ಸಾಕೇತ್ ರಾಜನ್
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
ಬಂಡಾಯವನ್ನು ಹತ್ತಿಕ್ಕಲು ಕಾಸಾಮೈಯೂರ್ ಹತ್ತಲವು ಲೆಕ್ಕಾಚಾರಗಳನ್ನು ಮಾಡಿದ. ಮೊದಲಿಗೆ ಆತ ಸೈನ್ಯವನ್ನು ಪ್ರಮುಖ ಪಟ್ಟಣ ಮತ್ತು ಕೋಟೆಗಳನ್ನು ವಶಪಡಿಸಿಕೊಳ್ಳುವ ಸಲುವಾಗಿ ಕಳುಹಿಸಿದ. ಆದರೆ ಸೈನ್ಯ ಅಲ್ಲಿಂದ ತೆರಳುತ್ತಿದ್ದಂತೆಯೇ ಪಟ್ಟಣ ಹಾಗೂ ಕೋಟೆಗಳು ಮರಳಿ ಗೆರಿಲ್ಲಾಗಳ ವಶವಾಗಿಬಿಡುತ್ತಿದ್ದವು. ಆದ್ದರಿಂದ ಆತ ಇನ್ನೂ ಹೆಚ್ಚಿನ ಸೈನ್ಯಕ್ಕಾಗಿ ವಿನಂತಿಸಿಕೊಂಡ, ಬ್ರಿಟೀಷ್ ಸೈನ್ಯವನ್ನು ಕರೆಸಿಕೊಂಡ ಮತ್ತು ನಿರಂತರವಾಗಿ ಸೈನ್ಯದ ಬಲವನ್ನು ಹತ್ತಿರತ್ತಿರ ಹತ್ತು ಸಾವಿರದಷ್ಟು ಹೆಚ್ಚಿಸಿದ, ಇದರಲ್ಲಿ ಅರ್ಧದಷ್ಟು ಸೈನಿಕರನ್ನು ಮೈಸೂರೇ ಪೂರೈಸಿತ್ತು.