ಡಾ ಅಶೋಕ್ ಕೆ ಆರ್
ವರುಷದ ಹಿಂದಿನಿಂದಲೇ ಪ್ರಾರಂಭವಾಗಿದ್ದ ಚುನಾವಣಾ ತಯಾರಿಗಳು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ವೇಗೋತ್ಕರ್ಷಕ್ಕೊಳಗಾಗಿವೆ. ಚುನಾವಣಾ ತಯಾರಿಗಳು ಆರಂಭಗೊಂಡ ದಿನದಿಂದಲೂ ಈ ಬಾರಿಯ ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ‘ಸಮರ’ ಎಂದೇ ಬಿಂಬಿಸಲಾಗುತ್ತಿತ್ತು. ಚುನಾವಣೆ ಘೋಷಣೆಯಾದ ನಂತರವಾದರೂ ವಿಷಯಾಧಾರಿತ ಚರ್ಚೆಗಳು ಮುನ್ನೆಲೆಗೆ ಬರದಿರುವುದು ನಮ್ಮ ಪ್ರಜಾಪ್ರಭುತ್ವ ಹಿಡಿಯುತ್ತಿರುವ ಜಾಡನ್ನು ತೋರುತ್ತಿದೆಯೇ? ಈಗಲೂ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಭಾಷಣಗಳಲ್ಲಿ ಕಾಂಗ್ರೆಸ್ ಮತ್ತದರ ನಾಯಕರ ಬಗೆಗಿನ ಅವಹೇಳನಕಾರಿ ಮಾತುಗಳು ಮತ್ತು ಕಾಂಗ್ರೆಸ್ಸಿಗರ ಭಾಷಣಗಳಲ್ಲಿ ನರೇಂದ್ರ ಮೋದಿ ಬಗೆಗಿನ ವ್ಯಂಗ್ಯಮಿಶ್ರಿತ ಕೆಲವೊಮ್ಮೆ ಅಸಂಬದ್ಧ ಮಾತುಗಳೇ ವಿಜೃಂಭಿಸುತ್ತಿದೆಯೇ ಹೊರತು ಅಧಿಕಾರಕ್ಕೆ ಬಂದರೆ ತಾವು ನೀಡಬಹುದಾದ ಆಡಳಿತದ ಮಾದರಿಯ ಬಗೆಗಿನ ವಿಚಾರಗಳು ಚರ್ಚೆಗೊಳಪಡುತ್ತಲೇ ಇಲ್ಲ. ಇವತ್ತಿನ ಚುನಾವಣಾ ಮಾದರಿ ಪ್ರಜಾಪ್ರಭುತ್ವದ ಅಣಕವಾಡುತ್ತಿದೆ.
ವರುಷದ ಹಿಂದಿನಿಂದಲೇ ಪ್ರಾರಂಭವಾಗಿದ್ದ ಚುನಾವಣಾ ತಯಾರಿಗಳು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ವೇಗೋತ್ಕರ್ಷಕ್ಕೊಳಗಾಗಿವೆ. ಚುನಾವಣಾ ತಯಾರಿಗಳು ಆರಂಭಗೊಂಡ ದಿನದಿಂದಲೂ ಈ ಬಾರಿಯ ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ‘ಸಮರ’ ಎಂದೇ ಬಿಂಬಿಸಲಾಗುತ್ತಿತ್ತು. ಚುನಾವಣೆ ಘೋಷಣೆಯಾದ ನಂತರವಾದರೂ ವಿಷಯಾಧಾರಿತ ಚರ್ಚೆಗಳು ಮುನ್ನೆಲೆಗೆ ಬರದಿರುವುದು ನಮ್ಮ ಪ್ರಜಾಪ್ರಭುತ್ವ ಹಿಡಿಯುತ್ತಿರುವ ಜಾಡನ್ನು ತೋರುತ್ತಿದೆಯೇ? ಈಗಲೂ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಭಾಷಣಗಳಲ್ಲಿ ಕಾಂಗ್ರೆಸ್ ಮತ್ತದರ ನಾಯಕರ ಬಗೆಗಿನ ಅವಹೇಳನಕಾರಿ ಮಾತುಗಳು ಮತ್ತು ಕಾಂಗ್ರೆಸ್ಸಿಗರ ಭಾಷಣಗಳಲ್ಲಿ ನರೇಂದ್ರ ಮೋದಿ ಬಗೆಗಿನ ವ್ಯಂಗ್ಯಮಿಶ್ರಿತ ಕೆಲವೊಮ್ಮೆ ಅಸಂಬದ್ಧ ಮಾತುಗಳೇ ವಿಜೃಂಭಿಸುತ್ತಿದೆಯೇ ಹೊರತು ಅಧಿಕಾರಕ್ಕೆ ಬಂದರೆ ತಾವು ನೀಡಬಹುದಾದ ಆಡಳಿತದ ಮಾದರಿಯ ಬಗೆಗಿನ ವಿಚಾರಗಳು ಚರ್ಚೆಗೊಳಪಡುತ್ತಲೇ ಇಲ್ಲ. ಇವತ್ತಿನ ಚುನಾವಣಾ ಮಾದರಿ ಪ್ರಜಾಪ್ರಭುತ್ವದ ಅಣಕವಾಡುತ್ತಿದೆ.