![]() |
ಚಿತ್ರಮೂಲ: election commission of India |
ಕಳೆದ ಐದು ವರ್ಷಗಳಿಂದ ರಾಜಾಸ್ಥಾನದಲ್ಲಿ ಆಡಳಿತ ನಡೆಸುತ್ತಿದ್ದ ಬಾಜಪದ ಶ್ರೀಮತಿ ವಸುಂದರಾ ರಾಜೆಯವರ ಸರಕಾರ ಈ ಬಾರಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ಸಿಗೆ ಅಧಿಕಾರ ವಹಿಸಿಕೊಟ್ಟಿದೆ. ಚುನಾವಣೆಗಳಿಗು ಮೊದಲು ಬಿಡುಗಡೆಯಾದ ಹಲವು ಚುನಾವಣಾ ಪೂರ್ವ ಸಮೀಕ್ಷೆಗಳು ಮತ್ತು ಮತದಾನದ ಸಂಜೆ ದೊರೆತ ಎಕ್ಸಿಟ್ ಪೋಲ್ ಸಹ ಬಾಜಪ ಸರಕಾರದ ಸೋಲನ್ನು ಖಚಿತ ಪಡಿಸಿದ್ದವು.
ಎಲ್ಲರೂ ಬಾಜಪ ಸೋಲಬಹುದೆಂದೇನೊ ನುಡಿದಿದ್ದರೂ ಅದು ಈ ಮಟ್ಟಿಗೆ ಸೋಲುತ್ತದೆಯೆಂಬ ನಿರೀಕ್ಷೆ ಇರಲಿಲ್ಲ. ಯಾಕೆಂದರೆ 2013ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟ 200 ಸ್ಥಾನಗಳ ಪೈಕಿ 163 ರಲ್ಲಿ ಬಾಜಪ ಗೆದ್ದಿದ್ದರೆ, ಕಾಂಗ್ರೆಸ್ 21 ರಲ್ಲಿ ಮಾತ್ರ ಗೆಲ್ಲಲು ಶಕ್ತವಾಗಿತ್ತು. ಹೆಚ್ಚೂ ಕಡಿಮೆ ಅಂದು ಪ್ರದಾನಮಂತ್ರಿ ಅಭ್ಯರ್ಥಿಯಾಗಿದ್ದ ಶ್ರೀ ನರೇಂದ್ರ ಮೋದಿಯವರ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿತ್ತು. ಅಷ್ಟು ಬಲಿಷ್ಠವಾಗಿ ಹೊರಹೊಮ್ಮಿದ್ದ ಬಾಜಪ ಇವತ್ತು ಕೇವಲ ಐದೇ ವರ್ಷಗಳಲ್ಲಿ ಕಾಂಗ್ರೆಸ್ಸಿನೆದುರು ಮಂಡಿಯೂರಿದೆ. ಈ ಬಾರಿ ಚುನಾವಣೆ ನಡೆದ 199ಕ್ಷೇತ್ರಗಳ ಪೈಕಿ ಕಾಂಗ್ರೆಸ್ 99 ಸ್ಥಾನವನ್ನು, ಬಾಜಪ 73 ಸ್ಥಾನಗಳನ್ನು ಗೆದ್ದಿವೆ. ಇನ್ನು ಯಥಾ ಪ್ರಕಾರ ಇಲ್ಲಿ ಅಷ್ಟೇನು ಪ್ರಭಾವಶಾಲಿಯಲ್ಲದ ಬಹುಜನ ಪಕ್ಷ 6 ಸ್ಥಾನಗಳನ್ನೂ ಪಡೆದಿದೆ. ಇರಲಿ ಈಗ ನಾವು ರಾಜಾಸ್ಥಾನದಲ್ಲಿನ ಬಾಜಪ ಸೋಲಿಗೆ ಕಾರಣವಾದ ಅಂಶಗಳನ್ನು ನೋಡೋಣ: