ಆಗ 22, 2015

Reply to Crisis of Sugarcane farmers.

Narasimhan Khadri
Sugar industry has posed serious livelihood problems not just in Karnataka but also in uttar Pradesh. Reasons are

1. The failure of cooperative movement in sugar sector. It has gradually lost the democratic nature and in turn cultivated dictatorial tendencies. AMUL model of Anand should be emulated. Cooperative movements has failed even in Karnataka is a sad thing.
2. Ownership patterns of sugar factories has been permanently skewed in favour of powerful politicians. This has resulted in opacity and goondagiri. There are vested interests on the corridors of power as far as sugar sector sector is concerned. They bear direct consequence from this sector and hence resist any attempts of reforms.
3. Integration with global market hasn't benefited either farmers or factories. There has been surplus sugar production in countries like Brazil and Cuba which has resulted in the fall of prices. This means less profit for factories . Two things can be done. A) Increasing import duty to protect from external shock B) Ensuring that ethanol blending is increased from the current 3 p.c to at least 10 p.c . This will make the factorys' bottom line healthy. But will it lead to better payments for farmers ? Can't say . This move has environmental significance as well.
4. Factories have been demanding that government should buy the surplus sugar to improve their financial position. This should be resisted as it is only a short term measure and will lead to further distrust as this benefit will never be transferred to farmers. Instead long term reforms like improving the governance of sugar factories on the one hand and setting up farmer producer organisation on the other should be stressed. Such FPO s gives the farmers a voice.
5. One can't deny the sociological aspect to these suicides. Much of the suicides are happening on the fringes of a urban centre. There may be a life style pressure on these farmers . Such pressure to become super rich in very less time exists also among urban youth and hence there is high suicide rates in this section as well. This can only be collectively addressed by media , teachers and more importantly families.
6. Improving psychiatric facilities in public hospitals is sine qua non in this modern society. Psychiatric care has been cold shouldered by both governments and the public. It has not received help from the films as well which has stigmatized psychiatric care and that only mad people receive such treatments and electric shocks. Quickly identifying suicidal tendencies and giving proper medication goes a long way in addressing this social malady.

There always is a hooplah that surrounds a farmers suicide. But every suicide ,whether it be a model's or a sslc student's , should create the same stir in our mind as each life is as precious as the other.

I also want to add what Prof Ashok Gulati said in a recent interview in rajya sabha tv(its on YouTube)

He mentions about the dismal picture of agricultural insurance in india. Only 10 per cent or so of the net sown area are insured where as in China it is almost 90 per cent. The reason for such pathetic coverage is as Prof Gulati says, due to the high premium rate. 

Instead of ad hoc compensation and debt waiver schemes, which puts serious burdens on our RRB 's and PSB's , govts should seriously look towards reducing premium amounts and also making this model viable for insurance companies.

This type of institutionalised 'compensation' mechanisms reduces shock factor among farmers. 

Prof Gulati also suggests taking ISRO's help in surveying crop losses using GIS(geographic information system) so that compensation is delivered instantly without any delay. We do have satellites which can help us in this regard.

Once the concept of agricultural insurance becomes a hit among our farmers, there is no turning back. 

Please watch his videos on YouTube for an in-depth analysis about our ailing agricultural sector.

ಆಗ 21, 2015

ಜೀವ ಅರೆಯುತ್ತಿರುವ ಕಬ್ಬು....


Ashok K R
ರೈತರ ಆತ್ಮಹತ್ಯೆಯ ವಿಷಯದಲ್ಲಿ ಮೊದಲಿನಿಂದಲೂ ಮೊದಲ ಐದು ಅಥವಾ ಹತ್ತು ಸ್ಥಾನದೊಳಗೇ ಇರುವ ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಿನಿಂದ ಆತ್ಮಹತ್ಯೆಯ ಸಂಖೈಯಲ್ಲಿ ಅಪಾರ ಏರಿಕೆಯಾಗಿದೆ. ನಗರಗಳ ಸೌಖ್ಯದೊಳಗೆ ಕುಳಿತು ರೈತರ ಆತ್ಮಹತ್ಯೆಯ ಬಗ್ಗೆ ಅನುಕಂಪದಿಂದ ಬರೆಯುವುದು ಎಷ್ಟರ ಮಟ್ಟಿಗೆ ಸಮಂಜಸ ಎಂಬ ಗೊಂದಲದೊಂದಿಗೇ ಈ ಲೇಖನ ಬರೆಯುತ್ತಿದ್ದೇನೆ. ರೈತರ ಆತ್ಮಹತ್ಯೆಯೆಂಬುದು ಸಂಖೈಯ ದೃಷ್ಟಿಗೆ ಮಾತ್ರ ಸೀಮಿತವಾಗುತ್ತಿದೆಯಾ? ರೈತರದು ನಿಜಕ್ಕೂ ಆತ್ಮಹತ್ಯೆಯಾ ಎಂಬ ಪ್ರಶ್ನೆ ಕೇಳಿಕೊಂಡರೆ ಇಲ್ಲ, ಅದು ಸರಕಾರೀ ಕೊಲೆ, ಇನ್ನೂ ನಿಷ್ಟವಾಗಿ ಹೇಳಬೇಕೆಂದರೆ ಸಾಮಾಜಿಕ ಕೊಲೆ. ಈ ಕೊಲೆಯೆಂಬ ಆತ್ಮಹತ್ಯೆಗೆ ಯಾರು ಯಾರು ಕಾರಣರು ಎಂದು ಗಮನಿಸುತ್ತಾ ಹೋದರೆ ರೈತನನ್ನೂ ಸೇರಿಸಿಕೊಂಡು ಪ್ರಧಾನಿಯವರೆಗೆ ಎಲ್ಲರನ್ನೂ ಹೊಣೆಯಾಗಿಸಬಹುದು. ತತ್ ಕ್ಷಣಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಸಿದ್ಧರಾಮಯ್ಯ ಸರಕಾರದ ವೈಫಲ್ಯವೆಂದು ಪರಿಗಣಿಸಬಹುದಾದರೂ ಒಟ್ಟಾರೆಯಾಗಿ ನೋಡಿದಾಗ ನಾವೆಲ್ಲರೂ ಅಪರಾಧಿ ಸ್ಥಾನದಲ್ಲಿ ನಿಂತು ಬಿಡುತ್ತೇವೆ.

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಅತಿ ಹೆಚ್ಚಾಗಿ ನಡೆದಿರುವುದು ಮಂಡ್ಯದಲ್ಲಿ; ಕಬ್ಬು ಬೆಳೆಗಾರರು ಆತ್ಮಹತ್ಯೆ ಮಾಡಿಕೊಂಡಿರುವುದೇ ಹೆಚ್ಚು. ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಬಹಳಷ್ಟು ಕಡೆ ರೈತರ ಆತ್ಮಹತ್ಯೆ ಕಬ್ಬು ಬೆಳೆಯ ಸುತ್ತಲೇ ಇದೆ. ಅಲ್ಲಿಗೆ ಸದ್ಯದ ಸಂದರ್ಭದಲ್ಲಿ ರೈತರ ಆತ್ಮಹತ್ಯೆಗೆ ನೇರವಾಗಿ ಕಬ್ಬು ಬೆಳೆಯೇ ಕಾರಣ ಎಂದು ನಿಸ್ಸಂಶಯವಾಗಿ ಹೇಳಬಹುದು. ಪ್ರತ್ಯಕ್ಷ ಕಾರಣವನ್ನು ಪರಿಹರಿಸುವುದರತ್ತ ಗಮನ ಹರಿಸುತ್ತಲೇ ಪರೋಕ್ಷ ಕಾರಣಗಳತ್ತಲೂ ಗಮನಹರಿಸಬೇಕು. ಸಕ್ಕರೆ ನಾಡೆಂದು ಹೆಸರಾದ ಮಂಡ್ಯ ಜಿಲ್ಲೆಯ ಹೆಚ್ಚು ಭಾಗ ಮಳೆಯಾಧಾರಿತ ಪ್ರದೇಶವಾಗಷ್ಟೇ ಉಳಿದಿತ್ತು. ಮಂಡ್ಯ ಎಂದರೆ ಮುದ್ದೆ – ಹುರುಳಿಕಟ್ಟು ಸಾರು.... ರಾಗಿ ಬೆಳೆಯೇ ಪ್ರಮುಖವಾಗಿದ್ದ ಮಂಡ್ಯದ ಇಂದಿನ ಅವಸ್ಥೆಗೆ ಕನ್ನಂಬಾಡಿ ಕಟ್ಟೆಯೂ ಒಂದು ಕಾರಣವೆಂದರೆ ತಪ್ಪಲ್ಲ. ಕನ್ನಂಬಾಡಿ ಕಟ್ಟೆಯ ಮೂಲಕ ಪ್ರಮುಖವಾಗಿ ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಹಳ್ಳಿಗಳು ನೀರಾವರಿ ಸೌಕರ್ಯಕ್ಕೊಳಪಟ್ಟು ಹಸಿರಿನಿಂದ ನಳನಳಿಸಿದ್ದು ಹೌದು, ಅಲ್ಲಿನ ಜನರ ಆರ್ಥಿಕ ಜೀವನಮಟ್ಟದಲ್ಲಿ ಏರಿಕೆಯಾಗಿದ್ದೂ ಸತ್ಯ. ಅಣೆಕಟ್ಟೆಗಳು ಆಧುನಿಕ ಭಾರತದ ದೇವಸ್ಥಾನಗಳು ಎಂದು ನೆಹರೂ ಹೇಳಿದ ಮಾತನ್ನು ಭಾರತ ಅಕ್ಷರಶಃ ಪಾಲಿಸಿತು. ಅಣೆಕಟ್ಟಿನಿಂದಲೇ ಸಮೃದ್ಧಿ ಎಂಬ ಭಾವನೆ ಎಲ್ಲೆಡೆಯೂ ಮೂಡಿತು. ಅದು ಸತ್ಯದಂತೆಯೇ ತೋರಿತು. ಆದರೆ ಈಗಲೂ ಆ ಪರಿಸ್ಥಿತಿಯಿದೆಯೇ ಎಂದು ನೋಡಿದರೆ ಜನರ ಮನಸ್ಸಿನಲ್ಲಾಗಿರುವ ಬದಲಾವಣೆಗಳು ಗೋಚರವಾಗುತ್ತವೆ. “ಅಣೆಕಟ್ಟೆ ಬರದಿದ್ದರೆ, ಇಷ್ಟು ನೀರಾವರಿ ಇರದಿದ್ದರೆ ಕೆ.ಆರ್.ಪೇಟೆ, ನಾಗಮಂಗಲದ ಮಳೆಯಾಧಾರಿತ ಕೃಷಿಯನ್ನು ನೆಚ್ಚಿಕೊಂಡ ಜನರ ರೀತಿ ಗುಳೆ ಹೋಗಿ ಮತ್ತೊಂದು ಮಗದೊಂದೋ ಕೆಲಸವನ್ನು ಮಾಡಿ ಜೀವನ ಕಟ್ಟುಕೊಳ್ಳುತ್ತಿದ್ದೆವೇನೋ. ಇಷ್ಟೊಂದು ನೀರಾವರಿ ಇರೋ ಜಮೀನಿಗೆ ಅಂಟಿಕೊಂಡು ನಿಂತ ಕಾರಣಕ್ಕೇ ನಾವು ಈ ಕೆಟ್ಟ ಪರಿಸ್ಥಿತಿಯಲ್ಲಿ ಸಿಕ್ಕಿಹಾಕಿಕೊಂಡಿದ್ದೀವಿ. ಭೂಮಿಯ ಸತ್ವವನ್ನೂ ಈ ನೀರಾವರಿ ಹಾಳು ಮಾಡಿದೆ” ಎಂದಿದ್ದು ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ರೈತ ಹರೀಶ್.

ಕಬ್ಬಿನತ್ತ ರೈತರು ವಾಲಿದ್ಯಾಕೆ?:

ನನ್ನ ಸ್ವಂತ ಊರು ಬೆಸಗರಹಳ್ಳಿ ಬಳಿಯ ಕೋಣಸಾಲೆ. ಇಲ್ಲಿಗೂ ಕಾವೇರಿ ನೀರು ಬರುತ್ತದಾದರೂ ನಾಲೆಯ ಕೊನೆಯಲ್ಲಿರುವ ಊರಾದ್ದರಿಂದ ಮದ್ದೂರು ತಾಲ್ಲೂಕಿನವರೆಲ್ಲ ಉಪಯೋಗಿಸಿದ ನಂತರ ಉಳಿದ ನೀರಷ್ಟೇ ಇಲ್ಲಿಗೆ ಬರುತ್ತದೆ. ನನ್ನ ತಂದೆಯವರ ಕಾಲದಲ್ಲಿ ಆಗ ಗದ್ದೆಗಳಲ್ಲಿ ರಾಗಿ ಭತ್ತದಿಂದ ಹಿಡಿದು, ತೊಗರಿ, ಹೆಸರು ಇತರೆ ಕಾಳುಗಳು, ಮನೆಯಳತೆಗೆ ಬೇಕಾದ ಸೊಪ್ಪು – ತರಕಾರಿಗಳನ್ನು ಬೆಳೆದುಕೊಳ್ಳುತ್ತಿದ್ದರಂತೆ. ಈಗ ಬಹುತೇಕ ಕಡೆ ಕಬ್ಬು, ಕೆಲವೆಡೆ ಭತ್ತ, ಹೊಲಗಳಲ್ಲಿ ತೆಂಗಷ್ಟೇ ಕಾಣುವ ಪರಿಸ್ಥಿತಿ. ಮಳೆ ಕಡಿಮೆಯಿದ್ದು, ನೀರಾವರಿ ಇಲ್ಲದ ಪ್ರದೇಶದಲ್ಲಷ್ಟೇ ರಾಗಿ ಸೀಮಿತವಾಗಿಬಡುತ್ತಿದೆ. ಭತ್ತವನ್ನು ಮುಂಚೆ ಹೆಚ್ಚು ಬೆಳೆಯುತ್ತಿದ್ದರಾದರೂ ಈಗ ಕಬ್ಬು ಬೆಳೆಯುವವರೇ ಜಾಸ್ತಿ. ಇದಕ್ಕೆ ಕಾರಣಗಳನ್ನು ಅರಸಿದರೆ ಕಬ್ಬು ಬೆಳೆ ಬೇಡುವ ಶ್ರಮ ಉಳಿದವುಕ್ಕಿಂತಲೂ ಕಡಿಮೆ. ನಗರೀಕರಣ, ಕೆಲಸಕ್ಕಾಗಿ ಓದುವಿಕೆ ಹೆಚ್ಚಾಗುತ್ತಿದ್ದಂತೆ ಶುರುವಾದ ವಲಸೆ ಪ್ರಕ್ರಿಯೆ ರೈತರ ಸಂಖೈಯನ್ನೂ ಕಡಿಮೆಗೊಳಿಸಿತು, ಕೃಷಿ ಕಾರ್ಮಿಕರ ಸಂಖೈಯನ್ನೂ ಕಡಿಮೆ ಮಾಡಿತು. ‘ನಗರೀಕರಣವೇ ನಮ್ಮ ಗುರಿ’ ಎಂದು ಹೇಳುತ್ತಿದ್ದ ಪಿ.ಚಿದಂಬರಂ, ಸ್ಮಾರ್ಟ್ ಸಿಟಿಗಳ ಬಗ್ಗೆಯೇ ಮಾತನಾಡುವ ನರೇಂದ್ರ ಮೋದಿಯಂತವರು ದೇಶ ನಡೆಯುವ ದಿಕ್ಕನ್ನು ನಿರ್ಧರಿಸುವವರಾಗಿರುವಾಗ ವಲಸೆಯನ್ನು ತಪ್ಪೆಂದು ಹೇಳಲಾದೀತೇ? ಹೆಚ್ಚು ಕೆಲಸ ಬೇಡುವ ಫಸಲನಿಂದ ವಿಮುಖನಾಗಿ ಕಬ್ಬಿನಂತಹ ಇದ್ದುದರಲ್ಲಿ ಕಡಿಮೆ ಶ್ರಮ ಬೇಡುವ ಫಸಲಿನೆಡೆಗೆ ರೈತರು ಆಕರ್ಷಿತರಾಗಿದ್ದು ಸರಿಯಾದ ನಿರ್ಧಾರವೂ ಆಗಿತ್ತು, ಕೃಷಿಯನ್ನೇ ಮುಂದುವರಿಸಲು ನಿರ್ಧರಿಸಿದವರಿಗದು ಅನಿವಾರ್ಯವೂ ಆಗಿತ್ತು. ಹೆಚ್ಚುತ್ತಿದ್ದ ಸಕ್ಕರೆ ಕಾರ್ಖಾನೆಗಳು ಹೆಚ್ಚೆಚ್ಚು ಕಬ್ಬು ಬೆಳೆಯುವಂತೆ ಪ್ರೇರೇಪಿಸುತ್ತಿದ್ದವು. ಶ್ರಮಕ್ಕೆ ತಕ್ಕ ಪ್ರತಿಫಲವನ್ನೂ ಕಬ್ಬು ರೈತರಿಗೆ ನೀಡಿತು. ಒಬ್ಬನಿಗೆ ದುಡ್ಡು ಬಂತೆಂದು ಮತ್ತೊಬ್ಬ ಮತ್ತೊಬ್ಬನಿಗೆ ಕಬ್ಬಿನಿಂದ ಹಣ ಬಂತೆಂದು ಇನ್ನೊಬ್ಬ ಕಬ್ಬು ಬೆಳೆಯಲು ಪ್ರಾರಂಭಿಸಿ ಕೊನೆಗೆ ಬೆಳೆದ ರಾಶಿ ರಾಶಿ ಫಸಲನ್ನು ಯಾರೂ ಕೊಳ್ಳದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ವಿಫಲವಾಗಿದ್ದು ರೈತನಾ? ಕಾರ್ಖಾನೆಗಳಾ? ಅಥವಾ ಮುನ್ಸೂಚನೆಯನ್ನು ಅಂದಾಜು ಮಾಡಿ ರೈತರಿಗೆ ಎಚ್ಚರಿಕೆಯನ್ನು ನೀಡದ ಕೃಷಿ ಇಲಾಖೆಯಾ? 

ಸಾಂದರ್ಭಿಕ ಚಿತ್ರ
ಕಬ್ಬು ಕಾರ್ಖಾನೆಗಳತ್ತ ಕಣ್ಣು ಹಾಯಿಸಿದರೆ ಟನ್ನುಗಟ್ಟಲೇ ಸಕ್ಕರೆ ದಾಸ್ತಾನಾಗಿದೆ. ಪತ್ರಿಕೆಗಳಲ್ಲಿ ಬಂದ ವರದಿಯ ಪ್ರಕಾರ ಕೆಜಿಗೆ ಹತ್ತೊಂಬತ್ತು ರುಪಾಯಿಗಳಿಗೆ ಮಾರುತ್ತೇವೆಂದರೂ ಕೊಳ್ಳಲು ಯಾರು ಮುಂದೆ ಬರಲಿಲ್ಲವಂತೆ. ವ್ಯಾಪಾರಿಗಳು ಕೇಳಿದ್ದು ಹದಿನೇಳು ರುಪಾಯಿಗೆ. ಪ್ರತಿ ಟನ್ನು ಕಬ್ಬಿಗೆ ಎರಡು ಸಾವಿರದಷ್ಟು ಹಣ ನೀಡಿ, ಸಕ್ಕರೆ ತಯಾರಿಸಲು ಮತ್ತೊಂದಷ್ಟನ್ನು ಖರ್ಚು ಮಾಡಿ ಒಂದು ಕೆಜಿ ಸಕ್ಕರೆಯನ್ನು ಹದಿನೇಳು ರುಪಾಯಿಗೆ ಮಾರಿದರೆ ಸಕ್ಕರೆ ಕಾರ್ಖಾನೆಗಳು ನಷ್ಟ ಅನುಭವಿಸುವುದು ಖಚಿತವೆಂದೆನ್ನಿಸುತ್ತದೆ. ಈ ನಷ್ಟದ ಮಧ್ಯೆಯೂ ಬಾಗಲಕೋಟೆ, ಬೆಳಗಾವಿಯಲ್ಲಿ ಹೊಸ ಹೊಸ ಸಕ್ಕರೆ ಕಾರ್ಖಾನೆ ತಲೆಯೆತ್ತುತ್ತಿರುವುದ್ಯಾಕೆ? ಸಕ್ಕರೆ ಮಾಡಿದ ನಂತರ ಉಳಿಯುವ ಮೊಲ್ಯಾಸಸ್, ಅದರಿಂದ ಉತ್ಪತ್ತಿಯಾಗುವ ಸ್ಪಿರಿಟ್ ಸಕ್ಕರೆ ಕಾರ್ಖಾನೆಗಳ ಪ್ರಮುಖ ಆದಾಯ. ಜೊತೆಗೆ ಕೋ-ಜೆನ್ ಮಾಡಿ ವಿದ್ಯುತ್ ಉತ್ಪಾದಿಸಿದರೆ ಮತ್ತಷ್ಟು ಲಾಭ. ಈ ಎಲ್ಲಾ ಲಾಭಗಳ ಲೆಕ್ಕಾಚಾರದಿಂದ ಹೊಸ ಕಾರ್ಖಾನೆಗಳು ತಲೆ ಎತ್ತುತ್ತವೆ. ಕಬ್ಬು ಬೆಳೆಯನ್ನು ವಿಸ್ತರಿಸಲು ಪ್ರೋತ್ಸಾಹಿಸುತ್ತವೆ, ಕೊನಗೆ ಕಟಾವಾದ ಕಬ್ಬಿಗೆ ಬೆಲೆ ಇಲ್ಲವೆಂದು ಹೇಳುತ್ತಾ ಸಕ್ಕರೆಯ ದಾಸ್ತಾನನ್ನು ತೋರಿಸುತ್ತವೆ. ಅಲ್ಲಲ್ಲಿ ಸರಕಾರ ದಾಸ್ತಾನಾದ ಕಬ್ಬನ್ನು ವಶಪಡಿಸಿಕೊಳ್ಳುವ ಕೆಲಸ ಮಾಡಿತಾದರೂ ಸ್ಪಿರಿಟ್ಟಿನಿಂದ ಬಂದ ಆದಾಯವೆಷ್ಟು ಎಂದು ಪರಿಶೀಲಿಸುವಲ್ಲಿ ಎಡವಿದೆ. ಖಾಸಗಿ ಕಾರ್ಖಾನೆಗಳಿಂದ ಹಣವನ್ನು ರೈತರಿಗೆ ಕೊಡಿಸುವಲ್ಲಿ ಸರಕಾರ ಯಾಕೆ ವಿಫಲವಾಗುತ್ತದೆ ಎಂದರೆ ಅನೇಕ ಸಕ್ಕರೆ ಕಾರ್ಖಾನೆಗಳು ಇರುವುದೇ ರಾಜಕಾರಣಿಗಳ ಮಾಲೀಕತ್ವದಲ್ಲಿ. ಈ ರಾಜಕಾರಣಿಗಳು ಆಡಳಿತ, ವಿರೋಧ ಪಕ್ಷಗಳೆಲ್ಲದರಲ್ಲೂ ಇದ್ದಾರೆ. ಅವರಿಗೆ ಅವರೇ ನಷ್ಟ ಮಾಡಿಕೊಳ್ಳುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದರದು ನಂಬುವ ಮಾತಲ್ಲ.

ವಾಣಿಜ್ಯ ಬೆಳೆಗಳಿಂದ ಅಪಾರ ಪ್ರಮಾಣದ ಲಾಭವೂ ಸಿಗುತ್ತದೆ, ಅಷ್ಟೇ ಪ್ರಮಾಣದ ನಷ್ಟವೂ ಆಗುತ್ತದೆ. ಅಡಿಕೆ, ಕಾಫಿ ತೋಟಗಳು, ಕಬ್ಬಿನ ಗದ್ದೆಗಳು ಒಂದಷ್ಟು ವರ್ಷ ನಂಬಲಾರದಷ್ಟು ಲಾಭ ತಂದರೆ ಮತ್ತೊಂದಷ್ಟು ವರ್ಷ ನಂಬಿಕೆ ಬರದಷ್ಟು ನಷ್ಟವನ್ನೂ ಹೊತ್ತು ತರುತ್ತದೆ. ನಷ್ಟವೆಂಬ ಕಾರಣಕ್ಕೆ ಹೊಸ ರೀತಿಯ ಪದ್ಧತಿಗೆ, ಹೊಸ ಬೆಳೆಗೆ, ಬಹುವಿಧ ಬೆಳೆಗೆ ಹೊರಳಿಕೊಳ್ಳುವವರ ಸಂಖೈ ತುಂಬಾನೇ ಕಡಿಮೆ. ಮಂಡ್ಯದಲ್ಲಿ ಕಬ್ಬಿನಿಂದ ಇಷ್ಟೆಲ್ಲಾ ನಷ್ಟವಾಗಿದೆ. ಬೆಳೆದ ಕಬ್ಬನ್ನು ಕಟಾವು ಮಾಡಿಸದೆ ಹಾಗೆಯೇ ಬಿಟ್ಟ ರೈತ, ಸಿಟ್ಟಿನಿಂದ ಇಡೀ ಗದ್ದೆಗೆ ಬೆಂಕಿ ಕೊಟ್ಟ ರೈತರಲ್ಲನೇಕರು ಮುಂದಿನ ಬೆಳೆಯಾಗಿಯೂ ಕಬ್ಬನ್ನೇ ಬಿತ್ತನೆ ಮಾಡಿಸುತ್ತಾರೆ. ಬಹುಶಃ ಮುಂದಿನ ವರುಷ ಮಂಡ್ಯದಲ್ಲಿ ಸಂಚರಿಸಿದರೆ ಕಬ್ಬಿನಿಂದಾದ ನಷ್ಟವನ್ನು ಕಬ್ಬಿನಿಂದಲೇ ಪಡೆಯಬೇಕೆನ್ನುವ ಪರಿಸ್ಥಿತಿಯನ್ನು ಕಾಣಬಹುದೇ ಹೊರತು ಹೊಸತಾಗಿ ಬೇರೇನನ್ನಾದರೂ ಬೆಳೆಯುವ ಕಷ್ಟ ತೆಗೆದುಕೊಳ್ಳುವವರನ್ನು ಕಾಣುವುದು ಕಷ್ಟ. ಕಬ್ಬಿನಿಂದಾದ ನಷ್ಟಕ್ಕೆ ಕಾರ್ಖಾನೆಗಳಷ್ಟೇ ಕಾರಣ ಕೃಷಿ ಕಾರ್ಮಿಕರ ಅಭಾವ. ಕೃಷಿ ಕಾರ್ಮಿಕರ ಕೊರತೆಗೆ ಅನ್ನಭಾಗ್ಯದಂತಹ ಯೋಜನೆಗಳು ಕಾರಣವೆಂದು ಮೇಲ್ನೋಟಕ್ಕೆ ಅನ್ನಿಸಬಹುದಾದರೂ ಈ ಯೋಜನೆಗಳು ಬರುವುದಕ್ಕೆ ಮುಂಚಿತವಾಗಿಯೇ ಕೃಷಿ ಕಾರ್ಮಿಕರ ಸಮಸ್ಯೆಯಿತ್ತು, ಮೈಸೂರು ಭಾಗದಲ್ಲಿ ಈ ಸಮಸ್ಯೆ ಹುಟ್ಟಲು ಬೆಂಗಳೂರು ಮೈಸೂರು ರೈಲೂ ಕಾರಣ! ಮುಂಚೆ ವಲಸೆ ಹಳ್ಳಿಗಳಿಂದ ನಗರಕ್ಕೆ ಸೀಮಿತವಾಗಿತ್ತು, ಈಗದು ನಗರದಿಂದ ದೊಡ್ಡ ನಗರಕ್ಕೂ ವ್ಯಾಪಿಸಿದೆ. ಮಂಡ್ಯ, ಮೈಸೂರು ಜಿಲ್ಲೆಗಳ ಅನೇಕರು (ನನ್ನನ್ನೂ ಸೇರಿಸಿ) ಇವತ್ತು ಬೆಂಗಳೂರು ಸೇರಿದ್ದಾರೆ. ಈ ವಲಸೆ ಪ್ರಕ್ರಿಯೆಯಿಂದ ರೈತರೂ ಹೊರತಾಗಿಲ್ಲ, ಕೃಷಿ ಕಾರ್ಮಿಕರೂ ಹೊರತಾಗಿಲ್ಲ. ಊರಿನಲ್ಲಿ ಬಿಸಿಲಿನಲ್ಲಿ ದುಡಿದು ಮಾಡುವ ಸಂಪಾದನೆಯಷ್ಟನ್ನೇ ನಗರದಲ್ಲಿ ತಂಪಿನಲ್ಲಿ ಮಾಡಬಹುದೆಂಬ ಕಲ್ಪನೆ ಎಂಥವರನ್ನಾದರೂ ಸೆಳೆಯುತ್ತದೆ. ಅತಿ ಕಡಿಮೆ ದರದಲ್ಲಿ ರೈಲು ಪಾಸು ಸಿಗುವಾಗ ಬೆಳಿಗ್ಗೆ ಕೆಲಸಕ್ಕೆ ಬಂದು ಸಂಜೆ ಮತ್ತೆ ಮನೆಗೆ ಮರಳುವ ಅವಕಾಶ ಮಂಡ್ಯ, ಮೈಸೂರಿನ ಜನತೆಗೆ ಇರುವುದು ಇಲ್ಲಿನ ಕೃಷಿ ಕಾರ್ಮಿಕರ ಸಮಸ್ಯೆಗೊಂದು ಕಾರಣ. ಫ್ಯಾನಿನ ಕೆಳಗೆ ಕುಳಿತು ನಾಲ್ಕು ಗೋಡೆಯ ಮಧ್ಯೆಯಿಂದ ಕೂಲಿ ಮಾಡ್ತಿರೋರೆಲ್ಲಾ ಹಳ್ಳಿಗೋಗ್ರಿ, ಅಲ್ಲಿ ಕೆಲಸಕ್ಕೆ ಜನರಿಲ್ಲ ಎನ್ನುವುದು ಕ್ರೌರ್ಯವಷ್ಟೇ. ಹಾಗಾದರೆ ಕಬ್ಬು ಕಟಾವು ಮಾಡಲು ಕೃಷಿ ಕಾರ್ಮಿಕರು ಎಲ್ಲಿಂದ ಬರುತ್ತಿದ್ದರು?

ಸಾಂದರ್ಭಿಕ ಚಿತ್ರ
ಬಿರುಬೇಸಿಗೆಯ ಬಳ್ಳಾರಿಯಿಂದ ಕಟಾವಿನ ಸಮಯಕ್ಕೆ ಸರಿಯಾಗಿ ಕಾರ್ಮಿಕರು ಬರುತ್ತಿದ್ದರು. ನೀರಾವರಿ ಭಾಗದ ರೈತರನ್ನು ಈ ಕೃಷಿ ಕಾರ್ಮಿಕರ ಮುಂದೆ ಸೋಮಾರಿಗಳೆಂದೇ ಹೇಳಬಹುದು. ಆ ಕಾರ್ಮಿಕರ ಶ್ರಮ ದೊಡ್ಡದು. ಒಂದು ಟನ್ ಕಬ್ಬು ಕಟಾವು ಮಾಡಲು ಇನ್ನೂರೈವತ್ತು ರುಪಾಯಿ ನಿಗದಿಯಾಗಿತ್ತು, ಕ್ರಮೇಣ ಅದು ಎಂಟುನೂರರಿಂದ ಸಾವಿರ ರುಪಾಯಿಗೆ ಬಂದು ನಿಂತಿದೆ. ಕೃಷಿ ಕಾರ್ಮಿಕರು ಮತ್ತವರಿಗಿಂತ ಹೆಚ್ಚಾಗಿ ಅವರನ್ನು ಕರೆದುಕೊಂಡು ಬರುವ ಮೇಸ್ತ್ರಿಗಳು ವರುಷದಿಂದ ವರುಷಕ್ಕೆ ಸಿರಿವಂತರಾಗಿದ್ದಾರೆ. ಲಾರಿಗಳನ್ನೂ ಕೊಂಡುಕೊಂಡು ಬಳ್ಳಾರಿಯಿಂದಲೇ ತರುವ ಮೇಸ್ತ್ರಿಗಳೂ ಈಗ ಕಾಣಸಿಗುತ್ತಾರೆ. ದೈಹಿಕ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಅವರು ಪಡೆಯುತ್ತಿದ್ದಾರೆ. ಹಸಿರು ಕ್ರಾಂತಿಯ ದೆಸೆಯಿಂದ ರಸಗೊಬ್ಬರ ಬಳಸದೆ ಬೆಳೆ ಬೆಳೆಯಲಾಗದ ಸಂದರ್ಭದಲ್ಲಿ ಕಬ್ಬು ಬೆಳೆಯುವುದಕ್ಕೂ ಹೆಚ್ಚು ಖರ್ಚು ಮಾಡಿ ಕೃಷಿ ಕಾರ್ಮಿಕರಿಗೂ ಹೆಚ್ಚು ಹಣ ನೀಡಿ ಕೊನೆಗೆ ಕಾರ್ಖಾನೆಗಳಿಂದ, ದಲ್ಲಾಳಿ ನಿಯಂತ್ರಿತ ಮಾರುಕಟ್ಟೆಯಿಂದ ನಷ್ಟವನ್ನನುಭವಿಸಬೇಕಾದ ರೈತ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಯ ಮೊರೆಹೋಗದೆ ಬದುಕುವುದೇ ಕಷ್ಟದ ಕೆಲಸವಾಗಿಬಿಟ್ಟಿದೆ.

ಈ ಲೇಖನ ಮೂಡಲು ಹಲವು ವಿಷಯಗಳನ್ನು ವಿಸ್ತಾರವಾಗಿ ತಿಳಿಸಿದ್ದು ಕಳೆದ ಇಪ್ಪತ್ತು ವರುಷಗಳಿಂದ ಇದ್ದುದರಲ್ಲಿ ಹೊಸತೇನನ್ನೋ ಮಾಡುತ್ತಾ ಕೃಷಿ ಮಾಡುತ್ತಿರುವ ಹರಳಹಳ್ಳಿಯ ಹರೀಶ್. ಅವರು ತಿಳಿಸಿದ ಒಂದಷ್ಟು ಅಂಶಗಳನ್ನು ಅವರ ಮಾತುಗಳಲ್ಲೇ ಓದಿಕೊಳ್ಳಿ: “ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ರೈತರೇ ಕಾರಣ ಅನ್ನಿಸುತ್ತೆ. ಇವೊತ್ತು ಯಾವ ರೈತನೂ ರೈತನಾಗಿ ಬದುಕುತ್ತಿಲ್ಲ. ಬದುಕಲು ಇಷ್ಟಪಡುತ್ತಿಲ್ಲ. ಅವರವರ ಗದ್ದೆಗೆ ಹೋಗೋಕೆ ರೈತರೇ ಎಷ್ಟೋ ಕಡೆ ಸಿದ್ಧರಿಲ್ಲ. ಕೂಲಿಗೆ ಬರೋರಿಗೆ ಮನೆಯಿಂದ ಬುತ್ತಿ ಕಟ್ಟಿಸ್ಕೊಂಡು ಹೋಗೋದಕ್ಕೂ ಎಷ್ಟೋ ಜನ ರೆಡಿ ಇಲ್ಲ. ಹೋಟ್ಲಿಂದ ಇಪ್ಪತ್ತು ರುಪಾಯಿಗೆ ಊಟ ಕಟ್ಟುಸ್ಕೊಂಡು ಹೋಗಿ ಕೊಡ್ತಾರೆ. ಹೋಟ್ಲೂಟ ತಿಂದ ಕೆಲಸದೋನು ಹನ್ನೆರಡು ಘಂಟೆಗೆ ಜಾಗ ಖಾಲಿ ಮಾಡ್ತಾನೆ. ಕಬ್ಬು, ಭತ್ತಕ್ಕೆ ಹೊಂದಿಕೊಂಡುಬಿಟ್ಟೋರು ಹೊಸದೇನನ್ನಾದರೂ ಮಾಡೋಣ ಅಂತ ಯೋಚಿಸೋದೆ ಕಮ್ಮಿ. ದೇವ್ರು ನೋಡ್ಕೋತಾನೆ ಅಂತ ಮತ್ತೆ ಕಬ್ಬು ಹಾಕೋರೇ ಜಾಸ್ತಿ. ನಮ್ ಕೃಷಿ ಇಲಾಖೇನೂ ಬಿಟಿ, ಹೈಬ್ರಿಡ್ ಹೈಬ್ರಿಡ್ ಅಂತ ಅದನ್ನೇ ಬೆಳೆಯೋಕೆ ಪ್ರೋತ್ಸಾಹ ಕೊಡ್ತಾರೆ. ಚೂರು ಪಾರು ಭತ್ತ ಬೆಳೀತಿದ್ದೋರು, ರಾಗಿ ಬೆಳೀತಿದ್ದೋರು ಅನ್ನಭಾಗ್ಯ ಬಂದ ಮೇಲೆ ನಿಲ್ಲಿಸಿಬಿಟ್ರು. ರಾಗಿ ಬೆಳೆಯೋ ಹೊಲದಲ್ಲೆಲ್ಲಾ ಸಾಲ ಮಾಡಿ ಬೋರ್ ತೆಗ್ಸಿ ಕಬ್ಬು ಬೆಳೀತಾವ್ರೆ. ಎಲ್ಲಿಂದ ರೇಟ್ ಸಿಗುತ್ತೆ? ಈಗ ಗ್ಯಾಸಿಗೆ ಮಾಡ್ತಿರೋ ಹಾಗೆ ನಾಳೆದಿನ ಸೊಸೈಟೀಲಿ ಅಕ್ಕಿ ಕೊಡಲ್ಲ ಬ್ಯಾಂಕಿಗೆ ದುಡ್ ಹಾಕ್ತೀವಿ, ಅಕ್ಕಿ ತಗೊಳ್ಳಿ ಅಂದ್ರೆ ಇನ್ನೂ ಕಷ್ಟ. ಗೊಬ್ಬರಕ್ಕೆ ಕೊಡೋ ಸಬ್ಸಿಡಿ ನಿಧಾನಕ್ಕೆ ನಿಂತೋಗ್ತಿದೆ. ಮುನ್ನೂರು ರುಪಾಯಿ ಇದ್ದ ಗೊಬ್ರ ಈಗ ಒಂದೂಕಾಲು ಸಾವಿರ. ಅದರ ಸಬ್ಸೀಡೀನೂ ಬ್ಯಾಂಕಿಗೇ ಹಾಕ್ತಾರಂತೆ. ಕೊಂಡ್ಕೊಳ್ಳೋಕೆ ಮತ್ತೆ ಸಾಲ ಮಾಡ್ಬೇಕು, ಬ್ಯಾಂಕಿಗೆ ಯಾವಾಗ ಹಾಕ್ತಾರೆ ಗೊತ್ತಿಲ್ಲ. ಶೋಕಿಗಾಗಿ ಸಾಲ ಮಾಡೋದು ಹೆಚ್ಚಾಗ್ತಾ ಇದೆ. ಅವರಿವರದ್ದು ಬೇಡ ನನ್ದೇ ಉದಾಹರಣೆ ಹೇಳಿದ್ರೆ ಹಳೇ ಮನೆ ಚೆನ್ನಾಗೇ ಇತ್ತು. ರಿಪೇರಿ ಮಾಡ್ಸಿ ಗ್ರಾನೈಟು, ಮಾರ್ಬೆಲ್ಲು ಹಾಕ್ಸೋದು ಬೇಕಿರಲಿಲ್ಲ. ಕಬ್ಬು ದುಡ್ಡು ಬರುತ್ತಲ್ಲ ಅಂತ ಎರಡು ವರ್ಷದ ಹಿಂದೆ ಅಡ ಇಟ್ಟು ಸಾಲ ಮಾಡಿ ಮನೆಕೆಲಸ ಮಾಡಿಸ್ದೆ. ಕಬ್ಬಿನ ರೇಟು ಬಿತ್ತು, ಸಾಲ ಇನ್ನೂ ಇದೆ. ಯಾವ ಹಳ್ಳಿಯ ಯಾವ ಮನೆಗೆ ಹೋದ್ರೂ ಐದು ಟಚ್ ಸ್ಕ್ರೀನ್ ಮೊಬೈಲು. ತಿಂಗ್ಳು ತಿಂಗ್ಳು ಅದಕ್ಕೆ ಸಾವಿರದವರೆಗೆ ಖರ್ಚು. ಹತ್ತದಿನೈದು ವರುಷದ ಹಿಂದಕ್ಕೆ ಹೋಲಿಸಿದರೆ ತಿಥಿ, ಬೀಗರೂಟ, ಮದುವೆ ಆಡಂಬರ ಈಗಲೇ ಜಾಸ್ತಿ. ಕಬ್ಬು ಬೆಳೆದೋರಿಗೆಲ್ಲಾ ನಷ್ಟವಾಗಿ ಇಷ್ಟೊಂದು ಜನ ಸತ್ತರಲ್ಲ ನಮ್ಮಲ್ಲೇನು ತಿಥಿ, ಬೀಗರೂಟ ನಿಂತೋಗಿದೆಯಾ? ಜೋರಾಗೇ ನಡೀತಿದೆ. ನಮ್ ಮೋದಿ ಪ್ರಧಾನಿ ಥರ ಇರ್ದೆ ಒಂದು ಮಲ್ಟಿನ್ಯಾಷನಲ್ ಕಂಪನಿ ಸಿ.ಇ.ಒ ಥರ ಮಾತಾಡ್ತಾರೆ. ಯಾವ ದೇಶಕ್ಕೆ ಹೋದ್ರೂ ನಮ್ಮಲ್ಲಿ ಬಂದು ದುಡ್ಡು ಹಾಕಿ ದುಡ್ಡು ಹಾಕಿ ಅಂತಾರೆ. ಚೈನಾದಿಂದ ರೇಷ್ಮೆ ಬಂದು ನಮ್ ರೇಷ್ಮೆ ಮಾರ್ಕೆಟ್ಟೇ ಬಿದ್ದೋಯ್ತು. ಇನ್ನು ಬೇರೆ ಕಡೆ ದುಡ್ಡೆಲ್ಲಾ ಬಂದ್ರೆ ಇಲ್ಲೇನುಳಿಯುತ್ತೆ? ಇದೇ ವ್ಯವಸ್ಥೆ ಮುಂದುವರೆದ್ರೆ ಇದೇ ಮೋದಿ ಗವರ್ನ್ ಮೆಂಟ್ ತರಬೇಕು ಅಂತಿದ್ದ ಭೂಮಸೂದೇನಾ ಯಾವ್ಯಾವ ರೈತರು ವಿರೋಧಿಸಿದ್ರೋ ಅವರೇ ನಾಳೆ ದಿನ ನನ್ ಜಮೀನ್ ತಗೊಳ್ಳಿ ನನ್ ಜಮೀನ್ ತಗೊಳ್ಳಿ ಅಂತ ಮೋದಿ ಹಿಂದೆ ಬಿಳ್ತಾರೆ. ಆ ದಿನ ಬರ್ಲಿ ಅಂತಾನೇ ಹಿಂಗೆಲ್ಲಾ ಮಾಡ್ತಾರೋ ಏನೋ? ಇದೆಲ್ಲದರ ಜೊತೆಗೆ ರೈತ ಸತ್ತಾಗ ಪಾರ್ಟಿಗಳೆಲ್ಲ ಬಂದು 25 ಸಾವಿರ, ಐವತ್ತು ಸಾವಿರ ಅಂತ ದುಡ್ಡು ಕೊಡೋದು ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದೆ. ಒಬ್ಬ ರೈತ ಸತ್ರೆ ಮತ್ತೊಬ್ಬ ರೈತ ಬರೋದು ಸರಿ. ಈ ಪಾರ್ಟಿಗಳೆಲ್ಲ ಯಾಕೆ ಬಂದು ದುಡ್ಡು ಕೊಡಬೇಕು. ನಾನು ಸತ್ತರೆ ಮನೆಯವರಿಗಾದರೂ ನೆಮ್ಮದಿ ಸಿಗುತ್ತೆ ಅನ್ನೋ ಭಾವನೇಲಿ ಸೂಸೈಡ್ ಮಾಡ್ಕೊಳ‍್ಳೋರು ಇರ್ತಾರೆ. ಆ ಟಿವಿಯವ್ರು ಜೋರು ದನೀಲಿ ಇವತ್ತು ಇಷ್ಟು ರೈತ್ರು ಸತ್ರು ಅನ್ನೋದೂ ನಿಲ್ಬೇಕು. ಒಟ್ನಲ್ಲಿ ಇಡೀ ವ್ಯವಸ್ಥೆಯಲ್ಲೇ ತಪ್ಪಿದೆ. ಯಾರನ್ನ ದೂಷಿಸೋದೋ ಗೊತ್ತಿಲ್ಲ”

ನನ್ನನೇಕ ಪ್ರಶ್ನೆಗಳಿಗೆ ಉತ್ತರ ನೀಡುತ್ತಲೇ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟಿಹಾಕಿಸಿದ ಮಾತುಗಳಿವು. ಹೆಚ್ಚೇನು ಬರೆಯಲು ಉಳಿದಿಲ್ಲ.

ಆಗ 20, 2015

Home Composting

Dr Ashok K R

Home compost
The Black Gold
As I have written in my previous posts my method of setting up of terrace/home garden is time consuming and laborious, yet it is enjoyable. In this post I will share my experiences in mining ‘black gold’ from kitchen waste. Unlike ‘golden gold’ black gold is absolutely free of cost. There are hell lot of websites which teaches you numerous methods of composting. I have learnt a lot from them, and finally it is the practical experience which teaches the real composting. The method has to be standardised for each home, for each environment.


Composting Bin DIY
My first composter - teacher.
In the beginning I tried home composting using a small waste plastic container. With the help of a knife created some holes for aeration. Added kitchen waste with news paper bits. Within few days the entire container was filled with swimming maggots and garbage smell! Since the mouth of the container was small I couldn’t turn the pile regularly and my mistake was a festival for maggots. Luckily there were no flies and addition of some more news paper bits did the magic. Maggots number reduced to minimum. Though I didn’t get black gold, got some half digested compost which I added to pots.

Send your innovative ideas of terrace gardening to hingyake@gmail.com

Since my initial experiment was ‘bit’ successful, decided to expand the composter. I tried composting in open trays. Just added kitchen waste mixed with dried leaves and covered the pile with a layer of soil to avoid attracting flies. Since the aeration is better in this open method composting process was quite fast. This method is suited only during summer. The first rain in summer ruined the entire setup as I had kept in open! Garbage smell and maggots subsided after a week!

Compost pile
My Present composter. Plastic container with holes.
I decided to steal a container from kitchen! My not so ill intention was noticed by my spouse and I dropped the idea of stealing! At last bought a new plastic container (with large mouth) for Rs 160/-. Drilled numerous holes. By this time I had collected 4 bags of dry leaves. Dry leaves are very much essential as it absorbs the moisture and the carbon of dry leaves compensates the nitrogen of kitchen waste. Though news paper bits can be used, it’s not completely natural. Better to collect dry leaves whenever possible. 
Compost pile
Kitchen waste with dry leaves
Depending upon the liquidity of the kitchen waste I add the dry leaves, mix it well and add it to the compost bin. 
DIY composter
Covering the top with newpapers will absorb extra liquid in the top layer.
On the top I will place two three layers of newspaper and close the lid. Since I broke the lid cover (over enthusiasm during gold mining!) now I use an old clay pot to cover it completely. In my experience turning the compost pile regularly is the important step in composting. Turning the pile once in three days will fasten the process and it gives us fair idea of our mistakes. More watery add more leaves, dried up add some water. Adding butter milk will hasten up the process. Once in ten/fifteen days empty the entire compost bin. We can observe the various stages of composting. Mix it again and add back. This method will ensure good aeration and will speed up the composting process.

Mining the Gold:

Sieving the compost
'Stolen' trays to mine Black Gold
This time I could not avoid. I ‘stole’ some plastic trays from kitchen. Of course my wife was not there at that time! One tray had larger holes and other smaller. I use tray with large holes to sieve the compost in first stage. 
half compost
After first stage of sieving.
The sieved product is processed with second tray with smaller holes and the black gold starts appearing! 
home made compost
The Black Gold
The larger chunks are added back to the compost bin. The product left during second stage of sieving is added to the clay pot for further composting. 
store the compost
Storage Period of Black Gold: 10 days.
The black gold is stored in a cardboard box. After a waiting period of ten days this black gold is added to the pots or used to prepare potting mix for new pots.
composting in clay pots
Larger chunks are added to clay pot for further composting.
maggots in compost
Only few maggots appear now. I am not scared of them!
adding compost to pots
Black Gold added to the grow bags.

Check list for starting composting: 

  1. Dried Leaves. (Use newspapers if you don’t have stock of dried leaves now. No excuses after next summer) 
    dried leaves for composting
    Don't forget to collect dried leaves during summer!
  2. Plastic container with holes. 
  3. Obviously Kitchen waste! 

Lack of time (are we really that busy!) might provoke you to purchase readymade composter bins. There are plastic container bins, Kambha and lot more available online. Lack of space could be a real problem. Bokashi method of composting using ecobin / smartbin is suggested by Organic Terrace Gardeners. Those bins can be kept in the kitchen and demands less work when compared to regular composters.
simple home made composter
My Simple composting setup

ಲಜ್ಜೆಗೆಡುವುದರಲ್ಲಿ ಎಲ್ಲರೂ ಮುಂದು....

ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಕನ್ನಡ, ಇಂಗ್ಲೀಷಿನ ಜೊತೆಗೆ ತೆಲುಗು, ತಮಿಳು, ಉರ್ದು ಭಾಷೆಯಲ್ಲಿಯೂ ಪ್ರಕಟಿಸಿ ಮತಗಳಿಕೆಗಾಗಿ ಕನ್ನಡತನವನ್ನು ಕೊಲ್ಲುವುದಕ್ಕೆ ತಾನು ಹಿಂಜರಿಯುವುದಿಲ್ಲ ಎಂದು ತೋರಿಸಿತ್ತು. 

ಲಜ್ಜೆಗೆಟ್ಟ ಕಾಂಗ್ರೆಸ್ಸಿನಿಂದ ಪಂಚ ಭಾಷಾ ಪ್ರಣಾಳಿಕೆ.


ಉಳಿದೆರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಂಚ ಭಾಷಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಸಮಾಧಾನ ಪಟ್ಟುಕೊಳ್ಳುವ ವೇಳೆಗೆ ನಾ ಮುಂದು ತಾ ಮುಂದು ಎಂಬಂತೆ So Called ರಾಷ್ಟ್ರೀಯ ಪಕ್ಷಗಳು ತಮಿಳು ಭಾಷೆಯ ಕರಪತ್ರವನ್ನು ಹಂಚುತ್ತಿವೆ. ಕರ್ನಾಟಕದ ನಾಯಕ ಶಿರೋಮಣಿಗಳಾದ ದೇವೇಗೌಡ, ಕುಮಾರಸ್ವಾಮಿ, ಸಿದ್ಧರಾಮಯ್ಯ, ಪರಮೇಶ್ವರ್, ಅನಂತಕುಮಾರ್, ಯಡಿಯೂರಪ್ಪ, ಸದಾನಂದಗೌಡ ಮುಂತಾದವರು ತಮಿಳು ಭಾಷಾ ಕರಪತ್ರದಲ್ಲಿ ಮಿಂಚುತ್ತಿರುವ ಪರಿಯನ್ನು ಆನಂದಿಸಿ ತಣ್ಣಗೆ ಒಂದು ಲೋಟ ನೀರು ಕುಡ್ಕೊಳ್ಳಿ....
BJP tamil bbmp

Congress Tamil BBMP

JDS Tamil BBMP

ಆಗ 19, 2015

ಪರಿವರ್ತನೆ: ಒಂದು ಚೆಂದದ ಕಿರುಚಿತ್ರ.

ಚಿಕ್ಕ ಸಂದೇಶವೊಂದನ್ನು ಚೊಕ್ಕವಾಗಿ ನಿರ್ದೇಶಿಸಿದ್ದಾರೆ ನಿರ್ದೇಶಕ ಅರಸು. ಭಿಕ್ಷುಕನ ಪಾತ್ರವನ್ನೂ ಅವಾಹಿಸಿಕೊಂಡಿರುವ ಅರಸುರವರ ಅಭಿನಯವೂ ಮನಮುಟ್ಟುವಂತಿದೆ.

ಆಗ 14, 2015

ಚೌಕಟ್ಟಿಲ್ಲದ ಉಪ್ಪಿ2 ರುಚಿಯಾಗಿದೆಯಾ?

uppi2 review
Ashok K R
ಉಪೇಂದ್ರ ನಿರ್ದೇಶನದ ಸಿನಿಮಾಗಳೆಂದರೆ ಒಂದಷ್ಟು ವಿಚಿತ್ರ ವೇಷಭೂಷಣಗಳು, ಮೊದಲಿನಿಂದ ಖಳರಂತೆ ಚಿತ್ರಿತವಾಗುವ ನಾಯಕಿ, ಹಸಿ ಬಿಸಿ ದೃಶ್ಯಗಳು, ಚಿತ್ರವಿಚಿತ್ರವಾಗಿ ಆಡುವ ನಾಯಕ, ಈ ಎಲ್ಲದರ ಮಧ್ಯೆ ಅಲ್ಲೊಂಚೂರು ಇಲ್ಲೊಂಚೂರು ಎಂಬಂತೆ ಫಿಲಾಸಫಿ! ಗಲ್ಲಾಪೆಟ್ಟಿಗೆಯಲ್ಲಿ ಕೆಲವೊಂದು ಗೆದ್ದಿವೆ, ಕೆಲವೊಂದು ಸಾಧಾರಣ ಯಶಸ್ಸು ಕಂಡಿವೆ, ಕೆಲವೊಂದು ಸೋತಿವೆ; ಆದರೆ ನಿರ್ದೇಶಕನಾಗಿ ಉಪೇಂದ್ರ ಪ್ರತಿ ಸಿನಿಮಾದಲ್ಲೂ ಗೆದ್ದಿದ್ದಾರೆ. ಕಥೆ ಮಾಮೂಲಿದ್ದರೂ ಚಿತ್ರಕಥೆಯಲ್ಲಿ ಪ್ರೇಕ್ಷಕನನ್ನು ತುದಿಗಾಲಲ್ಲಿ ನಿಲ್ಲಿಸುವ ಕಲೆ ಉಪೇಂದ್ರನಿಗಿದೆ. ಆ ಕಲೆ ಇನ್ನೂ ಜೀವಂತವಾಗಿದೆಯಾ ಎಂಬ ಕುತೂಹಲದೊಂದಿಗೆ Uppi2 ಚಿತ್ರ ನೋಡಲು ಪ್ರವೇಶಿಸಿದರೆ ಚೂರೇ ಚೂರು ನಿರಾಸೆಯಾಗುತ್ತದೆ, ಉಪೇಂದ್ರನೆಂಬ ನಿರ್ದೇಶಕನನ್ನು ಮೊದಲಿನಿಂದಲೂ ಮೆಚ್ಚಿದವರು ಮತ್ತಷ್ಟು ಮೆಚ್ಚುತ್ತಾರೆ, ಮೊದಲಿನಿಂದಲೂ ಮೆಚ್ಚದವರು ಅದನ್ನೇ ಮುಂದುವರೆಸುತ್ತಾರೆ!

ಹದಿನೈದು ವರುಷಗಳ ಹಿಂದೆ ತೆರೆಕಂಡಿದ್ದ ‘ಉಪೇಂದ್ರ’ ಚಿತ್ರದ ಮುಂದುವರಿದ ಭಾಗವಿದು. ನಾಯಕನನ್ನೂ ಸೇರಿ ಅಲ್ಲಿನವೇ ಅನೇಕ ಪಾತ್ರಗಳು ಇಲ್ಲಿ ಕಾಣಿಸಿಕೊಳ್ಳುತ್ತವೆ. ‘ಉಪೇಂದ್ರ’ ಅಷ್ಟೇ ಅಲ್ಲದೆ ‘ಶ್’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಬ್ಯಾಂಕ್ ಜನಾರ್ಧನ್ ಮತ್ತು ಬಿರಾದಾರ್ ಇಲ್ಲೂ ಪೋಲೀಸರಾಗಿ ಕಾಣಿಸಿಕೊಂಡಿದ್ದಾರೆ. ‘ಉಪೇಂದ್ರ’ ಚಿತ್ರದಲ್ಲಿ ‘ನಾನು’ ಎಂಬ ಪಾತ್ರದ ಸುತ್ತ ಕಥೆ ಹೆಣೆಯಲಾಗಿತ್ತು, ಆ ‘ನಾನು’ಗೆ ರತಿ, ಸ್ವಾತಿ, ಕೀರ್ತಿ ಎಂಬ ಮೂವರು ನಾಯಕಿಯರ ಮೇಲೆ ಕಣ್ಣು, ಅವನಿಗೆ ಮೂವರೂ ಬೇಕು. ರತಿ, ಸ್ವಾತಿ, ಕೀರ್ತಿ ಪ್ರತಿ ಗಂಡಸು ಆಸೆ ಪಡುವ ಮೂರು ಗುಣಗಳೆಂಬಂತೆ ಚಿತ್ರಿಸಲಾಗಿತ್ತು. ಕೊನೆಗೆ ಮೂವರನ್ನೂ ತೊರೆದ ‘ನಾನು’ ಎಲ್ಲವನ್ನೂ ಬಿಟ್ಟು ಹೊರಟುಬಿಡುತ್ತಾನೆ. ಅಲ್ಲಿಂದ ಹೊರಟ ‘ನಾನು’ ಇಲ್ಲಿ ‘ನೀನಾಗಿ’ ಬದಲಾಗಿದ್ದಾನೆ! ಉಪೇಂದ್ರ ‘ನಾನು ಯಾರು?’ ಎಂದು ಪ್ರಶ್ನಿಸಿದರೆ ಉಪ್ಪಿ2 ‘ನೀನು ಯಾರು?’ ಎಂದು ಪ್ರಶ್ನಿಸುತ್ತದೆ.

ಫಿಲಾಸಫಿ ಹೇಳೋದಕ್ಕೆ ಉಪೇಂದ್ರ ಆಯ್ದುಕೊಳ್ಳುವುದು ಗದ್ದಲದ ಹಾದಿ. ‘ಉಪೇಂದ್ರ’ ಚಿತ್ರದಲ್ಲಿ ಹೆಚ್ಚಾಗಿದ್ದ ಗದ್ದಲ, ದ್ವಂದಾರ್ಥ ‘ಉಪ್ಪಿ2’ ಚಿತ್ರದಲ್ಲಿ ಕಡಿಮೆಯಾಗಿದೆ. ಉಪೇಂದ್ರನಿಗೂ ಹದಿನೈದು ವರ್ಷ ವಯಸ್ಸಾಯಿತಲ್ಲವೇ?! ಉಪ್ಪಿ2 ಚಿತ್ರ ಮೂರು ಕಾಲಗಳ ಬಗೆಗಿನ ಜಿಜ್ಞಾಸೆಯ ಚಿತ್ರ. ಭೂತ – ವರ್ತಮಾನ – ಭವಿಷ್ಯ ಕಾಲದಲ್ಲಿ ಯಾವುದಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂಬುದರ ಬಗೆಗಿನ ಚಿತ್ರ. ಯೋಚನೆ ಮಾಡುವುದೇ ತಪ್ಪು ಎಂದು ಹೇಳುತ್ತಲೇ ನೋಡುಗರನ್ನು ಯೋಚನೆಗೆ ಹಚ್ಚುವ ಚಿತ್ರ! ಫಿಲಾಸಫಿಗಳನ್ನೆಲ್ಲಾ ವಾಚ್ಯವಾಗಿ ಹೇಳುವ ಪ್ರಯತ್ನ ಕೆಲವೆಡೆ ಯಶಸ್ವಿಯಾಗಿದೆ, ಕೆಲವೆಡೆ ಹಾಸ್ಯಾಸ್ಪದವಾಗಿದೆ. ‘ನಾನು’ ಹುಡುಗಿಯ ಹಿಂದೆ ಓಡಿದರೆ ‘ನೀನು’ವನ್ನು ಹುಡುಗಿಯೇ ಅಟ್ಟಿಸಿಕೊಂಡು ಬರುತ್ತಾಳೆ. ಯಾವುದರ ಬಗ್ಗೆಯೂ ಯೋಚನೆಯೇ ಮಾಡದ ‘ನೀನು’ ಮುಗ್ದನಾ ದಡ್ಡನಾ ಎಂಬ ಪ್ರಶ್ನೆಗೆ ‘ಯೋಚ್ನೆ ಮಾಡಲ್ಲ ಅಂದೆ ತಲೆ ಇಲ್ಲ ಅನ್ನಲಿಲ್ಲ’ ಎಂಬ ಉತ್ತರ ಚಿತ್ರದಲ್ಲಿಯೇ ಇದೆ. ಯೋಚನೆ ಮಾಡದ ಕಾರಣಕ್ಕೆ ನಾಯಕನಿಗೆ ನೆಮ್ಮದಿ, ಸಂಪತ್ತು, ‘ಖುಷಿ’ ಸಿಗುತ್ತದೆ. ಯಾವುದಕ್ಕೂ ಯೋಚನೆ ಮಾಡದೆ, ಭಯ ಪಡದೆ, ಮಾಡಿದ ಕೆಲಸಕ್ಕೆ ಹಣ ಪಡೆಯದೆ ಇದ್ದುಬಿಡುವ ‘ನೀನು’ ನಿಜವಾಗಿಯೂ ಬದಲಾದ ‘ನಾನು’ನಾ ಅಥವಾ ನಾಟಕವಾ ಎಂಬ ಗೊಂದಲಗಳೊಂದಿಗೆ ಮೊದಲರ್ಧ ಮುಗಿಯುತ್ತದೆ. 

ಎರಡನೇ ಭಾಗದಲ್ಲಿ ‘ಉಪೇಂದ್ರ’ ಚಿತ್ರದ ‘ನಾನು’, ಉಪ್ಪಿ2 ಚಿತ್ರದ ‘ನೀನು’ ಮತ್ತು ಇವೆರಡೂ ಚಿತ್ರದಲ್ಲಿಲ್ಲದ ‘ಅವನು’ ಕಾಣಿಸಿಕೊಳ್ಳುತ್ತಾರೆ. ‘ನಾನು’ ನೀನಾಗಿ ನಾಟಕವಾಡುತ್ತಿದ್ದಾನೆ ಎಂಬ ಸಂಗತಿಯಿಂದ ಖುಷಿ ವಿಚಲಿತಳಾಗುತ್ತಾಳೆ. ಈ ನಾನು, ನೀನು, ಅವನು ನಿಜವಾಗಿ ಒಬ್ಬನೇನಾ ಅಥವಾ ಮೂರು ಮೂರು ಮಂದಿಯಾ ಎಂಬ ಗೊಂದಲ ಚಿತ್ರ ಮುಗಿದ ಮೇಲೂ (ಅಸಲಿಗೆ ಚಿತ್ರ ಮುಗಿಯುವುದೇ ಇಲ್ಲ!) ಉಳಿದುಬಿಡುತ್ತದೆ. ‘ನಾನು’ ಎಂಬ ಭೂತಕಾಲ, ‘ನೀನು’ ಎಂಬ ವರ್ತಮಾನ, ‘ಅವನು’ ಎಂಬ ಕಲ್ಪನಾತ್ಮಕ ಭವಿಷ್ಯದ ತಂತ್ರ ಉಪಯೋಗಿಸಿದ್ದಾರೆ ಉಪೇಂದ್ರ. ಭೂತಕಾಲದ ‘ನಾನು’ ನೆನಪಿನಲ್ಲಿರುವ ಯಾವ ಪಾತ್ರಧಾರಿಗಳೂ ಚಿತ್ರದಲ್ಲಿ ಸಂತಸದಿಂದಿರುವುದಿಲ್ಲ. ‘ಅವನು’ ಎಂಬ ಕಲ್ಪನೆಯನ್ನು ನಂಬಿಕೊಂಡವರು ಗೊಂದಲದಲ್ಲಿರುತ್ತಾರೆ. ವರ್ತಮಾನದ ‘ನೀನು’ ಜೊತೆ ಇರುವ ನಾಯಕಿ ಮಾತ್ರ ‘ಖುಷಿ’ಯಾಗಿರುತ್ತಾಳೆ! 

ಭೂತವನ್ನು ಮರೆಯಿರಿ ಎಂದ್ಹೇಳುವ ಉಪ್ಪಿ2 ಚಿತ್ರದಲ್ಲಿ ಉಪೇಂದ್ರ ನಿರ್ದೇಶನದ ಶ್, ಓಂ ಚಿತ್ರಗಳ ನೆನಪುಗಳು ಬರುವುದು ಬೇಕಿರಲಿಲ್ಲ! ಉಪೇಂದ್ರನ ವೇಷಭೂಷಣ ಕೂಡ ಅವರ ಅಭಿನಯದ ರೀಮೇಕ್ ಚಿತ್ರ ‘ಬುದ್ಧಿವಂತ’ನನ್ನು ನೆನಪಿಸುತ್ತದೆ. ಉಪೇಂದ್ರ ಎಂಬ ನಿರ್ದೇಶಕನ ಬತ್ತಳಿಕೆ ನಿಧಾನಕ್ಕೆ ಖಾಲಿಯಾಗುತ್ತಿರುವ ಸೂಚನೆಯಾ? ಚಿತ್ರದ ಶುರುವಿನಲ್ಲಿ ಹೊಸ ಹೊಸ ಕೋನಗಳಿಂದ ಗಮನ ಸೆಳೆಯುವ ಛಾಯಾಗ್ರಹಣ ನಂತರದಲ್ಲಿ ಮಾಮೂಲಿಯಾಗಿದೆ. ಹಾಡುಗಳನ್ನು ಕೇಳಬಹುದೇ ಹೊರತು ಮತ್ತೆ ಮತ್ತೆ ಗುನುಗುವಂತಿಲ್ಲ. ‘ಎಲ್ಲರ ಕಾಲೆಳೀತದೆ ಕಾಲ’ ಹಾಡು ಚಿತ್ರಕ್ಕೆ ಬೇಕಾಗಿಯೇ ಇರಲಿಲ್ಲ. ತನ್ನ ಶಕ್ತಿಯ ಬಗ್ಗೆ ಸ್ವತಃ ಅರಿವಿಲ್ಲದೇ ಹೊಸಬರನ್ನು ಹಳಬರನ್ನು ಆಡಿಕೊಳ್ಳುವ ಹಾಡು ಉಪ್ಪಿ2 ಚಿತ್ರಕ್ಕೆ ಬೇಕಿರಲಿಲ್ಲ. ಆ ಇಡೀ ಹಾಡನ್ನೇ ತೆಗೆದುಹಾಕಿದರೂ ಚಿತ್ರಕ್ಕೇನು ಅಡ್ಡಪರಿಣಾಮವಾಗುತ್ತಿರಲಿಲ್ಲ. ಹಿಮಾಲಯದ ಚಳಿಯಲ್ಲಿ ತುಂಡುಡುಗೆ ಧರಿಸುವ ಅಸಂಬದ್ಧಗಳೂ ಚಿತ್ರದಲ್ಲಿವೆ! ನಟನೆಯ ವಿಚಾರಕ್ಕೆ ಬಂದರೆ ಉಪೇಂದ್ರ, ಅಕೀವಾ ಕ್ರಿಷ್ಟೀನಾ, ಪಾರುಲ್, ಟೆನ್ನಿಸ್ ಕೃಷ್ಣ, ಶೋಭರಾಜ್, ನಾಸಿರ್ ಮತ್ತಿತರರು ಪಾತ್ರಕ್ಕೆ ಎಷ್ಟು ಬೇಕೋ ಅಷ್ಟು ಚೆನ್ನಾಗಿ ಮಾಡಿದ್ದಾರೆ. ಚಿತ್ರಕಥೆಯ ಗೊಂದಲಗಳು ಉಳಿದೆಲ್ಲಾ ವಿಷಯವನ್ನು ಮಬ್ಬು ಮಾಡಿಸಿಬಿಡುತ್ತದೆ ಎನ್ನುವುದು ಸತ್ಯ. ‘ಫಿಲ್ಮ್ ಚೆನ್ನಾಗಿದೆ ಏನು ಅರ್ಥಾನೇ ಆಗ್ಲಿಲ್ಲ’ ‘ಏನೋ ಹುಳಾ ಇದೆ ಅರ್ಥ ಆಗ್ತಿಲ್ಲ’ ಎನ್ನುವ ಮಾತುಗಳು ಚಿತ್ರ ನೋಡಿದವರದು! ಇಂಥದ್ದೇ ಒಂದು ಕಥೆಯಿದೆ, ತತ್ವವಿದೆ, ಸಿದ್ಧಾಂತವಿದೆ ಎಂದು ಹೇಳಲಾಗದ ಸಿನಿಮಾವಿದು. ಸಿನಿಮಾದಲ್ಲೇ ಹೇಳಿದಂತೆ ‘ಯೋಚ್ನೆ ಮಾಡ್ಬೇಡ’!

ಈ ಮೇಲಿನ ವಿಮರ್ಶೆಯನ್ನು ಓದಿದ ನಂತರ ನಿಮ್ಮಲ್ಲಿ ಗೊಂದಲ ಮೂಡಿದರೆ ಅದಕ್ಕೆ ‘ನೀನು’ ಕಾರಣವೇ ಹೊರತು ನಾನಲ್ಲ!

Uppi2, kannada film directed by Upendra revolves around Past, Present and Future ideas of a person.

ಸುಂದರ ಮಲೆಕುಡಿಯನಿಗೆ ಆರ್ಥಿಕ ಸಹಾಯ ಬೇಕಾಗಿದೆ.

ಮುನೀರ್ ಕಾಟಿಪಳ್ಳ
ನಾಡು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ತೆರೆದು ಕೊಳ್ಳುತ್ತಿದೆ. ಆದರೆ ಮಂಗಳೂರಿನ ಆಸ್ಪತ್ರೆಯ ಜನರಲ್ ವಾರ್ಡಲ್ಲಿ ಮಲಗಿರುವ ಸುಂದರ ಮಲೆಕುಡಿಯರ ಮುಖದಲ್ಲಿ, ನೆರಿಯ ಅರಣ್ಯದ ಅವರ ಮನೆಯೆಂಬ ಮುರಕಲು ನಾಲ್ಕು ಗೋಡೆಯಲ್ಲಿ ನೋವು ಮಡುಗಟ್ಟಿದೆ. ಭೂಮಾಲಕ ಕೈ ಕತ್ತರಿಸಿ ಇಪ್ಪತ್ತು ದಿನಗಳ ನಂತರವೂ ಸುಂದರ ಮಲೆಕುಡಿಯ ಎದ್ದು ಕೂತಿಲ್ಲ. ಗೋಪಾಲ ಗೌಡನ ಹತ್ತಿರ ಪೊಲೀಸರು ಸುಳಿದಿಲ್ಲ.

ಮೊನ್ನೆ ಮತ್ತೆ ಸುಂದರ ಮಲೆಕುಡಿಯರನ್ನು ಭೇಟಿಯಾಗಿದ್ದೆವು. ಎರಡೂ ಕೈಗಳು ಅಲುಗಾಡದಂತೆ ಬ್ಯಾಂಡೇಜು ಸುತ್ತಿ ಹತ್ತಾರು ರೋಗಿಗಳ ಮದ್ಯೆ ಜನರಲ್ ವಾರ್ಡಿನಲ್ಲಿ ಮಲಗಿದ್ದ ಸುಂದರ ಮಲೆಕುಡಿಯರನ್ನು, ಹದಿನೆಂಟು ವರ್ಷಗಳ ಹಿಂದೆ ಭೂಮಾಲಕರ ಮಚ್ಚಿನೇಟಿಗೆ ಕೈಬೆರಳು ಕಳಕೊಂಡಿದ್ದ ಅವರ ಪತ್ನಿ ನೋಡಿಕೊಳ್ಳುತ್ತಿದ್ದರು.

ತನ್ನ ಸ್ಥಿತಿಗೆ ಮರುಗುತ್ತಿದ್ದ ಸುಂದರ, ಜನಪರ ಸಂಘಟನೆಗಳ ನೈತಿಕ ಬೆಂಬಲಕ್ಕೆ ಕಣ್ಣೀರಾದರು. ಪೂರ್ಣ ತುಂಡಾದ ಕೈ ಕನಿಷ್ಟ ಉಳಿಯಬೇಕಾದರೆ ನಾಲ್ಕೈದು ಪ್ಲಾಸ್ಟಿಕ್ ಸರ್ಜರಿ ನಡೆಸಬೇಕಿದ್ದು ಐದಾರು ಲಕ್ಷ ಖರ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ದುಃಖತೋಡಿ ಕೊಂಡರು. ಸುಂದರ ಮಲೆಕುಡಿಯರಿಗೆ ಉದರ ಕ್ಯಾನ್ಸರ್ ನ ಚಿಕಿತ್ಸೆಯೂ ನಡೆಯುತ್ತಿದ್ದು ಇನ್ನಷ್ಟು ಖರ್ಚು ಹೆಚ್ಚಾಗಬಹುದು.

ಇನ್ನು ಸುಂದರ ಮಲೆಕುಡಿಯರ ನರಿಯ ಅರಣ್ಯದ ಮನೆ ಶಿಥಿಲಗೊಂಡಿದ್ದು, ಮಳೆಗಾಳಿಗೆ ಅದರಲ್ಲಿ ವಾಸಿಸುವುದು ದುಸ್ಸಾದ್ಯ. ಅಂತಹ ಮುರುಕಲು ಮನೆಯಲ್ಲಿ ಶಾಲೆಗೆ ಹೋಗುವ ಮೂವರು ಹೆಣ್ಣುಮಕ್ಕಳು, ಮನೆಯಲ್ಲೇ ಉಳಿದಿರುವ ಹದಿಹರೆಯದ ಮಗ ಪೂರ್ಣೇಶ ಅನಾಥರಂತೆ ಬದುಕುತ್ತಿದ್ದಾರೆ. ಒಂದೆಡೆ ಮಾರಣಾಂತಿಕ ದಾಳಿ, ಭಯದ ಬದುಕು, ಇನ್ನೊಂದೆಡೆ ಆಸ್ಪತ್ರೆ ಓಡಾಟದ ಖರ್ಚು, ದುಡಿಯುವ ಕೈಗಳಿಲ್ಲದ ಕುಟುಂಬ. ಅಕ್ಷರಷಃ ಈ ಆದಿವಾಸಿ ಕುಟುಂಬ ಬೀದಿಗೆ ಬಂದಿದೆ.

ಕೈ ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಲೇ ಈ ಕುಟುಂಬಕ್ಕೆ ಆಸರೆಯಾಗೋದು ಮನುಷ್ಯಪರರ ಜವಾಬ್ದಾರಿ. ನಾವೆಲ್ಲ ಕುಟುಂಬಕ್ಕೆ ಇಪ್ಪತ್ತು ಲಕ್ಷ ಪರಿಹಾರಕ್ಕೆ ಆಗ್ರಹಿಸುತ್ತಿದ್ದರೂ, ಅಹಿಂದ ಸರಕಾರ ಕಿವಿ ತೆರೆಯುತ್ತಿಲ್ಲ, ಕನಿಷ್ಟ ಉಸ್ತುವಾರಿ ಸಚಿವರು ಸುಂದರ ಮಲೆಕುಡಿಯರ ಮುಖನೋಡಿಲ್ಲ. ಹೋರಾಟ, ಬೆಂಬಲದ ಜೊತೆಗೆ ಆರ್ಥಿಕ ಸಹಾಯವನ್ನೂ ಸಾಧ್ಯವಾದಷ್ಟು ಈ ಆದಿವಾಸಿ ಕುಟುಂಬಕ್ಕೆ ನಾವೆಲ್ಲ ಸೇರಿ ಮಾಡಬೇಕಿದೆ. ಶೋಷಿತ ಜನತೆ ಅಸಹಾಯಕರು ಅಲ್ಲ ಅನ್ನುವುದನ್ನು ಸಾರಿ ಹೇಳಬೇಕಿದೆ.

ಸಹಾಯ ಮಾಡ ಬಯಸುವವರು ನೇರವಾಗಿ, ಸುಂದರ ಮಲೆಕುಡಿಯರ ಮಗ ಪೂರ್ಣೇಶನ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಬಹುದು.
Poornesh.
State Bank of india, 
Branch: ujire. 
Account no: 32479910949
IFSC code: SBIN0015317

ಆಗ 11, 2015

ಲಜ್ಜೆಗೆಟ್ಟ ಕಾಂಗ್ರೆಸ್ಸಿನಿಂದ ಪಂಚ ಭಾಷಾ ಪ್ರಣಾಳಿಕೆ.

Dr Ashok K R
ಬಿಬಿಎಂಪಿ ಚುನಾವಣೆಯನ್ನು ಮುಂದಕ್ಕಾಕುವ ಸರಕಾರದ ಎಲ್ಲಾ ಪ್ರಯತ್ನಗಳನ್ನೂ ನ್ಯಾಯಾಲಯಗಳು ತಳ್ಳಿಹಾಕಿದ ಪರಿಣಾಮವಾಗಿ ಈ ತಿಂಗಳಾಂತ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಪಕ್ಷಗಳ ರಾಜಕೀಯ ಚಟುವಟಿಕೆಯೂ ಹೆಚ್ಚಾಗಿದೆ. ನಿನ್ನೆ ಕಾಂಗ್ರೆಸ್ ಪಕ್ಷವು ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಬಿಬಿಎಂಪಿಯನ್ನು ಮೂರಾಗಿ ಐದಾಗಿ ವಿಭಜಿಸಲು ವಿಪರೀತವಾಗಿ ಪ್ರಯತ್ನಪಟ್ಟು ಸದ್ಯಕ್ಕೆ ವಿಫಲವಾಗಿರುವ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ತಮಿಳು, ತೆಲುಗು ಭಾಷೆಗಳಲ್ಲಿ ಪ್ರಕಟಮಾಡಿ ವೋಟುಗಳಿಗೋಸ್ಕರ ಬೆಂಗಳೂರಿನಲ್ಲಿ ಕನ್ನಡವನ್ನು ಇಲ್ಲವಾಗಿಸುವುದಕ್ಕೂ ತಾನು ಹೇಸುವುದಿಲ್ಲ ಎಂದು ತೋರಿಸಿಕೊಟ್ಟಿದೆ. ಸಾಮಾನ್ಯವಾಗಿ ಪ್ರಣಾಳಿಕೆಯನ್ನು ಕನ್ನಡದಲ್ಲಿ ಮತ್ತು ನಮಗೆ ಬೇಕೋ ಬೇಡವೋ ಅನಿವಾರ್ಯವಾಗಿಬಿಟ್ಟಿರುವ ಇಂಗ್ಲೀಷಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿಕೊಂಡ ಕರ್ನಾಟಕದಲ್ಲಿ ಅನ್ಯಭಾಷಿಕರ ಸಂಖೈ ಹೆಚ್ಚುತ್ತಲೇ ಇರುವುದು ಸತ್ಯ. ಜೊತೆಗೆ ಬೆಂಗಳೂರು ತಮಿಳುನಾಡು ಮತ್ತು ಆಂಧ್ರ ಗಡಿಗಳಿಗೆ ಹೊಂದಿಕೊಂಡಂತೆಯೇ ಇರುವುದರಿಂದ ಸಹಜವಾಗಿ ಅನೇಕ ಪ್ರದೇಶಗಳಲ್ಲಿ ತೆಲುಗು ಮತ್ತು ತಮಿಳು ಭಾಷಿಕರು ನೆಲೆಸಿದ್ದಾರೆ. ಅನ್ಯ ರಾಜ್ಯಗಳಿಂದ ಬಂದವರು ಕನ್ನಡ ಕಲಿಯುವಂತೆ ಪ್ರೇರೇಪಿಸಬೇಕಾದ ಕರ್ನಾಟಕ ಸರಕಾರ ಅವರ ವೋಟುಗಳನ್ನು ಪಡೆಯಲೋಸುಗ ಅವರ ಭಾಷೆಯಲ್ಲಿಯೇ ಪ್ರಣಾಳಿಕೆ ಬಿಡುಗಡೆ ಮಾಡುವಂತಹ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ಸರಿಯೇ? 
ಆಂಧ್ರದ ಒವೈಸಿ, ಚಂದ್ರಬಾಬು ನಾಯ್ಡು ತಮಿಳುನಾಡಿನ ಜಯಲಲಿತಾ ತಮ್ಮ ತಮ್ಮ ಪಕ್ಷವನ್ನು ಬಿಬಿಎಂಪಿ ಚುನಾವಣೆಗೆ ಅಣಿಗೊಳಿಸುತ್ತಿದೆಯಂತೆ ಎಂಬ ಸುದ್ದಿಗಳು ಕಾಂಗ್ರೆಸ್ಸಿನ ಈ ನಿರ್ಧಾರಕ್ಕೆ ಕಾರಣವಾಯಿತಾ? ಕನ್ನಡಿಗರ ರಾಷ್ಟ್ರೀಯ ಪಕ್ಷಗಳ ಮೇಲಿನ ಪ್ರೇಮದಿಂದ ಹಿಂದಿ ಹೇರಿಕೆಯೆಂಬುದು ನಿರಂತರವಾಗಿಬಿಟ್ಟಿದೆ. ಈಗ ಬೆಂಗಳೂರಿನಲ್ಲಿ ಅನ್ಯಭಾಷಾ ಪ್ರಣಾಳಿಕೆಯನ್ನು ಕಣ್ಣು ಕಣ್ಣು ಬಿಟ್ಟು ನೋಡುವ ಸರದಿ ಬೆಂಗಳೂರಿಗರದು. ಬಿಬಿಎಂಪಿ ವಿಭಜನೆಯಾಗುವ ಮುನ್ನವೇ ಭಾಷಾ ವಿರೋಧಿಯಾಗಿ ವರ್ತಿಸುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಪ್ಪಿತಪ್ಪಿ 'ಆಡಳಿತದ' ಹೆಸರಿನಲ್ಲಿ ಬಿಬಿಎಂಪಿಯನ್ನು ವಿಭಜನಗೊಳಿಸಿಬಿಟ್ಟರೆ ಯಾವ ರೀತಿ ವರ್ತಿಸಬಹುದು? ತೆಲುಗು ಭಾಷಿಕರು ಹೆಚ್ಚಿರುವ ಪ್ರದೇಶದಲ್ಲಿ ಕೇವಲ ತೆಲುಗು ಪ್ರಣಾಳಿಕೆ, ತಮಿಳರು ಹೆಚ್ಚಿರುವ ಕಡೆ ತಮಿಳು ಪ್ರಣಾಳಿಕೆ, ಉರ್ದು ಭಾಷಿಕರಿರುವ ಕಡೆ (ಇಲ್ಲಿರುವ ಮುಸ್ಲಿಮರು ಮಾತನಾಡುವುದು ಉರ್ದುವಾ?) ಉರ್ದು ಪ್ರಣಾಳಿಕೆಯನ್ನಷ್ಟೇ ಪ್ರಕಟಿಸಿ ಕನ್ನಡವನ್ನೇ ಮೂಲೆಗುಂಪು ಮಾಡಿಬಿಡುವ ದಿನಗಳು ದೂರವಿಲ್ಲ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮರಾಠಿ ಪಕ್ಷಗಳು ನಗರಸಭೆಗಳಲ್ಲಿ ನಿರ್ಣಯ ತೆಗೆದುಕೊಂಡಂತೆ ಮುಂದೊಂದು ದಿನ ಬೆಂಗಳೂರಿನ ಈ ಭಾಗವನ್ನು ಆಂಧ್ರಕ್ಕೆ ತಮಿಳುನಾಡಿಗೆ ಸೇರಿಸಿಬಿಡಿ ಎಂಬ ನಿರ್ಣಯಗಳೂ ಕೇಳಿ ಬರಬಹುದು. 
ಒಟ್ಟಿನಲ್ಲಿ ಕನ್ನಡ, ಕರ್ನಾಟಕ ಎಂದು ಎದೆತಟ್ಟಿ ಹೇಳುತ್ತಾ ದೇಶವನ್ನೇ ಎದುರುಹಾಕಿಕೊಳ್ಳುವ ಪಕ್ಷವೊಂದು ಕರ್ನಾಟಕದಲ್ಲಿ ಇಲ್ಲದ ಫಲಗಳನ್ನು ನಾವೀಗ ನೋಡುತ್ತಿದ್ದೇವೆ. ದೇಶ ಮೊದಲು ಎಂಬ 'ವಿಶಾಲ ಮನೋಭಾವವನ್ನು' ತೊರೆದು ರಾಜ್ಯ ಮೊದಲು ಭಾಷೆ ಮೊದಲು ಎಂಬ 'ಸಂಕುಚಿತ ಮನೋಭಾವವನ್ನು' ಬೆಳೆಸಿಕೊಳ್ಳದಿದ್ದರೆ ಈ ರಾಜಕಾರಣಿಗಳ ಸೋಗಲಾಡಿತನದಿಂದ ಕನ್ನಡಕ್ಕೆ ಚೇತರಿಸಿಕೊಳ್ಳಲಾಗದ ಪೆಟ್ಟು ಬೀಳುತ್ತದೆ.

ಆಗ 10, 2015

ಅಹಂ ನಾನೇಶ್ವರ!

ಒಂದಷ್ಟು ಗಿಮಿಕ್ಕು, ಬಹಳಷ್ಟು ವಿಚಿತ್ರ ವಿಕ್ಷಿಪ್ತತೆಗೆ ಹೆಸರಾಗಿರೋ ಉಪೇಂದ್ರ ನಿರ್ದೇಶನದ ಹೊಸ ಚಿತ್ರ ಉಪ್ಪಿ 2 ಟೀಸರ್ ಸದ್ದು ಮಾಡುತ್ತಿದೆ. ಮೈಮೇಲೆಲ್ಲಾ ಬೂದಿ ಬಳಿದುಕೊಂಡು ಉಲ್ಟಾ ನಿಂತಿರೋ ಉಪೇಂದ್ರ ತಮ್ಮ ಉಲ್ಟುಲ್ಟಾ ಸ್ಟೈಲುಗಳಿಂದಲೇ ಮತ್ತೆ ಜನರ ಮನ ಗೆಲ್ಲುತ್ತಾರಾ? ಆಗಸ್ಟ್ ಹದಿನಾಲ್ಕಕ್ಕೆ ಗೊತ್ತಾಗುತ್ತದೆ. ಉಪೇಂದ್ರನೆಂಬ ನಿರ್ದೇಶಕ ಗೆಲ್ಲಬೇಕು.

ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಿಗೊಂದು ಬಹಿರಂಗ ಪತ್ರ!

ಸನ್ಮಾನ್ಯ ಅಧ್ಯಕ್ಷರಿಗೆ ನಮಸ್ಕಾರಗಳು,
ಮೊದಲಿಗೆ ನಿಮ್ಮ ಕ್ಷಮೆ ಕೋರುತ್ತೇನೆ: ಹೀಗೊಂದು ಬಹಿರಂಗ ಪತ್ರ ಬರೆದು ಬಿಡುವಿರದ ತಮ್ಮ ಸಮಯವನ್ನು ಹಾಳು ಮಾಡುತ್ತಿರುವುದಕ್ಕೆ.

ವಿಷಯ ನಿಮಗೆ ಗೊತ್ತಿಲ್ಲದ್ದೇನೂ ಅಲ್ಲ! ನಮ್ಮ ಅರ್ಧ ನಾಡು ಮಳೆಯಿರದೆ ಬರದಿಂದ ತತ್ತರಿಸುತ್ತಿದೆ. ಈಗಾಗಲೇ ತಮಗಾದ ಬೆಳೆನಷ್ಟ ಮತ್ತು ತೀರಿಸಲಾಗದ ಸಾಲಭಾದೆಯಿಂದ ಬಹಳಷ್ಟು ರೈತರು ಆತ್ಮಹತ್ಯೆಯ ಹಾದಿ ಹಿಡಿದು ನಡೆದು ಹೋಗಿದ್ದಾರೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಬಹುದೆಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಇದುವರೆಗು ಎಷ್ಟು ಜನ ಆತ್ಮಹತ್ಯೆ ಮಾಡಿಕೊಂಡರು ಎಂಬ ಅಂಕಿ ಅಂಶಗಳ ಒಣಪಾಠವನ್ನು ನಾನಿಲ್ಲಿ ಒಪ್ಪಿಸಹೋಗುವುದಿಲ್ಲ ಮತ್ತು ಅದು ನನ್ನ ಉದ್ದೇಶವೂ ಅಲ್ಲ. 

ಇರಲಿ ವಿಷಯಕ್ಕೆ ಬರುತ್ತೇನೆ: ಈಗಾಗಲೇ ಕೆಲವು ಜನಪರ ಸಂಘಟನೆಗಳು ಅಕ್ಟೋಬರಿನಲ್ಲಿ ರಾಯಚೂರಿನಲ್ಲಿ ನಡೆಯಲಿರುವ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನವನ್ನು ಮುಂದೂಡಬೇಕೆಂಬ ಬೇಡಿಕೆ ಇಟ್ಟಿರುವುದು ತಮಗೆ ತಿಳಿದ ವಿಚಾರವಾಗಿದೆ. ನಾನು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಈ ವರ್ಷದ ಸಮ್ಮೇಳನವನ್ನೇ ರದ್ದು ಮಾಡಬೇಕೆಂದು ಕೋರುತ್ತೇನೆ. ಕ್ಷಮಿಸಿ, ಹೀಗೆ ಹೇಳದೆ ವಿಧಿಯಿಲ್ಲ. ಯಾಕೆಂದರೆ ಬರಗಾಲದ ಇಂತಹ ಸನ್ನಿವೇಶದಲ್ಲಿ, ಜೊತೆಗೆ ಸಾಲು ಸಾಲಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸಮಯದಲ್ಲಿ ನಾವುಗಳು ಸಾಹಿತ್ಯ ಸಮ್ಮೇಳನದ ಹೆಸರಲ್ಲಿ ಸರಕಾರದ ಹಣವನ್ನು ಖರ್ಚು ಮಾಡಿ ಹಬ್ಬದ ಸಡಗರವನ್ನು ಆಚರಿಸುವುದು ಸೂಕ್ತವಲ್ಲವೆಂದು ನನ್ನ ಅನಿಸಿಕೆಯಾಗಿದೆ. ಇದರಲ್ಲಿ ಹಣದ ವಿಷಯ ಮಾತ್ರ ಅಡಕವಾಗಿಲ್ಲ. ಬದಲಿಗೆ ಸೂಕ್ಷ್ಮ ಮನಸ್ಸಿನವರೆನಿಸಿಕೊಂಡ ಸಾಹಿತಿಗಳ ಮತ್ತು ಸಾಹಿತ್ಯಾಸಕ್ತರ ನೈತಿಕ ಹೊಣೆಗಾರಿಕೆಯಾಗಿದೆ. ಸಾಹಿತಿಯಾದವನು ಕೊನೆಗೂ ಹೊಣೆಗಾರನಾಗುವುದು ತಾನು ಬದುಕುವ, ಬರೆಯುವ ಸಮಾಜಕ್ಕೆ ತಾನೆ? ಈ ವಿಚಾರವನ್ನು ನಾನು ಬಹಳಷ್ಟು ಜನರ ಜೊತೆ ಚರ್ಚಿಸಿದಾಗ ಕೇಳಿಬಂದ ಅಭಿಪ್ರಾಯಗಳು ಆಘಾತಕಾರಿಯಾಗಿದ್ದವು. ಅವುಗಳಲ್ಲಿ ಕೆಲವನ್ನು ನಾನಿಲ್ಲಿ ಹೇಳಬಯಸುತ್ತೇನೆ: ಮೊದಲ ಅನಿಸಿಕೆ ಒಂದು ಊರಲ್ಲಿ ಯಾರಾದರು ಸತ್ತರೆ ಆ ಊರಿನವರೇನು ಉಪವಾಸ ಇರುವುದಿಲ್ಲ. ಹೌದು ನಾನು ಒಪ್ಪುತ್ತೇನೆ, ಊರವರಿರಲಿ ಆ ಮನೆಯವರೆ ಯಾರೂ ಉಪವಾಸ ಇರುವುದಿಲ್ಲ. ಮಣ್ಣು ಮುಗಿದ ಮೇಲೆ ಅವರೂ ಉಣ್ಣುತ್ತಾರೆ, ಯಥಾ ಪ್ರಕಾರ ಜೀವನ ಸಾಗುತ್ತದೆ. ಆದರೆ ಸತ್ತವರ ಸೂತಕದ ಮನೆಯಲ್ಯಾರು ಹಬ್ಬದ ಅಡುಗೆ ಮಾಡಿ ಚಪ್ಪರ ಹಾಕಿ ಉಂಡು ನಲಿಯುವುದಿಲ್ಲ. ಇನ್ನೊಂದು ಅನಿಸಿಕೆ: ಸಮ್ಮೇಳನ ರದ್ದು ಮಾಡಿದರೆ ರಾಯಚೂರು ಭಾಗದ ಜನರ ಬಾವನೆಗಳಿಗೆ ಧಕ್ಕೆ ಯಾಗುತ್ತದೆ. ಇದನ್ನು ಖಂಡಿತಾ ಒಪ್ಪಲು ಸಾದ್ಯವಿಲ್ಲ .ಸಮ್ಮೇಳನದಿಂದ ಲಾಭ ಮಾಡಿಕೊಳ್ಳುವ ಕೆಲವರಿಗೆ ಬೇಸರವಾಗಬಹುದೇನೊ ಆದರೆ ತಮ್ಮ ರೈತ ಬಂದುಗಳನ್ನು ಕಳೆದುಕೊಂಡು ಬರದಿಂದ ತತ್ತರಿಸುತ್ತಿರುವ ಆ ಭಾಗದ ಜನರು ಇದನ್ನವರು ಮನಪೂರ್ವಕವಾಗಿಯೇ ಸ್ವಾಗತಿಸುತ್ತಾರೆ. ನನಗೆ ಅರಿವಿರುವಂತೆ ನಮ್ಮ ಜನ ಸಾವಿನ ಮನೆಯಲ್ಲಿ ಸಂಭ್ರಮ ಆಚರಿಸುವವರಲ್ಲ. ಇನ್ನು ಕೆಲವರ ಪ್ರಶ್ನೆ ರಾಜಕಾರಣಿಗಳು ಯಾವುದನ್ನು ನಿಲ್ಲಿಸಿದ್ದಾರೆಂಬುದು? ಇದು ಎಲ್ಲದಕ್ಕೂ ರಾಜಕಾರಣವನ್ನು ಹೊಣೆ ಮಾಡುವ ಪ್ರಶ್ನೆ. ಒಂದು ಸಾಹಿತ್ಯ ಸಮ್ಮೇಳನ ನಡೆಸುವುದು ಬಿಡುವುದು ಪರಿಷತ್ತು ಮತ್ತು ಸಾಹಿತ್ಯಾಸಕ್ತರ ಕೆಲಸವೇ ಹೊರತು ರಾಜಕಾರಣಿಗಳದ್ದಲ್ಲ. ಹಾಗಾಗಿ ನಾವು ಎಲ್ಲದಕ್ಕೂ ರಾಜಕಾರಣಿಗಳನ್ನು ದೂರುವುದು ತರವಲ್ಲ. ಸಾಹಿತ್ಯ ಸಮ್ಮೇಳನವೆನ್ನುವುದು ಕನ್ನಡಿಗರ ಕೆಲಸ. ಅದನ್ನು ಮಾಡುವುದು ಬೇಡವೆನ್ನುವುದು ಅವರದೇ ನಿರ್ಧಾರ. ಇನ್ನು ಕನ್ನಡಿಗರ ಅಭಿಮಾನಕ್ಕೆ ಬರಬಂದಿಲ್ಲ. ದುಡ್ಡು ಕೊಡುವವರು ಇದ್ದಾರೆ . ಸಮ್ಮೇಳನ ನಡೆಯಲಿ. ಎನ್ನುವವರೂ ಇದ್ದಾರೆ. ಹೌದು ಕನ್ನಡಿಗರ ಅಭಿಮಾನವಿರಬೇಕಾಗಿದ್ದು: ಮೊದಲು ಅನ್ನ ಕೊಡುವ ಮಣ್ಣಿನ ಮಕ್ಕಳ ಬಗ್ಗೆ. ಅದರ ತರುವಾಯವೇ ಸಾಹಿತ್ಯ ಕಲೆಗಳೆಲ್ಲ. ಹೀಗೆ ವಾದ ಮಾಡುತ್ತಾ ಹೋದರೆ ಮಾಡುತ್ತಲೇ ಹೋಗಬಹುದು. ಆದರೆ ನನ್ನ ವಿಚಾರ ಅದಲ್ಲ. ಒಂದು ಸಾಹಿತ್ಯ ಸಮ್ಮೇಳನವನ್ನು ರದ್ದು ಮಾಡುವುದರಿಂದ ಕನ್ನಡ ಸಾಹಿತ್ಯವೇನೂ ಸತ್ತು ಹೋಗುವುದಿಲ್ಲ. ಹಾಗೆಯೇ ರದ್ದು ಮಾಡುವುದರಿಂದ ಸತ್ತವರೂ ಎದ್ದು ಬರುವುದಿಲ್ಲ. ಹಾಗಾಗಿ ಸಮ್ಮೇಳನವನ್ನು ರದ್ದು ಮಾಡಬೇಕೆನ್ನುವ ನನ್ನ ಉದ್ದೇಶ: ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ನಾವು ನಿಮ್ಮೊಂದಿಗಿದ್ದೇವೆ, ನಿಮ್ಮ ದು:ಖದಲ್ಲಿ ನಾವುಗಳು ಪಾಲುದಾರರು ಎಂಬ ಭಾವನೆ ಮೂಡಿಸಿ, ಆತ್ಮಹತ್ಯೆಯಂತಹ ವಿಚಾರಗಳಿಂದ ಅವರುಗಳನ್ನು ಹೊರತರುವ ಮಾನವೀಯ ಕಾಳಜಿಮಾತ್ರವಾಗಿದೆ. ಇಂತಹದೊಂದು ಕನಿಷ್ಠ ಸೌಜನ್ಯವನ್ನೂ ನಾವು ತೋರಿಸದೇ ಹೋದಲ್ಲಿ ನಾವು ರಚಿಸುವ ಸಾಹಿತ್ಯಕ್ಕೆ ಅರ್ಥವಿರುವುದಿಲ್ಲ.

ಅದರ ಬದಲಿಗೆ ಅದೇ ಅಕ್ಟೋಬರ್ ತಿಂಗಳಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿ ಜಿಲ್ಲೆಯಲ್ಲೂ, ಏಕಕಾಲಕ್ಕೆ ರೈತರ ಸಮಸ್ಯೆಗಳು ಮತ್ತು ಪರಿಹಾರಗಳ ಹುಡುಕಾಟ ಎಂಬ ವಿಚಾರವನ್ನಿಟ್ಟುಕೊಂಡು ಹೆಚ್ಚು ಖರ್ಚಿಲ್ಲದೆ ವಿಚಾರಸಂಕಿರಣಗಳನ್ನು ನಡೆಸಬಹುದಾಗಿದೆ. ಇಂತಹ ಸಂಕಿರಣಗಳಲ್ಲಿ ಆಯಾ ಜಿಲ್ಲೆಯ ಸಾಹಿತಿಗಳು ಕೃಷಿ ತಜ್ಞರು, ಪ್ರಗತಿಪರರು ಬಾಗವಹಿಸುವಂತೆ ನೋಡಿಕೊಳ್ಳಬಹುದಾಗಿದೆ. ತದನಂತರ ಸಂಕಿರಣದಲ್ಲಿ ಹೊರಹೊಮ್ಮಿದ ಮುಖ್ಯ ಅಂಶಗಳನ್ನು ಕ್ರೋಢೀಕರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಬಹುದು. ಇದು ನನ್ನ ವಿನಮ್ರ ಸಲಹೆ ಮಾತ್ರ.

ಇದರೊಂದಿಗೆ ಸರಕಾರ ಕೊಡುವ ಒಂದೆರಡು ಕೋಟಿ ಅನುದಾನವನ್ನು ರೈತರಿಗೆ ನಿಜಕ್ಕೂ ಅನುಕೂಲವಾಗುವ ಯಾವುದಾದರು ಯೋಜನೆಗೆ ಬಳಸಲು,ಪರಿಷತ್ತು ಸರಕಾರಕ್ಕೆ ಒತ್ತಾಯಿಸಬೇಕು.

ಆದ್ದರಿಂದ ಸಾಹಿತ್ಯಪರಿಷತ್ತಿನ ಅದ್ಯಕ್ಷರಿಗೆ ನಾನು ಮನವಿ ಮಾಡಿಕೊಳ್ಳುವುದೇನೆಂದರೆ ದಯಮಾಡಿ ಸಾಹಿತ್ಯ ಸಮ್ಮೇಳವನ್ನು ಈವರ್ಷ ರದ್ದು ಮಾಡಿ. ನಿಮ್ಮ ಅವಧಿ ಮುಗಿದ ನಂತರ- ಬರವಿದ್ದರೂ ಸಮ್ಮೇಳನ ನಡೆಸಿದವರು ಅನಿಸಿಕೊಳ್ಳುವುದಕ್ಕಿಂತ ಬರದ ಕಾರಣದಿಂದ ಸಮ್ಮೇಳನವನ್ನು ರದ್ದು ಮಾಡಿ ರೈತಪರ ಕಾಳಜಿಯನ್ನು ಮೆರೆದವರೆಂದು ಗುರುತಿಸಿಕೊಳ್ಳುವುದು ಹೆಮ್ಮೆಯ ವಿಷಯವೆಂದು ನನಗನ್ನಿಸುತ್ತದೆ. ಇತಿಹಾಸದ ಪುಟಗಳನ್ನು ಸೇರುವುದು ಮುಖ್ಯವಲ್ಲ, ಯಾಕೆ ಸೇರಲಾಯಿತು ಅನ್ನುವುದೇ ಮುಖ್ಯವಲ್ಲವೇ ಸರ್. ದಯಮಾಡಿ ಯೋಚಿಸಿ , ನಿಮ್ಮ ಪದಾಧಿಕಾರಿಗಳನ್ನು ನನಗಿಂತ ಹಿರಿಯರಾದ ಸಾಹಿತಿಗಳನ್ನು, ಬುದ್ದಿಜೀವಿಗಳನ್ನು ಸಂಪರ್ಕಿಸಿ ಒಂದು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಕೋರುತ್ತೇನೆ.

ಕು.ಸ.ಮಧುಸೂದನ್ ನಾಯರ್