ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಗದ್ದರ್!
ಗದ್ದರ್ !!
ಕಳೆದೆರಡು ದಿನಗಳಿಂದ ಸುದ್ದಿಯಾಗುತ್ತಿರುವ ಗದ್ದರ್ ಇಷ್ಟು ವರ್ಷಗಳ ಕಾಲ ತಾವು ನಂಬಿಕೊಂಡಿದ್ದ ಮಾರ್ಕ್ಸ್ ವಾದವನ್ನು ಹಾಡುನೃತ್ಯಗಳ ಮೂಲಕ ಜನರಿಗೆ ಅದರಲ್ಲಿಯೂ ತಳ ಸಮುದಾಯಗಳ ಯುವಕರಿಗೆ ತಲುಪಿಸುತ್ತಿದ್ದ ಕ್ರಾಂತಿಕಾರಿ ನಾಯಕ. ಇದೀಗ ಇಂತಹ ಗದ್ದರ್ ಪುರೋಹಿತರ ಪಾದದ ಬಳಿ ಮಂಡಿಯೂರಿ ಕುಳಿತು ಪೂಜೆ ಸಲ್ಲಿಸಿದ ಬಗ್ಗೆ ಪರವಿರೋಧಗಳ ಚರ್ಚೆ ಬಿರುಸಿನಿಂದ ನಡೆಯುತ್ತಿದೆ.
ಯಾಕೆ ವ್ಯಕ್ತಿಯೊಬ್ಬ ಇದ್ದಕ್ಕಿದ್ದ ಹಾಗೆ ಹೀಗೆ ಬದಲಾಗಿ ಬಿಡುತ್ತಾನೆ? ಅಥವಾ ನಾವು ಅಂದುಕೊಳ್ಳುವ ಆ ‘ಇದ್ದಕ್ಕಿದ್ದಂತೆ’ ಎಂಬುದು ಆ ವ್ಯಕ್ತಿಯ ಒಳಗೆ ವರುಷಗಳಿಂದ ನಡೆಯುತ್ತಿದ್ದ ತಳಮಳಗಳ ಪ್ರತಿಫಲವೇ ಎಂಬುದನ್ನು ಯೋಚಿಸಲೂ ಕಾಯದೆ ತತ್ ಕ್ಷಣದ ಪ್ರತಿಕ್ರಿಯೆ ನೀಡುವ ಭರದಲ್ಲಿ ನಾವು ಎಡವುತ್ತಿದ್ದೇವೆಯೇ? ಗೊತ್ತಿಲ್ಲ!