ಸಾಕೇತ್ ರಾಜನ್
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
ನಗರ ವಿಭಾಗವು ಸಮೃದ್ಧ ಮಲೆನಾಡಿನಿಂದ ಸುತ್ತುವರಿದಿತ್ತು ಮತ್ತಿದನ್ನು ಗೆರಿಲ್ಲಾಗಳು ತುಂಬಾ ಚೆಂದಾಗಿ ಉಪಯೋಗಿಸಿಕೊಂಡರು. ದಟ್ಟ ಅರಣ್ಯ ಪ್ರದೇಶವನ್ನು ತಮ್ಮನುಕೂಲಕ್ಕೆ ಬಳಸಿಕೊಂಡಿದ್ದು ಹೋರಾಟದ ಅಸ್ತಿತ್ವ ಉಳಿಯುವಲ್ಲಿ ಬಹುಮುಖ್ಯ ಪಾತ್ರ ವಹಿಸಿತ್ತು. ಭೂಪ್ರದೇಶವು ಎಷ್ಟು ಉತ್ತೇಜನಕಾರಿಯಾಗಿತ್ತೆಂದರೆ ಹಲವು ಪಾಳೇಗಾರರು ಕೂಡ ತಮ್ಮ ಕೋಟೆಯನ್ನು ತೊರೆದು ಅರಣ್ಯದೊಳಗೆ ರಕ್ಷಣೆ ಪಡೆದುಕೊಂಡರು.
ಸಶಸ್ತ್ರ ಹೋರಾಟದುದ್ದಕ್ಕೂ, ಗೆರಿಲ್ಲಾ ಯುದ್ಧದ ಪ್ರತಿಯೊಂದು ಪ್ರಮುಖ ತಂತ್ರ ರೂಪುಗೊಂಡಾಗಲೂ, ಅದನ್ನು ಅರಣ್ಯ ಕೊಟ್ಟ ಅನುಕೂಲತೆಗಳಾಧಾರದ ಮೇಲೆಯೇ ಮಾಡಲಾಗಿತ್ತು ಎನ್ನುವುದನ್ನು ಗಮನಿಸಬಹುದು.