ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ನವೆಂಬರ್ ಎಂಟನೇ ತಾರೀಖಿನ ರಾತ್ರಿ ದೊಡ್ಡ ಮುಖಬೆಲೆಯ ನೋಟುಗಳನ್ನು ನಿಷೇಧಗೊಳಿಸಿದ್ದಕ್ಕೆ ಕಾರಣಗಳನ್ನು ನೀಡುತ್ತ ಹೇಳಿದ ಬಹುಮುಖ್ಯ ಮಾತುಗಳೆಂದರೆ, ಈ ನಿಷೇಧದಿಂದ ಕಪ್ಪಹಣದ ಹಾವಳಿ ಇಲ್ಲವಾಗುತ್ತದೆ ಮತ್ತು ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬುದಾಗಿತ್ತು. ಈ ಮಾತುಗಳನ್ನು ಕೇಳಿಸಿಕೊಂಡ ಜನತೆಗೆ ತಕ್ಷಣಕ್ಕೆ ಇದು ನಿಜವೆನಿಸಿ ಮೋದಿಯವರ ಬಗ್ಗೆ ಮೆಚ್ಚುಗೆ ಮೂಡಿದ್ದು ಸುಳ್ಳಲ್ಲ. ಹಾಗಾಗಿಯೇ ಆರಂಭದಲ್ಲಿ ವಿರೋಧಪಕ್ಷಗಳು ಸಹ ಈ ನಿಷೇಧವನ್ನು ವಿರೋಧಿಸಲು ಹಿಂದೆ ಮುಂದೆ ನೋಡುವಂತಾಯಿತು.
