದರಲ್ಲಿ ಎಂದೆನ್ನಿಸಲಾರಂಭಿಸುತ್ತದೆ. ಮತ್ತೊಮ್ಮೆ ಓದಲು ತೊಡಗಿ ಒಂದಷ್ಟನ್ನು ತಿಳಿದುಕೊಂಡಂತೆ ಭಾವಿಸಿ ಪುಸ್ತಕ ಮಡುಚಿಟ್ಟರೆ ಮತ್ಯಾವುದೋ ಪಾತ್ರ ಯಾವುದೋ ಸಾಲುಗಳು ನೆನಪಿಗೆ ಬಂದು ಪುನಃ ಪುನಃ ಓದಲು ಪ್ರೇರೇಪಿಸುತ್ತದೆ.
ಜುಲೈ 21, 2012
ಮುದ್ರಣ ಮಾಧ್ಯಮದಲ್ಲಿ ರಾಜಕೀಯ ವ್ಯಂಗ್ಯಚಿತ್ರಕಾರರಿಗೆ ಭವಿಷ್ಯ ಇದೆಯೇ?

ಈ ದುಷ್ಕೃತ್ಯವನ್ನು ಪ್ರಾಯೋಜಿಸಿದವರು – ಮಾಧ್ಯಮವೃಂದ!
- ಡಾ. ಅಶೋಕ್, ಕೆ, ಆರ್
ಪ್ರಶಸ್ತಿ ಪಡೆದ ಕೆವಿನ್ ಚಿತ್ರ |
ಕೆವಿನ್ ಕಾರ್ಟರ್ |
ಅದು
1993ರ ಇಸವಿ. ಧೀರ್ಘಕಾಲೀನ ಬರ ಮತ್ತು ಅಂತರ್ಯುದ್ಧದಿಂದ ಸೂಡಾನ್ ದೇಶ ಬಸವಳಿದಿತ್ತು. ಯು ಎನ್ ನ
ವತಿಯಿಂದ ಕೆವಿನ್ ಕಾರ್ಟರ್ ಎಂಬ ಛಾಯಾವರದಿಗಾರ ಸೂಡಾನ್ ದೇಶದಲ್ಲಿ ಸಂಚರಿಸುತ್ತಿದ್ದ. ಅಲ್ಲಿ ಆತ
ತೆಗೆದ ಒಂದು ಚಿತ್ರಕ್ಕೆ 1994ರಲ್ಲಿ ಪ್ರತಿಷ್ಠಿತ ಪುಲಿಟ್ಜಿರ್ ಪ್ರಶಸ್ತಿ ಲಭಿಸಿತು. ಬರಪೀಡಿತ ಪ್ರದೇಶದ
ಅಪೌಷ್ಟಿಕ ಮಗುವೊಂದು ಆಯಾಸದಿಂದ ತಲೆತಗ್ಗಿಸಿ ಕುಳಿತಿದೆ, ಹಿನ್ನೆಲೆಯಲ್ಲಿ ಆ ಮಗುವಿನ ಸಾವಿಗೆ ಕಾದಿರುವಂತೆ
ರಣಹದ್ದೊಂದು ಕುಳಿತಿರುವ ಚಿತ್ರವದು.
ಜುಲೈ 17, 2012
ಬಡವರ “ಕೊಳಚೆ” ಉಳಿದವರ “ಶುದ್ಧತೆ”
ಸನ್ಮಾನ್ಯ ಶ್ರೀ ಶ್ರೀ ಶ್ರೀ ಪೇಜಾವರ ಸ್ವಾಮಿಗಳಿಗೆ ಸೆಡ್ಡು ಹೊಡೆಯಲು ಮತ್ತೊಬ್ಬ ಹುಟ್ಟಿದ್ದಾನೆ. ಶ್ರೀಗಳು ಮಾಂಸಾಹಾರಿಗಳ ಪಕ್ಕ ಕುಳಿತು ಊಟ ಮಾಡಿದರೆ ಸಸ್ಯಾಹಾರಿ ಬ್ರಾಹ್ಮಣರೂ ಮಾಂಸಾಹಾರಿಗಳಾಗಿಬಿಡುತ್ತಾರೆಂದು ಗಾಬರಿಗೊಂಡಿದ್ದರು. ನಂತರ ತಮ್ಮ ಹೇಳಿಕೆಯ ಬಗ್ಗೆ ಸಮಜಾಯಿಷಿಗಳನ್ನೂ ಕೊಟ್ಟಿದ್ದರು. ಇಂದು ಕರ್ನಾಟಕ ಅನುದಾನರಹಿತ ಶಾಲೆಗಳ ಸಂಘ ಕುಸ್ಮಾದ ಅಧ್ಯಕ್ಷ ಜಿ.ಎಸ್. ಶರ್ಮರವರು ಶಿಕ್ಷಣ ಹಕ್ಕು ಕಾಯ್ದೆಯನ್ನು ವಿರೋಧಿಸುತ್ತ “ಸಮುದ್ರಕ್ಕೆ ಕೊಳಚೆ ನೀರು ಬಂದು ಸೇರಿದರೆ ಇಡೀ ಸಮುದ್ರವೇ ಕೊಳಚೆಯಾಗುತ್ತದೆ. ನೀರು ಯಾವಾಗಲೂ ಶುದ್ಧ ಆಗಿರಬೇಕು. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಸಂಸ್ಕೃತಿ ವಿಭಿನ್ನ. ಬಡ ಮಕ್ಕಳನ್ನು ಶಾಲೆಗೆ ಸೇರಿಸಿಕೊಂಡ ಮರುದಿನವೇ ಉಳಿದ ಪೋಷಕರು ಬಂದು ಮಕ್ಕಳ ವರ್ಗಾವಣೆಗೆ ಪತ್ರ ಕೇಳುವ ಅಪಾಯವಿದೆ.
ಜುಲೈ 16, 2012
ಭ್ರಮೆ ಕಳಚುತ್ತಾ ಭ್ರಮೆಯ ಬೆನ್ನುಹತ್ತಿಸುವ “ಯಾಮಿನಿ”
ಸಣ್ಣಕಥೆಗಳನ್ನು ಕುತೂಹಲ ಕೆರಳಿಸುವಂತೆ, ಮನಮುಟ್ಟುವಂತೆ ಬರೆಯುವ ಜೋಗಿ [ಗಿರೀಶ್]ಯವರ ಕಾದಂಬರಿ ಕೂಡ ಸಣ್ಣಕಥೆಗಳ ಗುಚ್ಛದಂತೆಯೇ ಕಾಣುವುದು ಜೋಗಿಯ ಬಲ; ಜೊತೆಗೆ ದೌರ್ಬಲ್ಯವೂ ಕೂಡ! ಜೋಗಿಯ ‘ಯಾಮಿನಿ’ ಕಾದಂಬರಿಯನ್ನು [ಅಂಕಿತ ಪುಸ್ತಕದಿಂದ 2008ರಲ್ಲಿ ಮೊದಲ ಮುದ್ರಣ] ಮೊದಲ ಪುಟದಿಂದಲೇ ಓದಲಾರಂಭಿಸಬೇಕೆಂದೇನೂ ಇಲ್ಲ! ಯಾವ ಪುಟದಿಂದ ಓದಿದರೂ ಆಸಕ್ತಿ ಕೆರಳಿಸುತ್ತದೆ. ‘ಯಾಮಿನಿ’ ಕಾದಂಬರಿ ಜ್ಞಾನಪೀಠ ವಿಜೇತ ಲೇಖಕ ‘ಚಿರಾಯುವಿನ’ ಬದುಕಿನ ಸ್ಥೂಲ ಚಿತ್ರಣ. ಜ್ಞಾನಪೀಠಿ ಲೇಖಕನಿಂದ ಕನ್ನಡ ಕಾದಂಬರಿಯನ್ನು ಬರೆಸಿ ಅದನ್ನು ಇಂಗ್ಲೀಷಿಗೆ ತರ್ಜುಮೆ ಮಾಡಿ ಲಕ್ಷಾಂತರ ಪ್ರತಿ ಮಾರಾಟ ಮಾಡಿ ಲಾಭ ಮಾಡಿಕೊಳ್ಳುವ ಉದ್ದಿಶ್ಯದಿಂದ ಒಪ್ಪಂದದ ಮುವತ್ತಾರು ಲಕ್ಷದಲ್ಲಿ ಆರು ಲಕ್ಷವನ್ನು ಚಿರಾಯುವಿಗೆ ಮುಂಗಡವಾಗಿ ನೀಡಿ ಬರೆಯುವ ‘ಕೆಲಸಕ್ಕೆ’ ಹಚ್ಚುತ್ತದೆ ಪ್ರಕಾಶಕ ಸಂಸ್ಥೆ. ಕಾದಂಬರಿ ಹೀಗೆ – ಹೀಗೆ ಇದ್ದರೆ ಚೆಂದ ಎಂದು ‘ಬುದ್ಧಿ ಮಾತು’ ಹೇಳಿದ ಪ್ರಕಾಶಕ ಸಂಸ್ಥೆ ಚಿರಾಯುವಿನ ಬರವಣಿಗೆ ನಿಲ್ಲಿಸಬೇಕೆಂಬ ನಿರ್ಧಾರಕ್ಕೆ ಮುನ್ನುಡಿ ಬರೆದುಬಿಡುತ್ತದೆ!
ಜುಲೈ 12, 2012
ಆಡಾಡತ ಆಯುಷ್ಯ ನೋಡನೋಡತ ದಿನಮಾನ....

ಪಿ.ಯು.ಸಿಯಲ್ಲಿ ‘ಯಯಾತಿ’ ನಾಟಕ ಪಠ್ಯವಾಗಿತ್ತು. ಯಯಾತಿ ನಾಟಕ ನಮ್ಮನ್ನು ಪುಳಕಿಗೊಳಿಸಿದ್ದಕ್ಕೆ ಕಾರಣ ಗಿರೀಶ್ ಕಾರ್ನಾಡರೋ ಅಥವಾ ನಮಗೆ ಆ ಪಾಠ ಮಾಡಿದ ಮೇಷ್ಟರೋ [ಅವರ ಹೆಸರು ನೆನಪಾಗಲೊಲ್ಲದು] ಕಾರಣರೋ ಕರಾರುವಕ್ಕಾಗಿ ಹೇಳುವುದು ಕಷ್ಟ. ನಂತರ ಕನ್ನಡದ ಪ್ರಮುಖ ಕಥೆ ಕಾದಂಬರಿಗಳನ್ನು ಓದಲಾರಂಭಿಸಿದೆನಾದರೂ ನಾಟಕಗಳ ಕಡೆಗೆ ಹೆಚ್ಚು ಗಮನಕೊಟ್ಟಿರಲಿಲ್ಲ. ಗೆಳೆಯೊಬ್ಬನಿಂದ ಎರವಲು ಪಡೆದು ಓದಿದ ಟಿ.ಪಿ.ಕೈಲಾಸಂರ ನಾಟಕಗಳು ಅವುಗಳಲ್ಲಿನ ವಿಡಂಬನಾತ್ಮಕ ದೃಷ್ಟಿಕೋನದಿಂದ ಆಕರ್ಷಿಸಿದವು. ಮೈಸೂರಿನಲ್ಲಿ ದಸರಾ ಸಮಯದಲ್ಲಿ ನಾಟಕಗಳನ್ನು ನೋಡಿ ಮತ್ತಷ್ಟು ಆಕರ್ಷಣೆ ಹೆಚ್ಚಿತಾದರೂ ನಾಟಕದ ಪುಸ್ತಕ ‘ಕಾಸು’ ಕೊಟ್ಟು ಕೊಂಡುಕೊಳ್ಳುವಷ್ಟು ಯೋಗ್ಯವಲ್ಲ ಎಂಬ ಅಪನಂಬುಗೆಯಲ್ಲೇ ಇದ್ದೆ. ಆ ಅಪನಂಬುಗೆ ನಿಧಾನವಾಗಿ ಕ್ಷೀಣಿಸಿ ಶೇಕ್ಸ್ ಪಿಯರ್ ನ ಪುಸ್ತಕಗಳನ್ನು ಕೊಂಡೆನಾದರೂ ಓದಿ ಮುಗಿಸಿದ್ದು ಕಿಂಗ್ ಲಿಯರ್ ನಾಟಕವನ್ನು ಮಾತ್ರ!