ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಕರ್ನಾಟಕದ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವವರಿಗೆ ಅರ್ಥವಾಗುವ ಒಂದು ವಿಷಯವೆಂದರೆ: ಆಡಳಿತಾರೂಢ ಕಾಂಗ್ರೆಸ್ ವಿರೋಧಪಕ್ಷಗಳಿವೆಯೆಂಬುದನ್ನು ಮರೆತಂತೆ ತನ್ನ ಪಾಡಿಗೆ ತಾನು ಅಡರಿದ ಮಂಪರಿನಲ್ಲಿ ಆಡಳಿತ ನಡೆಸುತ್ತಿದ್ದರೆ (ಆಡಳಿತದ ವೈಖರಿಯ ಬಗ್ಗೆ ಬೇರೆಯದೇ ಆಗಿ ಬರೆಯಬೇಕಾಗುತ್ತದೆ), ಅಧಿಕೃತ ವಿರೋಧಪಕ್ಷವಾದ ಬಾಜಪ ವಸ್ತುನಿಷ್ಠವಾಗಿ ಆಡಳಿತದ ಲೋಪದೋಷಗಳ ಬಗ್ಗೆ ಸರಕಾರದ ಗಮನ ಸೆಳೆಯುವ ಹಾಗು ಜನಪರ ಆಡಳಿತದ ಬಗ್ಗೆ ಸರಕಾರದ ಕಣ್ಣು ತೆರೆಸುವ ಯಾವುದೇ ಕಾರ್ಯಕ್ರಮಗಳನ್ನೂ ಹಾಕಿಕೊಳ್ಳದೆ, ಕೇವಲ ಜನರನ್ನು ಬಾವನಾತ್ಮಕವಾಗಿ ಕೆರಳಿಸುವಂತಹ ಜನಪ್ರಿಯವಾಗಬಲ್ಲಂತ ವಿಷಯಗಳನ್ನೇ ಮುಂಚೂಣಿಯಲ್ಲಿಟ್ಟುಕೊಂಡು ತನ್ನ ರಾಜಕೀಯ ಮಾಡುತ್ತಿದೆ (ಇದನ್ನು ಸಹ ಪ್ರತ್ಯೇಕವಾಗಿ ಬರೆಯಬಹುದಾಗಿದೆ).



