![]() |
ಚಿತ್ರಕೃಪೆ - ಇಂಡಿಯಾ ಟುಡೇ |
ಡಾ ಅಶೋಕ್. ಕೆ. ಆರ್
ಕೆಲವು ದಿನಗಳ ಹಿಂದೆ ವಿಜಯ್ ಮಲ್ಯರವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಭತ್ತು ಲಕ್ಷ ಬೆಲೆಬಾಳುವ ಚಿನ್ನದ ಬಾಗಿಲನ್ನು ದಾನವಾಗಿ ನೀಡಿದ್ದಾರೆ. ತಿಂಗಳುಗಳ ಹಿಂದೆ ಅವರು ಹೊತ್ತಿದ್ದ ಹರಕೆಯಂತೆ ಅದು. ಮತ್ತೊಂದು ಬಾಗಿಲನ್ನು ದಾನವಾಗಿ ನೀಡುತ್ತಾರಂತೆ. ಕಿಂಗ್ ಫಿಷರ್ ಏರ್ ಲೈನ್ಸಿನ ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ನೀಡದ ಮಲ್ಯ ಲಕ್ಷಾಂತರ ರುಪಾಯಿಗಳನ್ನು ಹೀಗೆ ‘ದಾನ’ದ ರೂಪದಲ್ಲಿ ಕೊಟ್ಟಿರುವುದು ಕೆಲವರ ಕಣ್ಣು ಕೆಂಪಗಾಗಿಸಿದೆ. ಇದೇ ದುಡ್ಡನ್ನು ಸಮಾಜದ ಕೆಳಸ್ತರದಲ್ಲಿರುವವರಿಗೆ ನೀಡಬಹುದಿತ್ತಲ್ಲ? ಎಂದೂ ಹಲವರು ಪ್ರಶ್ನಿಸುತ್ತಿದ್ದಾರೆ. ಬಿಡಿ, ಮೊದಲನೆಯದು ಅವರ ವ್ಯವಹಾರಕ್ಕೆ ಸಂಬಂಧಿಸಿದ್ದು, ಎರಡನೆಯದು ಅವರ ಭಕ್ತಿಗೆ ಸಂಬಂಧಿಸಿದ್ದು. ಹರಕೆ ತೀರಿಸುವುದಕ್ಕೆ ಲಕ್ಷಾಂತರ ರುಪಾಯಿ ವ್ಯಯಿಸುವುದು ಅವರ ಮರ್ಜಿ. ಆದರೆ ಅವರೆಲ್ಲಿದ್ದಾರೆ ಹಿಂದೂ ಧರ್ಮ ‘ರಕ್ಷಕರು’, ಪೇಜಾವರ ಸ್ವಾಮಿಗಳು, ಮುಖ್ಯವಾಗಿ ಅವರೆಲ್ಲಿದ್ದಾರೆ ಆ ದೇವರು?!
ಕೆಲವು ದಿನಗಳ ಹಿಂದೆ ವಿಜಯ್ ಮಲ್ಯರವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಭತ್ತು ಲಕ್ಷ ಬೆಲೆಬಾಳುವ ಚಿನ್ನದ ಬಾಗಿಲನ್ನು ದಾನವಾಗಿ ನೀಡಿದ್ದಾರೆ. ತಿಂಗಳುಗಳ ಹಿಂದೆ ಅವರು ಹೊತ್ತಿದ್ದ ಹರಕೆಯಂತೆ ಅದು. ಮತ್ತೊಂದು ಬಾಗಿಲನ್ನು ದಾನವಾಗಿ ನೀಡುತ್ತಾರಂತೆ. ಕಿಂಗ್ ಫಿಷರ್ ಏರ್ ಲೈನ್ಸಿನ ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ನೀಡದ ಮಲ್ಯ ಲಕ್ಷಾಂತರ ರುಪಾಯಿಗಳನ್ನು ಹೀಗೆ ‘ದಾನ’ದ ರೂಪದಲ್ಲಿ ಕೊಟ್ಟಿರುವುದು ಕೆಲವರ ಕಣ್ಣು ಕೆಂಪಗಾಗಿಸಿದೆ. ಇದೇ ದುಡ್ಡನ್ನು ಸಮಾಜದ ಕೆಳಸ್ತರದಲ್ಲಿರುವವರಿಗೆ ನೀಡಬಹುದಿತ್ತಲ್ಲ? ಎಂದೂ ಹಲವರು ಪ್ರಶ್ನಿಸುತ್ತಿದ್ದಾರೆ. ಬಿಡಿ, ಮೊದಲನೆಯದು ಅವರ ವ್ಯವಹಾರಕ್ಕೆ ಸಂಬಂಧಿಸಿದ್ದು, ಎರಡನೆಯದು ಅವರ ಭಕ್ತಿಗೆ ಸಂಬಂಧಿಸಿದ್ದು. ಹರಕೆ ತೀರಿಸುವುದಕ್ಕೆ ಲಕ್ಷಾಂತರ ರುಪಾಯಿ ವ್ಯಯಿಸುವುದು ಅವರ ಮರ್ಜಿ. ಆದರೆ ಅವರೆಲ್ಲಿದ್ದಾರೆ ಹಿಂದೂ ಧರ್ಮ ‘ರಕ್ಷಕರು’, ಪೇಜಾವರ ಸ್ವಾಮಿಗಳು, ಮುಖ್ಯವಾಗಿ ಅವರೆಲ್ಲಿದ್ದಾರೆ ಆ ದೇವರು?!