ಕು.ಸ.ಮಧುಸೂದನರಂಗೇನಹಳ್ಳಿ
ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ.
ಇಲ್ಲಿನ ಮತದಾರರ ಸಂಖ್ಯೆ ತೊಂಭತ್ತು ಕೋಟಿ.ಇಪ್ಪತ್ತು ಲಕ್ಷ ಮತಯಂತ್ರಗಳು. ಒಂದೂಕಾಲು ಕೋಟಿಗೂ ಅಧಿಕ ಮತಗಟ್ಟೆಯನ್ನು ನಿರ್ವಹಿಸುವ ಸಿಬ್ಬಂದಿಗಳು, ಎರಡೂವರೆ ಕೋಟಿಗೂ ಅಧಿಕ ಭದ್ರತಾ ಸಿಬ್ಬಂದಿ. ಅಧಿಕೃತವಾಗಿ ಇಷ್ಟಲ್ಲದೆ ಚುನಾವಣೆಗಳಿಗೆ ಪರೋಕ್ಷವಾಗಿ ನೆರವಾಗುವ ಮೂರು ಕೋಟಿ ಇತರೇ ನೌಕರರು. ಇಷ್ಟು ದೊಡ್ಡ ಮಟ್ಟದ ಚುನಾವಣಾ ವ್ಯವಸ್ಥೆ ಹೊಂದಿರುವ ನಮ್ಮ ದೇಶದಲ್ಲಿ ಇದುವರೆಗು ಬಹುತೇಕ ಚುನಾವಣೆಗಳು ಶಾಂತಿಯುತವಾಗಿ (ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಚುನಾವಣೆಗಳನ್ನು ಹೊರತು ಪಡಿಸಿದರೆ) ನಡೆದಿದ್ದು ತಮ್ಮ ವಿಸ್ವಾಸಾರ್ಹತೆಯನ್ನು ಉಳಿಸಿಕೊಂಡು ಬರುತ್ತಿವೆ.
ಅದರೆ ಈ ಬಾರಿ ನಡೆದ ಇದುವರೆಗಿನ ಮೂರು ಹಂತದ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣಾ ನೀತಿ ಸಂಹಿತೆ ಎನ್ನುವುದು ಹಾಸ್ಯಾಸ್ಪದ ವಿಷಯವಾಗಿ ಬಿಟ್ಟಿದೆ. ತಾನೆ ವಿಧಿಸಿದ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಚುನಾವಣಾ ಆಯೋಗ ವಿಫಲವಾಗುತ್ತಿಯೆಂಬ ಅನುಮಾನ ತಲೆದೋರುತ್ತಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬಹುದಾದಂತ ದತ್ತ ಅಧಿಕಾರವನ್ನು ಹೊಂದಿರುವ ಆಯೋಗ ಯಾಕೊ ಈ ಅಧಿಕಾರವನ್ನು ಉಪಯೋಗಿಸಿಕೊಳ್ಳುವಲ್ಲಿ ಆಸಕ್ತಿಯನ್ನೇನು ತೋರುತ್ತಿಲ್ಲ. ಚುನಾವಣಾ ಆಯೋಗದ ಈ ಕ್ರಿಯಾಹೀನತೆಯನ್ನು ಕಂಡ ಸುಪ್ರೀಂ ಕೋರ್ಟ ಮದ್ಯಪ್ರವೇಶಿಸಿ ನೀತಿಸಂಹಿತೆ ಉಲ್ಲಂಘಿಸಿದವರ ವಿರುದ್ದಕ್ರಮ ತೆಗೆದುಕೊಳ್ಳಲು ಆಯೋಗಕ್ಕೆ ಸೂಚನೆ ನೀಡಬೇಕಾಗಿ ಬಂದಿತು.
ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ.
ಇಲ್ಲಿನ ಮತದಾರರ ಸಂಖ್ಯೆ ತೊಂಭತ್ತು ಕೋಟಿ.ಇಪ್ಪತ್ತು ಲಕ್ಷ ಮತಯಂತ್ರಗಳು. ಒಂದೂಕಾಲು ಕೋಟಿಗೂ ಅಧಿಕ ಮತಗಟ್ಟೆಯನ್ನು ನಿರ್ವಹಿಸುವ ಸಿಬ್ಬಂದಿಗಳು, ಎರಡೂವರೆ ಕೋಟಿಗೂ ಅಧಿಕ ಭದ್ರತಾ ಸಿಬ್ಬಂದಿ. ಅಧಿಕೃತವಾಗಿ ಇಷ್ಟಲ್ಲದೆ ಚುನಾವಣೆಗಳಿಗೆ ಪರೋಕ್ಷವಾಗಿ ನೆರವಾಗುವ ಮೂರು ಕೋಟಿ ಇತರೇ ನೌಕರರು. ಇಷ್ಟು ದೊಡ್ಡ ಮಟ್ಟದ ಚುನಾವಣಾ ವ್ಯವಸ್ಥೆ ಹೊಂದಿರುವ ನಮ್ಮ ದೇಶದಲ್ಲಿ ಇದುವರೆಗು ಬಹುತೇಕ ಚುನಾವಣೆಗಳು ಶಾಂತಿಯುತವಾಗಿ (ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಚುನಾವಣೆಗಳನ್ನು ಹೊರತು ಪಡಿಸಿದರೆ) ನಡೆದಿದ್ದು ತಮ್ಮ ವಿಸ್ವಾಸಾರ್ಹತೆಯನ್ನು ಉಳಿಸಿಕೊಂಡು ಬರುತ್ತಿವೆ.
ಅದರೆ ಈ ಬಾರಿ ನಡೆದ ಇದುವರೆಗಿನ ಮೂರು ಹಂತದ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣಾ ನೀತಿ ಸಂಹಿತೆ ಎನ್ನುವುದು ಹಾಸ್ಯಾಸ್ಪದ ವಿಷಯವಾಗಿ ಬಿಟ್ಟಿದೆ. ತಾನೆ ವಿಧಿಸಿದ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಚುನಾವಣಾ ಆಯೋಗ ವಿಫಲವಾಗುತ್ತಿಯೆಂಬ ಅನುಮಾನ ತಲೆದೋರುತ್ತಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬಹುದಾದಂತ ದತ್ತ ಅಧಿಕಾರವನ್ನು ಹೊಂದಿರುವ ಆಯೋಗ ಯಾಕೊ ಈ ಅಧಿಕಾರವನ್ನು ಉಪಯೋಗಿಸಿಕೊಳ್ಳುವಲ್ಲಿ ಆಸಕ್ತಿಯನ್ನೇನು ತೋರುತ್ತಿಲ್ಲ. ಚುನಾವಣಾ ಆಯೋಗದ ಈ ಕ್ರಿಯಾಹೀನತೆಯನ್ನು ಕಂಡ ಸುಪ್ರೀಂ ಕೋರ್ಟ ಮದ್ಯಪ್ರವೇಶಿಸಿ ನೀತಿಸಂಹಿತೆ ಉಲ್ಲಂಘಿಸಿದವರ ವಿರುದ್ದಕ್ರಮ ತೆಗೆದುಕೊಳ್ಳಲು ಆಯೋಗಕ್ಕೆ ಸೂಚನೆ ನೀಡಬೇಕಾಗಿ ಬಂದಿತು.