ಜನ 5, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 14



ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ ಭಾಗ 13 ಓದಲು ಇಲ್ಲಿ ಕ್ಲಿಕ್ಕಿಸಿ
ಗೌತಮ್ – ತರಗತಿಯಲ್ಲಿದ್ದ ಎಲ್ಲಾ ಹುಡುಗರಲ್ಲೂ ಅಸೂಯೆ ಹುಟ್ಟಿಸುವಂಥ ವ್ಯಕ್ತಿತ್ವ. ನೋಡ್ಲಿಕ್ಕೆ ಚೆನ್ನಾಗಿದ್ದ ಅನ್ನೋದಕ್ಕಿಂತ ಎಲ್ಲಾ ವಿಷಯಗಳಲ್ಲೂ ಮುಂದು. ಒಂದು ರೀತೀಲಿ ಸಕಲಕಲಾವಲ್ಲಭ. ಹುಡುಗೀರ ಜೊತೆ ಮಾತನಾಡೋದರಲ್ಲಿರಬಹುದು, ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವುದರಲ್ಲಿರಬಹುದು ಎಲ್ಲಾದರಲ್ಲೂ ಮುಂದು. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಸಮಯದಲ್ಲಿ ನಡೆಸಿದ್ದ ಆಶುಭಾಷಣ ಸ್ಪರ್ಧೆ, ಪ್ರಬಂಧ ರಚನೆ, ಸಂಗೀತ, ಡಿಬೇಟ್, ನಾಟಕ ಎಲ್ಲದರಲ್ಲೂ ಮೊದಲ ಸ್ಥಾನ ಗೌತಮನಿಗೆ. ಹುಡುಗಿಯರು ಪ್ರತೀ ವಿಷಯಕ್ಕೂ ‘ಗೌತಮ್ ಗೌತಮ್’ ಅಂತ ಕೂಗುತ್ತಿದ್ದರೆ ಹುಡುಗರೆಲ್ಲಾ ‘ನಮಗೇ ಅದೃಷ್ಟ ಇಲ್ವಲ್ಲಾ ಗುರೂ’ ಎಂದು ಪೇಚಾಡಿಕೊಳ್ಳುತ್ತಿದ್ದರು. ಲೋಕಿಗೂ ಮೊದಮೊದಲು ‘ಛೇ ನಾನು ಯಾವುದರಲ್ಲೂ ಭಾಗವಹಿಸುವುದಿಲ್ಲವಲ್ಲಾ. ನಿಜಕ್ಕೂ ನಾನೊಬ್ಬ ದಂಡಪಿಂಡ’ ಎನ್ನಿಸುತ್ತಿತ್ತು. ಆದರೆ ಪತ್ರಿಕೆಗಳಲ್ಲಿ ಲೇಖನಗಳು ಪ್ರಕಟವಾದಾಗಲೆಲ್ಲ ಈ ಕೀಳರಿಮೆ ಕಡಿಮೆಯಾಗುತ್ತಿತ್ತು.

ಡಿಸೆಂ 31, 2013

ಪುಟ ತಿರುವುವ ಮುನ್ನ



ಡಾ ಅಶೋಕ್ ಕೆ ಆರ್
ಮಾಧ್ಯಮ ಮತ್ತು ‘ಭವಿಷ್ಯಕರ್ತರು’ ಸೃಷ್ಟಿಸಿದ ಪ್ರಳಯದ ‘ಭೀತಿ’ ಅಸ್ತಂಗತವಾಗಿ ಒಂದು ವರುಷ ಕಳೆದು ಹೋಗಿ ಶತಮಾನಗಳಿಂದ ಸಹಜವೆಂಬಂತೆ ಒಪ್ಪಿಕೊಂಡಿದ್ದ ಗುಲಾಮತ್ವದ ಮನಃಸ್ಥಿತಿಯ ಸಮಾಜವನ್ನು  ಪ್ರಳಯರೂಪದಲ್ಲಿ ಬಂದು ಶುದ್ಧೀಕರಿಸಿದ ನೆಲ್ಸನ್ ಮಂಡೇಲಾರ ಸಾವಿನೊಂದಿಗೆ ಮತ್ತೊಂದು ವರುಷ ಉರುಳಿ ಹೋಗಿದೆ. ಹಿಂದಿನ ವರುಷಗಳಿಗೂ ಹೊಸ ವರುಷದ ಬರುವಿಕೆಗಾಗಿ ಕಾಯ್ದಿರುವ 2013ಕ್ಕೂ ಹೆಚ್ಚಿನ ವ್ಯತ್ಯಾಸಗಳಿವೆಯೇ?

ಕಲಿಕಾ ಮಾಧ್ಯಮ ವಿವಾದ

ವೆಂಕಟೇಶ ಮಾಚಕನೂರ, ನಿವೃತ್ತ ಶಿಕ್ಷಣ ಆಯುಕ್ತರು, ಧಾರವಾಡ
(ಕೃಪೆ - ಜಗದೀಶ್ ಕೊಪ್ಪ ರವರ ಫೇಸ್ಬುಕ್ ಪುಟ )
ಪ್ರಾಥಮಿಕ ಶಾಲಾ ಹಂತದಲ್ಲಿ ಮಾತೃಭಾಷೆ ಶಿಕ್ಷಣ ಮಾಧ್ಯಮ ಇರಬೇಕೆಂಬ ಕರ್ನಾಟಕ ಸರ್ಕಾರದ ಆದೇಶದ ವಿವಾದವು ಈಗ ಸುಪ್ರೀಂ ಕೋರ್ಟಿನ ಐವರು ನ್ಯಾಯಮೂರ್ತಿಗನ್ನೊಳಗೊಂಡ ಸಂವಿಧಾನಿಕ ಪೀಠದ ಮುಂದೆ ಜನೇವರಿ 21 ರಿಂದ ವಿಚಾರಣೆಗೆ ಬರಲಿರುವ ವಿಷಯ ಎಲ್ಲರಿಗೂ ಗೊತ್ತಿರಲು ಸಾಕು.

ಡಿಸೆಂ 25, 2013

ನಿರೀಕ್ಷಿತ ಫಲಿತಾಂಶದಲ್ಲಿ ‘ಆಮ್ ಆದ್ಮಿ’ ಜಯಶಾಲಿ



ಡಾ ಅಶೋಕ್ ಕೆ ಆರ್.
ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮುಂದಿನ ವರುಷ ನಡೆಯುವ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಹೊಸ ಹುರುಪಿನಿಂದ ಮತ್ತಷ್ಟು ಆತ್ಮಾವಲೋಕನದಿಂದ ತಯ್ಯಾರಿ ನಡೆಸಲು ಬೇಕಾದ ಮಾರ್ಗದರ್ಶನವನ್ನು ನೀಡಿದೆ ಎಂದರೆ ತಪ್ಪಾಗಲಾರದು. ಕೆಲವರ ಪ್ರಕಾರ ಇದು ಮುಂದಿನ ಫೈನಲ್ ಲೋಕಸಭಾ ಚುನಾವಣಾ ಪೂರ್ವದಲ್ಲಿ ನಡೆದ ಸೆಮಿಫೈನಲ್! ದಕ್ಷಿಣದ ಯಾವೊಂದು ರಾಜ್ಯದಲ್ಲೂ ನಡೆಯದ, ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿರುವ ರಾಜ್ಯಗಳಲ್ಲಿ ನಡೆಯದ ಈ ಚುನಾವಣೆಯನ್ನು ಸೆಮಿಫೈನಲ್ ಎಂದು ಕರೆಯುವುದು ಎಷ್ಟರಮಟ್ಟಿಗೆ ಸರಿ?

ಡಿಸೆಂ 17, 2013

ಭರವಸೆ ಮೂಡಿಸಿದ ಆಮ್ ಆದ್ಮಿಯ ಗೆಲುವು

ವಸಂತ್ ರಾಜು ಎನ್.
ಇತ್ತೀಚಿನ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಅನೇಕ ಅಚ್ಚರಿಗಳಿಗೆ ಕಾರಣವಾಗುವುದರ ಮೂಲಕ ಈ ದೇಶದ ರಾಜಕಾರಣದ ದಿಕ್ಕನ್ನು ಬದಲಿಸುವ ಭರವಸೆಯನ್ನು ಮೂಡಿಸಿದೆ.

ಡಿಸೆಂ 10, 2013

ಕಲ್ಪನಾತ್ಮಕ ಭ್ರಮೆಗಳೆಲ್ಲ ವಾಸ್ತವವಾಗುವ ವಿಷಮ ಘಳಿಗೆ...



ಡಾ ಅಶೋಕ್ ಕೆ ಆರ್
‘Twenty thousand leagues under sea’ – ನಾನು ಓದಿದ ಪ್ರಥಮ ಪಠ್ಯೇತರ ಪುಸ್ತಕ. ಜೂಲಿಸ್ ವರ್ನೆ ರಚನೆಯ ಈ ಫ್ರೆಂಚ್ ಕೃತಿಯಲ್ಲಿ ನಾಟಿಲಸ್ ಎಂಬ ಬೃಹತ್ ಗಾತ್ರದ ಸಮುದ್ರದ ಎಲ್ಲ ಭಾಗಗಳಲ್ಲೂ ಚಲಿಸುವ ಸಾಮರ್ಥ್ಯವಿರುವ ಸಬ್ ಮೆರೀನ್ ಇದೆ; ಸಬ್ ಮೆರೀನ್ ಮೂಲಕ ಸಮುದ್ರದಾಳದ ಚಿತ್ರ ವಿಚಿತ್ರ ವಿಸ್ಮಯಕಾರಿ ಜೀವಿಗಳ ಪರಿಚಯ ಮಾಡಿಸುತ್ತಾನೆ ಲೇಖಕ. ಪುಸ್ತಕ ಓದಿ ಮುಗಿಸುವಷ್ಟರಲ್ಲಿ ಖುದ್ದು ನಾವೇ ಸಮುದ್ರದೊಳಗೆ ಈಜಾಡಿ ಬಂದಂತಹ ಅನುಭವವಾಗುತ್ತದೆ. ಪುಸ್ತಕವನ್ನು ಓದಿ ಮುಗಿಸಿದ ಎಷ್ಟೋ ದಿನಗಳ ಮೇಲೆ ಆ ಇಡೀ ಪುಸ್ತಕ ಕಲ್ಪನೆಯಿಂದ ಮೂಡಿದ್ದು ಎಂಬ ಸತ್ಯ ತಿಳಿಯಿತು!! 1870ರಲ್ಲಿ ಜೂಲಿಸ್ ವರ್ನೆ ಆ ಪುಸ್ತಕ ರಚಿಸಿದಾಗ ‘ನಾಟಿಲಸ್’ ಸಾಮರ್ಥ್ಯದ ಸಬ್ ಮೆರೀನ್ ಇರಲೇ ಇಲ್ಲ! ಪುಸ್ತಕದಲ್ಲಿದ್ದ ಕಲ್ಪಿತ ತಾಂತ್ರಿಕ ವಿವರಗಳನ್ನು ಕಾಲಾಂತರದಲ್ಲಿ ನಿಜಕ್ಕೂ ಅಳವಡಿಸಿಕೊಳ್ಳಲಾಯಿತು! ನ್ಯೂಕ್ಲಿಯರ್ ಇಂಧನ ಮೂಲದಿಂದ ಚಲಿಸಬಲ್ಲ ತನ್ನ ಪ್ರಥಮ ಸಬ್ ಮೆರೀನಿಗೆ ಅಮೆರಿಕ ‘ನಾಟಿಲಸ್’ ಎಂದೇ ನಾಮಕರಣ ಮಾಡಿತು! ಇಷ್ಟೇ ಅಲ್ಲದೆ ಲೇಖಕನ ಕಲ್ಪನೆಯಲ್ಲಿ ಸೃಷ್ಟಿಯಾದ ಅನೇಕ ಜೀವಿಗಳನ್ನು ಹೋಲುವಂತಹ ಸಮುದ್ರಜೀವಿಗಳನ್ನೂ ನಂತರದಲ್ಲಿ ಪತ್ತೆ ಹಚ್ಚಲಾಯಿತು!

ಡಿಸೆಂ 1, 2013

6-5=2 ಚಿತ್ರ ವಿಮರ್ಶೆ

ಡಾ ಅಶೋಕ್ ಕೆ ಆರ್

ಎರಡು ವಾರದ ಮುಂಚೆ 6-5=2 ಎಂಬ ವಿಚಿತ್ರ ಹೆಸರಿನ ಚಿತ್ರದ ಪೋಸ್ಟರನ್ನು ಪತ್ರಿಕೆಗಳಲ್ಲಿ ನೋಡಿ ನಕ್ಕುಬಿಟ್ಟಿದ್ದೆ! ‘ಏನ್ ಕರ್ಮಾರೀ ಏನೇನೋ ಹೆಸರಿಟ್ಟು ಫಿಲ್ಮ್ ತೆಗೀತಾರೆ’ ಎಂದು ನಗಾಡಿದ್ದೆ! ನಾಲ್ಕು ದಿನದ ಹಿಂದೆ ಮತ್ತೆ ಅದೇ ಚಿತ್ರದ ಜಾಹೀರಾತನ್ನು ಪತ್ರಿಕೆಯಲ್ಲಿ ನೋಡಿದಾಗ ಗಮನಿಸಿದೆ, ಸ್ವರ್ಣಲತಾ ಪ್ರೊಡಕ್ಷನ್ಸ್ ಮತ್ತು A video shot by Late Ramesh ಎಂಬೆರಡು ವಾಕ್ಯಗಳನ್ನು ಬಿಟ್ಟರೆ ಜಾಹೀರಾತಿನಲ್ಲಿ ಮತ್ತೇನೂ ಇರಲಿಲ್ಲ! ಅಲಲಾ! ಇದೇನೋ ಹೊಸ ಗಿಮಿಕ್ ಮಾಡ್ತಿದ್ದಾರಲ್ಲ ಈ ಫಿಲಮ್ನೋರು ಎಂಬ ಸಣ್ಣ ಕುತೂಹಲ ಹುಟ್ಟಿತು. ನಿರ್ದೇಶಕರ ಹೆಸರಿಲ್ಲ, ತಂತ್ರಜ್ಞರ ಹೆಸರಿಲ್ಲ, ಕಲಾವಿದರ ಹೆಸರಿಲ್ಲ, ನೈಜ ವೀಡೀಯೋವೊಂದು ದೊರಕಿದ್ದು ಅದನ್ನೇ ಚಿತ್ರಮಂದಿರದಲ್ಲಿ ಪ್ರದರ್ಶಿಸುತ್ತಿದ್ದೇವೆ ಎಂಬ ಸಾಲುಗಳು ಬೇರೆ. ಮ್… ಇವರು ಮಾಡಿರೋ ಗಿಮಿಕ್ಕಿಗಾದರೂ ಚಿತ್ರವನ್ನೊಮ್ಮೆ ನೋಡಬೇಕು ಎಂದು ನಿರ್ಧರಿಸಿದೆ.