ಅಕ್ಟೋ 27, 2014

ಮಾಧ್ಯಮ ಮತ್ತು ಜನಸಾಮಾನ್ಯ

media and common man
Dr Ashok K R


ಭಾರತದ ಮಕ್ಕಳ ಏಳಿಗೆಗಾಗಿ, ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದರ ವಿರುದ್ಧ ಅವಿರತ ಹೋರಾಟ ಮಾಡಿದ ಕೈಲಾಶ್ ಸತ್ಯಾರ್ಥಿ ಎನ್ನುವವರಿಗೆ ಪಾಕಿಸ್ತಾನದ ಮಲಾಲಾ ಯೂಸುಫ್ ಝಾಹಿಯ ಜೊತೆಗೆ ಜಂಟಿಯಾಗಿ ಶಾಂತಿಗಾಗಿ ನೋಬೆಲ್ ಪ್ರಶಸ್ತಿ ಘೋಷಣೆಯಾಯಿತು. ಇದ್ದಕ್ಕಿದ್ದಂತೆ ಭಾರತಕ್ಕೆ ಬಂದ ನೋಬಲ್ ಪ್ರಶಸ್ತಿ ಸಂತಸ ನೀಡುವುದರ ಜೊತೆಜೊತೆಗೆ “ಯಾರಿದು ಕೈಲಾಶ್ ಸತ್ಯಾರ್ಥಿ?” ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತು. ಬಹುಶಃ ಕೈಲಾಶ್ ಸತ್ಯಾರ್ಥಿಯ ಸಂಘಟನೆಗೆ ಸಂಬಂಧಪಟ್ಟವರನ್ನು ಹೊರತುಪಡಿಸಿ ಇನ್ಯಾರಿಗೂ ಅವರ ಹೆಸರಾಗಲೀ ಅವರ ಕೆಲಸ ಕಾರ್ಯಗಳಾಗಲೀ ತಿಳಿದೇ ಇರಲಿಲ್ಲ. ನೋಬೆಲ್ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ ಎಲ್ಲೆಡೆಯೂ ಅವರ ಬಗ್ಗೆಯೇ ಮಾತು, ಅವರ ಬಗ್ಗೆಯೇ ಚರ್ಚೆ. ದೂರದೂರಿನವರಿಗಿರಲಿ ಅವರು ಕೆಲಸ ಮಾಡುತ್ತಿದ್ದ ರಾಜ್ಯದ ಹೆಚ್ಚಿನ ಜನರಿಗೂ ಅವರ ಬಗ್ಗೆ ಯಾವುದೇ ಮಾಹಿತಿಯಿರಲಿಲ್ಲವಂತೆ. ಎಲೆಮರೆಕಾಯಿಯಂತೆ ಅವರು ಕೆಲಸ ನಿರ್ವಹಿಸಿದ್ದನ್ನು ಒಪ್ಪಿಕೊಳ್ಳಬಹುದಾದರೂ ಜನಸಾಮಾನ್ಯರಿಗೆ ಜನಸಾಮಾನ್ಯರ ಮಧ್ಯೆಯೇ ಇದ್ದು ಅತ್ಯುತ್ತಮವೆನ್ನಿಸುವಂತಹ ಕೆಲಸ ಮಾಡುತ್ತಿರುವ ಕೈಲಾಶ್ ಸತ್ಯಾರ್ಥಿಯವರನ್ನು ನೋಬೆಲ್ ಬರುವುದಕ್ಕೆ ಮುಂಚೆಯೇ ಪರಿಚಯಿಸುವ ಕೆಲಸ ಮಾಧ್ಯಮದ್ದಾಗಿತ್ತಲ್ಲವೇ? ಒಬ್ಬ ವ್ಯಕ್ತಿ ಆತನ ಕೆಲಸಗಳು ನಮ್ಮ ಮಾಧ್ಯಮದಲ್ಲಿ ಬರುವುದಕ್ಕೂ ವಿದೇಶಿ ಪ್ರಶಸ್ತಿಯೊಂದು ಅವರಿಗೆ ಸಿಗುವವರೆಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದಾದರೂ ಯಾಕೆ?

ಅಕ್ಟೋ 24, 2014

ವಾಡಿ ಜಂಕ್ಷನ್ .... ಭಾಗ 4

wadi junction
Dr Ashok K R
ಇನ್ನು ನಮ್ಮ ಅಭಯ್, ಅಭಯ್‍ಗೌಡ ಬಸನಗೌಡ ಪೋಲೀಸ್ ಪಾಟೀಲ್ – ಆಗಿನ ರಾಯಚೂರಿನ ಈಗಿನ ಕೊಪ್ಪಳ ಜಿಲ್ಲೆಯಲ್ಲಿರುವ ಕುಷ್ಟಗಿ ತಾಲ್ಲೂಕಿನ ತಾವರಗೆರೆಯವನು. ತಂದೆತಾಯಿಗೆ ಮೂವರು ಮಕ್ಕಳು. ಇವನು ಮೂರನೆಯವನು. ಒಬ್ಬ ಅಣ್ಣ ಬಿಎಸ್ಸಿವರೆಗೆ ಓದಿಕೊಂಡು ತಾವರಗೆರೆಯಲ್ಲೇ ಜಮೀನು ನೋಡಿಕೊಳ್ಳುತ್ತಾನೆ, ನೋಡುತ್ತಾನಷ್ಟೇ ಕೆಲಸಗಳನ್ನೆಲ್ಲಾ ಅವನ ತಂದೆಯೇ ಮಾಡಿಸುತ್ತಾರೆ. ಮಧ್ಯದವಳು ಅಂದ್ರೆ ಅಭಯನ ಅಕ್ಕ ಬಿ.ಕಾಮ್ ಮಾಡಿದ್ದಾಳೆ. ಅಭಯ್ ಮೈಸೂರನ್ನು ಉದ್ಧರಿಸಲು ಬರುವುದಕ್ಕೆ ಸ್ವಲ್ಪ ದಿನಗಳ ಮುಂಚೆ ಆಕೆಯ ಮದುವೆಯಾಯಿತು. ಆಕೆಯೀಗ ಕಲ್ಬುರ್ಗಿಯಲ್ಲಿದ್ದಾಳೆ. ‘ನಾನೇ ಮೂರನೆಯವನು. ಅಪ್ಪ ಅಮ್ಮನಿಗಾಗಲೇ ಮಕ್ಕಳ ಮೇಲಿನ ಆಸ್ಥೆ ಕಡಿಮೆಯಾಗಿತ್ತು. ಈಗಲೇ ಆಪರೇಷನ್ ಮಾಡಿಸಿಕೊಳ್ಳೋದೋ ಬೇಡವೋ ಎಂಬ ಸಂದಿಗ್ಧದಲ್ಲಿದ್ದಾಗ ಹುಟ್ಟಿದವನು ನಾನು. ಭೂಮಿಗೆ ಅಷ್ಟಾಗಿ ನನ್ನ ಅವಶ್ಯಕತೆ ಇರಲಿಲ್ಲವೇನೋ?’ ಇದವನ ಎಂದಿನ ಪ್ರವರ. ಆತ ಹೀಗೆ ದೂರುತ್ತಾನಲ್ಲ, ತಂದೆ ತಾಯಿ ಇವನನ್ನು ಕಡೆಗಣಿಸುತ್ತಾರ ಅಂದರೆ ಅದೂ ಇಲ್ಲ. ಉಳಿದವರ ಮೇಲಿರುವಷ್ಟೇ ಅಕ್ಕರೆ ಇವನ ಮೇಲೂ ಇದೆ.ಇವನಲ್ಲೇ ಬಹುಷಃ ಕೊರಗಿರಬೇಕು. ಏಳನೇ ತರಗತಿಯವರೆಗೆ ತಾವರಗೆರೆಯಲ್ಲೇ ಓದಿ ನಂತರ ಧಾರವಾಡಕ್ಕೆ ವಲಸೆ ಹೋಸ. ಎಸ್.ಡಿ.ಎಂನಲ್ಲಿ ಮುಂದಿನ ಅಧ್ಯಯನ. ರಂಗೀಲಾದ ಹಾಡು ಗುನುಗುತ್ತಾ ಪತ್ರಿಕೆಯಲ್ಲಿ ಬಂದಿದ್ದ ನಗ್ನಬಾಲಿಕೆಯ ಮೊಲೆಯ ಮೇಲೆ ತನ್ನ ಹೆಸರು ಬರೆಯುತ್ತಿದ್ದವನಿಗೆ ಹಿಂದಿನಿಂದ ತಂದೆ ಬಂದು ಬಿಂತಿದ್ದು ಅರಿವಿಗೇ ಬಂದಿರಲಿಲ್ಲ. ‘ಏನಪ್ಪಾ ಬರಿ ಅಭಯ್ ಅಂತ ಬರೆದುಬಿಟ್ಟೆ. ಪೂರ್ತಿ ಹೆಸರು ಬರಿ. ನಮ್ಮ ವಂಶದ ಕೀರ್ತಿನಾದರೂ ಬೆಳೆಯುತ್ತೆ’ ಎಂದು ಅವನ ತಂದೆ ನುಡಿದಾಗ ಇವನ ಸ್ಥಿತಿ......ಸಮಾನತೆ ಸ್ವಾತಂತ್ರ್ಯಕ್ಕಿಂತ ಮುಖ್ಯ ಎಂಬ ಭಾವನೆಯವನು. ಪ್ರತಿಭಾವಂತನಲ್ಲ, ಕೆಲಸ ಸಿಗುತ್ತಿಲ್ಲವೆಂಬ ಒಂದೇ ಕಾರಣಕ್ಕೆ ಒಬ್ಬ ವ್ಯಕ್ತಿ ಹಸಿದು ಮಲಗುತ್ತಾನೆಂದರೆ ಅದು ನಮ್ಮ ದೇಶದ ಅಧಃಪತನದ ಸಂಕೇತ ಎನ್ನುತ್ತಾನೆ. ಬಹಳಷ್ಟು ಬಾರಿ ಆತನ ಮಾತುಗಳು ನಮಗೆ ಅರ್ಥವಾಗುವುದಿಲ್ಲ.

ಅಕ್ಟೋ 23, 2014

ಫ್ಯಾಕ್ಟರಿ ಹಾಲು!

Muufri
ಹಾಲು ಫ್ಯಾಕ್ಟರಿ!
ದೂರದ ಅಮೆರಿಕಾದಲ್ಲಿ ಭಾರತೀಯ ಮೂಲದವರಾದ ರಿಯಾನ್ ಪಾಂಡೆ, ಪೆರುಮಾಲ್ ಗಾಂಧಿ ಮತ್ತು ಇಶಾ ದತಾರ್ ಸೇರಿಕೊಂಡು ಹಾಲಿನ ಫ್ಯಾಕ್ಟರಿ ತಯಾರಿಸುವ ಉತ್ಸಾಹದಲ್ಲಿದ್ದಾರೆ. Genetically engineered ಹಸುಗಳನ್ನು ಚಿಕ್ಕ ಜಾಗದಲ್ಲಿ ಗುಡ್ಡೆ ಹಾಕಿಕೊಂಡು ಹಾಲು ಉತ್ಪಾದಿಸುವ ಫ್ಯಾಕ್ಟರಿ ಎಲ್ಲೆಡೆಯೂ ಇರುವಾಗ ಈ ಹಾಲಿನ ಫ್ಯಾಕ್ಟರಿಯ ವಿಶೇಷವೇನೆಂದರೆ ಇಲ್ಲಿ ಹಸುಗಳೊಂದೂ ಇರುವುದಿಲ್ಲ! ಬೇರೆ ಪ್ರಾಣಿಯೂ ಇರುವುದಿಲ್ಲ ಎಂಬುದನ್ನು ನೆನಪಿಡಿ! ಸಿಲಿಕಾನ್ ವ್ಯಾಲಿಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಿರುವ ಮುಫ್ರಿ ತಂಡದ ಪ್ರಯತ್ನವಿದು!
Also Read
ಹಿಂಗೂ ಇರುತ್ತೆ!

ಅಕ್ಟೋ 22, 2014

ಅಂಬೇಡ್ಕರ್ ವಾದಿಯ ಕಣ್ಣಲ್ಲಿ ಬಾಬಾಸಾಹೇಬ್

ladai prakashana
ಬಿ. ಶ್ರೀಪಾದ್ ಭಾವಾನುವಾದ ಮಾಡಿರುವ ನಾಮದೇವ ನಿಮ್ಗಾಡೆ ಬರೆದಿರುವ "ಹುಲಿಯ ನೆರಳಿನೊಳಗೆ - ಅಂಬೇಡ್ಕರ್ ವಾದಿಯ ಆತ್ಮಕಥೆ" ಪುಸ್ತಕದ ಬಗ್ಗೆ ಡಾ.ಎಚ್.ಎಸ್. ಅನುಪಮರವರ ಬರಹ. ಲಡಾಯಿ ಪ್ರಕಾಶನದಿಂದ ಮುದ್ರಣ ಕಂಡಿರುವ ಪುಸ್ತಕ ನವೆಂಬರ್ ಎರಡರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪುಸ್ತಕ ಬಿಡುಗಡೆಗೊಳ್ಳಲಿದೆ.



 ಮಧ್ಯಪ್ರದೇಶದ ಸಾತಗಾಂವ್ ಎಂಬ ಹಳ್ಳಿಯ ಮಹಾರ್ ಕೇರಿಯಲ್ಲಿ 1920ನೇ ಇಸವಿಯ `ಮಳೆಗಾಲದ ಯಾವುದೋ ಒಂದು ದಿನ ಹುಟ್ಟಿದ ನಾಮದೇವನೆಂಬ ಹುಡುಗನೊಬ್ಬ, ತನ್ನ 14ನೇ ವರ್ಷಕ್ಕೆ ಶಾಲೆ ಸೇರಿ ಓದಿ, ಪದವೀಧರನಾಗಿ, ಅಮೆರಿಕದ ವಿಸ್ಕಾನ್ಸಿನ್ ವಿಶ್ವವಿದ್ಯಾಲಯಕ್ಕೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಹೋಗಿ, ನಂತರ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ. ನಾಮದೇವ್ ನಿಮ್ಗಾಡೆಯಾಗಿ ಬೆಳೆದ ಕತೆಯೇ, `ಇನ್ ಟೈಗರ್ಸ್ ಶಾಡೋ.’
ಉಳಿದ ದಲಿತ ಆತ್ಮಕಥೆಗಳಲ್ಲಿರುವಂತೆಯೇ ಇಲ್ಲೂ ನಿಮ್ಗಾಡೆ ತಾವು ಎದುರಿಸಿದ ಅಸ್ಪೃಶ್ಯತೆಯ ಅವಮಾನ, ಜಾತೀಯತೆಯ ಕ್ರೌರ್ಯಗಳು, ಮಾನವೀಯ ಅನುಕಂಪದ ಸಹಾಯಗಳು ಇವನ್ನೆಲ್ಲ ನೆನೆದು ದಾಖಲಿಸುತ್ತಲೇ, ಅಂಬೇಡ್ಕರ್ ಅವರ ವ್ಯಕ್ತಿತ್ವ-ವೈಯುಕ್ತಿಕ ಜೀವನದ ಬಗೆಗೊಂದು ಆಪ್ತ ಮತ್ತು ಖಾಸಾ ಆದ ಫಸ್ಟ್ಹ್ಯಾಂಡ್ ನೋಟವೊಂದನ್ನು ಕೊಟ್ಟಿದ್ದಾರೆ. ಕಳೆದ ಶತಮಾನದ 40-50 ದಶಕವು ನಮ್ಮ ದೇಶದ ಮಟ್ಟಿಗೆ ಮಹಾಸಂಕ್ರಮಣದ ಕಾಲ. ದಿನಗಳಲ್ಲಿ ಅಂಬೇಡ್ಕರರೊಡನೆ ಹತ್ತಿರದಿಂದ ಒಡನಾಡಿದ ನಾಮದೇವ ನಿಮ್ಗಾಡೆ, ತಮ್ಮ ಗುರು-ಸ್ಪೂರ್ತಿ-ಸಲಹಾಕಾರ-ಆಪದ್ಭಾಂಧವ ಎಲ್ಲವೂ ಆಗಿದ್ದ ಬಾಬಾಸಾಹೇಬ್ ಅವರನ್ನು ಹೆಜ್ಜೆಹೆಜ್ಜೆಗೂ ನೆನಪಿಸಿಕೊಂಡಿದ್ದಾರೆ. ತಮ್ಮ ಯಶಸ್ಸಿನ ರೂವಾರಿ ಅವರೇ ಎಂದು ಹುಲಿ ನಡೆದ ಜಾಡಿನಲ್ಲಿ ನಡೆಯುತ್ತಾರೆ.
ಪುಸ್ತಕದ ಬಗೆಗೆ ಹೆಚ್ಚು ಬರೆಯುವುದಕ್ಕಿಂತ ಅದರ ಇಣುಕುನೋಟವನ್ನು ಕೊಡುವುದು ಸೂಕ್ತ. ಅದರಲ್ಲೂ ಮತ್ತೆಮತ್ತೆ ಬರುವ ಅಂಬೇಡ್ಕರ್ ಕುರಿತಾದ ಘಟನೆಗಳ ಸಾರಸಂಗ್ರಹ ಇಲ್ಲಿದೆ..

'ಹುಲಿಯ ನೆರಳಿನೊಳಗೆ' ಪುಸ್ತಕದ ಮುನ್ನುಡಿಯಿಂದ



namadeva nimgade
ನಂ 2 ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿರುವ ಲಡಾಯಿ ಪ್ರಕಾಶನದಿಂದ ಪ್ರಕಟವಾಗಿರುವ 'ಹುಲಿಯ ನೆರಳಿನೊಳಗೆ - ಅಂಬೇಡ್ಕರ್ ವಾದಿಯ ಆತ್ಮಕಥೆ' ಪುಸ್ತಕಕ್ಕೆ ಅಪ್ಪಗೆರೆ ಸೋಮಶೇಖರ್ ಬರೆದ ಮುನ್ನುಡಿ ಹಿಂಗ್ಯಾಕೆಯ ಓದುಗರಿಗಾಗಿ. 
ಆತ್ಮಕಥೆಯಲ್ಲೊಂದು ಅಂಬೇಡ್ಕರ್ ಕಥೆ

 ದೆಹಲಿಯ ನವಯಾನ ಪ್ರಕಾಶನ ಪ್ರಕಟಿಸಿರುವ In The Tiger’s Shadow : The Autobiography of An Ambedkariteಪ್ರಖ್ಯಾತ ವಿಜ್ಞಾನಿಡಾ. ನಾಮದೇವ ನಿಮ್ಗಾಡೆ ಅವರ ಆತ್ಮಕಥೆ. ಮಹತ್ವದ ಆತ್ಮಕಥೆಯನ್ನುಹುಲಿಯ ನೆರಳಿನೊಳಗೆ : ಅಂಬೇಡ್ಕರ್ವಾದಿಯ ಆತ್ಮಕಥೆ ಎಂಬ ಶೀರ್ಷಿಕೆಯ ಅಡಿಯಲ್ಲಿ ಬಿ. ಶ್ರೀಪಾದ ಭಟ್ ಅವರು ಕನ್ನಡ ಓದುಗರಿಗೆ ಪರಿಚಯಿಸುತ್ತಿದ್ದಾರೆ. ಭಾರತೀಯ ಅನ್ಯ ಭಾಷೆಗಳಿಂದ ಕನ್ನಡಕ್ಕೆ ಅನುವಾದಗೊಂಡಿರುವ ಹಲವು ಪ್ರಮುಖ ದಲಿತ ಆತ್ಮಕಥೆಗಳು ಕನ್ನಡ ಪ್ರಜ್ಞೆ ಹಾಗೂ ಅನುಭವ ಜಗತ್ತನ್ನು ವಿಸ್ತರಿಸಿವೆ. ಜೊತೆಗೆ, ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಕನ್ನಡ ದಲಿತ ಆತ್ಮಕಥೆಗಳನ್ನು ಕುರಿತ ಜಿಜ್ಞಾಸೆಗೆ ಭಿನ್ನ ಆಯಾಮವನ್ನು ಒದಗಿಸಿಕೊಟ್ಟಿವೆ. ಅವುಗಳಲ್ಲಿ ಲಕ್ಷ್ಮಣ ಗಾಯಕವಾಡರಉಚಲ್ಯಾ; ಮಾದವಿ ದೇಸಾಯಿ ಅವರಕುಣಿಯೇ ಘುಮ(ಕನ್ನಡಕ್ಕೆ-ಚಂದ್ರಕಾಂತ ಪೋಕಳೆ); ಶರಣಕುಮಾರ ಲಿಂಬಾಳೆ ಅವರಅಕ್ರಮ ಸಂತಾನ; ದಾದಾ ಸಾಹೇಬ್ ಮಲ್ಲಾರಿ ಮೋರೆ ಅವರಗಬಾಳ(ಕನ್ನಡಕ್ಕೆ-ದು. ನಿಂ. ಬೆಳಗಲಿ); ಎಸ್. ಕೆ. ಥೊರಟ್ ಅವರಬಾಲ್ಯದಿಂದ ಪ್ರಾಯಕ್ಕೆ(ಕನ್ನಡಕ್ಕೆ-ನಗರಗೆರೆ ರಮೇಶ್, ಗಂಗಾಧರಮೂರ್ತಿ); ನರೇಂದ್ರಜಾದವ್ ಅವರಬಹಿಷ್ಕø(ಕನ್ನಡಕ್ಕೆ-ಸುಮಾಧ್ವಾರಕನಾಥ್); ಭಗವಾನ್ ದಾಸ್ ಅವರಭಂಗಿಜನ ಕಥಾ(ಕನ್ನಡಕ್ಕೆ-ಕೆ. ನಾರಾಯಣಸ್ವಾಮಿ); ಭೀಮರಾವ್ ಗಸ್ತಿ ಅವರವಾಲ್ಮೀಕಿ(ಕನ್ನಡಕ್ಕೆ-ಸರಜೂ ಕಾಟ್ಕರ್); ಭಾಮ ಅವರಕರುಕ್ಕು(ಕನ್ನಡಕ್ಕೆ-ಎಸ್. ಪ್ಲೋಮಿನ್ದಾಸ್); ದಯಾ ಪವಾರ ಅವರಬಲುತ(ಕನ್ನಡಕ್ಕೆ-ಪ್ರೊ. ಚಂದ್ರಕಾಂತ ಪೋಕಳೆ) ; ಬೇಬಿ ಹಾಲ್ದಾರ್ ಅವರನೋವು ತುಂಬಿದ ಬದುಕು(ಕನ್ನಡಕ್ಕೆ-ಜಿ. ಕುಮಾರಪ್ಪ)–ಮುಂತಾದವು ಪ್ರಮುಖ ಆತ್ಮಕಥಗಳಾಗಿವೆ. ಪರಂಪರೆಗೆ ಹೊಸ ಸೇರ್ಪಡೆ ಡಾ. ನಾಮದೇವ ನಿಮ್ಗಾಡೆ ಅವರ ಆತ್ಮಕಥೆ.

ಮೋಟಾರ್ ಸೈಕಲ್ ಡೈರಿ - ಅನುವಾದಕರ ಮಾತು



(ನವೆಂಬರ್ ಎರಡರಂದು ಬಿಡುಗಡೆಗೊಳ್ಳುತ್ತಿರುವ ಲಡಾಯಿ ಪ್ರಕಾಶನ ಹೊರತಂದಿರುವ ಚೆಗೆವಾರನ ಮೋಟಾರ್ ಸೈಕಲ್ ಡೈರಿಗೆ ಅನುವಾದಕಿ ಡಾ.ಎಚ್.ಎಸ್ ಅನುಪಮ ಬರೆದಿರುವ ಸಾಲುಗಳು ಹಿಂಗ್ಯಾಕೆಯ ಓದುಗರಿಗಾಗಿ)

ಅರ್ನೆಸ್ಟೋ ಚೆ ಗೆವಾರ ಡಿ ಲಾ ಸೆರ್ನಾ
ಕವಿಯ ಮನಸು, ಕ್ರಾಂತಿಯ ಕನಸು..
ನೋಡಲು ಕಿಲಾಡಿ ಹುಡುಗನಂತೆ ಕಾಣುವ ಹೊಳೆವ ಕಣ್ಣುಗಳ ತೇಜೋಮಯ ತರುಣ; ಬಡರೋಗಿಗಳನ್ನು, ಕೃಷಿಕರನ್ನು, ಗಣಿಕೆಲಸಗಾರರನ್ನು ಕಂಡು ಅವರಿಗಾಗಿ ಏನಾದರೂ ಮಾಡಲೇಬೇಕೆಂದು ಪಣತೊಟ್ಟ ವೈದ್ಯ; ಬದುಕಿನ ಕೊನೆಯ ಕ್ಷಣಗಳಲ್ಲಿ ಬೊಲಿವಿಯನ್ ಪರ್ವತಗಳಲ್ಲಿ ಅಲೆದಾಡುವಾಗ ತನ್ನ ಒರಟು ಉಣ್ಣೆಯ ಬ್ಯಾಗಿನಲ್ಲಿ ಆಯುಧಗಳ ಜೊತೆ ನೆರೂಡನ ಕ್ಯಾಂಟೋ ಜನರಲ್ ಕವಿತೆ ಪುಸ್ತಕ ಇಟ್ಟುಕೊಂಡ ಕಾವ್ಯಪ್ರೇಮಿ; ಒಂದು ದೇಶದಲ್ಲಿ ಹುಟ್ಟಿ, ಮತ್ತೊಂದು ದೇಶದ ಬಿಡುಗಡೆಗಾಗಿ ಹೋರಾಡಿ, ಮಗದೊಂದು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣವೊಪ್ಪಿಸಿದ ವಿಶ್ವಮಾನವ: ಬದುಕಿದ ಕೇವಲ 39 ವರ್ಷಗಳಲ್ಲಿ ವಿಶ್ವದ ಮುಕ್ಕಾಲು ದೇಶಗಳ ಸಂದರ್ಶಿಸಿದ ಜಂಗಮ; ಜಗತ್ತಿನ ಅಸಂಖ್ಯ ಜನರ ಸ್ಫೂರ್ತಿ; ನನ್ನಲ್ಲೂ ನಿರಂತರ ಬೆಳೆಯುತ್ತಲಿರುವ ಮಗು..
ಅವ ಅರ್ನೆಸ್ಟೋ ಗೆವಾರಾ ಡಿ ಲಾ ಸೆರ್ನಾ. ಸಂಕ್ಷಿಪ್ತವಾಗಿ ಚೆಗೆವಾರ. ಪ್ರೀತಿಯಿಂದ ಚೆ..

ಚೆ - ಕ್ರಾಂತಿಯ ಸಹಜೀವನ ಪುಸ್ತಕದ ಮುನ್ನುಡಿಯಿಂದ



che guevera kannada book
(ಡೇವಿಡ್ ಡಚ್ ಮನ್ ಸಂಪಾದಿಸಿರುವ ಚೆ - ಕ್ರಾಂತಿಯ ಸಹಜೀವನ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿರುವವರು ನಾ.ದಿವಾಕರ. ಲಡಾಯಿ ಪ್ರಕಾಶನ ಹೊರತಂದಿರುವ ಈ ಕೃತಿ ನಂ.2ರಂದು ಬಿಡುಗಡೆಗೊಳ್ಳಲಿದೆ. ಪುಸ್ತಕದ ಮುನ್ನುಡಿ ಹಿಂಗ್ಯಾಕೆಯ ಓದುಗರಿಗಾಗಿ)
ಜೀಸಸ್ ಮಾಂಟೇನ್ ಒರೋಪೆಸ್
ಕ್ಯೂಬಾದಲ್ಲಿ ತನ್ನ ಪ್ರಾಣಕ್ಕೆ ಅಪಾಯವಿದ್ದುದರಿಂದ ಗಡೀಪಾರು ಆಗಿ ಜುಲೈ 7, 1955 ಗುರುವಾರ ಹವಾನಾದಿಂದ ಮೆಕ್ಸಿಕೋಗೆ ತೆರಳುವ ಮುನ್ನ ಫಿಡೆಲ್ ಕ್ಯಾಸ್ಟ್ರೋ ಚೆ ಅವರನ್ನು ಭೇಟಿಯಾಗಿದ್ದರು.
ಜುಲೈ 26, 1953 ಮೊಂಕಾಡ ರಕ್ಷಣಾ ದಳದ ಮೇಲಿನ ದಾಳಿ ಪ್ರಜಾ ಸಶಸ್ತ್ರ ದಂಗೆಯನ್ನು ಹುಟ್ಟುಹಾಕುವ ಪ್ರಥಮ ಸೋಪಾನವಾಗಿ ಪರಿಣಮಿಸಿತ್ತು. ದಾಳಿಯಲ್ಲಿ ಬದುಕುಳಿದವರನ್ನು ಪೈನ್ಸ್ ದ್ವೀಪದ ಕಾರಾಗೃಹದಲ್ಲಿ ಬಂಧಿಸಲಾಗಿತ್ತು. ಮೇ 15, 1955 ಭಾನುವಾರದಂದು, ಬಂಧನದ 53 ದಿನಗಳ ನಂತರ ನಮ್ಮೆಲ್ಲರನ್ನೂ ಬಿಡುಗಡೆ ಮಾಡಲಾಗಿತ್ತು.
53 ದಿನಗಳ ಅವಧಿಯಲ್ಲಿ ಹವಾನಾದಲ್ಲೇ ಇದ್ದ ಫಿಡೆಲ್ ಸಮೂಹ ಮಾಧ್ಯಮಗಳ ಮೂಲಕ  ದಿಟ್ಟವಾಗಿ ರಾಜಕೀಯ ಸಂಘರ್ಷವನ್ನು ಜಾರಿಯಲ್ಲಿರಿಸಿದ್ದರು. ಬ್ಯಾಟಿಸ್ಟಾ ಸರ್ವಾಧಿಕಾರದ ಪಾತಕಿ ಕೃತ್ಯಗಳನ್ನು ಮತ್ತು ಮೊಂಕಾಡ, ಬಯಾರ್ಮೋ ದಾಳಿಯಲ್ಲಿ ಭಾಗಿಯಾದವರ ಮೇಲಿನ ದೌರ್ಜನ್ಯವನ್ನು ಖಂಡಿಸುತ್ತಿದ್ದ ಫಿಡೆಲ್ ಬ್ಯಾಟಿಸ್ಟಾ ಸರ್ಕಾರದ ದಮನಕಾರಿ ನೀತಿಗಳನ್ನು ಉಗ್ರವಾಗಿ ಖಂಡಿಸುತ್ತಿದ್ದರು. ವ್ಯವಸ್ಥೆಯ ವಿರುದ್ಧ ಹೋರಾಡುವವರನ್ನು ಹತ್ತಿಕ್ಕುವ, ಕಾರ್ಮಿಕರನ್ನು ಶೋಷಿಸುವ ವ್ಯವಸ್ಥೆಯನ್ನು ಸಮರ್ಥಿಸುವ, ಶಾಂತಿಯುತ ರಾಜಕೀಯ ಹೋರಾಟಗಳಿಗೆ ಅವಕಾಶವೀಯದ ಬ್ಯಾಟಿಸ್ಟಾ ಆಡಳಿತದ ವಿರುದ್ಧ ಫಿಡೆಲ್ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಿದ್ದರು. ಕೂಡಲೇ ಸಾರ್ವತ್ರಿಕ ಚುನಾವಣೆಗಳನ್ನು ನಡೆಸುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದರು. ಕ್ಯೂಬಾ ದೇಶದಲ್ಲಿ ಪ್ರಜಾತಂತ್ರವನ್ನು ಸ್ಥಾಪಿಸುವ ಉದ್ದೇಶದಿಂದ ತಾವು ನೀಡುತ್ತಿದ್ದ ಪ್ರಚೋದನಕಾರಿ ಹೇಳಿಕೆಗಳ ಹಿಂದೆ ಸರ್ವಾಧಿಕಾರಿ ಬ್ಯಾಟಿಸ್ಟಾನನ್ನು ಒತ್ತಾಯಿಸುವ ಉದ್ದೇಶವಿದ್ದುದನ್ನು ಕಾಣಬಹುದಿತ್ತು
Also Read

ಚೆ - ಕ್ರಾಂತಿಯ ಸಹಜೀವನ - ಪ್ರಕಾಶಕರ ನುಡಿ

che guevera kannada book
ನಂ. 2ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿರುವ  (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ) "ಚೆ- ಕ್ರಾಂತಿಯ ಸಹಜೀವನ" ಪುಸ್ತಕಕ್ಕೆ ಲಡಾಯಿ ಪ್ರಕಾಶನದ ಬಸೂ ಬರೆದಿರುವ ಸಾಲುಗಳು.


ಅನ್ಯಾಯವನ್ನು ಪ್ರತಿಭಟಿಸಿದ್ದಕ್ಕಾಗಿ ಚೆ ನನ್ನ ಸಂಗಾತಿ..

ಜೀವಮಾನವಿಡೀ ದುಡಿಯುತ್ತ ಸವೆದರೂ ಕಣ್ಣಿಂದ ನೋಡಲಾಗದ, ಕನಸಿನಲ್ಲೂ ಊಹಿಸಲಾಗದ ಸಾವಿರ ಕೋಟಿ ಎಂಬ ಧನರಾಶಿಯ ಕುರಿತು ಜನಸಾಮಾನ್ಯ ದಿಗ್ಭ್ರಮೆಗೊಳ್ಳುವಾಗಲೇ ರಟ್ಟೆ ಕಸುವಿದ್ದರಷ್ಟೇ ಹೊಟ್ಟೆ ತುಂಬುವ, ಪ್ರತಿದಿನದ ಕೂಳೂ ಅವತ್ತಿನ ಸೂರ್ಯನೊಂದಿಗೇ ಮೂಡಿಬರುವ ಅನಿವಾರ್ಯ ವಾಸ್ತವ ಅವನನ್ನು ಕಂಗೆಡಿಸುತ್ತಿದೆ. ಜಾಗತಿಕ ಬಂಡವಾಳ ಹೂಡಿಕೆದಾರರು ಫಲವತ್ತಾದ ನೆಲೆ-ನೆಲ ಅರಸಿ ವಿಶ್ವದ ಬಡದೇಶಗಳನ್ನು ಸುತ್ತಿ ಪ್ರತಿವರ್ಷ ಸಮಾವೇಶ ನಡೆಸುತ್ತಾರೆ. ಸಾವಿರಾರು ಕೋಟಿ ಬಂಡವಾಳ `ಬಡದೇಶಗಳತ್ತ ಹರಿದುಬರುತ್ತದೆ. ಹಾಗೆ ಬಂದದ್ದು ಸ್ಥಳೀಯ ಹಳ್ಳ-ತೊರೆ-ಗುಂಡಿ-ಕೆರೆಗಳಲ್ಲಿರುವುದನ್ನೆಲ್ಲ ಬಾಚಿ ಬರಿದಾಗಿಸಿ ಭೋರ್ಗರೆದು ಸಮುದ್ರದತ್ತಲೇ ಹರಿಯುತ್ತದೆ. ಮರಳುಗಾಡು, ಬರದ ನಾಡುಗಳು ಹರಿವಿನ ದೂರದ ಕನಸಿನಲ್ಲೂ ಇರುವುದಿಲ್ಲ
Also Read

ಲಡಾಯಿ ಪ್ರಕಾಶನದ ಮೂರು ಪುಸ್ತಕಗಳ ಬಿಡುಗಡೆ ಸಮಾರಂಭದ ವಿವರ

ladai prakashana
ಬಿಡುಗಡೆ ಸಮಾರಂಭದ ವಿವರಗಳು
ಎಡಪಂಥೀಯ ವಿಚಾರಧಾರೆಯ, ದಲಿತ ಪರ, ಮಹಿಳಾ ಪರ, ಪ್ರಗತಿಪರ ಪುಸ್ತಕಗಳನ್ನು ಹೊರತರುತ್ತಿರುವ ಗದಗ ಜಿಲ್ಲೆಯ ಲಡಾಯಿ ಪ್ರಕಾಶನದ ಮೂರು ಅನುವಾದಿತ ಪುಸ್ತಕಗಳನ್ನು ನವೆಂಬರ್ ಎರಡರಂದು ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಬಿಡುಗಡೆಗೊಳ್ಳಲಿವೆ.
Also Read
ಎಲ್ಲೋ ಹಾಳಾಗಿಹೋಗಿದ್ದಾನೆ ವಸಂತ

ಅಕ್ಟೋ 21, 2014

ಚೌಕಟ್ಟು ಮೀರಿದ ಬದುಕಿನ ಬಿಳಿ ಸಾಹೇಬನ ಕಥನ



jim corbet
ಬಿಳಿ ಸಾಹೇಬನ ಭಾರತ
Dr Ashok K R
ಇತಿಹಾಸ ನಿರ್ಮಿಸಿ ಬದುಕಿದವರನ್ನೆಲ್ಲ ಒಂದು ನಿರ್ದಿಷ್ಟ ಚೌಕಟ್ಟಿಗೆ ಸೀಮಿತಗೊಳಿಸುವುದಕ್ಕೆ ಆ ವ್ಯಕ್ತಿಯ ಬದುಕಿನ ಬಗ್ಗೆ ಪುಸ್ತಕ ಬರೆಯುವವರು ಎಷ್ಟು ಕಾರಣರೋ ಕೆಲವೊಮ್ಮೆ ಚೌಕಟ್ಟಿನೊಳಗಡೆಯೇ ಸೇರಿ ಹೋಗುವ ವ್ಯಕ್ತಿಯ ವ್ಯಕ್ತಿತ್ವವೂ ಕಾರಣ. ನಮ್ಮ ಇಷ್ಟಾನಿಷ್ಟಗಳ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟನ್ನು ಮಾತ್ರ ಇತಿಹಾಸದಿಂದ ತೆಗೆದುಕೊಳ್ಳುವುದು ಸಂಪೂರ್ಣ ತಪ್ಪೇನೂ ಅಲ್ಲ! ಇದರಿಂದಾಗುವ ಅನಾನುಕೂಲವೆಂದರೆ ವ್ಯಕ್ತಿಯ ನೈಜ ವ್ಯಕ್ತಿತ್ವ ಅರಿಯದೆ ಹೋಗುವುದು. ಕನ್ನಡದ ಮಟ್ಟಿಗೆ ಚೌಕಟ್ಟಿನೊಳಗಡೆ ಬಂಧಿಯಾಗಿಬಿಟ್ಟಿದ್ದ ‘ಜಿಮ್ ಕಾರ್ಬೆಟ್ ನ’ ವ್ಯಕ್ತಿತ್ವವನ್ನು ಬಿಡುಗಡೆಗೊಳಿಸಿದ ಕೀರ್ತಿ ಡಾ ಜಗದೀಶ್ ಕೊಪ್ಪರವರ “ಬಿಳಿ ಸಾಹೇಬನ ಭಾರತ” ಪುಸ್ತಕದ್ದು.
Also Read