ಡಿಸೆಂ 12, 2018

ತೆಲಂಗಾಣ! ಟಿ.ಆರ್.ಎಸ್. ಗೆಲುವಿನ ಐದು ಮುಖ್ಯ ಕಾರಣಗಳು

ಕು.ಸ.ಮಧುಸೂದನರಂಗೇನಹಳ್ಳಿ
ಎಲ್ಲ ನಿರೀಕ್ಷೆಗಳನ್ನೂ ಮೀರಿ ಕೆ.ಚಂದ್ರಶೇಖರ್ ರಾವ್ ಅವರ ಟಿ.ಆರ್.ಎಸ್. ತೆಲಂಗಾಣ ವಿದಾನಸಭಾ ಚುನಾವಣೆಗಳಲ್ಲಿ ಅಭೂತಪೂರ್ವ ಜಯಗಳಿಸಿದೆ.ಚುನಾವಣೆ ನಡೆದ 119ಸ್ಥಾನಗಳ ಪೈಕಿ 88ಸ್ಥಾನಗಳನ್ನು ಗೆಲ್ಲುವ ಮೂಲಕ ವಿರೋಧಪಕ್ಷಗಳು ದೂಳಿಪಟವಾಗುವಂತೆ ಮಾಡಿದೆ.ಟಿ.ಆರ್.ಎಸ್.ಗೆಲ್ಲಬಹುದೆಂದು ಭವಿಷ್ಯ ನುಡಿದಿದ್ದವರಿಗೂ ಅಚ್ಚರಿಯಾಗುವಂತೆ ಅದು ಜಯಗಳಿಸಿರುವುದರ ಹಿಂದೆ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಅವರ ಚುನಾವಣಾ ತಂತ್ರಗಾರಿಕೆ ಕೆಲಸ ಮಾಡಿದೆ.

ಹಾಗೆ ನೋಡಿದರೆ ತೆಲಂಗಾಣ ವಿದಾನಸಭಾ ಚುನಾವಣೆಗಳು 2019ರ ಮೇ ತಿಂಗಳ ಲೋಕಸಭಾ ಚುನಾವಣೆಗಳ ಜೊತೆಗೆ ನಡೆಯಬೇಕಿತ್ತು. ಆದರೆ ಲೋಕಸಭಾ ಚುನಾವಣೆಗಳಲ್ಲಿ ಬೀಸಬಹುದಾದ ಪ್ರದಾನಮಂತ್ರಿ ಶ್ರೀನರೇಂದ್ರ ಮೋದಿಯವರ ಅಲೆಯಿಂದ ತಪ್ಪಿಸಿಕೊಳ್ಳಲೆಂಬಂತೆ ಕೆ.ಸಿ.ಆರ್. ಅವಧಿಗೆ ಮುನ್ನವೇ ವಿದಾನಸಭೆ ವಿಸರ್ಜಿಸಿ ರಾಜ್ಯಕ್ಕೆ ಪ್ರತ್ಯೇಕವಾಗಿ ಚುನಾವಣೆ ನಡೆಯುವಂತೆ ನೋಡಿಕೊಂಡರು. ಅವರ ಈ ನಿರ್ದಾರವನ್ನು ವಿರೋಧಪಕ್ಷಗಳು ಟೀಕಿಸಿ, ರಾಜಕೀಯ ಪಂಡಿತರು ಅವರ ಈ ಲೆಕ್ಕಾಚಾರ ಉಲ್ಟಾ ಹೊಡೆಯಲಿದೆಯೆಂದು ನಕ್ಕಿದ್ದರು. ಆದರೆ ಅಂತಿಮವಾಗಿ ಕೆ.ಸಿ.ರಾವ್ ಗೆಲುವಿನ ನಗೆ ಬೀರಿದ್ದಾರೆ. ಆದರೆ ಇಂತಹ ಅಭೂತಪೂರ್ವ ಗೆಲುವು ತಮ್ಮದಾಗಬಹುದೆಂದು ಸ್ವತ: ಅವರೇ ನಿರೀಕ್ಷಿಸಿದ್ದರೆಂದು ಹೇಳುವುದು ತಪ್ಪಾಗುತ್ತದೆ.

ಡಿಸೆಂ 7, 2018

ಶಾಂತಿ- ಪ್ರಶಾಂತಿ

ಪದ್ಮಜಾ ಜೋಯ್ಸ್ ದರಲಗೋಡು
ಹೆಸರೂ ಶಾಂತಿ , ಮನೆಯೂ ಪ್ರಶಾಂತಿ ನಿಲಯ ಪರಿಸರವೂ ಶಾಂತ ಪ್ರಶಾಂತವೇ ಇದ್ದರೂ.... 

ಶಾಂತಿಯ ಮನ ಅಶಾಂತಿಯ ಕಡಲಾಗಿತ್ತು.... ಬದುಕಿಡೀ ಶಾಂತಿಯ ಅರ್ಥವೂ ನಿಲುಕದ ಅಶಾಂತಿಯ ಬೀಡಾಗಿತ್ತು
ಇದ್ದುದರಲ್ಲೇ ನೆಮ್ಮದಿ ನೀಡುತ್ತಿದ್ದು ಸಾಗರನ ಸಾಂಗತ್ಯ ಮಾತ್ರ...

ಇದೀಗ ಅವನಲ್ಲಾದ ಬದಲಾವಣೆಗಳೂ ಅವಳಲ್ಲಿ ಕಡಲ ನಡುವಿನ ಬಿರುಗಾಳಿಗೆ ಸಿಕ್ಕ ಹಾಯಿ ದೋಣಿಯಾಗಿತ್ತು ಅವಳ ಬದುಕು...

"ಜನಮನ" ಎಂದೇ ಹೆಸರಿಟ್ಟ ಹೊರಚಾವಣಿಯಲ್ಲಿ ಆಪ್ತ ಸಲಹಾ ಕೇಂದ್ರದಲ್ಲಿ ನೆರೆದಿದ್ದ ಹತ್ತಾರು ಜನದ ಕ್ಲಿಷೆಕೇಶಗಳನ್ನು ಕೇಳಿ ಒಂದಷ್ಟು ತಿಳಿ ಹೇಳಿ ಸಲಹೆ ನೀಡಿ ಅಯ್ಯೋ ಎನಿಸಿದ ಹಲಕೆಲವು ಜವಾಬ್ದಾರಿಗಳ ಅನಗತ್ಯವಾದರೂ ಹೆಗಲೇರಿಸಿಕೊಂಡು ಎಲ್ಲರನ್ನೂ ಊಟಕ್ಕೆ ಕಳುಹಿಸಿ ಬ಼ಂದು ಮರೆತ ಯಾವುದೋ ಕೆಲಸ ನೆನಪಾದ಼ಂತೆ ಅರ್ಧ ಟೈಪಿಸಿ ಉಳಿದ ನೋಟ್ ಪ್ಯಾಡನ್ನು ತೆರೆದಾಗ ಪಕ್ಕದಲ್ಲಿ ನಗುತ್ತಿದ್ದ ಫೋಟೋ ಅದರಲ್ಲಿನ ಮುಖಭಾವವೂ ತನ್ನ ಅಪಹಾಸ್ಯ ಮಾಡಿದಂತೆನಿಸಿತು.... 

ಆಪರೇಷನ್ ಕಮಲದ ಅನಿವಾರ್ಯತೆ ಯಾರಿಗಿದೆ?

ಕು.ಸ.ಮಧುಸೂದನ
'ಆಪರೇಷನ್ ಕಮಲ' ಮತ್ತೊಮ್ಮೆ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳದ ಮೈತ್ರಿ ಸರಕಾರ ಆರು ತಿಂಗಳು ಪೂರೈಸುತ್ತಿರುವ ಈ ಸಮಯದಲ್ಲಿ ಬಿಡುಗಡೆಯಾಗಿರುವ ಆಡಿಯೋ ತುಣುಕೊಂದು ಹೀಗೊಂದು ಸಂಶಯವನ್ನು ಹುಟ್ಟು ಹಾಕಿದೆ. ಈ ಆಡಿಯೋ ತುಣುಕಿನ ಸತ್ಯಾಸತ್ಯತೆಯೇನೇ ಇರಲಿ ಈ ಸರಕಾರವನ್ನು ಕೆಡವಿ ಅಧಿಕಾರಕ್ಕೇರಲು ಬಾಜಪ ಪ್ರಯತ್ನಿಸುತ್ತಿರುವುದೇನು ಹೊಸತಲ್ಲ.

ಚುನಾವಣೆಗಳು ಮುಗಿದ ನಂತರ ನೂರಾ ನಾಲ್ಕು ಸ್ಥಾನಗಳನ್ನು ಗೆದ್ದ ಶ್ರೀ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಲೇ ವಿಶ್ವಾಸ ಮತ ಸಾಬೀತಿಗೆ ಬೇಕಾದ ಸಂಖ್ಯೆ ಹೊಂದಲು ಆಪರೇಷನ್ ಕಮಲ ನಡೆಸಲು ಪ್ರಯತ್ನಗಳು ನಡೆದಿದ್ದವು. ವಿಶ್ವಾಸ ಮತದ ಮೇಲಿನ ಚರ್ಚೆಯಲ್ಲಿ ಮಾತಾಡುತ್ತ ಸ್ವತ: ಯಡಿಯೂರಪ್ಪನವರೇ ತಾವು ಕಾಂಗ್ರೆಸ್ ಮತ್ತು ಜನತಾದಳದ ಶಾಸಕರುಗಳನ್ನು ಸಂಪರ್ಕಿಸಿದ್ದು ನಿಜವೆಂದು ಹೇಳಿಕೊಂಡಿದ್ದರು. ಅದಾದ ನಂತರ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರವೂ ಆಪರೇಷನ್ ಕಮಲ ನಡೆಸುವ ನಂಬಿಕೆಯಿಂದಲೇ ಬಾಜಪದ ಬಹುತೇಕ ನಾಯಕರುಗಳು ಈ ಸರಕಾರ ಇನ್ನು ಒಂದು ವಾರದಲ್ಲಿ ಬೀಳುತ್ತದೆ, ಇನ್ನು ಎರಡು ವಾರದಲ್ಲಿ ಬೀಳುತ್ತದೆಯೆಂದು ಭವಿಷ್ಯ ನುಡಿಯುತ್ತ ನಗೆಪಾಟಲಿಗೀಡಾಗುತ್ತ ಹೋಗಿದ್ದು ನಮ್ಮ ಮುಂದಿದೆ. ಇದೀಗ ಚಳಿಗಾಲದ ಅಧಿವೇಶನ ಈ ತಿಂಗಳು ಹತ್ತನೇ ತಾರೀಖು ಪ್ರಾರಂಭವಾಗಲಿದ್ದು, ಅದಕ್ಕೂ ಮುಂಚೆ ಸಂಪುಟ ವಿಸ್ತರಣೆ ಮಾಡುವ ತರಾತುರಿಯಲ್ಲಿರುವ ಮೈತ್ರಿ ಸರಕಾರಕ್ಕೆ ಈಗ ಮತ್ತೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಯಥಾ ಪ್ರಕಾರ ಬಾಜಪ ಈ ಆಡಿಯೋದ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದು ತಮ್ಮ ಪಕ್ಷ ಆಪರೇಷನ್ ಕಮಲ ಮಾಡಲು ಹೊರಟಿಲ್ಲ. ತಾವಾಗಿಯೇ ಪಕ್ಷ ಸೇರಲು ಬಯಸುವ ಶಾಸಕರುಗಳಿಗೆ ಬೇಡ ಎನ್ನುವುದಿಲ್ಲ ಎಂದು ಹೇಳಿಕೆ ನೀಡಿದೆ. ಈ ಆಡಿಯೋದ ಅಧಿಕೃತತೆಯನ್ನು ಮತ್ತು ಇದರ ಮೂಲದ ಬಗ್ಗೆ ಚರ್ಚಿಸುವುದಕ್ಕಿಂತ ಮುಖ್ಯವಾಗಿ ಈಗ ಈ ಆಪರೇಷನ್ ಕಮಲ ಯಾರಿಗೆ ಹೆಚ್ಚು ಅನಿವಾರ್ಯವಾಗಿದೆ ಎಂಬುದನ್ನು ನಾವು ವಿಶ್ಲೇಷಿಸಿ ನೋಡಬೇಕಾಗಿದೆ. 

ಡಿಸೆಂ 3, 2018

ಡ್ರಾಫ್ಟ್ ಮೇಲ್: ಭಾಗ 5 - ಒಂದು ಮಡಚಿಟ್ಟ ಪುಟ


ಚೇತನ ತೀರ್ಥಹಳ್ಳಿ.

ಚಿನ್ಮಯಿ ನಿರಾಳವಾಗಿದ್ದಾಳೆ. ಬೆಳಕು ಬಾಗಿಲಿನಾಚೆ ಹೋಗುತ್ತಿದ್ದರೂ ಒಳಗಿನ ಕತ್ತಲು ಮಾಯವಾಗಿದೆ. ಅವಳ ಒಳಗಿನ ಕತ್ತಲು…

ಆಡದೆ ಉಳಿಸಿಕೊಳ್ಳುವ ಮಾತು ಹೇಗೆಲ್ಲ ಜೀವ ಹಿಂಡುತ್ತೆ!
ಡ್ರಾಫ್ಟ್ ಮೇಲ್ ಕಳಿಸುವವರೆಗೂ ಅವಳಿಗೆ ತಾನು ಹೊತ್ತುಕೊಂಡಿದ್ದ ಭಾರ ಗೊತ್ತೇ ಆಗಿರಲಿಲ್ಲ!!
ಹಾಗಂತ ಎಲ್ಲ ಮಾತುಗಳು ಹೊರೆಯಾಗೋದಿಲ್ಲ. ಕೆಲವು ಯೋಗ್ಯತೆಯಲ್ಲಿ ಅದೆಷ್ಟು ಹಗುರವಾಗಿರುತ್ತವೆ ಅಂದರೆ…
ಅವುಗಳನ್ನು ನೆನೆದು ದುಃಖ ಪಡಲಿಕ್ಕೂ ಅಸಹ್ಯ ಅನ್ನಿಸಿಬಿಡುತ್ತೆ.

ಚಿನ್ಮಯಿಗೆ ಗೊತ್ತಿದೆ.
ಕಾಲ ಮೀರಿದ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲವೆಂದು.
ಕೆಲವೊಮ್ಮೆ ಅಂಥ ಮಾತುಗಳು ವ್ಯಾಲಿಡಿಟಿ ಮುಗಿದ ಮಾತ್ರೆಗಳಂತೆ ದುಷ್ಟಪರಿಣಾಮ ಬೀರೋದೇ ಹೆಚ್ಚು!

“ಬೋಲ್ ಕೆ ಲಬ್ ಆಜಾದ್ ಹೈ ತೇರೇ ಜಬಾನ್ ಅಬ್ ತಕ್ ತೇರೀ ಹೈ…” ಅವಳಿಷ್ಟದ ಫೈಜ್ ಪದ್ಯ.
ತಾನು ಕಳಿಸದೇ ಬಿಟ್ಟ ಮೇಲ್’ಗಳನ್ನು ಓದುತ್ತ ಕುಳಿತಿದ್ದಾಳೆ. ಅವನ್ನು ಈಗಲೂ ಯಾರಿಗೂ ಕಳಿಸಲಾರಳು. ಕೆಲವಂತೂ ತನಗೇನೇ ಓದಿಕೊಳ್ಳಲು ಅಸಹ್ಯ!
ತಾನು ಹಾಗೆಲ್ಲ ಇರುವ ಅನಿವಾರ್ಯತೆ ಯಾಕಿತ್ತು? ಯಾಕೆ ಮಾತಾಡಬೇಕಿದ್ದಾಗ ಸದ್ದುಸುರಲಿಲ್ಲ?
ಆಗೆಲ್ಲ ನನ್ನ ತುಟಿಗಳ ಸ್ವಾತಂತ್ರ್ಯ ಕಸಿದಿದ್ದು ಯಾರು? ನನ್ನ ನಾಲಿಗೆ ನನ್ನದಲ್ಲವೆನ್ನುವಂತೆ ಮಾಡಿದ್ದು ಯಾರು!?
ಕೊನೆಪಕ್ಷ ಗೌತಮನ ಬಳಿಯೂ ಹೇಳಿಕೊಳ್ಳಲಿಲ್ಲ!
ಹಳೆಯ ಕಂತುಗಳನ್ನು ಓದಲು ಇಲ್ಲಿ ಕ್ಲಿಕ್ಕಿಸಿ. 

ನವೆಂ 28, 2018

ಪರಿತ್ಯಕ್ತೆ

ಪದ್ಮಜಾ ಜೋಯ್ಸ್ ದರಲಗೋಡು
ವಿಷಾದವೇ ಮಡುಗಟ್ಟಿದಂತೆ ನಿಸ್ಸಾರವಾಗಿ ಮಾಗಿದ ವಯಸ್ಸಿನ ದುಗುಡದ ಮನಸ್ಸಿನಿಂದೆಂಬಂತೆ ಸದ್ದಿಲ್ಲದೇ ಸರಿದು ಬಂದ ಅವನನ್ನು ಹೊತ್ತ ಕಾರೊಂದು ಆ ಕಟ್ಟಡದ ಎದುರು ಬಂದು ನಿ಼ಂತಾಗ ನಿರೀಕ್ಷೆಯಲ್ಲಿದ್ದಂತೇ ಒಳಗಿನಿಂದ ಎರಡು ಜೋಡಿ ಕಂಗಳು ಗಮನಿಸಿದ್ದವು.....ಅದೊಂದು ಮಾನಸಿಕ ಚಿಕಿತ್ಸಾ ಕೇಂದ್ರ....
ಗಮನಿಸಿದ, ನಿರೀಕ್ಷೆಯಲ್ಲೇ ಇದ್ದ ಒಂದು ಜೋಡಿ ಕಂಗಳಲ್ಲೊಂದು ಮನೋರೋಗ ತಜ್ಞರಾದರೇ... ಇನ್ನೊಂದು ಚಿಕಿತ್ಸೆ ಪಡೆಯುತ್ತಿರುವ ರೋಗಿಯದು.... ಇಂದವಳ ಹುಟ್ಟಿದ ಹಬ್ಬ , ಇದು ದಶಕದಿಂದಲೂ ಅನೂಚಾನವಾಗಿ ನೆಡೆಯುತ್ತಿರುವ ಘಟನೆಯೇ ಆದರೂ ಯಾವುದೋ ನಿರೀಕ್ಷೆ ಹೊತ್ತು ಬರುವವರಲ್ಲಿ ದಿನದಿನಕ್ಕೂ ನಿರಾಸೆ ಮಡುಗಟ್ಟುತ್ತಿರುವುದನ್ನು .. ತಜ್ಞರೂ .. ಗಮನಿಸಿ ಸತ್ಯವನ್ನು ಹೇಳಿಬಿಡಿಬೇಕೆಂಬ ತುಡಿತ ಅತಿಯಾದರೂ ರೋಗಿಗಿತ್ತ ವಾಗ್ದಾನ ನೆನಪಾಗಿ ಖೇದದಿಂದ ತುಟಿ ಬಿಗಿದುಕೊಂಡರು...
ಕಾರು ನಿಲ್ಲಿಸಿದವ ಏನನ್ನೋ ನಿರೀಕ್ಷಿಸುವಂತೆ "ಅವಳ" ರೂಮಿನ ಕಿಟಕಿಯತ್ತ ಕಣ್ಣು ಹಾಯಿಸಿ ನಿರಾಸೆಯಿ಼ಂದ ನಿಟ್ಟುಸಿರಿಟ್ಟು, ತಲೆಕೊಡವಿ ಅವನು "ಅವಳಿಗಾಗಿ" ತಂದ ವಸ್ತುಗಳನ್ನು ಎದೆಗವಚಿಕೊಂಡು ಹಿಂದೆ ಬ಼ಂದ ಇನ್ನೊಂದು ಕಾರು ಹಾಗೂ ಬ಼ಂದವರಿಗೆ ಕಾಯದೇ ಒಳನೆಡೆದ , 
ಮತ್ತುಳಿದವರು "ಆವಳ" ಬಳಗ ಅವರೂ ತ಼ಂದದ್ದೆಲ್ಲವನ್ನೂ ಎತ್ತಿಕೊಂಡು ಹಿ಼ಂದೆಯೇ ನೆಡೆದರು... ಎಲ್ಲ ಮೌನವಾಗಿ ಪರಸ್ಪರ ದಿಟ್ಟಿಸಿಕೊಂಡರೇ ವಿನಾ ಆಡಲ್ಯಾವ ಮಾತುಗಳಿರಲಿಲ್ಲ... 

ನವೆಂ 26, 2018

ಡ್ರಾಫ್ಟ್ ಮೇಲ್: ಭಾಗ 4 - ಬಟವಾಡೆಯಾಗದ ಪತ್ರ ಮತ್ತು ಗೌತಮ # 2

ಚೇತನ ತೀರ್ಥಹಳ್ಳಿ. 
To: editor@kt.com

ವಿಷಯ: ನಿಮ್ಮ ಪತ್ರಿಕೆಯ ಪಕ್ಷಪಾತ ಧೋರಣೆ ಕುರಿತು

ನಮಸ್ತೇ

ಗೋಧ್ರಾ ಹಿಂಸಾಚಾರ ಕುರಿತು ನಿಮ್ಮ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ಓದಿದೆ. ನೀವು ಗೋಧ್ರಾದಲ್ಲಿ ಹಿಂದುತ್ವವಾದಿಗಳು ನಡೆಸಿದ ವಿಧ್ವಂಸದ ಬಗ್ಗೆ ಬರೆದುದೆಲ್ಲವೂ ಸರಿಯಾಗಿದೆ. ಆದರೆ, ಅದೇ ವೇಳೆ ನೀವು ಮುಸಲ್ಮಾನರು ನಡೆಸಿದ ದುಷ್ಕøತ್ಯಗಳನ್ನು ಸಂಪೂರ್ಣ ಮರೆಮಾಚಿದ್ದೀರಿ.

ಮುಗ್ಧ ಕೌಸರಳ ಭ್ರೂಣ ಬಗೆದು ಎಂದೆಲ್ಲ ಅತಿರಂಜಿತವಾಗಿ ಬರೆದಿರುವ ಲೇಖಕರು (ಆ ಹೆಣ್ಣುಮಗಳ ಅವಸ್ಥೆಗೆ ಪ್ರಾಮಾಣಿಕ ಸಂತಾಪವಿದೆ. ಆ ಕೃತ್ಯವನ್ನು ಕಟುವಾಗಿ ಖಂಡಿಸುತ್ತೇನೆ) ಕಾಶ್ಮೀರಿ ಪಂಡಿತಾಯಿನರನ್ನು ಜೀವಂತ ಗರಗಸದಲ್ಲಿ ಕೊಯ್ದಿದ್ದು ಮರೆತೇಬಿಟ್ಟಿದ್ದಾರೆ.

ಇಷ್ಟಕ್ಕೂ ಕರಸೇವಕರನ್ನು ರೈಲಿನ ಬೋಗಿಯಲ್ಲಿ ಕೂಡಿ ಹಾಕಿ ಜೀವಂತ ಸುಡದೆ ಹೋಗಿದ್ದರೆ, ಈ ಪ್ರತೀಕಾರಕ್ಕೆ ಅವರು ಇಳಿಯುತ್ತಿದ್ದರೆ?

ದಯವಿಟ್ಟು ನಿಷ್ಪಕ್ಷಪಾತವಾದ ಲೇಖನಗಳನ್ನು ಪ್ರಕಟಿಸಲು ವಿನಂತಿ.

ವಂದೇ,

ಚಿನ್ಮಯಿ ಕೆಸ್ತೂರ್

ನವೆಂ 22, 2018

ಅವಳು

ಪ್ರವೀಣಕುಮಾರ್ ಗೋಣಿ
ಅವಳ ಕಣ್ಣಂಚಿನ ಬೆಳಕೊಳಗೆ
ಬದುಕು ಮತ್ತೆ ಚಿಗುರೊಡೆಯುವುದು 
ಕತ್ತಲಿನ ಭಯವ ಅಳಿಸಿ 
ಉಲ್ಲಾಸದ ಅಭಯ ಹೃದಯದೊಳಗೆ ಅರಳುವುದು .

ನವೆಂ 19, 2018

ಡ್ರಾಫ್ಟ್ ಮೇಲ್: ಭಾಗ 3 - ಗೌತಮ #1


ಚೇತನ ತೀರ್ಥಹಳ್ಳಿ. 

ಚಿನ್ಮಯಿ ಆ ಮೇಲ್ ಕಳಿಸಲೂ ಇಲ್ಲ, ಸಾಯಲೂ ಇಲ್ಲ. ಆ ಮೊದಲ ಡ್ರಾಫ್ಟ್‍ನಿಂದ ಈವರೆಗಿನ ಕೊನೆಯ ಡ್ರಾಫ್ಟ್’ವರೆಗೆ ಹತ್ತು ವರ್ಷಗಳು ಕಳೆದಿವೆ. 

ಅದಕ್ಕೂ ಹಿಂದಿನದೆಲ್ಲ ಸೇರಿ, ಈ ಹದಿನೈದು ವರ್ಷಗಳ ಹರಿವಿನಲ್ಲಿ ಅವಳು ಈಜಿದ್ದೆಷ್ಟು, ಮುಳುಗಿದ್ದೆಷ್ಟು!

ಆಗಾಗ ಮನೆಗೆ ಬರುವ ತವರು ಅವಳ ತಲೆ ನೇವರಿಸಿ ಕಣ್ಣೀರಿಡುತ್ತದೆ. ಚಿನ್ಮಯಿಗೆ ಯಾಕೆಂದೇ ಅರ್ಥವಾಗೋದಿಲ್ಲ.

ಮಧ್ಯಾಹ್ನದಲ್ಲಿ ಬೆಳಕಿನ ಬಾಗಿಲಾಗುವ ಬಿಸಿಲು, ಹೊತ್ತು ಕಳೆದಂತೆ ಕರಗುವುದು ಅವಳಿಗೆ ಗೊತ್ತಿದೆ; ಮತ್ತೆ ಮರುದಿನ ಮೂಡುತ್ತದೆ ಅನ್ನೋದು ಕೂಡಾ.

ಒಂದೇ ಒಂದು ಜನ್ಮದಲ್ಲಿ ಹಲವು ಬದುಕು ಬಾಳುವ ಅವಕಾಶ ಎಲ್ಲರಿಗೂ ಸಿಗೋದಿಲ್ಲ. 

ವಾಸ್ತವದಲ್ಲಿ, ಅದು ಸಿಗುವಂಥದಲ್ಲ… ನಾವೇ ಕಂಡುಕೊಳ್ಳುವಂಥದ್ದು. ಹಲವು ಬದುಕುಗಳ ಅವಕಾಶ ನಾವೇ ಸೃಷ್ಟಿ ಮಾಡಿಕೊಳ್ಳಬೇಕು. ಹಾಗಂತ ಚಿನ್ಮಯಿ ನಂಬಿಕೊಂಡಿದ್ದಾಳೆ. ಅದನ್ನು ಸಾವಧಾನವಾಗಿ ಸಾಕಾರ ಮಾಡಿಕೊಂಡಿದ್ದಾಳೆ ಕೂಡ.

ತಾನು ಏನಾಗಿದ್ದಾಳೋ ಆ ಬಗ್ಗೆ ಅವಳಿಗೆ ಖುಷಿ ಇದೆ. ಹಾಗಂತ ಅವಳು ಏನೋ ಆಗಿಬಿಟ್ಟಿದ್ದಾಳೆ ಎಂದಲ್ಲ. ಅವಳಿಗೆ ತಾನು ‘ಚಿನ್ಮಯಿ’ ಆಗಿರುವ ಬಗ್ಗೆ ನೆಮ್ಮದಿಯಿದೆ! ಹಾಗೆಂದೇ ಮನಮಂದಿಯ ದುಃಖ ಅವಳನ್ನು ಗಲಿಬಿಲಿಗೊಳಿಸುತ್ತದೆ. ಕೆಲವೊಮ್ಮೆ ರೇಜಿಗೆ ಹುಟ್ಟಿಸುತ್ತೆ ಕೂಡಾ. 

ನವೆಂ 17, 2018

ಆತ್ಮ ಮತ್ತು ಕಸಾಯಿಖಾನೆ!

ಕು.ಸ.ಮಧುಸೂದನ ರಂಗೇನಹಳ್ಳಿ
ಹಾಗೆ ಆತ್ಮವನ್ನು ಹಾಡಹಗಲೇ
ಬಟಾಬಯಲೊಳಗೆ ಬಿಚ್ಚಿಡಬಾರದೆಂಬುದನ್ನು
ಮರೆತಿದ್ದೆ.

ಬೀದಿಗೆ ಬಂದ ಅಪರೂಪದ ಆತ್ಮವನ್ನು
ಕಸಾಯಿ ಖಾನೆಯ ಚಕ್ಕೆಗಳೆದ್ದ ಮರದ ದಿಮ್ಮಿಯ ಮೇಲಿಟ್ಟು
ಕತ್ತು ಕತ್ತರಿಸಿದರು
ಮುಂಡದಿಂದ ಚಿಮ್ಮಿದ ರಕ್ತವನ್ನು ದೊಡ್ಡ 
ಅಲ್ಯೂಮಿನಿಯಂ ಪಾತ್ರೆಯಲ್ಲಿ ಹಿಡಿದು
ದಾಹ ತೀರುವವರೆಗು ಕುಡಿದರು

ನವೆಂ 13, 2018

ಮೇರ್ಕು ತೊಡರ್ಚಿ ಮಲೈ ಎಂಬ ದೃಶ್ಯ ಕಾವ್ಯ.

ಡಾ. ಅಶೋಕ್. ಕೆ. ಆರ್.
ಜಾತಿ ವ್ಯವಸ್ಥೆಯ ಬಗ್ಗೆ ವರ್ಗ ವ್ಯವಸ್ಥೆಯ ಬಗ್ಗೆ ನಮ್ಮಲ್ಲಿ ಆವಾಗವಾಗ ಒಂದೊಂದು ಚಿತ್ರ ಬಂದಿದೆಯಾದರೂ ಭೂರಹಿತ ಕಾರ್ಮಿಕರನ್ನೇ ಮುಖ್ಯಭೂಮಿಯಲ್ಲಿರಿಸಿಕೊಂಡು ಬಂದ ಚಿತ್ರಗಳು ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆಯೆಂದು ಹೇಳಬಹುದು. ಜಾತಿ ವರ್ಗ ವ್ಯವಸ್ಥೆಯ ಕುರಿತಾದ ಚಿತ್ರಗಳಲ್ಲಿ ಕೆಲವೊಂದು ವಾಸ್ತವಿಕತೆಯನ್ನು ನಮ್ಮ ಕಣ್ಣ ಮುಂದೆ ಇರಿಸುತ್ತಾದರೂ ವಾಸ್ತವಿಕತೆಯನ್ನು ತಲುಪಿಸುವ ನಿಟ್ಟಿನಲ್ಲಿ ಅದನ್ನು ವೈಭವೀಕರಿಸುವ ಕೆಲಸ ಮಾಡುತ್ತವೆ, ನಾಯಕ ಪಾತ್ರದ ಒಳಿತನ್ನು ಋಜುವಾತುಪಡಿಸುವುದಕ್ಕೆ ಪ್ರತಿನಾಯಕರ ರಕ್ತದಲ್ಲೇ ಕೆಟ್ಟತನವಿದೆಯೆನ್ನುವಂಶವನ್ನು ಒತ್ತಿ ಒತ್ತಿ ಹೇಳುವ ಕ್ರಮವನ್ನೇ ಬಹಳಷ್ಟು ಸಿನಿಮಾಗಳು ಅಳವಡಿಸಿಕೊಂಡಿರುತ್ತವೆ. ಈ ಚಿತ್ರಗಳ ಇನ್ನೊಂದು ದೌರ್ಬಲ್ಯ (ಅದನ್ನು ಈ ಚಿತ್ರಗಳ ಶಕ್ತಿಯೆಂದೂ ಕರೆಯಬಹುದು!) ಅತಿ ಭಾವುಕತೆ. ನಿಜ ಜೀವನದಲ್ಲಿ ಕಂಡುಬರದಷ್ಟು ಭಾವುಕತೆಯನ್ನು ಚಿತ್ರಗಳಲ್ಲಿ ತುಂಬಿಬಿಡಲಾಗುತ್ತದೆ. ಅತಿ ಭಾವುಕತೆ ಅತಿ ವಾಸ್ತವತೆಯ ಕ್ರಮದಿಂದೊರತಾಗಿ ನಿಂತು, ಅತಿ ಎನ್ನುವಷ್ಟು ಒಳ್ಳೆಯ ನಾಯಕ, ಅತಿ ಎನ್ನಿಸುವಷ್ಟು ಕೆಟ್ಟ ವಿಲನ್ನು ಎಂಬ ಕ್ರಮದಿಂದಲೂ ಹೊರತಾಗಿದ್ದು ದೀರ್ಘಕಾಲದವರೆಗೆ ಕಾಡುವಂತಹ ದೃಶ್ಯಕಾವ್ಯವೇ ‘ಮೇರ್ಕು ತೊಡರ್ಚಿ ಮಲೈ’ (ಅರ್ಥಾತ್ ಪಶ್ಚಿಮ ಘಟ್ಟ). 

ಲೆನಿನ್ ಭಾರತಿ ನಿರ್ದೇಶನದ ಚಿತ್ರವನ್ನು ನಿರ್ಮಿಸಿರುವುದು ವಿಜಯ್ ಸೇತುಪತಿ. ಸ್ವತಃ ಉತ್ತಮ ನಟನಾದರೂ ವಿಜಯ್ ಸೇತುಪತಿ ಈ ಚಿತ್ರದಲ್ಲಿ ಅಭಿನಯಿಸಿಲ್ಲ. ಒಂದು ಚಿಕ್ಕ ಪಾತ್ರದಲ್ಲಾದರೂ ವಿಜಯ್ ಸೇತುಪತಿ ನಟಿಸಿದ್ದರೆ ಇಂತಹುದೊಂದು ಚಿತ್ರ ಹೆಚ್ಚು ಜನರನ್ನು ತಲುಪುತ್ತಿತ್ತು ಎನ್ನುವುದು ಸತ್ಯ. ಚಿತ್ರದ ನಾಯಕ ರಂಗಸ್ವಾಮಿ. ಭೂರಹಿತ ಕಾರ್ಮಿಕ. ತಮಿಳುನಾಡು ಕೇರಳ ಗಡಿಪ್ರದೇಶದ ಘಟ್ಟ ಪ್ರದೇಶದಲ್ಲಿ ಆತನ ವಾಸ. ಏಲಕ್ಕಿ ಕಾಯಿಯ ಮೂಟೆಯನ್ನು ಹೆಗಲ ಮೇಲೊತ್ತು ಘಟ್ಟದಿಂದ ಮಾರುಕಟ್ಟೆಗೆ ಸಾಗಿಸುವ ಕೆಲಸ ಆತನದು. ಘಟ್ಟ ಪ್ರದೇಶವನ್ನು ಹೊಸತಾಗಿ ದಾಟುವವರಿಗೆ ದಾರಿಯಾಗುತ್ತಾನೆ, ಆಸರೆಯಾಗುತ್ತಾನೆ. ಎಲ್ಲರ ಮೆಚ್ಚಿನ ವ್ಯಕ್ತಿ ರಂಗಸ್ವಾಮಿ ತನ್ನೂರಿನ ಮನೆಯಲ್ಲಿ ಅಮ್ಮನೊಂದಿಗೆ ವಾಸವಾಗಿದ್ದಾನೆ. ಇಂತಿಪ್ಪ ರಂಗಸ್ವಾಮಿಗೆ ಒಂದು ತುಂಡು ಭೂಮಿಯನ್ನು ಖರೀದಿಸಬೇಕೆಂಬುದೇ ಜೀವನದ ಗುರಿ. ಯಾವುದೇ ದುಶ್ಚಟಗಳಿಲ್ಲದ ರಂಗಸ್ವಾಮಿ ಕೂಡಿಹಾಕಿದ್ದ ಹಣದಿಂದ ಇನ್ನೇನು ಭೂಮಿ ಖರೀದಿಸಿಯೇಬಿಟ್ಟ ಎನ್ನುವಾಗ ಭೂಮಿಯ ಒಡೆಯರ ಕೌಟುಂಬಿಕ ಜಗಳದಿಂದ ಆಸೆಗೆ ಕಲ್ಲು ಬೀಳುತ್ತದೆ. ಮತ್ತೆ ಏಲಕ್ಕಿ ಮೂಟೆಯನ್ನು ಘಟ್ಟದಿಂದಿಳಿಸುವ ಕೆಲಸಕ್ಕೆ ರಂಗಸ್ವಾಮಿ ಮುಂದಾಗುತ್ತಾನೆ.