ಸೆಪ್ಟೆಂ 20, 2016
ಸೆಪ್ಟೆಂ 18, 2016
ಸೆಪ್ಟೆಂ 17, 2016
ಮರಳಿ ಭೂಮಿ ಪಡೆದ ಸಿಂಗೂರಿನ ರೈತರು: ಕೃಷಿವಲಯಕ್ಕೆ ಸಂದ ಜಯ!
ಸಾಂದರ್ಭಿಕ ಚಿತ್ರ |
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
17/09/2016
ಸುದ್ದಿ-ನಿನ್ನೆ ಮಮತಾಬ್ಯಾನರ್ಜಿಯವರು ಸಿಂಗೂರಿನ ರೈತರಿಗೆ ಅವರ ಕೃಷಿಭೂಮಿಯನ್ನು ಪರಿಹಾರದ ಸಮೇತ ಮರಳಿಸಿದ್ದಾರೆ!
ಇಡೀ ಇಂಡಿಯಾ ಮುಕ್ತ ಆರ್ಥಿಕ ನೀತಿಗೆ ತನ್ನನ್ನು ತೆರದುಕೊಂಡು ತನ್ನ ಸಮಾಜವಾದಿ ಆಶಯಗಳನ್ನೆಲ್ಲ ಗಾಳಿಗೆ ತೂರುವ ರೀತಿಯಲ್ಲಿ ಹೊಸ ಹೊಸ ಶಾಸನಗಳನ್ನು ರೂಪಿಸುತ್ತಿರುವ ಈ ಹೊತ್ತಿನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾದ ಕುಮಾರಿ ಮಮತಾ ಬ್ಯಾನರ್ಜಿಯವರ ಈ ನಡೆ ನನ್ನ ಮಟ್ಟಿಗಂತು ಐತಿಹಾಸಿಕವೆನಿಸುತ್ತಿದೆ. ಏಕೆಂದರೆ ಚುನಾವಣೆಗಳಲ್ಲಿ ನೀಡುವ ಜನಪರ ಆಶ್ವಾಸನೆಗಳನ್ನು ನೆನಪಲ್ಲಿಟ್ಟುಕೊಂಡು ರಾಜಕಾರಣ ಮಾಡುವವರ ಸಂಖ್ಯೆ ವಿರಳವಾಗುತ್ತಿರುವ ಈ ದಿನಗಳಲ್ಲಿ, ತಾವು ಅಧಿಕಾರದಲ್ಲಿರದೆ ಹೋದಾಗ ಸಿಂಗೂರು ರೈತರ ಹೋರಾಟದಲ್ಲಿ ಬಾಗವಹಿಸಿ ಅವರಿಗೆ ಭೂಮಿಯನ್ನು ಮರಳಿಸುವುದಾಗಿ ಭರವಸೆ ನೀಡಿಯೇ ಅಧಿಕಾರದ ಖುರ್ಚಿಗೆ ಲಗ್ಗೆ ಹಾಕಿದ ಅವರು ತಮ್ಮ ಮಾತನ್ನು ಉಳಿಸಿಕೊಳ್ಳುವುದರ ಮೂಲಕ ಎರಡು ಅಂಶಗಳನ್ನು ಭಾರತೀಯರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ.
ಸೆಪ್ಟೆಂ 16, 2016
ಮೇಕಿಂಗ್ ಹಿಸ್ಟರಿ: ಐಜೂರ್ - ಕೊಪ್ಪಳ - ಬೀದರ್ - ಸಿಂಧಗಿ.
ಸಾಕೇತ್ ರಾಜನ್
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
16/09/2016
ಶ್ರೀರಂಗಪಟ್ಟಣದಿಂದ ಓಡಿಹೋದ ಮೇಲೆ ದೊಂಡಿಯಾ ಮೊದಲಿಗೆ ತಲುಪಿದ್ದು ಬ್ರಿಟೀಷರ ವಿರುದ್ಧ ಹೋರಾಡಲು ತಯಾರಿ ಮಾಡಿಕೊಳ್ಳುತ್ತಿದ್ದ ಪಾಳೇಗಾರ ವೆಂಕಟಾದ್ರಿ ನಾಯಕರ ಪ್ರಾಂತ್ಯವಾದ ಐಜೂರಿಗೆ.
ಹಾಸನದ ಸಕಲೇಶಪುರ ತಾಲ್ಲೂಕಿನ ಐಜೂರಿನ ಪಾಳೇಗಾರರು ಇಕ್ಕೇರಿಯ ನಾಯಕರ ಸಾಮಂತರು. ಕೊಡವರನ್ನು ನಿಗ್ರಹಿಸಲು ಪ್ರಯತ್ನಿಸಿ ಕಲಿತ ಪಾಠಗಳಿಂದ, ಟಿಪ್ಪು ಐಜೂರಿನ ಪಾಳೇಗಾರ ಕೃಷ್ಣಪ್ಪ ನಾಯಕನೊಡನೆ ಗೆಳೆತನ ಬೆಳೆಸಿಕೊಂಡು; ಐಜೂರಿನ ಪಾಳೇಗಾರ ಕೃಷ್ಣಪ್ಪ ನಾಯಕ ಬ್ರಿಟೀಷರಿಗೆ ಬೆಂಬಲ ಕೊಡುತ್ತಿದ್ದರೂ ಅವನೊಡನೆ ಗೆಳೆತನ ಬೆಳೆಸಿಕೊಂಡ ಟಿಪ್ಪು, ಅವನಿಗೆ ತನ್ನ ಪ್ರಾಂತ್ಯವನ್ನು ಉಳಿಸಿಕೊಳ್ಳಲು ಅನುಮತಿ ನೀಡಿದ, ವಾರ್ಷಿಕ ಕಪ್ಪ ಕಾಣಿಕೆಯನ್ನು ಶ್ರೀರಂಗಪಟ್ಟಣಕ್ಕೆ ನೀಡಬೇಕು ಎಂಬ ಶರತ್ತಿನೊಂದಿಗೆ. ನಂತರ, ಬೆಂಗಳೂರು ಮಂಗಳೂರು ರಸ್ತೆಯಲ್ಲಿರುವ ಬಲ್ಲಂ ಪ್ರದೇಶದಲ್ಲಿ ಮಂಜರಾಬಾದ್ ಕೋಟೆಯನ್ನು ಕಟ್ಟಿದ, ಕರಾವಳಿಯೊಡನೆ ತೊಂದರೆಯಿಲ್ಲದ ವಾಣಿಜ್ಯಕ ವ್ಯವಹಾರವನ್ನು ಸಾಧಿಸಿದ.
ರೋಗಗ್ರಸ್ತ ಸಾರ್ವಜನಿಕ ಉದ್ದಿಮೆಗಳಿಗೆ ಅಂತಿಮ ಸಂಸ್ಕಾರ! ನೀತಿ ಆಯೋಗದಿಂದ ಸರಕಾರಕ್ಕೆ ಸೂಚನೆ
ಕು.ಸ. ಮಧುಸೂದನ್ ರಂಗೇನಹಳ್ಳಿ.
16/09/2016
ನಷ್ಟದಲ್ಲಿವೆಯೆಂದು ಹೇಳಲಾಗುತ್ತಿರುವ ಸುಮಾರು 74 ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳ ಪಟ್ಟಿಯನ್ನು ಸರಕಾರಕ್ಕೆ ನೀಡಿರುವ ನೀತಿ ಆಯೋಗವು ಬಹುತೇಕ ಅವುಗಳನ್ನು ಮುಚ್ಚುವ ಅಥವಾ ಖಾಸಗಿಯವರಿಗೆ ವಹಿಸಿಕೊಡುವ ಪ್ರಸ್ತಾವನೆಯನ್ನು ಸಲ್ಲಿಸಿದೆ.
ತೊಂಭತ್ತರ ದಶಕದಲ್ಲಿ ಆರಂಭಗೊಂಡ ಜಾಗತೀಕರಣದ ಪ್ರಕ್ರಿಯೆಯನ್ನು ಅರ್ಥಮಾಡಿಕೊಂಡವರ್ಯಾರಿಗೂ ನೀತಿ ಆಯೋಗದ ಇವತ್ತಿನ ಈ ನಡೆ ಅಚ್ಚರಿಯನ್ನೇನು ಉಂಟು ಮಾಡುವುದಿಲ್ಲ. ಯಾಕೆಂದರೆ ಮುಕ್ತ ಆರ್ಥಿಕ ನೀತಿಯ ಮೂಲ ಉದ್ದೇಶವೇ ಸರಕಾರಿ ಸ್ವಾಮ್ಯದ ಎಲ್ಲ ಉದ್ದಿಮೆಗಳನ್ನು ಖಾಸಗಿ ಬಂಡವಾಳಶಾಹಿಗಳ ಪಾದಗಳಿಗೆ ಸಮರ್ಪಿಸುವುದಾಗಿತ್ತು. ಸರಕಾರದ ಕೆಂಪು ಪಟ್ಟಿಗಳ, ಲೈಸೆನ್ಸ್ ರಾಜ್ ಬಗ್ಗೆ ಮಾತಾಡುವ ಮುಕ್ತ ಆರ್ಥಿಕ ನೀತಿಯ ಪರವಾದ ಬಂಡವಾಳಶಾಹಿಗಳ ಹುನ್ನಾರವೇ ಸಮಾಜವಾದಿ ವ್ಯವಸ್ತೆಯಲ್ಲಿರಬಹುದಾದ ದೋಷಗಳನ್ನು ಭೂತಗನ್ನಡಿಯಲ್ಲಿ ತೋರಿಸುತ್ತ, ಜನರ ದೃಷ್ಠಿಯಲ್ಲಿ ಸರಕಾರಿ ಸ್ವಾಮ್ಯದ ಉದ್ದಿಮೆಗಳೆಂದರೆ ಭ್ರಷ್ಟಾಚಾರದ ಕೂಪಗಳೆಂಬ ಅನುಮಾನ ಮೂಡಿಸಿ, ಖಾಸಗಿಯವರು ಮಾತ್ರ ಅವುಗಳನ್ನು ಉದ್ದಾರ ಮಾಡಬಲ್ಲರೆಂಬ ನಂಬಿಕೆಯೊಂದನ್ನು ಹುಟ್ಟು ಹಾಕುವುದಾಗಿದೆ.ಕಳೆದ 25 ವರ್ಷಗಳಲ್ಲಿ ಆಗಿ ಹೋದ ಎಲ್ಲ ಸರಕಾರಗಳ ನೀತಿಗಳೂ ಸಹ ಇಂತಹದೊಂದು ಕ್ರಿಯೆಗೆ ಉತ್ತೇಜನ ನೀಡುತ್ತಲೇ ಬಂದವು.
ಸೆಪ್ಟೆಂ 12, 2016
ನವಜೋತ್ ಸಿಂಗ್ ಸಿದ್ದು: ಬಾಜಪದ ಪಾಲಿನ ಮತ್ತೊಬ್ಬ ಯಡಿಯೂರಪ್ಪಆಗಲಿದ್ದಾರೆಯೇ
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
12/09/2016
ನವಜೋತ್ ಸಿಂಗ್ ಸಿದ್ದು ಪಂಜಾಬಿನ ಬಾಜಪದ ಪಾಲಿಗೆ ಮತ್ತೊಬ್ಬ ಯಡಿಯೂರಪ್ಪ ಆಗಲಿದ್ದಾರೆಯೇ?
ಈಗೊಂದು ಸಂಶಯ, ಪಂಜಾಬ್ ರಾಜ್ಯದ ರಾಜಕೀಯ ವಲಯಗಳಲ್ಲಿ, ಬಿರುಸಿನ ಚರ್ಚೆಗಳಲ್ಲಿ ವ್ಯಕ್ತವಾಗುತ್ತಿದೆ. 2013ರ ಕರ್ನಾಟಕದ ವಿದಾನಸಭಾ ಚುನಾವಣೆಗಳಿಗೆ ಮುಂಚೆ ಯಡಿಯೂರಪ್ಪನವರು ಬಾಜಪ ತೊರೆದು ಕೆಜೆಪಿ ಕಟ್ಟಿ ಚುನಾವಣೆಗಳಲ್ಲಿ ಬಾಗವಹಿಸಿದ ಕಾರಣ ಬಾಜಪದ ಸಾಂಪ್ರದಾಯಿಕ ಮತಗಳು ಚದುರಿ ಕಾಂಗ್ರೆಸ್ ಅಧಿಕಾರಕ್ಕೆ ಏರುವಂತಾಗಿದ್ದು ನಿಮಗೆ ನೆನಪಿರಬಹುದು. ಸದ್ಯಕ್ಕೆ ಪಂಜಾಬ್ನಲ್ಲಿಯೂ ಅಂತಹುದೇ ಒಂದು ಸನ್ನಿವೇಶ ನಿರ್ಮಾಣವಾಗುತ್ತಿರುವಂತಿದೆ. ಕೆಲ ತಿಂಗಳ ಹಿಂದೆ ತನ್ನ ರಾಜ್ಯಸಭಾ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಬಂದ ಸಿದ್ದುರವರು ಪಂಜಾಬ್ ಮಟ್ಟಿಗೆ ಬಾಜಪದ ತಾರಾ ಮೆರುಗು ಹೊಂದಿದ ನಾಯಕರಾಗಿದ್ದರು. ಸತತವಾಗಿ ಅಮೃತಸರದಿಂದ ಲೋಕಸಭೆಗೆ ಆಯ್ಕೆಯಾಗುತ್ತ ಬಂದಿದ್ದ ಅವರನ್ನು 2014ರಲ್ಲಿ ಕಡೆಗಣಿಸಿ ಅರುಣ್ ಜೇಟ್ಲಿಯವರಿಗೆ ಟಿಕೇಟು ನೀಡಿದ್ದರ ಪರಿಣಾಮವಾಗಿ ಸಿದ್ದು ಚುನಾವಣಾ ಪ್ರಚಾರದಿಂದ ದೂರ ಉಳಿದು ಜೇಟ್ಲಿಯವರ ಸೋಲಿಗೆ ಪರೋಕ್ಷವಾಗಿ ಕಾರಣರಾಗಿದ್ದರು. ತದನಂತರ ಸಿದ್ದುರವರನ್ನು ಸಮಾದಾನ ಪಡಿಸಲು ಅವರನ್ನು ರಾಜ್ಯಸಭೆಗೆ ಆರಿಸಲಾಯಿತಾದರು, ಪ್ರಂಜಾಬಿನ ರಾಜ್ಯ ರಾಜಕೀಯದಲ್ಲಿ ಅಕಾಲಿದಳಕ್ಕೆ ಕಿರಿಯ ಪಾಲುದಾರ ಪಕ್ಷವಾಗಿರುವ ಬಾಜಪ ಸಿದ್ದುರವರಿಗೆ ಕೊಡಬೇಕಾದಷ್ಟು ಪ್ರಾಧಾನ್ಯತೆ ಕೊಡದೆ ಅವರನ್ನು ನಿರ್ಲಕ್ಷಿಸತೊಡಗಿತ್ತು. ಬಾಜಪದ ರಾಜ್ಯಘಟಕದ ಯಾವೊಂದು ಚಟುವಟಿಕೆಗಳಿಗೂ ಅವರನ್ನು ಬಳಸಿಕೊಳ್ಳದೆ ಅವರನ್ನು ಕೇವಲ ತಾರಾ ಪ್ರಚಾರಕರನ್ನಾಗಿ ಬಳಸಿಕೊಳ್ಳುವ ಬಾಜಪದ ನಡೆಯಿಂದ ಬೇಸರಗೊಂಡ ಸಿದ್ದು ಪಕ್ಷ ತ್ಯಜಿಸಿದಾಗ, ಅವರು ಅರವಿಂದ್ ಕೇಜ್ರೀವಾಲಾರ ಆಮ್ ಆದ್ಮಿ ಪಕ್ಷವನ್ನು ಸೇರುತ್ತಾರೆಂದು ಬಾವಿಸಲಾಗಿತ್ತು. ಅದಕ್ಕೆ ಪೂರಕವಾಗಿ ಸ್ವತ: ಕೇಜ್ರೀವಾಲರೇ ಸಿದ್ದುರವರನ್ನು ಹೊಗಳುತ್ತ ತಮ್ಮ ಪಕ್ಷಕ್ಕೆ ಅವರನ್ನು ಸ್ವಾಗತಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಈ ಬಗ್ಗೆ ಸಾರ್ವಜನಿಕವಾಗಿ ಯಾವ ಪ್ರತಿಕ್ರಿಯೆಗಳನ್ನೂ ನೀಡದ ಸಿದ್ದುರವರು ಮೌನಕ್ಕೆ ಶರಣಾಗಿಬಿಟ್ಟಿದ್ದರು.
ಸೆಪ್ಟೆಂ 9, 2016
ಮೇಕಿಂಗ್ ಹಿಸ್ಟರಿ: ಊಳಿಗಮಾನ್ಯ ದೊರೆಗಳು ಮುನ್ನಡೆಸಿದ ಸಶಸ್ತ್ರ ಹೋರಾಟ
ಸಾಕೇತ್ ರಾಜನ್
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
09/09/2016
ಬ್ರಿಟೀಷರಾಳ್ವಿಕೆಯಲ್ಲಿ ಊಳಿಗಮಾನ್ಯ ದೊರೆಗಳು ತಮ್ಮ ಹಳೆಯ ಸೌಕರ್ಯಗಳನ್ನೆಲ್ಲ ಕಳೆದುಕೊಂಡರು. ಉತ್ತರಾಧಿಕಾರತ್ವದ ಬಗೆಗಿನ ಬ್ರಿಟೀಷರ ನೀತಿಗಳಿಂದಾಗಿ ಕೆಲವು ಕುಟುಂಬಗಳು ನಿರ್ವೀರ್ಯರಾಗುವ ಹಂತಕ್ಕೆ ಬಂದು ನಿಂತಿದ್ದವು. ತಮ್ಮ ಕಳೆದುಹೋದ ಘನತೆಯನ್ನು ಮರಳಿ ಗಳಿಸುವುದಕ್ಕಾಗಿ ಅವರು ಬ್ರಿಟೀಷರನ್ನು ಕಿತ್ತೆಸೆಯುವ ನಿರ್ಧಾರ ಮಾಡಿದ್ದು, 1857ರವರೆಗೆ ನಡೆದ ಸಶಸ್ತ್ರ ಹೋರಾಟಗಳನ್ನು ಅವರು ಮುನ್ನಡೆಸಿದರು. ನಾವೀಗ ಈ ರೀತಿಯ ಪ್ರತಿಯೊಂದು ಹೋರಾಟವನ್ನೂ ಗಮನಿಸೋಣ, ತದನಂತರ ಕರ್ನಾಟಕ ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ನಡೆಸಿದ ಯುದ್ಧಗಳಲ್ಲಿನ ಅವರ ತ್ಯಾಗದ ಅನುಭವಗಳನ್ನು ಒಟ್ಟುಗೂಡಿಸೋಣ.
ಸೆಪ್ಟೆಂ 8, 2016
ದಲಿತ ಮತ್ತು ಮಹಿಳೆಯನ್ನು ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ನೋಡಲು ಇಚ್ಚಿಸದ ನಮ್ಮ ರಾಜಕೀಯ ವ್ಯವಸ್ಥೆ: ಮಾಯಾವತಿಯವರ ವಿರುದ್ದ ಮೂರೂ ಪಕ್ಷಗಳ ಕೆಂಗಣ್ಣು!
08/09/2016
ಇಂಡಿಯಾದ ರಾಜಕಾರಣ ಕಳೆದ ಏಳು ದಶಕಗಳಲ್ಲಿ ಸಾಕಷ್ಟು ಪ್ರಬುದ್ದತೆಯನ್ನು ಪಡೆದಿದೆಯೆಂಬ ಮಾತು ಕೆಲ ಮಟ್ಟಿಗೆ ನಿಜವಾದರು, ಅದರ ಸಮಯಸಾಧಕತನದ ಕನಿಷ್ಠಬುದ್ದಿಯೇನೂ ಕಡಿಮೆಯಾಗಿಲ್ಲವೆಂಬ ಮಾತು ಸಹ ನಿಜ. ಇದರ ಜೊತೆಗೆ ಜಾತಿ ತಾರತಮ್ಯದ ರಾಜಕಾರಣ ಹಿಂದೆಂದಿಗಿಂತಲೂ ಹೆಚ್ಚಾಗಿ ತನ್ನ ಇರುವಿಕೆಯನ್ನು ತೋರಿಸುತ್ತಿರುವುದು ಕೂಡ ಅಷ್ಟೇ ಸತ್ಯ. ಕಾಲದಿಂದ ಕಾಲಕ್ಕೆ ಚುನಾವಣೆಯಿಂದ ಚುನಾವಣೆಗೆ ಇದು ಮತ್ತೆ ಮತ್ತೆ ಸಾಬೀತಾಗುತ್ತ ಬರುತ್ತಿದೆ. ಜಾತಿ ರಾಜಕಾರಣದ ಜೊತೆಜೊತೆಗೆ ಲಿಂಗ ತಾರತಮ್ಯದ ರಾಜಕಾರಣವೂ ಸಹ ನಮ್ಮ ದೇಶದ ರಾಜಕಾರಣಕ್ಕೆ ಅಂಟಿರುವ ಒಂದು ಕಳಂಕವೆನ್ನಬಹುದಾಗಿದೆ. ಏಳು ದಶಕಗಳ ನಂತರವೂ ನಾವು ಮಹಿಳೆಯರಿಗೆ ಶೇಕಡಾವಾರು ಮೀಸಲಾತಿಯನ್ನು ನೀಡುವ ಮಾತಾಡುತ್ತಿದ್ದೇವೆಯೇ ಹೊರತು ಸಮಾನತೆಯನ್ನಲ್ಲ. ಜೊತೆಗೆ ಯಾವುದೆ ಪ್ರತಿಷ್ಠಿತ ಕುಟುಂಬದ ಹಿನ್ನೆಲೆಯಿಲ್ಲದ ಹೆಣ್ಣುಮಗಳೊಬ್ಬಳು ಈ ನೆಲದಲ್ಲಿ ಸ್ವತಂತ್ರವಾಗಿ ತನ್ನದೇ ಸಿದ್ದಾಂತಗಳಿಗನುಗುಣವಾಗಿ ರಾಜಕೀಯ ಮಾಡುವ ವಾತಾವರಣ ನಮ್ಮಲ್ಲಿನ್ನೂ ಸೃಷ್ಠಿಯಾಗಿಲ್ಲ. ಈ ಮಾತುಗಳನ್ನು ನಾನು ಹೇಳುವುದಕ್ಕೆ ಮುಖ್ಯ ಕಾರಣ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿಯಾದ, ಬಹುಜನ ಪಕ್ಷದ ನಾಯಕಿ ಕುಮಾರಿ ಮಾಯಾವತಿಯವರಿಗೆ ಇಂದು ಎದುರಾಗುತ್ತಿರುವ ಅಡೆತಡೆಗಳು. ಯಾಕೆಂದರೆ ಮೇಲೆ ನಾನು ಹೇಳಿದ ಜಾತಿ ಮತ್ತು ಲಿಂಗ ತಾರತಮ್ಯದ ಎರಡೂ ಕೆಡುಕುಗಳು ಇವತ್ತು ಮಾಯಾವತಿಯವರ ರಾಜಕೀಯ ಜೀವನವನ್ನು ಮುಗಿಸಲು ಬಳಕೆಯಾಗುತ್ತಿವೆ. ಮೊದಲಿಗೆ ಆಕೆ ಒಬ್ಬ ದಲಿತ ಮಹಿಳೆಯೆನ್ನುವ ಕಾರಣವಾದರೆ, ಎರಡನೆಯದು ಆಕೆ ಒಬ್ಬ ಮಹಿಳೆ ಎನ್ನುವುದಾಗಿದೆ. ಇವತ್ತೇನು ಉತ್ತರ ಪ್ರದೇಶದ ಮಟ್ಟಿಗೆ ಸಮಾಜವಾದಿ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಶ್ರೀ ಮುಲಾಯಂ ಸಿಂಗ್ ಯಾದವರ ವರ್ಚಸ್ಸಿಗೆ ಸರಿಸಮಾನವಾಗಿರುವವರು ಯಾರಾದರು ಇದ್ದರೆ ಅದು ಮಾಯಾವತಿಯವರು ಮಾತ್ರ. ಜನಪ್ರಿಯತೆಯಲ್ಲಿ ಹಾಗು ಸಮುದಾಯಗಳ ನಾಯಕರಾಗಿ ಮತ ಸೆಳೆಯುವ ತಾಕತ್ತಿನಲ್ಲಿ, ಹಾಗು ಹಿಡಿದ ಹಟ ಸಾಧನೆಯಲ್ಲಿ ಮುಲಾಯಮರಿಗೆ ಜಿದ್ದಾಜಿದ್ದಿಯಾಗಿ ನಿಲ್ಲಬಲ್ಲವರೆಂದರೆ ಅದು ಮಾಯಾವತಿಯವರು ಮಾತ್ರ. ಅಷ್ಟಲ್ಲದೆ ಚುನಾವಣಾ ತಂತ್ರಗಾರಿಕೆಯಲ್ಲಿ ಕೂಡ ಅವರು ಅಸಾಮಾನ್ಯರಾಗಿದ್ದಾರೆ.
ಗೋಹತ್ಯೆ – ಒಂದು ಪರಾಮರ್ಶೆ: ಭಾಗ 3.
ನಾಗೇಶ್ ಹೆಗಡೆ
25/08/2016
ಗೋಹತ್ಯೆ – ಒಂದು ಪರಾಮರ್ಶೆ: ಭಾಗ 1 ಓದಲು ಇಲ್ಲಿ ಕ್ಲಿಕ್ಕಿಸಿ
ಗೋಹತ್ಯೆ – ಒಂದು ಪರಾಮರ್ಶೆ: ಭಾಗ 2 ಓದಲು ಇಲ್ಲಿ ಕ್ಲಿಕ್ಕಿಸಿ
ಗೋಹತ್ಯೆ – ಒಂದು ಪರಾಮರ್ಶೆ: ಭಾಗ 2 ಓದಲು ಇಲ್ಲಿ ಕ್ಲಿಕ್ಕಿಸಿ
ಅಂಥದ್ದೇನೂ ಆಗುವುದಿಲ್ಲ; ದನಕರುಗಳು ಶಾಶ್ವತವೇನಲ್ಲವಲ್ಲ! ಅವು ಸಹಜವಾಗಿ ಸಾಯುತ್ತಿರುತ್ತವೆ. ಈಗಿನಷ್ಟೇ ಸಂಖೈಯಲ್ಲಿ ಆಗಲೂ ಸಾಯುತ್ತಿರುತ್ತವೆ. ಅವುಗಳ ಮಾಂಸ ತೆಗೆದು ಮಾರಲು ಅಥವಾ ಮೃಗಾಲಯಕ್ಕೆ ಸಾಗಿಸಲು ಅನುಮತಿ ಸಿಕ್ಕೇ ಸಿಗುತ್ತದೆ. ನೀವು ಉತ್ಪ್ರೇಕ್ಷೆ ಮಾಡಬೇಡಿ.
ಉತ್ಪ್ರೇಕ್ಷೆ ಅಲ್ಲ. ಈಗಿನ ವ್ಯವಸ್ಥೆಯಲ್ಲಿ ಅಲ್ಲಲ್ಲಿ ಕೇಂದ್ರೀಕೃತ ಕಸಾಯಿಖಾನೆಗಳಲ್ಲಿ ದಿನವೂ ಇಷ್ಟಿಷ್ಟೆಂಬಂತೆ ಮಾಂಸ ಲಭಿಸುತ್ತಿದೆ. ಎಲ್ಲೆಲ್ಲಿ ಎಂದೆಂದು ಎಷ್ಟೆಷ್ಟು ಡಿಮಾಂಡ್ ಇದೆಯೊ ಅಂದಂದು ಅಷ್ಟಷ್ಟು ಪೂರೈಕೆ ಆಗುತ್ತಿದೆ. ಗೋಹತ್ಯೆ ನಿಷೇಧಿಸಿದರೆ ಈ ಸಪ್ಲೈ ಚೇನ್ ನಲ್ಲಿ ಅವ್ಯವಸ್ಥೆ ಉಂಟಾಗುತ್ತದೆ. ಏಕೆಂದರೆ ಎಲ್ಲಿ, ಯಾವ ದಿನ ಎಷ್ಟು ದನಕರುಗಳು ಸಾಯಲಿವೆ ಎಂಬುದು ಯಾರಿಗೂ ಗೊತ್ತಾಗಲು ಸಾಧ್ಯವಿಲ್ಲ. ದನಗಳ ಕಳೇಬರದ ಸಾಗಾಣಿಕೆಗೆ ಸಂಬಂಧಿಸಿದಂತೆ ಪೊಲೀಸ್ ಕಿರುಕುಳ ಹೆಚ್ಚುವುದರಿಂದ, ಇಂಥ ರಗಳೆಯೇ ಬೇಡವೆಂದು ರೈತರು ತಮ್ಮ ದನ ಸತ್ತಾಗ ಯಾರಿಗೂ ತಿಳಿಸದೇ ಮಣ್ಣು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಹೀಗಾದರೆ ಚರ್ಮೋದ್ಯಮವೂ ತತ್ತರಿಸಬಹುದು. ಪಶು ಆಹಾರ, ಔಷಧ ಉತ್ಪಾದನೆ ಮತ್ತು ಔದ್ಯಮಿಕ ಕಚ್ಚಾಪದಾರ್ಥ, ಸೌಂದರ್ಯವರ್ಧಕ ರಸವಸ್ತುಗಳ ತಯಾರಿಕೆ ಹೀಗೆ ಎಲ್ಲಕ್ಕೂ ನಾವು ವಿದೇಶೀ ಆಮದನ್ನೇ ಅವಲಂಬಿಸಲಬೇಕಾಗುತ್ತದೆ. ನಾಡಿನುದ್ದಕ್ಕೂ ಹಳ್ಳಿಗಳಲ್ಲಿ ಅಲ್ಲಲ್ಲಿ ಆಗಾಗ ಒಂದೋ ಎರಡೋ ರಾಸುಗಳು ಸತ್ತಿದ್ದು ಗೊತ್ತಾದರೂ ಅದರ ಮಾಂಸವನ್ನು ಸಾಗಿಸಿ ತಂದು ಆಹಾರವಾಗಿ ವಿಲೇವಾರಿ ಮಾಡುವುದಾದರೆ ಗುಣಮಟ್ಟ ಕೆಟ್ಟು ರೋಗರುಜಿನ ಹಬ್ಬಲು ಕಾರಣವಾಗಬಹುದು. ಬನ್ನೇರುಘಟ್ಟದಲ್ಲಿ ಐದು ಹುಲಿಗಳು ‘ಸಾಲ್ಮೊನೆಲ್ಲಾ’ ವಿಷಾಣು ಸೇರಿದ್ದ ರೋಗಗ್ರಸ್ತ ಮಾಂಸವನ್ನ ತಿಂದೇ ಸತ್ತಿವೆ.
ಸೆಪ್ಟೆಂ 7, 2016
ರಿಲಾಯನ್ಸ್ ಜಿಯೋ - ಹುಸಿಯಾದ ನಿರೀಕ್ಷೆ
ಆನಂದ ಪ್ರಸಾದ್
07/09/2016
ಕಳೆದ ಕೆಲವು ತಿಂಗಳುಗಳಿಂದ ಭಾರೀ ನಿರೀಕ್ಷೆ ಮೂಡಿಸಿದ್ದ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋ ಕೊನೆಗೂ ತನ್ನ ವಾಣಿಜ್ಯ ಸೇವೆಯನ್ನು ಸೆಪ್ಟೆಂಬರ್ 5ರಿಂದ ಆರಂಭಿಸಿದೆ. ರಿಲಾಯನ್ಸ್ ಜಿಯೋ ತನ್ನ ವೆಬ್ಸೈಟಿನಲ್ಲಿ ಕೊಟ್ಟಿರುವ ಪ್ಲಾನ್, ಡಾಟಾ ದರಗಳನ್ನು ಪರಿಶೀಲಿಸಿದಾಗ ನರೇಂದ್ರ ಮೋದಿಯವರ 'ಡಿಜಿಟಲ್ ಇಂಡಿಯಾ' ಘೋಷಣೆ ಸಾಕಾರವಾಗುವ ಸಂಭವ ಕಡಿಮೆ. ಏಕೆಂದರೆ ಡಾಟಾ ದರಗಳು ಸಾಮಾನ್ಯ ಗ್ರಾಹಕನಿಗೆ ಅನುಕೂಲಕರವಾಗಿ ಇಲ್ಲ. 149 ರೂಪಾಯಿಗಳಿಗೆ 28 ದಿನಗಳ ಅವಧಿಗೆ 300 ಎಂಬಿ ಡಾಟಾ ಹಾಗೂ ಉಚಿತ ದೇಶೀಯ ಕರೆ ರೋಮಿಂಗ್ ವೆಚ್ಚವಿಲ್ಲದೆ ಹಾಗೂ ದಿನಕ್ಕೆ 100 ಎಸ್ಸೆಮ್ಮೆಸ್ ಕೊಡುಗೆ ನೀಡಿದೆ. ಉಚಿತ ಕರೆ ಮಾಡಬೇಕಿದ್ದರೆ ಗ್ರಾಹಕ 4ಜಿ ಮೊಬೈಲ್ ಹೊಂದಿರಬೇಕು. ಹೀಗಾಗಿ 2ಜಿ ಅಥವಾ 3ಜಿ ಮೊಬೈಲ್ ಹೊಂದಿರುವ ಸಾಮಾನ್ಯ ಗ್ರಾಹಕ ರಿಲಾಯನ್ಸ್ ಜಿಯೋ 4ಜಿಗೆ ಬದಲಾಗಲು ಕನಿಷ್ಠ 3000 ರೂಪಾಯಿಗಳನ್ನು ವ್ಯಯಿಸಬೇಕು. ಇದು 4ಜಿ ಸೌಲಭ್ಯವುಳ್ಳ ರಿಲಾಯನ್ಸ್ ಫ್ಲೇಮ್ ಬ್ರಾಂಡಿನ ಅತಿ ಕಡಿಮೆ ದರದ ಮೊಬೈಲ್ ಆಗಿದೆ. ಇನ್ನೂ ಹೆಚ್ಚಿನ ಸೌಲಭ್ಯವುಳ್ಳ 4ಜಿ ಮೊಬೈಲ್ ಬೇಕಿದ್ದರೆ 7,000ದಿಂದ 10,000 ರೂಪಾಯಿ ತೆರಬೇಕು. ಇಷ್ಟು ಹಣ ಖರ್ಚು ಮಾಡಿ ರಿಲಾಯನ್ಸ್ ಜಿಯೋ 4ಜಿ ನೆಟ್ವರ್ಕಿಗೆ ಬದಲಾಯಿಸಿಕೊಳ್ಳಲು ಸಾಮಾನ್ಯ ಭಾರತೀಯ ಗ್ರಾಹಕರು ಹಿಂದೇಟು ಹಾಕುತ್ತಾರೆ. ಏಕೆಂದರೆ ಭಾರತೀಯರು ಈಗಾಗಲೇ ಉತ್ತಮ ಸ್ಥಿತಿಯಲ್ಲಿರುವ 2ಜಿ/3ಜಿ ಮೊಬೈಲ್ ಫೋನ್ ಅನ್ನು ತ್ಯಜಿಸಿ ಹೊಸದನ್ನು ಕೊಳ್ಳುವ ಪ್ರವೃತ್ತಿಯನ್ನು ಹೊಂದಿಲ್ಲ. ತಮ್ಮ 2ಜಿ/3ಜಿ ಮೊಬೈಲ್ ಫೋನ್ ಹಾಳಾದ ನಂತರವೇ ಸಾಮಾನ್ಯ ಜನರು ಹೊಸ ಮೊಬೈಲ್ ಕೊಳ್ಳುವ ಬಗ್ಗೆ ಯೋಚಿಸುತ್ತಾರೆ. ಏಕೆಂದರೆ ಜನಸಾಮಾನ್ಯರ ಆದಾಯ ಮಟ್ಟವು ಕಡಿಮೆ ಇರುತ್ತದೆ. ಇದರಿಂದಾಗಿ ರಿಲಾಯನ್ಸ್ ಜಿಯೋ ಉಚಿತ ಕರೆ ರೋಮಿಂಗ್ ಸಹಿತ, ಉಚಿತ ಎಸ್ಸೆಮ್ಮೆಸ್ ದಿನಕ್ಕೆ 100 ಕೊಡುಗೆ ನೀಡಿದರೂ ಇದಕ್ಕೆ ಬದಲಾಗಲು ಸಾಕಷ್ಟು ಸಮಯ ಹಿಡಿಯಬಹುದು.