ನವೆಂ 11, 2016

ದಲಿತಶಕ್ತಿಯ ವಿರುದ್ದ ಒಗ್ಗಟ್ಟಾಗುತ್ತಿರುವ ಉತ್ತರಪ್ರದೇಶದ ರಾಜಕೀಯ ಪಕ್ಷಗಳು.

ku sa madhusudhan
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಒಬ್ಬ ದಲಿತ ನಾಯಕಿ ಮಾಯಾವತಿಯವರನ್ನು ಮತ್ತು ದಲಿತರ ರಾಜಕೀಯ ದ್ವನಿಯಾದ ಬಹುಜನ ಪಕ್ಷವನ್ನು ಮುಗಿಸುವ ಒಂದು ಷಡ್ಯಂತ್ರ ಉತ್ತರ ಪ್ರದೇಶದಲ್ಲಿ ಸದ್ದಿರದೆ ನಡೆಯುತ್ತಿದೆ. ಇನ್ನೇನು ಮುಂದಿನ ವರ್ಷದ ಪೂರ್ವಾರ್ದದಲ್ಲಿ ನಡೆಯಲಿರುವ ಚುನಾವಣೆಗಳಲ್ಲಿ ಬಹುಜನ ಪಕ್ಷವನ್ನು ಸೋಲಿಸುವ ಮೂಲಕ ದಲಿತರ ದನಿಯನ್ನು ಹತ್ತಿಕ್ಕುವ ರಾಜಕೀಯ ಚದುರಂಗದಾಟ ಈಗಾಗಲೇ ಶುರುವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಬೆಂಬಲಿಸಿದ್ದ ಮುಸ್ಲಿಂ ಸಮುದಾಯ ತದನಂತರ ನಡೆದ ಕೆಲವು ಕೋಮುಗಲಭೆಗಳಲ್ಲಿ ಸಮಾಜವಾದಿ ಪಕ್ಷ ತೆಗೆದುಕೊಂಡ ನಿರ್ದಾರಗಳಿಂದ ಅಸಮಾದಾನಗೊಂಡು ಅದರಿಂದ ದೂರ ಸರಿಯುತ್ತಿದೆಯೆಂಬ ಬಾವನೆ ಸಾರ್ವಜನಿಕರಲ್ಲಿ ಮೂಡಿತ್ತು. ಇದರ ಲಾಭ ಪಡೆಯಲು ಹೊರಟ ಬಹುಜನ ಪಕ್ಷ ಈಗಾಗಲೇ ತಾನು ಸಿದ್ದಪಡಿಸಿಕೊಂಡಿರುವ ದಲಿತ ಮತ್ತು ಬ್ರಾಹ್ಮಣ ಮತಬ್ಯಾಂಕಿನ ಜೊತೆಗೆ ಮುಸ್ಲಿಂ ಸಮುದಾಯದ ಬೆಂಬಲ ಪಡೆಯಲು ನಿರ್ದರಿಸಿ ಪಶ್ಚಿಮ ಉತ್ತರಪ್ರದೇಶದ ಸುಮಾರು 125ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೇಟು ನೀಡಲು ನಿರ್ದರಿಸಿತು.

ಮೇಕಿಂಗ್ ಹಿಸ್ಟರಿ: ರಾಜನ ಉಗ್ರ ಪ್ರವಾಸ

saketh rajan
ಸಾಕೇತ್ ರಾಜನ್ 
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
1830ರ ಡಿಸೆಂಬರ್ 14ರಿಂದು 1831ರ ಜನವರಿ 10ರವರೆಗೆ ಶತ್ರುಗಳು ರೈತರಲ್ಲಿ ಭೀತಿಯನ್ನುಟ್ಟಿಸಲು ಪ್ರಚಾರ ನಡೆಸಿದರು. ಈ ಭೀತಿಯ ಪ್ರಚಾರವನ್ನು ರಾಜನ ಪ್ರವಾಸದ ಭಾಗವಾಗಿ ನಡೆಸಲಾಯಿತು; ಮೈಸೂರು, ಹಾಸನ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ತೊಂದರೆಗೀಡಾದ ಪ್ರದೇಶಗಳಿಗೆ ರಾಜ ಪ್ರವಾಸ ನಡೆಸುತ್ತಿದ್ದ. 

ರಾಜನೊಂದಿಗೆ ಸಾವಿರ ಸೊವರ್ಗಳು, 200 ಮಂದಿ ಅಂಗರಕ್ಷಕರು ಮತ್ತು ಮೂರು ಬೆಟಾಲಿಯನ್ನಿನಷ್ಟು ಕಾಲಾಳು ಸೈನಿಕರಿದ್ದರು. ರೈತರನ್ನು ಸಂತೈಸುವುದು ಇದರ ಉದ್ದೇಶವಾಗಿತ್ತು, ಆದರೆ ವಾಸ್ತವದಲ್ಲಿ, ರೈತರು ಪ್ರತಿರೋಧಿಸುವ ಧೈರ್ಯವನ್ನೂ ಮಾಡಬಾರದೆಂಬ ನಿಟ್ಟಿನಲ್ಲಿ ನಡೆದ ಪ್ರಭುತ್ವದ ಶಕ್ತಿ ಪ್ರದರ್ಶನವಾಗಿತ್ತಿದು. 

ಉಪಲಬ್ಧತೆ

ಪ್ರವೀಣಕುಮಾರ್ ಗೋಣಿ 
ಎದೆಯ ಬಾಗಿಲ ತೆರೆಯದೆ 
ಬಂದು ಪವಡಿಸುವನೇ ಪರಮಾತ್ಮ ?
ಭೋಗದ ಬಲೆಯಲ್ಲಿ ಸಿಲುಕಿ 
ಕಾಣೆಯಾಗಿಹ ಮನಕೆ ತಾಕೀತೆ 
ಅವನ ಬರುವೆಯಾ ಪುಳಕ ?


ನವೆಂ 9, 2016

ಮಾಹಿತಿ ಹಕ್ಕು ಮತ್ತು ರಾಜಕೀಯ ಪಕ್ಷಗಳ ಜಾಣಮೌನ?

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಇವತ್ತು ಮಾಹಿತಿ ಹಕ್ಕು ಕಾಯಿದೆ ದೇಶದಾದ್ಯಂತ ಸಂಚಲನ ಮೂಡಿಸಿದೆ. ಒಂದು ದಶಕದ ಹಿಂದೆ ಶಾಸನವಾಗಿ ಜಾರಿಗೆ ಬಂದಮಾಹಿತಿ ಹಕ್ಕು ಕಾಯಿದೆಯಡಿ ಕೇಂದ್ರ ಹಾಗು ಹಲವು ರಾಜ್ಯ ಸರಕಾರಗಳ ಭ್ರಷ್ಟತೆಯ ಹಲವು ಪ್ರಕರಣಗಳು ಬಯಲಾಗಿವೆ,ಆಗುತ್ತಿವೆ.ಅದರಲ್ಲೂ ಪತ್ರಕರ್ತರುಗಳ ಹಾಗು ನಮ್ಮವರೇ ಆದ ಭ್ರಷ್ಟಾಚಾರದ ವಿರುದ್ದ ಸತತವಾಗಿ ಹೋರಾಡುತ್ತಿರುವ ಶ್ರೀಯುತ ಹಿರೇಮಠರಂತವರ ಕೈಲಿ ಸಿಕ್ಕ ಈ ಆಯುಧ ಬಹುತೇಕ ಎಲ್ಲ ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ.. ದೇಶದಾದ್ಯಂತ ಇರುವ ನೂರಾರು ಮಾಹಿತಿ ಹಕ್ಕು ಕಾರ್ಯಕರ್ತರು ಈ ಕಾಯಿದೆಯನ್ನು ಬಳಸಿ ಜನರಲ್ಲಿ ಭ್ರಷ್ಟಾಚಾರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಮಾಹಿತಿ ಹಕ್ಕು ಹೋರಾಟಗಾರರೆಂಬ ಹೊಸದೊಂದು ಸಮುದಾಯವೇ ಸೃಷ್ಠಿಯಾಗಿದೆ. ಯಾಕಾದರೂ ಈ ಕಾಯಿದೆಯನ್ನು ಜಾರಿಗೆ ತಂದೆವೋ ಎಂದು ರಾಜಕಾರಣಿಗಳು ಇವತ್ತು ಪರಿತಪಿಸುತ್ತಿದ್ದರೆ ಅದರಲ್ಲಿ ಆಶ್ಚರ್ಯವೇನಿಲ್ಲ. ಇದರ ಜೊತೆಗೆ ಕೆಲವು ಅಡ್ಡ ಪರಿಣಾಮಗಳೂ ಈ ಕಾಯಿದೆಯಿಂದಾಗಿವೆ. ಸಮಾಜಸೇವಕರ ಮುಖವಾಡ ಹಾಕಿಕೊಂಡ ಕೆಲವರು ಈ ಕಾಯ್ದೆಯನ್ನು ಬಳಸಿಕೊಂಡು ಪಡೆದ ಅಧಿಕೃತ ಮಾಹಿತಿಗಳನ್ನೇ ಆಧಾರವಾಗಿಟ್ಟುಕೊಂಡು ಸರಕಾರದ ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುತ್ತ ದುಡ್ಡು ಮಾಡುವ ದಂದೆಯೊಂದನ್ನು ಸಹ ಶುರು ಮಾಡಿರುವುದು ಕೆಲವೆಡೆ ಕಂಡು ಬರುತ್ತಿದೆ. ಇಂತಹ ಕೆಲವು ದೌರ್ಬಲ್ಯಗಳ ಹೊರತಾಗಿಯೂ ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಈ ಕಾಯಿದೆ ಸ್ವಲ್ಪ ಮಟ್ಟಿಗಾದರು ಧನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ.

ನವೆಂ 8, 2016

ಮೊದಲು ಕವಿತೆ ಹೀಗಿರಲಿಲ್ಲ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಈ ಮೊದಲು ಕವಿತೆ ಹೀಗಿರಲಿಲ್ಲ
ಕಾಡಂಚಲ್ಲಿ ದನಕರುಗಳ ಮೇಯಿಸುತ್ತಿದ್ದ ಹರಯದ ಹುಡುಗ ಹುಡುಗಿಯರ ಕೊರಳಲ್ಲಿ ಹುಟ್ಟಿ
ಊರೊಳಗಿನ
ರಾಗಿ ಬೀಸುವ ಹೆಂಗಸರ ಗಂಟಲೊಳಗೆ
ಹರಯದ ಹುಡುಗಿಯರ ಹೊಸಗೆಯ ಆರತಿಯೊಳಗೆ
ಜೋಳಿಗೆ ಹಾಕಿ ಕೇರಿಗಳ ತಿರುಗುತ್ತಿದ್ದಅಲೆಮಾರಿ ಕೊರಳುಗಳೊಳಗೆ
ಹಾಡುಗಳಾಗಿ ಬೆಳೆಯುತ್ತ ಹೋಯಿತು.

ನವೆಂ 6, 2016

ಬಾಲ್ಯವೆಂದರೆ…..!

ಕು.ಸ.ಮಧುಸೂದನ್
ಬಾಲ್ಯದ ಬಗ್ಗೆ ಬಹಳ ಜನ
ರೊಮ್ಯಾಂಟಿಕ್
ಆಗಿ ಮಾತಾಡುತ್ತಾರೆ
ನನ್ನ ಕೈಲಿ ಆಗೋದಿಲ್ಲ.

ಬಾಲ್ಯವನ್ನು ನೆನಪಿಸಿಕೊಳ್ಳುವುದೆಂದರೆ
ನನಗೆ
ಹಳೆ ಗಾಯದ ಕಲೆಗಳನ್ನು
ಅದರ ನೋವನ್ನು 
ನೆಕ್ಕಿದಂತಾಗುತ್ತದೆ.

ನವೆಂ 5, 2016

ನೀನು ಮಾತ್ರ!

ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ನೀನೊಂದು ಬರೀ ರಕ್ತಮಾಂಸದ
ಏರುಯೌವನದ ಜೀವಂತ ಹೆಣ್ಣು 
ಮಾತ್ರವಾಗಿದ್ದರೆ ಇಷ್ಟೊಂದು ಪ್ರೀತಿಸುತ್ತಿರಲಿಲ್ಲ ನಾನು!

ನನ್ನಗಾಢ ವಿಷಾದದ ಬಟ್ಟಲೊಳಗಿನ ಮಧು ನೀನು
ನನ್ನ ಒಂಟಿತನದ ನಟ್ಟಿರುಳುಗಳ ಕನಸು ನೀನು
ನನ್ನ ಅನಾಥಅಲೆಮಾರಿ ಹಗಲುಗಳ ಹುಡುಕಾಟ ನೀನು
ನಾನು ಕಳೆದುಕೊಂಡ ಎಲ್ಲವನೂ
ಮೊಗೆಮೊಗೆದು ಕೊಡಬಲ್ಲ 
ಸಾವಿರದ ನೋವಿರದ ದೇವತೆ ನೀನು.

ನವೆಂ 4, 2016

ಮೇಕಿಂಗ್ ಹಿಸ್ಟರಿ: ನಗರದ ರೈತಾಪಿ ಬಂಡಾಯ ಭಾಗ 3

ashok k r
ಸಾಕೇತ್ ರಾಜನ್ 
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
ಈ. ರೈತರ ವರ್ಗ ಬೇಡಿಕೆಗಳು 
ಬುಡಿ ಬಸಪ್ಪ 1830ರಲ್ಲಿ ನಗರದ ಅನೇಕ ಭಾಗಗಳಲ್ಲಿ ಪ್ರವಾಸ ಮಾಡಿದ್ದ. ತನ್ನ ಪ್ರತಿನಿಧಿಯಾಗಿ ಮಾನಪ್ಪನನ್ನು ನೇಮಿಸಿದ್ದ. ಮಾನಪ್ಪನನ್ನು ಬುಡಿ ಬಸಪ್ಪನ “ಪ್ರಧಾನ ದಂಡನಾಯಕ”ನೆಂದೂ ಕರೆಯಲಾಗುತ್ತಿತ್ತು. (96) 

ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ 1830ರ ಆಗಷ್ಟ್ 23ರಂದು ರ್ಯಾಲಿಗೆ ಕರೆ ನೀಡಲಾಗಿತ್ತು. ಸಾವಿರಾರು ರೈತರು ಅದರಲ್ಲಿ ಭಾಗವಹಿಸಿದರು. ನೂರಾರು ಎತ್ತಿನಗಾಡಿಗಳು ಹೊಸಂತೆಯ ಮೈದಾನವನ್ನು ತುಂಬಿದವು ಎಂದು ರಾಮಭಟ್ಟ ಬರೆಯುತ್ತಾರೆ. ರೈತರು ಧಾರವಾಡ ಮತ್ತು ಬಳ್ಳಾರಿ ಜಿಲ್ಲೆಗಳಿಂದಲೂ ಬಂದಿದ್ದರು. 

ನವೆಂ 3, 2016

ಸರ್ಜಿಕಲ್ ಸ್ಟ್ರೈಕ್ ರಾಜಕೀಯ.

ಸಾಂದರ್ಭಿಕ ಚಿತ್ರ.
ಡಾ.ಅಶೋಕ್.ಕೆ.ಆರ್
ಯಾವುದು ನಡೆಯಬಾರದಿತ್ತೋ ಅದೇ ನಡೆಯುತ್ತಿದೆ. ಸೈನಿಕ ಕಾರ್ಯಾಚರಣೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ದುರ್ನಡೆಯನ್ನು ನಾನಂತೂ ಇಲ್ಲಿಯವರೆಗೆ ಕಂಡಿರಲಿಲ್ಲ. ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಸೈನ್ಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವಲ್ಲಿ ಅತೀವ ಆಸಕ್ತಿ ತೋರುತ್ತಿದೆ. ಈ ಆಸಕ್ತಿಗೆ ಕಾರಣ ಬಾಗಿಲಲ್ಲೇ ಇರುವ ಹಲವು ರಾಜ್ಯಗಳ ಚುನಾವಣೆ. ಅದರಲ್ಲೂ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ. ಸೈನಿಕರ ಬಗ್ಗೆ ಸೈನ್ಯದ ಬಗ್ಗೆ ಯಾವುದೇ ರೀತಿಯ ಪ್ರಶ್ನೆ ಕೇಳುವುದು, ಸೈನಿಕರ ಉಪಟಳಗಳ ಬಗ್ಗೆ ಮಾತಾಡುವುದು, ಅದನ್ನು ಖಂಡಿಸುವುದೇ ದೇಶದ್ರೋಹ ಎನ್ನುವಂತಹ ವಾತಾವರಣವನ್ನೂ ಸೃಷ್ಟಿಸಲಾಗುತ್ತಿದೆ. ಸೈನಿಕರೆಂದರೆ ಪ್ರಶ್ನಾತೀತರೇ? ಸೈನ್ಯವನ್ನು ಹೊಗಳುವುದಷ್ಟೇ ದೇಶಪ್ರೇಮವೇ? ಎಲ್ಲಕ್ಕಿಂತ ಮುಖ್ಯವಾಗಿ ಸೈನಿಕ ಕಾರ್ಯಾಚರಣೆಯನ್ನು ರಾಜಕೀಯ ಪಕ್ಷವೊಂದು ತನ್ನ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವುದು ಸರಿಯೇ? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದು ಕೂಡ ನವ ಭಾರತದ ‘ದೇಶಭಕ್ತ’ರ ದೃಷ್ಟಿಯಲ್ಲಿ ದೇಶದ್ರೋಹವೇ ಹೌದು.

ಅಕ್ಟೋ 31, 2016

ಲೋಕಸಭೆ ಮತ್ತು ವಿದಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ - ಸಾಧಕ ಬಾಧಕಗಳು: ಒಂದು ವಿಶ್ಲೇಷಣೆ.

ಕು.ಸ.ಮಧುಸೂದನ್ ರಂಗೇನಹಳ್ಳಿ
ಲೋಕಸಭೆ ಮತ್ತು ದೇಶದ ಎಲ್ಲಾ ರಾಜ್ಯಗಳ ವಿದಾನಸಭೆಗಳಿಗೆ ಏಕಕಾಲದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ನಡೆಸುವುದು ಸೂಕ್ತವೆಂಬ ಶಿಫಾರಸ್ಸನ್ನು ಕೇಂದ್ರ ಚುನಾವಣಾ ಆಯೋಗವು ಕಾನೂನು ಸಚಿವಾಲಯಕ್ಕೆ ನೀಡುವುದರ ಮೂಲಕ ಈ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆಗೆ, ಮತ್ತೊಂದಿಷ್ಟು ವಿವಾದಗಳಿಗೆ ನಾಂದಿ ಹಾಡಿದೆ. ಈ ಹಿಂದೆ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಸಹ ಇಂತಹದೊಂದು ಅನಿಸಿಕೆಯನ್ನು ಸಾರ್ವಜನಿಕವಾಗಿಯೇ ಹೇಳಿದ್ದರು. ಆದರೆ ಅದರ ಹಿಂದೆ ಇರಬಹುದಾದ ರಾಜಕೀಯ ಕಾರಣಗಳನ್ನು ಮನಗಂಡವರ್ಯಾರೂ ಅದರ ಬಗ್ಗೆ ಅಷ್ಟೊಂದು ಗಂಬೀರವಾಗೇನು ಚರ್ಚೆ ಮಾಡಲು ಹೋಗಲಿಲ್ಲ. ಆದರೆ ಇದೀಗ ಚುನಾವಣಾ ಆಯೋಗವೇ ಇಂತಹದೊಂದು ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುತ್ತ, ಕಾನೂನು ಇಲಾಖೆಗೆ ಈ ಬಗ್ಗೆ ತನ್ನ ಒಪ್ಪಿಗೆಯನ್ನು ಸೂಚಿಸಿರುವುದರಿಂದ ಏಕಕಾಲದ ಚುನಾವಣೆಯ ವಿಷಯವನ್ನು ಚರ್ಚಿಸಲೇ ಬೇಕಾದ ಅನಿವಾರ್ಯತೆ ಬಂದೊದಗಿದೆ. ಆದರೆ ಇದಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸರ್ವಾನುಮತದ ಒಪ್ಪಿಗೆಯೂ ಬೇಕೆಂಬ ಮಾತನ್ನೂ ಆಯೋಗವು ಒತ್ತಿ ಹೇಳಿದೆ.