![]() |
R K Narayan's house in Mysore |
ಡಾ ಅಶೋಕ್ ಕೆ. ಆರ್.
ಆರ್. ಕೆ. ನಾರಯಣ್ ಯಾರಿಗೆ ಸೇರಿದವರು? ಅವರು ಮೂಲತಃ ತಮಿಳಿಗ, ಕರ್ನಾಟಕದ ಮೈಸೂರಿನಲ್ಲೂ ವಾಸಿಸಿದ್ದರು. ಬರೆದಿದ್ದು ತಮಿಳಿನಲ್ಲೂ ಅಲ್ಲ, ಕನ್ನಡದಲ್ಲೂ ಅಲ್ಲ; ನಮ್ಮ ದೇಶದ್ದೇ ಅಲ್ಲದ ಆಂಗ್ಲ ಭಾಷೆಯಲ್ಲಿ. ಇದೊಂದೇ ಕಾರಣಕ್ಕೆ ಅವರನ್ನು ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ ಕೊನೆಗೆ ಭಾರತದವರೇ ಅಲ್ಲ ಎನ್ನಲಾದೀತೆ? ಬರಹಗಳು ಒಂದು ಭಾಷೆ, ರಾಜ್ಯ, ರಾಷ್ಟ್ರಕ್ಕಷ್ಟೇ ಸೀಮಿತವಾದ ಸಂಗತಿಯೇ? ಮನದ ಭಾವನೆ ತುಮುಲಗಳನ್ನು, ಸಮಾಜದ ಜೀವನ ವಿಧಾನವನ್ನು ಬರಹರೂಪದಲ್ಲಿ ಕಟ್ಟಬಯಸುವ ಲೇಖಕನಿಗೆ ತನಗೆ ಹಿಡಿತವಿರುವ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿದ್ದೇ ಇದೆ. ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಮೇಲ್ನೋಟಕ್ಕೆ ಆ ಭಾಷಿಗರಿಗಷ್ಟೇ ಸೀಮಿತವೆಂಬಂತೆ ತೋರಿದರೂ ಅನುವಾದಗಳ ಮುಖಾಂತರ ಅನ್ಯಭಾಷಿಗರನ್ನೂ ತಲುಪುತ್ತದೆ. ರಷಿಯನ್ ಭಾಷೆಯಲ್ಲಿ ಬರೆದ ಲಿಯೋ ಟಾಲ್ ಸ್ಟಾಯ್, ದಸ್ತೋವಸ್ಕಿ ಪ್ರಪಂಚವನ್ನೆಲ್ಲ ತಲುಪಲು ಸಾಧ್ಯಾವಾಗಿದ್ದು ಅನುವಾದದಿಂದ. ತೆಲುಗಿನ ಯಂಡಮೂರಿ ವಿರೇಂದ್ರನಾಥ್ ನಮ್ಮವನೆನಿಸಿದ್ದು ಅನುವಾದದಿಂದ. ಭಾಷೆಗಿಂತ ಬರಹಗಳಲ್ಲಿನ ಮಾನವೀಯತೆ, ಸಾರ್ವತ್ರಿಕತೆಯಷ್ಟೇ ಕೊನೆಗೆ ಮುಖ್ಯವಾಗುಳಿಯುವುದು. ಆರ್. ಕೆ. ನಾರಾಯಣ್ ರ ಬಹುತೇಕ ಕೃತಿಗಳು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರನ್ನೂ ತಲುಪಿದೆ. ಓದಲು ಬಾರದವರಿಗೆ, ಓದಲು ಇಚ್ಛಿಸದವರಿಗೆ ಶಂಕರ್ ನಾಗ್ ರ ಸಮರ್ಥ ನಿರ್ದೇಶನದಲ್ಲಿ ಮೂಡಿಬಂದ ಮಾಲ್ಗುಡಿ ಡೇಸ್ ಧಾರಾವಾಹಿಯ ಮುಖಾಂತರ ಹಿಂದಿ ಅರ್ಥೈಸಿಕೊಳ್ಳುವ ಜನರಿಗೂ ತಲುಪಿದೆ. ಎಲ್ಲರ ಮನಸ್ಸು ತಟ್ಟುವ ನಮ್ಮದೇ ಜೀವನದ ತುಣುಕುಗಳಂತೆ ಕಾಣುವ ನಾರಾಯಣ್ ರ ಕಥೆಗಳು ಭಾಷೆಯನ್ನು ಮೀರಿ ನಮ್ಮನ್ನು ತಲುಪುತ್ತದೆ.
ಆರ್. ಕೆ. ನಾರಯಣ್ ಯಾರಿಗೆ ಸೇರಿದವರು? ಅವರು ಮೂಲತಃ ತಮಿಳಿಗ, ಕರ್ನಾಟಕದ ಮೈಸೂರಿನಲ್ಲೂ ವಾಸಿಸಿದ್ದರು. ಬರೆದಿದ್ದು ತಮಿಳಿನಲ್ಲೂ ಅಲ್ಲ, ಕನ್ನಡದಲ್ಲೂ ಅಲ್ಲ; ನಮ್ಮ ದೇಶದ್ದೇ ಅಲ್ಲದ ಆಂಗ್ಲ ಭಾಷೆಯಲ್ಲಿ. ಇದೊಂದೇ ಕಾರಣಕ್ಕೆ ಅವರನ್ನು ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ ಕೊನೆಗೆ ಭಾರತದವರೇ ಅಲ್ಲ ಎನ್ನಲಾದೀತೆ? ಬರಹಗಳು ಒಂದು ಭಾಷೆ, ರಾಜ್ಯ, ರಾಷ್ಟ್ರಕ್ಕಷ್ಟೇ ಸೀಮಿತವಾದ ಸಂಗತಿಯೇ? ಮನದ ಭಾವನೆ ತುಮುಲಗಳನ್ನು, ಸಮಾಜದ ಜೀವನ ವಿಧಾನವನ್ನು ಬರಹರೂಪದಲ್ಲಿ ಕಟ್ಟಬಯಸುವ ಲೇಖಕನಿಗೆ ತನಗೆ ಹಿಡಿತವಿರುವ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿದ್ದೇ ಇದೆ. ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಮೇಲ್ನೋಟಕ್ಕೆ ಆ ಭಾಷಿಗರಿಗಷ್ಟೇ ಸೀಮಿತವೆಂಬಂತೆ ತೋರಿದರೂ ಅನುವಾದಗಳ ಮುಖಾಂತರ ಅನ್ಯಭಾಷಿಗರನ್ನೂ ತಲುಪುತ್ತದೆ. ರಷಿಯನ್ ಭಾಷೆಯಲ್ಲಿ ಬರೆದ ಲಿಯೋ ಟಾಲ್ ಸ್ಟಾಯ್, ದಸ್ತೋವಸ್ಕಿ ಪ್ರಪಂಚವನ್ನೆಲ್ಲ ತಲುಪಲು ಸಾಧ್ಯಾವಾಗಿದ್ದು ಅನುವಾದದಿಂದ. ತೆಲುಗಿನ ಯಂಡಮೂರಿ ವಿರೇಂದ್ರನಾಥ್ ನಮ್ಮವನೆನಿಸಿದ್ದು ಅನುವಾದದಿಂದ. ಭಾಷೆಗಿಂತ ಬರಹಗಳಲ್ಲಿನ ಮಾನವೀಯತೆ, ಸಾರ್ವತ್ರಿಕತೆಯಷ್ಟೇ ಕೊನೆಗೆ ಮುಖ್ಯವಾಗುಳಿಯುವುದು. ಆರ್. ಕೆ. ನಾರಾಯಣ್ ರ ಬಹುತೇಕ ಕೃತಿಗಳು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರನ್ನೂ ತಲುಪಿದೆ. ಓದಲು ಬಾರದವರಿಗೆ, ಓದಲು ಇಚ್ಛಿಸದವರಿಗೆ ಶಂಕರ್ ನಾಗ್ ರ ಸಮರ್ಥ ನಿರ್ದೇಶನದಲ್ಲಿ ಮೂಡಿಬಂದ ಮಾಲ್ಗುಡಿ ಡೇಸ್ ಧಾರಾವಾಹಿಯ ಮುಖಾಂತರ ಹಿಂದಿ ಅರ್ಥೈಸಿಕೊಳ್ಳುವ ಜನರಿಗೂ ತಲುಪಿದೆ. ಎಲ್ಲರ ಮನಸ್ಸು ತಟ್ಟುವ ನಮ್ಮದೇ ಜೀವನದ ತುಣುಕುಗಳಂತೆ ಕಾಣುವ ನಾರಾಯಣ್ ರ ಕಥೆಗಳು ಭಾಷೆಯನ್ನು ಮೀರಿ ನಮ್ಮನ್ನು ತಲುಪುತ್ತದೆ.