ಆಗ 5, 2014

ಯಾವ ಮಹಾಭಾರತವನ್ನು ಪಠ್ಯವಾಗಿಸಬೇಕು?



ಡಾ ಅಶೋಕ್ ಕೆ ಆರ್
ಸುಪ್ರೀಂಕೋರ್ಟಿನ ನ್ಯಾಯಧೀಶರೊಬ್ಬರು ‘ನಾನೇನಾದರೂ ಸರ್ವಾಧಿಕಾರಿಯಾಗಿದ್ದರೆ ಗೀತೆ ಮತ್ತು ಮಹಾಭಾರತವನ್ನು ಒಂದನೇ ತರಗತಿಯಲ್ಲಿದ್ದಾಗಲೇ ಪಠ್ಯವಾಗಿಸುತ್ತಿದ್ದೆ’ ಎಂಬ ಹಿತನುಡಿದಿದ್ದಾರೆ. ಒಂದು ದೇಶದ, ಹಿಂದು ಎಂಬ ಧರ್ಮದ ಪೌರಾಣಿಕ ಕೃತಿಯೆಂದೆನ್ನಿಸಿಕೊಂಡ ಮಹಾಭಾರತ, ಅದರಲ್ಲಿನ ಪಾತ್ರವರ್ಗದ ಪರಿಚಯ ಮುಂದಿನ ಪೀಳಿಗೆಗೂ ಇರಬೇಕೆಂಬುದು ಸ್ತುತ್ಯಾರ್ಹ. ಗೀತೆ ಮತ್ತು ಭಾರತವಷ್ಟೇ ಯಾಕೆ ಒಳ್ಳೆಯ ಅಂಶಗಳು ಯಾವ ಗೃಂಥದಲ್ಲೇ ಇದ್ದರೂ ಅದನ್ನು ಮಕ್ಕಳು ಓದುವಂತೆ ಪ್ರೇರೇಪಿಸುವುದು ಸರಿಯಾದ ಕ್ರಮವೇ. ಆದರೆ ಮಕ್ಕಳು ತಿಳಿಯುವಂತೆ ಮಾಡುವುದಕ್ಕೂ, ಪಠ್ಯವಾಗಿಸುವುದಕ್ಕೂ ಇರುವ ಅಗಾಧ ವ್ಯತ್ಯಾಸವನ್ನು ಅರಿಯಲು ಸನ್ಮಾನ್ಯ ನ್ಯಾಯಾಧೀಶರಿಗೂ ಸಾಧ್ಯವಾಗಿಲ್ಲ. ಯಾವ ಮಹಾಭಾರತವನ್ನು ಪಠ್ಯವಾಗಿಸಬಹುದು? ಮತ್ತದನ್ನು ನಿರ್ಧರಿಸುವವರು ಯಾರು?

Khushwant Singh

quotes
Khushwant Singh's Delhi

ಆಗ 4, 2014

ಚೀನಾದಲ್ಲಿ ಭ್ರಷ್ಟ ಅಧಿಕಾರಿಗಳ ಆತ್ಮಹತ್ಯೆ!!

ಭಾರತೀಯರು ಬೆಚ್ಚಿ ಬೀಳುವಂತ ಸುದ್ದಿಯೊಂದು ಪಕ್ಕದ ಚೀನಾದಿಂದ ಬಂದಿದೆ! ಇಲ್ಲ ಇಲ್ಲ ಇದು ಗಡಿ ಗಲಾಟೆಯೂ ಅಲ್ಲ, ಯುದ್ಧವೂ ಅಲ್ಲ! ಚೀನ ದೇಶದಲ್ಲಿ ಭ್ರಷ್ಟ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟತೆ ಮಾಡಿ ಸುಸ್ತಾಗಿ ಕೊನೆಗೆ ಈ ಅನಗತ್ಯ ಹೆಚ್ಚುವರಿ ಧನಾಗಮನದಿಂದ ಮನಸ್ಸಾಕ್ಷಿ ಕಲಕಿದಂತಾಗಿ ಮಾಡಿದ ಅನ್ಯಾಯಗಳನ್ನೆಲ್ಲ ನೆನೆದು ಪ್ರಾಯಶ್ಚಿತದ ರೂಪದಲ್ಲಿ ಆತ್ಮಹತ್ಯೆಗೆ ಶರಣಾಗಿಲ್ಲ.

ಜುಲೈ 31, 2014

ತಿರುವುಮುರುವಾದ ವಿಬ್ ಗಯಾರ್ ತನಿಖೆ

stop rape


ಡಾ ಅಶೋಕ್ ಕೆ ಆರ್
“ಆತನಿಗಿನ್ನು ಯಾರೂ ಕೆಲಸ ನೀಡಲಾರರು. ಕಳೆದೆರಡು ವಾರದಿಂದ ಅವನನ್ನು ಕಂಡೇ ಇಲ್ಲ. ಬಡವರಾದ ನಾವು ಪೋಲೀಸರು ಹೊರಿಸಿದ ಸುಳ್ಳು ಆರೋಪಗಳ ವಿರುದ್ಧ ಕಾನೂನಿನ ಮೊರೆಹೋಗುವುದಾದರೂ ಹೇಗೆ?” - ಮುರ್ತಾಝ (ಮುಸ್ತಾಫಾನ ತಂದೆ)

ಅತ್ಯಾಚಾರದ ಮನಸ್ಥಿತಿಯ ಸುತ್ತ



ಡಾ ಅಶೋಕ್ ಕೆ ಆರ್.
ಕಳೆದೊಂದಷ್ಟು ದಿನಗಳಿಂದ ಅತ್ಯಾಚಾರಗಳದ್ದೇ ಸುದ್ದಿ. ಎಲ್ಲ ಸುದ್ದಿ ವಾಹಿನಿಯವರು ನಾ ಮುಂದು ತಾ ಮುಂದು ಎನ್ನುತ್ತ ಅತ್ಯಾಚಾರಗಳ ಬಗ್ಗೆ ವರದಿಗಳನ್ನು ಮಾಡಿದ್ದಾರೆ. ಇಡೀ ಕರ್ನಾಟಕವೇ ಅತ್ಯಾಚಾರಿಗಳ ಕೂಪವಾಗಿಬಿಟ್ಟಿದೆ ಎಂಬ ಅಭಿಪ್ರಾಯ ಮೂಡಿಸಿಬಿಟ್ಟಿವೆ. ‘ರೇಪ್ ಕ್ಯಾಪಿಟಲ್’ ‘ರೇಪಿಸ್ಟ್ ರಾಜ್ಯ’ ಎಂಬ ವಿಷೇಶಣಗಳನ್ನು ಕರ್ನಾಟಕಕ್ಕೆ ನೀಡಿವೆ. ಹೀನಾತಿ ಹೀನ ಕೃತ್ಯಗಳು ಕರ್ನಾಟಕದಲ್ಲಿ ನಡೆದಿರುವುದು ನಿಜ, ಅದನ್ನು ಮಾಧ್ಯಮಗಳು ಸುದ್ದಿ ಮಾಡಬೇಕಿರುವುದೂ ನಿಜ ಆದರೆ ಸುದ್ದಿ ಬಿತ್ತರಿಸುವಾಗ ಅವಶ್ಯವಾಗಿ ಇರಬೇಕಿದ್ದ ಸಂಯಮ ಮಾಯವಾಗಿದೆ. ಕಾರ್ಯಾಂಗ ಎಂದಿನಂತೆ ತುಂಬಾ ಕ್ರಿಯಾಶೀಲವಾಗಿಯೇನೂ ಇಲ್ಲ. ಅತ್ಯಾಚಾರಗಳ ಬಗ್ಗೆ ವರದಿಗಳು ಸರದಿಯ ಮೇಲೆ ಆಗುತ್ತಿರುವಾಗ ನ್ಯಾಯಾಂಗದ ಕಾರ್ಯನಿರ್ವಹಣೆಯ ಬಗ್ಗೆ, ಅತ್ಯಾಚಾರಿಗಳಿಗಿರುವ ಶಿಕ್ಷೆಯ ಪ್ರಮಾಣದ ಬಗ್ಗೆ ಮತ್ತಷ್ಟು ಚರ್ಚೆಯಾಗುತ್ತಿದೆ. ಶಾಸಕಾಂಗ ಎಂದಿನಂತೆ ನಿದ್ರಾವಸ್ಥೆಯಲ್ಲಿದೆ, ದೂರದೃಷ್ಟಿ ಪರಿಹಾರಗಳನ್ನು ರೂಪಿಸಬೇಕಾದ ಶಾಸಕಾಂಗ ಇವತ್ತು ಪ್ರತಿ ಘಟನೆಯನ್ನೂ ತಮ್ಮ ವೈಯಕ್ತಿಕ ಮತ್ತು ಪಕ್ಷದ ರಾಜಕೀಯ ಕಾರಣಕ್ಕೆ ಯಾವ ರೀತಿ ಉಪಯೋಗವಾಗಬಲ್ಲದು ಎಂಬುದನ್ನು ಲೆಕ್ಕ ಹಾಕುವುದಕ್ಕೆ ಸೀಮಿತವಾಗಿಬಿಟ್ಟಿದೆ. ಇನ್ನು ಮಾಧ್ಯಮಗಳಲ್ಲಿ ಪ್ರಾಮುಖ್ಯತೆ ಸಿಗುವ ಘಟನಾವಳಿಗಳಿಗೆ ಮಾತ್ರ ಪ್ರತಿಕ್ರಯಿಸುತ್ತ ಪ್ರತಿಭಟಿಸುತ್ತ ಸಾಗುತ್ತಿರುವ ‘ಜಾಣ ಜನರಾದ’ ನಾವಿದ್ದೀವಿ. ನಮ್ಮೆಲ್ಲರ ಮಧ್ಯೆ ಅತ್ಯಾಚಾರಕ್ಕೊಳಗಾಗುತ್ತಲೇ ಇರುವ ಮಕ್ಕಳ, ಯುವತಿಯರ, ಮಹಿಳೆಯರ, ವೃದ್ಧರ ಆಕ್ರಂದನವಿದೆ.

ಜುಲೈ 30, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 34



ಡಾ ಅಶೋಕ್ ಕೆ ಆರ್  
ಆದರ್ಶವೇ ಬೆನ್ನು ಹತ್ತಿ ಭಾಗ 33 ಓದಲು ಇಲ್ಲಿ ಕ್ಲಿಕ್ಕಿಸಿ
ಸ್ನೇಹಾಳಿಗೆ ಬಂದಿದ್ದ ಪತ್ರವನ್ನು ಓದಿದಳು ಪೂರ್ಣಿಮಾ. ಸಿಂಚನಾ ಕೂಡ ಓದಿದಳು. ಲೋಕಿ ಹೋಗಿದ್ದೆಲ್ಲಿಗೆ ಎಂದು ಈಗ ತಿಳಿಯಿತು. ಸ್ನೇಹ ಪೂರ್ಣಿಮಾಳ ಹೆಗಲನ್ನು ಆಸರೆಯಾಗಿಸಿಕೊಂಡು ಕುಳಿತಿದ್ದಳು. ಯಾರಿಗ್ಯಾರು ಸಮಾಧಾನಿಸಬೇಕೆಂದು ತಿಳಿಯಲಿಲ್ಲ.
“ನಿನಗೆ ಪತ್ರ ಯಾವಾಗ ತಲುಪಿತು ಸ್ನೇಹಾ?”
“ಈಗ ಒಂದರ್ಧ ಘಂಟೆಯಾಯಿತು. ನಿಮಗೆ?”

ಜುಲೈ 28, 2014

ಪುಸ್ತಕ ನಿಷೇಧಿಸುವ 'ಘನಕಾರ್ಯ'

ಮತ್ತೊಂದು ಪುಸ್ತಕ ನಿಷೇಧಕ್ಕೊಳಗಾಗಿದೆ! ಪುಸ್ತಕ ನಿಷೇಧಿಸುವುದು ಕೂಡ ಪ್ರತಿಯೊಂದೂ ರಾಜಕೀಕರಣಗೊಳ್ಳುತ್ತಿರುವ ದಿನಗಳಲ್ಲಿ ವೋಟ್ ಬ್ಯಾಂಕ್ ಪಾಲಿಸಿಯಾಗಿಬಿಡುತ್ತಿರುವುದು ದುರಂತ. ಒಂದು ವರ್ಗದ ಜನಕ್ಕೆ, ಒಂದು ಧರ್ಮದ ಜನಕ್ಕೆ ಇಷ್ಟವಾಗದ ಅಂಶಗಳು ಪುಸ್ತಕದಲ್ಲಿವೆ ಎಂಬುದನ್ನೇ ನೆಪವಾಗಿಟ್ಟುಕೊಂಡು ಪುಸ್ತಕಗಳನ್ನು ನಿಷೇಧಿಸುತ್ತಾ ಸಾಗಿದರೆ ಕೊನೆಗೆ ಓದಲು ಯಾವೊಂದು ಪುಸ್ತಕವೂ ಇರುವುದಿಲ್ಲ.

ಜುಲೈ 25, 2014

ವಿಧಾನಸಭಾ ಚುನಾವಣೆ ಗೆದ್ದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೊದಲ ಸಭೆಯಲ್ಲಿ ದೇವರಾಜ ಅರಸುರವರ ಮಾತುಗಳು.



ನವ, ಯುವ ಮತ್ತು ಹಿರಿಯ ಶಾಸಕರೇ, ನಿಮಗೆಲ್ಲ ಶುಭಾಶಯಗಳು. ಶ್ರೀಮತಿ ಇಂದಿರಾಗಾಂಧಿಯವರಿಗೆ ಮತ್ತು ನನ್ನ ಕಷ್ಟಕಾಲದಲ್ಲಿ ಕೈಹಿಡಿದ ಮತದಾರ ಬಂಧುಗಳಿಗೆ ಅಂತರಂಗದ ನಮಸ್ಕಾರಗಳು. ದಿII ಕೆಂಗಲ್ ಹನುಮಂತಯ್ಯನವರು ಕಟ್ಟಿದ ನಾಡ ಆಡಳಿತದ ಗುಡಿಗೆ ನಿಮಗೆಲ್ಲ ಸ್ವಾಗತ. ನಿಮ್ಮಲ್ಲಿ ಅನೇಕರು ಹೊಸಬರಿದ್ದೀರಿ. ಚಿಕ್ಕವರಿದ್ದೀರಿ. ಆಡಳಿತದ ಅನುಭವದ ಬಯಕೆಗಳನ್ನು ಆಶಿಸುವವರಿದ್ದೀರಿ. ನೀವು ಮತ ಕೇಳಲು ಹೋದಾಗ ಕೆಲವರು ನಿಮ್ಮನ್ನು ವಿರೋಧಿಸಿದ್ದಾರೆ. ನಿಮ್ಮ ಕಾರಿಗೆ ಸಗಣಿ, ಕಲ್ಲು ತೂರಿದ್ದಾರೆ. ಆದರೆ ಅದನ್ನೆಲ್ಲಾ ಮೀರಿ ಮತದಾರ ನಿಮ್ಮನ್ನು ಆಯ್ಕೆ ಮಾಡಿದ್ದಾನೆ.

ಜುಲೈ 24, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 33

ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ ಭಾಗ 32 ಓದಲು ಇಲ್ಲಿ ಕ್ಲಿಕ್ಕಿಸಿ


ಬಸ್ ಶ್ರೀರಂಗಪಟ್ಟಣ ದಾಟಿ ಹಾಸನದ ಕಡೆಗೆ ಪಯಣ ಬೆಳೆಸಿತ್ತು. ‘ಎಂಥಾ ಜೀವನ ಇದು?! ಜೀವನದ ತುಂಬಾ ಅನಿಶ್ಚಿತತೆಯೇ ತುಂಬಿಕೊಂಡಿದೆಯಲ್ಲಾ. ಒಂದು ತಿಂಗಳ ಮುಂಚೆ ಕೀರ್ತನಾ ಯಾರೆಂಬುದೂ ತಿಳಿದಿರಲಿಲ್ಲ. ಭೇಟಿಯಾಗಿದ್ದು ಎರಡೇ ಬಾರಿ. ಎರಡನೇ ಬಾರಿಯಷ್ಟೇ ಇಬ್ಬರ ಮನಗಳೂ ತೆರೆದುಕೊಂಡಿದ್ದು. ಬರೀ ಅಷ್ಟಕ್ಕೆ ನಮ್ಮಿಬ್ಬರ ನಡುವೆ ಎಷ್ಟು ಗಾಢವಾದ ಸಂಬಂಧ ಬೆಳೆದಿದೆ. ಈ ಸಂಬಂಧಕ್ಕೆ ಏನು ಅರ್ಥ? ಏನು ಹೆಸರು? ಎರಡು ಬಾರಿ ಭೇಟಿಯಾದವನನ್ನು ನಂಬಿ ನನ್ನ ಜೊತೆ ಬಂದಿದ್ದಾಳೆಂದರೆ ನಮ್ಮ ಸಂಬಂಧದ ಮೇಲೆ ಆಕೆಗೆ ಎಷ್ಟು ಧೃಡ ನಂಬಿಕೆಯಿರಬೇಕು’ ಬೀಸುವ ಗಾಳಿಗೆ ಮುಖವೊಡ್ಡಿ ಕುಳಿತ ಲೋಕಿ ಯೋಚನೆಗಳಲ್ಲಿ ಮುಳುಗಿದ್ದ. ಕೀರ್ತನಾ ಆತನ ತೊಡೆಯ ಮೇಲೆ ಮಲಗಿದ್ದಳು. ಲೋಕಿ ಯೋಚನೆಗಳಿಂದ ಹೊರಬಂದಿದ್ದು ಕೀರ್ತನಾಳ ಕಣ್ಣೀರಹನಿಗಳು ಪ್ಯಾಂಟನ್ನು ತೋಯಿಸಿದಾಗ.

ಜುಲೈ 17, 2014

ಜನಪ್ರಿಯವೂ ಅಲ್ಲ ಜನಪರವೂ ಅಲ್ಲ

ಹಿಂದಿನ ಸರಕಾರಕ್ಕಿಂತ ಹೊಸತನ್ನೇನಾದರೂ ನೀಡಿದ್ದೇವೆಯೇ?
ಡಾ.ಅಶೋಕ್.ಕೆ.ಆರ್.
ಅಭಿವೃದ್ಧಿಯ ಮಾನದಂಡಗಳು ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತಿರುವಂತೆ ಸರಕಾರಗಳು ಘೋಷಣೆಯ ರೂಪದಲ್ಲಿ ಪ್ರಸ್ತುತಪಡಿಸುವ ಆಯವ್ಯಯಗಳೂ ಕೂಡ ಬದಲಾಗುತ್ತಿವೆ. ಆದರೀ ಬದಲಾವಣೆಗಳಲ್ಲಿ ಎಷ್ಟು ನಿಜಕ್ಕೂ ಜನಪರ – ಪರಿಸರಪರ ಎಂಬುದು ಪ್ರಶ್ನಾರ್ಹ. ಲೋಕಸಭಾ ಚುನಾವಣೆಗೂ ಮುನ್ನ ಕೆಲವೇ ತಿಂಗಳುಗಳಿಗಾಗಿ ಮನಮೋಹನ್ ಸಿಂಗ್ ನೇತೃತ್ವದ ಯು.ಪಿ.ಎ ಸರಕಾರ ಆಯವ್ಯಯ ಮಂಡಿಸಿತ್ತು. ತರುವಾಯ ನಡೆದ ಚುನಾವಣೆಯಲ್ಲಿ ಮೂವತ್ತು ವರುಷಗಳ ನಂತರ ಏಕಪಕ್ಷ ಬಹುಮತ ಪಡೆದು ಮೋದಿ ನೇತೃತ್ವದ ಸರಕಾರ ರಚನೆಯಾಯಿತು. ಕಳೆದು ಹಲವು ವರುಷಗಳಿಂದ ಹಳಿತಪ್ಪಿದ್ದ ಆರ್ಥಿಕತೆ, ಜಾಗತಿಕ ಮತ್ತು ರಾಜಕೀಯ ನಿರ್ಧಾರಗಳಿಂದಾಗಿ ಹೆಚ್ಚುತ್ತಲೇ ಸಾಗಿದ ಮತ್ತು ಸಾಗುತ್ತಿರುವ ಅವಶ್ಯ ವಸ್ತುಗಳ ಬೆಲೆ ಏರಿಕೆ, ಮುಕ್ತ ಮಾರುಕಟ್ಟೆ ನೀತಿಗಳನ್ನು ಒಪ್ಪಿಕೊಂಡ ಮೇಲೆ ದೂರದ ದೇಶವೊಂದರಲ್ಲಿ ನಡೆಯುವ ಸಣ್ಣ – ದೊಡ್ಡ ಘಟನೆಗಳೂ ಕೂಡ ದೇಶದ ಅರ್ಥ ವ್ಯವಸ್ಥೆಯನ್ನು ಅಲುಗಾಡಿಸುವ ಪರಿಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಹೊಸದಾಗಿ ಆಯ್ಕೆಯಾದ ಸರಕಾರಕ್ಕೆ. ಇನ್ನು ಕೆಲವು ತಿಂಗಳುಗಳಿಗಾಗಿ ಆಯವ್ಯಯವನ್ನು ರೂಪಿಸಬೇಕಾದ ಜವಾಬುದಾರಿಯನ್ನು ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ಯಶಸ್ವಿಯಾಗಿ ನಿಭಾಯಿಸಿತೇ? ಉತ್ತರ ಸುಲಭವಲ್ಲ.