ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಸಕ್ರಿಯ ರಾಜಕಾರಣಿಯೊಬ್ಬ ತಾನು ಮಾಡುವ ಜನಪರ ಕೆಲಸಗಳಿಗೆ ಚ್ಯುತಿ ಬಾರದಂತೆ ರಾಜಕಾರಣ ಮಾಡುವುದು ತೀರಾ ಅಪರೂಪ ಮತ್ತು ವಿಶೇಷ!. ಯಾಕೆಂದರೆ ಶಕ್ತಿರಾಜಕಾರಣದ ಕುತಂತ್ರಗಳಲ್ಲಿ ಮುಳುಗಿ ಹೋಗುವ ರಾಜಕೀಯ ನಾಯಕನೊಬ್ಬ ಜನಪರವಾಗಿ ಕೆಲಸ ಮಾಡಲಾಗದಷ್ಟು ಮಟ್ಟಿಗೆ ತನ್ನ ತಂತ್ರಗಾರಿಕೆಯಲ್ಲಿ ಮುಳುಗಿ ಹೋಗಿರುವುದನ್ನು ನಾವು ಇಂಡಿಯಾದ ಪ್ರಜಾಸತ್ತೆಯ ಇತಿಹಾಸದಲ್ಲಿ ಬಹಳಷ್ಟು ಉದಾಹರಣೆಗಳನ್ನು ಕಂಡಿದ್ದೇವೆ. ಹಾಗೆಯೇ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಭರದಲ್ಲಿ ರಾಜಕೀಯ ತಂತ್ರಗಾರಿಕೆಗಳಲ್ಲಿ ವಿಫಲರಾಗಿ ಹೋದ ಹಲವರನ್ನೂ ನಾವು ನೋಡಿರುವುದುಂಟು. ಇಂಡಿಯಾದ ಮಟ್ಟಿಗೆ ಜನಪರ ಕಾರ್ಯಗಳನ್ನೂ ಹಾಗು ಶಕ್ತಿ ರಾಜಕಾರಣವನ್ನೂ ಒಟ್ಟೊಟ್ಟಿಗೆ ಮಾಡಿಕೊಂಡು ಅದರಲ್ಲಿ ಗೆದ್ದವರ ಸಂಖ್ಯೆ ತೀರಾ ವಿರಳ.