ಅಕ್ಟೋ 9, 2014

ಬೆಂಕಿ ಹಚ್ಚಲು ಪೊಟ್ಣ ಬರ್ತಿದೆ!


hingyake
ಬೆಂಕಿಪಟ್ಣ

Dr Ashok K R
ದಯಾನಂದ ಟಿ.ಕೆ ನಿರ್ದೇಶನದ ಸ್ಟೀವ್ ಕೌಶಿಕ್ ಸಂಗೀತ ನೀಡಿರುವ ‘ಬೆಂಕಿಪಟ್ಣ’ ಚಿತ್ರದ ಹಾಡುಗಳು ಬಿಡುಗಡೆಗೊಂಡಿವೆ. ದಯಾನಂದರನ್ನು ಮೊದಲು ಕಂಡಿದ್ದು ಕುಪ್ಪಳ್ಳಿಯ ‘ನಾವು ನಮ್ಮಲ್ಲಿ’ ಕಾರ್ಯಕ್ರಮದಲ್ಲಿ. ಅವರ ಪುಸ್ತಕ ‘ರಸ್ತೆ ನಕ್ಷತ್ರ’ ಬಿಡುಗಡೆಯಾಗಿತ್ತು. ನಿಜವೆನ್ನಿಸದ ನೈಜ ಕಥಾನಕಗಳ ಗುಚ್ಛವದು. ಅದ್ಭುತ ಶೈಲಿಯ ನಿರೂಪಣೆಯಿಂದ ಗಮನ ಸೆಳೆದಿತ್ತು. ಅದೇ ಶೈಲಿಯ ಕಂಡರೂ ಕಾಣದೇ ಹೋಗುವ ಜನರ ಕಥಾನಕಗಳು ಈಗ ವಿವಿಧ ದಿನಪತ್ರಿಕೆಗಳಲ್ಲೂ ನಿಯಮಿತವಾಗಿ ಬರುತ್ತಿವೆಯೆನ್ನುವುದು ದಯಾನಂದರ ಶೈಲಿಯ ಪ್ರಭಾವವನ್ನು ತಿಳಿಸುತ್ತದೆ. ಇಂಥ ಅದ್ಭುತ ಕಥೆಗಾರರೊಬ್ಬರು ಇದ್ದಕ್ಕಿದ್ದಂತೆ ಸಿನಿಮಾ ತೆಗೆಯುತ್ತೇನೆಂದು ಘೋಷಿಸಿದಾಗ ಅರೆರೇ! ಎಂದು ಅಚ್ಚರಿಯಾದರೂ ಅವರಲ್ಲಿರುವ ಕಥೆಗಾರನ ಮೇಲಿರುವ ನಂಬುಗೆಯಿಂದ ಚಿತ್ರದ ಬಗೆಗಿನ ನಿರೀಕ್ಷೆಯೂ ಹೆಚ್ಚಿದೆ.
Also read

ಅಕ್ಟೋ 7, 2014

ಮಾತಿನ ಮೋಡಿಯಲ್ಲಿ ಚರ್ಚೆಗೊಳಪಡದ ಸಂಗತಿಗಳು

drug mafia hingyake
ಲಾಬಿಗೆ ಮಣಿದ ಸರ್ಕಾರ?
Dr Ashok K R


ಮಾತು ಬೆಳ್ಳಿ ಮೌನ ಬಂಗಾರ”ವೆಂಬ ಗಾದೆಮಾತಿನ ಮೊದಲರ್ಧದ ಅರ್ಥ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಆಡಳಿತಾವಧಿಯಲ್ಲಿ ಅನುಭವಕ್ಕೆ ಬಂದರೆ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಗಾದೆಮಾತಿನ ಉಳಿದರ್ಧವನ್ನು ಅರ್ಥ ಮಾಡಿಸುವ ಪಣ ತೊಟ್ಟಂತಿದೆ! ಅನಿವಾರ್ಯವಿದ್ದಾಗಲೂ ಮಾತನಾಡದ ಪ್ರಧಾನಿಯನ್ನು ನೋಡಿದ ನಂತರ ಅವಶ್ಯಕತೆಗಿಂತ ಹೆಚ್ಚಾಗಿ ಅದದೇ ಮಾತುಗಳನ್ನು ನೋಡುವ ಸೌಭಾಗ್ಯ ನಮ್ಮದು! ನರೇಂದ್ರ ಮೋದಿ ತಮ್ಮ ಮಾತಿನ ಮೋಡಿಯಿಂದ ಜನತೆಯನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿರುವುದು ಮತ್ತು ತಾವು ಮಾತನಾಡಿದ್ದೆಲ್ಲ ನಿಜವೆಂದು ಕೇಳುಗರು ನಂಬುವಂತೆ ಮಾಡುತ್ತಿರುವುದು ಸುಳ್ಳಲ್ಲ. ಉಳಿದದ್ದೇನೇ ಇರಲಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರಂತೆ ಚಾಣಾಕ್ಷತನದಿಂದ ಮಾಧ್ಯಮವನ್ನು ನಿರ್ವಹಿಸಿದವರನ್ನು ನಾನಂತೂ ನೋಡಿಲ್ಲ. ಪಿ.ಎಮ್.ಓದಿಂದ ಏನು ಸುದ್ದಿ ಬರುತ್ತದೋ ಅದಷ್ಟೇ ಸದ್ದು ಮಾಡುತ್ತಿದೆ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳಲ್ಲಿ. ರಾಜಕೀಯ ಪಕ್ಷದ – ರಾಜಕಾರಣಿಯ ದೃಷ್ಟಿಯಿಂದ ಅವರು ಮಾಡುತ್ತಿರುವುದು ನೂರು ಪ್ರತಿಶತಃ ಸರಿ. ಆದರೀ ಮಾಧ್ಯಮಗಳಿಗೆ ಏನಾಗಿದೆ? ಜನಸಮೂಹದ ಮೇಲೆ ಹೊರೆಯಾಗುವಂತಹ ನಿರ್ಧಾರಗಳನ್ನು ಎನ್.ಡಿ.ಎ ಸರಕಾರ ತೆಗೆದುಕೊಂಡಿರುವುದು ಕೇವಲ ಒಳಪುಟಗಳಲ್ಲಿ ಸಣ್ಣ ವರದಿಯಾಗಿ ಮರೆಯಾಗಿದೆ, ಕೆಲವದರಲ್ಲಿ ಆ ಪುಟ್ಟ ವರದಿಯೂ ಇಲ್ಲ, ಕೆಲವೇ ಕೆಲವು ವಿಶ್ಲೇಷಣಾತ್ಮಕ ವರದಿಗಳನ್ನು ನೀಡಿವೆ. ಇನ್ನು ಮುಂದೆ ಔಷಧಗಳ ಬೆಲೆಗಳ ಮೇಲೆ ನಿಯಂತ್ರಣ ಹೇರುವಂತಿಲ್ಲ ಎಂಬ ಎನ್.ಡಿ.ಎ ಸರಕಾರದ ನಿರ್ಣಯ ಭಾರತದ ಜನರಿಗಷ್ಟೇ ಅಲ್ಲದೆ ಅಭಿವೃದ್ಧಿಶೀಲ ಮತ್ತು ಹಿಂದುಳಿದ ದೇಶಗಳಿಗೆಲ್ಲವೂ ಆಘಾತ ಕೊಡುವಂತದ್ದು.

Also Read
ಜನಪ್ರಿಯವೂ ಅಲ್ಲ ಜನಪರವೂ ಅಲ್ಲ

ಅಕ್ಟೋ 5, 2014

ಎಂ.ಆರ್.ಪಿ.ಎಲ್ ಕಂಪನಿಯ ವಿರುದ್ಧ ಪ್ರತಿಭಟನಾ ಪ್ರದರ್ಶನ

Press Release
ನಾಗರೀಕ ಬಂಧುಗಳೇ,
ಮಂಗಳೂರು ತೈಲಾಗಾರ ನಿರ್ಮಾಣ ಈ ಭಾಗದ ಜನತೆಯ ಕನಸಾಗಿತ್ತು. ಬೃಹತ್ ಕೈಗಾರಿಕೆಯ ಆಗಮನದಿಂದ ಯುವಜನರಿಗೆ ಉದ್ಯೋಗ ದೊರಕುತ್ತದೆ, ಪ್ರದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತದೆ ಎಂಬ ಕನಸಿನೊಂದಿಗೆ ತಮ್ಮ ಫಲವತ್ತಾದ ಭೂಮಿಯನ್ನು ಎಂ.ಆರ್.ಪಿ.ಎಲ್‍ಗೆ ಬಿಟ್ಟು ಕೊಟ್ಟಿದ್ದೇವೆ. ಆದರೆ ನಮ್ಮ ಭೂಮಿ, ನಮ್ಮ ಬೆಂಬಲದೊಂದಿಗೆ ಸ್ಥಾಪನೆಯಾದ ಎಂ.ಆರ್.ಪಿ.ಎಲ್ ಇಲ್ಲಿಯ ಜನತೆಗೆ ನೀಡಿದ್ದೇನು? ಸ್ಥಳೀಯರಿಗೆ ಉದ್ಯೋಗ ನೀಡದೆ ವಂಚಿಸಿದ ಕಂಪನಿ ಇಂದು ಎಸ್.ಇ.ಝಡ್‍ನೊಂದಿಗೆ ಸೇರಿ ಜನತೆಯ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಇಂದು ವಿಸ್ತಾರವಾಗಿ ಬೆಳವಣಿಗೆಯಾಗುತ್ತಿರುವ ಕಂಪನಿಯು ಹಲವು ವಿನಾಶಕಾರಿ ಉತ್ಪನ್ನಗಳನ್ನು ತಯಾರಿಸುತ್ತಿದೆ. ಎರಡನೇ ಹಂತ, ಮೂರನೇ ಹಂತದಲ್ಲಿ ಜೋಕಟ್ಟೆ ಭಾಗದಲ್ಲಿ ಕೋಕ್ ಮತ್ತು ಸಲ್ಫರ್ ಉತ್ಪಾದನೆ ಮಾಡುತ್ತಿರುವುದು ಜನತೆಯ ನೆಮ್ಮದಿಯ ಬದುಕಿಗೆ ನೇರವಾಗಿ ಬೆದರಿಕೆಯೊಡ್ಡಿದೆ.

ಅಕ್ಟೋ 4, 2014

ಮೌನ

ಅಂದು
'ಅವರೆಲ್ಲಾ ಅಲ್ಪಸಂಖ್ಯಾತರನ್ನು ಓಲೈಸುವ ರಾಜಕಾರಣ ಮಾಡುತ್ತಿದ್ದಾರೆ. ಛೀ ಅಸಹ್ಯ' ಎಂದರು. ನನಗೆ ಸಂಬಂಧಪಟ್ಟಿದ್ದಾಗಿರಲಿಲ್ಲ. ಏನೋ ರಾಜಕೀಯ, ಮಾಡಿಕೊಳ್ಳಲಿ ಬಿಡಿ ಎಂದು ಸುಮ್ಮನಿದ್ದೆವು.
ಇಂದು
'ರಾಷ್ಟ್ರೀಯವಾದಿ ಪಕ್ಷದ ನಾಯಕನೊಬ್ಬ ಸರಕಾರೀ ದೂರದರ್ಶನದಲ್ಲಿ ಕಾಣಿಸಿಕೊಂಡ್ರೆ ಏನ್ರೀ ತಪ್ಪು' ಎಂದು ಅಬ್ಬರಿಸಿದರು. ಥೂ...ಓಕ್ಕೊಳ್ಲಿ ಬಿಡಪ್ಪ ಎಂದು ಸುಮ್ಮನಿದ್ದೆವು.
ಮುಂದು
'ಹಿಂದೂ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಜಾತಿಯವರೂ ಜೊತೆಜೊತೆಯಾಗಿ ವಾಸಿಸಿದರೆ ಹೆಂಗೆ? ವರ್ಣಾಶ್ರಮ ವ್ಯವಸ್ಥೆಗೆ ಅವಮಾನಿಸಿದರೆ ದೇಶಕ್ಕೆ ಒಳ್ಳೆಯದಲ್ಲ' ಎಂದು ನಯವಾಗಿ ತಲೆಸವರಿದರು. ಅಂದು ಮತ್ತು ಇಂದು ಸುಮ್ಮನಿದ್ದ ಕಾರಣ ಮಾತನಾಡಲೇನೂ ಉಳಿದಿರಲಿಲ್ಲ. ಗಂಟು ಮೂಟೆ ಕಟ್ಟಲಾರಂಭಿಸಿದೆವು.
Also Readಕಥೆಗಳು

ಅಕ್ಟೋ 3, 2014

ಕಮರಿದ ಕನಸುಗಳ ಕಲ್ಲೂರಿ

Kalloori movie review
ಕಲ್ಲೂರಿ
ಡಾ ಅಶೋಕ್ ಕೆ ಆರ್.
ದೊಡ್ಡ ಮರವೊಂದು ಬಿದ್ದಾಗ ಇಂತಹ ಚಿಕ್ಕ ಪುಟ್ಟ ಘಟನೆಗಳು ಸಹಜ ಎಂದು ಇಂದಿರಾ ಗಾಂಧಿಯ ಹತ್ಯೆಯ ನಂತರ ನಡೆದ ಸಿಖ್ ಹತ್ಯಾಕಾಂಡದ ಬಗ್ಗೆ ಹೇಳಿದ್ದು ರಾಜೀವ್ ಗಾಂಧಿ. ಕ್ರಿಯೆಗೊಂದು ಪ್ರತಿಕ್ರಿಯೆ ಸಹಜ ಎಂಬಭಿಪ್ರಾಯ ಕೇಳಿಬಂದಿದ್ದು ಗೋದ್ರೋತ್ತರದ ದಿನಗಳಲ್ಲಿ ನಡೆದ ಮುಸ್ಲಿಮರನ್ನು ಗುರಿಮಾಡಿಕೊಂಡ ಗಲಭೆಗಳಲ್ಲಿ. ಪ್ರತಿಯೊಂದು ಧಾರ್ಮಿಕ ಅಥವಾ ರಾಜಕೀಯ ಕಾರಣದ ಗಲಭೆಗಳಲ್ಲಿ ‘ಗಲಭೆ ಶುರು ಮಾಡಿದ್ದು ನಾವಲ್ಲ, ನಮ್ಮದೇನಿದ್ದರೂ ಅವರ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ’ ಎಂಬರ್ಥದ ಸಮರ್ಥನೆಗಳಿರುತ್ತವೆ. ಆದರೆ ಗಲಭೆಯ ಕಾವಿನಿಂದ ಸಾಯುವವರು ಬಹಳಷ್ಟು ಪ್ರಕರಣಗಳಲ್ಲಿ ಗಲಭೆಗೆ ಸಂಬಂಧಪಡದವರಾಗಿರುತ್ತಾರೆ. ವಿನಾಕಾರಣವಾಗಿ ತಮ್ಮದೇನೂ ತಪ್ಪಿಲ್ಲದೆ ಸತ್ತೇ ಹೋದ ಮುಗ್ದರ, ಅಮಾಯಕರ ಕಮರಿದ ಕನಸುಗಳ ಬಗೆಗಿನ ಚಿತ್ರ ಬಾಲಾಜಿ ಶಕ್ತಿವೇಲನ್ ನಿರ್ದೇಶನದ “ಕಲ್ಲೂರಿ”.
Also readಮರೀನಾ ಎಂಬ ದೃಶ್ಯಕಾವ್ಯ

ಅಕ್ಟೋ 2, 2014

ವಾಡಿ ಜಂಕ್ಷನ್ .... ಭಾಗ 1


wadi junction


Dr Ashok K R
ಕ್ರಾಸಿಂಗ್
“A patient by name Mr Basavaraju aged 22 years”
‘ಒಂದು ಹಂತದವರೆಗೆ ಹೆಸರು, ದುಡ್ಡು ಎಲ್ಲಾ ನೋಡಿದ ಮೇಲೆ ಮನುಷ್ಯ ಹೊಸತೇನನ್ನೋ ಹುಡುಕಬಯಸೋದು ಸಹಜ’
“comes from a middle class family. He is from”
‘ನಿಮಗೆ ಈ ಸಧ್ಯ ದೇವರು ಎಲ್ಲದರಲ್ಲೂ ಯಶಸ್ಸು ಕೊಟ್ಟಿದ್ದಾನೆ”
“village Hanoor of Gundlupet Taluk. He is an agricultuist by occupation”
‘ಈಗ ಮಾಡಿರೋ ಹೆಸರು ಸಾಲದು, ಮತ್ತಷ್ಟು ಹೆಸರು ಮಾಡಬೇಕೆನ್ನಿಸಿದರೆ ದಾನ ಧರ್ಮ ಮಾಡಿ’
“He presents with compaint of swelling in the right groin region from past 20”
‘ಮಠಕ್ಕೆ ಸೇರಿ ಸನ್ಯಾಸಿ ಜೀವನ ಮಾಡಬೇಕೆನ್ನೋದೂ ನಿಮಗೆ ಹೆಸರು ಮಾಡುವ ಒಂದು’
“years and pain in the swelling from past 7 days”
‘ವಿಧಾನ ಅಲ್ವಾ ಡಾಕ್ಟ್ರೇ! ನಿಮಗೆಷ್ಟೇ ಒಳ್ಳೇ ಸರ್ಜನ್ ಎಂಬ ಹೆಸರಿದ್ದರೂ ಅಂತರಂಗದಲ್ಲಿ ನೀವೇನು ಅನ್ನೋದು ನಿಮಗಿಂತ ಚೆನ್ನಾಗಿ ತಿಳಿದಿರೋರು ಬೇರೆಯವರಿರಲಿಕ್ಕಿಲ್ಲ. ನನ್ನ ಧ್ಯಾನದ ಸಮಯ ಈಗ. ನೀವಿನ್ನು....’
“ಮುಂಡಾಮೋಚ್ತು” ತನಗೇ ಎಂಬಂತೆ ಶ್ರವಣ್ ಹೇಳಿಕೊಂಡನಾದರೂ ಎದುರಿಗಿದ್ದ ಹತ್ತು ಜನ ವಿದ್ಯಾರ್ಥಿಗಳಿಗದು ಕೇಳಿಸಿತ್ತು. Case present ಮಾಡುತ್ತಿದ್ದ ವಿದ್ಯಾರ್ಥಿನಿ ಗಾಬರಿಯಾಗಿ “ಸರ್” ಎಂದಳು. ಉಳಿದವರು ಒಬ್ಬರೊಬ್ಬರ ಮುಖ ನೋಡಿದರು. ಹಿಂದೆ ನಿಂತವರು ನಕ್ಕರೇನೋ ಎನ್ನಿಸಿತು ಶ್ರವಂತ್‍ಗೆ.

ಸೆಪ್ಟೆಂ 30, 2014

ಡಾ ಎನ್ ಜಗದೀಶ್ ಕೊಪ್ಪ: ಬಿಳಿ ಸಾಹೇಬನ ಭಾರತ - ಜಿಮ್ ಕಾರ್ಬೆಟ್ ನ ಮಾನವೀಯ ಮುಖ


jim corbet kannada book
ಬಿಳಿ ಸಾಹೇಬನ ಭಾರತ - ಡಾ ಎನ್ ಜಗದೀಶ್ ಕೊಪ್ಪ
ನಾನು ಇತ್ತೀಚಿನ ದಿನಗಳಲ್ಲಿ ಇಷ್ಟಪಡುವ ಲೇಖಕರಲ್ಲೊಬ್ಬರು ಜಗದೀಶ್ ಕೊಪ್ಪ. ಅವರ ಲೇಖನಗಳನ್ನು ಮೊದಲು ಓದಿದ್ದು ವರ್ತಮಾನದಲ್ಲಿ. ಅವರ ಅನುವಾದಿತ ಕೃತಿಗಳಿರಬಹುದು, ವಿಶ್ಲೇಷಣಾತ್ಮಕ ಲೇಖನಗಳಿರಬಹುದು ಹೊಸತೇನನ್ನೋ ಓದುಗರಿಗೆ ತಿಳಿಸುವ ಹಂಬಲವಿರುವಂತಹ ಬರಹಗಳವು. ಅವರ ಹೊಸ ಪುಸ್ತಕ - ಬಿಳಿ ಸಾಹೇಬನ ಭಾರತ, ಜಿಮ್ ಕಾರ್ಬೆಟ್  ಜೀವನಗಾಥೆ. ಜಿಮ್ ಕಾರ್ಬೆಟ್ ಎಂದರೆ ನನಗೆ ಗೊತ್ತಿರುವಂತೆ ಬೇಟೆಗಾರ ಮತ್ತು ಇಂಗ್ಲೀಷ್ ಆಫೀಸರ್. ಆತನ ಮಾನವೀಯ ಮುಖಗಳು ಮತ್ತು ನಿಸರ್ಗದೊಂದಿಗಿನ ಸಂಬಂಧಗಳ ಬಗೆಗಿನ ಪುಸ್ತಕವಿದು. ಅಕ್ಟೋಬರ್ ಹನ್ನೊಂದರಂದು ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪುಸ್ತಕ ಬಿಡುಗಡೆಯಾಗುತ್ತಿದೆ. 
ಬಿಳಿ ಸಾಹೇಬನ ಭಾರತದ ಒಂದು ಪುಟ್ಟ ಅಧ್ಯಾಯ ಹಿಂಗ್ಯಾಕೆಯ ಓದುಗರಿಗಾಗಿ.


ಜಿಮ್ ಕಾರ್ಬೆಟ್ ಮೊಕಮೆಘಾಟ್ಗೆ ಬಂದ ನಂತರ ಅವನ ಬದುಕಿನಲ್ಲಿ ತೀವ್ರ ಬದಲಾವಣೆಗಳಾದವು. ರೈಲ್ವೆ ನಿಲ್ದಾಣದ ಸರಕು ಸಾಗಾಣಿಕೆಯ ವಿಷಯದಲ್ಲಿ ಶಿಸ್ತು ಕಾಣತೊಡಗಿತು. ಆರಂಭದಲ್ಲಿ ಕಾರ್ಬೆಟ್ಗೆ ಇದ್ದ ಒತ್ತಡಗಳು ಮರೆಯಾಗತೊಡಗಿದವು. ಕೆಲಸ ಸುಗಮವಾಗಿ ಸಾಗತೊಡಗಿದಂತೆ ಅವನ ಮನಸ್ಸು ನಿರಾಳವಾಯಿತು. ಆದರೂ ಕೂಡ ಅವನೊಳಗೆ ಹುಟ್ಟೂರಿನ ಪರಿಸರದ ಸೆಳೆತ ಯಾವಾಗಲೂ ಕಾಡುತ್ತಿತ್ತು. ಪ್ರತಿವರ್ಷ ಡಿಸಂಬರ್ ತಿಂಗಳ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ನೈನಿತಾಲ್ಗೆ ಹೋಗಿ ತನ್ನ ಕುಟುಂಬದ ಜೊತೆ ಕಾಲಕಳೆಯುತ್ತಿದ್ದ. ತನ್ನ ಮನೆಯಲ್ಲಿದ್ದ ಬೇಟೆ ನಾಯಿಗಳ ಜೊತೆ ಕಲದೊಂಗಿಯ ಅರಣ್ಯ ಪ್ರದೇಶವನ್ನು ಹೊಕ್ಕಿಬರುತ್ತಿದ್ದ. ಅಲ್ಲಿನ ಸ್ಥಳೀಯರ ಯೋಗಕ್ಷೇಮ ವಿಚಾರಿಸುತ್ತಿದ್ದ.

ಖ್ಯಾತಿಯ ತುದಿಯಲ್ಲಿ ಸೆರೆವಾಸ

shashikala natarajan
ಜಯಲಲಿತ
ಡಾ. ಅಶೋಕ್ ಕೆ ಆರ್
ಮಧ್ಯ ಮತ್ತು ಉತ್ತರಭಾರತದ ಚಿತ್ರರಂಗವನ್ನೆಲ್ಲ ತನ್ನ ಮಾರುಕಟ್ಟೆ ತಂತ್ರದಿಂದ, ಅದ್ದೂರಿತನದಿಂದ ಅಪೋಶನ ತೆಗೆದುಕೊಂಡಿದ್ದು ಹಿಂದಿ ಚಿತ್ರರಂಗ. ಹಿಂದಿ ಚಿತ್ರಗಳಿಗೆ ಉತ್ತಮ ಮಾರುಕಟ್ಟೆ ಇದ್ದರೂ ದಕ್ಷಿಣ ಚಿತ್ರರಂಗ ತನ್ನ ಪಾರಮ್ಯವನ್ನು ಬಿಟ್ಟುಕೊಟ್ಟಿಲ್ಲ. ದಕ್ಷಿಣ ಭಾರತದ ಚಿತ್ರರಂಗಗಳಲ್ಲಿ ಹೊಸತನದ ಚಿತ್ರಗಳಿಂದ, ಮಣ್ಣಿನ ಸೊಗಡಿನ ಚಿತ್ರಗಳಿಂದ ಹೆಸರು ಮಾಡಿರುವುದು ತಮಿಳು ಚಿತ್ರಂಗ. ಹೀರೋ ಆಧಾರಿತ ವಿಪರೀತ ಬಜೆಟ್ಟಿನ ಮಾಸ್ ಚಿತ್ರಗಳಿಂದ ಹಿಡಿದು ಕಥೆಯಾಧಾರಿತ ಅತ್ಯಂತ ಕಡಿಮೆ ಬಜೆಟ್ಟಿನ ಚಿತ್ರಗಳನ್ನು ಸುಂದರವಾಗಿ ಹೆಣೆಯುವುದರಲ್ಲಿ ತಮಿಳು ಚಿತ್ರರಂಗ ಮೇಲುಗೈ ಸಾಧಿಸಿದೆ. ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಚಿತ್ರ ವೀಕ್ಷಿಸುವಾಗ ತಮಗೆ ಮೆಚ್ಚುಗೆಯಾದ ಸನ್ನಿವೇಶ ಬಂದರೆ ಜನರದಕ್ಕೆ ಚಪ್ಪಾಳೆ ತಟ್ಟುತ್ತಾರಂತೆ! ಚಿತ್ರಮಂದಿರಗಳಲ್ಲಿ ಕುಣಿಯುವುದು, ವಿಷಿಲ್ ಹೊಡಿಯುವುದು ಸಾಮಾನ್ಯವಾದರೂ ಚಪ್ಪಾಳೆ ತಟ್ಟುವುದು ಒಂದಷ್ಟು ವಿಚಿತ್ರದಂತೆಯೇ ಕಾಣುತ್ತದೆ. ಅದು ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ‘ಬಾಬಾ’ ಚಿತ್ರ ಬಿಡುಗಡೆಯಾಗಿದ್ದ ಸಂದರ್ಭ. ಸಾಧಾರಣವಾದ ಚಿತ್ರವದು. ಚಿತ್ರ ಬಿಡುಗಡೆಯಾದ ಹೊಸದರಲ್ಲಿ ಟಿ.ವಿ ವಾಹಿನಿಯೊಂದು ಚಿತ್ರ ನೋಡಿ ಹೊರಬಂದವರ ಅಭಿಪ್ರಾಯ ಕೇಳುತ್ತಿತ್ತು. ಹೆಂಗಸೊಬ್ಬರು ಚಿತ್ರದಲ್ಲಿ ರಜನೀಕಾಂತ್ ಕೈಯಲ್ಲಿ ಮೂಟೆ ಹೊರಿಸಿದ್ದನ್ನು ನೆನಪಿಸಿಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಅದು ಸಿನಿಮಾ ಕಣಮ್ಮ ಎಂದರೂ ಅಳು ಕಡಿಮೆಯಾಗಲಿಲ್ಲ. ತಮಿಳುನಾಡಿನಲ್ಲಿ ಸಿನಿಮಾ ಜನರ ಮೇಲೆ ಮಾಡಿರುವ ಅಭೂತಪೂರ್ವ ಪ್ರಭಾವಕ್ಕೆ ಇದೊಂದು ಉದಾಹರಣೆಯಷ್ಟೇ. ಈ ಕಾರಣದಿಂದಲೋ ಏನೋ ದಶಕಗಳಿಂದ ತಮಿಳುನಾಡಿನಲ್ಲಿ ಸಿನಿಮಾದಿಂದ ರಾಜಕೀಯಕ್ಕೆ ಪ್ರವೇಶಿಸಿದವರ ಪ್ರಾಬಲ್ಯವೇ ಹೆಚ್ಚು. ಎಂ.ಜಿ.ಆರ್, ಕರುಣಾನಿಧಿ, ಜಯಲಲಿತ ಮತ್ತೀಗ ಪ್ರವರ್ಧಮಾನಕ್ಕೆ ಬರುತ್ತಿರುವ ವಿಜಯಕಾಂತ್ – ಎಲ್ಲರೂ ಸಿನಿಮಾದೊಂದಿಗೆ ಒಡನಾಡಿದವರು. ಬರಹಗಾರರಾಗಿದ್ದ ಕರುಣಾನಿಧಿಯನ್ನೊರತುಪಡಿಸಿ ಉಳಿದವರೆಲ್ಲರೂ ತಮ್ಮ ನಟನೆಯಿಂದ ಜನಮನ ಸೆಳೆದವರು. ರಜನೀಕಾಂತರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನಕ್ಕೂ ಅವರ ಸೂಪರ್ ಸ್ಟಾರ್ ಗಿರಿಯೇ ಕಾರಣ.

ಸೆಪ್ಟೆಂ 29, 2014

ಹೆಸರಲ್ಲೆಲ್ಲಾ ಇದೆ!

religion
ಡಾ ಅಶೋಕ್ ಕೆ ಆರ್
ಇಂಡಿಯನ್ ಮುಜಾಹಿದ್ದೀನೋ ಹಿಜ್ಬುಲ್ ಮುಜಾಹಿದ್ದೀನೋ ಹೆಸರಿನ ಮುಸ್ಲಿಂ ಸಂಘಟನೆಯೊಂದರ ನಾಮಧೇಯದಿಂದ ಪೋಲೀಸರಿಗೆ ಬೆದರಿಕೆಯ ಈ-ಮೇಲ್ ಸಂದೇಶಗಳು ತಲುಪುತ್ತವೆ. ಇಡೀ ಮೈಸೂರು ದಸರಾ ಹಬ್ಬದ ಸಂಭ್ರಮದಲ್ಲಿ ಮೈಮರೆತಾಗ, ದೂರದೂರಿನ ಜನರೆಲ್ಲ ಮೈಸೂರಿಗೆ ಬಂದು ದಸರಾದ ವೈಭವವನ್ನು ಸವಿಯುತ್ತಿರುವಾಗ ಮೈಸೂರಿನ ಹಲವೆಡೆ ಸ್ಪೋಟಗೊಳ್ಳುವಂತೆ ಟೈಂ ಬಾಂಬುಗಳನ್ನು ಇಟ್ಟಿದ್ದೇವೆ. ತಾಕತ್ತಿದ್ದರೆ ತಡೆಯಿರಿ ಎಂಬ ಬೆದರಿಕೆ ಮತ್ತು ಪಂಥಾಹ್ವಾನದ ಸಂದೇಶವದು. ದಸರಾ ಹಬ್ಬದ ಸಂದರ್ಭದಲ್ಲಿ ಬಾಂಬ್ ಸ್ಪೋಟವೆಂದರೆ ಹೈಅಲರ್ಟ್ ಘೋಷಿಸಬೇಕಾದ ಸಂದರ್ಭವಂತೂ ಹೌದು. ಮೈಸೂರಿನ ಪೋಲೀಸರು ತಕ್ಷಣ ಕಾರ್ಯಪ್ರವೃತ್ತರಾಗುತ್ತಾರೆ. ಈ – ಮೇಲ್ ಕಳುಹಿಸಿದ ಐ.ಪಿ ಅಡ್ರೆಸ್ಸನ್ನು ಪತ್ತೆ ಹಚ್ಚಿ ಆ ಕಂಪ್ಯೂಟರ್ ಅಂಗಡಿಯ ಬಳಿಯಲ್ಲಿನ ಮನೆಯಲ್ಲಿದ್ದ ಬೆದರಿಕೆ ಸಂದೇಶವನ್ನು ಕಳುಹಿಸಿದ ವ್ಯಕ್ತಿಯನ್ನು ಬಂಧಿಸುತ್ತಾರೆ.
ಮೇಲಿನದಷ್ಟು ನಡೆದ ಘಟನಾವಳಿ. ಪತ್ರಿಕೆಗಳು ಮತ್ತು ಮಾಧ್ಯಮದಲ್ಲಿ ಈ ಘಟನೆ ಯಾವ ರೀತಿ ವರದಿಯಾಗುತ್ತದೆ?