
ಆಗ 2, 2012
ಎಚ್ಚರ ಪತ್ರಕರ್ತ ಎಚ್ಚರ....!

ಕೆಲವು 'ಬರ'ದ ಪದ್ಯಗಳು
1
ಚುಕ್ಕಿ ಮೂಡುವ ಹೊತ್ತಿನಲ್ಲಿ
ನನ್ನೊಳಗೆ
ಮಿಣುಕು ಹುಳು ಜೀವ ಪಡೆಯುತ್ತವೆ
ಕತ್ತಲಲ್ಲಿ ಬಿದ್ದ ಕಣ್ಣಹನಿ ಉರಿದಂತೆ
ಮತ್ತೆ ಉದುರುತ್ತವೆ
ಈ ಜಗದ ಬೇಗುದಿ ದೊಡ್ಡದು
2
ಯಾವ ಸುದ್ದಿ
ಯಾರು ತಂದರೋ ತಿಳಿದಿಲ್ಲ
ಬತ್ತಿದ ಕೆರೆಯ ಬಿರಿದೆದೆಯ ಶೋಕಸಭೆಗೆ
ನಾವಿಂದು ಕರೆಯದೇ ಬಂದ ಅತಿಥಿ
ನೆತ್ತಿಯ ಮೇಲೆ ಹಾರುತಿದೆ
ಯಾರದೋ ನಗು ತುಂಬಿದ ವಿಮಾನ
3
ಅಳುವ
ಮಗುವಿನ ಕೈಯಲ್ಲಿನ
ನಗುವ ಗೊಂಬೆಯಂತೆ ನೀನು
ಕೋಗಿಲೆಯೊಳಗಿನ ಕೊಳಲು
ಆಲದ ಬಿಳಲು ಮುತ್ತಿರುವ ಎಲೆಯ ಕುಕಿಲು
ನೇಣು ಬಿಗಿದುಕೊಳ್ಳಲು ಬಂದ ಅನ್ನದಾತನ ಅಳಲೂ
4
ಬರದ ನೆಲದ ಬೆಂಕಿ ಹೂ
ಹೇಗೆ ಮುಡಿಯುವುದು
ಖಾಲಿ ಹೊಟ್ಟೆ ಉರಿವ ಕೊಂಡ
ನೀರು ಬತ್ತಿದ ಕಣ್ಣು ಯಾರೋ ಬಿಟ್ಟ ಬಾಣ
ಕಂಡ ಮೋಡಗಳೆಲ್ಲ ಕೆಂಡದುಂಡೆಗಳೇ
ಈ ಬೇಗೆಯೂ ಬೇಕು ಬಿಡು ನಿನ್ನಂತೆ
- ವೀರಣ್ಣ ಮಡಿವಾಳರ್
ಚರ್ಚೆಯಾಗಬೇಕಿರುವುದು ‘ಸಂಸ್ಕೃತಿಯ’ ಬಗ್ಗೆಯಲ್ಲ ಕುಡಿತದ ಬಗ್ಗೆ....
- ಡಾ ಅಶೋಕ್. ಕೆ. ಆರ್
ಮಂಗಳೂರಿನ ಪಡೀಲಿನ ಘಟನೆಯ ನಂತರ ಸಂಸ್ಕೃತಿ, ಸ್ವಾತಂತ್ರ್ಯ, ಸ್ವೇಚ್ಛಾಚಾರದ ಬಗ್ಗೆ ಅಗತ್ಯಕ್ಕಿಂತ ಹೆಚ್ಚಾಗಿಯೇ ಚರ್ಚೆಗಳಾಗುತ್ತಿವೆ. ಇವೆಲ್ಲವುಗಳ ಮಧ್ಯೆ ಜುಲೈ 31ರಂದು ವಿಧಾನಪರಿಷತ್ತಿನಲ್ಲಿ ಸಚಿವರೊಬ್ಬರು ಅಮೋಘ ಹೇಳಿಕೆಯನ್ನಿತ್ತಿದ್ದಾರೆ! “ಅಸೆಂಬ್ಲಿಯಲ್ಲಿರೋ ಸಚಿವರುಗಳೇ ಮದ್ಯಪಾನ ಮಾಡೋದಿಲ್ಲ. ಇನ್ನು ನಮ್ಮ ಇಲಾಖೆಗೆ ಆದಾಯ ಎಲ್ಲಿಂದ ಬರಬೇಕು. ಹೀಗಾಗಿ ಎಲ್ಲರೂ ಮದ್ಯಪಾನ ಮಾಡತೊಡಗಿದರೆ ರಾಜ್ಯ ಬೊಕ್ಕಸದ ಆದಾಯವೂ ಹೆಚ್ಚುತ್ತದೆ” ಎಂದು ಹೇಳಿದ್ದಾರೆ ಅಬಕಾರಿ ಸಚಿವರಾದ ರೇಣುಕಾಚಾರ್ಯ. ಅಲ್ಲಿಗೆ ಸರಕಾರವೇ ಮದ್ಯಪಾನವನ್ನು ಪ್ರೋತ್ಸಾಹಿಸಿದಂತಾಯಿತಲ್ಲವೇ? ಮದ್ಯದಿಂದ ಕಳೆದ ಐದು ವರುಷಗಳಲ್ಲಿ ಬಂದಿರುವ ಆದಾಯದ ವಿವರಗಳನ್ನು ಸದನಕ್ಕೆ ತಿಳಿಸಿದ್ದಾರೆ. 2007 -08ರ ಸಾಲಿನಲ್ಲಿ 4811.93 ಕೋಟಿಯಷ್ಟಿದ್ದ ಆದಾಯ ದುಪ್ಪಟ್ಟುಗೊಂಡು 2011 -12ರಲ್ಲಿ 9827.89 ಕೋಟಿಯಾಗಿದೆ!
ಆಗ 1, 2012
ಪಾಲಿಸಲಾಗದ ಸತ್ಯವೇ “ಚಲಂ”!
![]() |
ಚಲಂ |
ಡಾ ಅಶೋಕ್. ಕೆ. ಆರ್
ಉಪೇಂದ್ರ ನಿರ್ದೇಶಿಸಿದ ‘ಉಪೇಂದ್ರ’ ಚಿತ್ರದ ಆರಂಭದಲ್ಲಿ ಬೇತಾಳನ ಪಾತ್ರಧಾರಿ ‘ಮನಸ್ಸಿನ ಮಾಲಿನ್ಯ’ ಎಂಬ ಪದವನ್ನು ಉಪಯೋಗಿಸುತ್ತಾನೆ. ಹಿಂದೊಮ್ಮೆ ಗೆಳೆಯನೊಡನೆ ಯಾವುದೋ ಚರ್ಚೆ ನಡೆಸುತ್ತಿದ್ದಾಗ ‘ಎಲ್ಲರೊಳಗೂ ಹಾದರದ ಮನಸ್ಸಿರುತ್ತೆ ಕಂಟ್ರೋಲ್ ಮಾಡ್ಕೊಂಡಿರ್ತೀವಿ ಅಷ್ಟೇ!’ ಎಂದು ಹೇಳಿದ್ದೆ. ಮನಸ್ಸಿನಾಳದಲ್ಲಿ ನಮ್ಮೆಲ್ಲರಲ್ಲೂ ಕಲ್ಮಶವೇ ಇರುತ್ತಾ? ನಿಷ್ಕಲ್ಮಶ ಎಂಬ ಪದವೇ ನಿರರ್ಥಕವಾದುದಾ? ಎಂಬ ಪ್ರಶ್ನೆ ಬಹಳಷ್ಟು ಕಾಡಿದ್ದಿದೆ. ಎಲ್ಲರ ಮನದೊಳಗೂ ಕೆಟ್ಟ ಆಲೋಚನೆಗಳು, ಕೆಟ್ಟ ವಿಚಾರಗಳು ಬಂದೇ ಬರುತ್ತದೆಂದು ನನ್ನ ನಂಬಿಕೆ. ನನ್ನದು ನಿಷ್ಕಲ್ಮಶ ಮನಸ್ಸು ಎಂದು ಹೇಳಿಕೊಳ್ಳುವವರ ಬಗ್ಗೆ ಅಸಡ್ಡೆ. ಆದರೆ ಮನಸ್ಸಿನ ಯೋಚನೆ- ಯೋಜನೆಗಳನ್ನೆಲ್ಲ ಕಲ್ಮಶ ನಿಷ್ಕಲ್ಮಶವೆಂದು ಭೇದ ಮಾಡದೆ ಆಚರಣೆಯಲ್ಲಿ ತರುವುದು ಕಷ್ಟಸಾಧ್ಯ. ನೈತಿಕ ಅನೈತಿಕತೆಯ ಪ್ರಶ್ನೆ, ಸಂಭಾವಿತನಾಗಬೇಕೆಂಬ ಹಪಾಹಪಿ, ಸಮಾಜದಲ್ಲೊಂದು ಗೌರವ ಪಡೆಯಬೇಕೆಂಬ ಆಸೆ ಇವೆಲ್ಲವೂ ನಮ್ಮ ಮನದ ಎಷ್ಟೋ ಯೋಚನೆಗಳನ್ನು ಹತ್ತಿಕ್ಕಿಬಿಡುತ್ತವೆ. ಆ ‘ಕೆಟ್ಟ’ ಯೋಚನೆಗಳನ್ನು ತಡೆದುಬಿಟ್ಟೆನಲ್ಲ ಎಂದು ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುತ್ತ ಆತ್ಮರತಿಯಲ್ಲಿಯೇ ಕಳೆದುಹೋಗುತ್ತೀವಿ.
ಉಪೇಂದ್ರ ನಿರ್ದೇಶಿಸಿದ ‘ಉಪೇಂದ್ರ’ ಚಿತ್ರದ ಆರಂಭದಲ್ಲಿ ಬೇತಾಳನ ಪಾತ್ರಧಾರಿ ‘ಮನಸ್ಸಿನ ಮಾಲಿನ್ಯ’ ಎಂಬ ಪದವನ್ನು ಉಪಯೋಗಿಸುತ್ತಾನೆ. ಹಿಂದೊಮ್ಮೆ ಗೆಳೆಯನೊಡನೆ ಯಾವುದೋ ಚರ್ಚೆ ನಡೆಸುತ್ತಿದ್ದಾಗ ‘ಎಲ್ಲರೊಳಗೂ ಹಾದರದ ಮನಸ್ಸಿರುತ್ತೆ ಕಂಟ್ರೋಲ್ ಮಾಡ್ಕೊಂಡಿರ್ತೀವಿ ಅಷ್ಟೇ!’ ಎಂದು ಹೇಳಿದ್ದೆ. ಮನಸ್ಸಿನಾಳದಲ್ಲಿ ನಮ್ಮೆಲ್ಲರಲ್ಲೂ ಕಲ್ಮಶವೇ ಇರುತ್ತಾ? ನಿಷ್ಕಲ್ಮಶ ಎಂಬ ಪದವೇ ನಿರರ್ಥಕವಾದುದಾ? ಎಂಬ ಪ್ರಶ್ನೆ ಬಹಳಷ್ಟು ಕಾಡಿದ್ದಿದೆ. ಎಲ್ಲರ ಮನದೊಳಗೂ ಕೆಟ್ಟ ಆಲೋಚನೆಗಳು, ಕೆಟ್ಟ ವಿಚಾರಗಳು ಬಂದೇ ಬರುತ್ತದೆಂದು ನನ್ನ ನಂಬಿಕೆ. ನನ್ನದು ನಿಷ್ಕಲ್ಮಶ ಮನಸ್ಸು ಎಂದು ಹೇಳಿಕೊಳ್ಳುವವರ ಬಗ್ಗೆ ಅಸಡ್ಡೆ. ಆದರೆ ಮನಸ್ಸಿನ ಯೋಚನೆ- ಯೋಜನೆಗಳನ್ನೆಲ್ಲ ಕಲ್ಮಶ ನಿಷ್ಕಲ್ಮಶವೆಂದು ಭೇದ ಮಾಡದೆ ಆಚರಣೆಯಲ್ಲಿ ತರುವುದು ಕಷ್ಟಸಾಧ್ಯ. ನೈತಿಕ ಅನೈತಿಕತೆಯ ಪ್ರಶ್ನೆ, ಸಂಭಾವಿತನಾಗಬೇಕೆಂಬ ಹಪಾಹಪಿ, ಸಮಾಜದಲ್ಲೊಂದು ಗೌರವ ಪಡೆಯಬೇಕೆಂಬ ಆಸೆ ಇವೆಲ್ಲವೂ ನಮ್ಮ ಮನದ ಎಷ್ಟೋ ಯೋಚನೆಗಳನ್ನು ಹತ್ತಿಕ್ಕಿಬಿಡುತ್ತವೆ. ಆ ‘ಕೆಟ್ಟ’ ಯೋಚನೆಗಳನ್ನು ತಡೆದುಬಿಟ್ಟೆನಲ್ಲ ಎಂದು ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುತ್ತ ಆತ್ಮರತಿಯಲ್ಲಿಯೇ ಕಳೆದುಹೋಗುತ್ತೀವಿ.
ಜುಲೈ 31, 2012
ಒಂದು ತಪ್ಪನ್ನು ಮತ್ತೊಂದು ತಪ್ಪಿನಿಂದ ಸಮರ್ಥಿಸಿಕೊಳ್ಳುತ್ತ....
ಮಂಗಳೂರಿನ ಪಡೀಲಿನಲ್ಲಿ ನಡೆದ ಘಟನೆಯ ಬಗ್ಗೆ ನೀವೀಗಾಗಲೇ ಬಹಳಷ್ಟು ಓದಿ ನೋಡಿರುತ್ತೀರಿ. ಹಿಂದೂ ಜಾಗರಣ ವೇದಿಕೆ ಸಂಸ್ಕೃತಿಯ ಹೆಸರಿನಲ್ಲಿ ನಡೆಸಿದ್ದು ಕ್ಷಮಿಸಲಾಗದ ತಪ್ಪು. ಇದ್ದ ಹುಡುಗರಲ್ಲಿ ಅತಿ ಹೆಚ್ಚು ಹೊಡೆಸಿಕೊಂಡವನು ಮುಸ್ಲಿಮನಂತೆ ಕಾಣುತ್ತಿದ್ದನೆನ್ನುವುದೇ ಇವರ ಪುಂಡಾಟಕ್ಕೆ ಕಾರಣವಾಯಿತಾ? ಆ ಹುಡುಗ ಕೂಡ ದಕ್ಷಿಣ ಕನ್ನಡದಲ್ಲಿ ಬಿಜೆಪಿಯನ್ನು ಹಿಂದಿನಿಂದಲೂ ಬಹಳವಾಗಿ ಬೆಂಬಲಿಸುತ್ತಿರುವ ಹಿಂದು ಧರ್ಮದ ಒಂದು ಜಾತಿಗೆ ಸೇರಿದವನು! ಯಾವುದೇ ಧರ್ಮದ ಮತೀಯವಾದ ಅಪಾಯಕಾರಿ. ದುರದೃಷ್ಟವಶಾತ್ ದಕ್ಷಿಣ ಕನ್ನಡದಲ್ಲಿ ಹಿಂದು ಮುಸ್ಲಿಂ ಸಂಘಟನೆಗಳು ಮತೀಯವಾದದಲ್ಲಿ ತೊಡಗುತ್ತ ದಕ್ಷಿಣ ಕನ್ನಡದ ನೈಜ ಸಮಸ್ಯೆಗಳನ್ನೇ ಮರೆಸುತ್ತಿವೆ. ಈಗ ನಡೆದಿರುವ ಪುಂಡಾಟಿಕೆಗಳಿಗಿಂತಲೂ ಹೆಚ್ಚಿನ ಅಪಾಯಕಾರಿ ಪ್ರವೃತ್ತಿ ಈ ಮತೀಯವಾದಿಗಳನ್ನು ಸಮರ್ಥಿಸಿಕೊಳ್ಳುತ್ತಿರುವ ವಿದ್ಯಾವಂತರೆನ್ನಿಸಿಕೊಂಡವರಲ್ಲಿ ಕಾಣಿಸುತ್ತಿರುವುದು ಬರಲಿರುವ ಕೆಟ್ಟ ದಿನಗಳ ಮುನ್ಸೂಚನೆಯಾ?
ಜುಲೈ 30, 2012
ಹುಬ್ಬಳ್ಳಿ ನಗರದ ಚಾಣಕ್ಯಪುರಿ ರಸ್ತೆಯ ಮ್ಯಾನ್ಹೋಲ್ ವಿಷಾನಿಲ ಸೇವನೆಯಿಂದ ಮೃತಪಟ್ಟ ಇಬ್ಬರ ಸಾವಿನ ಕುರಿತ ಸಪಾಯಿಕರ್ಮಚಾರಿ ಕಾವಲುಸಮಿತಿಯ ಸತ್ಯಶೋಧನಾ ವರದಿ.
ಧರ್ಮ ಸಂಸ್ಕೃತಿ ನಗ್ನತೆ ಸಭ್ಯತೆ ಬುರ್ಖ ದನ ಹಂದಿ ಮಾಂಸ ಎಣ್ಣೆ ಬಾರು ಪಬ್ಬುಗಳ ಬಗ್ಗೆಯೇ ಬರೆಯುತ್ತ ಕೂರುವ ನಮ್ಮಂಥವರ ನಡುವೆ ಇತ್ತೀಚೆಗಷ್ಟೇ ಪಿ.ಸಾಯಿನಾಥ್ ರವರಿಂದ ಕೌಂಟರ್ ಮೀಡಿಯ ಪ್ರಶಸ್ತಿ ಪಡೆದುಕೊಂಡ ದಯಾನಂದ್ ಟಿ.ಕೆರವರು ಮಲದಗುಂಡಿ ಸ್ವಚ್ಛಗೊಳಿಸಲು ಹೋಗಿ ಪ್ರಾಣ ಕಳೆದುಕೊಂಡವರ ಬಗ್ಗೆ ಸತ್ಯಶೋಧನಾ ವರದಿ ಬರೆದಿದ್ದಾರೆ. ಇಂಥ ವಿಪರ್ಯಾಸದ ಸಂಗತಿಗಳು ಕೂಡ ನಮ್ಮ ಭಾರತದ ಸಂಸ್ಕೃತಿಯೇ ಅಲ್ಲವೇ??
ನಾನು ಪತ್ರಕರ್ತನಾಗಿ ಸರಿಯಾಗಿದ್ದೀನಾ ?
ಕಸ್ತೂರಿ ವಾಹಿನಿಯ ವರದಿಗಾರ ನವೀನ್ ಮಂಗಳೂರಿನಲ್ಲಿ ನಡೆದ ದಾಳಿಯನ್ನು ಮೊದಲು ವರದಿ ಮಾಡಿದವರು. ಮಾಧ್ಯಮಗಳ ನಡವಳಿಕೆಯ ಬಗ್ಗೆ ಎಲ್ಲೆಡೆಯೂ ವಿಮರ್ಶೆ ನಡೆಯುತ್ತಿರುವ ಈ ದಿನಗಳಲ್ಲಿ ಸ್ವತಃ ವರದಿಗಾರನೊಬ್ಬನೇ ಸ್ವವಿಮರ್ಶೆ ಮಾಡಿಕೊಂಡಿದ್ದು ಅಪರೂಪ. ಬರೆಯುವ ಕಷ್ಟ ತೆಗೆದುಕೊಂಡು ನವೀನ್ ಶೆಟ್ಟಿಯವರು ಫೇಸ್ ಬುಕ್ಕಿನಲ್ಲಿ ಈ ಕೆಳಗಿನಂತೆ ಬರೆದಿದ್ದಾರೆ. ಮಂಗಳೂರಿನಲ್ಲಿ ನಡೆದ ಘಟನೆಯ ಈ ವಿಸ್ತೃತವಾದ ಬರಹ ಹಿಂದೂ ಸಂಘಟನೆಗಳು, ಪೋಲೀಸರ ಬಗ್ಗೆ ನೂರಾರು ಪ್ರಶ್ನೆಗಳನ್ನು ಮೂಡಿಸುತ್ತದೆ.
ಜುಲೈ 26, 2012
'ಆ ಅಂಗಡಿ' ಮತ್ತು 'ಈ ಅಂಗಡಿ' ನಡುವೆ...
ಫೇಸ್ ಬುಕ್ಕಿನಲ್ಲಿ ಕೊನೆಯ ಕಂತೆಂಬಂತೆ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್ ರವರು ಪ್ರಜಾವಾಣಿ ತೊರೆಯುತ್ತಿರುವ ಸಂಗತಿ ತಿಳಿಸಿದ್ದಾರೆ! ಪ್ರಜಾವಾಣಿಯನ್ನು ಆ ಅಂಗಡಿಯೆಂದು ಕರೆಯುತ್ತ ಯಡಿಯೂರಪ್ಪನವರನ್ನು ಚೂಪು ಮೀಸೆಯ ಸರದಾರನೆಂದು ಕರೆಯುತ್ತ ಕಾರಣಗಳನ್ನು ಹೇಳಿದ್ದಾರೆ. ಯಾವ ಪಕ್ಷಕ್ಕೂ ಸೇರಿದ್ದಲ್ಲವೆಂಬ ಭಾವನೆ ಮೂಡಿಸಿದ್ದ 'ಕರ್ನಾಟಕದ ವಿಶ್ವಾಸರ್ಹ ದಿನಪತ್ರಿಕೆಯ' ವಿಶ್ವಾಸಾರ್ಹತೆಯನ್ನು ಬೆತ್ತಲು ಮಾಡಿದ್ದಾರೆ. ಖುಷಿಯ ಸಂಗತಿಯೆಂದರೆ ಅವರು ಈ ಅಂಗಡಿಯನ್ನು ಸೇರಲಿದ್ದಾರೆ. 'ನಂಬರ್ ಒನ್' ಈ ಅಂಗಡಿ ವಿಜಯ ಕರ್ನಾಟಕವೇ ತಾನೇ?!!
ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?
ಡಾ. ಅಶೋಕ್. ಕೆ. ಆರ್.
ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ
ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ.
ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ
ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು
ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು
ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್
ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ
ಎಂಬುದನ್ನು ಕಾದುನೋಡಬೇಕಷ್ಟೇ.
ಜುಲೈ 25, 2012
ಮೂರುವರೆ ರುಪಾಯಿಯ ಓದುಗ ಆರೂವರೆ ರುಪಾಯಿಯ ಜಾಹೀರಾತುದಾರ...
ಪ್ರಜಾವಾಣಿಯಿಂದ ನಿವೃತ್ತರಾದ
ವ್ಯಂಗ್ಯಚಿತ್ರಕಾರ ಪಿ.ಮಹಮ್ಮದ್ ರವರು ವ್ಯಂಗ್ಯಚಿತ್ರಕಾರರ ಬವಣೆ, ಹಣ ನೀಡದ ಪತ್ರಿಕಾ ಸಂಸ್ಥೆಗಳಬಗ್ಗೆ ತಮ್ಮ ಅಭಿಪ್ರಾಯವನ್ನು ಫೇಸ್ ಬುಕ್ಕಿನಲ್ಲಿ ಪತ್ರದ ರೂಪದಲ್ಲಿ ಬರೆದುಕೊಂಡಿದ್ದರು.ಅದಕ್ಕೆ ಪ್ರತಿಕ್ರಿಯೆಯಾಗಿ ಪ್ರಜಾವಾಣಿಯ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ಕಿನಲ್ಲಿ
ಕೆಳಗಿನಂತೆ ಬರೆದಿದ್ದಾರೆ.