ಮಾರ್ಚ್ 19, 2014

ಈ ಅಭ್ಯರ್ಥಿಯ ಒಟ್ಟು ಆಸ್ತಿ ರೂ 750 ಮಾತ್ರ!

ಮುನೀರ್ ಕಾಟಿಪಳ್ಳ
ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭ್ರಷ್ಟಾಚಾರ ವಿರೋಧಿ , ಪ್ರಾಮಾಣಿಕತೆ , ಸರಳತೆ ಮುಂತಾದ ವಿಷಯಗಳು ಗಂಭೀರ ರಾಜಕೀಯ ಚರ್ಚೆಯ ವಿಷಯವಾಗಿದೆ. ಕಳೆದ ಲೋಕಸಭೆಯಲ್ಲಿ ಕೋಟ್ಯಾಧೀಶರುಗಳ ಸಂಖ್ಯೆ ಗಣನೀಯವಾಗಿತ್ತು. ಎಲ್ಲಾ ರಾಜ್ಯಗಳಲ್ಲಿ ವಿಧಾನಸಭೆಗೆ ಆರಿಸಿ ಬರುವವರು ಬಹುಕೋಟಿಯ ಒಡೆಯರು ಆಗಿರುವುದು ಈಗ ಒಂದು ಪದ್ದತಿಯಾಗಿದೆ.

ಮಾರ್ಚ್ 9, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 21

ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ ಭಾಗ 20 ಓದಲು ಇಲ್ಲಿ ಕ್ಲಿಕ್ಕಿಸಿ


ಕೈಯಿಟ್ಟ ವ್ಯಕ್ತಿ ಎ.ಎಸ್.ಐ ರಾಮಸ್ವಾಮಿ!!
“ಉನ್ನದು ಎಂದ ಊರು” (ನಿನ್ನದ್ಯಾವ ಊರು)
“ಮೈಸೂರು” ನಡೆದ ಘಟನೆಗಳಿಂದ ಕೊಂಚ ಅಧೀರನಾಗಿದ್ದ ಲೋಕಿ ಮೆಲ್ಲನೆ ತಗ್ಗಿದ ದನಿಯಲ್ಲಿ ಉತ್ತರಿಸಿದ.
“ತಮಿಳ್ ತೆರಿಯುಮಾ?” (ತಮಿಳು ಬರುತ್ತಾ?)

ಮಾರ್ಚ್ 8, 2014

ಮಹಿಳಾ ಸಮಾನತೆಯಿಂದ ಸರ್ವಾಂಗೀಣ ಅಭಿವೃದ್ಧಿ



ಡಾ ಅಶೋಕ್ ಕೆ. ಆರ್

ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನ. ಮಹಿಳೆಯರ ಬಗೆಗಿನ ಚರ್ಚೆಗಳು, ಮಹಿಳಾ ವಾದ, ಮಹಿಳಾ ಸಮಾನತೆಯ ಬಗ್ಗೆ ರಾಜಕಾರಣಿಗಳ ಅದೇ ಹಳೆಯ ಪುನರಾವರ್ತಿತ ಒಣ ಭಾಷಣಗಳನ್ನು ಕೇಳುವ ಸಮಯ. ಜೊತೆಯಲ್ಲಿಯೇ ಮಹಿಳಾವಾದವನ್ನು ತಪ್ಪಾಗಿ ಅರ್ಥೈಸಿಕೊಂಡು ಆ ತಪ್ಪು ಅರ್ಥೈಸುವಿಕೆಯನ್ನೇ ಜೋರು ದನಿಯಲ್ಲಿ ಹೇಳುವ ಮಹಿಳಾವಾದಿಗಳ ಮಾತನ್ನು ಕೇಳುವ, ಓದುವ ಸಮಯವಿದು. ಹೇಗೆ ಜಾತ್ಯತೀತ, ಸೆಕ್ಯುಲರ್, ದೇಶಪ್ರೇಮ, ಧಾರ್ಮಿಕ ವ್ಯಕ್ತಿ ಎಂಬ ಪದಗಳು ಅದನ್ನು ಉಪಯೋಗಿಸುವವರ, ಅದನ್ನು ಆಚರಿಸುತ್ತೇವೆಂದು ಹೇಳಿಕೊಳ್ಳುವ ಜನರ ಆಷಾಡಿಭೂತತನದಿಂದ ಅಪಭ್ರಂಶಗೊಂಡಿದೆಯೋ ಫೆಮಿನಿಷ್ಟ್ ಪದ ಕೂಡ ಅದೇ ಹಾದಿಯಲ್ಲಿದೆ. ಮಹಿಳಾವಾದವೆಂದರೆ ಪುರುಷ ವಿರೋಧವಷ್ಟೇ ಎಂಬ ಭಾವನೆಯಲ್ಲಿರುವವರು “ಸಮಾನತೆಗಾಗಿ ಮಹಿಳೆಯರ ಹೋರಾಟದ ಹಾದಿ ಒಬ್ಬ ಮಹಿಳಾವಾದಿ ಅಥವಾ ಒಂದು ಸಂಘಟನೆಯಿಂದ ರೂಪುಗೊಂಡಿದ್ದಲ್ಲ, ಮಾನವ ಹಕ್ಕುಗಳಿಗಾಗಿ ಹೋರಾಡುವ ಪ್ರತಿಯೊಬ್ಬನ ಶ್ರಮವೂ ಇದರ ಹಿಂದಿದೆ” ಎಂದು ಹೇಳಿದ ಗ್ಲೋರಿಯಾ ಸ್ಟೀನೆಮ್ ಮಾತುಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

BJP RULES!!

Elections are nearing. Probably Loksabha elections in India was never portrayed like the one we are seeing in this. Instead of being a democratic election's publicity it has become a fight between the two individuals. Here is a small piece of article which i read in facebook. Appears hilarious but unfortunately true - hingyake

ಮಾರ್ಚ್ 7, 2014

ನದಿ ತಿರುಗಿಸುವ ದುಸ್ಸಾಹಸ.....

ಡಾ.ಅಶೋಕ್.ಕೆ.ಆರ್.

ನಾಗರೀಕತೆಗೆ ಮೂಲವಾದ ನದಿಗಳ ಬಗೆಗಿನ ಮನುಷ್ಯನ ನೋಟ ದಿಕ್ಕುತಪ್ಪಿಹೋಗಿದೆ. ಪ್ರಪಂಚದೆಲ್ಲರಿಗಿಂತ ಬುದ್ಧಿವಂತ ಜೀವಿ ಎಂದು ನಮ್ಮ ಬೆನ್ನು ನಾವೇ ತಟ್ಟಿಕೊಂಡರೂ ಪ್ರಕೃತಿಯ ಮುಂದೆ ನಾವೆಲ್ಲರೂ ತೃಣಮಾತ್ರರೆಂಬುದನ್ನು ಮರೆಯಬಾರದು. ಪ್ರಕೃತಿ ಪ್ರತಿಯೊಂದನ್ನೂ ಕಾರಣವಿಲ್ಲದೆ ಮಾಡುವುದಿಲ್ಲ, ಅದು ನದಿಯ ಹರಿವಿನ ಜಾಡಿರಬಹುದು, ನದಿ ಸಮುದ್ರಕ್ಕೆ ಸೇರುವ ಬಗೆಯಿರಬಹುದು ಪ್ರತಿಯೊಂದಕ್ಕೂ ಕಾರಣವಿದ್ದೇ ಇದೆ; ಜೀವಸಂಕುಲವನ್ನು ಪೊರೆಯುವ ಪ್ರಕೃತಿಯ ಪ್ರೀತಿಯ ಸಿಂಚನವಿದೆ. ಇಂತಹ ಪರಿಸರವನ್ನು ಮಲಿನಗೊಳಿಸಿದ ಮೊದಲ ಶ್ರೇಯಸ್ಸು ಶತಶತಮಾನಗಳ ಹಿಂದೆ ಕೃತಕವಾಗಿ ಬೆಂಕಿ ಸೃಷ್ಟಿಸಿದ ಆದಿಮಾನವನದು. ಪ್ರಕೃತಿಯ ವಿರುದ್ಧ ಈಜಲು ತೊಡಗಿದ್ದು ಅಲೆಮಾರಿತನವನ್ನು ತೊರೆದು ಒಂದೆಡೆ ನೆಲೆ ನಿಂತು ವ್ಯವಾಸಾಯ ಆರಂಭಿಸಿದ ತಲೆಮಾರಿನದು. ಅಂದಿನಿಂದ ಇಂದಿನವರೆಗೂ ವಿವಿಧ ರೂಪದಲ್ಲಿ ನಾವೆಲ್ಲರೂ ಪ್ರಕೃತಿಯ ವಿರುದ್ಧ ಈಜುತ್ತಲೇ ಇದ್ದೇವೆ, ನಮ್ಮ ಶಕ್ತಿಗೆ ತಕ್ಕಷ್ಟು ಪರಿಸರ ನಾಶಗೊಳಿಸುತ್ತಲೇ ಸಾಗಿದ್ದೇವೆ.

ಮಾರ್ಚ್ 1, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 20

ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ ಭಾಗ 19 ಓದಲು ಇಲ್ಲಿ ಕ್ಲಿಕ್ಕಿಸಿ

"ಬಾಂಬ್’ ಎಸ್.ಐ ಬಂಧನ!”
ಲೋಕಿ ಸಿಂಚನಾಳ ಬಳಿ ಬಂದು “ಮಧುರೈಗೆ ಹೋಗಲು ಇದು ಸರಿಯಾದ ದಾರಿ ಅಲ್ವಂತೆ? ಕರ್ನಾಟಕ ರಿಜಿಸ್ಟ್ರೇಷನ್ ಇರೋ ಬಸ್ಸನ್ನೇ ಮಾಡಬಹುದಿತ್ತಲ್ವಾ?”
“ಕರ್ನಾಟಕ ರಿಜಿಸ್ಟ್ರೇಷನ್ ಇರೋ ಗಾಡಿ ಮಾಡಿದ್ದರೆ ಆರು ಸಾವಿರ ರೋಡ್ ಟ್ಯಾಕ್ಸ್ ಕಟ್ಟಬೇಕಿತ್ತು ತಮಿಳುನಾಡಿನಲ್ಲಿ. ಅದಿಕ್ಕೆ ಹೋಗೋದು ಸ್ವಲ್ಪ ಲೇಟಾದ್ರೂ ಪರವಾಗಿಲ್ಲ ಅಂತ ಈ ಬಸ್ಸನ್ನೇ ಮಾಡಿದ್ದು”

ಫೆಬ್ರ 22, 2014

Very true (source - seppo.net)

ವಿಶೇಷಗಳಿಲ್ಲದ ನಿರಾಸದಾಯಕವೂ ಅಲ್ಲದ ಕರ್ನಾಟಕ ಬಜೆಟ್.

ಡಾ ಅಶೋಕ್ ಕೆ ಆರ್

            ಮತ್ತೊಂದು ಬಜೆಟ್ಟಿನ ಸಮಯ. ಕಳೆದ ವರುಷ ಚುನಾಯಿತವಾದ ಕಾಂಗ್ರೆಸ್ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಮತ್ತೊಂದು ಬಜೆಟ್ ಮಂಡಿಸಿದೆ. ದಾಖಲೆಯ ಒಂಭತ್ತನೆಯ ಬಾರಿಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ 2014 – 2015ರ ಸಾಲಿನ ಬಜೆಟ್ಟಿನ ಮೇಲೆ ಯಾರಿಗೂ ಅತಿಯಾದ ನಿರೀಕ್ಷೆಗಳೇನಿರಲಿಲ್ಲ. ಇದು ಲೋಕಸಭಾ ಚುನಾವಣೆ ಇರುವ ವರುಷವಾದ್ದರಿಂದ ತೆರಿಗೆಯನ್ನು ಮತ್ತಷ್ಟು ಹೊರೆಯಾಗಿಸುವ ಸಾಧ್ಯತೆ ಕಡಿಮೆಯೆಂಬುದು ಎಲ್ಲರ ಭಾವನೆಯಾಗಿತ್ತು. ಒಂದಷ್ಟು ತೆರಿಗೆ ಕಡಿತ ಮಾಡಿ ಮುಂದಿನ ಚುನಾವಣೆಯಲ್ಲಿ ಒಂದಷ್ಟು ಮತ ಹೆಚ್ಚಿಸಿಕೊಳ್ಳಬಹುದೆಂಬ ಭಾವನೆಯೂ ಇತ್ತು. ಇಡೀ ದೇಶದ ಆರ್ಥಿಕತೆಯೇ ಒಂದಷ್ಟು ಕುಂಟುತ್ತ ತೆವಳುತ್ತ ಸಾಗುತ್ತಿರುವಾಗ ಕರ್ನಾಟಕ ಬಜೆಟ್ಟಿನಲ್ಲಿ ದೂರದೃಷ್ಟಿಯ ಬೃಹತ್ ವ್ಯಾಪ್ತಿಯ ಯೋಜನೆಗಳನ್ನು ನಿರೀಕ್ಷಿಸುವುದು ತಪ್ಪಾದೀತು. ಆದರೂ ಉತ್ತಮ ಹಣಕಾಸು ಸಚಿವರಾಗಿ ಹೆಸರು ಮಾಡಿರುವ ಸಿದ್ಧರಾಮಯ್ಯ ಆರ್ಥಿಕ ಶಿಸ್ತನ್ನು ತಂದು ಒಂದಷ್ಟು ದೂರದೃಷ್ಟಿಯ ಯೋಜನೆಗಳನ್ನು ಘೋಷಿಸಬಹುದೇನೋ ಎಂಬುದು ಕೆಲವರ ನಿರೀಕ್ಷೆಯಾಗಿತ್ತು. ಅತ್ತ ಪರಿಪೂರ್ಣವೂ ಅಲ್ಲದ ಇತ್ತ ಚುನಾವಣೆಯನ್ನಷ್ಟೇ ಗುರಿಯಾಗಿಸಿಕೊಂಡು ತಯಾರಿಸಿರದ ಆಯವ್ಯಯವನ್ನು ಸಿದ್ಧರಾಮಯ್ಯನವರು ಮಂಡಿಸಿದ್ದಾರೆ. ಒಂದಷ್ಟು ಉತ್ತಮ ಯೋಜನೆಗಳು ಇರುವುದಾದರೂ ಸಿದ್ಧರಾಮಯ್ಯನವರಿಂದ ಮತ್ತಷ್ಟು ಮಗದಷ್ಟು ನಿರೀಕ್ಷೆ ಮಾಡಿದ್ದರೆ ತಪ್ಪಲ್ಲ.

ಫೆಬ್ರ 21, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 19


ಡಾ ಅಶೋಕ್ ಕೆ ಆರ್
 ಆದರ್ಶವೇ ಬೆನ್ನು ಹತ್ತಿ .... ಭಾಗ 18 ಓದಲು ಇಲ್ಲಿ ಕ್ಲಿಕ್ಕಿಸಿ
“ನಾಳೆ ಟೂರಿಗೆ ಹೊರಡೋದಿಕ್ಕೆ ಎಲ್ಲಾ ಸಿದ್ಧ ಮಾಡಿಕೊಂಡಾ ಲೋಕಿ?”
“ನಾಳೆ ಸಂಜೆ ಹೊರಡೋದಲ್ವಾ, ನಾಳೆ ಮಧ್ಯಾಹ್ನ ಒಂದು ಮೂರು ಜೊತೆ ಬಟ್ಟೆಗಳನ್ನು ಬ್ಯಾಗಿಗೆ ತುರುಕಿಕೊಂಡು ಬಂದರೆ ಆಯಿತು”.