ಆಗ 13, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 36

ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ .... ಭಾಗ 35 ಓದಲು ಇಲ್ಲಿ ಕ್ಲಿಕ್ಕಿಸಿ


“ಏನ್ರೀ ಕೀರ್ತನ, ನೀವೂ ನನ್ನ ಜಾತೀನೇ” ಮನೆಯ ಹೊರಗಡೆ ಮುಖ ತೊಳೆಯುತ್ತ ನಿಂತ ಕೀರ್ತನಾಳ ಬಳಿ ಬಂದು ಕೇಳಿದ ಅರುಣ್.

“ನನ್ನ ಜಾತಿ ಯಾವುದು ಅಂತ ನಿಮಗ್ಯಾವಾಗ ತಿಳಿಸಿದೆ”

“ಅಯ್ಯಯ್ಯೋ ಜಾತಿ ಅಂದ್ರೆ ಹುಟ್ಟಿನಿಂದ ಬಂದಿದ್ದಲ್ಲ. ನಾವು ಸೇರಿದ ವೃತ್ತಿಯಿಂದ ಬಂದಿದ್ದು”

ಆಗ 7, 2014

ಓದುವಭ್ಯಾಸ ಹಚ್ಚಿಸಿದ 'ಪ್ರಾಣ್' ಇನ್ನಿಲ್ಲ.

ಒಂದು ಹಂತದ ಓದುವ ಮಟ್ಟ ಮುಟ್ಟಿದ ಮೇಲೆ ನಾವು ಲಿಯೋ ಟಾಲ್ಸ್ಟಾಯ್, ಕುವೆಂಪು, ತೇಜಸ್ವಿ, ಕಾರಂತ, ಕಂಬಾರ, ಭೈರಪ್ಪ, ಶೇಕ್ಸ್ಪಿಯರ್ ಅಂತೆಲ್ಲ ಗಂಭೀರ ಚರ್ಚೆಯನ್ನು ಮಾಡುವವರಂತೆ ನಟಿಸುತ್ತೀವಿ. ನಿಜಕ್ಕೂ ಈ ಮೇಲಿನ ಮತ್ತು ಇನ್ನೂ ಅನೇಕ ಮೇರು ಲೇಖಕರ ಪುಸ್ತಕಗಳನ್ನು ಮೊದಲು ಓದಲಾರಂಭಿಸಿಬಿಟ್ಟಿದ್ದರೆ ಖಂಡಿತವಾಗಿ ಮತ್ತೆ ಜೀವನದಲ್ಲಿ ಪುಸ್ತಕವನ್ನು ಮುಟ್ಟುತ್ತಿರಲಿಲ್ಲ! ಏನ್ ತಲೆ ತಿಂತಾರಪ್ಪ ಇವರೆಲ್ಲ ಎಂಬ ಭಾವದಿಂದ!

ಆಗ 6, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 35

ಡಾ ಅಶೋಕ್ ಕೆ ಆರ್
ಆದರ್ಶವೇ ಬೆನ್ನು ಹತ್ತಿ ಭಾಗ 34 ಓದಲು ಇಲ್ಲಿ ಕ್ಲಿಕ್ಕಿಸಿ


“ನಿಮ್ಮ ಹೆಸರು ಏನಾದ್ರೆ ನನಗೇನು? ನನ್ನಿಂದ ನಿಮಗೇನಾಗಬೇಕು?”
“ನಮ್ಮಿಬ್ಬರನ್ನೂ ನಕ್ಸಲ್ ಸಂಘಟನೆಗೆ ಸೇರಿಸಲು ನೀವು ಸಹಾಯ ಮಾಡಬೇಕು” ಕೀರ್ತನಾ ಕೂಡ ಮೇಲೆದ್ದು ಕೇಳಿದಳು.
“ನನಗೂ ನಕ್ಸಲ್ ಸಂಘಟನೆಗೂ ಏನು ಸಂಬಂಧ? ನಿಮಗ್ಯಾರು ಹೇಳಿದ್ದು ನನಗೆ ನಕ್ಸಲರ ಜೊತೆಗೆ ನಂಟುಂಟೆಂದು. ನಕ್ಸಲರ ಬಗ್ಗೆ ಮಾತನಾಡ್ತ ಇದ್ದೀವೆಂದೇ ಪೋಲೀಸರು ಬಂಧಿಸೋ ಸಾಧ್ಯತೆಗಳಿವೆ. ಮೊದಲು ಇಲ್ಲಿಂದ ಹೊರಡಿ” ‘ನಾನು ನಕ್ಸಲರ ಬೆಂಬಲಿಗ, ಅವರಿಗೆ ದಿನಸಿ ಕಳುಹಿಸ್ತೀನಿ ಅನ್ನೋದು ನನ್ನ ಮನೆಯವರಿಗೇ ಗೊತ್ತಿಲ್ಲ. ದೂರದ ಮೈಸೂರಿನವರಿಗೆ ಹೇಗೆ ತಿಳಿಯಿತು’ ಎಂದು ಮತ್ತಷ್ಟು ಗಾಬರಿಗೊಳ್ಳುತ್ತಾ ಹೇಳಿದ.

ಆಗ 5, 2014

ಯಾವ ಮಹಾಭಾರತವನ್ನು ಪಠ್ಯವಾಗಿಸಬೇಕು?



ಡಾ ಅಶೋಕ್ ಕೆ ಆರ್
ಸುಪ್ರೀಂಕೋರ್ಟಿನ ನ್ಯಾಯಧೀಶರೊಬ್ಬರು ‘ನಾನೇನಾದರೂ ಸರ್ವಾಧಿಕಾರಿಯಾಗಿದ್ದರೆ ಗೀತೆ ಮತ್ತು ಮಹಾಭಾರತವನ್ನು ಒಂದನೇ ತರಗತಿಯಲ್ಲಿದ್ದಾಗಲೇ ಪಠ್ಯವಾಗಿಸುತ್ತಿದ್ದೆ’ ಎಂಬ ಹಿತನುಡಿದಿದ್ದಾರೆ. ಒಂದು ದೇಶದ, ಹಿಂದು ಎಂಬ ಧರ್ಮದ ಪೌರಾಣಿಕ ಕೃತಿಯೆಂದೆನ್ನಿಸಿಕೊಂಡ ಮಹಾಭಾರತ, ಅದರಲ್ಲಿನ ಪಾತ್ರವರ್ಗದ ಪರಿಚಯ ಮುಂದಿನ ಪೀಳಿಗೆಗೂ ಇರಬೇಕೆಂಬುದು ಸ್ತುತ್ಯಾರ್ಹ. ಗೀತೆ ಮತ್ತು ಭಾರತವಷ್ಟೇ ಯಾಕೆ ಒಳ್ಳೆಯ ಅಂಶಗಳು ಯಾವ ಗೃಂಥದಲ್ಲೇ ಇದ್ದರೂ ಅದನ್ನು ಮಕ್ಕಳು ಓದುವಂತೆ ಪ್ರೇರೇಪಿಸುವುದು ಸರಿಯಾದ ಕ್ರಮವೇ. ಆದರೆ ಮಕ್ಕಳು ತಿಳಿಯುವಂತೆ ಮಾಡುವುದಕ್ಕೂ, ಪಠ್ಯವಾಗಿಸುವುದಕ್ಕೂ ಇರುವ ಅಗಾಧ ವ್ಯತ್ಯಾಸವನ್ನು ಅರಿಯಲು ಸನ್ಮಾನ್ಯ ನ್ಯಾಯಾಧೀಶರಿಗೂ ಸಾಧ್ಯವಾಗಿಲ್ಲ. ಯಾವ ಮಹಾಭಾರತವನ್ನು ಪಠ್ಯವಾಗಿಸಬಹುದು? ಮತ್ತದನ್ನು ನಿರ್ಧರಿಸುವವರು ಯಾರು?

Khushwant Singh

quotes
Khushwant Singh's Delhi

ಆಗ 4, 2014

ಚೀನಾದಲ್ಲಿ ಭ್ರಷ್ಟ ಅಧಿಕಾರಿಗಳ ಆತ್ಮಹತ್ಯೆ!!

ಭಾರತೀಯರು ಬೆಚ್ಚಿ ಬೀಳುವಂತ ಸುದ್ದಿಯೊಂದು ಪಕ್ಕದ ಚೀನಾದಿಂದ ಬಂದಿದೆ! ಇಲ್ಲ ಇಲ್ಲ ಇದು ಗಡಿ ಗಲಾಟೆಯೂ ಅಲ್ಲ, ಯುದ್ಧವೂ ಅಲ್ಲ! ಚೀನ ದೇಶದಲ್ಲಿ ಭ್ರಷ್ಟ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟತೆ ಮಾಡಿ ಸುಸ್ತಾಗಿ ಕೊನೆಗೆ ಈ ಅನಗತ್ಯ ಹೆಚ್ಚುವರಿ ಧನಾಗಮನದಿಂದ ಮನಸ್ಸಾಕ್ಷಿ ಕಲಕಿದಂತಾಗಿ ಮಾಡಿದ ಅನ್ಯಾಯಗಳನ್ನೆಲ್ಲ ನೆನೆದು ಪ್ರಾಯಶ್ಚಿತದ ರೂಪದಲ್ಲಿ ಆತ್ಮಹತ್ಯೆಗೆ ಶರಣಾಗಿಲ್ಲ.

ಜುಲೈ 31, 2014

ತಿರುವುಮುರುವಾದ ವಿಬ್ ಗಯಾರ್ ತನಿಖೆ

stop rape


ಡಾ ಅಶೋಕ್ ಕೆ ಆರ್
“ಆತನಿಗಿನ್ನು ಯಾರೂ ಕೆಲಸ ನೀಡಲಾರರು. ಕಳೆದೆರಡು ವಾರದಿಂದ ಅವನನ್ನು ಕಂಡೇ ಇಲ್ಲ. ಬಡವರಾದ ನಾವು ಪೋಲೀಸರು ಹೊರಿಸಿದ ಸುಳ್ಳು ಆರೋಪಗಳ ವಿರುದ್ಧ ಕಾನೂನಿನ ಮೊರೆಹೋಗುವುದಾದರೂ ಹೇಗೆ?” - ಮುರ್ತಾಝ (ಮುಸ್ತಾಫಾನ ತಂದೆ)

ಅತ್ಯಾಚಾರದ ಮನಸ್ಥಿತಿಯ ಸುತ್ತ



ಡಾ ಅಶೋಕ್ ಕೆ ಆರ್.
ಕಳೆದೊಂದಷ್ಟು ದಿನಗಳಿಂದ ಅತ್ಯಾಚಾರಗಳದ್ದೇ ಸುದ್ದಿ. ಎಲ್ಲ ಸುದ್ದಿ ವಾಹಿನಿಯವರು ನಾ ಮುಂದು ತಾ ಮುಂದು ಎನ್ನುತ್ತ ಅತ್ಯಾಚಾರಗಳ ಬಗ್ಗೆ ವರದಿಗಳನ್ನು ಮಾಡಿದ್ದಾರೆ. ಇಡೀ ಕರ್ನಾಟಕವೇ ಅತ್ಯಾಚಾರಿಗಳ ಕೂಪವಾಗಿಬಿಟ್ಟಿದೆ ಎಂಬ ಅಭಿಪ್ರಾಯ ಮೂಡಿಸಿಬಿಟ್ಟಿವೆ. ‘ರೇಪ್ ಕ್ಯಾಪಿಟಲ್’ ‘ರೇಪಿಸ್ಟ್ ರಾಜ್ಯ’ ಎಂಬ ವಿಷೇಶಣಗಳನ್ನು ಕರ್ನಾಟಕಕ್ಕೆ ನೀಡಿವೆ. ಹೀನಾತಿ ಹೀನ ಕೃತ್ಯಗಳು ಕರ್ನಾಟಕದಲ್ಲಿ ನಡೆದಿರುವುದು ನಿಜ, ಅದನ್ನು ಮಾಧ್ಯಮಗಳು ಸುದ್ದಿ ಮಾಡಬೇಕಿರುವುದೂ ನಿಜ ಆದರೆ ಸುದ್ದಿ ಬಿತ್ತರಿಸುವಾಗ ಅವಶ್ಯವಾಗಿ ಇರಬೇಕಿದ್ದ ಸಂಯಮ ಮಾಯವಾಗಿದೆ. ಕಾರ್ಯಾಂಗ ಎಂದಿನಂತೆ ತುಂಬಾ ಕ್ರಿಯಾಶೀಲವಾಗಿಯೇನೂ ಇಲ್ಲ. ಅತ್ಯಾಚಾರಗಳ ಬಗ್ಗೆ ವರದಿಗಳು ಸರದಿಯ ಮೇಲೆ ಆಗುತ್ತಿರುವಾಗ ನ್ಯಾಯಾಂಗದ ಕಾರ್ಯನಿರ್ವಹಣೆಯ ಬಗ್ಗೆ, ಅತ್ಯಾಚಾರಿಗಳಿಗಿರುವ ಶಿಕ್ಷೆಯ ಪ್ರಮಾಣದ ಬಗ್ಗೆ ಮತ್ತಷ್ಟು ಚರ್ಚೆಯಾಗುತ್ತಿದೆ. ಶಾಸಕಾಂಗ ಎಂದಿನಂತೆ ನಿದ್ರಾವಸ್ಥೆಯಲ್ಲಿದೆ, ದೂರದೃಷ್ಟಿ ಪರಿಹಾರಗಳನ್ನು ರೂಪಿಸಬೇಕಾದ ಶಾಸಕಾಂಗ ಇವತ್ತು ಪ್ರತಿ ಘಟನೆಯನ್ನೂ ತಮ್ಮ ವೈಯಕ್ತಿಕ ಮತ್ತು ಪಕ್ಷದ ರಾಜಕೀಯ ಕಾರಣಕ್ಕೆ ಯಾವ ರೀತಿ ಉಪಯೋಗವಾಗಬಲ್ಲದು ಎಂಬುದನ್ನು ಲೆಕ್ಕ ಹಾಕುವುದಕ್ಕೆ ಸೀಮಿತವಾಗಿಬಿಟ್ಟಿದೆ. ಇನ್ನು ಮಾಧ್ಯಮಗಳಲ್ಲಿ ಪ್ರಾಮುಖ್ಯತೆ ಸಿಗುವ ಘಟನಾವಳಿಗಳಿಗೆ ಮಾತ್ರ ಪ್ರತಿಕ್ರಯಿಸುತ್ತ ಪ್ರತಿಭಟಿಸುತ್ತ ಸಾಗುತ್ತಿರುವ ‘ಜಾಣ ಜನರಾದ’ ನಾವಿದ್ದೀವಿ. ನಮ್ಮೆಲ್ಲರ ಮಧ್ಯೆ ಅತ್ಯಾಚಾರಕ್ಕೊಳಗಾಗುತ್ತಲೇ ಇರುವ ಮಕ್ಕಳ, ಯುವತಿಯರ, ಮಹಿಳೆಯರ, ವೃದ್ಧರ ಆಕ್ರಂದನವಿದೆ.

ಜುಲೈ 30, 2014

ಆದರ್ಶವೇ ಬೆನ್ನು ಹತ್ತಿ .... ಭಾಗ 34



ಡಾ ಅಶೋಕ್ ಕೆ ಆರ್  
ಆದರ್ಶವೇ ಬೆನ್ನು ಹತ್ತಿ ಭಾಗ 33 ಓದಲು ಇಲ್ಲಿ ಕ್ಲಿಕ್ಕಿಸಿ
ಸ್ನೇಹಾಳಿಗೆ ಬಂದಿದ್ದ ಪತ್ರವನ್ನು ಓದಿದಳು ಪೂರ್ಣಿಮಾ. ಸಿಂಚನಾ ಕೂಡ ಓದಿದಳು. ಲೋಕಿ ಹೋಗಿದ್ದೆಲ್ಲಿಗೆ ಎಂದು ಈಗ ತಿಳಿಯಿತು. ಸ್ನೇಹ ಪೂರ್ಣಿಮಾಳ ಹೆಗಲನ್ನು ಆಸರೆಯಾಗಿಸಿಕೊಂಡು ಕುಳಿತಿದ್ದಳು. ಯಾರಿಗ್ಯಾರು ಸಮಾಧಾನಿಸಬೇಕೆಂದು ತಿಳಿಯಲಿಲ್ಲ.
“ನಿನಗೆ ಪತ್ರ ಯಾವಾಗ ತಲುಪಿತು ಸ್ನೇಹಾ?”
“ಈಗ ಒಂದರ್ಧ ಘಂಟೆಯಾಯಿತು. ನಿಮಗೆ?”

ಜುಲೈ 28, 2014

ಪುಸ್ತಕ ನಿಷೇಧಿಸುವ 'ಘನಕಾರ್ಯ'

ಮತ್ತೊಂದು ಪುಸ್ತಕ ನಿಷೇಧಕ್ಕೊಳಗಾಗಿದೆ! ಪುಸ್ತಕ ನಿಷೇಧಿಸುವುದು ಕೂಡ ಪ್ರತಿಯೊಂದೂ ರಾಜಕೀಕರಣಗೊಳ್ಳುತ್ತಿರುವ ದಿನಗಳಲ್ಲಿ ವೋಟ್ ಬ್ಯಾಂಕ್ ಪಾಲಿಸಿಯಾಗಿಬಿಡುತ್ತಿರುವುದು ದುರಂತ. ಒಂದು ವರ್ಗದ ಜನಕ್ಕೆ, ಒಂದು ಧರ್ಮದ ಜನಕ್ಕೆ ಇಷ್ಟವಾಗದ ಅಂಶಗಳು ಪುಸ್ತಕದಲ್ಲಿವೆ ಎಂಬುದನ್ನೇ ನೆಪವಾಗಿಟ್ಟುಕೊಂಡು ಪುಸ್ತಕಗಳನ್ನು ನಿಷೇಧಿಸುತ್ತಾ ಸಾಗಿದರೆ ಕೊನೆಗೆ ಓದಲು ಯಾವೊಂದು ಪುಸ್ತಕವೂ ಇರುವುದಿಲ್ಲ.